Rain News | ಬೆಣ್ಣೆಹಳ್ಳದಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ - Vistara News

ಧಾರವಾಡ

Rain News | ಬೆಣ್ಣೆಹಳ್ಳದಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಬಳಿ ಬೆಣ್ಣೆಹಳ್ಳದಲ್ಲಿ ಬೈಕ್‌ ಚಲಾಯಿಸುತ್ತಿದ್ದ ವ್ಯಕ್ತಿ ನೀರಿನಲ್ಲಿ (rain news)ಕೊಚ್ಚಿಹೋಗಿದ್ದವರು ಈಗ ಶವವಾಗಿ ಪತ್ತೆಯಾಗಿದ್ದಾರೆ.

VISTARANEWS.COM


on

rain news
ಬೆಣ್ಣೆಹಳ್ಳದಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಬಳಿಯ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಶುಕ್ರವಾರ ನೀರಲ್ಲಿ ತಡಹಾಳ ಗ್ರಾಮದ ಸದಾನಂದ ಪೂಜಾರ (೩೫) (Rain News) ನೀರುಪಾಲಾಗಿದ್ದರು. ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದರು. ಮೃತದೇಹ ಭಾನುವಾರ ಪತ್ತೆಯಾಗಿದೆ.

ಇಲ್ಲಿನ ಬೆಣ್ಣೆಹಳ್ಳದಲ್ಲಿ ಮಳೆಯಿಂದ (Rain News) ತುಂಬಿ ಹರಿಯುತ್ತಿತ್ತು. ಅದರಲ್ಲಿಯೇ ಬೈಕ್‌ ಚಲಾಯಿಸುವಾಗ ನೀರಿನ ಸೆಳೆತಕ್ಕೆ ಸಿಲುಕಿ ಬೈಕ್ ಸಮೇತ ಸದಾನಂದ ಪೂಜಾರ (35) ಕೊಚ್ಚಿಹೋಗಿದ್ದರು. ಮತ್ತೊಬ್ಬ ಸವಾರ ಶರಣಯ್ಯ ಹಿರೇಮಠ ಪ್ರಾಣಾಪಾಯದಿಂದ ಪಾರಾಗಿದ್ದರು.

ಇಬ್ಬರೂ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ತಕ್ಷಣ ನೀರಿಗೆ ಧುಮುಕಿ ಶರಣಯ್ಯ ಅವರನ್ನು ರಕ್ಷಿಸಿದ್ದರು. ಆದರೆ, ಸದಾನಂದ ನೀರಿನ ಸೆಳೆತಕ್ಕೆ ಸಿಲುಕಿ ಬಹಳ ದೂರ ಹೋಗಿದ್ದರಿಂದ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ | Rain News | ಗದಗದಲ್ಲಿ ಭಾರಿ ಮಳೆ; ಸಿಡಿಲು ಬಡಿದು ಒಬ್ಬ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಹಾಗೂ ಹೀಟ್‌ ವೇವ್‌ (Heat wave) ಪರಿಸ್ಥಿತಿಗಳು ಮೇಲುಗೈ ಸಾಧಿಸಿವೆ. ಈ ವಾರವೆಲ್ಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಒಣ ಹವೆ (Dry Weather) ಮುಂದುವರಿಯಲಿದ್ದು, ತಾಪಮಾನ ಏರಿಕೆ ಆಗಲಿದೆ. ಶಾಖದ ಹೊಡೆತಕ್ಕೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಇದರೊಟ್ಟಿಗೆ ಆರೋಗ್ಯ ಕಾಳಜಿ ವಹಿಸುವಂತೆ ಜನರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಬಿಸಿಗಾಳಿ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ರೆಡ್ ಮತ್ತು ಆರೆಂಜ್‌, ಯೆಲ್ಲೋ ಅಲರ್ಟ್ ಇರುವ ಪ್ರದೇಶಗಳಿವು

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಬೆಂಗಳೂರಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ. ತಾಪಮಾನ ಏರಿಕೆಯು ಜನರನ್ನು ಕಂಗಾಲು ಮಾಡಿದೆ. ಇದೇ ವಾತಾವರಣವು ಈ ಪೂರ್ತಿ ಮುಂದುವರಿಯಲಿದೆ.

