decision to celebrate tipu sultan jayanti from govt will be taken in cabinet says siddaramaiahTipu Sultan: ಸಿಎಂ ಆದರೆ ಮತ್ತೆ ಟಿಪ್ಪು ಜಯಂತಿ ಆಚರಿಸ್ತೀರ? ಎಂಬ ಪ್ರಶ್ನೆಗೆ ಜಾಣ ಉತ್ತರ ಕೊಟ್ಟ ಸಿದ್ದರಾಮಯ್ಯ - Vistara News

ಕರ್ನಾಟಕ

Tipu Sultan: ಸಿಎಂ ಆದರೆ ಮತ್ತೆ ಟಿಪ್ಪು ಜಯಂತಿ ಆಚರಿಸ್ತೀರ? ಎಂಬ ಪ್ರಶ್ನೆಗೆ ಜಾಣ ಉತ್ತರ ಕೊಟ್ಟ ಸಿದ್ದರಾಮಯ್ಯ

ಸಮುದಾಯದ ಹಂತದಲ್ಲಿ ಆಚರಣೆ ಮಾಡಿಕೊಂಡು ಬರುತ್ತಿದ್ದ ಟಿಪ್ಪು ಜಯಂತಿಯನ್ನು 2015ರಿಂದ ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದಾಗಿನಿಂದ ವಿವಾದ ಎದ್ದಿತ್ತು.

VISTARANEWS.COM


on

decision to celebrate tipu sultan jayanti from govt will be taken in cabinet says siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ವಿಧಾನಸಬೆ ಚುನಾವಣೆಯಲ್ಲಿ ಪ್ರಭಾವಿಸಿದ್ದ ಟಿಪ್ಪು ಜಯಂತಿ ಆಚರಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನಡೆ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದು ನೀವೇ ಸಿಎಂ ಆದರೆ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆಯನ್ನು ಮರುಜಾರಿ ಮಾಡುತ್ತೀರ? ಎಂಬ ಪ್ರಶ್ನೆಗೆ ಜಾಣ ಉತ್ತರ ನೀಡಿದ್ದಾರೆ.

ಇಂಗ್ಲಿಷ್‌ ಸುದ್ದಿವಾಹಿನಿ ʼಇಂಡಿಯಾ ಟುಡೆʼ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್‌ ಹಿಂದು ವಿರೋಧಿ ಎಂಬುದು ಸುಳ್ಳು ಹಾಗೂ ಬಿಜೆಪಿಯ ರಾಜಕೀಯ ತಂತ್ರ. ಟಿಪ್ಪು ಸುಲ್ತಾನ್‌ ಬ್ರಿಟಿಷರ ವಿರುದ್ಧ ಹೋರಾಡಿರಲಿಲ್ಲವೇ? ಬ್ರಿಟಿಷ್‌ ವಿರುದ್ಧ ಅನೇಕ ಮೈಸೂರು ಯುದ್ಧಗಳು ನಡೆದಿಲ್ಲವೇ? ಆತ ದೇವಸ್ಥಾನಗಳನ್ನು ನಾಶ ಮಾಡಿದ ಎನ್ನುವುದೂ ಸುಳ್ಳು ಎಂದಿದ್ದಾರೆ.

ನೀವು ಮತ್ತೆ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಆಚರಣೆಯನ್ನು ಮರು ಜಾರಿ ಮಾಡುತ್ತೀರ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅದನ್ನು ಹೇಳಲು ಸಾಧ್ಯವಿಲ್ಲ. ನಾನು ಸರ್ವಾಧಿಕಾರಿ ಅಲ್ಲ, ನಾನು ಪ್ರಜಾಪ್ರಭುತ್ವವಾದಿ. ನಾವು ಅದನ್ನು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ಸಮುದಾಯದ ಹಂತದಲ್ಲಿ ಆಚರಣೆ ಮಾಡಿಕೊಂಡು ಬರುತ್ತಿದ್ದ ಟಿಪ್ಪು ಜಯಂತಿಯನ್ನು 2015ರಿಂದ ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದಾಗಿನಿಂದ ವಿವಾದ ಎದ್ದಿತ್ತು. ಕನ್ನಡ ವಿರೋಧಿ, ಟಿಪ್ಪು ವಿರೋಧಿ ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ಮಾಡುವುದು ಸರಿಯಲ್ಲ ಎಂದು ಬಿಜೆಪಿ ಆಕ್ಷೇಪಿಸಿತ್ತು. ಇದು 2018ರ ಚುನಾವಣಾ ವಿಷಯವೂ ಆಗಿ ಬಿಜೆಪಿಗೆ ಹಿಂದು ಮತಗಳ ಕ್ರೋಢೀಕರಣಕ್ಕೆ ಕಾರಣವಾಗಿತ್ತು. ಇದೀಗ ಅಪಾಯವನ್ನು ಅರಿತ ಸಿದ್ದರಾಮಯ್ಯ ಎಚ್ಚರಿಕೆಯ ಮಾತನ್ನಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದೇ ಇಂಡಿಯಾ ಟುಟೇ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಹಿಜಾಬ್‌ ಎನ್ನುವುದು ವಿಚಾರವೇ ಅಲ್ಲ. ಅವುಗಳು ಅನೇಕ ಸಮಯದಿಂದ ನಡೆದುಕೊಂಡು ಬಂದಿರುವ ನಡವಳಿಕೆ ಎಂದಷ್ಟೆ ನಾನು ಹೇಳಿದ್ದೇನೆ. ನಾನು ಭ್ರಮೆಯಲ್ಲಿಲ್ಲ. ಜಾತಿ ಮತದ ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ ಹಿಂದು ನಾನು ಎಂದಿದ್ದಾರೆ.

ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿದ್ದರು ಎಂಬ ಆರೋಪ ಸುಳ್ಳು ಎಂದಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರದ ಅವಧಿಯಲ್ಲಿ ವಿಶ್ವನಾಥ ಶೆಟ್ಟಿ ಲೋಕಾಯುಕ್ತ ಆಗಿದ್ದರು. ನಾವು ಎಸಿಬಿ ಸ್ಥಾಪನೆ ಮಾಡಿದ್ದೆವು ಅಷ್ಟೆ ಎಂದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿಯಲ್ಲಿ ಟಿಪ್ಪು ಜಯಂತಿ; ಸರ್ಕಾರದ ನಿಯಮ ಉಲ್ಲಂಘಿಸಿ ಆಚರಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಮೇ 9ಕ್ಕೆ ಅಧಿಸೂಚನೆ ಪ್ರಕಟ

MLC Election: ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಈ ಬಗ್ಗೆ ಮೇ 09 ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 16 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮೇ 17 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ಜರುಗಲಿದೆ. ಜೂನ್ 6 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 12 ರಂದು ಚುನಾವಣೆ ಪ್ರಕ್ರಿಯಗಳು ಪೂರ್ಣಗೊಳ್ಳಲಿವೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

VISTARANEWS.COM


on

Ballari DC Prashanth kumar Mishra pressmeet about MLC election
Koo

ಬಳ್ಳಾರಿ: ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಈ ಬಗ್ಗೆ ಮೇ 09 ರಂದು ಅಧಿಸೂಚನೆ ಪ್ರಕಟವಾಗಲಿದೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ (MLC Election) ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆ ಸಂಬಂಧ ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 16 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮೇ 17 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ಜರುಗಲಿದೆ. ಜೂನ್ 6 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 12 ರಂದು ಚುನಾವಣೆ ಪ್ರಕ್ರಿಯಗಳು ಪೂರ್ಣಗೊಳ್ಳಲಿವೆ.

ಇದನ್ನೂ ಓದಿ: Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಈ ಚುನಾವಣೆ ಸಂಬಂಧ ಈಗಾಗಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಈಶಾನ್ಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಆಯ್ಕೆಯಾಗಿ ನಡೆಯುವ ಈ ಚುನಾವಣೆಗೆ ಕಲಬುರ್ಗಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದು, ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆ ಎಂದರು.

22,156 ಮತದಾರರು, 16 ಮತಗಟ್ಟೆಗಳು

ಚುನಾವಣಾ ಆಯೋಗದ ನಿರ್ದೇಶನದಂತೆ, ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಕಳೆದ 2023 ಡಿಸೆಂಬರ್ 30 ರಂದು ಈಗಾಗಲೇ ಪ್ರಕಟಿಸಲಾಗಿದೆ. ಅಂತಿಮ ಮತದಾರ ಪಟ್ಟಿಯಂತೆ ಬಳ್ಳಾರಿ ಜಿಲ್ಲೆಯಲ್ಲಿ 13,744 ಪುರುಷರು, 8,408 ಮಹಿಳೆಯರು, ಇತರೆ-04 ಸೇರಿದಂತೆ ಒಟ್ಟು 22,156 ಪದವೀಧರ ಮತದಾರರಿದ್ದು, ಒಟ್ಟು 16 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಕಂಪ್ಲಿ ತಾಲೂಕಿನಲ್ಲಿ 3,539 ಮತದಾರರು, 03 ಮತಗಟ್ಟೆಗಳು. ಸಿರುಗುಪ್ಪ-3,323 ಮತದಾರರು, 04 ಮತಗಟ್ಟೆಗಳು. ಬಳ್ಳಾರಿ (ಗ್ರಾಮೀಣ)-4,604 ಮತದಾರರು, 03 ಮತಗಟ್ಟೆಗಳು. ಬಳ್ಳಾರಿ (ನಗರ)-7,396 ಮತದಾರರು, 03 ಮತಗಟ್ಟೆಗಳು ಹಾಗೂ ಸಂಡೂರು ತಾಲೂಕಿನಲ್ಲಿ 3,294 ಮತದಾರರಿದ್ದು, 03 ಮತಗಟ್ಟೆಗಳಿವೆ. ಮತದಾರರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಈಗಾಗಲೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಮೇ 6 ಕಡೆಯ ದಿನ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಲು ಮೇ 06 ಅಂತಿಮ ದಿನವಾಗಿದೆ. ಅರ್ಹ ಪದವೀಧರ ಮತದಾರರು ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಆಯಾ ತಾಲೂಕು ತಹಸೀಲ್ದಾರರ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅದೇ ತಹಸಿಲ್ದಾರರ ಕಚೇರಿಗೆ ಸಲ್ಲಿಸಬಹುದು. ಜನವರಿ ತಿಂಗಳಿನಿಂದ ನಿರಂತರ ಪರಿಷ್ಕರಣೆಯಲ್ಲಿ ಸ್ವೀಕೃತವಾದ ಅರ್ಜಿಗಳು ಹಾಗೂ ಮೇ 06 ರವರೆಗೆ ಸ್ವೀಕರಿಸಲ್ಪಟ್ಟ ಅರ್ಜಿಗಳನ್ನು ನಿಯಮಾನುಸಾರ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ಇದನ್ನೂ ಓದಿ: MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

