ಡ್ರಮ್‌ನಲ್ಲಿ ಶವ ಪತ್ತೆ ರಹಸ್ಯ ಬಯಲು : ಕುಟುಂಬವನ್ನೇ ಹಾಳು ಮಾಡಿದಳೆಂಬ ಸಿಟ್ಟಿನಲ್ಲಿ ನಡೆಯಿತೇ ತಮನ್ನಾ ಕೊಲೆ? - Vistara News

ಕರ್ನಾಟಕ

ಡ್ರಮ್‌ನಲ್ಲಿ ಶವ ಪತ್ತೆ ರಹಸ್ಯ ಬಯಲು : ಕುಟುಂಬವನ್ನೇ ಹಾಳು ಮಾಡಿದಳೆಂಬ ಸಿಟ್ಟಿನಲ್ಲಿ ನಡೆಯಿತೇ ತಮನ್ನಾ ಕೊಲೆ?

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಡ್ರಮ್‌ ನೊಳಗೆ ಪತ್ತೆಯಾದ ಶವ ಜಿಗಣಿಯ ತಮನ್ನಾ ಎಂಬವಳದ್ದು ಎಂದು ಬಯಲಾಗಿದೆ. ಹಾಗಿದ್ದರೆ ಅಕೆಯ ಕೊಲೆ ಯಾಕಾಯಿತು?

VISTARANEWS.COM


on

Railway murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಕಳೆದ ಮಾರ್ಚ್‌ 13ರಂದು ಡ್ರಮ್‌ನಲ್ಲಿ ಪತ್ತೆಯಾದ ಶವ ಜಿಗಣಿ ಮೂಲದ ಮುಸ್ಲಿಂ ಮಹಿಳೆ ತಮನ್ನಾಳದ್ದು ಎಂಬುದು ಈಗ ಬಯಲಾಗಿದೆ. ಆಕೆಯನ್ನು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾಗಿ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಆರೋಪಿಗಳು ಭಾಗಿಯಾಗಿದ್ದು ಕಮಾಲ್, ತನ್ವೀರ್, ಶಾಕೀಬ್ ಎಂಬ ಮೂವರನ್ನಷ್ಟೇ ಈಗ ಬಂಧಿಸಲಾಗಿದೆ. ಉಳಿದ ಐವರನ್ನು ಬಂಧಿಸಬೇಕಾಗಿದೆ.

ಮಾರ್ಚ್‌ 13ರಂದು ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿಕ ಅನಾಥವಾಗಿ ಪತ್ತೆಯಾದ ಡ್ರಮ್‌ನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಮಹಿಳೆಯನ್ನು ಹತ್ಯೆ ಮಾಡಿದ ದುಷ್ಕರ್ಮಿಗಳು ಶವವನ್ನು ಡ್ರಮ್‌ನಲ್ಲಿ ಇಟ್ಟು ಹೋಗಿದ್ದರು ದುಷ್ಕರ್ಮಿಗಳು. ಸಿಸಿಟಿವಿ ಫೂಟೇಜ್‌ಗಳನ್ನು ಪರಿಶೀಲಿಸಿದಾಗ ಇಬ್ಬರು ದುಷ್ಕರ್ಮಿಗಳು ಒಂದು ಆಟೋದಲ್ಲಿ ಬಂದು ಡ್ರಮ್‌ ಇಟ್ಟು ಹೋಗಿದ್ದು ಪತ್ತೆಯಾಗಿತ್ತು. ಬಳಿಕ ರೈಲ್ವೆ ಎಸ್‌ಪಿ ಸೌಮ್ಯಲತಾ ಅವರ ಮುತುವರ್ಜಿಯಿಂದ ನಡೆದ ತನಿಖೆಯಲ್ಲಿ ಕೊಲೆಯಾದ ಮಹಿಳೆ ತಮನ್ನಾ ಎನ್ನುವುದು ಬಯಲಾಗಿದೆ.

ಆರೋಪಿಗಳೆಲ್ಲರೂ ಬಿಹಾರ ಮೂಲದವರಾಗಿದ್ದು, ಅಲ್ಲಿಂದ ಬಂದು ಕಲಾಸಿಪಾಳ್ಯದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರನ್ನು ಬಳಸಿಕೊಂಡು ಈ ಕೊಲೆ ನಡೆದಿದೆ. ಈ ಕೊಲೆಯ ಹಿಂದೆ ಕೌಟುಂಬಿಕ ಕಾರಣಗಳು ಇವೆ ಎಂದು ಹೇಳಲಾಗಿದೆ.

ಕೊಲೆಯಲ್ಲಿ ಒಟ್ಟು ಎಂಟು ಮಂದಿ ಭಾಗಿಯಾಗಿದ್ದು, ನವಾಬ್, ಜಮಾಲ್, ಮಜರ್, ಅಸ್ಸಾಬ್, ಸಬೂಲ್, ಕಮಾಲ್, ತನ್ವೀರ್, ಶಾಕೀಬ್ ಸೇರಿ ಕಲಾಸಿಪಾಳ್ಯದಲ್ಲಿ ಕೊಲೆ ಮಾಡಿ ಬೈಯಪ್ಪನಹಳ್ಳಿ ಮೃತದೇಹ ಇಟ್ಟು ಬಂದಿದ್ದರು.