ಕೋಲಾರದಲ್ಲಿ ಮಳೆಯ ಸಿಂಚನ

ಕೋಲಾರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಗುರುವಾರ ಸತತ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ. ಮೂರ್ನಾಲ್ಕು ತಿಂಗಳಿಂದ ಬೇಸಿಗೆ ಬಿಸಿಯಿಂದ ಬಸವಳಿದ ಜನರಿಗೆ ಮಳೆಯು ತಂಪೆರೆದಿದೆ. ಭರಣಿ ನಕ್ಷತ್ರದ ಮೊದಲ ಮಳೆ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಸುರಿಯುತ್ತಿದೆ. ಬಿಸಿಲಿನ ತಾಪ, ಬಿಸಿ ಗಾಳಿಗೆ, ಪರದಾಡುತ್ತಿದ್ದ ಜನರಿಗೆ ಮಳೆಯ ಸಿಂಚನದಿಂದ ಬಿಸಿಯಿಂದ ಮುಕ್ತರಾಗಿದ್ದಾರೆ

ಇದನ್ನೂ ಓದಿ: Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Karnataka Weather Forecast : ಹಗಲು ಹೊತ್ತು ಬಿಸಿ ಗಾಳಿ ಬೀಸಿದರೆ, ಮಧ್ಯಾಹ್ನದಂದು ಉರಿ ಬಿಸಿಲು ನೆತ್ತಿ ಸುಡುಲಿದೆ. ರಾತ್ರಿಯಾದರೆ ವಾತಾವರಣವು ಬೆಚ್ಚಗೆ ಇರಲಿದೆ. ಈ ಮಧ್ಯೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Dry Weather) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇದ್ದರೂ, ಕೆಲವೆಡೆ ಮಳೆಯ (Rain News) ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಏ.2ರಂದು ಮಲೆನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮುಖ್ಯವಾಗಿ ಶುಭ್ರ ಆಕಾಶವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರೆಡ್ ಅಲರ್ಟ್

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಮೇ 5ರವರೆಗೆ ಈ ಜಿಲ್ಲೆಗಳಲ್ಲಿ ತಾಪಮಾನ ವಿಪರೀತವಾಗಿ ಇರಲಿದೆ. ಉರಿ ಸೆಕೆಯ ವಾತಾವರಣ ಇರಲಿದೆ.

ಆರೆಂಜ್ ಅಲರ್ಟ್

ಇನ್ನೂ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ 5 ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 5 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ನಿಮಗಾಗದಿದ್ದರೆ ನಮಗೆ ಅಧಿಕಾರ ಕೊಡಿ, 24 ಗಂಟೆಯಲ್ಲಿ ಹಿಡಿಯುತ್ತೇವೆ: ಅಶೋಕ್

Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದಲ್ಲ, ಇನ್ನೂ ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಈ ಘೋರ ಬಿಸಿಲಿನಲ್ಲಿ ಸ್ಮೃತಿ ತಪ್ಪಿದವರ ಸುದ್ದಿಗಳು ಅಲ್ಲಲ್ಲಿ ಕೇಳುತ್ತಿವೆ. ಬಿಸಿಲಾಘಾತಕ್ಕೆ ಜೀವ ತೆತ್ತವರ ವಿಷಯಗಳೂ ಕೇಳಿಬರುತ್ತಿವೆ. ಛತ್ರಿ ಹಿಡಿದೇ ಹೋಗುತ್ತೇವೆ ಹೊರಗೆ, ಚೆನ್ನಾಗಿ ನೀರು ಕುಡಿಯುತ್ತೇವೆ ನಾವು. ನಮಗೇನು ಬಿಸಿಲಿನ ಭಯವಿಲ್ಲ ಎನ್ನುವವರಿದ್ದಾರೆ. ವಿಷಯ ಹಾಗಲ್ಲ, ಬಿಸಿಲ ದಿನಗಳಲ್ಲಿ ಆರೋಗ್ಯದ ಕಾಳಜಿಯನ್ನು ಎಷ್ಟು ಮಾಡಿದರೂ ಸಾಲದು. ಒಮ್ಮೆ ಶಾಖದ ಆಘಾತಕ್ಕೆ ಅಥವಾ ನಿರ್ಜಲೀಕರಣಕ್ಕೆ ತುತ್ತಾದರೆ, ಚೇತರಿಸಿಕೊಳ್ಳಲು ನಾಲ್ಕಾರು ದಿನಗಳಾದರೂ ಬೇಕಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ, ಜೀವಕ್ಕೆ ಅಪಾಯ ತಪ್ಪಿದ್ದಲ್ಲ. ಹಾಗಾದರೆ ಇವುಗಳಿಂದ (Summer Tips) ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲವೇ?

