Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್! - Vistara News

ಕರ್ನಾಟಕ

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Delivery Boy: ಇಶಾನ್‌ ಶರ್ಮಾ ಎಂಬ ಯುವಕ ಜೆಪ್ಟೋದಲ್ಲಿ ಹಲವು ವಸ್ತುಗಳನ್ನು ಆರ್ಡರ್‌ ಮಾಡಿದ್ದಾರೆ. ಸಾಜನ್‌ ಅಹ್ಮದ್‌ ಲಷ್ಕರ್‌ ಎಂಬ ಡೆಲಿವರಿ ಬಾಯ್‌, ಇಶಾನ್‌ ಶರ್ಮಾ ಅವರ ಮನೆಬಾಗಿಲಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನ್ನು ಡೆಲಿವರಿ ಮಾಡಿದ ಬಳಿಕ ಅವರು ಮೊದಲಿಗೆ ಯುವಕನ ಗುಪ್ತಾಂಗವನ್ನು ಸ್ಪರ್ಶಿಸಿದ್ದಾರೆ. ಯುವಕನು ಕೂಗಾಡಿದ ಬಳಿಕ ಆತನು ಅಲ್ಲಿಂದ ಕಾಲ್ಕಿತ್ತಿದ್ದಾನೆ.

VISTARANEWS.COM


on

Delivery Boy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಡೆಲಿವರಿ ಬಾಯ್ಸ್‌ (Delivery Boy) ಆಹಾರ ಸೇರಿ ಹಲವು ವಸ್ತುಗಳನ್ನು ಮಳೆ, ಬಿಸಿಲು, ಚಳಿ, ರಾತ್ರಿ ಎನ್ನದೆ ಮನೆಬಾಗಿಲಿಗೆ ತಲುಪಿಸುವ ಮೂಲಕ ಗ್ರಾಹಕರ ಅಗತ್ಯಗಳನ್ನು ಪೂರೈಸುತ್ತಾರೆ. ಆದರೆ, ಕೆಲವು ಡೆಲಿವರಿ ಬಾಯ್‌ಗಳು ಗ್ರಾಹಕರ ಜತೆ ಜಗಳ ಆಡುವುದು, ವಾದ ಮಾಡುವುದು, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದುರ್ವರ್ತನೆ ತೋರುವ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ನಗರದಲ್ಲಿ ಡೆಲಿವರಿ ಬಾಯ್‌ ಒಬ್ಬ ಗ್ರಾಹಕನ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ್ದಾನೆ. ಈ ಕುರಿತು ಗ್ರಾಹಕ ಇಶಾನ್‌ ಶರ್ಮಾ ಎಂಬುವರು ದೂರು ದಾಖಲಿಸಿದ್ದಾರೆ.

ಇಶಾನ್‌ ಶರ್ಮಾ ಎಂಬ ಯುವಕ ಜೆಪ್ಟೋದಲ್ಲಿ ಹಲವು ವಸ್ತುಗಳನ್ನು ಆರ್ಡರ್‌ ಮಾಡಿದ್ದಾರೆ. ಸಾಜನ್‌ ಅಹ್ಮದ್‌ ಲಷ್ಕರ್‌ ಎಂಬ ಡೆಲಿವರಿ ಬಾಯ್‌, ಇಶಾನ್‌ ಶರ್ಮಾ ಅವರ ಮನೆಬಾಗಿಲಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನ್ನು ಡೆಲಿವರಿ ಮಾಡಿದ ಬಳಿಕ ಅವರು ಮೊದಲಿಗೆ ಯುವಕನ ಗುಪ್ತಾಂಗವನ್ನು ಸ್ಪರ್ಶಿಸಿದ್ದಾರೆ. ಆಕಸ್ಮಿಕ ಎಂದುಕೊಂಡ ಯುವಕ ಸುಮ್ಮನಾಗಿದ್ದಾರೆ. ಆದರೆ, ಎರಡನೇ ಬಾರಿಯೂ ಮುಟ್ಟಿದಾಗ ಉದ್ದೇಶಪೂರ್ವಕ ವರ್ತನೆ ಎಂಬುದು ಬಯಲಾಗಿದೆ. ಇದೇ ವೇಳೆ, ಯುವಕ ಕೂಗಿದ ಕಾರಣ ಡೆಲಿವರಿ ಬಾಯ್‌ ಅಲ್ಲಿಂದ ಕಾಲ್ಕಿತ್ತದ್ದಾನೆ ಎಂದು ಯುವಕ ತಿಳಿಸಿದ್ದಾರೆ.

