Cauvery Dispute: ರಾಜ್ಯಸಭೆಯಲ್ಲಿ ದೇವೇಗೌಡರು ಮಾತನಾಡುತ್ತಿದ್ದರೆ, ಖರ್ಗೆ ಮೌನವಾಗಿದ್ದರು ಎಂದ ಎಚ್‌ಡಿಕೆ - Vistara News

ಕರ್ನಾಟಕ

Cauvery Dispute: ರಾಜ್ಯಸಭೆಯಲ್ಲಿ ದೇವೇಗೌಡರು ಮಾತನಾಡುತ್ತಿದ್ದರೆ, ಖರ್ಗೆ ಮೌನವಾಗಿದ್ದರು ಎಂದ ಎಚ್‌ಡಿಕೆ

Cauvery Dispute: ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ಆಗ ರಾಜ್ಯದವರೇ ಆಗಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಎಲ್ಲಿ ಹೋಗಿದ್ದರು ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

VISTARANEWS.COM


on

EX Cm HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ದೇವೇಗೌಡರು ದಿಲ್ಲಿಯಲ್ಲಿ ಕಾವೇರಿ (Cauvery Dispute) ಬಗ್ಗೆ ಮಾತನಾಡುತ್ತಿದ್ದರೆ, ಕೆಲವರು ಮೈತ್ರಿ ಬಗ್ಗೆ ಚರ್ಚೆ ಮಾಡಲು ಹೋಗಿದ್ದಾರೆ ಎಂದು ಅಪಪ್ರಚಾರ ನಡೆಸುತ್ತಿದ್ದಾರೆ. ದೇವೇಗೌಡರು ಹೋಗಿರುವುದು ಕಾವೇರಿ ಬಗ್ಗೆ ಮಾತಾಡಲು ಅಲ್ಲ ಅಂತ ಮಂಡ್ಯದ ಮಹಾ ನಾಯಕರು ಒಬ್ಬರು ಹೇಳಿದ್ದಾರೆ. ಇವರೆಲ್ಲಾ ನಿನ್ನೆ ಮೊನ್ನೆ ಬಂದವರು. ದೇವೇಗೌಡರ ಕಮಿಟ್‌ಮೆಂಟ್ ಬಗ್ಗೆ ಇವರಿಗೇನು ಗೊತ್ತು? ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಬಿಡದಿಯ ತೋಟದ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭೆಯಲ್ಲಿ ದೇವೇಗೌಡರು ಮಾತಾಡಿದ್ದು ಎಲ್ಲ ಗಮನಿಸಿದ್ದೀರಿ. ಆಗ ರಾಜ್ಯದವರೇ ಆಗಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಎಲ್ಲಿ ಹೋಗಿದ್ದರು? ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ಹೋರಾಟ ನಡೆಸುತ್ತಿದ್ದಾರೆ. ಇವರಿಗೆ ಏನಾಗಿದೆ? ತಮಿಳುನಾಡಿನವರು ಈ ವಿಚಾರ ಪ್ರಸ್ತಾಪ ಮಾಡಿದಾಗ ಮಲ್ಲಿಕಾರ್ಜುನ ಖರ್ಗೆಯವರು ಯಾಕೆ ಮಾತಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಜಲ ಸಂಕಷ್ಟವನ್ನು ದೇವೇಗೌಡರು ಸದನದ ಮುಂದೆ ಇಟ್ಟರು. ಅವರು ಭಾಷಣ ಮಾತನಾಡುತ್ತಿದ್ದರೆ ತಮಿಳುನಾಡಿನ ಸದಸ್ಯರು ಪ್ರತಿಭಟನೆ ಮಾಡುತ್ತಿದ್ದರು. ಅವರನ್ನು ಎದುರಿಸಲು ಕೂತು ಮಾತನಾಡುತ್ತಿದ್ದ ದೇವೇಗೌಡರು ಎದ್ದು ನಿಂತರು. ಕೊನೆಪಕ್ಷ ತಮಿಳುನಾಡಿಗೆ ನೀರು ಹರಿಸುವ ಮುನ್ನ ಆ ದೃಶ್ಯವನ್ನಾದರೂ ಕಣ್ಮುಂದೆ ತಂದುಕೊಳ್ಳಬಹುದಿತ್ತಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಅವರು ಹರಿಹಾಯ್ದರು.

ಇದನ್ನೂ ಓದಿ | Land Auditing : ಬೆಂಗಳೂರಲ್ಲಿ 75000 ಎಕರೆ ಸರ್ಕಾರಿ ಭೂ ಒತ್ತುವರಿ; ಲ್ಯಾಂಡ್‌ ಆಡಿಟಿಂಗ್‌ಗೆ ಸಿಎಂ ಸೂಚನೆ

ಪ್ರತಿನಿತ್ಯವೂ ಈ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯುತ್ತಿದೆ. ರಾಜ್ಯಸಭೆಯಲ್ಲಿ ದೇವೇಗೌಡರು ಏಕಾಂಗಿ ಹೋರಾಟ ಮಾಡಬೇಕು. ಅವರಿಗೆ ಬೆಂಬಲ ಕೊಡಲು ಯಾರೂ ಗತಿಯಿಲ್ಲ ಅಲ್ಲಿ. ನಿಮ್ಮವರೂ ಇದಾರಲ್ಲಾ ರಾಜ್ಯಸಭೆಯಲ್ಲಿ. ಯಾಕೆ ಮಾತಾಡ್ತಾ ಇಲ್ಲ ಎಂದು ಕುಟುಕಿದರು.

ಸುಪ್ರೀಂ ಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಬೇಕಿತ್ತು

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀರು ಬಿಡಿ ಎಂದು ಸೂಚನೆ ನೀಡಿದಾಕ್ಷಣ ರಾಜ್ಯ ಸರ್ಕಾರವು ತಡಮಾಡದೆ ಸುಪ್ರೀಂ ಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಬೇಕಿತ್ತು. ಅದು ಬಿಟ್ಟು ತಮಿಳುನಾಡಿಗೆ ನೀರು ಬಿಡುವ ಆತುರ ಮಾಡಿದ್ದು ಯಾಕೆ? ಒಕ್ಕೂಟ ವ್ಯವಸ್ಥೆಯ ಬಗ್ಗೆಯೇ ಕನ್ನಡಿಗರಿಗೆ ಭ್ರಮನಿರಸನ ಆಗುತ್ತಿದೆ ಎಂದು ನಾವು ಅತ್ಯಂತ ಆಕ್ರೋಶದಿಂದಲೇ ಹೇಳಲೇಬೇಕು. ತಮಿಳುನಾಡು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇಲ್ಲಿ ನಾವು ಅಣೆಕಟ್ಟು ಕಟ್ಟಿದ್ದೇವೆ. ನಮ್ಮ ಜನರ ಹಣದಲ್ಲಿ ಅಣೆಕಟ್ಟು ನಿರ್ಮಾಣ ಮಾಡಿದ್ದೇವೆ. ಕೇಂದ್ರ ಸರ್ಕಾರ ನಮಗೇನೂ ಇದಕ್ಕೆ ಹಣ ಕೊಟ್ಟಿಲ್ಲ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆದೇಶ ಧಿಕ್ಕರಿಸಿದರೆ ಜೈಲಿಗೆ ಹಾಕ್ತಾರಾ?

