Shivshakti Dhama: ಹುಬ್ಬಳ್ಳಿಯ ಪಾಲಿಕೊಪ್ಪದಲ್ಲಿ ಶೃಂಗೇರಿ ಜಗದ್ಗುರುಗಳಿಂದ ಶಿವಶಕ್ತಿ ಧಾಮ ಲೋಕಾರ್ಪಣೆ - Vistara News

ಧಾರವಾಡ

Shivshakti Dhama: ಹುಬ್ಬಳ್ಳಿಯ ಪಾಲಿಕೊಪ್ಪದಲ್ಲಿ ಶೃಂಗೇರಿ ಜಗದ್ಗುರುಗಳಿಂದ ಶಿವಶಕ್ತಿ ಧಾಮ ಲೋಕಾರ್ಪಣೆ

Shivshakti Dhama: ಹಿಂದು ಸಂಸ್ಕೃತಿಯ ಪ್ರಚಾರ ಮತ್ತು ಐಕ್ಯತೆ ದೃಷ್ಟಿಯಿಂದ ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾಗಿರುವ ದೇವಾಲಯಗಳ ಸಮುಚ್ಚಯಕ್ಕೆ “ಶ್ರೀಶಿವಶಕ್ತಿ ಧಾಮ’ ಎಂದು ನಾಮಕರಣ ಮಾಡಿದ ಶೃಂಗೇರಿ ಜಗದ್ಗುರುಗಳು, ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಶಿವಲಿಂಗಕ್ಕೆ “ಆನಂದೇಶ್ವರ’, ಚಂಡಿಕೇಶ್ವರಿ ಮಾತೆಗೆ “ಜ್ಞಾನಾಂಬಿಕೆ’, ವಿನಾಯಕನಿಗೆ “ವಿಜಯ ಗಣಪತಿ’ ಎಂದು ನಾಮಕರಣ ಮಾಡಿದ್ದಾರೆ.

VISTARANEWS.COM


on

Sringeri Jagadguru inaugurates Shivashakti Dhama at Palikoppa in Hubballi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ (Dr Vijaya Sankeshwar) ಅವರ ಬಹುದಿನಗಳ ಸಂಕಲ್ಪ ಸಾಕಾರಗೊಂಡಿದೆ. ಶ್ರೀ ಶಿವಶಕ್ತಿ ಧಾಮದ (Shivshakti Dhama) ಲೋಕಾರ್ಪಣೆಯು ಗುರುವಾರ ವಿಧ್ಯುಕ್ತವಾಗಿ ನೆರವೇರಿತು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು (Jagadguru Sri Vidhushekhara Bharathi Mahaswamiji) ಶಿವಶಕ್ತಿಧಾಮವನ್ನು ಉದ್ಘಾಟಿಸಿದರು.

ಹಿಂದು ಸಂಸ್ಕೃತಿಯ ಪ್ರಚಾರ ಮತ್ತು ಐಕ್ಯತೆ ದೃಷ್ಟಿಯಿಂದ ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾಗಿರುವ ದೇವಾಲಯಗಳ ಸಮುಚ್ಛಯಕ್ಕೆ “ಶ್ರೀಶಿವಶಕ್ತಿ ಧಾಮ’ ಎಂದು ನಾಮಕರಣ ಮಾಡಿದ ಶೃಂಗೇರಿ ಜಗದ್ಗುರುಗಳು, ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಶಿವಲಿಂಗಕ್ಕೆ “ಆನಂದೇಶ್ವರ’, ಚಂಡಿಕೇಶ್ವರಿ ಮಾತೆಗೆ “ಜ್ಞಾನಾಂಬಿಕೆ’, ವಿನಾಯಕನಿಗೆ “ವಿಜಯ ಗಣಪತಿ’ ಎಂದು ನಾಮಕರಣ ಮಾಡಿದ್ದಾರೆ. ಜತೆಗೆ ಆದಿತ್ಯಾದಿ ನವಗ್ರಹಗಳು, ಶನೈಶ್ಚರ ಸ್ವಾಮಿ ಮತ್ತು ಕ್ಷೇತ್ರಪಾಲಕ ಕಾಲಭೈರವೇಶ್ವರನ ಮೂರ್ತಿಗಳನ್ನು ಮಾ ಶುದ್ಧ ತ್ರಯೋದಶಿಯ ರಾಜಯೋಗದ ಸುಮುಹೂರ್ತದಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡಿ, ಸ್ವತಃ ಜಗದ್ಗುರುಗಳು ಕುಂಭಾಭಿಷೇಕ ಸಹಿತ ಬ್ರಹ್ಮಕಳಸಾರೋಹಣ ಮಾಡಿದರು.

Sringeri Jagadguru inaugurates Shivashakti Dhama at Palikoppa in Hubballi
Sringeri Jagadguru inaugurates Shivashakti Dhama at Palikoppa in Hubballi

ಬುಧವಾರ ಸಂಜೆಯೇ ಪಾಲಿಕೊಪ್ಪ ಕ್ಷೇತ್ರಕ್ಕೆ ಆಗಮಿಸಿದ ಶೃಂಗೇರಿ ಜಗದ್ಗುರುಗಳನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ದೇವಾಲಯದ ಪೂರ್ಣ ಪರಿಸರವನ್ನು ನೋಡಿದ ಶ್ರೀಗಳು ಇದೊಂದು ದೊಡ್ಡ ಕ್ಷೇತ್ರವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು. ಶೃಂಗೇರಿ ಪೀಠದ 100ಕ್ಕೂ ಹೆಚ್ಚು ಋತ್ವಿಜರ ತಂಡವು ಕಳೆದೆರಡು ದಿನಗಳಿಂದ ಧಾರ್ಮಿಕ ಕಾರ್ಯಕ್ರಮದ ವೈದಿಕತ್ವವನ್ನು ವಹಿಸಿ, ಸ್ಥಲಶುದ್ಧಿ, ನಾಂದಿಪೂಜೆಯಿಂದ ಆರಂಭಿಸಿ ವಿವಿಧ ಹೋಮ ಮತ್ತು ಹವನ ಹಾಗೂ ಗುರುಪಾದುಕಾ ಪೂಜೆಯೊಂದಿಗೆ ಅಷ್ಟಬಂಧ ಪ್ರಾಣಪ್ರತಿಷ್ಠಾಪನೆಯನ್ನು ನೆರವೇರಿಸಿತು.