ಡೆಲಿವರಿ ಬಾಯ್‌ ವರ್ತನೆ ಕುರಿತು ಇಶಾನ್‌ ಶರ್ಮಾ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರನ್ನು ಟ್ಯಾಗ್‌ ಮಾಡಿ ದೂರಿದ್ದಾರೆ. “ಜೆಪ್ಟೋದಲ್ಲಿ ನಾನು ಕೆಲ ವಸ್ತುಗಳನ್ನು ಆರ್ಡರ್‌ ಮಾಡಿದ್ದೆ. ಆದರೆ, ವಸ್ತುಗಳನ್ನು ಡೆಲಿವರಿ ಮಾಡಿದ ಆತನು ನನ್ನ ಗುಪ್ತಾಂಗವನ್ನು ಮುಟ್ಟಿದ್ದಾನೆ. ಮೊದಲಿಗೆ ಆಕಸ್ಮಿಕ ಎಂಬುದಾಗಿ ನಾನು ಸುಮ್ಮನಿದ್ದೆ. ಆದರೆ, ಆತನು ಎರಡನೇ ಬಾರಿಯೂ ಉದ್ದೇಶಪೂರ್ವಕವಾಗಿ ನನ್ನ ಗುಪ್ತಾಂಗವನ್ನು ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. ಈತನ ವಿರುದ್ಧ ದಯಮಾಡಿ ಕ್ರಮ ತೆಗೆದುಕೊಳ್ಳಿ” ಎಂಬುದಾಗಿ ಆರೋಪಿಸಿದ್ದಾನೆ. ಏಪ್ರಿಲ್‌ 26ರಂದು ಘಟನೆ ನಡೆದಿದೆ.

ಕೆಲ ವಾರಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು ಬಂಧಿಸಿದ್ದರು. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ ಎಂಬುದು ಗೊತ್ತಾಗಿತ್ತು.

ಇದನ್ನೂ ಓದಿ: Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Karnataka Politics: ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜಕೀಯ ದ್ರವೀಕರಣ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.

VISTARANEWS.COM


on

Karnataka Politics Operation Kamala is not possible says CM Siddaramaiah
Koo

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ (Karnataka Politics) ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ (Operation Kamala) ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಬಾರಿ ಎನ್‌ಡಿಎ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಎಂದು ಸ್ಪಷ್ಟನೆ ನೀಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ (Maharashtra CM Eknath Shinde) ಹೇಳಿಕೆ ಬಗ್ಗೆ ಸಿಎಂ ಈ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜಕೀಯ ದ್ರವೀಕರಣ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಉತ್ತರಿಸಿದರು.

ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ರಾಜ್ಯ ಕಾಂಗ್ರೆಸ್ (Karnataka Congress) ಸರ್ಕಾರದ ಪತನಕ್ಕೆ (Karnataka politics) ಸಮಯ ಸನ್ನಿಹಿತವಾಗಿದೆ. ಈ ಸಂದರ್ಭದಲ್ಲಿ ತನ್ನ ನೆರವನ್ನು ರಾಜ್ಯದ ಬಿಜೆಪಿ (BJP) ನಾಯಕರು ಕೋರಿದ್ದಾರೆ ಎಂಬ ಸುಳಿವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Maharashtra CM Eknath Shinde) ಬಿಟ್ಟುಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಮಾತನಾಡಿ ಅವರು ಈ ಸೂಚನೆ ನೀಡಿದ್ದಾರೆ.

