Karnataka Elections | ಮೀಸಲಾತಿ, ನಿಗಮ ಅಧ್ಯಕ್ಷರ ನೇಮಕಕ್ಕೆ ಮೀನಮೇಷ: ಬಿಜೆಪಿ ವಿರುದ್ಧ ಸಿಡಿದು ನಿಂತ್ರಾ ಕಾಡುಗೊಲ್ಲರು? - Vistara News

ಕರ್ನಾಟಕ

Karnataka Elections | ಮೀಸಲಾತಿ, ನಿಗಮ ಅಧ್ಯಕ್ಷರ ನೇಮಕಕ್ಕೆ ಮೀನಮೇಷ: ಬಿಜೆಪಿ ವಿರುದ್ಧ ಸಿಡಿದು ನಿಂತ್ರಾ ಕಾಡುಗೊಲ್ಲರು?

ಶಿರಾ ಉಪಚುನಾವಣೆಯ ಸಂದರ್ಭದಲ್ಲಿ (Karnataka Elections) ಬಿಜೆಪಿ ಕಾಡುಗೊಲ್ಲ ಸಮುದಾಯವನ್ನು ದೊಡ್ಡ ಮಟ್ಟದಲ್ಲಿ ಓಲೈಸಿ ಗೆಲುವನ್ನೂ ಪಡೆದಿತ್ತು. ಆದರೆ, ಬಳಿಕ ಕಡೆಗಣಿಸಿದೆ ಎಂಬ ಸಿಟ್ಟು ಸಮುದಾಯದಲ್ಲಿದೆ. ಮುಂದೇನು?

VISTARANEWS.COM


on

kadu gollaru
ಕಕಾಡುಗೊಲ್ಲರ ನಿಗಮ ಘೋಷಣೆ ಮಾಡಿದ ಬಿ.ಎಸ್‌. ಯಡಿಯೂರಪ್ಪ ಅವರನ್ನು ಸಮುದಾಯದ ವತಿಯಿಂದ ಗೌರವಿಸಿದ ಸಂದರ್ಭ (ಸಂಗ್ರಹ ಚಿತ್ರ)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ತುಮಕೂರು: ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕಾಡುಗೊಲ್ಲರನ್ನು ಸೆಳೆಯುವ ನಿಟ್ಟಿನಲ್ಲಿ ಹಲವು ಭರವಸೆಗಳನ್ನು ನೀಡಲಾಗಿತ್ತು. ಆದರೆ, ಬಳಿಕ ಅವೆಲ್ಲವನ್ನೂ ಕಡೆಗಣಿಸಲಾಗಿದೆ ಎಂಬ ಸಿಟ್ಟು ಈ ಸಮುದಾಯದಲ್ಲಿದೆ. ಹೀಗಾಗಿ ಮತ್ತೊಂದು ಚುನಾವಣೆ ಹೊಸ್ತಿಲಿಗೆ ಬಂದಿರುವ ಕಾಲದಲ್ಲಿ (Karnataka Elections) ಆಕ್ರೋಶ ಸಣ್ಣಗೆ ಹೊಗೆಯಾಡುತ್ತಿದೆ.

ಚಂಗಾವರ ಮಾರಣ್ಣ

ಕಾಡುಗೊಲ್ಲರಿಗೆ ಎಸ್‌ಟಿ ಮೀಸಲಾತಿ ನೀಡುವ ಬಗ್ಗೆ ಭರವಸೆಯನ್ನು ನೀಡಲಾಗಿತ್ತು. ಆದರೆ, ಇದುವರೆಗೂ ಅದರ ಬಗ್ಗೆ ಒಂದು ಹೆಜ್ಜೆ ಮುಂದಿಡಲಾಗಿಲ್ಲ. ಕಳೆದ ಜುಲೈನಲ್ಲಿ ಚಂಗಾವರ ಮಾರಣ್ಣ ಅವರನ್ನು ಕಾಡುಗೊಲ್ಲರ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ, ಕೆಲವೇ ದಿನದಲ್ಲಿ ಆದೇಶವನ್ನು ತಡೆ ಹಿಡಿದಿತ್ತು. ಈ ಎಲ್ಲ ವಿಚಾರಗಳು ಸಮುದಾಯದಲ್ಲಿ ಆಕ್ರೋಶ ಮೂಡಿಸಿವೆ.

ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯ ದೊಡ್ಡ ಪ್ರಮಾಣದಲ್ಲಿದೆ. ಕಳೆದ ಬಾರಿ ಶಿರಾ ವಿಧಾನಸಭಾ ಉಪಚುನಾವಣೆ ನಡೆದ ಹೊತ್ತಿನಲ್ಲಿ ಈ ಸಮುದಾಯವನ್ನು ಒಲಿಸಿಕೊಳ್ಳಲೆಂದು ಬಿಜೆಪಿ ಸಾಕಷ್ಟು ಭರವಸೆಗಳನ್ನು ನೀಡಿತ್ತು. ಅಂದು ಬಿಜೆಪಿ ಗೆಲುವಿನಲ್ಲಿ ಕಾಡುಗೊಲ್ಲರು ಪ್ರಮುಖ ಪಾತ್ರವನ್ನೇ ವಹಿಸಿದ್ದರು. ಆದರೆ, ಕೊಟ್ಟ ಭರವಸೆಗಳು ಯಾವುದೂ ಈಡೇರಿಲ್ಲ ಎಂದು ಸಮುದಾಯ ಅಸಮಾಧಾನಗೊಂಡಿದೆ.

ಕೊಟ್ಟ ನಿಗಮಾಧ್ಯಕ್ಷತೆಯನ್ನು ಹಿಂದಕ್ಕೆ ಪಡೆದ ಸರ್ಕಾರದ ನಿಲುವಿನಿಂದ ಬೇಸರಗೊಂಡಿರುವ ಚಂಗಾವರ ಮಾರಣ್ಣ ಅವರು ಸದ್ಯ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲೂ ಭಾಗವಹಿಸುತ್ತಿಲ್ಲ. ಗುರುವಾರ ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಿರಲಿಲ್ಲ. ಶುಕ್ರವಾರ ಶಿರಾದಲ್ಲೇ ಬಿಜೆಪಿ ಜನ ಸಂಕಲ್ಪ ಯಾತ್ರೆ ನಡೆಯಲಿದ್ದು, ಇಲ್ಲಿ ಕಾಡುಗೊಲ್ಲರನ್ನು ಹೇಗೆ ನಡೆಸಿಕೊಳ್ಳುತ್ತದೆ ಎನ್ನುವುದರ ಆಧಾರದ ಮೇಲೆ ಭವಿಷ್ಯ ನಿರ್ಧಾರವಾಗಲಿದೆ.