Sringeri Jagadguru inaugurates Shivashakti Dhama at Palikoppa in Hubballi
Sringeri Jagadguru inaugurates Shivashakti Dhama at Palikoppa in Hubballi

ಗುರುವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಆರಂಭವಾದ ಧಾರ್ಮಿಕ ವಿಧಿವಿಧಾನಗಳು ಅಂತಿಮವಾಗಿ ಜಗದ್ಗುರುಗಳ ಅಮೃತ ಹಸ್ತದಿಂದ ಬ್ರಹ್ಮಕಲಶತೀರ್ಥದ ಅಭಿಷೇಕ ಹಾಗೂ ಮಹಾಪೂಜೆಯೊಂದಿಗೆ ಸಂಪನ್ನಗೊಂಡವು. ಬೃಹತ್​ ಗರ್ಭಗೋಪುರ ಮತ್ತು ರಾಜಗೋಪುರದ ಮೇಲೆ ಪ್ರತಿಷ್ಠಾಪಿಸಲಾಗಿರುವ ಪಂಚಕಲಶಗಳಿಗೆ ಸ್ವತಃ ಜಗದ್ಗುರುಗಳು ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ, ಶ್ರೀಮತಿ ಲಲಿತಾ ವಿಜಯ ಸಂಕೇಶ್ವರ, ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ, ವಾಣಿ ಆನಂದ ಸಂಕೇಶ್ವರ, ವಿಜಯಾನಂದ ಟ್ರಾವೆಲ್ಸ್​ ಎಂ.ಡಿ. ಶಿವಾ ಸಂಕೇಶ್ವರ ಹಾಗೂ ಸಂಕೇಶ್ವರ ಕುಟುಂಬದ ಎಲ್ಲ ಸದಸ್ಯರು, ಬಂಧುಗಳು ಉಪಸ್ಥಿತರಿದ್ದರು.

Sringeri Jagadguru inaugurates Shivashakti Dhama at Palikoppa in Hubballi
Sringeri Jagadguru inaugurates Shivashakti Dhama at Palikoppa in Hubballi

ವಿಧಾನ ಪರಿಷತ್​ ಸದಸ್ಯ ಬಿ.ಜಿ. ಪಾಟೀಲ, ಬಿಜೆಪಿ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಶೃಂಗೇರಿ ಪೀಠದ ಆಡಳಿತಾಧಿಕಾರಿ ಪಿ.ಎ. ಮುರುಳಿ, ಆಡಳಿತ ಸಲಹೆಗಾರರಾದ ಡಾ. ಗೌರಿಶಂಕರ್​ ಮತ್ತಿತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.‌

ವಿಜಯ ಸಂಕೇಶ್ವರರ ಧರ್ಮಶ್ರದ್ಧೆ ಎಲ್ಲರಿಗೂ ಮಾದರಿ: ಶೃಂಗೇರಿ ಜಗದ್ಗುರುಗಳು

ಶಿವಶಕ್ತಿ ಧಾಮದ ಕರ್ತೃಗಳಾದ ಡಾ. ವಿಜಯ ಸಂಕೇಶ್ವರ ಅವರಿಗಿರುವ ಧರ್ಮಶ್ರದ್ಧೆ ಇತರರಿಗೆ ಮಾದರಿ ಎಂದು ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ಧಾರ್ಮಿಕ ವಿಧಿಗಳನ್ನು ಪೂರೈಸಿದ ನಂತರ ನಡೆದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು, ಮನುಷ್ಯ ದೊಡ್ಡ ಸ್ಥಾನಕ್ಕೆ ತಲುಪಿದ ನಂತರ ತಾನು ಬೆಳೆದು ಬಂದ ಹಾದಿಯನ್ನು ಮರೆಯುತ್ತಾನೆ. ಜತೆಗೆ ಧರ್ಮ, ಸಂಸ್ಕಾರವನ್ನು ಮರೆಯುತ್ತಾನೆ. ಆದರೆ, ಉದ್ಯಮಿಗಳಾದ ಡಾ. ವಿಜಯ ಸಂಕೇಶ್ವರ ಅವರು ಇಡೀ ದೇಶವೇ ಗುರುತಿಸುವ ಮಟ್ಟಿಗೆ ಸಾಧನೆ ಮಾಡಿದರೂ ಸನಾತನ ಧರ್ಮದ ಮೇಲಿನ ಶ್ರದ್ಧೆಯನ್ನು ಮರೆತಿಲ್ಲ. ಮಾತ್ರವಲ್ಲ, ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಕೂಡಾ ಅದೇ ಸಂಸ್ಕಾರವನ್ನು ನೀಡಿದ್ದಾರೆ. ವಿಜಯ ಸಂಕೇಶ್ವರರ ಸಂಕಲ್ಪದಂತೆ ಶಿವಶಕ್ತಿ ಧಾಮವನ್ನು ಸನಾತನ ಧರ್ಮದ ಕೇಂದ್ರವಾಗಿ ಬೆಳೆಸಲಾಗುವುದು ಎಂದು ಹೇಳಿದರು.

ಹಿಂದುಗಳ ಐಕ್ಯತೆಗೆ ಅಂತರ್ಜಾತಿ ವಿವಾಹ ಅವಶ್ಯ

ಹಿಂದುಗಳಲ್ಲಿರುವ ಮೇಲು ಮತ್ತು ಕೀಳು ಭಾವನೆ ನಿವಾರಣೆಯಾಗಿ ಹಿಂದುಗಳು ಒಗ್ಗಟ್ಟಾಗಲು ಅಂತರ್ಜಾತಿ ವಿವಾಹ ಅವಶ್ಯವೆಂದು ಡಾ. ವಿಜಯ ಸಂಕೇಶ್ವರ ಪ್ರತಿಪಾದಿಸಿದರು.