ಅತ್ತ ಬಿಜೆಪಿ ನಾಯಕರಿಂದಲೂ ಪದೇ ಪದೆ ಸರ್ಕಾರ ಬೀಳಿಸುವ ಕುರಿತ ಹೇಳಿಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಅವರು ಮಾತನಾಡುತ್ತಿದ್ದರು. “ಕರ್ನಾಟಕ ಸರ್ಕಾರ ಬೀಳುವುದು ಖಚಿತ” ಎಂದು ಏಕನಾಥ ಶಿಂಧೆ ಹೇಳಿದ್ದಾರೆ. “ಈ ಕುರಿತು ನನ್ನ‌ ಅನುಭವ ಬೇಕು ಅಂತ ಹೇಳಿದ್ದಾರೆ” ಎಂದು ಶಿಂಧೆ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ಚರ್ಚೆಯಾದ ಗುಟ್ಟನ್ನು ಅವರು ಈ ಮೂಲಕ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ. “ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ಹೋಗಿದ್ದೆ. ಕರ್ನಾಟಕದಲ್ಲಿಯೂ ʼಆಪರೇಶನ್‌ ನಾಥʼ ನಡೆಸುವುದಿದೆ ಎಂದು ಅಲ್ಲಿನ ನಾಯಕರು ಹೇಳಿದರು. ಹಾಗೆಂದರೇನು ಎಂದು ವಿಚಾರಿಸಿದಾಗ, ಮಹಾರಾಷ್ಟ್ರದಲ್ಲಿ ಹಿಂದಿನ ಸರ್ಕಾರ ಪತನ ಮಾಡಿದಂತೆ ಇಲ್ಲಿಯೂ ಮಾಡುವುದಿದೆ ಎಂದಿದ್ದರು. ಅದಕ್ಕೆ ನಿಮ್ಮ ಅನುಭವ ಅಗತ್ಯ ಎಂದಿದ್ದರುʼʼ ಎಂದು ಶಿಂಧೆ ಹೇಳಿದ್ದಾರೆ. ಇದಕ್ಕಾಗಿ ಚುನಾವಣೆ ಮುಗಿದ ಮೇಲೆ ಮತ್ತೆ ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದಿದ್ದೇನೆ ಎಂದವರು ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡುತ್ತ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್ ಅವರು, “ಈ ಸರ್ಕಾರಕ್ಕೆ ಆಯುಷ್ಯವಿಲ್ಲ” ಎಂದಿದ್ದರು. ಅದಕ್ಕೂ ಮೊದಲು ಬೆಳಗಾವಿಯಲ್ಲಿ “ಈ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಬೀಳುವುದು ಖಚಿತ” ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಇದೀಗ ಶಿಂಧೆ ಹೇಳಿಕೆ ಇನ್ನಷ್ಟು ಕುತೂಹಲ ಮೂಡಿಸಿದೆ.

ಆದರೆ, ಈ ಹೇಳಿಕೆಗಳ ಅಸಲಿಯತ್ತಿನ ಬಗ್ಗೆ ಅನುಮಾನ ಮೂಡುವಂತಿದೆ. ಸದ್ಯ ಕಾಂಗ್ರೆಸ್‌ ವಿಧಾನಸಭೆಯಲ್ಲಿ 136 ಸ್ಥಾನ ಹೊಂದಿದ್ದು, ಬಹುಮತ ಹೊಂದಿದೆ. ಒಟ್ಟು 224 ಶಾಸಕ ಸ್ಥಾನಗಳಲ್ಲಿ ಬಿಜೆಪಿ ಕೇವಲ 66 ಸ್ಥಾನ ಹೊಂದಿದ್ದು, ಜೆಡಿಎಸ್‌ 19 ಶಾಸಕ ಬಲ ಹೊಂದಿದೆ. ಎರಡೂ ಪಕ್ಷಗಳು ಒಟ್ಟಾದರೂ 85 ಸ್ಥಾನಗಳು ಆಗುತ್ತವೆ. ಇದು ಬಹುಮತದ ಹತ್ತಿರಕ್ಕೂ ಬರುವುದಿಲ್ಲ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಬೀಳಿಸುವುದು ಅಷ್ಟೊಂದು ಸುಲಭವಲ್ಲ.