ಮೀಸಲಾತಿ ಕೊಡದಿದ್ದರೆ ಮತದಾನ ಬಹಿಷ್ಕಾರ
ಈ ನಡುವೆ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗುವುದರೊಳಗೆ ಕೇಂದ್ರ ಸರ್ಕಾರ ಕಾಡುಗೊಲ್ಲರಿಗೆ ಎಸ್ಟಿ ಮೀಸಲಾತಿ ಕಲ್ಪಿಸದಿದ್ದರೆ ಕಾಡುಗೊಲ್ಲರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲಿದ್ದಾರೆ ಎಂದು ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಯುವಘಟಕದ ಅಧ್ಯಕ್ಷ ಕೆಜೆಹಳ್ಳಿ ಸುರೇಶ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ನ್ಯಾಯದಡಿಯಲ್ಲಿ ಎಸ್ಟಿ ಮೀಸಲಾತಿಗಾಗಿ ಕಾಡುಗೊಲ್ಲರು ಹೋರಾಟ ಮಾಡುತ್ತಿದ್ದರು, ಸರ್ಕಾರಗಳು ತಲೆಕೆಡಿಸಿಕೊಳ್ಳುತ್ತಿಲ್ಲ, ಚುನಾವಣೆ ಸಂದರ್ಭದಲ್ಲಿ ಅಭಿವೃದ್ಧಿ ನಿಗಮ, ಎಸ್ಟಿ ಮೀಸಲಾತಿ ವಿಷಯಗಳಲ್ಲಿ ಹುಸಿ ಭರವಸೆ ನೀಡಿ ಈ ಸಮುದಾಯದ ಮತಗಳನ್ನ ಪಡೆದು ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡುಗೊಲ್ಲ ಸಮುದಾಯ ಎಸ್ಟಿ ಮೀಸಲಾತಿ ಪಡೆಯಲು ಎಲ್ಲಾ ರೀತಿಯಲ್ಲೂ ಅರ್ಹವಾಗಿದೆ. ಕುಲಶಾಸ್ತ್ರ ಅಧ್ಯಯನ ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಬಿಜೆಪಿ ಸರ್ಕಾರ ಕಾಡುಗೊಲ್ಲರ ಸಾಮಾಜಿಕ ನ್ಯಾಯದ ವಿಚಾರದಲ್ಲಿ ಹುಸಿ ಭರವಸೆ ನೀಡಿ ಪದೇ ಪದೇ ವಂಚಿಸುವ ಚೆಲ್ಲಾಟವಾಡದೆ ಸದನದಲ್ಲಿ ಕಾಯ್ದೆ ರೂಪಿಸಿ ಕಾಡುಗೊಲ್ಲರಿಗೆ ಎಸ್ಟಿ ಮೀಸಲಾತಿ ಕಲ್ಪಿಸಲಿ, ಒಂದು ವೇಳೆ ಕೇಂದ್ರ ಸರ್ಕಾರ ಕಾಡುಗೊಲ್ಲರಿಗೆ ರಾಜ್ಯ ವಿಧಾನಸಭಾ ಚುನಾವಣೆ ಒಳಗಾಗಿ ಪರಿಶಿಷ್ಟ ಪಂಗಡಕ್ಕೆ ಪರಿಗಣಿಸದೆ ಇದ್ದರೆ ಕಾಡುಗೊಲ್ಲರು ಹಟ್ಟಿ ಪ್ರವೇಶಕ್ಕೆ ರಾಜಕೀಯ ಪಕ್ಷಗಳಿಗೆ ನಿರ್ಬಂಧ ಹೇರುವುದಲ್ಲದೆ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ | Karnataka Election : ಮುಂದುವರಿದ ಜೆ.ಪಿ. ನಡ್ಡಾ ಮಠ ಯಾತ್ರೆ; ಸಮುದಾಯ ಆಧಾರಿತ ಮತ ಬೇಟೆ ತೀವ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Prajwal Revanna Case: ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ಆರೋಪಿ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾನೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರು ಬರಲಿ ವಿಚಾರಣೆ ಎದುರಿಸಲಿ. ಸಂತ್ರಸ್ತೆಯರಲ್ಲಿ ಜೆಡಿಎಸ್‌ ಕಾರ್ಯಕರ್ತರೆಯರೇ ಹೆಚ್ಚಾಗಿದ್ದಾರೆ. ಅವರಿಗೆಲ್ಲ ನ್ಯಾಯ ದೊರಕಬೇಕು. ಪ್ರಜ್ವಲ್‌ ಕೇಸ್‌ನಿಂದ (Prajwal Revanna Case) ಎಷ್ಟೋ ಜನ ಹೆಣ್ಣು ಮಕ್ಕಳು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಎಸ್‌ಐಟಿ ಮುಂದೆ ವಿಚಾರಣೆಗೆ ಅವರೂ ಬರಲಿ, ನಾನೂ ಹಾಜರಾಗುತ್ತೇನೆ ಎಂದು ಅಶ್ಲೀಲ ವಿಡಿಯೊ ವೈರಲ್‌ ಪ್ರಕರಣದ ಆರೋಪಿ, ತಲೆಮರೆಸಿಕೊಂಡಿರುವ ನವೀನ್‌ ಗೌಡ ಹೇಳಿದ್ದಾನೆ.

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾನೆ.

ಅಶ್ಲೀಲ ವಿಡಿಯೊ ಆರೋಪದಲ್ಲಿ ಏ. 23ರಂದು ನನ್ನ ಮೇಲೆಯೂ ಎಫ್‌ಐಆರ್‌ ದಾಖಲಿಸಿದ್ದಾರೆ. ಹಾಸನದಲ್ಲಿ ಕಳೆದ 10 ವರ್ಷದಲ್ಲಿ ಎಷ್ಟು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ನಾಪತ್ತೆಯಾಗಿದ್ದಾರೆ ಎಂಬುವುದು ಮರು ತನಿಖೆಯಾಗಬೇಕಿದೆ. ಈ ಆತ್ಮಹತ್ಯೆಗಳಿಗೂ ಕೂಡ ಪ್ರಜ್ವಲ್‌ ರೇವಣ್ಣಗೆ ಸಂಬಂಧವಿದೆ. ಎಸ್‌ಐಟಿಯವರುವ ವಿಚಾರಣೆಗೆ ನನ್ನನ್ನು ಕರೆದಿಲ್ಲ. ಅವರು ಕರೆದರೆ ನಾನು ಹೋಗುತ್ತೇನೆ. ನಾನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಕೇಸ್‌ ಹಾಕಿದ್ದಾರೆ ಹೇಳಿದ್ದಾನೆ.

