‌Self Harming : ಅಯ್ಯೋ ವಿಧಿಯೇ!; ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಂದು ತಾಯಿಯೂ ಆತ್ಮಹತ್ಯೆ - Vistara News

ಧಾರವಾಡ

‌Self Harming : ಅಯ್ಯೋ ವಿಧಿಯೇ!; ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಂದು ತಾಯಿಯೂ ಆತ್ಮಹತ್ಯೆ

Self Harming : ತಾಯಿಯೊಬ್ಬಳು ತನ್ನಿಬ್ಬರು ಪುಟ್ಟ ಮಕ್ಕಳನ್ನು ಕತ್ತು ಹಿಸುಕಿ ತಾನೂ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಗೇನು ಕಷ್ಟವಿತ್ತೋ ಗೊತ್ತಿಲ್ಲ. ತಾನೂ ಸಾಯಬೇಕು, ಸತ್ತ ಬಳಿಕ ಮಕ್ಕಳು ಉಳಿಯಬಾರದು ಎಂಬ ನಿರ್ಧಾರಕ್ಕೆ ಆಕೆ ಬಂದಂತಿದೆ.

VISTARANEWS.COM


on

Self Harming Dharwad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ತಾಯಿಯೊಬ್ಬರು ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ (Mother kills two children) ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ (Self Harming) ಭಯಾನಕ ಘಟನೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ (Dharwad News) ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಸಾಮೂಹಿಕ ಸಾವು ಸಂಭವಿಸಿದೆ.

ಸಾವಿತ್ರಿ ಸರಕಾರ (32) ಎಂಬವರೇ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡವರು. ಐದು ವರ್ಷದ ಮಗಳು ಸುಮಾ ಮತ್ತು ನಾಲ್ಕು ವರ್ಷದ ಮಗು ದರ್ಶನ್ ತಾಯಿಯ ಕೈಯಿಂದಲೇ ಕೊಲೆಯಾದ ದುರ್ದೈವಿ ಮಕ್ಕಳು. ಮಕ್ಕಳನ್ನು ಕೊಂದ ಬಳಿಕ ಆಕೆ ತಾನೇ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿ ತಾಯಿಯೊಬ್ಬಳು ಮಕ್ಕಳನ್ನು ಕೊಂದು ತಾನೂ ಪ್ರಾಣ ಕಳೆದುಕೊಳ್ಳಲು ಕಾರಣವಾದ ಅಂಶ ಏನು ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ನವಲಗುಂದ ಪೋಲಿಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಮನೆಯವರೆಲ್ಲರೂ ಜಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : Self Harming : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 1 ವರ್ಷದ ಪುಟ್ಟ ಮಗುವಿನ ತಾಯಿ ಆತ್ಮಹತ್ಯೆ

ಎರಡು ವರ್ಷದ ಮಗಳನ್ನು ಕೊಂದು ಪ್ರಾಣ ಕಳೆದುಕೊಂಡಿದ್ದ ಮಹಿಳೆ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ತಾಯಿಯೊಬ್ಬಳು ತನ್ನ ಎರಡು ವರ್ಷದ ಪುಟ್ಟ ಮಗಳನ್ನು ನೇಣಿಗೆ ಹಾಕಿ ಬಳಿಕ ತಾನೂ ನೇಣು ಹಾಕಿಕೊಂಡು ಪ್ರಾಣ ಕಳೆದುಕೊಂಡ ಘಟನೆ ಫೆಬ್ರವರಿ 14ರಂದು ನಡೆದಿತ್ತು. ಶಿವಲೀಲಾ ಆನಂದ(24) ಎಂಬಾಕೆಯೇ ತನ್ನ ಪುಟ್ಟ ಮಗಳು, ಎರಡು ವರ್ಷದ ವರ್ಷಿತಾಳನ್ನು ಕೊಂದು ತಾನೂ ಜೀವನ ಮುಗಿಸಿಕೊಂಡವಳು. ಮೊದಲು ಎರಡು ವರ್ಷದ ಮಗಳನ್ನು ನೇಣಿಗೆ ಹಾಕಿ ಬಳಿಕ ತಾನೂ ನೇಣಿಗೆ ಕೊರಳೊಡ್ಡಿದ್ದಾಳೆ ತಾಯಿ ಶಿವಲೀಲಾ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕೆ ಸಾವಿಗೆ ಶರಣಾಗಿದ್ದಾಳೆ.