ಹಾಗಾದರೆ ಇದು ಕೇವಲ ರಾಜಕೀಯ ಹೇಳಿಕೆಯಾ? ಇಲ್ಲದಿದ್ದರೆ 45 ಶಾಸಕರನ್ನು ಸೆಳೆದು ಸರ್ಕಾರ ಪತನ ಮಾಡುವುದು ಅಷ್ಟೊಂದು ಸುಲಭವಾ? ಅತೃಪ್ತ ಶಾಸಕರನ್ನು ಸೆಳೆದು ಸರ್ಕಾರ ಬೀಳಿಸುವ ಸರ್ಕಸ್ ಶುರು ಮಾಡುತ್ತಾರಾ? ಸಿಎಂ ಆಗುವ ಕನಸು ಕಾಣುತ್ತಿರುವ ನಾಯಕನಿಗೆ ಬಿಜೆಪಿ ಗಾಳ ಹಾಕಲಿದೆಯಾ? ರಾಜ್ಯದಲ್ಲೂ ಒಬ್ಬ ಶಿಂಧೆಯನ್ನು ಕಾಂಗ್ರೆಸ್‌ನಲ್ಲಿ ಬಿಜೆಪಿ ಹುಟ್ಟು ಹಾಕಲಿದೆಯಾ? ಹಾಗಿದ್ದರೆ ಅಂಥವರು ಯಾರು? ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ದೆಹಲಿಯಲ್ಲಿ ಅಧಿಕಾರ ಹಿಡಿದರೆ ರಾಜ್ಯದಲ್ಲೂ ಕಾಂಗ್ರೆಸ್‌ನೊಳಗೆ ಬಂಡಾಯ ಖಚಿತವಾ? ರಾಜ್ಯ ಕಾಂಗ್ರೆಸ್‌ನಲ್ಲಿ ಶಿಂಧೆಗಾಗಿ ಹುಡುಕಾಟ ನಡೆದಿದೆಯಾ? ಮುಂತಾದ ಪ್ರಶ್ನೆಗಳು ಈಗ ಎದ್ದಿವೆ.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ 2019ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದವು. ಬಿಜೆಪಿ 105 ಸ್ಥಾನಗಳನ್ನು ಹಾಗೂ ಶಿವಸೇನೆ 56 ಸ್ಥಾನಗಳನ್ನು ಗೆದ್ದಿದ್ದವು. ಸರ್ಕಾರ ರಚನೆಯ ಸಂದರ್ಭದಲ್ಲಿ ಬಿರುಕು ಉಂಟಾಗಿತ್ತು. ಬಳಿಕ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಸೇರಿ ಸರ್ಕಾರ ರಚಿಸಿದ್ದವು. ನಂತರ ಶಿವಸೇನೆ ನಾಯಕ ಏಕನಾಥ ಶಿಂಧೆ ಮೂರನೇ ಎರಡರಷ್ಟು ಶಾಸಕರ ಜೊತೆಗೆ ಹೊರಬಿದ್ದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರು. ಇದರಿಂದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಪತನವಾಗಿ ಬಿಜೆಪಿ- ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಎನ್‌ಸಿಪಿಯ ಅಜಿತ್‌ ಪವಾರ್‌ ಕೂಡ ಇದಕ್ಕೆ ಕೈ ಜೋಡಿಸಿದ್ದರು.

Continue Reading

ವಿಜಯನಗರ

Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

Vijayanagara News: ಕೊಟ್ಟೂರು ತಾಲೂಕಿನ ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಮಧ್ಯೆ ಭಾನುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಅಂಗವಾಗಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಹರ್ಷೋದ್ಗಾರದಿಂದ ಜಯಘೋಷ ಕೂಗುತ್ತ ರಥವನ್ನು ಶ್ರದ್ಧಾ ಭಕ್ತಿಯಿಂದ ಎಳೆದು ಭಕ್ತಿ ಸಮರ್ಪಿಸಿದರು.