ಏನಿದು ಕೌಟುಂಬಿಕ ಕಲಹ

ತಮನ್ನಾ ಕೊಲೆಗೆ ಕೌಟುಂಬಿಕ ಕಾರಣ ಎಂದು ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಆದರೆ, ಇದಕ್ಕೂ ಕೊಲೆಗಾರರಿಗೂ ಏನು ಸಂಬಂಧ ಎನ್ನುವುದು ತುಂಬಾ ಸ್ಪಷ್ಟತೆ ಸಿಗುವುದಿಲ್ಲ. ಆರೋಪಿಗಳಲ್ಲಿ ಒಬ್ಬಾತ ಮಾತ್ರ ಈಕೆಯ ಕುಟುಂಬಕ್ಕೆ ಸೇರಿದವನು. ಉಳಿದವರು ಹತ್ಯೆಯಲ್ಲಿ ಯಾಕೆ ಭಾಗಿಯಾದರು ಎನ್ನುವುದು ಇನ್ನಷ್ಟೇ ಪೂರ್ಣ ತನಿಖೆಯಿಂದ ಬೆಳಕಿಗೆ ಬರಬೇಕಾಗಿದೆ.

ತಮನ್ನಾ ಮತ್ತು ಇಂತಿಕಾಬ್ ಮದುವೆಯಾಗಿ ಜಿಗಣಿಯಲ್ಲಿ ವಾಸವಾಗಿದ್ದರು. ಅವರನ್ನು ಆಕೆಯ ಸಂಬಂಧಿಯಾದ ನವಾಬ್‌ ಎಂಬಾತ (ಆರೋಪಿಗಳಲ್ಲಿ ಒಬ್ಬ) ಬೆಂಗಳೂರಿಗೆ ಕರೆಸಿಕೊಂಡಿದ್ದ. ಬೆಂಗಳೂರು ತೋರಿಸೋದಾಗಿ ಕರೆತಂದಿದ್ದ ಆತ ಕೆಲವು ಕಡೆಗಳಿಗೆ ಕರೆದು ಕೊಂಡು ಕೂಡಾ ಹೋಗಿದ್ದರು.

ಈ ತಮನ್ನಾಗೆ ಮೊದಲು ಅಫ್ರೋಜ್ ಎಂಬಾತನ ಜತೆಗೆ ಮದುವೆ ಆಗಿತ್ತು. ಅಫ್ರೋಜ್‌ ವಿಶೇಷ ಚೇತನನಾಗಿದ್ದ. ಅವನಿಂದ ಡೈವೋರ್ಸ್‌ ಪಡೆದಿದ್ದ ಆಕೆ ಇಮ್ತಿಕಾಬ್‌ ಎಂಬಾತನನ್ನು ಮದುವೆಯಾಗಿದ್ದಳು. ಜಿಗಣಿಯಲ್ಲಿ ವಾಸವಾಗಿರುವುದು ಇಮ್ತಿಕಾಬ್‌ ಜತೆ. ನಿಜವೆಂದರೆ ಅಫ್ರೋಜ್‌ ಇಮ್ತಿಕಾಬ್‌ನ ದೊಡ್ಡಪ್ಪನ ಮಗನೇ ಆಗಿದ್ದ. ಕೊಲೆಯಲ್ಲಿ ಭಾಗಿಯಾಗಿರುವ ನವಾಬ್‌ ಇಮ್ತಿಕಾಬ್‌ನ ಸಹೋದರ.

ಕೊಲೆ ಮಾಡಿದ್ದು ಯಾಕೆ?

ಈ ಪ್ರಕರಣದಲ್ಲಿ ತಮನ್ನಾ ಮೇಲೆ ಪ್ರಬಲ ದ್ವೇಷ ಇರುವುದು ನವಾಬ್‌ನಿಗೆ. ತಮನ್ನಾ ಇಡೀ ಕುಟುಂಬವನ್ನು ಹಾಳು ಮಾಡುತ್ತಿದ್ದಾಳೆ ಎನ್ನುವುದು ಅವನ ಆಕ್ರೋಶ. ಹೀಗಾಗಿ ಕೊಲೆಗೆ ಸ್ಕೆಚ್‌ ಮಾಡಿದ್ದ. ಬೆಂಗಳೂರಿಗೆ ಕರೆಸಿಕೊಂಡಿದ್ದ. ಮಾರ್ಚ್‌ 12ರ ಭಾನುವಾರ ಎರಡು ಗಂಟೆಗೆ ಪಾರ್ಟಿಗೆ ಕರೆಸಿಕೊಳ್ಳಲಾಗಿದೆ. ತಮನ್ನಾ ಒಬ್ಬಳೇ ಮಹಿಳೆ ಆಗಿರುವುದರಿಂದ ಇನ್ನೊಬ್ಬ ಮಹಿಳೆಯನ್ನು ಮನೆಗೆ ಕರೆಸಿಕೊಂಡಿದ್ದರು.