ಇದನ್ನೂ ಓದಿ | Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

ಅಶ್ಲೀಲ ವಿಡಿಯೊ ವಿಷಯ ಬಹಿರಂಗಪಡಿಸದಂತೆ ನನಗೂ ಪ್ರಜ್ವಲ್‌ ರೇವಣ್ಣ ಅವರು ಆಮಿಷ ಒಡ್ಡಿದ್ದರು. ಅವರ ಸಹಚರನನ್ನು ನನ್ನ ಭೇಟಿಯಾಗಲು ಕಳುಹಿಸಿದ್ದರು ಎಂದು ಆರೋಪಿಸಿದ್ದಾನೆ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತರಾಗಿದ್ದರು. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ನವೀನ್ ಗೌಡ ಮೇಲೆ ಏ.23ರಂದು ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷವಾಗಿ ಶಾಸಕ ಎ. ಮಂಜು ವಿರುದ್ಧ ಪೋಸ್ಟ್ ಹಾಕಿ ಕೆಲವೇ ಸಮಯದ ಬಳಿಕ ಡಿಲೀಟ್‌ ಮಾಡಿದ್ದ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ, ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿ, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದ. ನಂತರ ಸುಳ್ಳು ಆರೋಪ ಮಾಡಿದ್ದಾರೆ ಎಂದು ನವೀನ್‌ ಗೌಡ ವಿರುದ್ಧ ಶಾಸಕ ಎ. ಮಂಜು ಅವರು ಎಸ್‌ಐಟಿಗೆ ದೂರು ನೀಡಿದ್ದರು.

Continue Reading

ಕರ್ನಾಟಕ

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

Suspicious Death: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಾಂಗ್ರೆಸ್ ಮುಖಂಡನ ಸಾವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ವ್ಯಕ್ತಿಯನ್ನು ಕೊಲೆ ಮಾಡಿಲ್ಲ, ಇದು ಆತ್ಮಹತ್ಯೆ ಎಂದು ತನಿಖೆ ವೇಳೆ ತಿಳಿದುಬಂದಿದೆ.

VISTARANEWS.COM


on

Suspicious Death
Koo

ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಾಂಗ್ರೆಸ್ ಮುಖಂಡನ ಸಾವು ಪ್ರಕರಣಕ್ಕೆ ದೊಡ್ಡ ಟಿಸ್ಟ್‌ ಸಿಕ್ಕಿದೆ. ಏಕಾಏಕಿ ನಿಗೂಢವಾಗಿ ಸಾವನ್ನಪ್ಪಿದ್ದರಿಂದ ಕೊಲೆಯೆಂದೇ ಎಲ್ಲರೂ ಭಾವಿಸಿದ್ದರು. ಇಡೀ‌ ಗ್ರಾಮಸ್ಥರು ಇದು ಸಹಜ ಸಾವಲ್ಲ, ಭಯಾನಕ ಕೊಲೆಯೇ ಎಂದು ತೀರ್ಮಾನಿಸಿಬಿಟ್ಟಿದ್ದರು. ಆದರೆ ಆತನ ಸಾವಿಗೆ (Suspicious Death) ಇದೀಗ ತಿರುವು ಸಿಕ್ಕಿದ್ದು, ಮುಖಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುವುದು ತನಿಖೆಯಲ್ಲಿ ಬಯಲಾಗಿದೆ.

ಹೌದು,‌ ಮಾರ್ಚ್‌ 12 ರಂದು ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ವ್ಯಾಪ್ತಿಯ ಬೆಟ್ಟದ‌ ಮೇಲೆ ನಡೆದ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಡೋಣಿ ಗ್ರಾಮದ ಶರಣಪ್ಪ ಸಂದಿಗೌಡರ್ ಎಂಬ 40 ವರ್ಷದ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿದ್ದ. ಸಾವಿನ ಹಿಂದಿನ ದಿನವಷ್ಟೇ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದು ಸ್ವಗ್ರಾಮಕ್ಕೆ ವಾಪಾಸ್ ಬರ್ತಿದ್ದ ಶರಣಪ್ಪನನ್ನು ಅದ್ಯಾರೋ ಬೆನ್ನಟ್ಟಿ ಹಲ್ಲೆ ಮಾಡಿದ್ದರು. ಡೋಣಿ ಗ್ರಾಮದ ಹೊರವಲಯದ ಗುಡ್ಡದ ಬಳಿ ಕರೆದುಕೊಂಡು ಬಂದು, ಕಣ್ಣಿಗೆ ಖಾರದ ಪುಡಿ ಎರಚಿ, ಹೆಲ್ಮೆಟ್‌ನಿಂದ ಹಲ್ಲೆ ಮಾಡಿ, ಹಗ್ಗದಿಂದ ಕೈ,‌ಕಾಲು ಕಟ್ಟಿ, ಮರಕ್ಕೆ ನೇಣು ಬಿಗಿದು ಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ‌ ಅನ್ನೋ ಸುದ್ದಿ ಎಲ್ಲರ ಬಾಯಲ್ಲೂ ಸರಸರನೇ ಹರಿದಾಡಿತ್ತು.