VISTARANEWS.COM


on

Ujjaini Sri Marulasiddeshwara Rathotsava
Koo

ಕೊಟ್ಟೂರು: ಪಂಚಪೀಠಗಳಲ್ಲಿ ಒಂದಾದ ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಮಧ್ಯೆ ಭಾನುವಾರ ಸಂಜೆ ವಿಜೃಂಭಣೆಯಿಂದ (Vijayanagara News) ನೆರವೇರಿತು. ಇದಕ್ಕೂ ಮೊದಲು ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾದಿಗಳು ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

ಪಟಾಕ್ಷಿ ಸವಾಲು

ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ರಥದ ಪಟಾಕ್ಷಿ ಸವಾಲು ಪ್ರಕ್ರಿಯೆ ನಡೆಯಿತು. 2.01 ಲಕ್ಷ ರೂ.ಗೆ ಚಿತ್ರದುರ್ಗ ಜಿಲ್ಲೆಯ ಸಿದ್ದಾಪುರ ಪ್ರವೀಣ್ ಸವಾಲಿನಲ್ಲಿ ಪಡೆದುಕೊಂಡರು. ಬಳಿಕ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ವೈಭವದ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಹರ್ಷೋದ್ಗಾರದಿಂದ ಜಯಘೋಷ ಕೂಗುತ್ತ, ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀ ಪೀಠದ ಪ್ರೌಢಶಾಲಾ ಆವರಣದಲ್ಲಿ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿತ್ತು.

Continue Reading

ಪ್ರಮುಖ ಸುದ್ದಿ

Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

Karnataka Politics: ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಅವರು ಮಾತನಾಡುತ್ತಿದ್ದರು. “ಕರ್ನಾಟಕ ಸರ್ಕಾರ ಬೀಳುವುದು ಖಚಿತ” ಎಂದು ಏಕನಾಥ ಶಿಂಧೆ ಹೇಳಿದ್ದಾರೆ. “ಈ ಕುರಿತು ನನ್ನ‌ ಅನುಭವ ಬೇಕು ಅಂತ ಹೇಳಿದ್ದಾರೆ” ಎಂದು ಶಿಂಧೆ ತಿಳಿಸಿದ್ದಾರೆ.

VISTARANEWS.COM


on

karnataka politics eknath shinde
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್ (Karnataka Congress) ಸರ್ಕಾರದ ಪತನಕ್ಕೆ (Karnataka politics) ಸಮಯ ಸನ್ನಿಹಿತವಾಗಿದೆ. ಈ ಸಂದರ್ಭದಲ್ಲಿ ತನ್ನ ನೆರವನ್ನು ರಾಜ್ಯದ ಬಿಜೆಪಿ (BJP) ನಾಯಕರು ಕೋರಿದ್ದಾರೆ ಎಂಬ ಸುಳಿವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Maharashtra CM Eknath Shinde) ಬಿಟ್ಟುಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಮಾತನಾಡಿ ಅವರು ಈ ಸೂಚನೆ ನೀಡಿದ್ದಾರೆ.