ಅಣೆಕಟ್ಟು ಇರುವುದು ನಮ್ಮಲ್ಲಿ, ಅದನ್ನು ಕಟ್ಟಿದ್ದು ನಾವು. 200 ವರ್ಷಗಳಿಂದ ಅವರ ದಬ್ಬಾಳಿಕೆ ಸಹಿಸಿಕೊಂಡಿದ್ದೇವೆ. ಇದನ್ನು ಒಕ್ಕೂಟ ವ್ಯವಸ್ಥೆ ಎಂದು ಕರೆಯಬೇಕಾ? ಎಂದು ಕಿಡಿಕಾರಿದ ಅವರು, ಅಂತಿಮವಾಗಿ ನಾವು ಕೂಡ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಎಷ್ಟು ವರ್ಷ ಈ ದಬ್ಬಾಳಿಕೆ ಸಹಿಸಲು ಸಾಧ್ಯ? ಆದೇಶ ಧಿಕ್ಕರಿಸಿದರೆ ಜೈಲಿಗೆ ಹಾಕ್ತಾರಾ? ಹಾಕಲಿ ಬಿಡಿ. ಅರೆಸೇನಾ ಪಡೆಯನ್ನು ಕರೆಸುತ್ತಾರಾ? ಕರೆಸಲಿ ನೋಡೋಣ. ಹೀಗೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದ್ದರೆ ಸಹಿಸಲು ಸಾಧ್ಯವೇ? ಇದು ಯಾವ ಸೀಮೆ ಒಕ್ಕೂಟದ ವ್ಯವಸ್ಥೆ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಭೇದ ಮರೆತು ಒಗ್ಗೂಡಿ ಹೋರಾಟ ಮಾಡಲೇಬೇಕಿದೆ. ತಮಿಳುನಾಡಿನಲ್ಲಿ ಯಾವ ರೀತಿ ಎಲ್ಲರೂ ಇಂಥ ಸಂದರ್ಭಗಳಲ್ಲಿ ಒಗ್ಗೂಡುತ್ತಾರೆ? ಹಾಗೆಯೇ ನಾವೂ ಒಗ್ಗೂಡಬೇಕು. ಆದರೆ, ರಾಜಕೀಯ ಅಂತ ನಾವಿಲ್ಲಿ ಹೊಡೆದಾಡಿಕೊಂಡು ಕೂತಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಾನು ದೆಹಲಿಗೆ ಹೋದಾಗ ಈ ಬಗ್ಗೆ ಮಾತನಾಡುತ್ತೇನೆ. ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎನ್ನುವ ಕಾರಣಕ್ಕೆ ಇದರ ಬಗ್ಗೆ ಮಾತಾಡಲು ಹಿಂದೆಮುಂದೆ ನೋಡುವುದಿಲ್ಲ. ಮೈತ್ರಿ ಬಗ್ಗೆ ಮಾತಾಡುವ ಸಂದರ್ಭದಲ್ಲಿ ಈ ವಿಚಾರದ ಬಗ್ಗೆ ಕೂಡ ಚರ್ಚೆ ನಡೆಸುತ್ತೇನೆ. ರಾಜ್ಯದ ಹಿತವನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವುದಿಲ್ಲ. ಹಾಗೆಯೇ, ಬಿಜೆಪಿಯವರು ಧೈರ್ಯದಿಂದ ಮೋದಿ ಅವರ ಬಳಿ ಹೋಗಿ ಮಾತಾಡಲಿ. ನಾನೂ ಪ್ರಾಮಾಣಿಕವಾಗಿ ಸಲಹೆ ಕೊಡುತ್ತೇನೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ವಿನಾಕಾರಣ ಕಾಲಹರಣ ಮಾಡಿತು

ಅಗಸ್ಟ್ 10ರಂದು ಕಾವೇರಿ ಜಲ ನಿಯಂತ್ರಣ ಸಭೆ, ಅಗಸ್ಟ್ 11ರಂದು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಅತ್ತ ನೀರು ಬಿಡಲು ಕರ್ನಾಟಕಕ್ಕೆ ಪ್ರಾಧಿಕಾರ ಸೂಚನೆ ನೀಡಿದ ಮರುದಿನವೇ ತಮಿಳುನಾಡು ರಾಜ್ಯವು ತುರ್ತಾಗಿ ಸುಪ್ರೀಂ ಕೋರ್ಟ್‌ಗೆ ಹೋಗಬೇಕಿತ್ತು. ಹಾಗೆ ಮಾಡಲಿಲ್ಲ, ರಾಜ್ಯ ಸರ್ಕಾರ ವಿನಾಕಾರಣ ಕಾಲಹರಣ ಮಾಡಿತು ಎಂದು ಅವರು ನೇರ ಆರೋಪ ಮಾಡಿದರು.

ಸೋಮವಾರದಂದು ಮುಂದಿನ 15 ದಿನ ನೆರೆರಾಜ್ಯಕ್ಕೆ ನಿತ್ಯವೂ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಹೇಳಿದ ಕೂಡಲೇ ರಾಜ್ಯ ಸರ್ಕಾರ ಒಂದು ತುರ್ತು ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕಿತ್ತು. ಮಧ್ಯರಾತ್ರಿ ಆದರೂ ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕಿತ್ತು. ಎಷ್ಟೋ ಸಂದರ್ಭದಲ್ಲಿ ಮಧ್ಯರಾತ್ರಿ ಸಮಯದಲ್ಲಿಯೂ ಸುಪ್ರೀಂ ಕೋರ್ಟ್ ಕಲಾಪ ನಡೆದಿದೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ಪೂರ್ಣ ವಿಫಲವಾಗಿದೆ. ಸರ್ಕಾರಕ್ಕೆ ಕಾನೂನು ತಜ್ಞರು ಸಲಹೆ ಕೊಡಲಿಲ್ಲವಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಒಂದು ಕಡೆ ಗೌರಿ ಗಣೇಶ ಹಬ್ಬವನ್ನು ಜನರು ಆಚರಣೆ ಮಾಡುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವು ನೆರೆರಾಜ್ಯದ ಒತ್ತಡಕ್ಕೆ ಮಣಿದು ಮುಂದಿನ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡಲು ಆದೇಶ ಮಾಡಿದೆ. ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಪಟ್ಟು ಹಿಡಿಯಬೇಕಿತ್ತು ಎಂದರು.

ತಮಿಳುನಾಡು ಸುಪ್ರೀಂ ಕೋರ್ಟ್ ಮುಂದೆ ಹೋಗಿರುವುದರಿಂದ ಕೋರ್ಟ್ ಆದೇಶ ಬರುವವರೆಗೂ ಕಾಯಬೇಕಿತ್ತು. ಈಗ ನೀರು ಬಿಡಲು ತರಾತುರಿ ಏನಿದೆ? ಯಾಕೆ ಮೊದಲೇ ನೀರು ಬಿಡಬೇಕಿತ್ತು? ನಾನು ಸಿಎಂ ಆಗಿದ್ದಾಗ ಇಂಥ ಆದೇಶ ಬಂದಾಗ ರಿವ್ಯೂ ಪಿಟಿಷನ್ ಹಾಕಿದ್ದೆವು. ಅಂಥ ಅರ್ಜಿ ಸಲ್ಲಿಸುವುದಕ್ಕೆ ಇವರಿಗೆ ಏನಾಗಿತ್ತು? ಎಂದು ಖಾರವಾಗಿ ಹೇಳಿದರು.

