DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ! - Vistara News

ಕರ್ನಾಟಕ

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

DCM Post: ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸರಣಿ ಸಭೆಗಳನ್ನು ಮುಂದುವರಿಸಿದ್ದಾರೆ. ಕಳೆದ ವಾರ ಬೆಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆದಿತ್ತು, ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ.

VISTARANEWS.COM


on

DCM Post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ರಾಜ್ಯ ಕಾಂಗ್ರೆಸ್‌ ನಾಯಕರಿಂದಲೇ ಒತ್ತಾಯ ಕೇಳಿಬರುತ್ತಿದೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ (DCM Post) ಸ್ಥಾನವನ್ನು ಒಬ್ಬರಿಗೆ ನೀಡಿರುವುದಕ್ಕೆ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಆದರೆ, ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದು, ಕೇಡರ್ ಬೇಸ್ ಪಾರ್ಟಿ ಕಟ್ಟಲು ಅವರು ಪಣತೊಟ್ಟಿದ್ದಾರೆ. ಇದಕ್ಕಾಗಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಚುನಾವಣೆ ದೃಷ್ಟಿಯಿಂದ ಪ್ರತ್ಯೇಕ ಆ್ಯಕ್ಷನ್ ಪ್ಲ್ಯಾನ್ ಸಿದ್ಧಪಡಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಇನ್ನು ಲೋಕಸಭೆ ಫಲಿತಾಂಶದ ಹಿನ್ನಡೆ ಹಿನ್ನೆಲೆಯಲ್ಲಿ ವಲಯವಾರು ಸತ್ಯ ಶೋಧನಾ ಸಮಿತಿ ರಚನೆಗೆ ನಿರ್ಧಾರ ಮಾಡಿದ್ದಾರೆ.

ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿದ ವಿಧಾನಸಭಾ ಕ್ಷೇತ್ರಗಳ ಪ್ರಗತಿ ಪರಿಶೀಲನೆ, ಕಾರಣಗಳನ್ನು ಪತ್ತೆ ಹಚ್ಚುವುದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ರೂಪುರೇಷೆ ಸಿದ್ಧಪಡಿಸಲು ವಲಯವಾರು ಸಮಿತಿ ರಚನೆ ಮಾಡಲು ಹಾಗೂ ಬಿಬಿಎಂಪಿ, ಜಿಪಂ, ತಾಪಂ ಚುನಾವಣೆಗೆ ಹಾಗೂ ಉಪ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಸಂಚಾಲನ ಸಮಿತಿ ರಚನೆಗೂ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಮಾಜಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್ ಸದಸ್ಯರ ಪ್ರತ್ಯೇಕ ಸಭೆಯನ್ನು ಡಿಕೆಶಿ ನಡೆಸಲಿದ್ದಾರೆ. ಕೆಳಹಂತದಲ್ಲಿ ಪಕ್ಷ ಬಲವರ್ಧನೆಗೆ ಸಲಹೆ ನೀಡಲು ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಾಗೆಯೇ ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ವಾರ್ಡ್ ಸಮಿತಿ/ ಪಂಚಾಯತ್ ಸಮಿತಿಗಳ ರಚನೆಗೆ ತೀರ್ಮಾನ ಮಾಡಿದ್ದು, ಗ್ಯಾರಂಟಿ ಫಲಾನುಭವಿಗಳ ದಾಖಲೆ ಹಾಗೂ ಮೊಬೈಲ್ ಸಂಖ್ಯೆ ಸಂಗ್ರಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಮಟ್ಟದಲ್ಲಿ ಅಪಾರ್ಟ್ಮೆಂಟ್ ಸೆಲ್ ಹಾಗೂ ರೆಸಿಡೆಂಟ್ ವೆಲ್ಫೆರ್ ಅಸೋಸಿಯೇಷನ್‌ಗೆ ಪುನಶ್ಚೇತನ ನೀಡಲು ಯೋಜಿಸಿದ್ದು, ಉಪ ಚುನಾವಣೆಗಳಿಗೆ ಸಚಿವರು, ಶಾಸಕರನ್ನು ಹೋಬಳಿ ಮಟ್ಟದಲ್ಲಿ ನಿಯೋಜನೆಗೆ ನಿರ್ಧಾರ ಮಾಡಿದ್ದಾರೆ. ಅಲ್ಲದೇ ಸ್ಥಳೀಯ ಶಾಸಕರು, ಹಿರಿಯ ನಾಯಕರ ನೇತೃತ್ವದಲ್ಲಿ ಎಲೆಕ್ಷನ್ ಕ್ಯಾಂಪ್ ಆಫೀಸ್, ವಾರ್ ರೂಂ ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ.

