Site icon Vistara News

kodi mutt swamiji : ರಾಜ್ಯದಲ್ಲಿ ಕಾದಿದೆ ಜಲಪ್ರಳಯ, ಕೆಲ ಆಪತ್ತು; ಜಾಗತಿಕವಾಗಿ 3 ಗಂಡಾಂತರ: ಕೋಡಿಹಳ್ಳಿ ಶ್ರೀ

Kodi mutt shree Bhavishya

ಹುಬ್ಬಳ್ಳಿ: ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜಲ ಪ್ರಳಯ ಆಗುವ ಲಕ್ಷಣ ಇದೆ. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ (kodi mutt swamiji) ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೋಡಿಹಳ್ಳಿ ಶ್ರೀಗಳು, ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ. ಸ್ಥಿರ ಸರ್ಕಾರ ಇರುತ್ತದೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಈ ಬಾರಿಯ ವಿಜಯ ದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆ ನಡೆಯುತ್ತದೆ. ಆಳುವವರು ಅರಿತರೆ ಈ ಗಂಡಾಂತರದಿಂದ ಪಾರಾಗಬಹುದು. ಇಲ್ಲವೇ ಅನಾಹುತ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ರಾಜ್ಯಕ್ಕೆ ಕಾದಿಗೆ ಆಪತ್ತು; ಕೋಡಿ ಶ್ರೀ ಹೇಳಿಕೆ ವಿಡಿಯೊದಲ್ಲಿದೆ

ಕರುನಾಡಿಗೆ ಕೆಲವೊಂದು ಆಪತ್ತು ಇದೆ. ಕೆಲ ಸಾವು- ನೋವುಗಳು ಆಗುತ್ತವೆ. ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಆಗುತ್ತದೆ. ಇದನ್ನು ತಪ್ಪಿಸುವಂತಹದ್ದು ಆಳುವವರ ಕೈಯಲ್ಲಿದೆ. ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ ಎಂದು ಹೇಳಿದರು.

ಜಲಪ್ರಳಯಕ್ಕೆ ಎರಡು ರಾಷ್ಟ್ರಗಳು ಮುಳುಗುತ್ತವೆ

ಗ್ಯಾರಂಟಿ ಒಳ್ಳೆಯ ಯೋಜನೆ

ಬಡವರಿಗೆ ಗ್ಯಾರಂಟಿ ಯೋಜನೆಯಿಂದ ಒಳ್ಳೆಯದೇ ಆಗಿದೆ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂತಹ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬಂದಿದ್ದಾಳೆ ಎಂದು ಕೋಡಿಹಳ್ಳಿ ಶ್ರೀಗಳು ಹೇಳಿದರು.

ಇದನ್ನೂ ಓದಿ: Video Viral : ಕೈಯಲ್ಲಿ ಗರುಡ ರೇಖೆ ಇದೆ, ನಂಗೇನೂ ಆಗಲ್ಲ ಎಂದು ಹಾವು‌ ಹಿಡಿದು ಕಚ್ಚಿಸಿಕೊಂಡ! ಸತ್ತೇ ಹೋದ್ನಾ?

ಕಾಂಗ್ರೆಸ್‌ ಸರ್ಕಾರದ ಬಗ್ಗೆ ಭವಿಷ್ಯ; ಇಲ್ಲಿದೆ ವಿಡಿಯೊ

ಕಾಂಗ್ರೆಸ್‌ ಪೂರ್ಣಾವಧಿ ಅಧಿಕಾರ ನಡೆಸುತ್ತಾ?

ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರವಾಗಿ ಮಾತನಾಡಿದ ಕೋಡಿಹಳ್ಳಿ ಶ್ರೀಗಳು, ಸತ್ಯ ಕಹಿಯಾಗಿರುತ್ತದೆ. ಸುಳ್ಳು ಪ್ರಿಯವಾಗಿರುತ್ತದೆ. ನಾನೀನ ಸತ್ಯ ಹೇಳಿದರೆ ಮಠಕ್ಕೆ ಹೋಗುವದಿಲ್ಲ. ಹೀಗಾಗಿ ಕಾಲ ಬಂದಾಗ ಹೇಳುತ್ತೇನೆ. ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ. ಆದರೆ, ಊರಿನಲ್ಲಿನ ಎಲ್ಲ ವಾಸನೆ ಮೂಗಿಗೆ ಮುಟ್ಟುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

Exit mobile version