ಅಷ್ಟೇ ಯಾಕೆ ಸ್ಥಳಕ್ಕೆ ಬಂದ ಖಾಕಿಪಡೆ ಸಹ ಇದು ಪಕ್ಕಾ ಇದೇ ರೀತಿ ಕೊಲೆಯಾಗಿರಬಹುದು‌‌ ಎಂದು ಡಿಸೈಡ್ ಮಾಡಿದ್ದರೇನೋ… ಆದರೆ, ವಿಚಿತ್ರ‌‌ ಅಂದರೂ ನಂಬಲೇಬೇಕು, ಶರಣಪ್ಪ ಸಂದಿಗೌಡರ್ ಸತ್ತಿದ್ದು, ಯಾರೋ ಮಾಡಿದ‌ ಕೊಲೆಯಿಂದ ಅಲ್ಲಾ, ಬದಲಾಗಿ ಕೊಲೆ ಕಥೆ ಸೃಷ್ಟಿ ಮಾಡಿ,‌ ಸ್ವತಃ ತಾನೇ ಸೆಲ್ಫ್ ಸೂಸೈಡ್ ಮಾಡಿಕೊಂಡಿದ್ದಾನೆ ಅನ್ನೋ ಬಲವಾದ ಸತ್ಯ ಇದೀಗ ಹೊರಬಿದ್ದಿದೆ.

ಶರಣಪ್ಪ ಮತ್ತು ಆತನ ಪತ್ನಿ ನಡುವೆ ಮೊದಲಿನಿಂದಲೂ ವೈವಾಹಿಕ ಜೀವನ ಅಷ್ಟಕಷ್ಟೇ ಇತ್ತು. ಹೀಗಾಗಿ ಶರಣಪ್ಪನಿಂದ ಪತ್ನಿ ದೂರವೇ ಉಳಿದಿದ್ದಳು. ಇದರಿಂದ ಪತ್ನಿ ಮೇಲೆ ಶರಣಪ್ಪನಿಗೆ ಕೆಂಡದಂಥ ವೈಮನಸ್ಸು ಹುಟ್ಟಿಕೊಂಡಿತ್ತು. ಹೀಗಾಗಿ ಶರಣಪ್ಪ ತಾನು ಸಾವಿಗೆ ಶರಣಾಗುವ ಮುನ್ನ ತನ್ನನ್ನು ಪತ್ನಿಯೇ ಕೊಲೆ ಮಾಡಿಸಿದ್ದಾಳೆ ಅನ್ನೋ ರೀತಿ ಪ್ಲ್ಯಾನ್ ಸೃಷ್ಟಿ ಮಾಡಿದ್ದ. ತನ್ನ ಸೆಲ್ಫ್ ಸೂಸೈಡ್ ಅನ್ನ ಕೊಲೆಯಾಗಿ ಕನ್ವರ್ಟ್ ಮಾಡುವುದು ಹೇಗೆಂದು ಹಲವು ದಿನಗಳ ಮುಂಚೆಯೇ‌ ಫ್ಲ್ಯಾನ್ ಮಾಡಿಕೊಂಡಿದ್ದನಂತೆ.‌ ಇದನ್ನು ಭೇದಿಸಲು ಹೊರಟ ಖಾಕಿಪಡೆಗೆ ಶರಣಪ್ಪನ ಕಣ್ಣಿಗೆ ಬೀಳದ‌ ಖಾರದ ಪುಡಿ, ಒಡೆಯದೇ ಇರೋ‌ ಹೆಲ್ಮೆಟ್, ಕೊಂಚವೂ ಗಾಯವಾಗದ ದೇಹ, ತನ್ನ ಕುಟುಂಬಸ್ಥರಿಗೆ ಮಾಡಿದ ಸುಳ್ಳು ದೂರವಾಣಿ ಕರೆಗಳು, ಸುಳ್ಳು ಕೊಲೆಯ ಕಟ್ಟು ಕಥೆಯನ್ನು ಬಿಚ್ಚಿಟ್ಟಿದ್ದವು. ಇದೆಲ್ಲವನ್ನೂ ಭೇದಿಸಿದ ಖಾಕಿ, ವೈದ್ಯಕೀಯ ವರದಿ ಮತ್ತು FSL ವರದಿ ಆಧರಿಸಿ, ಶರಣಪ್ಪನ ಸಾವು ಕೊಲೆ ಅಲ್ಲ, ಇದು ಸೆಲ್ಫ್ ಸೂಸೈಡ್ ಅನ್ನೋದನ್ನು ಖಾತ್ರಿಪಡಿಸಿದೆ.