ಗಂಡ ಮತ್ತು ಅತ್ತೆಯ ಕಿರುಕುಳದಿಂದ ಬೇಸತ್ತು ಶಿವಲೀಲಾ ಮಗುವನ್ನು ಕೊಂದು ತಾನೂ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಚಿಂಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಂಡ ಆನಂದ ನನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Self Harming : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 1 ವರ್ಷದ ಪುಟ್ಟ ಮಗುವಿನ ತಾಯಿ ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು, ಚಿಕ್ಕಮಗಳೂರಲ್ಲಿ (Rain News) ಮಳೆಯಾಗಿದ್ದು, ನಾಳೆ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು:ಕಳೆದೊಂದು ವಾರದಿಂದ ಮಲೆನಾಡು ಭಾಗದಲ್ಲಿ ಬಿಡುವು ಕೊಟ್ಟಿದ್ದ ವರುಣ ಸೋಮವಾರ (Karnataka weather Forecast) ಅಬ್ಬರಿಸಿದ್ದ. ಕಾಫಿನಾಡು ಚಿಕ್ಕಮಗಳೂರಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆ (Rain News) ಸುರಿದಿದೆ. ಗಾಳಿ ಸಹಿತ ಮಳೆಗೆ ಸವಾರರು ಹೆಡ್ ಲೈಟ್ ಹಾಕಿಕೊಂಡೇ ವಾಹನ ಚಾಲನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್, ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರೀ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಅದರಲ್ಲೂ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಮಂದಗತಿಯಲ್ಲಿ ಸಾಗಿದ್ದವು. ಭಾರಿ ಮಳೆಗೆ ರಸ್ತೆ ಕಾಣದೆ ಹಲವರು ರಸ್ತೆ ಬದಿ ವಾಹನ ನಿಲ್ಲಿಸಿಕೊಂಡಿದ್ದರು.

ಬೆಂಗಳೂರಲ್ಲಿ ಸಣ್ಣ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯು ಮಾಯವಾಗಿತ್ತು. ನಗರದ ಹಲವು ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಶುರುವಾಗಿತ್ತು. ಮುಖ್ಯವಾಗಿ ಕಾರ್ಪೋರೇಶನ್, ಕೆಆರ್‌ ಮಾರ್ಕೆಟ್, ಮೆಜೆಸ್ಟಿಕ್, ಶೇಷಾದ್ರಿಪುರಂ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯುನ್ನುಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕುಮಟಾದಲ್ಲಿ ಅತಿ ಹೆಚ್ಚು ಮಳೆ ದಾಖಲು

ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 9 ಸೆಂ.ಮೀ ದಾಖಲಾಗಿದೆ.

ಉಳಿದಂತೆ ಗೇರ್ಸೊಪ್ಪ, ಗೋಕರ್ಣ, ಅಂಕೋಲಾ, ಗದಗದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಕಿ, ಹಳಿಯಾಳ, ಶಿರಾಲಿ ಪಿಟಿಒ, ಸಂಕೇಶ್ವರ , ಕುಶಾಲನಗರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಇನ್ನೂ ಕಾರವಾರ, ಹೊನ್ನಾವರ, ನಿಪ್ಪಾಣಿಯಲ್ಲಿ 3 ಸೆಂ.ಮೀ ಹಾಗೂ ಯಲ್ಲಾಪುರ, ಮುಂಡಗೋಡು , ಚಿಕ್ಕೋಡಿ , ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲದಲ್ಲಿ 2 ಸೆಂ.ಮೀ ಮಳೆಯಾಗಿದೆ. ಬೆಳ್ತಂಗಡಿ, ಸಿದ್ದಾಪುರ, ಜಗಲಬೆಟ್, ಕೋಟ, ಕಿರವ, ಕದ್ರಾ, ಲೋಂಡಾ, ಹಾವೇರಿ ಪಿಟಿಒ, ಔರಾದ್ , ಧಾರವಾಡ ಹಾಗೂ ಕುಂದಗೋಳ, ಚಿಂತಾಮಣಿ, ರಾಯಲ್ಪಾಡು, ಸೋಮವಾರಪೇಟೆ, ಕೊಡಗು, ಹಾರಂಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಜೂನ್‌ 18ರಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿಯು ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