Dry weather Summer Heat

ಏಕೆ ಹೀಗಾಗುತ್ತದೆ?

ಮೊದಲಿಗೆ, ಬಿಸಿಲಿಗೆ ಎಚ್ಚರ ತಪ್ಪುವುದೇಕೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಹೊರಗಿನ ವಾತಾವರಣದ ಉಷ್ಣತೆಯನ್ನು ಆಧರಿಸಿ, ನಮ್ಮ ದೇಹ ತನ್ನ ಉಷ್ಣತೆಯನ್ನು ಮಾರ್ಪಾಡು ಮಾಡಿಕೊಳ್ಳುತ್ತದೆ. ಹೊರಗಿನ ತಾಪಮಾನ ತೀವ್ರವಾಗಿ ಏರಿಕೆಯಾದಾಗ, ದೇಹದೊಳಗಿನ ಉಷ್ಣತೆಯನ್ನು ತಗ್ಗಿಸುವುದಕ್ಕೆ ಶರೀರ ಬೆವರಲು ಪ್ರಾರಂಭಿಸುತ್ತದೆ. ಇದರಿಂದಲೇ ದೇಹ ತಣ್ಣಗಾಗಬೇಕು, ಆಂತರಿಕ ಉಷ್ಣತೆ ನಿಯಂತ್ರಣದಲ್ಲಿ ಇರಬೇಕು. ಆದರೆ ಈ ಎಲ್ಲ ತಂತ್ರಗಳು ಕೈಕೊಟ್ಟಾಗ, ಸಾಕಾಗದೆ ಇದ್ದಾಗ ಅಥವಾ ಅತಿಯಾಗಿ ಬೆವರಿ ದೇಹದಲ್ಲಿ ನೀರಿನಂಶ ಕಡಿಮೆ ಆದಾಗ, ಎಚ್ಚರ ತಪ್ಪುತ್ತದೆ. ಇದರಿಂದ ಮೆದುಳಿಗೆ ಅಗತ್ಯವಾದಷ್ಟು ರಕ್ತಸಂಚಾರ ಆಗದಿದ್ದರೆ, ಪಾರ್ಶ್ವವಾಯು ಸಂಭವಿಸಿ ಜೀವಹಾನಿಯೂ ಆಗಬಹುದು.

ಮಾನವ ಶರೀರ ತನ್ನಷ್ಟಕ್ಕೆ ತಡೆದುಕೊಳ್ಳಲು ಸಾಧ್ಯವಾಗುವ ಗರಿಷ್ಟ ಉಷ್ಣತೆಯೆಂದರೆ ೪೨.೩ ಡಿಗ್ರಿ ಸೆ. ಇದಿಷ್ಟು ತಡೆಯುವುದೂ ಸುಲಭವಿಲ್ಲ. ಇನ್ನು ಇದಕ್ಕಿಂತಲೂ ಹೆಚ್ಚಿನ ತಾಪಮಾನವನ್ನು ಸಹಿಸಿಕೊಳ್ಳಲು ಏನೆಲ್ಲ ಉಪಚಾರ ಸಾಧ್ಯವೋ ಅದನ್ನು ನಮಗೆ ನಾವೇ ಮಾಡಿಕೊಳ್ಳಬೇಕು. ಸಿಕ್ಕಾಪಟ್ಟೆ ನೀರು ಕುಡಿಯುವುದು, ಎಲೆಕ್ಟ್ರೋಲೈಟ್‌ ಮರುಪೂರಣ ಮಾಡುವುದು, ಚೆನ್ನಾಗಿ ಗಾಳಿಯಾಡುವ ವಾತಾವರಣದಲ್ಲಿರುವುದು- ಇಂಥವೆಲ್ಲ ನಾವು ಅಗತ್ಯವಾಗಿ ಮಾಡಬೇಕಾದ ಕೆಲಸಗಳು.