ಪಾಲಿಕೊಪ್ಪದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಶಕ್ತಿ ಧಾಮದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಡಾ. ವಿಜಯ ಸಂಕೇಶ್ವರ, ಹಿಂದು ಧರ್ಮದ ಒಗ್ಗಟ್ಟು ಮತ್ತು ಸಂಘಟನೆಗೆ ಸಂಬಂಧಪಟ್ಟಂತೆ ಅನೇಕ ಮಹಾತ್ಮರು ಬಹಳ ಹಿಂದಿನಿಂದಲೂ ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ. ಆದರೆ, ಈವರೆಗೆ ಅದು ಪೂರ್ಣ ಪ್ರಮಾಣದಲ್ಲಿ ಫಲ ನೀಡಿಲ್ಲ. ಹಿಂದುಗಳಲ್ಲಿರುವ ಜಾತಿ ಭೇದ, ಅಸ್ಪೃಶ್ಯತೆ, ತಾರತಮ್ಯಗಳಿಂದ ಹಿಂದುಗಳು ಒಂದಾಗಲು ಸಾಧ್ಯವಾಗಿಲ್ಲ. ಅಂತರ್ಜಾತಿ ವಿವಾಹದಿಂದ ಪರಸ್ಪರ ಪ್ರೀತಿ, ಬಾಂಧವ್ಯ ಮೂಡುತ್ತದೆ. ಇದರಿಂದ ಹಿಂದು ಸಮಾಜ ಬಲಿಷ್ಠವಾಗಲು ಸಾಧ್ಯ ಎಂದು ವಿವರಿಸಿದರು.

Sringeri Jagadguru inaugurates Shivashakti Dhama at Palikoppa in Hubballi

ಕಳೆದ 10 ವರ್ಷಗಳ ಹಿಂದೆ ರಾಮನ ಹೆಸರು ಹೇಳುವುದಾಗಲೀ, ರಾಮನ ಮಂದಿರ ನಿರ್ಮಾಣ ಮಾಡುವುದಾಗಲೀ ಅಥವಾ ನಾನೊಬ್ಬ ಹಿಂದು ಎಂದು ಹೇಳಿಕೊಳ್ಳುವುದಕ್ಕೂ ಪೂರಕವಾದ ಪರಿಸ್ಥಿತಿ ಇರಲಿಲ್ಲ. ಆದರೆ, ಇಂದು ಜಗತ್ತಿನ ಎಲ್ಲಿ ಬೇಕಾದರೂ ನಾನೊಬ್ಬ ಹಿಂದು ಎಂಬುದನ್ನು ಹೆಮ್ಮೆಯಿಂದ ಹೇಳಬಹುದು. ಇಂತಹ ಪರಿಸ್ಥಿತಿಯನ್ನು ನಿಮಿರ್ಸಿಕೊಟ್ಟ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು ಎಂದು ಡಾ. ವಿಜಯ ಸಂಕೇಶ್ವರ ಹೇಳಿದರು.

ಶೃಂಗೇರಿ ಮಠಕ್ಕೆ ಹಸ್ತಾಂತರ

ಶಿವಶಕ್ತಿ ಧಾಮವನ್ನು ಆರಾಧನಾ ಟ್ರಸ್ಟ್​ನೊಂದಿಗೆ ಇಂದಿನಿಂದ ಜಗತಸಿದ್ಧ ಶೃಂಗೇರಿ ಶಾರದಾ ಪೀಠದ ಸುಪರ್ದಿಗೆ ಹಸ್ತಾಂತರ ಮಾಡುತ್ತಿದ್ದೇವೆ ಎಂದು ಡಾ. ವಿಜಯ ಸಂಕೇಶ್ವರ ಘೋಷಣೆ ಮಾಡಿದರು. ಆರಾಧನಾ ಟ್ರಸ್ಟ್​ ಆಡಳಿತ ಮಂಡಳಿಯ ಸದಸ್ಯರು, ನಮ್ಮ ಎಲ್ಲ ಸಂಬಂಧಿಕರು ಮನಃಪೂರ್ವಕವಾಗಿ ಶೃಂಗೇರಿ ಮಠಕ್ಕೆ ಈ ತೀರ್ಥ ಕ್ಷೇತ್ರವನ್ನು ಹಸ್ತಾಂತರ ಮಾಡಲು ಒಪ್ಪಿದ್ದೇವೆ ಎಂದು ಹೇಳಿದರು.

ಶನಿ ದೇಗುಲ ಕಟ್ಟಿದ್ದು ಏಕೆಂದು ವಿವರಣೆ

ಇಲ್ಲಿ ಶಿವನ ಮೂರ್ತಿಯಲ್ಲದೆ ಬಲಮುರಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಶಿವ ಪಾರ್ವತಿ ದೇವಾಲಯ, ನವಗ್ರಹ, ಕಾಲಭೈರವ ದೇಗುಲ ನಿರ್ಮಾಣ ಮಾಡಲಾಗಿದೆ. ನನಗೆ ಬಹಳ ಇಷ್ಟದ ದೇವರು ಶನಿದೇವರು. ಎಲ್ಲರಿಗೂ ಜೀವನದಲ್ಲಿ ತಾಪತ್ರಯ ಇರುತ್ತವೆ. ಅವರೆಲ್ಲ ಶನಿದೇವರ ದರ್ಶನ ಮಾಡಬೇಕಾದರೆ ತಮಿಳುನಾಡಿನ ತಿರುನೆಲ್ಲೂರು, ಇಲ್ಲವೇ ಮಹಾರಾಷ್ಟ್ರದ ಶನಿಶಿಂಗಣಾಪುರಕ್ಕೆ ಹೋಗಬೇಕು. ಸಾವಿರಾರು ಮಠ, ಮಂದಿರಗಳನ್ನು ನೋಡಿದ್ದೇನೆ. ಆದರೆ, ಶನಿಶಿಂಗಣಾಪುರ ಬಹಳ ಇಷ್ಟವಾಗುತ್ತದೆ. ಅಲ್ಲಿ ಯಾವುದೇ ವಸ್ತು ಕಳ್ಳತನವಾಗುವುದಿಲ್ಲ. ಅನೇಕ ಬಾರಿ ಹೋಗಿ ಬಂದಿದ್ದೇನೆ. ಹಾಗಾಗಿ ಇಲ್ಲಿ ಕೂಡ ಶನಿ ದೇಗುಲ ಇರಬೇಕು ಎನ್ನುವ ಇಚ್ಛೆಯಿಂದ ಕಟ್ಟಲಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಕೊಡುವರು ದೇಣಿಗೆ: ಆನಂದ ಸಂಕೇಶ್ವರ್