ಆವತ್ತು ಮನೆಯಲ್ಲಿ ಪಾರ್ಟಿ ಮಾಡಿದ ಬಳಿಕ ಸಂಜೆ ಆರು ಗಂಟೆಗೆ ಕೊಲೆ ಮಾಡಿದ್ದಾರೆ. ಕುತ್ತಿಗೆಯನ್ನು ಕೈಯಿಂದ ಹಿಸುಕಿ ಮತ್ತು ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದರು. ಅಂದೇ ಕಲಾಸಿಪಾಳ್ಯದಿಂದ ಒಂದು ಡ್ರಮ್‌ ಖರೀದಿಸಿದ ಆರೋಪಿಗಳು ಶವವನ್ನು ಅದರಲ್ಲಿ ಹಾಕಿ ರಾತ್ರಿ 11.45ರ ಹೊತ್ತಿಗೆ ಬೈಯಪ್ಪನ ಹಳ್ಳಿ ರೈಲ್ವೇ ನಿಲ್ದಾಣದಲ್ಲಿ ಇಟ್ಟುಬಂದಿದ್ದಾರೆ. ಶವವನ್ನು ಇಡಲಾಗಿದ್ದು ಡ್ರಮ್‌ ಮೇಲಿದ್ದ ಸ್ಟಿಕರ್‌ ಆಧಾರದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಐವರಿಗಾಗಿ ಶೋಧ ಮುಂದುವರಿದಿದೆ.

ಇದನ್ನೂ ಓದಿ : ರೈಲ್ವೇ ಸ್ಟೇಷನ್‌ ಶವ ಪತ್ತೆ ರಹಸ್ಯ ಬಯಲು; ಮಹಿಳೆಯನ್ನು ಕೊಂದು ಡ್ರಮ್‌ನಲ್ಲಿ ಹಾಕಿಟ್ಟು ಪರಾರಿಯಾದ ಇಬ್ಬರ ಅರೆಸ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Bengaluru News: ಭಯೋತ್ಪಾದನೆ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಟೀಕಿಸಿದ್ದಾರೆ.

VISTARANEWS.COM


on

BJP State Vice President Malavika Avinash latest statement
Koo

ಬೆಂಗಳೂರು: ಕರ್ನಾಟಕವು (Karnataka) ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಕಳವಳ (Bengaluru News) ವ್ಯಕ್ತಪಡಿಸಿದರು.

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಯ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಟೀಕಿಸಿದರು.

ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಮತ್ತು ಆ ಸ್ಫೋಟದ ಕುರಿತು ಎನ್‍ಐಎ ತನಿಖೆ ನಡೆಯುತ್ತಿದೆ. ಮೊದಲಿಗೆ ಪೊಲೀಸ್ ತನಿಖೆ ನಡೆಯುತ್ತಿತ್ತು. ಇದೀಗ ಸಿಸಿಬಿ ಮತ್ತು ಎನ್‍ಐಎ ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

ಎನ್‍ಐಎ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ನಿನ್ನೆ ದಾಳಿ ನಡೆಸಿದೆ. ಶಿವಮೊಗ್ಗದವರಾದ ಇಬ್ಬರು ಪ್ರಮುಖ ಆರೋಪಿಗಳ ಕುರಿತು ಮಾಹಿತಿ ಲಭಿಸಿದೆ. ಇಲ್ಲಿನ ಸ್ಫೋಟಕ್ಕೂ ಮಂಗಳೂರಿನ ಸ್ಫೋಟಕ್ಕೂ ಸಂಬಂಧ ಇದೆ ಎಂದು ತಿಳಿಸಿದರೂ, ಮುಖ್ಯಮಂತ್ರಿಯವರು ಅದನ್ನು ಅಲ್ಲಗಳೆದಿದ್ದಾರೆ ಎಂದು ಆರೋಪಿಸಿದ ಅವರು, ಭಯೋತ್ಪಾದನೆ ನಿಗ್ರಹಕ್ಕೆ ಪ್ರಯತ್ನ ಮಾಡದೆ ಸರ್ಕಾರವು ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ತಿಳಿಸಿದರು.

ತರಬೇತಿ ಪಡೆದದವರೇ ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ್ದಾರೆ. ಇದಕ್ಕೆ ಪೂರ್ವ ತಯಾರಿ ಮಾಡಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಸರ್ಕಾರವು ತುಷ್ಟೀಕರಣದ ರಾಜಕಾರಣ ಮಾಡುತ್ತಿರುವಂತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್ ಇತಿಹಾಸದಲ್ಲಿ ವಿಭಿನ್ನ ಸಾಧನೆ ಮಾಡಿದ ಎಸ್​ಆರ್​​ಎಚ್​​ ಬೌಲರ್​ ಉನಾದ್ಕಟ್​

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ ಮತ್ತು ಬಿಬಿಎಂಪಿ ಮಾಜಿ ಸದಸ್ಯೆ ಹೇಮಲತಾ ಶೇಟ್ ಉಪಸ್ಥಿತರಿದ್ದರು.