ಉಷ್ಣತೆಗೆ ಮಾತ್ರವಲ್ಲ

ತೀವ್ರ ತಾಪಮಾನಗಳಿಗೆ ಎಚ್ಚರ ತಪ್ಪುವುದು ಬಿಸಿ ಹೆಚ್ಚಾದಾಗ ಮಾತ್ರವಲ್ಲ, ತೀವ್ರ ಚಳಿಯಲ್ಲೂ ಆಗುತ್ತದೆ. ಈ ಎರಡೂ ಅತಿರೇಕದ ತಾಪಮಾನಗಳಲ್ಲಿ ದೇಹದ ಉಷ್ಣತಾ-ನಿಯಂತ್ರಕ ವ್ಯವಸ್ಥೆ ಕೈಕೊಡಬಹುದು. ಬಿಸಿ ಹೆಚ್ಚಾದಾಗ ಮೆದುಳಿಗೆ ರಕ್ತಸಂಚಾರ ಸರಾಗ ಆಗದಿರುವ ಸಂಭವ ಇರುವದಂತೆಯೇ, ಚಳಿ ಹೆಚ್ಚಾದಾಗಲೂ ಆಗುತ್ತದೆ. ಹೊರಗಿನ ಚಳಿ ತೀವ್ರವಾಗಿ ಹೆಚ್ಚಾದರೆ, ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುವುದಕ್ಕೆ ರಕ್ತ ನಾಳಗಳು ಸಂಕೋಚಗೊಳ್ಳುತ್ತವೆ. ಹೀಗೆ ಸಂಕೋಚಗೊಳ್ಳುವುದು ಅತಿಯಾದರೆ ಆಗಲೂ ಮೆದುಳಿಗೆ ಬೇಕಾದಷ್ಟು ರಕ್ತಸಂಚಾರ ಆಗದೆ ಜ್ಞಾನ ತಪ್ಪಬಹುದು.

Summer Fashion

ತಪ್ಪಿಸಿಕೊಳ್ಳಲಾಗದೆ?

ಖಂಡಿತ ಸಾಧ್ಯವಿದೆ. ಮೊದಲಿಗೆ, 40 ಡಿ.ಸೆ. ಉಷ್ಣತೆಯನ್ನು ತಲುಪಿದಾಗ ಮನೆಯಿಂದ ಹೊರಗೆ ಹೋಗಬೇಡಿ. ಹೋಗುವುದು ಅನಿವಾರ್ಯವಾದರೆ, ಸಡಿಲವಾದ ಬಿಳಿ ಅಥವಾ ತಿಳಿ ಬಣ್ಣದ ಹತ್ತಿಯ ಬಟ್ಟೆಗಳನ್ನೇ ಧರಿಸಿ. ತಲೆಗೆ ಟೋಪಿ, ಛತ್ರಿಗಳಂಥವು ಇದ್ದರೆ ಒಳ್ಳೆಯದು. ನಿಲ್ಲಿಸಿದ ಕಾರಿನೊಳಗೆ ಯಾರನ್ನೂ ಬಿಡಬೇಡಿ. ಈ ಸೆಕೆಯಲ್ಲಿ ದಿನಕ್ಕೆ ಐದು ಲೀಟರ್‌ ನೀರು ಅಥವಾ ಪೇಯಗಳನ್ನು ಕುಡಿಯುವ ಗುರಿ ಇರಿಸಿಕೊಳ್ಳಿ. ಆಲ್ಕೋಹಾಲ್‌ ಮತ್ತು ಕೆಫೇನ್‌ ಸೇವನೆಯ ಮೇಲೆ ಕಡಿವಾಣ ಅಗತ್ಯ. ಇಲ್ಲದಿದ್ದರೆ ದೇಹ ಬೇಗನೇ ನಿರ್ಜಲೀಕರಣಕ್ಕೆ ತುತ್ತಾಗುತ್ತದೆ. ಜೊತೆಗೆ, ಸೆಕೆಯಲ್ಲಿ ದೇಹವನ್ನು ತಂಪಾಗಿಸುವ ಶಾರೀರಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ತಲೆನೋವು, ಅತಿಯಾಗಿ ಬೆವರುವುದು, ಬಾಯಿ ಒಣಗುವುದು, ತೀರದ ದಾಹ, ಮೈಯೆಲ್ಲ ಬಿಸಿಯಾದ ಅನುಭವಗಳು ಆದರೆ ಜಾಗ್ರತೆ ಮಾಡಿ. ತಕ್ಷಣವೇ ದೇಹವನ್ನು ತಂಪಾಗಿಸುವ ಬಗ್ಗೆ ಕ್ರಮ ಕೈಗೊಳ್ಳಿ. ತಂಪಾದ ಬಟ್ಟೆಯಿಂದ ಇಡೀ ದೇಹವನ್ನು ಒರೆಸಬಹುದು. ಒಆರೆಸ್‌, ಎಳನೀರು ಮುಂತಾದ ಎಲೆಕ್ಟ್ರೋಲೈಟಿಕ್‌ ಪೇಯಗಳು ಬೇಕಾಗುತ್ತವೆ. ಕೂಲರ್‌, ಎಸಿಯಂಥ ಉಪಕರಣಗಳ ಮೂಲಕ ಮನೆಯ ವಾತಾವರಣವನ್ನು ತಂಪಾಗಿಸಲು ಪ್ರಯತ್ನಿಸಿ. ಈ ಹೊತ್ತಿನಲ್ಲಿ ಮನೆಯಿಂದ ಹೊರಗಿದ್ದರೆ, ತಂಪಾದ ನೆರಳಿನಂಥ ಜಾಗಕ್ಕೆ ಹೋಗಿ. ಬಿಸಿಲಿನ ಆಘಾತ ತಾಗಿದಾಗ ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ಜೀವಕ್ಕೇ ಎರವಾಗುತ್ತದೆ, ನೆನಪಿರಲಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಧಾರವಾಡ

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Lok Sabha Election 2024: ಒಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಇಂದು ತನ್ನ ಸೀಟುಗಳಿಗಾಗಿ ಮೈತ್ರಿ ಪಕ್ಷಗಳಲ್ಲಿ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ.

VISTARANEWS.COM


on

Union Minister Pralhad Joshi election campaign in kalaghatagi
Koo

ಹುಬ್ಬಳ್ಳಿ: ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಬಡವರಿಗೆ 1 ಲಕ್ಷ ರು. ಘೋಷಿಸಿದ್ದು ಹೊಸದೊಂದು ಬೋಗಸ್ ಗ್ಯಾರೆಂಟಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Lok Sabha Election 2024) ಆರೋಪಿಸಿದರು.

ಕಲಘಟಗಿ ವಿಧಾನಸಭಾ ಕ್ಷೇತ್ರದ ಬೆಲವಂತರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೀಗೆ ಬಡವರನ್ನು ವಂಚಿಸಲು ಮತ್ತು ಆಗ ಹೋಗದ ಗ್ಯಾರೆಂಟಿ ಘೋಷಿಸುವ ಇವರಿಗೆ ಏನಾದರೂ ಜವಾಬ್ದಾರಿ ಇದೆಯೇ? ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಪಕ್ಷದ ಪ್ರಕಾರ 6.5 ಕೋಟಿ ಬಡವರಿದ್ದಾರೆ. ತಲಾ 1 ಲಕ್ಷವೆಂದರೆ, 65 ಲಕ್ಷ ಕೋಟಿ ಬೇಕಾಗುತ್ತದೆ. ಆದರೆ, ವಾಸ್ತವದಲ್ಲಿ ದೇಶದ ಬಜೆಟ್ ಗಾತ್ರವೇ ಅಷ್ಟಿರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

ಭಾರತದ ಬಜೆಟ್ ಈಗ 35- 36 ಲಕ್ಷ ಕೋಟಿ ಇದೆ. ಹಾಗಿರುವಾಗ 65 ಲಕ್ಷ ಕೋಟಿ ಬಡವರಿಗೆ ಹೇಗೆ ಹಂಚುತ್ತಾರೆ? ನೀವೂ ಸ್ವಲ್ಪ ಪ್ರಬುದ್ಧರಾಗಿ ಯೋಚಿಸಿ ನೋಡಿ ಇದು ಬೋಗಸ್ ಗ್ಯಾರೆಂಟಿ ಎಂಬುದು ಖಚಿತವಾಗುತ್ತದೆ ಎಂದು ತಿಳಿಸಿದರು.

ಸರ್ಕಾರ ರಚಿಸದೆ ಹೇಗೆ ಕೊಡ್ತಾರೆ?

ಸರ್ಕಾರ ರಚನೆಗೆ 273 ಸಂಸದರ ಬಲ ಬೇಕು. ಆದರೆ, ಕಾಂಗ್ರೆಸ್ ಸ್ಪರ್ಧಿಸಿದ್ದೇ 230 ಕ್ಷೇತ್ರಗಳಿಗೆ. ಅದರಲ್ಲಿ ಗೆಲ್ಲುವುದೆಷ್ಟೋ.. ಸೋಲುವುದೆಷ್ಟೋ? ಸರ್ಕಾರ ರಚನೆಯೇ ಅಸಾಧ್ಯವಾಗಿದೆ. ಇನ್ನು 1 ಲಕ್ಷ ರು. ಗ್ಯಾರೆಂಟಿ ಹೇಗೆ ಕೊಡ್ತಾರೆ? ಯೋಚಿಸಿ. ಜನರ ದಾರಿ ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಅಷ್ಟೇ ಎಂದು ಸಚಿವ ಜೋಶಿ ಆರೋಪಿಸಿದರು.

ಸೀಟಿಗಾಗಿ ಭಿಕ್ಷೆ ಬೇಡಿದ್ರು

ಇಂದು ಒಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ತನ್ನ ಸೀಟುಗಳಿಗಾಗಿ ಮೈತ್ರಿ ಪಕ್ಷಗಳಲ್ಲಿ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬಂದಿದೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬೇಡವಾದದ್ದನ್ನೆಲ್ಲ ಮಾಡುತ್ತಿದೆ. ಒಬಿಸಿ ಮೀಸಲಾತಿ ಮುಸ್ಲಿಂ ಪಾಲು ಮಾಡುತ್ತಿದೆ ಎಂದು ಹರಿಹಾಯ್ದರು.

ಸ್ವಚ್ಛ ಭಾರತ್ ಯೋಜನೆಯಡಿ ಧಾರವಾಡ ಕ್ಷೇತ್ರದಲ್ಲಿ 1.5 ಲಕ್ಷ ಶೌಚಗೃಹಗಳನ್ನು ನಿರ್ಮಿಸಲಾಗಿದೆ. ಈ ಮೂಲಕ ಬಯಲು ಶೌಚಕ್ಕೆ ಮುಕ್ತಿ ನೀಡಿದ್ದಾರೆ. ಇಂಥ ಯೋಜನೆಗಳಿಂದ ಜನಕ್ಕೆ ಗೌರವದ ಜೀವನ ಕಲ್ಪಿಸಿದ್ದಾರೆ ಪ್ರಧಾನಿ ಮೋದಿ ಅವರು ಎಂದು ಬಣ್ಣಿಸಿದರು.

ಸಭೆಗೂ ಮುನ್ನ ಸೂಳಿಕಟ್ಟಿಯ ಗ್ರಾಮದೇವತೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಚಾರ ಕೈಗೊಂಡರು.

ಇದನ್ನೂ ಓದಿ: Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಮುಖಂಡರಾದ ಐಸಿ ಗೋಕುಲ‌, ಸದಾನಂದ ಚಿಂತಾಮಣಿ, ಮಲ್ಲಯ್ಯ ಸ್ವಾಮಿ ಗೋಡಿಮನೆ, ಸಿ.ಎಫ್.ಪಾಟೀಲ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ರಾಜಕೀಯ

Prajwal Revanna Case: ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Prajwal Revanna Case: ಒಕ್ಕಲಿಗ ಬೆಲ್ಟ್‌ನಲ್ಲಿ ಚುನಾವಣೆ ಆಗುವವರೆಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ವಿಷಯದಲ್ಲಿ ಭಾರಿ ರಾಜಕೀಯ ಮಾಡಿದ್ದೀರಿ. ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೀರಿ. ಧೈರ್ಯವಿದ್ದರೆ ಸತ್ಯವನ್ನು ಜನರ ಮುಂದೆ ಹೇಳಿ. ಇಂತಹ ಕೃತ್ಯ ಮಾಡುವವರಿಗೆ ಕಠೋರವಾದ ಶಿಕ್ಷೆ ಆಗಬೇಕು, ವಿಳಂಬವಾಗಬಾರದು ಅನ್ನೋದು ನಮ್ಮ ನಿಲುವು. ಇಂತಹ ಭಯಾನಕ ಅಪರಾಧದ ನಡುವೆಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಅಮಿತ್‌ ಶಾ ಗುಡುಗಿದ್ದಾರೆ.