ನಾವು ನೀರನ್ನು ಬಿಡದೇ ಇದ್ದರೆ, ಕೋರ್ಟ್ ನಲ್ಲಿ ನಮ್ಮ ವಿರುದ್ದ ಆದೇಶ ಬರಬಹುದು ಎಂದು ನಿನ್ನೆ ರಾತ್ರಿ ಯಿಂದಲೇ ತಮಿಳುನಾಡಿಗೆ ನೀರನ್ನು ಸರ್ಕಾರ ಹರಿಸುತ್ತಿದೆ. ಪ್ರಾಧಿಕಾರದ ಸೂಚನೆ ಬಂದ ಕೂಡಲೇ ವಿವೇಚನಾಹೀನರಾಗಿ ಜಲ ಸಂಪನ್ಮೂಲ ಸಚಿವರು ತರಾತುರಿಯಲ್ಲಿ ನೀರು ಹರಿಸುವ ನಿರ್ಧಾರ ಮಾಡಿರುವುದು ಸರಿಯಲ್ಲ. ಇಬ್ಬರು ನಮ್ಮ ರೈತರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಅವರು ದೂರಿದರು.

ಹಿಂದಿನ ಸರ್ಕಾರಗಳು ನೀರು ಬಿಟ್ಟಿಲ್ಲವೇ ಎಂದು ಸಚಿವರು ಕೇಳುತ್ತಿದ್ದಾರೆ. ಮಳೆಯ ಅಭಾವದಿಂದ ಕೃಷಿಗೆ ನೀರು ಕೊಡಲಾಗದ ಸ್ಥಿತಿಯಲ್ಲಿ ನಾವಿದ್ದೇವೆ. ಹಾಕಿರುವ ಬೆಳೆಗಳಿಗೆ ಬೆಂಕಿ ಇಡುವ ಸ್ಥಿತಿಗೆ ರೈತರು ಬಂದಿದ್ದಾರೆ. ಇದರ ಜತೆ ಜತೆಗೆ ನಮ್ಮ ರೈತರು ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಕಾವೇರಿ ವಿಚಾರದಲ್ಲಿ ಸಭೆಗಳು ನಡೆದಾಗ ನಮ್ಮ ರಾಜ್ಯದ ಹಿರಿಯ ಅಧಿಕಾರಿಗಳು ಸಭೆಗಳಲ್ಲಿ ಭಾಗವಹಿಸದೇ ಲಘುವಾಗಿ ತೆಗೆದುಕೊಂಡಿದ್ದಾರೆ. ಅಲ್ಲಿ ನೋಡಿದರೆ ತಮಿಳುನಾಡಿನ ಹತ್ತು ಹದಿನೈದು ಅಧಿಕಾರಿಗಳು ಸಭೆಗಳಲ್ಲಿ ಭಾಗವಹಿಸುತ್ತಾರೆ. ಪಾಪ.. ನಮ್ಮ ಅಧಿಕಾರಿಗಳಿಗೆ ಬಿಡುವೇ ಇಲ್ಲ. ಪ್ರಾಧಿಕಾರ ಮತ್ತು ಜಲ ನಿಯಂತ್ರಣ ಸಮಿತಿ ಸಭೆಗಳಿಗೆ ವರ್ಚುವಲ್ ಮೂಲಕ ಹಾಜರಾಗುತ್ತಾರೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಡ್ಯಾನುಬ್ ನದಿ ನೀರು ಹಂಚಿಕೆ ಎಸ್ಎಲ್‌ ಭೈರಪ್ಪ ಸಲಹೆಗೆ ಮಾಜಿ ಸಿಎಂ ಸಹಮತ

ಕನ್ನಡದ ದಿನಪತ್ರಿಕೆಯೊಂದರಲ್ಲಿ ಹಿರಿಯ ಕಾದಂಬರಿಕಾರ ಎಸ್ ಎಲ್‌ ಭೈರಪ್ಪ ಅವರು ಯುರೋಪಿನ ಎಂಟು ದೇಶಗಳಲ್ಲಿ ಹರಿಯುವ ಡ್ಯಾನುಬ್ ನದಿ ಹಾಗೂ ಅದರ ನೀರು ಹಂಚಿಕೆಯ ಬಗ್ಗೆ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪ ಮಾಡಿದರು.

ಎಸ್‌ಎಲ್ ಭೈರಪ್ಪ ಅವರ ಹೇಳಿಕೆ ಅರ್ಥಪೂರ್ಣವಾಗಿದೆ. ಅದಕ್ಕೆ ನನ್ನ ಸಹಮತ ಇದೆ. ಯುರೋಪಿನ ಎಂಟು ದೇಶಗಳ ನಡುವೆ ಇರುವ ವಿವಾದ ಇದು. ಆ ನದಿಯ ಬಗ್ಗೆ ಬಂದಿರುವ ಕೆಲ ವರದಿಗಳು, ವಿಶ್ಲೇಷಣೆಗಳ ಬಗ್ಗೆ ನಾನು ಓದುತ್ತಿದ್ದೇನೆ. ಕೋರ್ಟ್‌ಗಳಲ್ಲಿ ಆ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸಾದ್ಯವಿಲ್ಲ. ನೀವೇ ಪರಸ್ಪರ ಕುಳಿತು ಪರಿಹರಿಸಿಕೊಳ್ಳಿ ಅಂತ ಅಂತಾರಾಷ್ಟ್ರೀಯ ಕೋರ್ಟ್ ಹೇಳಿದೆ ಎಂಬುದನ್ನು ಎಂದು ಅನೇಕ ವರದಿಗಳಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ನಾವು ಅರಿತುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಅಷ್ಟೇ ಏಕೆ, ದೇವೇಗೌಡರು ಪ್ರಧಾನಿ ಆಗಿದ್ದಾಗ ಭಾರತ, ಬಾಂಗ್ಲಾದೇಶದ ನಡುವಿನ ಗಂಗಾ ನದಿ ನೀರಿನ ವಿವಾದವನ್ನು ಬಗೆಹರಿಸಿದರು. ಗುಜರಾತ್, ಮಧ್ಯಪ್ರದೇಶಕ್ಕೆ ದೊಡ್ಡ ಸಮಸ್ಯೆ ಆಗಿದ್ದ ನರ್ಮದಾ ನದಿ ಬಿಕ್ಕಟ್ಟನ್ನು ಸುನಾಯಾಸವಾಗಿ ಬಗೆಹರಿಸಿದರು. ಹೀಗಾಗಿ ಕಾವೇರಿ ಬಿಕ್ಕಟ್ಟನ್ನು ಪರಿಹಾರ ಮಾಡಿಕೊಳ್ಳಲು ಸಾಧ್ಯ ಇಲ್ಲವೇ? ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕಿದೆ ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ಸಂಯೋಜಿತ ಜಲಾಶಯ ನಿರ್ವಹಣಾ ವ್ಯವಸ್ಥೆ ಅಗತ್ಯ