Continue Reading

Lok Sabha Election 2024

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Lok Sabha Election 2024: 40 ಕೋಟಿ 94 ಲಕ್ಷ ರೂ. ಮೌಲ್ಯರ ಚರ – ಸ್ಥಿರಾಸ್ಥಿಯನ್ನು ಪ್ರಜ್ವಲ್‌ ರೇವಣ್ಣ ಹೊಂದಿದ್ದಾರೆ. ಇದರಲ್ಲಿ 5.44 ಕೋಟಿ ರೂಪಾಯಿ ಚರ ಹಾಗೂ 35.40 ಕೋಟಿ ರೂಪಾಯಿ ಸ್ಥಿರ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯ 9.29 ಲಕ್ಷ ರೂಪಾಯಿ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಸರ್ಕಾರಕ್ಕೆ 3.04 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Lok Sabha Election 2024 Prajwal Revanna gets Rs 40 crore worth asset
Koo

ಹಾಸನ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಒಬ್ಬೊಬ್ಬರೇ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಗುರುವಾರ (ಮಾ. 28) ಹಾಸನ ಲೋಕಸಭಾ ಕ್ಷೇತ್ರಕ್ಕೆ (Hassan Lok Sabha constituency) ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ (Prajwal Revanna) ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ 40.94 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.

40 ಕೋಟಿ 94 ಲಕ್ಷ ರೂ. ಮೌಲ್ಯರ ಚರ – ಸ್ಥಿರಾಸ್ಥಿಯನ್ನು ಪ್ರಜ್ವಲ್‌ ರೇವಣ್ಣ ಹೊಂದಿದ್ದಾರೆ. ಇದರಲ್ಲಿ 5.44 ಕೋಟಿ ರೂಪಾಯಿ ಚರ ಹಾಗೂ 35.40 ಕೋಟಿ ರೂಪಾಯಿ ಸ್ಥಿರ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯ 9.29 ಲಕ್ಷ ರೂಪಾಯಿ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್‌ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ರೂ. ನಗದನ್ನು ಹೊಂದಿರುವ ಪ್ರಜ್ವಲ್‌ ರೇವಣ್ಣ, ಕಳೆದ ಐದು ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ರೂಪಾಯಿ ಆದಾಯವನ್ನು ಗಳಿಕೆ ಮಾಡಿದ್ದಾರೆ.

ಬೆಂಗಳೂರಲ್ಲಿ ವಾಣಿಜ್ಯ ಮಳಿಗೆ

31 ಹಸು, ನಾಲ್ಕು ಎತ್ತು, ಒಂದು ಟ್ರ್ಯಾಕ್ಟರ್ ಅನ್ನು ಪ್ರಜ್ವಲ್ ರೇವಣ್ಣ ಹೊಂದಿದ್ದಾರೆ. ಬೆಂಗಳೂರು, ಮೈಸೂರು ಸೇರಿ ವಿವಿಧೆಡೆ ವಾಣಿಜ್ಯ ಕಟ್ಟಡಗಳನ್ನು ಸಹ ಇವರು ಹೊಂದಿದ್ದಾರೆ. ಹೊಳೆನರಸೀಪುರ ಹಾಗೂ ಬೆಂಗಳೂರಿನ ನೆಲಮಂಗಲದಲ್ಲಿ ಆಸ್ತಿ ಹೊಂದಿರುವ ಎಚ್‌.ಡಿ. ರೇವಣ್ಣ ಪುತ್ರ ಕೋಟಿಗಳ ಒಡೆಯರಾಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಕುಟುಂಬದವರಿಂದ 4.48 ಕೋಟಿ ರೂ. ಸಾಲ

ಅತ್ತೆ ಅನುಸೂಯ ಅವರಿಂದ 22 ಲಕ್ಷ ರೂ., ಅತ್ತೆ ಶೈಲಜಾರಿಂದ 10 ಲಕ್ಷ ರೂಪಾಯಿ ಹಾಗೂ ಅಜ್ಜಿ ಚನ್ನಮ್ಮರಿಂದ 23 ಲಕ್ಷ ರೂಪಾಯಿ, ತಂದೆ ರೇವಣ್ಣ ಅವರಿಂದ 86 ಲಕ್ಷ ರೂಪಾಯಿ, ಸಹೋದರ ಡಾ. ಸೂರಜ್ ಅವರಿಂದ 1 ಕೋಟಿ ರೂಪಾಯಿ ಸಾಲವನ್ನು ಪ್ರಜ್ವಲ್‌ ರೇವಣ್ಣ ಪಡೆದಿದ್ದಾರೆ. ಒಟ್ಟು 4.48 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.