ಇದನ್ನೂ ಓದಿ | Drowns in Farm Pond: ಜಾನುವಾರು ಮೇಯಿಸುತ್ತಿದ್ದಾಗ ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ಶರಣಪ್ಪ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಪಕ್ಷಾತೀತವಾಗಿ‌ ಸಹಾಯ ಮಾಡುವ ವ್ಯಕ್ತಿಯಾಗಿದ್ದನಂತೆ. ರಾಜಕೀಯ ಕಾರಣಕ್ಕೆ ಜಗಳ ತೆಗೆಯುವ ಆಸಾಮಿಯಂತೂ‌ ಅಲ್ಲವೇ‌ ಅಲ್ಲ‌. ಆಗಾಗ ಪತ್ನಿ ಜತೆ ಕಲಹವಿದ್ದ ಕಾರಣ, ಶರಣಪ್ಪನ ಸಾವಿನ ಹಿಂದೆ ಪತ್ನಿಯ ಕೈವಾಡವಿದೆ‌ ಅಂತ, ಸಾವು ನಡೆದ ದಿ‌ನವೇ ಗ್ರಾಮಸ್ಥರು ತೀರ್ಮಾನಿಸಿಬಿಟ್ಟಿದ್ದರು. ಅಲ್ಲದೇ ತನ್ನ ಕುಟುಂಬಸ್ಥರಲ್ಲಿಯೂ ಪತ್ನಿಯಿಂದ ಕೊಲೆ ಸಂಚು ನಡೆದಿದೆ ಅನ್ನೋ ರೀತಿ ಶರಣಪ್ಪ ಕಥೆ ಸೃಷ್ಟಿ ಮಾಡಿದ್ದ. ಆದರೆ ಅದೆಲ್ಲವೂ ಇದೀಗ ಉಲ್ಟಾ ಹೊಡೆದಿದೆ. ಹಾವಿನ ದ್ವೇಷ ಹನ್ನೆರೆಡು ವರುಷ ಅಂತ ಹೇಳ್ತಾರೆ. ಆದರೆ ಶರಣಪ್ಪ ತನ್ನ ಸಾವಿನಲ್ಲಿಯೂ ಪತ್ನಿ‌ ಮೇಲೆ ದ್ವೇಷ ಸಾಧಿಸುವ ಪ್ರಯತ್ನ ವಿಫಲವಾಗಿದೆ.‌

Continue Reading

ರಾಜಕೀಯ

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

MLC Election: ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್‌ ರೆಡ್ಡಿ, ವಿಜಯನಗರ ಜಿಲ್ಲೆಯ ವಿವಿಧೆಡೆ ಸೋಮವಾರ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು. ಜಿಲ್ಲೆಯ ಹೂವಿನ ಹಡಗಲಿ, ಹರಪನಹಳ್ಳಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕು ಸೇರಿದಂತೆ ವಿವಿಧೆಡೆ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಅಂಗವಾಗಿ ಪ್ರಚಾರ ಕಾರ್ಯ ಕೈಗೊಂಡು, ಪದವೀಧರ ಮತದಾರರನ್ನು ಭೇಟಿಯಾಗಿ ಅವರು ಮತಯಾಚನೆ ಮಾಡಿದರು.

VISTARANEWS.COM


on

MLC North East Graduate Constituency Non Party Candidate Nara Pratap Reddy election campaign in Vijayanagara District
Koo

ವಿಜಯನಗರ: ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್‌ ರೆಡ್ಡಿ, ವಿಜಯನಗರ ಜಿಲ್ಲೆಯ ವಿವಿಧೆಡೆ ಸೋಮವಾರ ಚುನಾವಣಾ (MLC Election) ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ಜಿಲ್ಲೆಯ ಹೂವಿನ ಹಡಗಲಿ, ಹರಪನಹಳ್ಳಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕು ಸೇರಿದಂತೆ ವಿವಿಧೆಡೆ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಅಂಗವಾಗಿ ಪ್ರಚಾರ ಕಾರ್ಯ ಕೈಗೊಂಡು, ಪದವೀಧರ ಮತದಾರರನ್ನು ಭೇಟಿಯಾಗಿ ಅವರು ಮತಯಾಚನೆ ಮಾಡಿದರು.

