Diabetes test | ರಾಜ್ಯದಲ್ಲಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಮಧುಮೇಹ ಟೆಸ್ಟ್‌, 18 ತಿಂಗಳಲ್ಲಿ 100% ಪೂರ್ಣ - Vistara News

ಆರೋಗ್ಯ

Diabetes test | ರಾಜ್ಯದಲ್ಲಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಮಧುಮೇಹ ಟೆಸ್ಟ್‌, 18 ತಿಂಗಳಲ್ಲಿ 100% ಪೂರ್ಣ

ಮಧುಮೇಹ ಈಗ ಸದ್ದೇ ಇಲ್ಲದೆ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವುದನ್ನು ಮನಗಂಡಿರುವ ಸರಕಾರ, 30 ವರ್ಷ ಮೀರಿದ ಎಲ್ಲರಿಗೂ ಉಚಿತವಾಗಿ ಮಧು ಮೇಹ ಪರೀಕ್ಷೆ ನಡೆಸಲು ಮುಂದಾಗಿದೆ.

VISTARANEWS.COM


on

ಆರೋಗ್ಯ ಸಿಟಿ ಸಮ್ಮಿಟ್‌ನಲ್ಲಿ ಡಾ. ಕೆ. ಸುಧಾಕರ್‌ ಮಾತನಾಡಿದರು.
ಆರೋಗ್ಯ ಸಿಟಿ ಕಾರ್ಯಕ್ರಮದಲ್ಲಿ ಡಾ. ಕೆ. ಸುಧಾಕರ್‌ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಧುಮೇಹ (Diabetes test) ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ʼನಮ್ಮ ಕ್ಲಿನಿಕ್‌ʼ ಮೂಲಕ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದರು.

ಆರೋಗ್ಯ ಸಿಟಿ ಸಮ್ಮಿಟ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಸಾಂಕ್ರಾಮಿಕ ರೋಗಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರ ನಿರ್ವಹಣೆಗೆ ನಗರಗಳಲ್ಲಿ 438 ʻನಮ್ಮ ಕ್ಲಿನಿಕ್‌ʼಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಕೊಳೆಗೇರಿ, ಬಡ ಜನರು ವಾಸಿಸುವ ಪ್ರದೇಶಗಳಲ್ಲಿ ಇಂತಹ ಕ್ಲಿನಿಕ್‌ ಆರಂಭಿಸಿ ಜನರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಈ ಮೂಲಕ ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳಿರುವ ಜನರ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಒಟ್ಟು ಮಧುಮೇಹಿಗಳಲ್ಲಿ 75% ಜನರು ಚಿಕಿತ್ಸೆಯನ್ನೇ ಪಡೆಯುತ್ತಿಲ್ಲ. ಆದ್ದರಿಂದ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಮಧುಮೇಹ ಪತ್ತೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಆರೋಗ್ಯ ಸಿಟಿ ಸಮ್ಮಿಟ್‌ನಲ್ಲಿ ಡಾ. ಕೆ. ಸುಧಾಕರ್‌ ಮಾತನಾಡಿದರು.

6,500ಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಇವುಗಳ ಮೂಲಕ ಕೂಡ ಮಧುಮೇಹ ತಪಾಸಣೆ ಮಾಡಲಾಗುವುದು. 200ಕ್ಕೂ ಅಧಿಕ ನಮ್ಮ ಕ್ಲಿನಿಕ್‌ ಸಿದ್ಧವಾಗಿದ್ದು, ತಿಂಗಳಾಂತ್ಯದಲ್ಲಿ ಬೇರೆ ಪ್ರದೇಶಗಳಲ್ಲಿ 100 ಹಾಗೂ ಒಂದು ವಾರದ ಬಳಿಕ ಬೆಂಗಳೂರು ನಗರದಲ್ಲಿ ಕ್ಲಿನಿಕ್‌ ಉದ್ಘಾಟಿಸಲಾಗುವುದು ಎಂದು ಸುಧಾಕರ್‌ ವಿವರಿಸಿದರು.