ಅತ್ತ ಬಿಜೆಪಿ ನಾಯಕರಿಂದಲೂ ಪದೇ ಪದೆ ಸರ್ಕಾರ ಬೀಳಿಸುವ ಕುರಿತ ಹೇಳಿಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಅವರು ಮಾತನಾಡುತ್ತಿದ್ದರು. “ಕರ್ನಾಟಕ ಸರ್ಕಾರ ಬೀಳುವುದು ಖಚಿತ” ಎಂದು ಏಕನಾಥ ಶಿಂಧೆ ಹೇಳಿದ್ದಾರೆ. “ಈ ಕುರಿತು ನನ್ನ‌ ಅನುಭವ ಬೇಕು ಅಂತ ಹೇಳಿದ್ದಾರೆ” ಎಂದು ಶಿಂಧೆ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ಚರ್ಚೆಯಾದ ಗುಟ್ಟನ್ನು ಅವರು ಈ ಮೂಲಕ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ. “ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ಹೋಗಿದ್ದೆ. ಕರ್ನಾಟಕದಲ್ಲಿಯೂ ʼಆಪರೇಶನ್‌ ನಾಥʼ ನಡೆಸುವುದಿದೆ ಎಂದು ಅಲ್ಲಿನ ನಾಯಕರು ಹೇಳಿದರು. ಹಾಗೆಂದರೇನು ಎಂದು ವಿಚಾರಿಸಿದಾಗ, ಮಹಾರಾಷ್ಟ್ರದಲ್ಲಿ ಹಿಂದಿನ ಸರ್ಕಾರ ಪತನ ಮಾಡಿದಂತೆ ಇಲ್ಲಿಯೂ ಮಾಡುವುದಿದೆ ಎಂದಿದ್ದರು. ಅದಕ್ಕೆ ನಿಮ್ಮ ಅನುಭವ ಅಗತ್ಯ ಎಂದಿದ್ದರುʼʼ ಎಂದು ಶಿಂಧೆ ಹೇಳಿದ್ದಾರೆ. ಇದಕ್ಕಾಗಿ ಚುನಾವಣೆ ಮುಗಿದ ಮೇಲೆ ಮತ್ತೆ ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದಿದ್ದೇನೆ ಎಂದವರು ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡುತ್ತ ರಾಜ್ಯ ವಿಪಕ್ಷ ನಾಯಕ ಆರ್. ಆಶೋಕ್ ಅವರು, “ಈ ಸರ್ಕಾರಕ್ಕೆ ಆಯುಷ್ಯವಿಲ್ಲ” ಎಂದಿದ್ದರು. ಅದಕ್ಕೂ ಮೊದಲು ಬೆಳಗಾವಿಯಲ್ಲಿ “ಈ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಬೀಳುವುದು ಖಚಿತ” ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಇದೀಗ ಶಿಂಧೆ ಹೇಳಿಕೆ ಇನ್ನಷ್ಟು ಕುತೂಹಲ ಮೂಡಿಸಿದೆ.

ಆದರೆ ಈ ಹೇಳಿಕೆಗಳ ಅಸಲಿಯತ್ತಿನ ಬಗ್ಗೆ ಅನುಮೂನ ಮೂಡುವಂತಿದೆ. ಸದ್ಯ ಕಾಂಗ್ರೆಸ್‌ ವಿಧಾನಸಭೆಯಲ್ಲಿ 136 ಸ್ಥಾನ ಹೊಂದಿದ್ದು, ಬಹುಮತ ಹೊಂದಿದೆ. ಒಟ್ಟು 224 ಶಾಸಕ ಸ್ಥಾನಗಳಲ್ಲಿ ಬಿಜೆಪಿ ಕೇವಲ 66 ಸ್ಥಾನ ಹೊಂದಿದ್ದು, ಜೆಡಿಎಸ್‌ 19 ಶಾಸಕಬಲ ಹೊಂದಿದೆ. ಎರಡೂ ಪಕ್ಷಗಳು ಒಟ್ಟಾದರೂ 85 ಸ್ಥಾನಗಳು ಆಗುತ್ತವೆ; ಇದು ಬಹುಮತದ ಹತ್ತಿರಕ್ಕೂ ಬರುವುದಿಲ್ಲ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಬೀಳಿಸುವುದು ಅಷ್ಟೊಂದು ಸುಲಭವಲ್ಲ.