HD Revanna: ಹೊಳೆನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಯಾವ ಪ್ರಯತ್ನವೂ ಫಲಿಸಲಿಲ್ಲ. ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸುತ್ತಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದರು.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಿಐಡಿ ಕಚೇರಿಯಲ್ಲಿ ವೈದ್ಯಕೀಯ ಪರೀಕ್ಷೆ (Medical Test) ನಡೆಸಲಾಗುತ್ತಿದೆ. ಇನ್ನು, ಪ್ರಕರಣದಲ್ಲಿ ಯಾವುದೇ ತೊಂದರೆಯಾಗದಿರಲಿ ಎಂದು ಎಚ್‌.ಡಿ.ರೇವಣ್ಣ ಅವರು ಮಾಡಿಸಿದ ಹೋಮ, ಇವರ ಕುರಿತು ಜ್ಯೋತಿಷಿ ನೀಡಿದ ಭವಿಷ್ಯ ಸುಳ್ಳಾಗಿದೆ. ಅವರು ಯಾವಾಗಲೂ ಹಿಡಿದುಕೊಂಡು ತಿರುಗಾಡುತ್ತಿದ್ದ ನಿಂಬೆ ಹಣ್ಣು ಕೂಡ ಮತ್ತಷ್ಟು ಹುಳಿ ಆಗಿದೆ.

ಹೌದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಯಾವುದೇ ಸಮಸ್ಯೆ ಎದುರಾಗದಿರಲಿ, ಮಗ ಬಚಾವಾಗಲಿ, ಜಾಮೀನು ಸಿಗಲಿ ಎಂಬುದು ಸೇರಿ ಹಲವು ದೃಷ್ಟಿಯಿಂದ ಬುಧವಾರ (ಮೇ 1) ಸಂಜೆ ಹೊಳೆನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಜಾಮೀನು ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವೂ ಅವರದ್ದಾಗಿತ್ತು ಎಂದು ತಿಳಿದುಬಂದಿದೆ.

ರೇವಣ್ಣ ಅಂದುಕೊಂಡಂತೆ ಯಾವುದೂ ಆಗಲಿಲ್ಲ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್‌.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಇದಾದ ಕೆಲ ಹೊತ್ತಿನಲ್ಲೇ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡರು.

ಸಿಐಡಿ ಕಚೇರಿಯಲ್ಲಿ ಆಂಬುಲೆನ್ಸ್‌, ಅಲ್ಲೇ ವೈದ್ಯಕೀಯ ಪರೀಕ್ಷೆ

ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಭದ್ರತಾ ದೃಷ್ಟಿಯಿಂದ ಆಂಬುಲೆನ್ಸ್‌ ಹಾಗೂ ವೈದ್ಯರನ್ನೇ ಸಿಐಡಿ ಕಚೇರಿಗೆ ಕರೆಸಿದ್ದಾರೆ. ಭದ್ರತಾ ದೃಷ್ಟಿಯಿಂದಾಗಿ ವೈದ್ಯಕೀಯ ಪರೀಕ್ಷೆಗಾಗಿ ರೇವಣ್ಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯದೆ, ಆಂಬುಲೆನ್ಸ್‌ಅನ್ನು ಸಿಐಡಿ ಕಚೇರಿಗೆ ಕರೆಸಲಾಗಿದೆ. ಆಂಬುಲೆನ್ಸ್‌ನಲ್ಲಿಯೇ ಎಚ್‌.ಡಿ.ರೇವಣ್ಣ ಅವರ ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Continue Reading