ಪದಾಧಿಕಾರಿಗಳ ಸಭೆಯಲ್ಲಿ ಎರಡು‌ ರೀತಿಯ ಪ್ಲ್ಯಾನ್ ಆಫ್ ಆ್ಯಕ್ಷನ್ ಮಾಡಲು ಮುಂದಾಗಿದ್ದು, ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆ ಕುರಿತು ಕಾರ್ಯ ಯೋಜನೆ ಮಾಡಲು ತೀರ್ಮಾನಿಸಿದ್ದಾರೆ.

ಪಕ್ಷ ಸಂಘಟನೆಯ ಕಾರ್ಯ ಯೋಜನೆ ಏನು?

1.ಉಸ್ತುವಾರಿಗಳ ಹಂಚಿಕೆ
ಜಿಲ್ಲೆಗಳು, ಅಸೆಂಬ್ಲಿ ಕ್ಷೇತ್ರಗಳಿಗೆ ನಿಯೋಜಿಸಲಾದ ಕೆಪಿಸಿಸಿ ಪದಾಧಿಕಾರಿಗಳಗೆ ಜವಾಬ್ದಾರಿ ಹಂಚುವುದು

2.ಹೊಣೆಗಾರಿಕೆ
ಎಲ್ಲಾ ಕೆಪಿಸಿಸಿ ಪದಾಧಿಕಾರಿಗಳಿಂದ ಮಾಸಿಕ ಕೆಲಸದ ವರದಿಗಳನ್ನು ಸಂಗ್ರಹಿಸುವುದು

    3.ವಿಭಾಗೀಯ ಸಭೆಗಳು
    ಕೆಪಿಸಿಸಿ ವಿಭಾಗೀಯ ಸಭೆಗಳು ಜುಲೈ 2024 ರಲ್ಲಿ ನಡೆಯಲಿವೆ
    ಆಗಸ್ಟ್ 2024 ರಲ್ಲಿ ಬ್ಲಾಕ್, ಜಿಲ್ಲೆ ಮತ್ತು ಅಸೆಂಬ್ಲಿ ಹಂತಗಳಲ್ಲಿ ಸಾಂಸ್ಥಿಕ ಕಾರ್ಯಾಗಾರಗಳನ್ನು ನಡೆಸುವುದು.

    4.ದತ್ತಾಂಶ ಪರಿಶೀಲನೆ
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಬೂತ್ ಸಮಿತಿ ಮತ್ತು BLA 2 ನೇಮಕಾತಿಗಳನ್ನು ಪರಿಶೀಲಿಸುವುದು

    5.ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು
    ಪ್ರತಿ ಜಿಲ್ಲೆ/ಬ್ಲಾಕ್/ಬೂತ್‌ನಲ್ಲಿ ಪದಾಧಿಕಾರಿಗಳನ್ನು ನೇಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು
    ಖಾಲಿ ಇರುವ ಹುದ್ದೆಗಳನ್ನ ಒಂದು ಅಥವಾ ಎರಡು ತಿಂಗಳಿನಲ್ಲಿ ಡಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು/ಶಾಸಕರು ಮತ್ತು ಹಿರಿಯ ಪದಾಧಿಕಾರಿಗಳು ಅಭಿಪ್ರಾಯ ಪಡೆದು ಭರ್ತಿ ಮಾಡುವುದು

      6.ಡಿಜಿಟಲೈಸೇಶನ್
      ಬ್ಲಾಕ್, ಹಿರಿಯ ನಾಯಕರು, ಮುಂಚೂಣಿ ಘಟಕಗಳು, ಇಲಾಖೆಗಳ ಮುಖ್ಯಸ್ಥರು ಹೀಗೆ ಎಲ್ಲರ ಸಂಪರ್ಕ ವಿವರಗಳೊಂದಿಗೆ ಕೆಪಿಸಿಸಿ ಡೇಟಾ ಡಿಜಿಟಲೈಸೇಷನ್ ಮಾಡುವುದು

      7.ವೆಬ್‌ಸೈಟ್ ಮತ್ತು ಸೋಶಿಯಲ್ ಮೀಡಿಯಾ
      ಕೆಪಿಸಿಸಿ ವೆಬ್‌ಸೈಟ್‌ನಲ್ಲಿ ಪಕ್ಷದ ಕಾರ್ಯಕ್ರಮಗಳ ಕುರಿತು ಅಪ್‌ಡೇಟ್‌ ಆಗುತ್ತಿರಬೇಕು

      8.ಪ್ರಚಲಿತ ವಿದ್ಯಮಾನಗಳು
      ಕೆಪಿಸಿಸಿ ಪದಾಧಿಕಾರಿಗಳನ್ನು ಬೆಂಬಲಿಸುವಂತ, ನರೇಟಿವ್ ಸೆಟ್ ಮಾಡುವ ಕೌಂಟರ್ ಮಾಡಬೇಕು