ಅಂತಾರಾಜ್ಯ ಜಲ ವಿವಾದಗಳು ಪದೆ ಪದೇ ಕಗ್ಗಂಟು ಆಗುವುದನ್ನು ತಪ್ಪಿಸಲು ಸಂಯೋಜಿತ ಜಲಾಶಯ ನಿರ್ವಹಣಾ ವ್ಯವಸ್ಥೆ (integrated reservoir management system) ಅಗತ್ಯ. ಕೆಲವು ಕಡೆ ಈ ವ್ಯವಸ್ಥೆಯನ್ನು ಯಶಸ್ವಿಯಾಗಿ ಅಳವಡಿಸಿಕೊಂಡು ಮಾದರಿ ರೀತಿಯಲ್ಲಿ ನೀರು ಹಂಚಿಕೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರಕಾರ ಹಾಗೂ ಪ್ರಧಾನಮಂತ್ರಿಗಳು ಈ ನಿಟ್ಟಿನಲ್ಲಿ ಆಲೋಚನೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಇದನ್ನೂ ಓದಿ | Cauvery Water Dispute: ಕಾವೇರಿ ನೀರು ಬಿಟ್ಟು, ರೈತರ ಬದುಕಿನ ಜತೆ ಸರ್ಕಾರ ಚೆಲ್ಲಾಟ: ಎಚ್‌.ಡಿ.ಕುಮಾರಸ್ವಾಮಿ

ಅಲ್ಲದೆ, ಯುಎಸ್ ಬಿಆರ್ (United States Bureau of Reclamation-USBR) ಎಂಬ ಅಮೆರಿಕ ಸಂಸ್ಥೆಯ ನಿರ್ದೇಶನದಂತೆ ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಲು ಜಗತ್ತಿನ ಅನೇಕ ದೇಶಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ. ನೀರಿನ ಸದ್ಬಳಕೆ, ಹಂಚಿಕೆ ಬಗ್ಗೆ ಆ ಸಂಸ್ಥೆಯ ಮಾರ್ಗಸೂಚಿಯನ್ನು ನಾವೂ ಅಳವಡಿಸಿಕೊಳ್ಳಬಹುದೆ ಎನ್ನುವ ಬಗ್ಗೆಯೂ ಕೇಂದ್ರ ಸರ್ಕಾರ ಆಲೋಚನೆ ಮಾಡಬೇಕು ಅಥವಾ ಆ ಸಂಸ್ಥೆಯ ನೆರವನ್ನೆ ಪಡೆದು ಕಾವೇರಿ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು, ಅಲ್ಲವೇ ಎಂದು ಕುಮಾರಸ್ವಾಮಿ ಅವರು ಸಲಹೆ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Namaz On Road: ಹಿಂದೂ ಧರ್ಮೀಯರು ಕೂಡ ವೈಯಕ್ತಿಕ ಪೂಜೆ, ನಿತ್ಯಪೂಜೆಯಂಥ ಆಚರಣೆಗಳನ್ನು ಮನೆಯೊಳಗೆ, ದೇವರ ಕೋಣೆಯಲ್ಲಿ ಮಾಡಿಕೊಳ್ಳುತ್ತಾರೆ. ಎಂದೂ ಇತರರಿಗೆ ತೊಂದರೆ ಮಾಡುವಂತೆ ನೆರವೇರಿಸುವುದಿಲ್ಲ. ಇನ್ನು ಮುಸ್ಲಿಂ ಸಮುದಾಯದ ಉರೂಸ್‌ನಂಥ ಸಾರ್ವಜನಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರೂ ಸೇರುವಂತಹ ವಿಶಾಲ ಮೈದಾನಗಳಲ್ಲಿ ನಡೆಸುವ ಅವಕಾಶವಿದ್ದೇ ಇದೆ. ಇದಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಮಸೀದಿಗಳಲ್ಲಿ ಪ್ರತಿದಿನ ಐದು ಬಾರಿ ನಡೆಸುವ ಆಜಾನ್‌ ಅನ್ನು ಕೂಡ ಧ್ವನಿವರ್ಧಕದಲ್ಲಿ ಪ್ರಸಾರ ಮಾಡುವುದನ್ನು ಕೂಡ ಬಹುತೇಕ ಹಿಂದೂಗಳು ಯಾವುದೇ ರೀತಿಯಲ್ಲಿ ಆಕ್ಷೇಪಿಸಿಲ್ಲ. ಹೀಗಿರುವಾಗ ನಡುರಸ್ತೆಯಲ್ಲಿ ನಮಾಜ್ ಮಾಡಿ ಶಾಂತಿ ಕದಡುವುದು ಎಷ್ಟು ಸರಿ?

VISTARANEWS.COM


on

namaz on road
Koo

ಮಂಗಳೂರು ನಗರದ ರಸ್ತೆಯಲ್ಲಿ ನಮಾಜ್ (Namaz On Road) ಮಾಡಿದ ವಿಚಾರಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದು ಸಂಘಟನೆಗಳು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ನಮಾಜ್ ಮಾಡಿದವರ ವಿರುದ್ಧ ಕದ್ರಿ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಕಲಂ 341, 283, 143 ಜೊತೆಗೆ 149ರಡಿ ಸುಮೋಟೊ ಪ್ರಕರಣ ದಾಖಲಾಗಿದೆ. ಮೇ 24ರಂದು ನಗರದ ಕಂಕನಾಡಿಯ ಮಸೀದಿ ಎದುರು ಯುವಕರ ತಂಡ ನಮಾಜ್‌ ಮಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಘಟನೆ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಿಡಿಕಾರಿದ್ದರು. ಇಂತಹ ಘಟನೆ ಮರುಕಳಿಸಿದರೆ ಅದೇ ವೇಳೆಯಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದಾಗಿ ವಿಶ್ವ ಹಿಂದೂ ಪರಿಷದ್‌ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಸಕ್ರಿಯತೆ ಮೆಚ್ಚಬೇಕಾದ ಸಂಗತಿ.

ಕೆಲವರು ಇದನ್ನು ಸಾರ್ವಜನಿಕ ತಾಣಗಳಲ್ಲಿ ನಡೆಯುವ ಹಿಂದೂ ಧಾರ್ಮಿಕ ಆಚರಣೆಗಳ ಜೊತೆಗೆ ಹೋಲಿಸುತ್ತಿದ್ದಾರೆ. ನಮಾಜ್‌ ಸಂಪೂರ್ಣ ವೈಯಕ್ತಿಕ ಸಂಗತಿ ಹಾಗೂ ಅದೊಂದು ವೈಯಕ್ತಿಕ ಧಾರ್ಮಿಕ ಆಚರಣೆ. ಅದೇನೂ ಸಾರ್ವಜನಿಕ ಪ್ರಾರ್ಥನೆಯಾಗಲೀ, ಸಾರ್ವಜನಿಕ ಸತ್ಯನಾರಾಯಣ ಪೂಜೆಯಂತಹ ಕಾರ್ಯಕ್ರಮವಾಗಲೀ, ಮೊಸರು ಕುಡಿಕೆಯಂಥ ಮನರಂಜನಾ ಕಾರ್ಯಕ್ರಮವಾಗಲೀ ಅಲ್ಲ. ಆದ್ದರಿಂದ ಅದನ್ನು ಹಿಂದೂ ಧಾರ್ಮಿಕ ಆಚರಣೆಗಳ ಜೊತೆಗೆ ಹೋಲಿಸಲು ಸಾಧ್ಯವಿಲ್ಲ. ಯಾವುದೇ ಹಿಂದೂ ಹಬ್ಬಕ್ಕೆ ಸಂಬಂಧಿಸಿದ ಆಚರಣೆಯನ್ನೇ ಮಾಡುವುದಿದ್ದರೂ ರಸ್ತೆಯನ್ನು ಬಂದ್‌ ಮಾಡಿ ಯಾರೂ ಮಾಡುವುದಿಲ್ಲ. ಸಾರ್ವಜನಿಕ ಮೈದಾನ ಅಥವಾ ವೈಯಕ್ತಿಕ ಖಾಲಿ ಜಾಗಗಳಲ್ಲಿ, ರಸ್ತೆಯಲ್ಲಿ ಯಾವುದೇ ಅಡೆತಡೆಯಾಗದಂತೆ ಆಚರಿಸುತ್ತಾರೆ. ರಾಮನವಮಿಯಲ್ಲಿ ನಡೆಯುವ ಪಾನಕ ಪನಿವಾರ ವಿತರಣೆ ಕೂಡ ರಸ್ತೆಯಲ್ಲಿ ಹೋಗಿ ಬರುವವರ ದಣಿವನ್ನು ತಣಿಸುವಂತೆ ಆಪ್ಯಾಯಮಾನವಾಗಿರುತ್ತದೆಯೇ ಹೊರತು, ಕಿರಿಕಿರಿ ಮಾಡುವಂತೆ ಇರುವುದಿಲ್ಲ. ಆದ್ದರಿಂದ ಇದನ್ನು ಹಿಂದೂ ಆಚರಣೆಗಳ ಜೊತೆಗೆ ಹೋಲಿಸುವುದು ಕುತರ್ಕ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

