Site icon Vistara News

Labor Death: ಚರಂಡಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರು ಸಾವು

labor death

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರು ಇದ್ದಕಿದ್ದಂತೆ ಹೊಟ್ಟೆನೋವು ಉಂಟಾಗಿ ಸಾವಿಗೀಡಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮದ ಬೀದಿ ಬದಿಯ ಚರಂಡಿ ಸ್ವಚ್ಛಗೊಳಿಸುತ್ತಿದ್ದ ಕಾರ್ಮಿಕರು ಇದ್ದಕ್ಕಿದ್ದಂತೆ ಹೊಟ್ಟೆ ನೋವು ತಲೆದೋರಿ ಅಸ್ವಸ್ಥರಾಗಿದ್ದರು. ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸತ್ಯಪ್ಪ(50), ಮೈಲಪ್ಪ(41) ಮೃತ ಕೂಲಿಕಾರ್ಮಿಕರು.

ಬಸವನಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ದೂರಲಾಗಿದೆ. ಕಾರ್ಮಿಕರ ಸಾವಿನ ತನಿಖೆ ನಡೆಸಲು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Soldier Death: ಭಾರತೀಯ ಸೇನೆಯಲ್ಲಿದ್ದ ರಿಪ್ಪನ್ ಪೇಟೆ ಯೋಧ ಸಾವು

Exit mobile version