ಬಳ್ಳಾರಿ

Lok Sabha Election 2024: ಪಾರದರ್ಶಕ ಚುನಾವಣೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 07 ರಂದು ಮತದಾನ ಜರುಗಲಿದ್ದು, ಮೇ 05 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

VISTARANEWS.COM


on

Ballari DC Prashanth kumar Mishra pressmeet about lok sabha election
Koo

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ (Lok Sabha Election 2024) ಮೇ 07 ರಂದು ಮತದಾನ ಜರುಗಲಿದ್ದು, ಮೇ 05ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಲೋಕಸಭಾ ಚುನಾವಣೆ ನಿಮಿತ್ತ ಮೇ 07 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಅಂತ್ಯದ 48 ಗಂಟೆಗೂ ಮುನ್ನ ಅಂದರೆ ಮೇ 05 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಸಂದರ್ಭದಲ್ಲಿ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು.

ಮೇ 05ರ ಸಂಜೆ 06 ರಿಂದ ಮೇ 08ರ ಸಂಜೆ 06 ರವರೆಗೆ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಕಲಂ 144 ಅಡಿ ಪ್ರತಿಬಂಧಕಾಜ್ಞೆ ಜಾರಿಯಾಗಲಿದ್ದು, 05ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಓಡಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ಬಿಡಲು ಸೂಚನೆ ನೀಡಲಾಗಿದೆ. ಮತದಾನದ ದಿನ ಸಾರ್ವತ್ರಿಕ ರಜೆ, ಮೇ 08 ರ ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯದ್ಯಂತ ಮದ್ಯ ಮಾರಾಟ ನಿಷೇಧಿಸಿದ್ದು ಡ್ರೈ ಡೇ ಆಚರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ರ‍್ಯಾರ್ಯಾಂಡಮೈಜೇಶನ್ ಮಾಡಿ, ಎಲ್ಲ ಪ್ರಕ್ರಿಯೆಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಡಿಸಿ ಮಿಶ್ರಾ ಸ್ಪಷ್ಟಪಡಿಸಿದರು.

ಇದನ್ನೂ ಓದಿ: Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲ ಮತಗಟ್ಟೆಗಳಿಗೆ ಅವಶ್ಯಕ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ, ಅಂಗವಿಕಲರಿಗೆ ರ‍್ಯಾಂಪ್, ವೀಲ್‍ಚೇರ್ ವ್ಯವಸ್ಥೆ ಹಾಗೂ ನೆರಳಿಗೆ ಶ್ಯಾಮಿಯಾನ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ತೀವ್ರ ಬಿಸಿಲಿನ ಬೇಗೆ ಇರುವುದರಿಂದ ಮತಗಟ್ಟೆಗಳಲ್ಲಿ ಸ್ಟ್ಯಾಂಡಿಂಗ್ ಫ್ಯಾನ್ ಅಥವಾ ಕೂಲರ್ ವ್ಯವಸ್ಥೆಗೊಳಿಸಲು ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಆದಷ್ಟು ಬೇಗನೇ ಬಂದು ಮತ ಚಲಾಯಿಸಿ

ಈ ಬಾರಿ ಬಿಸಿಲಿನ ಪ್ರಖರತೆ ಹೆಚ್ಚಿರುವುದರಿಂದ ಎಲ್ಲಾ ಮತದಾರರು ಬೆಳಗಿನ ಅವಧಿಯಲ್ಲಿಯೇ ಆದಷ್ಟು ಬೇಗನೇ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬೇಕು ಎಂದು ಡಿಸಿ ಕೋರಿದರು.

ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆಯ ಸಿಬ್ಬಂದಿಗಳಿಗೆ ಈಗಾಗಲೆ ತರಬೇತಿ ನೀಡಿದ್ದು, ಮೇ 07 ರಂದು ಎಲ್ಲ ಮತಗಟ್ಟೆಗಳಲ್ಲಿ ಬೆಳಗ್ಗೆ 05.30 ಗಂಟೆಗೆ ಮತಗಟ್ಟೆ ಏಜೆಂಟರುಗಳ ಸಮ್ಮುಖದಲ್ಲಿ ಕನಿಷ್ಟ 50 ಮತಗಳ ಅಣುಕು ಮತದಾನ ನಡೆಯಲಿದ್ದು, ನಂತರ ನಿಯಮಾನುಸಾರ ಪ್ರಕ್ರಿಯೆ ಕೈಗೊಂಡು ಬೆಳಿಗ್ಗೆ 07 ಗಂಟೆಗೆ ಮತದಾನ ಪ್ರಾರಂಭವಾಗಲಿದೆ. ಈ ಎಲ್ಲ ಪ್ರಕ್ರಿಯೆಗಳ ಕುರಿತು ಮತಗಟ್ಟೆ ಸಿಬ್ಬಂದಿಗೆ ಅಗತ್ಯ ಮಾಹಿತಿ ನೀಡಿ, ತರಬೇತಿ ನೀಡಲಾಗಿದೆ ಎಂದರು.

ಮತಗಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್

ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ಒಟ್ಟು 1219 ಮತಗಟ್ಟೆಗಳ ಪೈಕಿ 299 ಸೂಕ್ಷ್ಮ ಹಾಗೂ 69 ವಲ್ನರೆಬಲ್ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ 610 ಮತಗಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಿ, ಸಿಸಿ ಟಿವಿ ಕ್ಯಾಮೆರಾ ಮೂಲಕ ನೇರವಾಗಿ ಮತಗಟ್ಟೆಗಳ ಲೈವ್ ವಿಡಿಯೋ ನೋಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಚುನಾವಣಾ ಕಾರ್ಯದ ಮೇಲುಸ್ತುವಾರಿಗೆ ಒಟ್ಟು 330 ಮೈಕ್ರೋ ಆಬ್ಸರ್ವರ್‌ಗಳನ್ನು ಮತಗಟ್ಟೆಗಳಿಗೆ ನಿಯೋಜಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗುತ್ತದೆ ಎಂದರು.

ಇದನ್ನೂ ಓದಿ: Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಮತಗಟ್ಟೆಗಳಿಗೆ 5,815 ಸಿಬ್ಬಂದಿ ನೇಮಕ

ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ಚುನಾವಣಾ ಆಯೋಗದ ನಿಯಮಾನುಸಾರ ಮತದಾನ ಜರುಗಿಸಲು ಅಗತ್ಯ ಕ್ರಮ ವಹಿಸಲಾಗಿದೆ. ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು 1,395 ಮತಗಟ್ಟೆ ಅಧಿಕಾರಿಗಳು, 1,395 ಸಹಾಯಕ ಅಧಿಕಾರಿಗಳು, 2,790 ಮತದಾನ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 5,952 ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಪ್ರತಿ ಮತಗಟ್ಟೆಗಳಿಗೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಮತಗಟ್ಟೆ ಸಿಬ್ಬಂದಿಗಳಿಗೆ ವಿಶೇಷ ಮೆಡಿಕಲ್ ಕಿಟ್

ಬಿಸಿಲಿನ ತಾಪಮಾನ ಹಾಗೂ ಶಾಖಾಘಾತದ ಹಿನ್ನಲೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್, ಓಆರ್‍ಎಸ್ ಕಿಟ್‍ಗಳನ್ನು ಮಸ್ಟರಿಂಗ್ ಸಂದರ್ಭದಲ್ಲಿಯೇ ವಿತರಿಸಲು ಕ್ರಮ ವಹಿಸಲಾಗಿದೆ. ಅಲ್ಲದೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರು, ನರ್ಸ್‍ಗಳು, ಆಂಬುಲೆನ್ಸ್‌ಗಳನ್ನು ಯಾವುದೇ ಸಂದರ್ಭದಲ್ಲಿ ಅಗತ್ಯ ವೈದ್ಯಕೀಯ ನೆರವಿಗಾಗಿ ಸಜ್ಜಾಗಿರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 85 ವರ್ಷ ದಾಟಿದ 662 ಹಿರಿಯ ನಾಗರಿಕರು ಹಾಗೂ 452 ವಿಕಲಚೇತನ ಮತದಾರರು ಮನೆಯಿಂದ ಮತ ಚಲಾಯಿಸಲು ಆಯ್ಕೆ ಮಾಡಿಕೊಂಡಿದ್ದರು, ಈ ಪೈಕಿ 85 ವರ್ಷ ಮೇಲ್ಪಟ್ಟ 630 ಮತದಾರರು ಹಾಗೂ 444 ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

ಅಗತ್ಯ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆ ಹಾಗೂ ಕ್ಷೇತ್ರಗಳ 863 ಮತದಾರರು ಮತ ಚಲಾಯಿಸಲು ಫಾರಂ 12 ಡಿ ಅಂಚೆ ಮತ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇವರ ಮತದಾನಕ್ಕೆ ಅನುಕೂಲವಾಗುವಂತೆ ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಗಾಂಧಿ ಭವನದಲ್ಲಿ ಅಂಚೆ ಮತದಾನ ಕೇಂದ್ರ ತೆರೆಯಲಾಗಿತ್ತು. ಮೇ 01 ರಿಂದ 03 ರವರೆಗೆ ಮತದಾನ ಜರುಗಿದ್ದು, 460 ಜನರು ಮತ ಚಲಾಯಿಸಿದ್ದಾರೆ. ಉಳಿದಂತೆ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಇದೇ ಗಾಂಧಿ ಭವನದಲ್ಲಿ ಫೆಸಿಲಿಟೇಶನ್ ಸೆಂಟರ್ ತೆರೆಯಲಾಗಿದ್ದು, ಮೇ 06 ರವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚುನಾವಣಾ ಅಕ್ರಮ ಚಟುವಟಿಕೆ ತಡೆಗೆ ಸಹಾಯವಾಣಿ ಬಳಸಿ