      9.ಗ್ರೌಂಡ್ ಲೆವೆಲ್ ರೀಚ್
      ಬ್ಲಾಕ್ ಮತ್ತು ಬೂತ್ ಮಟ್ಟದ ನಡುವೆ ಮಧ್ಯವರ್ತಿಗಳಾಗಿ ಪಂಚಾಯತಿವಾರು ಸಮಿತಿಗಳು ಕೆಲಸ ಮಾಡಬೇಕು

        10.ಸಾಧನೆಗಳ ಮಾಹಿತಿ
        ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನ ಬ್ಲಾಕ್ ಮತ್ತು ಬೂತ್ ಸಮಿತಿಗಳ ಮೂಲಕ ಸ್ಥಳೀಯವಾಗಿ ಪ್ರಚಾರ ಮಾಡಬೇಕು

          11.ಬೂತ್ ಮಟ್ಟದ ಫಲಾನುಭವಿ ಕಾರ್ಯಕ್ರಮ
          ಸರ್ಕಾರವು ಕೋಟಿಗಟ್ಟಲೆ ಫಲಾನುಭವಿಗಳನ್ನು ಸೃಷ್ಟಿಸಿದೆ
          ಹೀಗಾಗಿ ರಾಜ್ಯಾದ್ಯಂತ ತಳಮಟ್ಟದ ಆಂದೋಲನವನ್ನು ರಚಿಸಲು ಫಲಾನುಭವಿ ಆಧಾರಿತ ಕಾರ್ಯಕ್ರಮವನ್ನು ಪ್ರಾರಂಭಿಸುವುದು

          12.ಡಿಜಿಟಲ್ ಯೂತ್
          ತ್ವರಿತ ಮಾಹಿತಿ ಒದಗಿಸಲು ಹಾಗೂ ಪ್ರಚಾರ ಮಾಡಲು ಪ್ರತಿ ಬೂತ್‌ನಲ್ಲಿ “ಡಿಜಿಟಲ್ ಯೂತ್” ಸ್ಥಾಪಿಸುವುದು.
          ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗ ಇದನ್ನ ನಿರ್ವಹಿಸುವುದು.

            13.ಸದಸ್ಯತ್ವ ನೋಂದಣಿ
            ಪಕ್ಷದ ಸದಸ್ಯರನ್ನು ಹೆಚ್ಚಿಸುವ ಸಲುವಾಗಿ ಮತ್ತೊಮ್ಮೆ ಸದಸ್ಯತ್ವ ನೋಂದಣಿ ಮರುಪ್ರಾರಂಭಿಸುವುದು

              14. AIPC ಮತ್ತು ವೃತ್ತಿಪರರ ಕೋಶ ಪುನರುಜ್ಜೀವನ
              ವೃತ್ತಿಪರರ ಕೋಶ ಮತ್ತು AIPC ಅನ್ನು ಪುನರುಜ್ಜೀವನಗೊಳಿಸಲಾಗುವುದು
              ನಗರ ಕಾರ್ಯನಿರತ ವೃತ್ತಿಪರರನ್ನ ಹೆಚ್ಚೆಚ್ಚು ತಲುಪುವಂತೆ ಮಾಡುವುದು ಇದರ ಉದ್ದೇಶ

              ಚುನಾವಣಾ ಸಿದ್ಧತೆಯ ಪ್ಲಾನ್ ಆಫ್ ಆ್ಯಕ್ಷನ್

              1.ವಿಭಾಗೀಯ ಸತ್ಯಶೋಧನೆ ಮತ್ತು ತಯಾರಿ ಸಮಿತಿ
              ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಸೋಲಿನ ಕಾರಣಗಳನ್ನು ತನಿಖೆ ಮಾಡಲು ಸಮಿತಿಯನ್ನು ನೇಮಿಸುವುದು.
              ಇತ್ತೀಚಿನ ಚುನಾವಣೆಯಲ್ಲಿ ನಮ್ಮ ಕಾರ್ಯಕ್ಷಮತೆಗೆ ಕಾರಣಗಳನ್ನು ಅಳೆಯಲು ವಿಭಾಗವಾರು ಸಮಿತಿಗಳು ಕೆಲಸ ಮಾಡುತ್ತವೆ.
              ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಿಗೆ ನಿಖರ ಮಾಹಿತಿ ಒದಗಿಸುವುದು.

                2.ಕ್ರಿಯಾಶೀಲ ಪಾತ್ರ
                ಮುಂಬರುವ BBMP/ZP/TP ಚುನಾವಣೆಗಳು ಮತ್ತು ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶಕ್ಕಾಗಿ ಕೆಪಿಸಿಸಿ ಕಚೇರಿ ಪೂರ್ವಭಾವಿಯಾಗಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು

                3.ಸಮನ್ವಯ ತಂಡಗಳು
                ಪ್ರತಿ ಜಿಲ್ಲೆ, ವಿಧಾನಸಭಾ ಕ್ಷೇತ್ರವು ಅಭ್ಯರ್ಥಿಗಳಿಗೆ ಸಹಾಯ ಮಾಡಲು ಮತ್ತು ಕೆಪಿಸಿಸಿಗೆ ವರದಿ ಮಾಡಲು ಹಿರಿಯ ನಾಯಕರ ನೇತೃತ್ವದಲ್ಲಿ ಕಾರ್ಯನಿರತ ತಂಡ ರಚಿಸುವುದು
                ಸಮನ್ವಯ ತಂಡಕ್ಕೆ ಆಯಾ ಚುನಾವಣೆಗೆ ನಿರ್ಣಾಯಕ ಬೂತ್‌ಗಳನ್ನು ಗುರುತಿಸುವ ಜವಾಬ್ದಾರಿ ಇರುತ್ತದೆ

                4.ವಿಭಾಗೀಯ ಸಭೆಗಳು
                ಎಲ್ಲಾ ಮಾಜಿ TP/ZP ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು/ಉಪ ನಾಯಕರ ಸಭೆಗಳನ್ನ ಮಾಡಿ ಸಲಹೆ ಸೂಚನೆ ಪಡೆಯುವುದು

                5.ಮತದಾರರ ಪಟ್ಟಿಯನ್ನು ನವೀಕರಿಸುವುದು
                ಮತದಾರರ ಪಟ್ಟಿಯಿಂದ ಮತದಾರರ ಸೇರ್ಪಡೆ ಮತ್ತು ಅಳಿಸುವಿಕೆ ಮತ್ತು ಅದರ ನಿರಂತರ ಮೇಲ್ವಿಚಾರಣೆ ಮಾಡಬೇಕು

                6.ಸಮನ್ವಯ ಸಮಿತಿಗಳು
                ಬಿ.ಬಿ.ಎಂ.ಪಿ ಮತ್ತು ಗ್ರಾಮ ಪಂಚಾಯತಿಗಾಗಿ ವಾರ್ಡ್/ಪಂಚಾಯತ್ ವಾರು ಕಮಿಟಿಗಳನ್ನು ಮಾಡುವುದು
                ಗ್ರೌಂಡ್ ಲೆವೆಲ್‌ಗೆ ತಲುಪಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ರೂಪಿಸುವುದು

                7.ಫಲಾನುಭವಿ ಡೇಟಾ
                ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸುವುದು ಮತ್ತು ಪ್ರತ್ಯೇಕಿಸುವುದು
                ನಿರ್ದಿಷ್ಟ ಸಂದೇಶವನ್ನು ಕಳುಹಿಸುವ ಸಲುವಾಗಿ ಡೇಟಾ ಬಳಕೆ ಮಾಡುವುದು.

                8.ಅಪಾರ್ಟ್‌ಮೆಂಟ್ ಸೆಲ್
                ಬಿಬಿಎಂಪಿ ಚುನಾವಣೆ ಅನುಕೂಲಕ್ಕಾಗಿ ಆರ್‌ಡಬ್ಲ್ಯೂಎ ಮತ್ತು ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ತಲುಪಲು ಕೆಪಿಸಿಸಿ ಅಪಾರ್ಟ್‌ಮೆಂಟ್ ಸೆಲ್ ಪುನರುಜ್ಜೀವನಗೊಳಿಸುವುದು

                9.ಉಪಚುನಾವಣೆಗಳ ಗಮನ
                ವಿಧಾನಸಭೆ ಮತ್ತು ಪರಿಷತ್ ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಲು ಪಕ್ಷದ ಹಿರಿಯ ನಾಯಕರು, ಶಾಸಕರು ಮತ್ತು ಇತರ ಪ್ರಮುಖ ನಾಯಕರನ್ನು ನಿಯೋಜಿಸುವುದು

                  10.ಚುನಾವಣಾ ಶಿಬಿರ ಕಚೇರಿಗಳು
                  ಹಿರಿಯ ಕೆಪಿಸಿಸಿ ನಾಯಕರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಉಪ-ಚುನಾವಣೆ ಸ್ಥಾನಗಳಲ್ಲಿ ಚುನಾವಣಾ ಶಿಬಿರ ಕಚೇರಿಗಳು/ವಾರ್ ರೂಮ್‌ಗಳನ್ನು ಸ್ಥಾಪಿಸಿ.

