Amit Shah : ಕಾಂಗ್ರೆಸ್‌ ಹಿಡಿತದಲ್ಲಿರುವ ಕುಂದಗೋಳದಲ್ಲಿ ಅಮಿತ್‌ ಶಾ ರೋಡ್‌ ಶೋ: ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ - Vistara News

ಧಾರವಾಡ

Amit Shah : ಕಾಂಗ್ರೆಸ್‌ ಹಿಡಿತದಲ್ಲಿರುವ ಕುಂದಗೋಳದಲ್ಲಿ ಅಮಿತ್‌ ಶಾ ರೋಡ್‌ ಶೋ: ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ

ಕೆಎಲ್‌ಇ ಸೊಸೈಟಿಯ ಬಿ.ವಿ. ಭೂಮರಡ್ಡಿ ಇಂಜಿನಿಯರಿಂಗ್‌ ಕಾಲೇಜು ಅಮೃತಮಹೋತ್ಸವದಲ್ಲಿ ಭಾಗವಹಿಸಿದ ನಂತರ ಕುಂದಗೋಳದ ರಥಯಾತ್ರೆಯಲ್ಲಿ ಅಮಿತ್‌ ಶಾ ಪಾಲ್ಗೊಂಡರು.

VISTARANEWS.COM


on

amit-shah-road show in kundagol
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕುಂದಗೋಳ: ಕಾಂಗ್ರೆಸ್‌ ಶಾಸಕರನ್ನು ಹೊಂದಿರುವ ಧಾರವಾಡದ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಒಂದು ಕಿಲೋಮೀಟರ್‌ ರಥಯಾತ್ರೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ ಭಾಗವಹಿಸಿದರು.

ವಿಶೇಷವಾಗಿ ಅಲಂಕರಿಸಲಾಗಿದ್ದ ರಥವನ್ನೇರಿದ ಅಮಿತ್‌ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ರಾಜ್ಯ ಬಿಜೆಪಿ ಪ್ರಭಾರಿ ಅರುಣ್‌ ಸಿಂಗ್‌ ಸಾಥ್‌ ನೀಡಿದರು.

ರೋಡ್ ಶೋ ನಡೆದ ನಡೆಸುತ್ತಿರುವ ಮಾರ್ಗದಲ್ಲಿ ಪೊಲೀಸರ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪ್ರವಾಸಿ ಮಂದಿರದ ಬಳಿಯಿಂದ ಗಾಳಿ ಮಾರೆಮ್ಮ ದೇವಸ್ಥಾನದವರೆಗೆ ರೋಡ್ ಷೋ ನಡೆಯಿತು. ರಸ್ತೆಯುದ್ದಕ್ಕೂ ಬಿಜೆಪಿ ಧ್ವಜ, ಕೇಸರಿ ಬಂಟಿಂಗ್‌ ಕಟ್ಟಿದ್ದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ರಸ್ತೆಯ ಇಕ್ಕೆಲಗಳಲ್ಲೂ ನಿಂತು ಸಾರ್ವಜನಿಕರು ಕೈಬೀಸಿದರು.

ರೋಡ್‌ ಶೋ ನಂತರ ಮಾತನಾಡಿದ ಅಮಿತ್‌ ಶಾ, ದೇಶದಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಿದ್ದೇವೆ. ಕಾಶ್ಮೀರದಲ್ಲಿ 370 ತೆಗೆದು ಹಾಕಿದ್ದು ಮೋದಿ. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗುತ್ತಿದೆ. ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಶಾ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಕರ್ನಾಟಕವನ್ನು ದೆಹಲಿ ನಾಯಕರು ಎಟಿಎಮ್ ಮಾಡಿಕೊಂಡಿದ್ದರು. ಜೆಡಿಎಸ್ ಕಾಂಗ್ರೆಸ್ ಈ ರಾಜ್ಯವನ್ನು ಲೂಟಿ ಹೊಡೆದಿವೆ. ಜೆಡಿಎಸ್ ಕುಟುಂಬ ರಾಜಕಾರಣದಿಂದ ರಾಜ್ಯ ನಲುಗಿದೆ. ಇದೆಲ್ಲಕ್ಕೂ ಬಿಜೆಪಿಯೊಂದೇ ಪರಿಹಾರ.
ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಅಮಿತ್‌ ಶಾ ಕರೆ ನೀಡಿದರು.

ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾದ ಅಮಿತ್ ಶಾ, ಕುಂದಗೋಳ ಪಟ್ಟಣದಲ್ಲಿರುವ ಬಸವರಾಜ್ ಹಂಚಿನಮನಿ ಅವರ ಮನೆಯ ಗೋಡೆ ಮೇಲೆ ಬರಹಕ್ಕೆ ಬಣ್ಣ ಹಚ್ಚಿದರು. ನಂತರ ಗೋಡೆಗೆ ಕರಪತ್ರ ಅಂಟಿಸಿದರು. ಹಂಚಿನಮನಿ ಅವರ ಕುಟುಂಬದವರು ಅಮಿತ್‌ ಶಾ ಅವರಿಗೆ ಆರತಿ ಬೆಳಗಿ, ತಿಲಕವಿಟ್ಟು ಸ್ವಾಗತಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

Neha Murder Case: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣ (Neha Murder Case) ದೇಶಾದ್ಯಂತ ಸದ್ದು ಮಾಡುತ್ತಿದೆ. ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಮಾತನಾಡಿರುವ ಬಾಬಾ ಸಾಹೇಬ್‌ ಸುಬಾನಿ, ನನ್ನ ಮಗ ಮಾಡಿದ ತಪ್ಪಿಗೆ ನಾನು ಮುನವಳ್ಳಿ ಹಾಗೂ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ. ನಮ್ಮನ್ನು ಮುನವಳ್ಳಿ ಜನ ಬೆಳೆಸಿದ್ದಾರೆ. ಅವರ ಋಣ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ನಮ್ಮೂರಿನ ಜನ ನನ್ನನ್ನು ಕ್ಷಮಿಸಬೇಕು. ದಯವಿಟ್ಟು ಯಾವುದೇ ಯುವಕರು, ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಬಾರದು ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ನಾನು ಯಾವತ್ತೂ ಯಾರಿಗೂ ಕೆಟ್ಟದ್ದು ಮಾಡಿಲ್ಲ, ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಹೀಗಾಗಿ ನನ್ನನ್ನು ಮುನವಳ್ಳಿ ಗ್ರಾಮದ ಜನರು ಕ್ಷಮಿಸಬೇಕು ಎಂದು ಕಣ್ಣೀರು ಹಾಕಿರುವ ಅವರು, ನಾನು ಸಾಯೋವರೆಗೆ ಮುನವಳ್ಳಿ ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಯಾರೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡುತ್ತಾರೋ ಅಂತಹವರಿಗೆ ಮುಂದಿನ ದಿನಗಳಲ್ಲಿ ಯಾರೂ ಅಂಥ ಕೃತ್ಯ ಮಾಡಬಾರದು, ಆ ರೀತಿಯ ಶಿಕ್ಷೆ ಆಗಬೇಕು. ಇಂತಹ ಘಟನೆಗಳಿಂದ ನಾಳಿನ ದಿನ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಲು ಜನ ಭಯಪಡುತ್ತಾರೆ. ಹೀಗಾಗಿ ನನ್ನ ಜನ್ಮಭೂಮಿ ಮುನವಳ್ಳಿ, ಅವರಿಗಾಗಿ ನಾನು ಬದುಕುತ್ತೇನೆ ಎಂದು ಹೇಳಿದ್ದಾರೆ.

ವರ್ಷದ ಹಿಂದೆ ನೇಹಾ ಅವರ ತಂದೆ ನನಗೂ ಎರಡು ಬಾರಿ ಫೋನ್‌ ಮಾಡಿದ್ದರು. ನನ್ನ ಮಗಳಿಗೆ ನಿಮ್ಮ ಮಗ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಅವರ ತುಂಬಾ ಒಳ್ಳೆಯವರು. ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವೆ ಎಂದು ಮಗ ಹೇಳಿದ್ದ. ಆದರೆ, ನಾನು ಮಾಡಲ್ಲ ಎಂದಿದ್ದೆ. ಹೀಗಾಗಿ ಅವನು ಜಗಳ ಮಾಡಿದ್ದ. ಈಗ ಅವನು ನನ್ನ ಬಳಿ ಮಾತನಾಡಲ್ಲ. ನಮ್ಮ ದಾಂಪತ್ಯ ಜೀವನ ಸರಿಯಿಲ್ಲದ ಕಾರಣ ಅವರ ತಾಯಿ ಜತೆ ಅವನು ಪ್ರತ್ಯೇಕವಾಗಿ ವಾಸವಾಗಿದ್ದ ಎಂದು ಹೇಳಿದರು.

ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ನಾನು ಸೈನಿಕನಾಗಿ ದೇಶ ಸೇವೆ ಸಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ, ನಮ್ಮ ತಾಯಿ ಬೇಡ ಅಂದಿದ್ದರು. ಹೀಗಾಗಿ ನನ್ನ ಮಗನನ್ನು ಸೇನೆಗೆ ಸೇರಿಸಬೇಕು ಅಂದುಕೊಂಡಿದ್ದೆ. ಆದರೆ ಅವನು ಈ ರೀತಿಯ ಕೆಲಸ ಮಾಡಿದ್ದಾನೆ ಎಂದು ತಿಳಿಸಿದರು.

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

Rain News : ಹಲವೆಡೆ ಸುರಿಯುತ್ತಿರುವ ಬಿರುಗಾಳಿ ಮಳೆಯು ನಾನಾ ಅನಾಹುತಗಳನ್ನು ಸೃಷ್ಟಿ ಮಾಡಿದೆ. ಗಾಳಿ ಮಳೆಗೆ ಮನೆಯ ಚಾವಣಿ ಹಾರಿ ಹೋಗಿದೆ. ಮತ್ತೊಂದು ಕಡೆಗೆ ಸಿಡಿಲಿಗೆ ಜಾನುವಾರು ಹಾಗೂ ತೆಂಗಿನ ಮರ ಸುಟ್ಟು ಕರಕಲಾಗಿದೆ. ಮುಂದಿನ 3 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಮಳೆ (Rain News) ಅಬ್ಬರ ಜೋರಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹಾಗೂ ಯಲಹಂಕದಲ್ಲಿ ವರ್ಷದ ಮೊದಲ ಮಳೆಯಾಗಿದೆ. ಕಾದ ಕೆಂಡದಂತಾಗಿದ್ದ ಧರೆಗೆ ಶುಕ್ರವಾರ ಮಧ್ಯಾಹ್ನ ಕೆಲಕಾಲ ಸುರಿದ ಮಳೆಯು ಜನರಲ್ಲಿ ಸಂತಸ (Karnataka weather Forecast) ಮೂಡಿಸಿತ್ತು.

ಶುಕ್ರವಾರ ಸಂಜೆ ನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಬೀದರ್‌, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಇನ್ನೂ ತುಮಕೂರಿನ ಕುಣಿಗಲ್ ತಾಲೂಕು ಡಿ.ಹೊಸಹಳ್ಳಿ, ರಾಜೇಂದ್ರಪುರ ಭಾಗದಲ್ಲಿ ಗಾಳಿ- ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿಗಳು ಹಾರಿಹೋಗಿದ್ದವು. ಜತೆಗೆ ಮರಗಳೆಲ್ಲವೂ ಧರೆಗುರುಳಿದ್ದವು. ಕುಣಿಗಲ್ ತಾಲೂಕಿನ ಹಲವೆಡೆ ನಿನ್ನೆ ತುಂತುರು ಮಳೆಯೊಂದಿಗೆ ಬಿರುಗಾಳಿ ಬೀಸಿದೆ. ಬಿರುಗಾಳಿಯ ರಭಸಕ್ಕೆ 30ಕ್ಕೂ ಹೆಚ್ಚು ಮರಗಳು ನೆಲಸಮವಾಗಿತ್ತು. ಡಿ.ಹೊಸಹಳ್ಳಿಯಲ್ಲಿ ಶಾಲಾ ಕಟ್ಟಡದ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿತ್ತು. ಇನ್ನು ರಾಜೇಂದ್ರಪುರ ಗ್ರಾಮದಲ್ಲಿ ಕಲ್ಲೂರಯ್ಯ, ಬರಿಯಯ್ಯ, ಚಿಕ್ಕಕೂರಲಯ್ಯ ಎಂಬುವವರ ಮನೆಗಳ ಮೇಲ್ಛಾವಣಿಯೇ ಹಾರಿಹೋಗಿತ್ತು. ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

ಸಿಡಿಲು ಬಿಡಿದು ಹೊತ್ತಿ ಉರಿದ ತೆಂಗಿನ ಮರ

ಚಿಕ್ಕಮಗಳೂರಿನ ಬಾಳೆಹೊನ್ನುರು-ಕೊಪ್ಪ ರಸ್ತೆಯಲ್ಲಿ ಮಧ್ಯರಾತ್ರಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿತ್ತು. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರ ಹೊತ್ತಿ ಉರಿದಿತ್ತು. ಸಿಡಿಲು ಬಡಿದು ಸಂಪೂರ್ಣ ಸುಟ್ಟುಹೋಗಿತ್ತು. ಕಳೆದ ರಾತ್ರಿ ಬಾಳೆಹೊನ್ನೂರು ಸುತ್ತಮುತ್ತ ಗಾಳಿ-ಮಳೆ ಸುರಿದಿತ್ತು.