ಹಿಂದೂ ಧರ್ಮೀಯರು ಕೂಡ ವೈಯಕ್ತಿಕ ಪೂಜೆ, ನಿತ್ಯಪೂಜೆಯಂಥ ಆಚರಣೆಗಳನ್ನು ಮನೆಯೊಳಗೆ, ದೇವರ ಕೋಣೆಯಲ್ಲಿ ಮಾಡಿಕೊಳ್ಳುತ್ತಾರೆ. ಎಂದೂ ಇತರರಿಗೆ ತೊಂದರೆ ಮಾಡುವಂತೆ ನೆರವೇರಿಸುವುದಿಲ್ಲ. ಇನ್ನು ಮುಸ್ಲಿಂ ಸಮುದಾಯದ ಉರೂಸ್‌ನಂಥ ಸಾರ್ವಜನಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರೂ ಸೇರುವಂತಹ ವಿಶಾಲ ಮೈದಾನಗಳಲ್ಲಿ ನಡೆಸುವ ಅವಕಾಶವಿದ್ದೇ ಇದೆ. ಇದಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಮಸೀದಿಗಳಲ್ಲಿ ಪ್ರತಿದಿನ ಐದು ಬಾರಿ ನಡೆಸುವ ಆಜಾನ್‌ ಅನ್ನು ಕೂಡ ಧ್ವನಿವರ್ಧಕದಲ್ಲಿ ಪ್ರಸಾರ ಮಾಡುವುದನ್ನು ಕೂಡ ಬಹುತೇಕ ಹಿಂದೂಗಳು ಯಾವುದೇ ರೀತಿಯಲ್ಲಿ ಆಕ್ಷೇಪಿಸಿಲ್ಲ. ಆದರೆ ಯಾವಾಗ ರಸ್ತೆಯಲ್ಲಿ ನಮಾಜ್‌ ಎಂಬುದು ಹೊಸದಾಗಿ ಆರಂಭವಾಯಿತೋ ಆಗ ಸ್ಥಳೀಯರು ಆತಂಕಕ್ಕೆ ಒಳಗಾಗುವುದು ಸಹಜ. ಇದೊಂದು ನಿತ್ಯದ ಪರಿಪಾಠವೇ ಆಗಿಬಿಟ್ಟರೆ, ಆಗ ನಿತ್ಯವೂ ದಾರಿಹೋಕರು ಕಿರಿಕಿರಿ ಅನುಭವಿಸಬೇಕಾಗುತ್ತದೆ. ಪ್ರತಿದಿನ ನಿರ್ದಿಷ್ಟ ಹೊತ್ತಿಗೆ ಇಂತಿಂಥ ರಸ್ತೆಯಲ್ಲಿ ಹೋಗಬಾರದು ಎಂಬ ಅಘೋಷಿತ ಕರ್ಫ್ಯೂ ಸೃಷ್ಟಿಯಾಗಿಬಿಡುತ್ತದೆ.

ಒಂದು ಸಮಾಜದಲ್ಲಿ ಅಸಹನೆ ಬೇರೂರಲು ಆರಂಭವಾಗುವುದು ಇಂಥ ಸಣ್ಣ, ಆದರೆ ಮೊಳಕೆಯಲ್ಲೇ ನಾವು ಹತ್ತಿಕ್ಕಬೇಕಾದ ಸಂಗತಿಗಳಿಂದಲೇ. ರಸ್ತೆಯಲ್ಲಿ ನಮಾಜ ಮಾಡುವುದನ್ನು ಸಾಂಪ್ರದಾಯಿಕ ಮುಸ್ಲಿಮರು ಕೂಡ ಸಮರ್ಥಿಸುವುದಿಲ್ಲ. ಮಸೀದಿಯ ಒಳಗೆ ಅಥವಾ ಮನೆಯ ಒಳಗೆ ನಡೆಯಬೇಕಾದ ಒಂದು ಖಾಸಗಿ ಧಾರ್ಮಿಕ ಸಂಗತಿಯನ್ನು ಸಾರ್ವಜನಿಕ ಮಾಡಿದರೆ ಅದರ ಘನತೆ ಕಳೆದುಹೋಗುತ್ತದೆ. ಅದಕ್ಕಿರಬಹುದಾದ ಪವಿತ್ರ ಆವರಣವೂ ನಾಶವಾಗುತ್ತದೆ. ನಮಾಜ್‌ ಎಂಬುದು ಮುಸ್ಲಿಮರಿಗೆ ಹೇಗೋ ಹಾಗೆಯೇ ಹಿಂದೂಗಳು ಕೂಡ ಗೌರವಿಸಬೇಕಾದ ಸಂಗತಿ. ಆ ಗೌರವ ಇರುವುದರಿಂದಲೇ, ರಸ್ತೆಯಲ್ಲಿ ಮಾಡುವ ಮೂಲಕ ಅದರ ಘನತೆಯನ್ನು ನಾಶ ಮಾಡದಿರಿ ಎಂಬ ಸಂದೇಶವನ್ನು ಹಿಂದೂ ಸಮಾಜದ ಹಲವರು ನೀಡುತ್ತಿದ್ದಾರೆ ಎಂದು ತಿಳಿಯಬೇಕು. ಈ ಮಾತನ್ನು ಮುಸ್ಲಿಂ ಸಮುದಾಯ ಒಪ್ಪಿ ಗೌರವಿಸಿದರೆ ಸಮಾಜದ ಸಾಮರಸ್ಯ ಕದಡದು.

Continue Reading

ಪ್ರಮುಖ ಸುದ್ದಿ

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

Prajwal Revanna Case: ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪೆನ್​ಡ್ರೈವ್ ಮೂಲಕ ಪ್ರಸರಣಗೊಂಡ ಅಶ್ಲೀಲ ವಿಡಿಯೊಗಳ ಪ್ರಕರಣದ (Prajwal Revanna Case) ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ವಾಪಸ್​ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಏರ್​ ಟಿಕೆಟ್​ ಬುಕ್ ಮಾಡಿದ ವಿವರ ‘ವಿಸ್ತಾರನ್ಯೂಸ್​’ಗೆ ಲಭ್ಯವಾಗಿದೆ. ಪ್ರಕರಣದ ತನಿಖೆ ನಡೆಸುವ ಎಸ್​ಐಟಿ ಪ್ರಜ್ವಲ್ ರೇವಣ್ಣಗಾಗಿ ಕಾಯುತ್ತಿದ್ದು ಭಾರತಕ್ಕೆ ಬಂದ ತಕ್ಷಣ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಟಿಕೆಟ್​ ಬುಕ್​ ಮಾಡಿಕೊಂಡಿದ್ದು ಅಲ್ಲಿಂದಲೇ ಅವರನ್ನು ಎಸ್​ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಿದ್ದಾರೆ.

ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ. ಎಸ್​ಐಟಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸುವುದಕ್ಕಿಂತ ಮೊದಲೇ ಅವರು ಭಾರತದಿಂದ ಹೊರಟ್ಟಿದ್ದರು. ಪ್ರಕರಣ ಕಾವು ಪಡೆದು ಪ್ರತಿಭಟನೆ ಹಾಗೂ ಧರಣಿಗಳು ನಡೆಯುವ ಸಂದರ್ಭದಲ್ಲಿ ದೇಶದಿಂದ ದೂರವಿದ್ದರು. ಎಸ್​ಐಟಿ ಪೊಲೀಸರು ಪ್ರಜ್ವಲ್​ ವಶಕ್ಕೆ ಪಡೆಯಲು ನಾನಾ ರಾಜತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕಾಯಬೇಕಾಯಿತು. ಅಂತಿಮವಾಗಿ ಕೇಂದ್ರ ಸರ್ಕಾರ ಸೇರಿದಂತೆ ಎಲ್ಲರ ಒತ್ತಾಯ ಹಾಗೂ ತಮಗೆ ಹಾಜರಾಗಲು ನೀಡಿದ ನೋಟಿಸ್​ನ ಗಡುವು ಮುಗಿದ ಕಾರಣ ಜರ್ಮನಿಯಿಂದ ಬರಲಿದ್ದಾರೆ.

ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

ಅಶ್ಲೀಲ ವಿಡಿಯೋ ವೈರಲ್ (pen drive case video viral) ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ ಬೇಕಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal Revanna Case) ನಾಪತ್ತೆಯಾಗಿ ಒಂದು ತಿಂಗಳ ಬಳಿಕ ಹೊಸ ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದಾರೆ. ಆದರೆ ಅವರು ದೇಶದೊಳಗೇ ಇದ್ದುಕೊಂಡೇ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದರೇ ಎಂಬ ಸಂಶಯವೂ ವ್ಯಕ್ತವಾಗಿದೆ.

ಇದನ್ನೂ ಓದಿ: Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

ನಿನ್ನೆ ಹೊಸ ವಿಡಿಯೋ ಮಾಡಿ ಹರಿಬಿಟ್ಟಿರುವ ಪ್ರಜ್ವಲ್‌, ಶುಕ್ರವಾರ, ಮೇ 31ರಂದು ಎಸ್‌ಐಟಿ (SIT) ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಸದ್ಯ ವಿಡಿಯೋವನ್ನು ಎಸ್‌ಐಟಿ ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದೆ. ವಿಡಿಯೋದ ಮೂಲ ಯಾವುದು, ಯಾವ ಐಪಿ ಅಡ್ರೆಸ್‌ನಿಂದ ಆಪ್‌ಲೋಡ್ ಆಗಿದೆ ಎಂಬುದರ ಪತ್ತೆಗೆ‌ ಎಸ್‌ಐಟಿ ಮುಂದಾಗಿದೆ. ವಿಡಿಯೋ ಮೊದಲು ತಲುಪಿದ್ದು ಯಾರಿಗೆ, ಎಲ್ಲಿಂದ, ವಿಡಿಯೋ ಮಾಡಿರುವ ಮದರ್ ಡಿವೈಸ್ ಮಾಹಿತಿ ಪತ್ತೆಗೆ ಎಸ್‌ಐಟಿ ಯತ್ನಿಸುತ್ತಿದೆ. ಶುಕ್ರವಾರ ಪ್ರಜ್ವಲ್‌ ಎಸ್ಐಟಿ ಮುಂದೆ ಹಾಜರಾಗದಿದ್ದಲ್ಲಿ ಮದರ್ ಡಿವೈಸ್ ಲೋಕೆಷನ್ ಪತ್ತೆಗೆ ಯತ್ನಿಸುವ ಸಂಭವ ಇದೆ. ಸದ್ಯ ಪ್ರಜ್ವಲ್ ರೇವಣ್ಣ ಬರುವವರೆಗೂ ಕಾಯಲು ಇಷ್ಟವಿಲ್ಲದ ಎಸ್ಐಟಿ, ಅದಕ್ಕೂ ಮುನ್ನವೇ ಪತ್ತೆ ಮಾಡಿ ಬಂಧಿಸುವ ಚಿಂತನೆ ನಡೆಸಿದೆ.

ಯಾಕೆ ಮೇ 31 ?

ಮೇ 31ರಂದು ಪ್ರಜ್ವಲ್‌ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್‌ಪೋರ್ಟ್‌ನ (Diplomatic passport) ಅವಧಿ ಅಂತ್ಯವಾಗಲಿದೆ. ಈ ಸಲ ಚುನಾಯಿತರಾದರೆ ಅವರು ಹೊಸದಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಹಳೆಯ ಪಾಸ್‌ಪೋರ್ಟ್‌ನಲ್ಲಿ ಓಡಾಡಲು ಸಾಧ್ಯವಿಲ್ಲ. ಇದೇ ಕಾರಣಕ್ಕಾಗಿ ಪ್ರಜ್ವಲ್‌ ಮೇ 31ನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ವಿರುದ್ಧದ ಎಸ್ಐಟಿ ತನಿಖೆ ಮಹತ್ವದ ಹಂತ ತಲುಪಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಲಾಗಿದೆ. ಪ್ರಜ್ವಲ್ ರೇವಣ್ಣ ಬಂದ ಬಳಿಕ ತನಿಖೆ ಮಾಡಬೇಕಿದೆ. ಅಶ್ಲೀಲ ವಿಡಿಯೋಗಳನ್ನು ಮಾಡಲಾದ ಡಿವೈಜ್ ಅನ್ನು ಪತ್ತೆಹಚ್ಚಬೇಕಿದೆ. ಅಶ್ಲೀಲ ವಿಡಿಯೋಗಳ ಕುರಿತು ಫಾರೆನ್ಸಿಕ್ ರಿಪೋರ್ಟ್‌ಗಾಗಿ ಎಸ್ಐಟಿ ಕಾಯುತ್ತಿದೆ. FSL ರಿಪೋರ್ಟ್ ಎಸ್ಐಟಿ ಕೈ ಸೇರಿದ ಕೂಡಲೇ ಚಾರ್ಜ್‌ಶೀಟ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಹೇಳಿಕೆ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ.