Drown in Quarry: ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಒಬ್ಬ ಯುವಕನ ಮೃತದೇಹ ಸಿಕ್ಕಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.

VISTARANEWS.COM


on

Two drown in quarry
Koo

ಧಾರವಾಡ: ಕಲ್ಲಿನ‌ ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ (Drown in Quarry) ಘಟನೆ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿಯ ಶ್ರೇಯಸ್ ಸೇರಿ ಇಬ್ಬರು ಮೃತರು. ಶ್ರೇಯಸ್‌ ಮೃತದೇಹ ಸಿಕ್ಕಿದ್ದು, ಮತ್ತೊಬ್ಬನ ದೇಹಕ್ಕೆ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿದ್ಯುತ್ ತಗುಲಿ ಯುವಕ ಸಾವು

ಮಂಗಳೂರು: ವಿದ್ಯುತ್ ಕಂಬ ಏರಿ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್‌ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಅವಘಡ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್‌ನ ಪ್ರಕಾಶ್ (29) ಮೃತ.

ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್‌ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ಮಾಡುತ್ತಿದ್ದಾಗ ಯುವಕನಿಗೆ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾನೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

ಬೆಳಗಾವಿ: ಕಾರೊಂದು ಹರಿದ ಪರಿಣಾಮ (Road Accident) ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವಿನಯ್ ಲಕ್ಷ್ಮಣ ಕೆಂಚನ್ನವರ್(8) ಮೃತ ದುರ್ದೈವಿ.

ಅಂದಹಾಗೇ ವಿನಯ್‌ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್‌ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.

ಇದನ್ನೂ ಓದಿ | Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ಆದರೆ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದಾಗಿ ಖಚಿತ ಪಡಿಸಿದ್ದಾರೆ. ಬಳಿಕ ಆಸ್ಪತ್ರೆಯಿಂದ ಚಾಲಕ ನೇರ ಠಾಣೆಗೆ ಹಾಜರಾಗಿದ್ದಾನೆ. ಸದ್ಯ ಬಾಲಕನ ಮೃತದೇಹವು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಇದರ ನಡುವೆಯೂ ಕರಾವಳಿ, ಮಲೆನಾಡು ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾದರೆ, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

ಹೆಚ್ಚಿನ ಜನಕ್ಕೆ ಬೆಳಗಿನ ತಿಂಡಿಯ ಮಹತ್ವವೇ ತಿಳಿದಿರುವುದಿಲ್ಲ. ಈ ಮಾತನ್ನು ಹೇಳುವುದಕ್ಕೂ ಕಾರಣವಿದೆ. ಬೆಳಗ್ಗೆ (Morning Nutrition) ತಿಂಡಿಯನ್ನು ಎದ್ದ ನಾಲ್ಕು ತಾಸುಗಳ ನಂತರ ತಿನ್ನುವುದು, ಕೆಲವೊಮ್ಮೆ ತಿಂಡಿಯನ್ನೇ ತಿನ್ನದಿರುವುದು, ದಿನದ ಪ್ರಾರಂಭಕ್ಕೆ ಸೂಕ್ತ ಅಲ್ಲದ್ದನ್ನು ತಿನ್ನುವುದು, ಕೇವಲ ಕಾಫಿ/ಟೀ ಕುಡಿದು ಮಧ್ಯಾಹ್ನ ಊಟ ಮಾಡುವುದು- ಇಂಥ ಉದಾಹರಣೆಗಳು ಕಡಿಮೆಯೇನಿಲ್ಲ. ಆದರೆ ಬೆಳಗಿನ ತಿಂಡಿಯನ್ನು ದಿನದ ಅತ್ಯಂತ ಆರೋಗ್ಯಕರ ಊಟವನ್ನಾಗಿ ಮಾಡುವುದು ಮಹತ್ವದ್ದು ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞರು. ರಾತ್ರಿಡೀ ದೇಹಕ್ಕೆ ಅಗತ್ಯವಾದ ವಿಶ್ರಾಂತಿಯನ್ನು ನೀಡಿದ್ದಾಗಿದೆ. ಇನ್ನೀಗ ಮುಂಜಾನೆದ್ದು ದಿನವನ್ನು ಪ್ರಾರಂಭಿಸಬೇಕು ಎನ್ನುವಾಗ, ದೇಹಕ್ಕೆ ನೀಡುವಂಥ ಗ್ರಾಸ ಹೇಗಿರಬೇಕು? ಅಧಿಕ ಸತ್ವಗಳನ್ನು ಹೊಂದಿದ ಆಹಾರವನ್ನೇ ತಿನ್ನಬೇಕು ಎಂದಾದರೆ, ಏಕೆ ಹಾಗೆ? ಬೆಳಗ್ಗೆ ತಿಂಡಿ ತಿನ್ನದಿದ್ದರೆ ತೂಕ ಇಳಿಸುವುದು ಸಾಧ್ಯವಿಲ್ಲವೇ? ಇಂತಹ ಹಲವಾರು ಪ್ರಶ್ನೆಗಳು ಮನದಲ್ಲಿದ್ದರೆ, ಅವಕ್ಕೆಲ್ಲ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ. ಬೆಳಗಿನ ತಿಂಡಿಗೆ ಆರೋಗ್ಯಕರ ಕೊಬ್ಬುಗಳು, ಸಂಕೀರ್ಣ ಪಿಷ್ಟ ಮತ್ತು ಪ್ರೊಟೀನ್‌ ಇರುವಂಥ ಆಹಾರ ಅಗತ್ಯ. ಈ ಸತ್ವಗಳ ಮಿಶ್ರಣವು ದೇಹವು ದೀರ್ಘಕಾಲದವರೆಗೆ ಬಳಲದಂತೆ ನೋಡಿಕೊಳ್ಳುತ್ತದೆ. ದಿನವಿಡೀ ಅಗತ್ಯವಾದ ಚೈತನ್ಯವನ್ನು ದೇಹಕ್ಕೆ ನೀಡುತ್ತದೆ ಮತ್ತು ಆಹಾರ ತಿಂದ ತೃಪ್ತಿಯನ್ನು ಒದಗಿಸುತ್ತದೆ. ಜೊತೆಗೆ, ಬೇಗ ಹಸಿವಾಗುವುದನ್ನು ತಡೆಯುತ್ತದೆ. ಇಂಥ ಆಹಾರವು ದೇಹಕ್ಕೆ ಮಾತ್ರವಲ್ಲ, ಮನಸ್ಸಿಗೂ ಬೇಕಾದ ಗ್ರಾಸವನ್ನು ಒದಗಿಸಿಕೊಡುತ್ತದೆ. ಈ ಬಗ್ಗೆ ವಿವರಣೆ ಇಲ್ಲಿದೆ.

South Indian breakfast

ಸಂಕೀರ್ಣ ಪಿಷ್ಟಗಳು

ನಮ್ಮೆಲ್ಲ ಚಟುವಟಿಕೆಗಳನ್ನು ಮಾಡುವುದಕ್ಕೆ ನಮಗೆ ಪಿಷ್ಟ ಅಥವಾ ಕಾರ್ಬೊಹೈಡ್ರೇಟ್‌ಗಳು ಬೇಕು. ಆದರೆ ಮೈದಾ ಅಥವಾ ಸಂಸ್ಕರಿತ ತಿನಿಸುಗಳಿಂದ ಬರುವಂಥ ಸರಳ ಪಿಷ್ಟವಲ್ಲ, ದೀರ್ಘ ಕಾಲದವರೆಗೆ ಶಕ್ತಿಯನ್ನು ಉಣಿಸುವಂಥ ಸಂಕೀರ್ಣವಾದ ಪಿಷ್ಟಗಳು ಬೇಕು. ಇದನ್ನು ಇಡೀ ಧಾನ್ಯಗಳು, ಓಟ್ಸ್‌, ಸಿರಿ ಧಾನ್ಯಗಳು, ಕಿನೊವಾ, ರಾಗಿ ಮುಂತಾದ ನಾರುಭರಿತ ಅಂದರೆ ತೌಡು ಸಹಿತವಾದ ಧಾನ್ಯಗಳಿಂದ ಪಡೆಯಬಹುದು. ಈ ಧಾನ್ಯಗಳಿಂದ ಉಪ್ಪಿಟ್ಟು, ಅವಲಕ್ಕಿ, ದೋಸೆ, ಇಡ್ಲಿ, ಚಿತ್ರಾನ್ನ… ನಿಮಗೆ ಇಷ್ಟವಾದ ಯಾವುದನ್ನಾದರೂ ಮಾಡಿ.

ಪ್ರೊಟೀನ್‌

ಬೆಳಗಿನ ತಿಂಡಿಗೆ ಹೆಚ್ಚಿನ ಪ್ರಮಾಣದ ಪ್ರೊಟೀನ್‌ ಅಗತ್ಯ. ಇದರಿಂದ ದೇಹದ ರಿಪೇರಿ ಕೆಲಸ, ಹಾರ್ಮೋನುಗಳ ಕ್ಷಮತೆ, ಕಿಣ್ವಗಳ ಉತ್ಪಾದನೆ ಮುಂತಾದ ಮಹತ್ವದ ಕೆಲಸಗಳೆಲ್ಲವೂ ಮಟ್ಟಸವಾಗಿ ಇರುತ್ತದೆ. ಇದಕ್ಕಾಗಿ ಹಾಲು, ಮೊಸರು, ಗ್ರೀಕ್‌ ಯೋಗರ್ಟ್‌, ಪನೀರ್‌, ತೋಫು, ಮೊಟ್ಟೆ, ಕಾಳುಗಳು, ಸೋಯಾ, ಕಾಯಿ ಮತ್ತು ಬೀಜಗಳು ಬೆಳಗಿನ ಆಹಾರದಲ್ಲಿ ಇರಬೇಕು. ಆಮ್ಲೆಟ್‌ ಜೊತೆಗೆ ಇಡೀಧಾನ್ಯದ ಬ್ರೆಡ್‌ ಅಥವಾ ಚಪಾತಿಯಂಥವು ಬೇಕು ಎನ್ನುವುದು ಸ್ಪಷ್ಟವಾಗಿದೆಯಲ್ಲವೇ?

ಆರೋಗ್ಯಕರ ಕೊಬ್ಬು

ಇದು ಸಹ ಅತಿ ಮುಖ್ಯವಾದ ಸತ್ವ. ದೇಹದ ತೂಕವನ್ನು ನಿಯಂತ್ರಿಸಲು, ಹೆಚ್ಚಿನ ಕೊಬ್ಬು ದೇಹದಲ್ಲಿ ಜಮೆಯಾಗದಂತೆ ಕಾಯ್ದುಕೊಳ್ಳಲು ಇದು ಅಗತ್ಯ. ದೇಹದ ಅಂಗಾಂಗಗಳೆಲ್ಲ ಸರಿಯಾಗಿ ಕೆಲಸ ಮಾಡಲು ಈ ಕೊಬ್ಬು ಬೇಕೇಬೇಕು. ಇದಕ್ಕಾಗಿ ಅವಕಾಡೊ, ಕಾಯಿ-ಬೀಜಗಳು, ತುಪ್ಪ, ಕೊಬ್ಬರಿ ಎಣ್ಣೆಯಂಥ ಆರೋಗ್ಯಕರ ತೈಲಗಳು, ಪೀನಟ್‌ಬಟರ್‌ ಅಥವಾ ಇನ್ನಾವುದಾದರೂ ಬೀಜಗಳ ತುಪ್ಪ- ಇವೆಲ್ಲ ಶರೀರಕ್ಕೆ ಬೇಕು. ಮೆದುಳಿನ ಆರೋಗ್ಯ ರಕ್ಷಣೆಗಂತೂ ಇವು ತೀರಾ ಅಗತ್ಯವಾದವು. ಇವುಗಳಲ್ಲಿರುವ ಒಮೇಗಾ ೩ ಕೊಬ್ಬಿನಾಮ್ಲವು ಇಡೀ ದೇಹದ ಸ್ವಾಸ್ಥ್ಯಕ್ಕೆ ಅಗತ್ಯವಾಗಿದ್ದು.