karnataka weather Forecast

ಸಿಡಿಲಿಗೆ ಮುರಿದು ಬಿದ್ದ ದೇವಾಲಯದ ಗರುಡುಗಂಬ

ಸಿಡಿಲು ಬಡಿದು ದೇವಾಲಯದ ಗರುಡುಗಂಬ ಮುರಿದು ಬಿದ್ದಿತ್ತು. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಹಗರನೂರಿನಲ್ಲಿ ಘಟನೆ ನಡೆದಿತ್ತು. ನಿನ್ನೆ ತಡರಾತ್ರಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿತ್ತು. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಗರಡುಗಂಬಕ್ಕೆ ಸಿಡಿಲು ಬಡಿದ ಪರಿಣಾಮ ಮುರಿದು ಬಿದ್ದಿತ್ತು. ಅಲ್ಲದೆ ಹಿರೇಹಡಗಲಿಯಲ್ಲಿ ರೈತ ಬಂದ್ರಕಳ್ಳಿ ಲಂಕೆಪ್ಪ ಎಂಬವರ ಹಸುವು ಸಿಡಿಲಿಗೆ ಬಲಿಯಾಗಿತ್ತು. ಹಿರೇಕೊಳಚಿ, ಚಿಕ್ಕಕೊಳಚಿ, ನಾಗತಿಬಸಾಪುರ ಹಿರೇಹಡಗಲಿ ಸೇರಿ ಹತ್ತಾರು ಗ್ರಾಮಗಳಲ್ಲಿ ಮಳೆಯಾಗಿದೆ. ಹಗರನೂರು ಗ್ರಾಮದ ರಸ್ತೆ ಮೇಲೆ ಮರಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಸದ ಮನೆ, ದನದ ಕೊಟ್ಟಿಗೆ ಮೇಲೆ ಹಾಕಲಾಗಿದ್ದ ತಗಡುಗಳು ಬಿರುಗಾಳಿಗೆ ಹಾರಿಹೋಗಿದ್ದವು.

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ

ಗುರುವಾರದಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಅಥಣಿ ಹಾಗೂ ನಿಪ್ಪಾಣಿಯಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಮಹಾಲಿಂಗಪುರ 4, ಹೊನ್ನಾವರ, ಲೋಕಾಪುರ, ಗದಗ, ಚಿಕ್ಕೋಡಿ, ಸೇಡಬಾಳ, ಟಿಕ್ಕೋಟ, ಹುಂಚದಕಟ್ಟೆ, ಬೇಲೂರು, ತ್ಯಾಗರ್ತಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮುಂಡಗೋಡು, ಹಾವೇರಿ, ಹಾವೇರಿ ಎಪಿಎಂಸಿ , ರಬಕವಿ , ಕುಂದಗೋಳ , ಸಂಕೇಶ್ವರ, ಕಲಘಟಗಿ , ಯಡವಾಡ, ಪೊನ್ನಂಪೇಟೆ, ಕೊಡಗು, ಹರಪನಹಳ್ಳಿಯಲ್ಲಿ ತಲಾ 2 ಸೆಂ.ಮೀ ಹಾಗೂ ಹಳಿಯಾಳ, ಸಿದ್ದಾಪುರ, ಗೋಕಾಕ್‌ , ರಾಣೆಬೆನ್ನೂರು, ಧಾರವಾಡ, ಮಂಡ್ಯದಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿ.ಸೆ ಕಲಬುರಗಿ ಮತ್ತು ರಾಯಚೂರಿನಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Neha Murder Case: ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತನಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಆರ್.‌ ಆಶೋಕ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Neha Murder case Congress creates jihadi Karnataka R Ashok
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಕೊಲೆ (Neha Murder Case) ಮಾಡಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಆರ್. ಅಶೋಕ್‌ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜಿಹಾದ್‌, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್‌ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್‌ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದರು.

ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತನಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

ಲವ್‌ ಜಿಹಾದ್‌ ಮಾಡುವವರಿಗೆ ಪಾಸ್‌ಪೋರ್ಟ್‌

ಲವ್‌ ಜಿಹಾದ್‌, ಕೊಲೆ, ಗಲಭೆ ಮಾಡುವವರಿಗೆ ಮಾಡುವವರಿಗೆ ಪಾಸ್‌ಪೋರ್ಟ್‌ ಹಾಗೂ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ. ಬಾಂಬ್‌ ಸ್ಪೋಟವನ್ನು ಸಚಿವರೇ ವ್ಯಾಪಾರದ ವ್ಯಾಜ್ಯ ಎಂದರು. ರಾಮೋತ್ಸವದಲ್ಲಿ ಜೈ ಶ್ರೀರಾಮ್‌ ಎಂದಾಗ ಮುಸ್ಲಿಮರು ಹಲ್ಲೆ ಮಾಡಿದ್ದರು. ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ಗದಗದಲ್ಲಿ ಒಂದೇ ಕುಟುಂಬದ ಕೊಲೆಯಾಗಿದೆ. ಕುಣಿಗಲ್‌ನಲ್ಲಿ ಬಿಜೆಪಿ ಬೆಂಬಲಿಗನ ತೋಟಕ್ಕೆ ಬೆಂಕಿ ಹಚ್ಚಲಾಗಿದೆ. ಚಿತ್ರನಟಿಗೆ ಹಲ್ಲೆ ಮಾಡಲಾಗಿದೆ. ಕೋಲಾರದಲ್ಲಿ ಶ್ರೀರಾಮನ ಫ್ಲೆಕ್ಸ್‌ ಕಿತ್ತುಹಾಕುವ ಕೆಲಸ ನಡೆದಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ ಏನೂ ಮಾಡಿಲ್ಲ. ಓಲೈಕೆ ರಾಜಕಾರಣ ಪರಾಕಾಷ್ಠೆಗೆ ತಲುಪಿದೆ ಎಂದು ದೂರಿದರು.

ಕಾಂಗ್ರೆಸ್‌ನ ಹೊಸ ತೆರಿಗೆ

ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದು, ಒಬ್ಬ ಬಿಲ್ಡರ್‌ 7-8 ಕೋಟಿ ರೂ. ಕಾಂಗ್ರೆಸ್‌ಗೆ ಕೊಡಬೇಕಿದೆ. ಇದೇ ಕಾಂಗ್ರೆಸ್‌ನ ಹೊಸ ತೆರಿಗೆ. ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳನ್ನು ತೆರಿಗೆಯ ಮೂಲಕವೇ ನೀಡಲಾಗುತ್ತಿದೆ. ಯಾವುದೇ ಯೋಜನೆಯನ್ನು ಜೇಬಿನಿಂದ ನೀಡುತ್ತಿಲ್ಲ. ಇದರಿಂದ ಸಂಗ್ರಹವಾದ ಹಣವನ್ನು ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಜೆಸಿಬಿಯಲ್ಲಿ ಅಗೆಯುವಂತೆ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

ಕಾಂಗ್ರೆಸ್‌ ಕೋಟ್ಯಂತರ ಜನರಿಗೆ ಚೊಂಬು ನೀಡಿದೆ. 10 ಕೆಜಿ ಅಕ್ಕಿ ಎಂದು ಹೇಳಿ ಒಂದು ಕೆಜಿ ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಲಾಗಿದೆ. ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರೂ. ಎಂದು 5 ರೂಪಾಯಿ ನೀಡಿಲ್ಲ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್‌ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ ಎಂದರು.

ಕಾಂಗ್ರೆಸ್‌ಗೆ ಸವಾಲು

ದೇಶ ಆಳಿದ ಹಾಗೂ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್‌ ಸರ್ಕಾರ ಏನು ಕೊಡುಗೆ ನೀಡಿದೆ ಎನ್ನುವುದನ್ನು ತಿಳಿಸಲಿ. ಈ ಬಾರಿ ಕರ್ನಾಟಕದ ಜಿಡಿಪಿ ದೇಶದ ಜಿಡಿಪಿಗಿಂತ ಕಡಿಮೆಯಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಏನು ಎನ್ನುವುದನ್ನು ಬಜೆಟ್‌ನಲ್ಲಿ ತಿಳಿಸಿಲ್ಲ. ಈ ಬಾರಿಯ ಆದಾಯ ತೀವ್ರವಾಗಿ ಇಳಿಕೆಯಾಗಿದೆ. ಅಭಿವೃದ್ಧಿ ಕಾರ್ಯಗಳು ಇಲ್ಲವಾಗಿರುವುದರಿಂದ ಜಿಡಿಪಿ ಬೆಳೆಯುವುದಿಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading

ಕರ್ನಾಟಕ

Neha Murder Case: ಲವ್ ಜಿಹಾದ್ ಸಮರ್ಥಿಸಿಕೊಂಡಿದ್ದ ಕೈಗಳಿಂದಲೇ ಆರೋಪಿ ರಕ್ಷಣೆಗೆ ಹೊಂಚು: ಜೆಡಿಎಸ್‌ ಕಿಡಿ

Neha Murder Case: ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರ್ಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

VISTARANEWS.COM


on

Neha Murder case JDS slams hands for defending love jihad to protect accused
Koo

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಲು ನಿರಾಕರಣೆ ಮಾಡಿದಳು ಎಂಬ ಕಾರಣಕ್ಕೆ ಮಾಡಿದ ಹತ್ಯೆ (‌Neha Murder Case) ಪ್ರಕರಣ ಖಂಡನೀಯ. ಜೀವ ತೆಗೆದ ಪಾಪಿಯನ್ನು ಸುಮ್ಮನೆ ಬಿಡಬಾರದು. ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ. ಲವ್ ಜಿಹಾದ್ (Love Jihad) ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ನೇಹಾ ಹಿರೇಮಠ (Neha Heremath) ಅವರನ್ನು ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ಜೆಡಿಎಸ್‌ (JDS Karnataka) ಕಿಡಿಕಾರಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಆರೋಪ ಮಾಡಿದೆ.

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ.

ಇದನ್ನೂ ಓದಿ: Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರ್ಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ ಪಾಪಿಯನ್ನು ಸುಮ್ಮನೆ ಬಿಡಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರಕಾರ ಕಟ್ಟೆಚ್ಚರ ವಹಿಸಬೇಕು. ಆ ನತದೃಷ್ಟ ವಿದ್ಯಾರ್ಥಿನಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜೆಡಿಎಸ್ ತಿಳಿಸಿದೆ.

ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್‌ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್‌, ಫಯಾಜ್‌ ಐಸಿಸ್‌ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಆತ ಎಲ್ಲಿ ತರಬೇತಿ ಪಡೆದಿದ್ದಾನೆ? ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಬೆಳೆಸಿದ ವಿಷಬೀಜವಿದು. ಕಾಂಗ್ರೆಸ್ ಹುಟ್ಟಿದಾಗ ಆ ಪಕ್ಷದ ನಾಯಕರು ಬ್ರಿಟಿಷರ ಪರವಿದ್ದರು. ಈಗ ಮುಸ್ಲಿಮರು, ಕೊಲೆಗಡುಕರ ಪರ‌ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹಚ್ಚಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಿ ಅವರ ಮನೆಯನ್ನು ಬಹಿಷ್ಕರಿಸಬೇಕು. ವಕೀಲರು ಅವನ ಪರ ವಾದ ಮಾಡಲು ನಿಲ್ಲಬಾರದು. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೆದೆಯೋ ಅಲ್ಲಿಯವರೆಗೆ ಈ ರೀತಿ ಕೊಲೆಗಳು ಆಗುತ್ತಲೇ ಇರುತ್ತವೆ ಎಂದು ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್‌ಗೆ ಭೇಟಿ ನೀಡಿ ನೇಹಾ ಕುಟುಂಬದವರಿಗೆ ಸಾಂತ್ವನ ಹೇಳಿದ ಬಸವರಾಜ ಬೊಮ್ಮಾಯಿ, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗಿನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದವರು ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೇಲೆ ಹಲ್ಲೆಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗೂಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಹೇಳಿದರು.

ಇದನ್ನು ಕೇವಲ ವೈಯಕ್ತಿಕ ಘಟನೆ ಎಂದು ನೋಡಬಾರದು. ಇಂಥದ್ದು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ? ಈ ಸರ್ಕಾರದ ಅವಧಿಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗಿನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ. ಅಪರಾಧ ವಿಭಾಗದ ಡಿಜಿಪಿ ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕುಟುಂಬಕ್ಕೆ ಸಾಂತ್ವನ

ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

ಇದನ್ನೂ ಓದಿ: Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Continue Reading
Advertisement
ಕರ್ನಾಟಕ3 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ4 hours ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ4 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ4 hours ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ4 hours ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 20244 hours ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ4 hours ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ5 hours ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ5 hours ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ12 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ22 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