ಯಾಕೆ ಈ ತಪಾಸಣೆ ಆಂದೋಲನ?
30 ವರ್ಷ ವಯಸ್ಸಿನ ಮಧುಮೇಹಿಯೊಬ್ಬರು ಗ್ಯಾಂಗ್ರಿನ್‌ನಿಂದ ಕಾಲಿಗೆ ಹಾನಿ ಮಾಡಿಕೊಂಡಿದ್ದರು. ಆದರೆ ಅವರಿಗೆ ಮಧುಮೇಹ ಇದೆ ಎಂಬುದೇ ಗೊತ್ತಿರಲಿಲ್ಲ. ಇಂತಹ ನಿರ್ಲಕ್ಷ್ಯ, ಜಾಗೃತಿಯ ಕೊರತೆ ಎಲ್ಲೆಡೆ ಕಂಡುಬರುತ್ತಿದೆ. ಪ್ರತಿ ವರ್ಷ ಆರೋಗ್ಯ ತಪಾಸಣೆಯನ್ನು ಕೂಡ ಜನರು ಮಾಡಿಕೊಳ್ಳುವುದಿಲ್ಲ. ಜನರು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

50% ಜನರಿಗೆ ಆರೋಗ್ಯ ತಪಾಸಣೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯದ 50% ಜನರನ್ನು ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಳಪಡಿಸಲಾಗಿದೆ. ಮುಂದಿನ 18 ತಿಂಗಳಲ್ಲಿ ರಾಜ್ಯದ 100% ಜನರಿಗೆ ಆರೋಗ್ಯ ತಪಾಸಣೆ ಮಾಡಿಸಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ಸಚಿವರು ತಿಳಿಸಿದರು.

ಮಾನಸಿಕ ಸಮಸ್ಯೆ, ಕ್ಯಾನ್ಸರ್‌ ಅರಿವು
ರಾಜ್ಯದಲ್ಲಿ ಆರಂಭಿಸಿದ ಇ ಮನಸ್‌ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಮಾದರಿಯಾಗಿಸಿಕೊಂಡು ಹೊಸ ಕಾರ್ಯಕ್ರಮ ಆರಂಭಿಸಿದೆ. ಅನೇಕರಿಗೆ ಮಾನಸಿಕ ಸಮಸ್ಯೆ ಇದೆ ಎಂದೇ ಗೊತ್ತಿರುವುದಿಲ್ಲ. ಕ್ಯಾನ್ಸರ್‌ ವಿಚಾರದಲ್ಲೂ ಹೀಗೆಯೇ ಆಗುತ್ತಿದೆ. ಕಿದ್ವಾಯಿ ಸಂಸ್ಥೆ ಮೂಲಕ ಕ್ಯಾನ್ಸರ್‌ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುತ್ತಿದೆ. ರೋಗ ಬರುವುದಕ್ಕಿಂತ ಮೊದಲು ರೋಗ ಪೂರ್ವದ ನಿಯಂತ್ರಣ ಕ್ರಮಗಳಿಗೆ ಆದ್ಯತೆ ನೀಡಲಾಗಿದೆ ಎಂದರು.

ಆಯುಷ್ಯ ಹೆಚ್ಚಳ
ಬೆಂಗಳೂರು ನಗರ ಐಟಿ ನಗರವಾಗಿ ಅಭಿವೃದ್ಧಿಯಾಗಿದೆ. ಈಗ ಇದು ಆರೋಗ್ಯ ನಗರವಾಗಿ ಬೆಳೆಯುತ್ತಿದೆ. 1.3 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ಮಾಲಿನ್ಯ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಕಳೆದ ಎರಡು ಮೂರು ದಶಕಕ್ಕೆ ಹೋಲಿಸಿದರೆ ಈಗ ಜನರ ಗರಿಷ್ಠ ವಯೋಮಿತಿ ಹೆಚ್ಚಾಗಿದೆ. ಹಿಂದೆ 40-52 ವಯೋಮಿತಿ ಇದ್ದು, ಈಗ 65-67 ಆಗಿದೆ. ವಯೋಮಿತಿ ಹೆಚ್ಚಳದ ಮೂಲಕ ನಾವು ಅಭಿವೃದ್ಧಿ ಸಾಧಿಸಿದ್ದೇವೆ ಎನ್ನಬಹುದು. ಆದರೆ ಎಷ್ಟು ವರ್ಷ ಬದುಕುತ್ತೇವೆ ಎನ್ನುವುದಕ್ಕಿಂತ ಎಷ್ಟು ಆರೋಗ್ಯಕರವಾಗಿ ಬದುಕುತ್ತೇವೆ ಎಂಬುದು ಮುಖ್ಯ ಎಂದರು ಡಾ.ಕೆ. ಸುಧಾಕರ್‌.

ಮಕ್ಕಳ ಆರೋಗ್ಯದ ಬಗ್ಗೆಯೂ ಜಾಗೃತಿ ಬೇಕು
ಮಕ್ಕಳು ಫಾಸ್ಟ್‌ ಫುಡ್‌ಗೆ ಬೇಗನೆ ಹೊಂದಿಕೊಳ್ಳುತ್ತಿದ್ದಾರೆ. ