Site icon Vistara News

Road Accident : ಬೈಕ್‌ಗೆ ಬೊಲೆರೋ ಡಿಕ್ಕಿ; ಪಕ್ಕದ ರಸ್ತೆಗೆ ಹಾರಿ ಬಿದ್ದ ಸವಾರ ಸ್ಪಾಟ್‌ ಡೆತ್‌

Road Accident

ಧಾರವಾಡ: ಧಾರವಾಡದ ವಿಶ್ವಕರ್ಮ ಸರ್ಕಲ್‌ನಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಬೈಕ್‌ಗೆ ಹಿಂದಿನಿಂದ ಬಂದ ಬೊಲೆರೋ ವಾಹನವೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್‌ನಿಂದ ಹಾರಿ ಪಕ್ಕದ ರಸ್ತೆ ಬಿದ್ದ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಧಾರವಾಡದ ಮದಿಹಾಳ ಬಡಾವಣೆ ನಿವಾಸಿ ರೋಹಿತ್ ಜಗದೀಶ ಕುಂಬಾರ (20), ಮೃತ ದುರ್ದೈವಿ. ಅಪಾಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಬೊಲೆರೋ ಹಿಂದಿನಿಂದ ಗುದ್ದಿದೆ. ಡಿಕ್ಕಿ ರಭಸಕ್ಕೆ ರೋಹಿತ್ 10 ಅಡಿ ದೂರ ಹೋಗಿ ಬಿದ್ದಿದ್ದ. ಈ ವೇಳೆ ಹೆಲ್ಮೆಟ್ ಹಾಕಿಕೊಂಡಿದ್ದರೂ ಪ್ರಾಣ ಪಕ್ಷಿ ಹಾರಿಹೋಗಿದೆ. ಧಾರವಾಡ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಇದನ್ನೂ ಓದಿ: Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯೇಕ ಕಡೆ ಅಪಘಾತ

ಬೆಂಗಳೂರಿನ ವಿಧಾನಸೌಧ ಸಮೀಪ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಕಾರು ನಡುವೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ.

ಬಿಎಂಟಿಸಿ ಬಸ್‌ ಅತಿ ವೇಗವಾಗಿ ಬಂದಿದ್ದೆ ಈ ಅಪಘಾತಕ್ಕೆ ಕಾರಣಕ್ಕೆ ಎನ್ನಲಾಗಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಡಿವೈಡರ್‌ಗೆ ಸಿಮೆಂಟ್‌ ಲಾರಿ ಡಿಕ್ಕಿ

ಬೆಂಗಳೂರಿನ ಶಾಂತಿನಗರದ ಬ್ರಿಡ್ಜ್ ಬಳಿ ರಸ್ತೆ ಅಪಘಾತ ನಡೆದಿದೆ. ಡಬಲ್‌ ರೋಡ್‌ನಲ್ಲಿ ಸಿಮೆಂಟ್‌ ಲಾರಿಯೊಂದು ವೇಗವಾಗಿ ಬಂದು ಡಿವೈಡರ್‌ಗೆ ಗುದ್ದಿದೆ. ಸೆಲ್ಫ್‌ ಆ್ಯಕ್ಸಿಡೆಂಟ್‌ನಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಂ ಉಂಟಾಗಿತ್ತು. ಸದ್ಯ ಸಂಚಾರಿ ಪೊಲೀಸರು ಕ್ರೇನ್‌ ಮೂಲಕ ಲಾರಿಯನ್ನು ತೆರವುಗೊಳಿಸಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version