ಸರ್ಕಾರಕ್ಕೆ 3.04 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೆಜಿಗಟ್ಟಲೆ ಚಿನ್ನ ಬೆಳ್ಳಿ ಹೊಂದಿರುವ ಪ್ರಜ್ವಲ್

ಪ್ರಜ್ವಲ್‌ ರೇವಣ್ಣ ಅವರ ಬಳಿ ಒಟ್ಟು 67 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನವಿದೆ. ಅಲ್ಲದೆ, 17.48 ಲಕ್ಷ ರೂಪಾಯಿ ಮೌಲ್ಯದ 23 ಕೆಜಿ ಬೆಳ್ಳಿ ಹಾಗೂ 1.90 ಲಕ್ಷ ರೂಪಾಯಿ ಮೌಲ್ಯದ ವಜ್ರದ ಆಭರಣವನ್ನು ಸಹ ಹೊಂದಿದ್ದಾರೆ.

Continue Reading

ಉತ್ತರ ಕನ್ನಡ

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Uttara Kannada News: ಯಲ್ಲಾಪುರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ಜರುಗಿತು.

VISTARANEWS.COM


on

Uttara Kannada Lok Sabha constituency Congress candidate Dr Anjali Nimbalkar latest statement
Koo

ಯಲ್ಲಾಪುರ: ಇದು ನಾಯಕರ ಚುನಾವಣೆಯಲ್ಲ, ಪ್ರತಿ ಕಾರ್ಯಕರ್ತರ ಚುನಾವಣೆ. ರಾಜ್ಯದಲ್ಲಿ ಕಾಂಗ್ರೆಸ್ (Congress) ಅಲೆ ಇದೆ ಎಂದು‌ ಚುನಾವಣೆಯನ್ನು ಬಹಳ ಸುಲಭವಾಗಿ ಪರಿಗಣಿಸಬಾರದು ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ (Uttara Kannada News) ತಿಳಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರಕನ್ನಡ ಲೋಕಸಭಾ ಕ್ಷೇತ್ರ ದೊಡ್ಡದು. ಐದು ಜನ ಶಾಸಕರು ನಮ್ಮವರಿದ್ದು, ನಾವೆಲ್ಲರೂ ಸೇರಿ ಕೆಲಸ ಮಾಡಿ ಈ ಬಾರಿ ಗೆಲುವು ಸಾಧಿಸಬೇಕಿದೆ. ಪ್ರತಿ ಹಳ್ಳಿಗಳಿಗೆ ನನಗೆ ಪ್ರಚಾರಕ್ಕೆ ತೆರಳಲು ಕಷ್ಟವಿದೆ, ಸಮಯದ ಕೊರತೆ ಇದೆ. ಹೀಗಾಗಿ ಕಾರ್ಯಕರ್ತರು ನೀವೇ ಅಭ್ಯರ್ಥಿಯಾಗಿ ಪ್ರಚಾರ ಮಾಡಬೇಕು ಎಂದರು.

ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಪ್ರತಿ ಮನೆ ಮನೆಗೂ ಮುಟ್ಟಿದೆ. ಜನರ ಪರ ಕೆಲಸ ಮಾಡಬೇಕಾದರೆ ಅದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂಬ ನಂಬಿಕೆ ಜನರಲ್ಲಿದೆ. ಒಂದೊಂದು‌ ತಾಲೂಕಲ್ಲೂ ಒಂದೊಂದು ರೀತಿಯ ಸಮಸ್ಯೆಗಳಿವೆ. ಸಂಸದಳಾದರೆ ಶಾಸಕರು, ಸಚಿವರೊಂದಿಗೆ ಮಾತನಾಡಿ ತಾಲೂಕಾವಾರು ಸಮಸ್ಯೆಗಳನ್ನು ಪರಿಹಸರಿಲು ಚರ್ಚಿಸುತ್ತೇನೆ. ಇದು ನನ್ನ ಕ್ಷೇತ್ರ. ಜನ ವಿಶ್ವಾಸದಿಂದ ಆಶೀರ್ವದಿಸಿದರೆ ಜಿಲ್ಲೆಯ ಸಮಸ್ಯೆಗಳಿಗೆ ಹೋರಾಟಕ್ಕೆ ಸಿದ್ಧಳಿದ್ದೇನೆ ಎಂದರು.

ಇದನ್ನೂ ಓದಿ: Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮಾಜಿ ಶಾಸಕ ವಿ.ಎಸ್.ಪಾಟೀಲ ಮಾತನಾಡಿ, ಚುನಾವಣೆ ಸರಳವಲ್ಲ. ಎದುರಾಳಿಯನ್ನು ಎದುರಿಸುವ ಮನೋಭಾವ ನಮ್ಮಲ್ಲಿರಬೇಕು. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಆಗಲ್ಲ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದರು. ಆದರೆ ಐದೂ ಗ್ಯಾರಂಟಿಗಳನ್ನೂ ಜನರಿಗೆ ತಲುಪಿಸುವಲ್ಲಿ ಸಫಲರಾಗಿದ್ದೇವೆ. ಇದೀಗ ಡಾ.ಅಂಜಲಿ ನಿಂಬಾಳ್ಕರ್ ಅವರನ್ನ ಗೆಲ್ಲಿಸುವ ಮೂಲಕ ಮತ್ತೊಂದು ಗ್ಯಾರಂಟಿ ಕೊಡಬೇಕಿದೆ ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಮಾತನಾಡಿ, ಡಾ.ಅಂಜಲಿ ನಿಂಬಾಳ್ಕರ್ ಸುಶಿಕ್ಷಿತರು. ರೋಗಿಯ ಸೇವೆ ದೇವರ ಸೇವೆ ಎಂದುಕೊಂಡ ಅವರು, ಜನಸೇವೆಗಾಗಿ ರಾಜಕೀಯ ಆಯ್ದುಕೊಂಡರು. ಜಿಲ್ಲೆಯ ಸಮಸ್ಯೆಗಳನ್ನು ದೆಹಲಿಯ ಮಟ್ಟಕ್ಕೆ ಮುಟ್ಟಿಸಬಲ್ಲ ಸಮರ್ಥರು‌. ಅವರು ಈ ಬಾರಿ ಗೆದ್ದು ಸಂಸತ್‌ನಲ್ಲಿ ನಮ್ಮ ಧ್ವನಿಯಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಭಟ್, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಉಲ್ಲಾಸ್ ಶಾನಭಾಗ, ಶ್ರೀನಿವಾಸ್ ಧಾತ್ರಿ, ಟಿ.ಸಿ.ಗಾಂವ್ಕರ್, ವಿ.ಎಸ್.ಭಟ್, ದೀಪಕ್ ದೊಡ್ಡೂರು, ರಾಘವೇಂದ್ರ ಭಟ್, ಎಂ.ಜಿ.ಭಟ್, ದೇವಿದಾಸ್ ಶಾನಭಾಗ, ವಿ.ಎನ್.ಭಟ್, ಮತ್ತಿತರರಿದ್ದರು.

ಇದನ್ನೂ ಓದಿ: Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

ಗ್ರಾಮದೇವಿಗೆ ವಿಶೇಷ ಪೂಜೆ

ಸಭೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರದ ಗ್ರಾಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Continue Reading

ಬೆಂಗಳೂರು

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rameswaram cafe: ದೇಶಾದ್ಯಂತ 18 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದಲ್ಲಿಯೇ 12 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿದ್ದಲ್ಲದೆ, ಕೆಲವು ಸುಳಿವುಗಳು ಸಹ ಸಿಕ್ಕಿದೆ. ಈಗ ಬಾಂಬ್‌ ಬ್ಲಾಸ್ಟ್‌ನ ಪ್ರಮುಖ ಆರೋಪಿ ಮುಜಾವೀರ್ ಹುಸೇನ್‌ಗೆ ಸಹಕಾರ ನೀಡಿದ ಪ್ರಮುಖ ಸಂಚುಕೋರನಾಗಿರುವ ಮುಜಾಮಿಲ್ ಶರೀಫ್‌ನನ್ನು ಬಂಧಿಸಲಾಗಿದೆ. ಈತ ಅಬ್ದುಲ್ ಮತೀನ್ ತಾಹಾ ಜತೆ ಕೂಡ ಸಂಪರ್ಕವನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Rameswaram cafe bomb blast case
Koo

ಬೆಂಗಳೂರು: ವೈಟ್‌ಫೀಲ್ಡ್‌ ಬಳಿಕ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ಗೆ (Rameswaram cafe blast case) ಸಂಬಂಧಪಟ್ಟಂತೆ ಎನ್ಐಎ ಅಧಿಕಾರಿಗಳು (NIA Officers) ಮುಖ್ಯ ಸಂಚುಕೋರನೊಬ್ಬನನ್ನು ಬಂಧಿಸಿದ್ದಾರೆ. ಬಾಂಬರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಬಂಧನ ಮಾಡಲಾಗಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಮುಜಾಮಿಲ್ ಶರೀಫ್ ಬಂಧಿತ ಉಗ್ರ ಎನ್ನಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಮುಜಾವೀರ್ ಹುಸೇನ್ ಜತೆ ಮುಜಾಮಿಲ್ ಶರೀಫ್ ನಿರಂತರ ಸಂಪರ್ಕದಲ್ಲಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ದೇಶಾದ್ಯಂತ 18 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದಲ್ಲಿಯೇ 12 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿದ್ದಲ್ಲದೆ, ಕೆಲವು ಸುಳಿವುಗಳು ಸಹ ಸಿಕ್ಕಿದೆ ಎನ್ನಲಾಗಿದೆ. ಮುಜಾವೀರ್ ಹುಸೇನ್‌ಗೆ ಮುಜಾಮಿಲ್ ಶರೀಫ್ ಸಹಕಾರ ನೀಡಿದ್ದ ಅಲ್ಲದೆ, ಅಬ್ದುಲ್ ಮತೀನ್ ತಾಹಾ ಜತೆ ಕೂಡ ಸಂಪರ್ಕವನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ.