‌ಈ ಸಂದರ್ಭದಲ್ಲಿ ಮಾತನಾಡಿದ ವಿಆರ್​ಎಲ್​ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಅವರು, ಹುಬ್ಬಳ್ಳಿಯಿಂದ 21 ಕಿ.ಮೀ. ದೂರದ ಪಾಲಿಕೊಪ್ಪದಲ್ಲಿ ಶ್ರೀ ಶಿವಶಕ್ತಿ ಧಾಮವನ್ನು ನಿಮಿರ್ಸಲಾಗಿದೆ. ನಮ್ಮ ತಂದೆ ಡಾ. ವಿಜಯ ಸಂಕೇಶ್ವರ ಅವರ ಸಂಕಲ್ಪದಂತೆ ಮೊದಲು ಆರಾಧನಾ ಟ್ರಸ್ಟ್​ ಸ್ಥಾಪಿಸಲಾಯಿತು. ಬಹಳಷ್ಟು ಜನರು ದೇಣಿಗೆ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಈ ಟ್ರಸ್ಟ್​ಗೆ ದೇಣಿಗೆ ನೀಡಲಿದ್ದಾರೆ ಎಂದು ತಿಳಿಸಿದರು.

ನಾವು ಶಿವನ ಭಕ್ತರು. ಶಿವಾ ದೇವಾಲಯ ನಿಮಿರ್ಸಬೇಕೆಂದು ಸಂಕಲ್ಪ ಮಾಡಿದ್ದೆವು. ಅದೀಗ ಸಾಕಾರಗೊಂಡಿದೆ. ಶಿವಶಕ್ತಿ ಧಾಮದಲ್ಲಿ ಆನಂದೇಶ್ವರ, ಜ್ಞಾನಾಂಬಿಕೆ, ವಿಜಯ ಗಣಪತಿ, ಶನೈಶ್ಚರ ಸೇರಿ ವಿವಿಧ ಮೂತಿರ್ಗಳಿವೆ. ಮುರುಡೇಶ್ವರ ದೇವಸ್ಥಾನ ನಿಮಿರ್ಸಿದವರನ್ನು ಕರೆಯಿಸಿ ಈ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಪುಷ್ಕರಣಿ, ಹೊರ ಸಭಾಗೃಹ, ಅತಿಥಿಗೃಹ, ರಥಬೀದಿ ಹೀಗೆ ವಿಶೇಷ ಕಟ್ಟಡಗಳು ಇಲ್ಲಿವೆ. ಶೃಂಗೇರಿ ಮಠವು ಇದರ ನಿರ್ವಹಣೆಯ ಜವಾಬ್ದಾರಿ ತೆಗೆದುಕೊಂಡಿದೆ ಎಂದರು.

ಸತ್ಸಂಪ್ರದಾಯದ ಸೇತು ಶಿವಶಕ್ತಿಧಾಮ: ಹರಿಪ್ರಕಾಶ್‌ ಕೋಣೆಮನೆ

ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಡಾ. ವಿಜಯ ಸಂಕೇಶ್ವರ ಅವರು ಸ್ವತಃ ಧರ್ಮ ಪ್ರಜ್ಞೆ ಇರುವ ವ್ಯಕ್ತಿ, ಆಧ್ಯಾತ್ಮಿಕ ಜೀವಿ ಎಂಬುದು ಎಲ್ಲರಿಗೂ ಗೊತ್ತು. ರಾಜ್ಯ ಮತ್ತು ದೇಶದ ಹಲವು ಕಡೆ ಇಂತಹ ಅನೇಕ ಧಾರ್ಮಿಕ ಕಾರ್ಯಗಳನ್ನು ಮಾಡಿದ್ದಾರೆ. ಆದರೆ, ತಮ್ಮ ಧರ್ಮ ಕಾರ್ಯ ನಿರಂತರವಾಗಿ ಮುಂದಿನ ಪೀಳಿಗೆಗೂ ಮುಂದುವರಿಯಬೇಕೆಂಬ ಸಂಕಲ್ಪದಿಂದ ಶಿವಶಕ್ತಿ ಧಾಮವನ್ನು ನಿಮಿರ್ಸಿದ್ದಾರೆ ಎಂದು ಹೇಳಿದರು.

Sringeri Jagadguru inaugurates Shivashakti Dhama at Palikoppa in Hubballi
Sringeri Jagadguru inaugurates Shivashakti Dhama at Palikoppa in Hubballi

ಇದನ್ನೂ ಓದಿ: Swarnavalli Mutt: ಸ್ವರ್ಣವಲ್ಲೀ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ; ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಎಂದು ನಾಮಕರಣ

ಸನಾತನ ಧರ್ಮದ ಸತ್ಸಂಪ್ರದಾಯಗಳು ನಿರಂತರವಾಗಿ ಮುಂದುವರಿಯಬೇಕು ಎಂಬುದನ್ನು ಸದಾ ಪ್ರದಿಪಾದಿಸುವ ಡಾ. ವಿಜಯ ಸಂಕೇಶ್ವರ ಅವರು ಅದೇ ಹಾದಿಯಲ್ಲಿ ತಮ್ಮ ಮಗ ಆನಂದ ಸಂಕೇಶ್ವರ ಅವರನ್ನು ಬೆಳೆಸಿದ್ದಾರೆ. ನೂತನವಾಗಿ ನಿರ್ಮಾಣವಾಗಿರುವ ಈ ಬೃಹತ್​ ದೇವಾಲಯದ ಹಿಂದೆ ಅವರ ಧರ್ಮಶ್ರದ್ಧೆ ಅಡಕವಾಗಿದೆ ಎಂದು ಹರಿಪ್ರಕಾಶ್ ಕೋಣೆಮನೆ‌ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast: ರಾಜ್ಯಾದ್ಯಂತ ಮಳೆ (rain News) ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಕೊಡಗು: ಭಾರಿ ಗಾಳಿ-ಮಳೆ (Karnataka Weather Forecast) ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶನಿವಾರ ಮಾತ್ರ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ಯಾವುದೇ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕೊಡಗಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ‌ನದಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಹರಿಹರ-ಬಲ್ಯಮುಂಡೂರು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿ ನೀರು ರಸ್ತೆ ಮೇಲೆ ಹರಿದಿದೆ. ಪೊನ್ನಂಪೇಟೆ ತಾಲೂಕಿನ ಗ್ರಾಮಗಳ ಗದ್ದೆಪ್ರದೇಶಗಳು ಮುಳುಗಡೆಯಾಗಿದೆ.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ರಜೆ ಮುಂದುವರಿದಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಎಲ್ಲ ಕಡೆ ಶಾಲಾ‌-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ರಿಂದ ರಜೆ‌ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲೂ ಮಳೆ ಜತೆಗೆ ಶೀತಗಾಳಿ ಮುಂದುವರಿದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಇದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಮಳೆಯು ಅಬ್ಬರಿಸುತ್ತಿದೆ. ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ರಕ್ಷಣೆ ಮಾಡಲಾಗಿದೆ. ಕಾರವಾರದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆ ಕೊಚ್ಚಿಹೋಗಿತ್ತು.

VISTARANEWS.COM


on

By

karnataka rain
Koo

ಮಂಗಳೂರು: ಭಾರಿ ಮಳೆಗೆ ಜನರು ಮಾತ್ರವಲ್ಲ ಜಾನುವಾರುಗಳು ತತ್ತರಿಸಿ ಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ‌ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೊಚ್ಚಿಕೊಂಡು (Karnataka Rain) ಹೋಗುತ್ತಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಧಾವಿಸಿದ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ದೋಣಿಯಲ್ಲಿ ಸಾಗಿ ಹಗ್ಗ ಹಾಕಿ ಹಸುವನ್ನು ಜೀವಂತವಾಗಿ ರಕ್ಷಿಸಿ ಕರೆತಂದಿದ್ದಾರೆ.

ಇತ್ತ ಮಂಗಳೂರಿನಲ್ಲೂ ಬಿಟ್ಟು ಬಿಟ್ಟು ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ಮಂಗಳೂರು ಹೊರವಲಯದ ಕಾಜಿಲ ನೂಯಿ ಎಂಬಲ್ಲಿ ಧನಲಕ್ಷ್ಮೀ ಅವರ ಮನೆ ಸಂಪೂರ್ಣ ಕುಸಿದಿದೆ. ಮನೆಯವರೆಲ್ಲ ಅಂಗಳದಲ್ಲಿದ್ದಾಗ ಮನೆ ಕುಸಿದಿದೆ, ಹೀಗಾಗಿ ಭಾರಿ ದುರಂತವೊಂದು ತಪ್ಪಿದೆ. ಮನೆ ಸಾಮಾಗ್ರಿ ಸೇರಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕಾಂಕ್ರೀಟ್ ರಸ್ತೆ

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳ್ ಗ್ರಾಮದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್‌ ರಸ್ತೆಯು ಕೊಚ್ಚಿ ಹೋಗಿದೆ. ಸುಮಾರು ನೂರು ಅಡಿ ರಸ್ತೆ ಕಡಲಕೊರತಕ್ಕೆ ಬಲಿಯಾಗಿದೆ. ದೇವಭಾಗ್ ನಿಂದ ಮಾಜಾಳಿ ಸಂಪರ್ಕ ಮಾಡುವ ರಸ್ತೆಯನ್ನು ನಾಲ್ಕು ವರ್ಷದ ಹಿಂದೆ ನಿರ್ಮಿಸಲಾಗಿತ್ತು. ಆದರೆ ಮಳೆ ಗಾಳಿಗೆ ಹೆಚ್ಚಾದ ಕಡಲ ಕೊರೆತಕ್ಕೆ ಕೊಚ್ಚಿಹೋಗಿದೆ. ಇದರಿಂದಾಗಿ ಬಾವಳ್, ಮಾಜಾಳಿ,‌ ದೇವಭಾಗ ಗ್ರಾಮಸ್ಥರು ರಸ್ತೆ ಸಂಪರ್ಕ ಕಳೆದುಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಜೋರು ಗಾಳಿ, ಮಳೆಗೆ ಕೋಳಿ ಫಾರಂ ಧರಶಾಹಿ

ಶಿವಮೊಗ್ಗದ ಮೋಜಪ್ಪ ಹೊಸೂರು ಗ್ರಾಮದಲ್ಲಿ ಏಜಾಜ್ ಎಂಬುವವರಿಗೆ ಸೇರಿದ್ದ ಕೋಳಿ ಫಾರಂ ಧರಶಾಹಿ ಆಗಿದೆ. ಫಾರಂ ಮಾಲೀಕ ಸುಮಾರು 6 ಸಾವಿರ ಕೋಳಿಗಳನ್ನು ಸಾಕಿದ್ದರು. ಭಾರಿ ಮಳೆ ಗಾಳಿಗೆ ಕೋಳಿ ಫಾರಂ ನೆಲಚ್ಚಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಜೀವನೋಪಾಯಕ್ಕಾಗಿ ಕೋಳಿ ಫಾರಂ ನಡೆಸುತ್ತಿದ್ದ ಏಜಾಜ್ ಕುಟುಂಬ ಕಂಗಲಾಗಿದ್ದಾರೆ. ಇತ್ತ ಮಳೆ ಅಬ್ಬರಕ್ಕೆ ಕುಣೆಗದ್ದೆಯಿಂದ ಹಲಸೆ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿದು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಸ್ತೆ ಕುಸಿತದಿಂದ ವಾಹನ ಸಂಚಾರ ವ್ಯತ್ಯಯವಾಗಿತ್ತು.

