Site icon Vistara News

Murder in Davanagere | ದಾವಣಗೆರೆಯಲ್ಲಿ ಕನ್ನಡಪರ ಸಂಘಟನೆಯ ಅಧ್ಯಕ್ಷನ ಹತ್ಯೆ

davanagere murder

ದಾವಣಗೆರೆ : ದಾವಣಗೆರೆಯಲ್ಲಿ ಕನ್ನಡಪರ ಸಂಘಟನೆಯ ಅಧ್ಯಕ್ಷನ ಭೀಕರ ಹತ್ಯೆ ನಡೆದಿದೆ. ರಾಮಕೃಷ್ಣ (30) ಎಂಬುವರೇ ಹತ್ಯೆಗೀಡಾಗಿರುವ (Murder in Davanagere ) ವ್ಯಕ್ತಿ.

ರಾಮ ಕೃಷ್ಣ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಹತ್ಯೆ ನಡೆದಿದೆ. ಈ ಕೊಲೆಗೆ ಸಂಬಂಧಿಸಿದಂತೆ ಅರ್ಜುನ್, ಪ್ರಶಾಂತ ಎಂಬುವರನ್ನು ಬಂಧಿಸಲಾಗಿದೆ.

ರಾಮಕೃಷ್ಣ ಅವರು ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಕು ಅಧ್ಯಕ್ಷರಾಗಿದ್ದರು. ಇತ್ತೀಚಿಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು.

ಸ್ಥಳೀಯ ಪಿಡಿಓ ವಿರುದ್ಧ ಭ್ರಷ್ಟಾಚಾರ ವಿರೋಧಿ ಹೋರಾಟ ಮಾಡುತ್ತಿದ್ದರು. ಇದೇ ದ್ವೇಷಕ್ಕೆ ಅವರ ಕೊಲೆಯಾಗಿರುವ ಶಂಕೆ ಉಂಟಾಗಿದೆ. ಸ್ಥಳಕ್ಕೆ ಎಸ್ಪಿ ರಿಷ್ಯಂತ್‌ ಭೇಟಿ ಪರಿಶೀಲನೆ ನಡೆಸಿದ್ದಾರೆ.

Exit mobile version