                  11.ಪರಿಶೀಲನಾ ಸಭೆಗಳು
                  ಮಾಜಿ TP/ZP ಅಧ್ಯಕ್ಷರು/ಉಪಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು/ಉಪ ನಾಯಕರ ಸಭೆಗಳನ್ನು ನಡೆಸಿ ಜಬಾವ್ದಾರಿ ಹಂಚುವುದು ಹಾಗೂ ಸಲಹೆ ಪಡೆಯುವುದು

                  12.ಕಾರ್ಯಕ್ಷಮತೆಯ ವಿಮರ್ಶೆ
                  ಇತ್ತೀಚಿನ ಲೋಕಸಭೆ ಚುನಾವಣೆಗಳಲ್ಲಿನ ಕಾರ್ಯಕ್ಷಮತೆಯನ್ನು ಕೂಲಂಕಷವಾಗಿ ಪರಿಶೀಲಿಸುವುದು
                  ಯಾವ ಅಸೆಂಬ್ಲಿ ಸ್ಥಾನಗಳು ಕಳಪೆ ಸಾಧನೆ ಮಾಡಿವೆ ಎಂಬುದನ್ನು ಗುರುತಿಸುವುದು ಮತ್ತು ಅದಕ್ಕೆ ಕಾರಣ ತಿಳಿದುಕೊಳ್ಳುವುದು (important)

                  13.ಸದಸ್ಯತ್ವ ಡ್ರೈವ್ ಬಳಕೆ
                  ರಾಜ್ಯದಾದ್ಯಂತ ಕೆಪಿಸಿಸಿ ಸದಸ್ಯರನ್ನು ತಲುಪಲು, ಕೆಪಿಸಿಸಿ ಸದಸ್ಯತ್ವ ಡ್ರೈವ್‌ನಿಂದ ಡೇಟಾವನ್ನು ಬಳಸಿಕೊಳ್ಳುವುದು

                    14.ವಿಷನ್ ಡಾಕ್ಯುಮೆಂಟ್
                    ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ವಿಷನ್ ಡಾಕ್ಯುಮೆಂಟ್/ಪ್ರಣಾಳಿಕೆಯನ್ನು ರಚಿಸುವುದು

                    ಇದನ್ನೂ ಓದಿ | DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

                    ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೋಮವಾರ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಜಿ.ಸಿ. ಚಂದ್ರಶೇಖರ್, ವಿ.ಎಸ್. ಉಗ್ರಪ್ಪ, ರಮಾನಾಥ್ ರೈ ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

                    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
                    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
                    Continue Reading
                    Click to comment

                    Leave a Reply

                    Your email address will not be published. Required fields are marked *

                    ಕರ್ನಾಟಕ

                    Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

                    Stray Dogs Attack: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ 15 ಕುರಿಗಳು ಮೃತಪಟ್ಟಿವೆ.

                    VISTARANEWS.COM


                    on

                    Stray Dogs Attack
                    Koo

                    ಯಾದಗಿರಿ: ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿಯಾಗಿರುವ ಘಟನೆ (Stray Dogs Attack) ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಸಂಜೀವಪ್ಪ ದೇವಾಪುರ ಎಂಬುವವರ ಕುರಿಗಳು ಮೃತಪಟ್ಟಿವೆ.

                    ಗ್ರಾಮದ ಹೊರ ಭಾಗದ ಕುರಿ ಹಟ್ಟಿಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ನಾಲ್ಕೈದು ಬೀದಿ ನಾಯಿಗಳು ದಾಳಿ‌ ಮಾಡಿ, ಕೊಂದಿವೆ. ಕುರಿಗಳನ್ನೇ ನಂಬಿಕೊಂಡು ಕುರಿಗಾಹಿ ಸಂಜೀವಪ್ಪ ಜೀವನ ಸಾಗಿಸುತ್ತಿದ್ದರು. ಕುರಿಗಳನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕೆ ಕುರಿಗಾಹಿ ಮನವಿ‌‌ ಮಾಡಿದ್ದಾರೆ.

                    ಇದನ್ನೂ ಓದಿ | Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

                    ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ

                    ಗದಗ: ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹತ್ತಿಕಾಳ ಬಡಾವಣೆಯಲ್ಲಿ ನಡೆದಿದೆ.

                    ನಿರಂತರ ಮಳೆಯಿಂದ ಚಾವಣಿ ಶಿಥಿಲವಾಗಿತ್ತು. ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಏಕಾಏಕಿ ಚಾವಣಿ ಕುಸಿದಿದ್ದರಿಂದ ಗಂಗಪ್ಪ ಹತ್ತಿಕಾಳ, ಚಂಭವ್ವ ಹತ್ತಿಕಾಳ, ಸರೋಜಾ ಹತ್ತಿಕಾಳಗೆ ಗಾಯಗಳಾಗಿವೆ. ಛಾವಣಿ ಕುಸಿತ ಗಮನಿಸಿ ಮನೆಯಿಂದ 16 ವರ್ಷ ಬಾಲಕಿ ಮೇಘಾ ಆಚೆ ಓಡಿ ಬಂದಿದ್ದಾಳೆ.