ಇದನ್ನೂ ಓದಿ: Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಪ್ರವಾಹದ ನೀರಿನಲ್ಲಿ ಮುಳುಗಿದ ಎಪಿಎಂಸಿ ಮಾರುಕಟ್ಟೆ

ಹಾಸನದ ಹೊಳೆನರಸೀಪುರ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತ್ತು. ಮಾರುಕಟ್ಟೆ ಪ್ರಾಂಗಣ ಸ್ವಿಮ್ಮಿಂಗ್ ಪೂಲ್‌ನಂತೆ ಭಾಸವಾಗಿತ್ತು. ಹೊಳೆನರಸೀಪುರ – ಮಡಿಕೇರಿ ರಾಜ್ಯ ಹೆದ್ದಾರಿ ಸಮೀಪ ಇರುವ ಎಪಿಎಂಸಿ ಮಾರುಕಟ್ಟೆ ಉದ್ಘಾಟನೆಗೂ ಮೊದಲೇ ಹೇಮಾವತಿ ನದಿ ಪ್ರವಾಹದ ನೀರಿನಲ್ಲಿ ಮುಳುಗಿದೆ.

ರಾಯಚೂರಿನಲ್ಲಿ ನದಿ ತೀರದಲ್ಲಿ ಮೊಸಳೆಗಳ ಓಡಾಟ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ‌ ಮಳೆಯಿಂದಾಗಿ ತುಂಗಭದ್ರಾ ನದಿಯಲ್ಲಿ ಇದ್ದ ಮೊಸಳೆಗಳು ನದಿ ತೀರಕ್ಕೆ ಬಂದಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕಲಪರ್ವಿ ಗ್ರಾಮದ ಬಳಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿತ್ತು. ತುಂಗಭದ್ರಾ ನದಿ ತೀರದ ಗ್ರಾಮಗಳಿಗೆ ಮೊಸಳೆ ನುಗ್ಗುವ ಆತಂಕ ಎದುರಾಗಿದ್ದು, ನದಿ ದಂಡೆಗೆ ತೆರಳದಂತೆ ,ಜಾನುವಾರುಗಳನ್ನು ಬಿಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಮೊಸಳೆಯೊಂದು ಹಸುವಿ‌ನ ಕರು ಮೇಲೆ ದಾಳಿ ಮಾಡಿತ್ತು.

ಗ್ರಾಮಗಳನ್ನು ತೊರೆಯುತ್ತಿರುವ ಜನರು

ಕೃಷ್ಣಾ ನದಿಗೆ ಕೊಯ್ನಾ ಜಲಾಶಯದ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರವಾ‌ಹ ಆತಂಕ ತೀವ್ರಗೊಂಡಿದೆ. ಪ್ರವಾಹದ ಭೀತಿಯಿಂದ ಜನರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಬೆಳಗಾವಿ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಐನಾಪೂರ ರಸ್ತೆ ಮೇಲೆ ನೀರು ಬರುತ್ತಿರುವುದರಿಂದ ಜಾನುವಾರುಗಳೊಂದಿಗೆ ಜನರು ಸ್ಥಳಾಂತರಗೊಂಡಿದ್ದಾರೆ.

ರಸ್ತೆಗೆ ಬಿದ್ದ ಮರ

ಕೊಡಗಿನ ಸೋಮವಾರಪೇಟೆ ವ್ಯಾಪ್ತಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಬಿದ್ದಿತ್ತು. ಇದರಿಂದಾಗಿ ಸೋಮವಾರಪೇಟೆ ಸಮೀಪದ ಯಡವನಾಡು ಸಂಪರ್ಕ ರಸ್ತೆಯು ಬಂದ್‌ ಆಗಿತ್ತು. ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಸ್ಥಳೀಯರಿಂದಲೆ ರಸ್ತೆ ಅಡ್ಡಲಾಗಿ ಬಿದ್ದ ಮರ ತೆರವು ಮಾಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka Rain: ಭಾರಿ ಗಾಳಿ, ಮಳೆಗೆ ವಿದ್ಯುತ್‌ ಕಂಬಗಳ ಮೇಲೆ ಮರಗಳು ಬಿದ್ದು ಅವಾಂತರವೇ ಸೃಷ್ಟಿಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ವಿದ್ಯುತ್‌ ದುರಸ್ತಿ ಹಿನ್ನೆಲೆ ಲೈನ್‌ಮ್ಯಾನ್‌ ಉಕ್ಕಿ ಹರಿಯುವ ನೀರಿಗೆ ಧುಮುಕಿ ಸರಿಪಡಿಸಿದ್ದಾರೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಮಳೆಗಾಲದಲ್ಲಿ (Karnataka Rain) ಕರೆಂಟ್ ಹೋದರೆ ಥೋ…. ಅಂತ ಲೈನ್‌ಮ್ಯಾನ್‌ಗಳನ್ನು ಬೈದುಕೊಳ್ಳತ್ತಿವಿ. ಆದರೆ ಈ ವಿಡಿಯೋ ನೋಡಿದರೆ ಕರೆಂಟ್ ಹೋದರೂ ಚಿಂತೆ ಮಾಡದೆ, ವಿದ್ಯುತ್ ಇಲಾಖೆಯ ಸಿಬ್ಬಂದಿಗೆ ಶಬಾಷ್‌ ಅಂತೀರಾ. ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಹುಯಿಗೆರೆ ಗ್ರಾಮದಲ್ಲಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಹಳ್ಳದಲ್ಲಿ ಧುಮುಕಿ ಸಿಬ್ಬಂದಿ ವಿದ್ಯುತ್‌ ಲೈನ್ ಎಳೆದಿದ್ದಾರೆ.

ಎನ್.ಆರ್.ಪುರ ತಾಲೂಕಿನ ಹುಯಿಗೆರೆ ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಸೊಂಟಕ್ಕೆ ವೈರ್ ಕಟ್ಟಿಕೊಂಡು ಈ ದಡದಿಂದ ಆ ದಡಕ್ಕೆ ಈಜಿಕೊಂಡು ಹೋಗಿದ್ದಾರೆ. ವಿದ್ಯುತ್‌ ತಂತಿ ಮೇಲೆ ಮರ ಬಿದ್ದು ಕಳೆದ 3 ದಿನದಿಂದ ಹುಯಿಗೆರೆ ಗ್ರಾಮಸ್ಥರು ಕತ್ತಲಿನಲ್ಲಿದ್ದರು. ಲೈನ್ ಮ್ಯಾನ್ ರವಿಕುಮಾರ್ ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ದುರಸ್ಥಿಗೆ ಮುಂದಾದರು.

ಲೈನ್ ಮ್ಯಾನ್ ರವಿಯವರ ಈ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಕೆಲಸವನ್ನು ದೇವರ ಕೆಲಸ ಎಂದುಕೊಂಡು ರವಿಕುಮಾರ್‌ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿನಲ್ಲಿ ಜಿಗಿದು, ವಿದ್ಯುತ್‌ ಸಂಪರ್ಕ ಸರಿಪಡಿಸಿದ್ದಾರೆ.

ಮಳೆ ಅಬ್ಬರಕ್ಕೆ ಅಂತ್ಯಕ್ರಿಯೆಗೂ ಗ್ರಾಮಸ್ಥರ ಪರದಾಟ

ಬೆಳಗಾವಿಯ ಖಾನಾಪುರ ತಾಲೂಕಿನ ಅಮಗಾಂವ್ ಗ್ರಾಮದಲ್ಲಿ ಮಹಿಳೆಯ ಅಂತ್ಯಕ್ರಿಯೆಗೆ ಪರದಾಡಿದರು. ಜುಲೈ 18ರಂದು ಗ್ರಾಮದ ಹರ್ಷದಾ ಘಾಡಿ ಎಂಬುವವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ಕಟ್ಟಿಗೆ ಸ್ಟ್ರೇಚರ್ ಮೇಲೆ ಹೊತ್ತು ರವಾನಿಸಿದ್ದರು. ಐದು ಕಿಮೀ ಹೊತ್ತು ತಂದು ಬಳಿಕ ಬೆಳಗಾವಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಗುರುವಾರ ಕೆಎಲ್ಇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಗ್ರಾಮಕ್ಕೆ ತರಲು ಪರದಾಡಬೇಕಾಯಿತು. ಮಳೆಯಿಂದಾಗಿ ಆ್ಯಂಬುಲೆನ್ಸ್ ಕೆಸರಿನಲ್ಲಿ ಸಿಲುಕಬೇಕಾಯಿತು. ಹೀಗಾಗಿ ಕಟ್ಟಿಗೆಯ ಸ್ಟ್ರೇಚರ್‌ನಲ್ಲಿ ಐದು ಕಿಮೀ ಶವ ಹೊತ್ತು ಸಾಗಿದರು.

ಕಳೆದ ಎರಡು ವಾರಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಬೆಳಗಾವಿ ನಗರದಲ್ಲಿಯೂ ಭಾರಿ ಅವಾಂತರ ಸೃಷ್ಟಿಸಿದೆ. ನಿರಂತರವಾಗಿ ಸುರಿಯತ್ತಿರುವ ಮಳೆ ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಬೆಂಬಿಡದೆ ಕಾಡುತ್ತಿದೆ. ಜಿಲ್ಲಾಧಿಕಾರಿಗಳ ಬ್ರಿಟಿಷ್ ಕಾಲದ ಬಂಗಲೆಯಲ್ಲಿರುವ ಹಾಗು ಸುತ್ತಮುತ್ತ ಇರುವ ಹಳೆಯ ಮರಗಳು ಧರೆಗುರುಳುತ್ತಿವೆ. ಸರದಿ ಸಾಲಿನಲ್ಲಿ ಎಂಬಂತೆ ಮೂರು ದಿನಗಳಲ್ಲಿ ನಾಲ್ಕು ದೊಡ್ಡ ಮರಗಳು ನೆಲಕಚ್ಚಿವೆ. ಕಳೆದ ರಾತ್ರಿ ಬಿದ್ದ ಮರ ಜಿಲ್ಲಾಧಿಕಾರಿಗಳ ಮನೆಯ ಮುಖ್ಯ ದ್ವಾರದ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: Drugs Seized : ಓಲಾ, ಊಬರ್ ಡ್ರೈವಿಂಗ್ ಜತೆಗೆ ಡ್ರಗ್ಸ್‌ ಮಾರಾಟ; 6 ಕೋಟಿ ರೂ.ಮೌಲ್ಯದ ಡ್ರಗ್ಸ್‌ ಸೀಜ್‌

ಬೆಳಗಾವಿಯಲ್ಲಿ ಕುಸಿದು ಬಿದ್ದ ಮನೆಗಳು

ಬೆಳ್ಳಂ ಬೆಳಗ್ಗೆ ಮನೆ ಕುಸಿದು ಭಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಕಾಶ ಪಾಟೀಲ್ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಇತ್ತ ಭೂತರಾಮನಹಟ್ಟಿಯಲ್ಲೂ ಮನೆ ಕುಸಿದು ದುರ್ಗಪ್ಪ ಪಾಟೀಲ್ ಎಂಬುವವರ ಕೈಗೆ ಗಾಯವಾಗಿದೆ. ಗಾಯಾಳು ದುರ್ಗಪ್ಪ ಪಾಟೀಲ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಹೆಲ್ಪ್ ಲೈನ್ ತೆರೆದ ಬೆಳಗಾವಿ ಜಿಲ್ಲಾಡಳಿತ

ಇನ್ನೂ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡರೆ. ಸಮಸ್ಯೆಯಲ್ಲಿದ್ದವರಿಗೆ ಬೆಳಗಾವಿ ಜಿಲ್ಲಾಡಳಿತ ಹೆಲ್ಪ್ ಲೈನ್ ತೆರೆದಿದೆ. ಪ್ರವಾಹ ಸಹಾಯವಾಣಿ 0831-2407290, ಪೊಲೀಸ್ ಸಹಾಯವಾಣಿ 08321-2474054 ಅಥವಾ 112 ಗೆ ಕರೆ ಮಾಡಲು ಡಿಸಿ ಮತ್ತು ಎಸ್‌ಪಿ ಮನವಿ ಮಾಡಿದ್ದಾರೆ.