ಇದನ್ನೂ ಓದಿ: Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಇದೇ ವೇಳೆ ಕೊಟ್ಟೂರಿನ ಇಂದು ಸ್ಕೂಲ್ ಅಂಡ್ ಕಾಲೇಜ್‌ಗೆ ತೆರಳಿ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿ, ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್‌ ರೆಡ್ಡಿ, ಏಳೂ ಜಿಲ್ಲೆಗಳಲ್ಲಿ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ ಇದೆ. ಒಬ್ಬ ಸಮರ್ಥ ಪ್ರತಿನಿಧಿ ಬೇಕೆನ್ನುವ ನಿರೀಕ್ಷೆಗಳಿವೆ. ಈ ಹಿಂದಿನ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳಿಂದ ಆಯ್ಕೆಯಾಗಿದ್ದ ವಿಧಾನ ಪರಿಷತ್‌ ಸದಸ್ಯರಿಂದ ಯಾವುದೇ ಅನುಕೂಲತೆಗಳು ಆಗಿಲ್ಲ ಎಂಬ ಕೊರಗು ಮತದಾರರಿಂದಲೇ ಕೇಳಿಬರುತ್ತಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ, ನಾನು ವಿಧಾನ ಪರಿಷತ್‌ನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಪದವೀಧರ ಮತದಾರರಲ್ಲಿ ಅವರು ಮನವಿ ಮಾಡಿದರು.

ಇದನ್ನೂ ಓದಿ: Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್‌ ರೆಡ್ಡಿ ಅವರು ಕೂದಲೆಳೆಯ ಅಂತರದಿಂದ ಪರಾಜಿತರಾಗಿದ್ದರು. ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಕ್ಷೇತ್ರದ ಎಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

Continue Reading

ಕರ್ನಾಟಕ

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Snake Rescue: ಭಾರೀ ಗಾತ್ರದ ಹೆಬ್ಬಾವೊಂದು ಶಿರಾ ತಾಲೂಕಿನ ಚಿಕ್ಕಸಂದ್ರ ಗ್ರಾಮದ ಬಳಿ ಭಾನುವಾರ ರಾತ್ರಿ ಪ್ರತ್ಯಕ್ಷವಾಗಿದ್ದು, ಮಾಜಿ ಸೈನಿಕರೊಬ್ಬರು ಹೆಬ್ಬಾವನ್ನು ಹಿಡಿದು ರಕ್ಷಿಸಿರುವ ಘಟನೆ ಜರುಗಿದೆ. ಮಾಜಿ ಸೈನಿಕ ಭಾನು ಪ್ರಕಾಶ್ ಅವರು, ಕಳೆದ ರಾತ್ರಿ ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಸಮಯದಲ್ಲಿ ರಸ್ತೆಯ ಬದಿ ಕಾಣಿಸಿಕೊಂಡಿದ್ದ ಭಾರೀ ಗಾತ್ರದ ಹೆಬ್ಬಾವನ್ನು ತಮ್ಮ ಸ್ನೇಹಿತರ ಸಹಾಯದಿಂದ ರಕ್ಷಿಸಿ, ಅರಣ್ಯ ಇಲಾಖೆ ಸಿಬ್ಬಂದಿಗೆ ಒಪ್ಪಿಸಿದ್ದಾರೆ.

VISTARANEWS.COM


on

Python spotted in Chikkasandra village of Shira taluk
Koo

ಶಿರಾ: ಭಾರೀ ಗಾತ್ರದ ಹೆಬ್ಬಾವೊಂದು ತಾಲೂಕಿನ ಚಿಕ್ಕಸಂದ್ರ ಗ್ರಾಮದ ಬಳಿ ಭಾನುವಾರ ರಾತ್ರಿ ಪ್ರತ್ಯಕ್ಷವಾಗಿದ್ದು, ಮಾಜಿ ಸೈನಿಕರೊಬ್ಬರು ಹೆಬ್ಬಾವನ್ನು ಹಿಡಿದು ರಕ್ಷಿಸಿರುವ (Snake Rescue) ಘಟನೆ ನಡೆದಿದೆ.