drinking water

ನೀರು

ಇದಿಷ್ಟರ ಜೊತೆಗೆ ದಿನಕ್ಕೆ ಮೂರು ಲೀ. ನೀರು ಕುಡಿಯುವುದು ಬಹುಮುಖ್ಯ. ರಾತ್ರಿಡೀ ನೀರಿಲ್ಲದೆ ಇರುವಂಥ ದೇಹಕ್ಕೆ ಬೆಳಗಿನ ಹೊತ್ತು ಒಂದೆರಡು ಗ್ಲಾಸ್‌ ನೀರು ಕುಡಿಸಿ. ಬರೀ ನೀರು ಕುಡಿಯುವುದು ಕಷ್ಟ ಎನಿಸಿದರೆ, ಸಕ್ಕರೆ ರಹಿತವಾದ ಯಾವುದೇ ರಸಗಳನ್ನು ಸೇರಿಸಿಕೊಳ್ಳಬಹುದು. ಜೊತೆಗೆ, ದಿನವಿಡೀ ಹರ್ಬಲ್‌ ಚಹಾಗಳು, ಎಳನೀರು, ರಸಭರಿತ ಹಣ್ಣು-ತರಕಾರಿಗಳು, ಮಜ್ಜಿಗೆ- ಇಂಥವೆಲ್ಲ ದಿನದ ಮೂರು ಲೀ. ನೀರು ಕುಡಿಯುವ ಗುರಿಯನ್ನು ಪೂರ್ಣಗೊಳಿಸಲು ನೆರವಾಗುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Rain News : ಭಾನುವಾರ ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಬೆಂಗಳೂರು: ಭಾನುವಾರ ರಾಯಚೂರು ನಗರದಾದ್ಯಂತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ (Rain News) ವಾತಾವರಣ ಕೂಲ್‌ (Karnataka weather Forecast) ಆಗಿತ್ತು. ದಿಢೀರ್‌ ಮಳೆಯಿಂದಾಗಿ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಕೊಂಚ ನಿರಾಸೆಯಾಗಿತ್ತು. ಕೆಲವಡೆ ಮಳೆಯಿಂದ ವಾಹನ ಸವಾರರು ಪರದಾಡಿದರು.

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಗೋಕರ್ಣದಲ್ಲಿ 2, ಶಿರಾಲಿ ಹಾಗೂ ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಮುಂದಿನ 24 ಗಂಟೆ ಮಳೆ ಸಾಧ್ಯತೆ

ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರಲಿದೆ

Lockie Ferguson
ಕ್ರಿಕೆಟ್6 hours ago

Lockie Ferguson: 4 ಓವರ್‌ ಎಸೆದು, ಒಂದೂ ರನ್‌ ಕೊಡದೆ 3 ವಿಕೆಟ್‌ ಕಿತ್ತ ಲಾಕಿ ಫರ್ಗ್ಯೂಸನ್;‌ ವಿಶ್ವದಾಖಲೆ

Narendra Modi
ಪ್ರಮುಖ ಸುದ್ದಿ7 hours ago

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Actor Chikkanna
ಕರ್ನಾಟಕ8 hours ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ9 hours ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು9 hours ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ9 hours ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ9 hours ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ9 hours ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ9 hours ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು17 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು18 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