ಹಾಗಾದರೆ ಇದು ಕೇವಲ ರಾಜಕೀಯ ಹೇಳಿಕೆಯಾ? ಇಲ್ಲದಿದ್ದರೆ 45 ಶಾಸಕರನ್ನು ಸೆಳೆದು ಸರ್ಕಾರ ಪತನ ಮಾಡುವುದು ಅಷ್ಟೊಂದು ಸುಲಭವಾ? ಅತೃಪ್ತ ಶಾಸಕರನ್ನು ಸೆಳೆದು ಸರ್ಕಾರ ಬೀಳಿಸುವ ಸರ್ಕಸ್ ಶುರು ಮಾಡುತ್ತಾರಾ? ಸಿಎಂ ಆಗುವ ಕನಸು ಕಾಣುತ್ತಿರುವ ನಾಯಕನಿಗೆ ಬಿಜೆಪಿ ಗಾಳ ಹಾಕಲಿದೆಯಾ? ರಾಜ್ಯದಲ್ಲೂ ಒಬ್ಬ ಶಿಂಧೆಯನ್ನು ಕಾಂಗ್ರೆಸ್‌ನಲ್ಲಿ ಬಿಜೆಪಿ ಹುಟ್ಟು ಹಾಕಲಿದೆಯಾ? ಹಾಗಿದ್ದರೆ ಅಂಥವರು ಯಾರು? ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ದೆಹಲಿಯಲ್ಲಿ ಅಧಿಕಾರ ಹಿಡಿದರೆ ರಾಜ್ಯದಲ್ಲೂ ಕಾಂಗ್ರೆಸ್‌ನೊಳಗೆ ಬಂಡಾಯ ಖಚಿತವಾ? ರಾಜ್ಯ ಕಾಂಗ್ರೆಸ್‌ನಲ್ಲಿ ಶಿಂಧೆಗಾಗಿ ಹುಡುಕಾಟ ನಡೆದಿದೆಯಾ? ಮುಂತಾದ ಪ್ರಶ್ನೆಗಳು ಈಗ ಎದ್ದಿವೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ 2019ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದವು. ಬಿಜೆಪಿ 105 ಸ್ಥಾನಗಳನ್ನು ಹಾಗೂ ಶಿವಸೇನೆ 56 ಸ್ಥಾನಗಳನ್ನು ಗೆದ್ದಿದ್ದವು. ಸರ್ಕಾರ ರಚನೆಯ ಸಂದರ್ಭದಲ್ಲಿ ಬಿರುಕು ಉಂಟಾಗಿತ್ತು. ಬಳಿಕ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಸೇರಿ ಸರ್ಕಾರ ರಚಿಸಿದ್ದವು. ನಂತರ ಶಿವಸೇನೆ ನಾಯಕ ಏಕನಾಥ ಶಿಂಧೆ ಮೂರನೇ ಎರಡರಷ್ಟು ಶಾಸಕರ ಜೊತೆಗೆ ಹೊರಬಿದ್ದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರು. ಇದರಿಂದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಪತನವಾಗಿ ಬಿಜೆಪಿ- ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಎನ್‌ಸಿಪಿಯ ಅಜಿತ್‌ ಪವಾರ್‌ ಕೂಡ ಇದಕ್ಕೆ ಕೈ ಜೋಡಿಸಿದ್ದರು.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Continue Reading

ವಿಜಯಪುರ

Vijayapura News: ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿ ಶುದ್ಧೀಕರಣ ಕೇಂದ್ರಕ್ಕೆ ಬಿದ್ದು ಸಾವು

Vijayapura News: ಭಾನುವಾರ ಮನೆ ಮುಂದೆ ಆಟವಾಡುತ್ತಿದ್ದ ಮೂವರು ಮಕ್ಕಳು ಇದ್ದಕ್ಕಿಂತ ಕಾಣೆಯಾಗಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವುದರಲ್ಲಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಚರಂಡಿ ಶುದ್ಧೀಕರಣ ಕೇಂದ್ರದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Vijayapura news Drowned in water
Koo

ವಿಜಯಪುರ: ಇಲ್ಲಿನ ಗಚ್ಚಿನಗಕಟ್ಟಿ ಕಾಲೋನಿಯಿಂದ (Vijayapura News) ಭಾನುವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಅನುಷ್ಕಾ, ವಿಜಯ ಹಾಗೂ ಮಿಹಿರ ಮೃತ ದುರ್ದೈವಿಗಳು.

ಮನೆ ಮುಂದೆ ಆಟವಾಡುತ್ತಿದ್ದಾಗ ಕಾಲೋನಿಯಲ್ಲಿ ಒಂಟೆ ಬಂದಾಗ ಮೂವರು ಖುಷಿಯಲ್ಲಿ ಅದರ ಹಿಂದೆ ಹೋಗಿದ್ದಾರೆ. ಹೀಗೆ ಹೋದವರು ಮನೆಗೆ ವಾಪಸ್‌ ಆಗಿರಲಿಲ್ಲ. ಪೋಷಕರು ಸಹ ಮನೆ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ ಮಕ್ಕಳ ಸುಳಿವು ಮಾತ್ರ ಸಿಕ್ಕಿರಲಿಲ್ಲ.