VISTARANEWS.COM


on

Prajwal Revanna Case BJP will not be with those who do injustice to women says Amit Shah
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಯಾವುದೇ ಮಹಿಳೆಗೆ ಅನ್ಯಾಯ ಮಾಡಿದರೂ ಅಂಥವರ ಜತೆಗೆ ಬಿಜೆಪಿ ಇರಲ್ಲ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರೇ ಇಲ್ಲಿ ಸ್ವಲ್ಪ ಕೇಳಿಸಿಕೊಳ್ಳಿ. ಪ್ರಜ್ವಲ್‌ ಮೇಲೆ ಕ್ರಮವನ್ನು ನೀವು ತೆಗೆದುಕೊಳ್ಳಬೇಕಿತ್ತು, ನಾವಲ್ಲ ಎಂದು ಗುಡುಗಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಒಕ್ಕಲಿಗ ಬೆಲ್ಟ್‌ನಲ್ಲಿ ಚುನಾವಣೆ ಆಗುವವರೆಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ವಿಷಯದಲ್ಲಿ ಭಾರಿ ರಾಜಕೀಯ ಮಾಡಿದ್ದೀರಿ. ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೀರಿ. ಧೈರ್ಯವಿದ್ದರೆ ಸತ್ಯವನ್ನು ಜನರ ಮುಂದೆ ಹೇಳಿ. ಇಂತಹ ಕೃತ್ಯ ಮಾಡುವವರಿಗೆ ಕಠೋರವಾದ ಶಿಕ್ಷೆ ಆಗಬೇಕು, ವಿಳಂಬವಾಗಬಾರದು ಅನ್ನೋದು ನಮ್ಮ ನಿಲುವು. ಇಂತಹ ಭಯಾನಕ ಅಪರಾಧದ ನಡುವೆಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಗುಡುಗಿದರು.

ನಿಮಗಾಗದಿದ್ದರೆ ಕರ್ನಾಟಕದ ಸುರಕ್ಷತೆಯನ್ನು ನಮಗೆ ಬಿಡಿ

ಏಪ್ರಿಲ್ 18ರಂದು ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆಯಾಯಿತು. ಇದು ವೈಯಕ್ತಿಕ ಕೇಸ್‌ ಎಂದು ಕಾಂಗ್ರೆಸ್ ನಾಯಕರು ಹೇಳಿದರು. ನಿಮಗೆ ಆಗದಿದ್ದರೆ ಬಿಡಿ, ನಾವು ಕರ್ನಾಟಕವನ್ನು ಸುರಕ್ಷಿತವನ್ನಾಗಿ ಮಾಡುತ್ತೇವೆ. ನಾವು ಕರ್ನಾಟಕದ ಹೆಣ್ಣು ಮಕ್ಕಳಿಗೆ ಸುರಕ್ಷತೆಯನ್ನು ಕೊಡುತ್ತೇವೆ ಎಂದು ಅಮಿತ್‌ ಶಾ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Prajwal Revanna Case BJP will not be with those who do injustice to women says Amit Shah

ಕಾಂಗ್ರೆಸ್‌ನಿಂದ ವೋಟ್‌ ಬ್ಯಾಂಕ್‌ ರಾಜಕಾರಣ

ಕಾಂಗ್ರೆಸ್‌ನವರು ವೋಟ್ ಬ್ಯಾಂಕ್‌ಗಾಗಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದಾರೆ. ಬಾಂಬ್ ಬ್ಲಾಸ್ಟ್‌ ಆದರೆ ಇವರಿಗೆ ಯಾವುದೇ ಲೆಕ್ಕವಿಲ್ಲ. ನೀವು ಪ್ರಲ್ಹಾದ್ ಜೋಶಿಯವರಿಗೆ ಹಾಕುವ ಒಂದೊಂದು ಮತವೂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುತ್ತದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾದರೆ ಭಯೋತ್ಪಾದನೆಯು ಸಂಪೂರ್ಣ ನಿರ್ಮೂಲನೆಯಾಗುತ್ತದೆ. ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ಕಾರಣಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಆಯೋಜನೆ ಮಾಡಿದ್ದ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಬರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯವನ್ನು ಕಿತ್ತುಹಾಕಿದ್ದಾರೆ ಎಂದು ಅಮಿತ್‌ ಶಾ ಹೇಳಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಾರೆ

ಪ್ರಲ್ಹಾದ್ ಜೋಶಿಯವರನ್ನು ದೆಹಲಿಗೆ ನೀವು ಕಳುಹಿಸಿ, ಅವರನ್ನು ದೊಡ್ಡವರನ್ನಾಗಿ ನಾವು ಮಾಡುತ್ತೇವೆ. ಜೋಶಿ ನೋಡಲು ಸೀದಾ ಸಾದಾ ಕಾಣುತ್ತಾರೆ. ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ವಿಷಯ ಬಂದಾಗ ನನ್ನ ಜತೆಗೂ ಜಗಳ ಮಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಪರಸ್ಪರ ಜಗಳದಲ್ಲಿ ತೊಡಗಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದಕ್ಕೆ ಬರ ಪರಿಹಾರ ವಿಳಂಬವಾಗಿದೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಈಗ ಹಣ ಬಿಡುಗಡೆಯಾಗಿದೆ ಎಂದು ಹೇಳಿದರು.

ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ಅಶೋಕ್

ಬೆಂಗಳೂರು: ಲೈಂಗಿಕ ಹಗರಣ ಕೇಸ್‌ನಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ (‌Prajwal Revanna Case) ಅವರು ಕಾಂಗ್ರೆಸ್‌ ಬೆಂಬಲಿತ ಸಂಸದ. ಈಗ ಅವರು ನಮ್ಮ ಎನ್‌ಡಿಎ ಅಭ್ಯರ್ಥಿ ಆಗಿರಬಹುದು. ಆದರೆ, ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಆ ವೇಳೆ ಪ್ರಜ್ವಲ್‌ ಗೆಲುವು ಸಾಧಿಸಿದ್ದು ಕಾಂಗ್ರೆಸ್‌ ಬೆಂಬಲದಿಂದ ಎಂಬುದನ್ನು ಮರೆಯಬೇಡಿ. ಅವರ ಕೇಸ್‌ ಬಗ್ಗೆ ಗೊತ್ತಿದ್ದೂ ವಿದೇಶಕ್ಕೆ ಹಾರಲು ಹೇಗೆ ಬಿಟ್ಟಿರಿ? ನಿಮಗೆ ಅವರನ್ನು ಅರೆಸ್ಟ್‌ ಮಾಡಲು ಆಗದಿದ್ದರೆ ನಮಗೆ ಅಧಿಕಾರವನ್ನು ಕೊಡಿ. ನಾವು 24 ಗಂಟೆಯೊಳಗೆ ಹಿಡಿದುಹಾಕುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಆರ್.‌ ಅಶೋಕ್‌, ಈ ಹಿಂದೆ ನೀವು ಮೈತ್ರಿ ಮಾಡಿಕೊಂಡು ಗೆಲ್ಲಿಸಿ ಆರಿಸಿ ಕಳಿಸಿದ್ದೀರಿ. ಜೋಡೆತ್ತು ಅಂತ ಹೇಳಿಕೊಂಡು ಓಡಾಡಿದ್ದು ಮರೆತುಹೋಯಿತಾ? ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕೈ ಇಳಿಸೋಕೆ, ಡಿ.ಕೆ. ಶಿವಕುಮಾರ್‌ ಅವರು ಕೈ ಎತ್ತೋಕೆ! ಅವರು ಇನ್ನೂ ನಮ್ಮ‌ ಅಭ್ಯರ್ಥಿ. ನಮ್ಮ ಬೆಂಬಲಿತ ಸಂಸದ ಆಗೋಕೆ ಒಂದು ತಿಂಗಳು, 13 ದಿನ ಬೇಕು. ಆಮೇಲೆ ನಾವು ಏನು ಮಾಡುತ್ತೇವೆ ಎಂಬುದನ್ನು ನೀವು ಕೇಳಿ ಎಂದು ಹೇಳಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್‌ ತೀರ್ಮಾನಿಸುತ್ತದೆ. ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್‌ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದು ಆರ್.‌ ಅಶೋಕ್‌ ಸವಾಲು ಹಾಕಿದರು.

ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಥವಾ ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಒಪ್ಪಿಕೊಳ್ಳಲಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡಬೇಕು, ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ ಎಂದು ಪ್ರಶ್ನಿಸಿದರು.

Continue Reading
Advertisement
IPL 2024
ಕ್ರೀಡೆ1 min ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

assault Case
ಬೆಂಗಳೂರು3 mins ago

Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

Prajwal Revanna Case Centre says it has no power to revoke Prajwal diplomatic passport Big relief for MP
ಕರ್ನಾಟಕ8 mins ago

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Virat kohli
ಪ್ರಮುಖ ಸುದ್ದಿ18 mins ago

Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

Brij Bhushan Singh
ದೇಶ19 mins ago

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Murder case in Bengaluru
ಬೆಂಗಳೂರು29 mins ago

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Prajwal Revanna Case Locked up as Prajwal arrives at Bengaluru airport
ಹಾಸನ30 mins ago

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Andre Russell
ಕ್ರಿಕೆಟ್42 mins ago

Andre Russell : ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

Jolly LLB 3
ಸಿನಿಮಾ43 mins ago

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Davanagere lok sabha constituency bjp candidate gayatri siddeshwar election campaign in harapanahalli
ರಾಜಕೀಯ45 mins ago

Lok Sabha Election: ಹರಪನಹಳ್ಳಿಯಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