ರೈಲು‌ ಹಳಿಗಳ ಮೇಲೆ ಗುಡ್ಡ ಕುಸಿತ

ದೂಧಸಾಗರ್ ಮತ್ತು ಸೋನಾಲಿಯಂ ರೈಲು ನಿಲ್ದಾಣಗಳ ಮಧ್ಯೆ ಗುಡ್ಡ ಕುಸಿದಿದೆ. ಹಳಿಯ ಮೇಲೆ‌ ಅಪಾರ ಪ್ರಮಾಣದ ಕಲ್ಲು ಹಾಗೂ ಮಣ್ಣು ಉರುಳಿ ಬಿದ್ದಿದೆ. ಲೋಂಡಾ ಮಾರ್ಗವಾಗಿ ಬೆಳಗಾವಿಗೆ ಬರುವ ರೈಲುಗಳು ತಡವಾಗಿ ಚಲಿಸಿದ್ದವು. ರೈಲ್ವೆ ಇಲಾಖೆ ಪ್ರಯಾಣಿಕರಿಗೆ ತೊಂದರೆ ಆಗದಂತೆ ಬಸ್ ವ್ಯವಸ್ಥೆ ಮಾಡಿತು.

ಗಡಿ ಜಿಲ್ಲೆಯ ಜನ ರಾತ್ರಿಯಲ್ಲ‌ ನಿದ್ದೆಯಿಲ್ಲದೆ ಕಂಗೆಟ್ಟಿದ್ದಾರೆ. ದೂಧಗಂಗಾ ನದಿಯ ಅಬ್ಬರಕ್ಕೆ ಊರು ಖಾಲಿ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮದಿಂದ ಸುರಕ್ಷಿತ ಸ್ಥಳಗಳತ್ತ ಹೋಗಿದ್ದಾರೆ. ಇತ್ತ ಅಪಾಯದ ಮಟ್ಟ ಮೀರಿ ಮಾರ್ಕಂಡೇಯ ನದಿ ಹರಿಯುತ್ತಿದ್ದು, ಗೋಕಾಕ ನಗರಕ್ಕೆ ಹೊಂದಿಕೊಂಡಿರುವ ಚಿಕ್ಕೋಳಿ ಸೇತುವೆ ಬಿರುಕು ಬಿಟ್ಟಿದೆ. ಇತ್ತ ಗೋಕಾಕದ ದನದ ಪೇಟೆಗೆ ನದಿ ನೀರು ನುಗ್ಗುತ್ತಿದ್ದು, ಕೆಲ ತಗಡಿನ ಶೆಡ್‌ಗಳು ಮುಳುಗಡೆಯಾಗಿವೆ. ದನದ ಪೇಟೆ ಪಟಗುಂದಿ ಹನುಮನಿಗೂ ಜಲಕಂಟಕವಾಗಿದ್ದು, ಕ್ಷಣ ಕ್ಷಣಕ್ಕೂ ಘಟಪ್ರಭಾ ನದಿ ಒಳಹರಿವು ಹೆಚ್ಚಾಗುತ್ತಿದೆ.

ಬೆಳಗಾವಿ ಜಿಲ್ಲೆಯಲ್ಲಿ 30 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಗೋಕಾಕ್ ತಾಲೂಕಿನಲ್ಲಿ ಐದು ಸೇತುವೆಗಳು, ಮೂಡಲಗಿ ತಾಲೂಕಿನಲ್ಲಿ ಐದು ಸೇತುವೆ ಮುಳುಗಡೆಯಾಗಿದೆ. ಹುಕ್ಕೇರಿ ತಾಲೂಕಿನ ಐದು, ಚಿಕ್ಕೋಡಿ ತಾಲೂಕಿನ ನಾಲ್ಕು, ನಿಪ್ಪಾಣಿ ತಾಲೂಕಿನ ನಾಲ್ಕು, ರಾಯಬಾಗ ತಾಲೂಕಿನ ಮೂರು, ಖಾನಾಪುರ ಎರಡು, ಕಾಗವಾಡ ಒಂದು, ಅಥಣಿ ಒಂದು ಸೇತುವೆ ಜಲಾವೃತವಾಗಿದ್ದು, ಅರವತ್ತಕ್ಕೂ ಅಧಿಕ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.

ದಾವಣಗೆರೆಯಲ್ಲಿ ಜಲಾವೃತಗೊಂಡ ಸ್ಮಶಾನ

ದಾವಣಗೆರೆ ಜಿಲ್ಲೆಯ ಹರಿಹರದ ಗುತ್ತೂರು ಗ್ರಾಮದಲ್ಲಿ ತುಂಗಭದ್ರ ನದಿಗೆ ಪ್ರವಾಹ ಬಂದ ಹಿನ್ನೆಲೆ ಸ್ಮಶಾನ ಜಲಾವೃತಗೊಂಡಿತ್ತು. ನದಿಯಲ್ಲೇ ಮೃತದೇಹ ಹೊತ್ತು ಗ್ರಾಮಸ್ಥರು ಶವಸಂಸ್ಕಾರ ಮಾಡಿದರು. ಗ್ರಾಮದಲ್ಲಿ ದಲಿತ ಸಮುದಾಯದವರು ಮೃತರಾದರೆ ಶವಸಂಸ್ಕಾರಕ್ಕೂ ಸ್ಥಳವಿಲ್ಲದಂತಾಗಿದೆ. ಗುತ್ತೂರು ಗ್ರಾಮದ ಎಚ್ ಎಂ ಸಿ ಮಂಜಪ್ಪ (70) ಸಾವನ್ನಪ್ಪಿದ್ದರು. ನದಿ ದಡವೇ ಸ್ಮಶಾನವಾದ ಹಿನ್ನೆಲೆ ಶವಸಂಸ್ಕಾರಕ್ಕೆ‌ ಪರದಾಡಿದರು. ನದಿ ನೀರಿನಲ್ಲಿಯೇ ಶವ ಹೊತ್ತುಕೊಂಡು ಹೋಗಿ ಶವ ಸಂಸ್ಕಾರಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan Astrologer Chanda Pandey Said Facing Problems Because Of His vig
ಕ್ರೈಂ7 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ34 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ37 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ45 mins ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ59 mins ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್59 mins ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ1 hour ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್1 hour ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

students night
ಪ್ರಮುಖ ಸುದ್ದಿ1 hour ago

Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