                    ಕೂಡಲೇ ಸ್ಥಳೀಯರಿಗೆ ಮೇಘಾ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

                    ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

                    ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

                    ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

                    ಇದನ್ನೂ ಓದಿ | Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

                    ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                    Continue Reading

                    ಕ್ರೈಂ

                    Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

                    Lovers Death: ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು.

                    VISTARANEWS.COM


                    on

                    lovers death self harming
                    Koo

                    ಬೆಂಗಳೂರು: ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ (Lovers death) ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

                    ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಶವಗಳು ಪತ್ತೆಯಾಗಿವೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್‌ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆಯಲ್ಲಿ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

                    ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ದಾರದಿಂದ ಕೈ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

                    ʼಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆ ಆದ ಕಾರಣ ಒಟ್ಟಿಗೆ ಇರಲು ಆಗಲ್ಲ ಅನ್ನೋ ದುಃಖ ಇತ್ತು. ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ತನಿಖೆ ಮುಂದುವರೆದಿದೆʼ ಎಂದು ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

                    ʼಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯೊ‌ ನಿರ್ಧಾರ ಮಾಡಿದ್ದಾರೆ. ಯುವತಿ ಅಂಜನಾ ಸಾವಿಗೆ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ಆಟೋದಲ್ಲಿ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನ ಬಾಡಿ ಮೇಲೆತ್ತುವಾಗ ಅಂಜನಾ ಮೃತದೇಹ ಕೂಡ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆʼ ಎಂದು ಜಗಲಾಸರ್‌ ತಿಳಿಸಿದ್ದಾರೆ.

                    ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

                    ಬೆಂಗಳೂರು: ಬೆಂಗಳೂರಿನಲ್ಲಿ‌ ಇನ್ನೊಂದು ಬರ್ಬರ ಹತ್ಯೆ ನಡೆದಿದೆ. ಅಜಿತ್‌ ಎಂಬ ವ್ಯಕ್ತಿ ಕೊಲೆಯಾದವನು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

                    ಪುಲಿಕೇಶಿನಗರ ಕಾಕ್ಸ್ ಟೌನ್ ಬಳಿ ಅಜಿತ್‌ (35) ಬರ್ಬರ ಹತ್ಯೆಯಾಗಿದೆ. ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

                    ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

                    ಇದನ್ನು ಓದಿ: Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

                    Continue Reading

                    ಕ್ರೈಂ

                    Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

                    Murder Case: ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ.

                    VISTARANEWS.COM


                    on

                    bangalore murder case
                    Koo

                    ಬೆಂಗಳೂರು: ಬೆಂಗಳೂರಿನಲ್ಲಿ‌ ಇನ್ನೊಂದು ಬರ್ಬರ ಹತ್ಯೆ (Murder Case) ನಡೆದಿದೆ. ಅಜಿತ್‌ ಎಂಬ ವ್ಯಕ್ತಿ ಕೊಲೆಯಾದವನು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

                    ಪುಲಿಕೇಶಿನಗರ ಕಾಕ್ಸ್ ಟೌನ್ ಬಳಿ ಅಜಿತ್‌ (35) ಬರ್ಬರ ಹತ್ಯೆಯಾಗಿದೆ. ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

                    ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

                    ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

                    ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

                    ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

                    ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                    ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

                    Continue Reading

                    ಪ್ರಮುಖ ಸುದ್ದಿ

                    Dengue Fever: ಇನ್ನೂ ಏರಲಿದೆ ಡೆಂಗ್ಯು ಕೇಸ್‌ ಎಂದ ಆರೋಗ್ಯ ಸಚಿವರು; ಇದುವರೆಗೆ 6 ಸಾವು

                    Dengue Fever: ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ.

                    VISTARANEWS.COM


                    on

                    dengue fever Dinesh Gundu Rao
                    Koo

                    ಬೆಂಗಳೂರು: ಇದುವರೆಗೆ ರಾಜ್ಯದಲ್ಲಿ ಡೆಂಗ್ಯು ಜ್ವರದಿಂದಾಗಿ (Dengue Fever) 6 ಜನ ಸತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಡೆಂಗ್ಯು ಜ್ವರ ಪ್ರಕರಣಗಳು (Dengue Positive) ಇನ್ನೂ ಏರಬಹುದು ಎಂದು ಆರೋಗ್ಯ ಸಚಿವ (Health Minister) ದಿನೇಶ್‌ ಗುಂಡೂರಾವ್‌ (dinesh Gundu Rao) ಎಚ್ಚರಿಸಿದ್ದಾರೆ.

