Site icon Vistara News

Rain News | ಬೆಣ್ಣೆಹಳ್ಳದಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

rain news

ಧಾರವಾಡ: ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಬಳಿಯ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಶುಕ್ರವಾರ ನೀರಲ್ಲಿ ತಡಹಾಳ ಗ್ರಾಮದ ಸದಾನಂದ ಪೂಜಾರ (೩೫) (Rain News) ನೀರುಪಾಲಾಗಿದ್ದರು. ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದರು. ಮೃತದೇಹ ಭಾನುವಾರ ಪತ್ತೆಯಾಗಿದೆ.

ಇಲ್ಲಿನ ಬೆಣ್ಣೆಹಳ್ಳದಲ್ಲಿ ಮಳೆಯಿಂದ (Rain News) ತುಂಬಿ ಹರಿಯುತ್ತಿತ್ತು. ಅದರಲ್ಲಿಯೇ ಬೈಕ್‌ ಚಲಾಯಿಸುವಾಗ ನೀರಿನ ಸೆಳೆತಕ್ಕೆ ಸಿಲುಕಿ ಬೈಕ್ ಸಮೇತ ಸದಾನಂದ ಪೂಜಾರ (35) ಕೊಚ್ಚಿಹೋಗಿದ್ದರು. ಮತ್ತೊಬ್ಬ ಸವಾರ ಶರಣಯ್ಯ ಹಿರೇಮಠ ಪ್ರಾಣಾಪಾಯದಿಂದ ಪಾರಾಗಿದ್ದರು.

ಇಬ್ಬರೂ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ತಕ್ಷಣ ನೀರಿಗೆ ಧುಮುಕಿ ಶರಣಯ್ಯ ಅವರನ್ನು ರಕ್ಷಿಸಿದ್ದರು. ಆದರೆ, ಸದಾನಂದ ನೀರಿನ ಸೆಳೆತಕ್ಕೆ ಸಿಲುಕಿ ಬಹಳ ದೂರ ಹೋಗಿದ್ದರಿಂದ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ | Rain News | ಗದಗದಲ್ಲಿ ಭಾರಿ ಮಳೆ; ಸಿಡಿಲು ಬಡಿದು ಒಬ್ಬ ಸಾವು

Exit mobile version