ಗುರುವಾರ ದಾಳಿ ನಡೆಸಿದ್ದ NIA

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಕೇಸ್ ಸಂಬಂಧ ಬುಧವಾರ ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ಹದಿನೆಂಟು ಕಡೆ ಎನ್‌ಐಎ ತಂಡ ದಾಳಿ ನಡೆಸಿದೆ. ದಾಳಿ ವೇಲೆ ಹಲವು ವಸ್ತುಗಳು ಹಾಗೂ ಭಾರಿ ಪ್ರಮಾಣದ ಹಣ ಸಹ ಸಿಕ್ಕಿದ್ದು, ವಶಕ್ಕೆ ಪಡೆಯಲಾಗಿತ್ತು. ಡಿಜಿಟಲ್ ಡಿವೈಸ್‌ಗಳನ್ನೂ ಸೀಜ್‌ ಮಾಡಲಾಗಿತ್ತು. ಈಗ ಓರ್ವ ಶಂಕಿತನನ್ನು ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಾಂಬರ್‌ಗೆ ಸಹಾಯ ಮಾಡಿದ್ದ?

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಮಾಡಿದವನಿಗೆ ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದ. ಆತನ ಓಡಾಟಕ್ಕೆ ಹಾಗೂ ಪರಾರಿಯಾಗಲು ಸಹಾಯ ಮಾಡಿದ್ದ ಎಂಬ ಅಂಶ ತನಿಖೆ ವೇಳೆ ಗೊತ್ತಾಗಿದೆ. ಮುಜಾವೀರ್ ಶಜೀಬ್ ಹುಸೇನ್, ಅಬ್ದುಲ್ ಮತೀನ್ ತಾಹಗೆ ಸಹ ಸಹಾಯ ಮಾಡಿದ್ದ ಎಂದು ತಿಳಿದುಬಂದಿದೆ.

ದೊಡ್ಡ ಮಟ್ಟದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ದಾಳಿ ವೇಳೆ ಹಲವು ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಅಲ್ಲದೆ, ರಾಮೇಶ್ವರಂ ಕೆಫೆಗೆ ಪ್ರಮುಖ ಆರೋಪಿ ಮುಜಾವೀರ್ ಶಜೀಬ್ ಹುಸೇನ್ ಬಾಂಬ್ ಅನ್ನು ತಂದಿದ್ದ. ಈತನಿಗೆ ಅಬ್ದುಲ್ ಮತೀನ್ ತಾಹ, ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದರು ಎಂಬುದು ಎನ್‌ಐಎಗೆ ತನಿಖೆ ವೇಳೆ ಗೊತ್ತಾಗಿದೆ. ಈ ಮಾಹಿತಿ ಸಿಕ್ಕ ಕೂಡಲೇ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ. ಈಗ ಉಳಿದ ಇಬ್ಬರಿಗಾಗಿ ತೀವ್ರ ಹುಡುಕಾಟವನ್ನು ನಡೆಸಲಾಗಿದೆ.

ಗುರಪ್ಪನಪಾಳ್ಯದಲ್ಲಿ ನೆಲಸಿದ್ದ ಮುಜಾವೀರ್ ಹುಸೇನ್!

ಸುದ್ಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ಉಗ್ರ ಮುಜಾವೀರ್ ಹುಸೇನ್ ನೆಲಸಿದ್ದ. ಎನ್‌ಐಎ ದಾಳಿ ನಡೆಸಿದಾಗ 10ಕ್ಕೂ ಹೆಚ್ಚು ಜೀವಂತ ಗುಂಡುಗಳು, ಒಂದು ಗನ್, ಡಿಟೋನೇಟರ್ ಹಾಗೂ ಕಚ್ಚಾ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಸೀಜ್‌ ಮಾಡಲಾಗಿತ್ತು. 2020ರಂದು ಎನ್‌ಐಎ ದಾಳಿ ನಡೆಸಿತ್ತು. ಅಂದಿನಿಂದ ಮುಜಾವಿರ್ ಹುಸೇನ್ ತಲೆಮರೆಸಿಕೊಂಡಿದ್ದ. ಸದ್ಯ ಈತನಿಗೆ ಸಹಾಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ.

ಇದನ್ನೂ ಓದಿ: Blast In Bengaluru: ರಾಮೇಶ್ವರಂ ಕೆಫೆ ಸ್ಫೋಟ; ಮತ್ತಿಬ್ಬರನ್ನು ಬಂಧಿಸಿದ ಎನ್‌ಐಎ!