                    ಡೆಂಗ್ಯು ಹರಡುವಿಕೆ ನಿಯಂತ್ರಣದ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿದ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ಡೆಂಗ್ಯು ಕಳೆದ ವರ್ಷಕ್ಕಿಂತ ಈ ಬಾರಿ ದುಪ್ಪಟ್ಟಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. 6 ಜನ ಸತ್ತಿದ್ದಾರೆ. ಇದರಲ್ಲಿ ಕೋಮಾರ್ಬಿಡಿಟೀಸ್‌ (ಬಿಪಿ, ಮಧುಮೇಹ, ಹೃದಯ ಕಾಯಿಲೆ) ಇದ್ದ ಮೂವರೂ ಸೇರಿದ್ದಾರೆ ಎಂದು ಸಚಿವರು ತಿಳಿಸಿದರು.

                    ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ. ಸದಾ ಮಳೆ ಬರುತ್ತಿದ್ದರೆ ಡೆಂಗ್ಯು ಸೊಳ್ಳೆ ಬರುವುದಿಲ್ಲ. ಮಳೆ ಬಿಟ್ಟು ಬಿಟ್ಟು ಬರುವ ಹಿನ್ನೆಲೆಯಲ್ಲಿ ಡೆಂಗ್ಯುವಿಗೆ ಅನುಕೂಲ ವಾತಾವರಣ ಇದೆ. ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುತ್ತದೆ. ಇದು ಅನುಕೂಲ ಮಾಡಿಕೊಡುತ್ತದೆ. ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ ಎಂದು ಸಚಿವರು ತಿಳಿಸಿದರು.

                    ರಾಜ್ಯದಲ್ಲಿ ಒಟ್ಟು 6187 ಪ್ರಕರಣಗಳು ಇವೆ. 3463 ಪ್ರಕರಣ ನಗರ ಪ್ರದೇಶಗಳಲ್ಲಿ ಕಂಡು ಬಂದಿವೆ. 56% ನಗರ ಪ್ರದೇಶದಲ್ಲಿ, 44% ಗ್ರಾಮೀಣ ಪ್ರದೇಶದಲ್ಲಿ ಪೊಸಿಟಿವ್‌ ಬಂದಿವೆ. ಒಂದು ವರ್ಷದ ಒಳಗಿನ 123 ಮಕ್ಕಳಿಗೆ, 1-18 ವರ್ಷದ 2301 ಮಂದಿಗೆ, 19- 60 ವರ್ಷದ 3313 ಮಂದಿಗೆ, 61 ವರ್ಷ ಮೇಲಿನ 450 ಮಂದಿಗೆ ಪಾಸಿಟಿವ್‌ ಬಂದಿದೆ ಎಂದು ಮಾಹಿತಿ ನೀಡಿದರು.

                    ಡೆಂಗ್ಯು ಜ್ವರ ಇನ್ನಷ್ಟು ಹೆಚ್ಚಾಗಬಹುದು. ಸೆಪ್ಟಂಬರ್‌ನಲ್ಲಿ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದಾರೆ. ಟೆಸ್ಟಿಂಗ್ ಕಿಟ್ ಹೆಚ್ಚುವರಿ ಇರಿಸಲಾಗಿದೆ. ಪ್ಲೇಟ್‌ಲೆಟ್ಸ್‌ ಕೊಡುವುದಕ್ಕೆ ತಿಳಿಸಿದ್ದೇವೆ. ಡೆಂಗ್ಯುವಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಬ್ಲಡ್ ಯೂನಿಟ್‌ಗಳ ಜತೆ ಮಾತುಕತೆ ಮಾಡಲಾಗಿದೆ. ಐವಿ ಫ್ಲೂವಿಡ್‌ಗಳನ್ನು ಕೊಡಲಾಗುತ್ತದೆ. ಇದು ನಮ್ಮ ಬಳಿ ಸಾಕಷ್ಟು ಇದೆ. ಆರಂಭದಲ್ಲಿ ಪ್ಯಾರಸಿಟಮಲ್ ಕೊಟ್ಟರೆ ಸಾಕಾಗುತ್ತದೆ ಎಂದು ತಿಳಿಸಿದರು.