ಜೂನ್ ಮೊದಲ ವಾರದಲ್ಲಿ ಪ್ರಜ್ವಲ್ ಬಂದಿದ್ದೇ ಆದಲ್ಲಿ ತನಿಖೆ ನಡೆಸಿ ಸ್ಟೇಟ್ಮೆಂಟ್ ದಾಖಲಿಸಲಿದ್ದಾರೆ. ಒಂದು ವೇಳೆ ಪ್ರಜ್ವಲ್ ಜೂನ್‌ನಲ್ಲಿ ವಾಪಸ್ ಬರದೇ ಇದ್ದಲ್ಲಿ, ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ನ್ಯಾಯಾಲಯಕ್ಕೆ ಅಬ್‌ಸ್ಕಾಂಡ್‌ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ.

ಗೃಹ ಸಚಿವರು ಏನೆಂದರು?

ಪ್ರಜ್ವಲ್ ವಿಡಿಯೋ ರಿಲೀಸ್ ವಿಚಾರದಲ್ಲಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ (home minister G Parameshwara) ಹೇಳಿಕೆ ನೀಡಿದ್ದಾರೆ. “ಮೇ 31ರಂದು ಪ್ರಜ್ವಲ್‌ ಸಂಸದ ಸ್ಥಾನ ಅಂತ್ಯವಾಗಲಿದೆ. ಆಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಸೀಜ್ ಆಗುತ್ತದೆ. ಇದೆಲ್ಲವನ್ನು ತಿಳಿದುಕೊಂಡು ಬರಲು ಯೋಚನೆ ಮಾಡಿದ್ದಾರೆ ಅನ್ಸುತ್ತೆ” ಎಂದಿದ್ದಾರೆ.

“ದೇಶದೊಳಗೆ ಏನು ಪ್ರಯತ್ನ ‌ಮಾಡಬೇಕು ನಾವು ಮಾಡಿದ್ದೇವೆ. ಕೇಂದ್ರ ಸರ್ಕಾರಕ್ಕೆ ಬರೆದಿದ್ದೇವೆ, ಕೇಂದ್ರ ಗೃಹ ಇಲಾಖೆಗೆ ವಾರೆಂಟ್ ಬಗ್ಗೆ ತಿಳಿಸಿದ್ದೇವೆ. ಬ್ಲೂ ಕಾರ್ನರ್ ನೋಟೀಸ್ (blue corner notice) ಇಶ್ಯೂ ಆಗಿದೆ. ಪ್ರಜ್ವಲ್‌ ಬರದೇ ಹೋದರೆ ಇಂಟರ್‌ಪೋಲ್‌ನವರು (Interpol) ಲೊಕೇಶನ್‌ ತಿಳಿದುಕೊಂಡು ನಮಗೆ ಮಾಹಿತಿ ನೀಡುವುದು ಎಂದಿತ್ತು. ಇಂತಹ ಸಂದರ್ಭದಲ್ಲಿ ನಾನು ಬರ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸಲ ಸುಮ್ಮನಿರೋಲ್ಲ ಎಸ್‌ಐಟಿ

ಪ್ರಜ್ವಲ್ ರೇವಣ್ಣ ವಿಡಿಯೋ ಬಿಟ್ಟ ಬೆನ್ನಲ್ಲೇ ಎಸ್ಐಟಿ ಅಲರ್ಟ್ ಆಗಿದೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಕಳೆದ ಬಾರಿ ಕೂಡ ಪ್ರಜ್ವಲ್ ರೇವಣ್ಣ ಇದೇ ರೀತಿ ಕಾಲಾವಕಾಶ ಕೋರಿದ್ದರು. ಹೇಳಿದಂತೆ ವಿಚಾರಣೆಗೆ ಹಾಜರಾಗದೆ ದೂರ ಉಳಿದಿದ್ದರು. ಈ ಬಾರಿಯೂ ಹಾಗೆಯೇ ಮಾಡುವ ಸಾಧ್ಯತೆ ಕೂಡ ಇದೆ. ಹೀಗಾಗಿ ಈಗಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್‌ಗೆ ಎಸ್‌ಐಟಿ ಮುಂದಾಗಿದೆ.

ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಇಂಟರ್‌ಪೋಲ್‌ಗೂ ಎಸ್‌ಐಟಿ ಮಾಹಿತಿ ಕೋರಲಿದೆ. ಈಗಾಗಲೇ ಪ್ರಜ್ವಲ್‌ ವಿರುದ್ಧ ಲುಕ್‌ಔಟ್‌ ನೋಟೀಸ್‌ (lookout notice) ಹಾಗೂ ಬ್ಲೂ ಕಾರ್ನರ್‌ ನೋಟೀಸ್‌ ಜಾರಿ ಮಾಡಲಾಗಿದೆ. ಆತನ ವಿರುದ್ಧ ಆರೆಸ್ಟ್ ವಾರಂಟ್ ಕೂಡ ಇದೆ. ಹೀಗಾಗಿ ಎಸ್‌ಐಟಿ ಒಂದು ತಿಂಗಳಿಂದ ಏರ್‌ಪೋರ್ಟ್‌ನಲ್ಲೇ ಠಿಕಾಣಿ ಹೂಡಿದೆ. ಏರ್‌ಪೋರ್ಟ್‌ನಿಂದ ಹೊರಕ್ಕೆ ಕಾಲಿಡುವ ಮೊದಲೇ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣನನ್ನು ವಶಕ್ಕೆ ಪಡೆದು ಎಸ್‌ಐಟಿಗೆ ಒಪ್ಪಿಸಲಿದ್ದಾರೆ.

Continue Reading

ಕರ್ನಾಟಕ

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Chakravarthy Sulibele: ಭಾರತ ಬಡತನದ ರಾಷ್ಟ್ರ, ಇಲ್ಲಿ ಧಾರ್ಮಿಕ ಸ್ವಾತಂತ್ರ್ಯವಿಲ್ಲ, ಮೋದಿ ನೇತೃತ್ವದ ಬಿಜೆಪಿ ಈ ಬಾರಿ ಸೋಲುತ್ತದೆ ಎಂದು ಸುಳ್ಳನ್ನು ಸತ್ಯವೆಂದು ಎಲ್ಲ ಕಡೆಗಳಲ್ಲೂ ಹಬ್ಬಿಸುವ ಕೆಲಸ ನಡೆಯುತ್ತಿದೆ ಎಂದು ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು. ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ. ಆದರೆ ಪ್ರಶಸ್ತಿ ರೂಪದಲ್ಲಿ ನೀಡಲಾದ 1 ಲಕ್ಷ ರೂ. ಹಣವನ್ನು ಗೋಶಾಲೆ ಅಭಿವೃದ್ಧಿಗೆ ನೀಡುವುದಾಗಿ ಚಕ್ರವರ್ತಿ ಸೂಲಿಬೆಲೆ ಘೋಷಿಸಿದರು.