ಮಕ್ಕಳು ಕಾಣಿಯಾಗಿದ್ದಕ್ಕೆ ಕಂಗಾಲಾದ ಪೋಷಕರು ಎಪಿಎಂಸಿ ಠಾಣೆ ಮೆಟ್ಟಿಲು ಹತ್ತಿದ್ದರು. ವಿಜಯಪುರದ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗಿಳಿದ ಪೊಲೀಸರು ಸಿಸಿಟಿವಿಯಲ್ಲಿ ಮಕ್ಕಳ ಚಲನವಲನ ಗಮನಿಸಿ ಹುಡುಕಾಟ ಶುರು ಮಾಡಿದ್ದರು. ಸಿಸಿಟಿವಿಯಲ್ಲಿ ಮಕ್ಕಳು ಹೋಗುವುದು ಸೆರೆಯಾಗಿತ್ತು. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಾಣೆ ಕುರಿತು ಹಲವರು ಪೋಸ್ಟ್ ಮಾಡಿದ್ದರು.

ಆದರೆ ಸೋಮವಾರ ಚರಂಡಿ ಶುದ್ಧೀಕರಣ ಕೇಂದ್ರದಲ್ಲಿ ಬಿದ್ದು ಮೂವರು ಮಕ್ಕಳು ಮೃತಪಟ್ಟಿವೆ. ಸೂಕ್ತ ಭದ್ರತೆ ಇಲ್ಲದ ಕಾರಣ ನಮ್ಮ ಮಕ್ಕಳು ಬಿದ್ದು ಸಾವನಪ್ಪಿದ್ದಾರೆ ಎಂದು ಕುಟುಂಬಸ್ಥರ ಆಕ್ರೋಶ ಹೊರಹಾಕಿದ್ದಾರೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಮಕ್ಕಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Drowned in Water : ತಲಕಾಡು ಪ್ರವಾಸಕ್ಕೆ ಹೋದ ಯುವತಿ ‌ನೀರಿನಲ್ಲಿ ಮುಳುಗಿ ಸಾವು

ಮೈಸೂರು: ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು (Drowned in water) ಮೃತಪಟ್ಟಿದ್ದಾಳೆ. ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಮೆಹನಾಜ್ (17) ಮೃತ ದುರ್ದೈವಿ.

ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್‌ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತಲಕಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rahul Gandhi
ದೇಶ3 mins ago

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Health Tips Kannada
ಆರೋಗ್ಯ10 mins ago

Health Tips Kannada: ಕಣ್ಣಿನ ಕೆಳಗಿನ ಕಪ್ಪು ಕಲೆ ನಿವಾರಿಸುವುದು ಹೇಗೆ?

Gautam Gambhir
ಪ್ರಮುಖ ಸುದ್ದಿ20 mins ago

Gautam Gambhir : ಕೊಹ್ಲಿ ಜತೆಗಿನ ಜಗಳವಲ್ಲ, ಇನ್ನೊಂದು ವಿಚಾರದ ಬಗ್ಗೆ ಗಂಭೀರ್​ಗೆ ಸಿಕ್ಕಾಪಟ್ಟೆ ಪಶ್ಚಾತಾಪವಿದೆ

Karnataka Politics Operation Kamala is not possible says CM Siddaramaiah
ರಾಜಕೀಯ42 mins ago

Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Ujjaini Sri Marulasiddeshwara Rathotsava
ವಿಜಯನಗರ43 mins ago

Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

Swati Maliwal
ದೇಶ44 mins ago

Swati Maliwal: ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲೇ ಆಪ್‌ ಸಂಸದೆ ಸ್ವಾತಿ ಮೇಲೆ ಹಲ್ಲೆ!

Madhavi Latha
ದೇಶ1 hour ago

Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

pm Narendra Modi
ಪ್ರಮುಖ ಸುದ್ದಿ1 hour ago

PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

karnataka politics eknath shinde
ಪ್ರಮುಖ ಸುದ್ದಿ2 hours ago

Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

Vijayapura news Drowned in water
ವಿಜಯಪುರ2 hours ago

Vijayapura News: ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿ ಶುದ್ಧೀಕರಣ ಕೇಂದ್ರಕ್ಕೆ ಬಿದ್ದು ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ10 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ11 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ22 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ23 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