ಚುನಾವಣೆ ಹಿನ್ನಲೆಯಲ್ಲಿ ಮತದಾರರಿಗೆ ಯಾವುದೇ ಆಸೆ-ಆಮೀಷ ಒಡ್ಡುವ ಘಟನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 1950 ಕೆ ಕರೆ ಮಾಡಿ ತಿಳಿಸಬಹುದು ಅಥವಾ ಸಿ-ವಿಜಿಲ್ ಆಪ್ ಮೂಲಕ ದೂರು ದಾಖಲಿಸಬಹುದು ಎಂದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ದಿನದಂದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಗಾ ವಹಿಸಲು ಹಾಗೂ ಭದ್ರತೆಗೆ ಒಟ್ಟು 2,048 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೊರ ಜಿಲ್ಲೆಯಿಂದ ಸುಮಾರು 850 ಪೊಲೀಸ್ ಸಿಬ್ಬಂದಿಗಳು ಭದ್ರತಾ ಕಾರ್ಯಕ್ಕೆ ಜಿಲ್ಲೆಗೆ ಆಗಮಿಸಿದ್ದಾರೆ. ಜಿಲ್ಲೆಗೆ ಸಿಆರ್‌ಪಿಎಫ್ ಪಡೆಯ ಮೂರು ತಂಡಗಳು ಜಿಲ್ಲೆಗೆ ಆಗಮಿಸಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಚುನಾವಣಾ ಅಕ್ರಮ ನಡೆಯದಂತೆ 24 ಚೆಕ್‍ಪೋಸ್ಟ್‌ಗಳಲ್ಲಿ ನಿರಂತರ ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮತದಾನ ಸಮಯದಲ್ಲಿ ಅಹಿತಕರ ಘಟನೆ ಸೃಷ್ಟಿಸುವಂತಹ 11 ರೌಡಿಶೀಟರ್ ಪ್ರಕರಣಗಳಲ್ಲಿ 09 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ಗೂಂಡ ಆಕ್ಟ್ ಅಡಿ 1 ಪ್ರಕರಣ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಘೊಷಣೆಯ ಬಳಿಕ ಈವರೆಗೆ ಜಿಲ್ಲೆಯಲ್ಲಿ ರೂ.8.41 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

ಈ ವೇಳೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ

Lok Sabha Election 2024: ಶಿವಮೊಗ್ಗದಲ್ಲಿ ಪ್ರಚಾರದ ವೇಳೆ ಕಿರಿಕ್; ಬಿಜೆಪಿ ವಾಹನ ಹಿಮ್ಮೆಟ್ಟಿಸಿದ ಈಶ್ವರಪ್ಪ ಅಭಿಮಾನಿಗಳು

Lok Sabha Election 2024: ಶಿವಮೊಗದಗಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್‌. ಈಶ್ವರಪ್ಪ ಅವರ ಪ್ರಚಾರ ವಾಹನ ಸಾಗುವ ಮಾರ್ಗದಲ್ಲಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ವಾಹನವನ್ನು ಬೆಂಬಲಿಗರು ವಾಪಸ್‌ ಕಳುಹಿಸಿದ್ದರು.

VISTARANEWS.COM


on

Shivamogga BJP
Koo

ಶಿವಮೊಗ್ಗ: ಲೋಕಸಭಾ ಚುನಾವಣೆ (Lok Sabha Election 2024) ಬಹಿರಂಗ ಪ್ರಚಾರಕ್ಕೆ ಮೇ 5 ಅಂತಿಮ ದಿನವಾಗಿದ್ದರಿಂದ ನಗರದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಪಕ್ಷೇತರ ಅಭ್ಯರ್ಥಿ ಕೆ.ಎಸ್‌. ಈಶ್ವರಪ್ಪ ಬೆಂಬಲಿಗರು ರೋಡ್ ಶೋ, ಮೆರವಣಿಗೆ ಮೂಲಕ ಮತದಾರರನ್ನು ಸೆಳೆಯಲು ಶುಕ್ರವಾರ ಅಂತಿಮ ಹಂತದ ಕಸರತ್ತು ನಡೆಸಿದರು. ಈ ವೇಳೆ ಮೆರವಣಿಗೆ ಆರಂಭದಲ್ಲಿ ಈಶ್ವರಪ್ಪ ಪ್ರಚಾರ ವಾಹನ ಸಾಗುವ ಮಾರ್ಗದಲ್ಲಿ ಬಂದ ಬಿಜೆಪಿ ವಾಹನವನ್ನು ಬೆಂಬಲಿಗರು ಹಿಮ್ಮೆಟಿಸಿದ ಘಟನೆ ನಡೆದಿದೆ.