VISTARANEWS.COM


on

chakravarthy sulibele
Koo

ಮೈಸೂರು: ಮೈಸೂರಿನ ವೀರ ಸಾವರ್ಕರ್ ಪ್ರತಿಷ್ಠಾನವು ಮಂಗಳವಾರ ಸಂಜೆ ವಾಗ್ಮಿ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರಿಗೆ ‘ವೀರ ಸಾವರ್ಕರ್ ಸಮ್ಮಾನ್-2024’ ಪ್ರಶಸ್ತಿ ಪ್ರದಾನ ಮಾಡಿತು. ಕಲಾಮಂದಿರದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಕೊಡವವರು ನಿಲ್ಲುವುದು, ಸ್ವೀಕರಿಸುವುದು ಕೂರುವುದು ವಾಡಿಕೆ. ಆದರೆ ಚಕ್ರವರ್ತಿ ಸೂಲಿಬೆಲೆ ಅವರು ಭೈರಪ್ಪ ಅವರನ್ನು ಕೂರಿಸಿ ತಾವು ಮಂಡಿಯೂರಿ ಪ್ರಶಸ್ತಿ ಸ್ವೀಕರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಎಸ್​ ಎಲ್ ಭೈರಪ್ಪ ಅವರು, ತ್ರಿವಿಧ ದಾಸೋಹಿಯಾಗಿ ತುಮಕೂರಿನ ಸಿದ್ಧಗಂಗಾ ಶ್ರೀಗಳು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದ್ದರೂ, ಅವರಿಗೆ ಮರಣೋತ್ತರ ಭಾರತ ರತ್ನ ನೀಡದಿರುವುದು ಇಂದಿಗೂ ನನ್ನನ್ನು ಕಾಡುತ್ತಿದೆ ಎಂದು ಹೇಳಿದರು.

ಕೆಲವು ಸ್ವಾಮೀಜಿಗಳು ತಮಗೆ ಡಾಕ್ಟರೇಟ್‌ ಕೊಡಲಿ ಎಂದು ಹಪಹಪಿಸುತ್ತಾರೆ. ಆದರೆ ತುಮಕೂರಿನ  ಸಿದ್ದಗಂಗಾ ಶ್ರೀಗಳು ಯಾವುದೇ ಅಪೇಕ್ಷೆ ಇಲ್ಲದೆ, ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಮಕ್ಕಳ ಜಾತಿ ಯಾವುದೆಂದು ಕೇಳದ ಸಿದ್ಧಗಂಗಾ ಸ್ವಾಮೀಜಿ ಅವರು, ಶಿಕ್ಷಣ ದಾಸೋಹ, ಅನ್ನ ದಾಸೋಹ ಮಾಡಿದ್ದಾರೆ. ಆ ಮೂಲಕ ಸಿದ್ದಗಂಗಾ ಸ್ವಾಮೀಜಿ ಅವರು ಸಮಾಜದ ಸೇವೆಗೆ ತಮ್ಮನ್ನು ಮುಡಿಪಾಗಿ ಇಟ್ಟಿದ್ದರು. ನಾನು ಸಹ ಅವರ ಕಾಲು ಮುಟ್ಟಿ ನಮಸ್ಕರಿಸಿದ್ದೆ. ಆದರೆ ದುರಂತದ ಸಂಗತಿಯೆಂದರೆ ಸಾವರ್ಕರ್‌ ಅವರನ್ನು ಮೈಲಿಗೆಯಲ್ಲಿ ಇಟ್ಟಂತೆ ಸಿದ್ದಗಂಗಾ ಶ್ರೀಗಳನ್ನು ಇಡಲಾಗಿದೆ ಅನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಪ್ರಾಪಗಾಂಡ ವಾರ್​

ಸಮಾರಂಭದಲ್ಲಿ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಇಂದು ಯಾವ ದೇಶವು ಭಾರತದ ಮೇಲೆ ಪ್ರತ್ಯಕ್ಷ ಯುದ್ಧ ಮಾಡಲು ಸಾಧ್ಯವಾಗದ ಪರಿಣಾಮ ಸುಳ್ಳನ್ನು ಪದೇ ಪದೇ ಹೇಳಿ ಸತ್ಯ ಎಂದು ಪ್ರಚುರಪಡಿಸುವ ಪ್ರಾಪಗಾಂಡ ವಾರ್‌ ನಡೆಸಲಾಗುತ್ತಿದೆ. ಭಾರತದ ಬಡತನದ ರಾಷ್ಟ್ರ, ಇಲ್ಲಿ ಧಾರ್ಮಿಕ ಸ್ವಾತಂತ್ರ್ಯವಿಲ್ಲ. ಮೋದಿ ಮತ್ತು ಬಿಜೆಪಿ ಈ ಬಾರಿ ಸೋಲುತ್ತಾರೆ ಎಂದು ಸುಳ್ಳನ್ನು ಸತ್ಯವೆಂದು ಎಲ್ಲ ಕಡೆಗಳಲ್ಲೂ ಹಬ್ಬಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ. ಆದರೆ ಪ್ರಶಸ್ತಿ ರೂಪದಲ್ಲಿ ನೀಡಲಾದ 1 ಲಕ್ಷ ರೂ. ಹಣವನ್ನು ಗೋಶಾಲೆ ಅಭಿವೃದ್ಧಿಗೆ ನೀಡುವುದಾಗಿ ಚಕ್ರವರ್ತಿ ಸೂಲಿಬೆಲೆ ಘೋಷಿಸಿದರು.

ಸಮಾರಂಭದಲ್ಲಿ ಶಾಸಕ ಟಿ.ಎಸ್‌. ಶ್ರೀವತ್ಸ, ಮಾಜಿ ಮೇಯರ್‌ ಶಿವಕುಮಾರ್‌, ವೀರ ಸಾವರ್ಕರ್‌ ಪ್ರತಿಷ್ಠಾನದ ಅಧ್ಯಕ್ಷೆ ಯಶಸ್ವಿನಿ ಎಸ್‌., ಆದಿತ್ಯ ಅಧಿಕಾರಿ ಆಸ್ಪತ್ರೆ ಮುಖ್ಯಸ್ಥ ಡಾ. ಚಂದ್ರಶೇಖರ್‌ ಮತ್ತಿತರರು ಇದ್ದರು.

Continue Reading

ಪ್ರಮುಖ ಸುದ್ದಿ

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Cyber Crime: ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Cyber Crime
Koo

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಫೋಟೊಗಳನ್ನು ಮಾರ್ಫ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್​ ಮಾಡಿದ್ದ (Cyber Crime) ಆರೋಪಿಯನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂದಿಸಿದ್ದಾರೆ. ಈತ ಅಪ್ರಾಪ್ತ ಬಾಲಕಿಯರ ಫೋಟೋಗಳನ್ನು ಬಿಟ್ಟ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಪ್ರಕಾರ ಜೈಲು ಸೇರಿದ್ದಾನೆ.

ಆರೋಪಿ ಫೋಟೋಗಳನ್ನು ಮಾರ್ಫ್ ಮಾಡಿ ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

ಬೆಳ್ಳೂರು ಹಿಂದು ಯುವಕನ ಮೇಲೆ ಹಲ್ಲೆ; 11ಕ್ಕೂ ಹೆಚ್ಚು ಮಂದಿ ಮೇಲೆ ಕೇಸ್‌

ಮಂಡ್ಯ: ಜಿಲ್ಲೆಯ ಬೆಳ್ಳೂರು ಪಟ್ಟಣದಲ್ಲಿ (Mandya News) ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಬೆಳ್ಳೂರಿನ ಅಭಿಲಾಷ್ ಎಂಬಾತನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಚೇರ್, ಮಾರಕಾಸ್ತ್ರಗಳಿಂದ ಹಲ್ಲೆ (Assault case) ಮಾಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ: Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11 ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading
Advertisement
namaz on road
ಪ್ರಮುಖ ಸುದ್ದಿ15 mins ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ15 mins ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ6 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ7 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ7 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ7 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ8 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ8 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ8 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ8 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು18 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