ಅಬ್ದುಲ್ ಮತೀನ್ ಜತೆಗೂ ಮುಜಾಮಿಲ್ ಶರೀಫ್ ಸಂಪರ್ಕ

ಮುಜಾಮಿಲ್ ಶರೀಫ್‌ ಇದ್ದ ನಿವಾಸದ ಮೇಲೆ ದಾಳಿ ನಡೆಸಿ ಡಿಜಿಟಲ್ ಡಿವೈಸ್,‌ ನಗದನ್ನು ವಶಕ್ಕೆ ಪಡೆಯಲಾಗಿದೆ. ಈತ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಮೋಸ್ಟ್‌ ವಾಂಟೆಡ್‌ ಅಬ್ದುಲ್ ಮತೀನ್ ಜತೆಗೆ ನಿರಂತರ ಸಂಪರ್ಕದಲ್ಲಿದ್ದ. ಅಬ್ದುಲ್ ಮತೀನ್ ನೇರವಾಗಿ ಹೊರದೇಶದ ಹ್ಯಾಂಡ್ಲರ್‌ಗಳ ಜತೆಗೆ ಸಂಪರ್ಕವನ್ನು ಹೊಂದಿದ್ದ. ಅಲ್ಲದೆ, ಶಾರೀಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಜತೆಗೂ ಈತ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.

Rameswaram cafe bomb blast Main conspirator trapped by NIA and Terrorist Abdul mateen taha
ಅಬ್ದುಲ್ ಮತೀನ್ ತಾಹ

ಯಾರು ಈ ಅಬ್ದುಲ್ ಮತೀನ್ ತಾಹ?

ಅಬ್ದುಲ್ ಮತೀನ್ ತಾಹ ಅಲ್ ಹಿಂದ್‌ ಸಂಘಟನೆಯ ಪ್ರಮುಖ ಸದಸ್ಯನಾಗಿದ್ದಾನೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸೊಪ್ಪುಗುಡ್ಡೆ ನಿವಾಸಿಯಾಗಿರುವ ಈತ 2020ರಿಂದ ನಾಪತ್ತೆ ಆಗಿದ್ದಾನೆ. ಕಳೆದ ಐದು ವರ್ಷಗಳಿಂದ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಆರಂಭದಲ್ಲಿ ಬ್ರಾಡ್‌ಬ್ಯಾಂಡ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಈತ, ನಂತರ ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಡಾರ್ಕ್‌ವೆಬ್ ಬಳಕೆ ಮಾಡುವುದರಲ್ಲಿ ಈತ ಪರಿಣಿತಿಯನ್ನು ಹೊಂದಿದ್ದ. ಇದರ ಜತೆಗೆ ಕುಕ್ಕರ್ ಬಾಂಬ್ ತಯಾರಿಕೆ ಮಾಡುವುದರಲ್ಲೂ ನಿಪುಣನಾಗಿದ್ದ. ಮ್ಯಾಚ್‌ಸ್ಟಿಕ್‌ನಲ್ಲಿರುವ ಫಾಸ್ಪರಸ್ ಬಳಸಿ ಕುಕ್ಕರ್ ಬಾಂಬ್ ಅನ್ನು ಈತ ತಯಾರಿಸುತ್ತಿದ್ದ. ಇದಲ್ಲದೆ, ಅಲ್ ಹಿಂದ್ ಸಂಘಟನೆ ಸದಸ್ಯರಿಗೆ ಅಡಗುದಾಣ ಕಲ್ಪಿಸುವ ಜವಾಬ್ದಾರಿ ಈತನದ್ದಾಗಿದೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‌ಐಎ ಈಗಾಗಲೇ ಘೋಷಿಸಿದೆ.

Continue Reading
Advertisement
viral video
ವೈರಲ್ ನ್ಯೂಸ್8 mins ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು12 mins ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 202412 mins ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Uttara Kannada Lok Sabha constituency Congress candidate Dr Anjali Nimbalkar latest statement
ಉತ್ತರ ಕನ್ನಡ16 mins ago

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Rameswaram cafe bomb blast case
ಬೆಂಗಳೂರು41 mins ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rajasthan Royals
ಪ್ರಮುಖ ಸುದ್ದಿ53 mins ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

SBI Debit Cards
ವಾಣಿಜ್ಯ55 mins ago

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

Rishabh Pant -IPL 2024
ಕ್ರೀಡೆ1 hour ago

Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

Parliament Flashback
ಕರ್ನಾಟಕ2 hours ago

Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

Lok Sabha Election 2024 HD Kumaraswamy to file nomination for Mandya Lok Sabha seat on April 4
ಕರ್ನಾಟಕ2 hours ago

Lok Sabha Election 2024: ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆ ಯಶಸ್ವಿ; ಏ. 4ಕ್ಕೆ ಹೆಚ್ಡಿಕೆ ನಾಮಪತ್ರ ಸಲ್ಲಿಕೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20248 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20249 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