ನಗರದ ಎಸ್.ಪಿ.ಎಂ. ರಸ್ತೆಯ ಕೋಟೆ ಮಾರಿಕಾಂಬ ದೇವಾಲಯದ ಬಳಿ ಮೈಕಿನಲ್ಲಿ ಬಿಜೆಪಿ ಪರ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಯುವಕ ಕರೆ ನೀಡುತ್ತಿದ್ದ. ಈ ವೇಳೆ ಯವಕನಿಗೆ ಈಶ್ವರಪ್ಪ ಅಭಿಮಾನಿಗಳು ಬೈದು ವಾಪಸ್ ಕಳಹಿಸಿದ್ದಾರೆ. ಮೆರವಣಿಗೆಗೆ ಅಡ್ಡಿಪಡಿಸಲು ಯತ್ನ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಅಭಿಮಾನಿಗಳು ಬಿಜೆಪಿ ವಾಹನವನ್ನು ವಾಪಸ್‌ ಕಳುಹಿಸಿದ್ದಾರೆ.

ಇದನ್ನೂ ಓದಿ | Lok Sabha Election: ಚುನಾವಣೆಯಲ್ಲಿ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ್ ಮನವಿ

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Zameer Ahmed Khan

ಬಾಗಲಕೋಟೆ: ಇದು ದೇಶ ಬಚಾವ್ ಎಲೆಕ್ಷನ್. ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಅವರು ಅಲ್ಪ ಸಂಖ್ಯಾತರನ್ನು ಮುಗಿಸುತ್ತಾರೆ. ಫಸ್ಟ್ ಟೈಂ ಕ್ಯಾನ್ಸರ್ ಬಂದರೆ ಉಳಿಯುತ್ತಾರೆ, ಎರಡನೇ ಬಾರಿ ಬಂದರೂ ಉಳಿಯುತ್ತಾರೆ, ಆದರೆ ಮೂರನೇ ಬಾರಿ ಬಂದರೆ ನಮ್ಮನ್ನೆಲ್ಲರನ್ನೂ ತಗೊಂಡು ಹೋಗುತ್ತೆ ಎಂದು ಪರೋಕ್ಷವಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರ ಅವನತಿ ಆಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್‌ (Zameer Ahmed Khan) ಆರೋಪಿಸಿದ್ದಾರೆ.

ನಗರದಲ್ಲಿ ನಡೆದ ಅಲ್ಪ ಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಸಂಯುಕ್ತಾ, ಶಿವಾನಂದ ಪಾಟೀಲ್ ಪುತ್ರಿ ಅಲ್ಲ, ನನ್ನ‌ ಮಗಳ ಇದ್ದಂತೆ. ಈ ಎಲೆಕ್ಷನ್ ಶಿವಾನಂದ ಪಾಟೀಲ್‌ರದ್ದು ಅಲ್ಲ, ಜಮೀರ್‌ದು ಅಲ್ಲ, ಹಾಗೆಯೇ ಮೇಟಿ ಅವರದೂ ಅಲ್ಲ. ಈ ಬಾರಿ ದೇಶ ಬಚಾವ್ ಮಾಡಲು ಕಾಂಗ್ರೆಸ್‌ಗೆ ಮತ ಹಾಕಿ ಎಂದು ಕರೆ ನೀಡಿದರು.

ಇದನ್ನೂ ಓದಿ | Amit Shah: ಕಾಂಗ್ರೆಸ್ ಹಿಂದುಳಿದ, ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ; ನಾವು ತೆಗೆದುಹಾಕುತ್ತೇವೆ: ಅಮಿತ್ ಶಾ

ನಮ್ಮ ಆಡಳಿತದಲ್ಲಿ ಐದು ಅಂಶಗಳಿವೆ. ಎರಡು ಸಾವಿರ ರೂ., ಉಚಿತ ವಿದ್ಯುತ್, ಬಸ್ ಫ್ರಿ, ಅನ್ನಭಾಗ್ಯ, ಇದನ್ನೆಲ್ಲಾ ನಾವು ಮಾಡಿದ್ದೇವೆ. ನಮ್ಮ ಕೋಮಿನ 7 ಲಕ್ಷ ಜನ ಈ ಯೋಜನೆಗಳ ಉಪಯೋಗ ಪಡೆಯುತ್ತಿದ್ದಾರೆ. ರಾಹುಲ್ ಗಾಂಧಿ, ಖರ್ಗೆ ನಮ್ಮ ಸರ್ಕಾರ ಬಂದರೆ ಐದು ಯೋಜನೆ ಜಾರಿ ತರುತೀವೆ ಎಂದು ಹೇಳಿದ್ದಾರೆ. ಹೀಗಾಗಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಮಹಿಳೆಗೆ 1 ಲಕ್ಷ ಕೊಡುತ್ತಾರೆ ಎಂದು ತಿಳಿಸಿದರು.

ಪಾಜಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ರೆ ಗುಂಡಿಟ್ಟು ಕೊಲ್ಲಬೇಕು

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದೇವೆ. ನಮ್ಮ ಸರ್ಕಾರ ಬಂದಮೇಲೆ ಕೋರ್ಟ್‌ನಿಂದ ಡೈರೆಕ್ಷನ್ ತೆಗೆದುಕೊಳ್ಳಬೇಕು. ನಾಲ್ಕು ಜನ ಬಿಜೆಪಿ ಅವರನ್ನು ಕಳುಹಿಸಿಬಿಟ್ಟು ಪಾಕಿಸ್ತಾನ ಜಿಂದಾಬಾದ್ ಜೈಕಾರ ಹಾಕಿಸುತ್ತಾರೆ. ಅಂತಹವರನ್ನು ಪೊಲೀಸರಿಗೆ ಪರ್ಮಿಷನ್ ಕೊಟ್ಟರೆ ಅಲ್ಲೇ ಶೂಟ್ & ಸೈಟ್ ಆರ್ಡರ್ ಆಗಬೇಕು ಎಂದು ಸಚಿವ ಜಮೀರ್ ಅಹ್ಮದ್‌ ಹೇಳಿದರು.

ಇದನ್ನೂ ಓದಿ | Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

ನಾವ್ಯಾರು (ಮುಸ್ಲಿಂರು) ದೇಶ ದ್ರೋಹಿಗಳಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಸಿಗುವ ಮುನ್ನ ಇಂಡಿಯಾ ಗೇಟ್‌ ಕಡೆ ಹೋಗಿ ನೋಡಿ ಲಿಸ್ಟ್ ಇದೆ. ಶೇ.60 ಮುಸ್ಲಿಂರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ದೇಶ ನಮ್ಮದು, ನಮ್ಮನ್ನು ಇಲ್ಲಿಗೆ ಕರೆಸಿದ ಉದ್ದೇಶ ಈ ಬಾರಿ ಶೇ.95 ವೋಟಿಂಗ್ ಆಗಲು ಎಂದ ಅವರು, ಮೊದಲು ಎಲೆಕ್ಷನ್ ಡಬ್ಬಿ ಇತ್ತು, ಹೇಗೋ ನಡೆಯುತ್ತಿತ್ತು. ಈಗ ಇವಿಎಂ ಮಷಿನ್ ಇದೆ. ಯಾವ ಸಮುದಾಯ ಎಷ್ಟು ಮತದಾನ ಮಾಡಿದೆ ಎಂಬುವುದು ಗೊತ್ತಾಗುತ್ತೆ. ಹಾಗಾಗಿ ಮುಸ್ಲಿಂ ಮತಗಳು ಹೆಚ್ವಿನ ಸಂಖ್ಯೆಯಲ್ಲಿ ಬರಬೇಕು ಎಂದು ಸಮುದಾಯಕ್ಕೆ ಸಚಿವರು ಕರೆ ನೀಡಿದರು.

Continue Reading
Advertisement
Ballari DC Prashanth kumar Mishra pressmeet about MLC election
ಬಳ್ಳಾರಿ2 mins ago

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಮೇ 9ಕ್ಕೆ ಅಧಿಸೂಚನೆ ಪ್ರಕಟ

HD Revanna
ಕರ್ನಾಟಕ13 mins ago

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

IPL 2024
Latest25 mins ago

IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

Ballari DC Prashanth kumar Mishra pressmeet about lok sabha election
ಬಳ್ಳಾರಿ27 mins ago

Lok Sabha Election 2024: ಪಾರದರ್ಶಕ ಚುನಾವಣೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

Shivamogga BJP
ಶಿವಮೊಗ್ಗ38 mins ago

Lok Sabha Election 2024: ಶಿವಮೊಗ್ಗದಲ್ಲಿ ಪ್ರಚಾರದ ವೇಳೆ ಕಿರಿಕ್; ಬಿಜೆಪಿ ವಾಹನ ಹಿಮ್ಮೆಟ್ಟಿಸಿದ ಈಶ್ವರಪ್ಪ ಅಭಿಮಾನಿಗಳು

HD Revanna
ಕರ್ನಾಟಕ1 hour ago

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Terrorist Attack
ಪ್ರಮುಖ ಸುದ್ದಿ1 hour ago

Terrorist Attack : ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ: ನಾಲ್ವರು ವಾಯುಪಡೆ ಸಿಬ್ಬಂದಿಗೆ ಗಾಯ

HD Revanna
ಕರ್ನಾಟಕ1 hour ago

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Drown in River
ಕರ್ನಾಟಕ2 hours ago

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Champions Trophy
ಪ್ರಮುಖ ಸುದ್ದಿ2 hours ago

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