                    ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

                    ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

                    ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯು ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯು ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯು ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯು ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

                    ಎಲ್ಲೆಲ್ಲಿ ಪಾಸಿಟಿವ್ ಕೇಸ್ ಬರುತ್ತದೆಯೋ ಅಲ್ಲಿ ತೀವ್ರ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಲಾರ್ವ ನಾಶ, ಫಾಗಿಂಗ್ ಸೇರಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. RWA, ಕ್ರೆಡೈ ಸೇರಿ ಕಟ್ಟಡ ಮಾಲೀಕರು ಸೇರಿ ಅವರನ್ನು ಒಳಗೊಂಡು ಸಭೆ ನಡೆಸಲು ತೀರ್ಮಾನಿಸಿದ್ದೇವೆ. ಮೆಡಿಕಲ್ ಆಫೀಸರ್, MOH, ಸೈನ್ಸ್ ಟೀಚರ್ಸ್‌ಗೆ ಡೆಂಗ್ಯು ವಿಚಾರದಲ್ಲಿ ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಡೆಂಗ್ಯು ಕುರಿತು ತಿಳಿವಳಿಕೆ ನೀಡಲಾಗಿದೆ. ಡಿಪೋಗಳಲ್ಲಿ ಟಯರ್‌ಗಳಲ್ಲಿ ಸೊಳ್ಳೆ ಉತ್ಪತ್ತಿ ಆಗುತ್ತಿರುವುದು ಕಂಡು ಬಂದಿದೆ. ಡಿಪೋಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿದೆ. ಹೆಚ್ಚು ಸಕ್ರಿಯ ಪ್ರಕರಣಗಳು ಕಂಡು ಬರ್ತಿದೆ. ಹೀಗಾಗಿ ಎಚ್ಚರಿಕೆ ವಹಿಸಲು ಸಾರಿಗೆ ಇಲಾಖೆಗೆ ಸೂಚಿಸಿದ್ದೇವೆ. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಜನರಿಗೆ ಅರಿವು ಮೂಡಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

                    ಇದನ್ನೂ ಓದಿ: Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

                    Continue Reading
                    Advertisement
                    Stray Dogs Attack
                    ಕರ್ನಾಟಕ5 mins ago

                    Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

                    Gold Rate Today
                    ಚಿನ್ನದ ದರ10 mins ago

                    Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

                    lovers death self harming
                    ಕ್ರೈಂ26 mins ago

                    Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

                    Anant-Radhika Wedding
                    ದೇಶ36 mins ago

                    Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

                    Prajwal Devaraj cancel birthday darshan main reason
                    ಸಿನಿಮಾ37 mins ago

                    Prajwal Devaraj: ಪ್ರಜ್ವಲ್ ದೇವರಾಜ್ ಬರ್ತ್‌ಡೇ ಸೆಲೆಬ್ರೇಷನ್‌ ಕ್ಯಾನ್ಸಲ್‌; ದರ್ಶನ್‌ ಕಾರಣ?

                    IND vs ZIM
                    ಕ್ರೀಡೆ47 mins ago

                    IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

                    Medal Biteing
                    ಕ್ರೀಡೆ54 mins ago

                    Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

                    Tharun Sudhir sonal monteiro marriage update
                    ಸ್ಯಾಂಡಲ್ ವುಡ್1 hour ago

                    Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

                    Stock Market
                    ವಾಣಿಜ್ಯ1 hour ago

                    Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

                    bangalore murder case
                    ಕ್ರೈಂ2 hours ago

                    Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

                    Sharmitha Gowda in bikini
                    ಕಿರುತೆರೆ9 months ago

                    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

                    Kannada Serials
                    ಕಿರುತೆರೆ9 months ago

                    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

                    Bigg Boss- Saregamapa 20 average TRP
                    ಕಿರುತೆರೆ9 months ago

                    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

                    galipata neetu
                    ಕಿರುತೆರೆ7 months ago

                    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

                    Kannada Serials
                    ಕಿರುತೆರೆ9 months ago

                    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

                    Kannada Serials
                    ಕಿರುತೆರೆ9 months ago

                    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

                    Bigg Boss' dominates TRP; Sita Rama fell to the sixth position
                    ಕಿರುತೆರೆ8 months ago

                    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

                    geetha serial Dhanush gowda engagement
                    ಕಿರುತೆರೆ7 months ago

                    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

                    varun
                    ಕಿರುತೆರೆ8 months ago

                    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

                    Kannada Serials
                    ಕಿರುತೆರೆ10 months ago

                    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

                    karnataka weather Forecast
                    ಮಳೆ18 hours ago

                    Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

                    karnataka Weather Forecast
                    ಮಳೆ2 days ago

                    Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

                    karnataka Weather Forecast
                    ಮಳೆ3 days ago

                    Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

                    Actor Darshan
                    ಬೆಂಗಳೂರು3 days ago

                    Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

                    karnataka weather Forecast
                    ಮಳೆ4 days ago

                    Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

                    karnataka Rain
                    ಮಳೆ4 days ago

                    Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

                    karnataka Weather Forecast
                    ಮಳೆ5 days ago

                    Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

                    karnataka Rain
                    ಮಳೆ5 days ago

                    Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

                    Karnataka Weather Forecast
                    ಮಳೆ6 days ago

                    Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

                    karnataka Weather Forecast
                    ಮಳೆ6 days ago

                    Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

                    ಟ್ರೆಂಡಿಂಗ್‌