ಮಾಜಿ ಸೈನಿಕ ಭಾನು ಪ್ರಕಾಶ್ ಅವರು, ಕಳೆದ ರಾತ್ರಿ ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಸಮಯದಲ್ಲಿ ರಸ್ತೆಯ ಬದಿ ಕಾಣಿಸಿಕೊಂಡಿತ್ತು. ಈ ಭಾರೀ ಗಾತ್ರದ ಹೆಬ್ಬಾವನ್ನು ಅವರು ತಮ್ಮ ಸ್ನೇಹಿತರ ಸಹಾಯದಿಂದ ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: Drowns in Farm Pond: ಜಾನುವಾರು ಮೇಯಿಸುತ್ತಿದ್ದಾಗ ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ಈ ಹೆಬ್ಬಾವು ಸುಮಾರು 12 ಅಡಿ ಉದ್ದವಿದ್ದು, ಈ ಬೃಹದಾಕಾರದ ಹೆಬ್ಬಾವನ್ನು ನೋಡಿ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು. ಈ ವೇಳೆ ಮಾಜಿ ಸೈನಿಕ ಭಾನು ಪ್ರಕಾಶ್, ಈ ಹಾವನ್ನು ರಕ್ಷಿಸಿ, ಬುಕ್ಕಾಪಟ್ಟಣ ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಮಾಜಿ ಸೈನಿಕ ಭಾನು ಪ್ರಕಾಶ್, ಹಾವುಗಳನ್ನಾಗಲೀ ಅಥವಾ ಯಾವುದೇ ಪ್ರಾಣಿಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಅವನ್ನು ನಮ್ಮ ಮುಂದಿನ ಪೀಳಿಗೆಗಾಗಿ ಉಳಿಸಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಹೆಬ್ಬಾವನ್ನು ರಕ್ಷಿಸಿ, ಮಾನವೀಯತೆ ಮೆರೆದ ಮಾಜಿ ಸೈನಿಕ ಭಾನು ಪ್ರಕಾಶ್ ಅವರ ಕಾರ್ಯಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

ಚಿಕ್ಕಮಗಳೂರು: ಜಮೀನಿನಲ್ಲಿ ಕೆಲಸ ಮುಗಿಸಿ ಬಂದ ವ್ಯಕ್ತಿಯೊಬ್ಬ ಮುಳ್ಳು ಚುಚ್ಚಿದೆ ಎಂದು ತಿಳಿದು ರಾತ್ರಿ ಊಟ ಮಾಡಿ ಮಲಗಿದವ ಚಿರನಿದ್ರೆಗೆ ಜಾರಿದ್ದ. ಗ್ರಾಮದ ಗಣ್ಯ ನಾಯ್ಕ್ (44) ಮೃತ ದುರ್ದೈವಿ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಘಟನೆ (Snake Bite) ನಡೆದಿದೆ.

ಗಣ್ಯ ನಾಯ್ಕ್‌ ಜಮೀನಿನಲ್ಲಿ ಕೆಲಸ ಮಾಡುವಾಗ ಕಾಲಿಗೆ ಎರಡು ಬಾರಿ ಹಾವು ಕಚ್ಚಿತ್ತು. ಆದರೆ ಮುಳ್ಳು ಚುಚ್ಚಿರಬೇಕು ಏನು ಆಗಲ್ಲ ಎಂದು ನಿರ್ಲಕ್ಷಿಸಿದ್ದ. ಹಾವು ಕಚ್ಚಿದ್ದು ಗಮನಕ್ಕೆ ಬಾರದೆ ಮನೆಗೆ ಬಂದು ಊಟ ಮಾಡಿ ಮಲಗಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಹೆಣವಾಗಿದ್ದ.

ಇದನ್ನೂ ಓದಿ: Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಕುಟುಂಬಸ್ಥರು ಮಲಗಿದ್ದ ಗಣ್ಯನನ್ನು ಎಬ್ಬಿಸಲು ಮುಂದಾಗಿದ್ದಾರೆ. ಆದರೆ ಆತ ಅಲುಗಾಡದೆ ಇದ್ದಾಗ ಅನುಮಾನಗೊಂದು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾಗಿ ಹೇಳಿದ್ದಾರೆ. ಒಂದು ಸಣ್ಣ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Prajwal Revanna Case
ಕರ್ನಾಟಕ30 mins ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Narendra Modi
ದೇಶ54 mins ago

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

INDIA Bloc
ದೇಶ1 hour ago

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

Bomb Threat
ದೇಶ1 hour ago

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Suspicious Death
ಕರ್ನಾಟಕ1 hour ago

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

MLC North East Graduate Constituency Non Party Candidate Nara Pratap Reddy election campaign in Vijayanagara District
ರಾಜಕೀಯ2 hours ago

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

Python spotted in Chikkasandra village of Shira taluk
ಕರ್ನಾಟಕ2 hours ago

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Fortis Hospital doctors team performed complex surgery for three different diseases simultaneously
ಕರ್ನಾಟಕ2 hours ago

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

New Financial Rules
ವಾಣಿಜ್ಯ2 hours ago

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

Balkar Singh
ದೇಶ2 hours ago

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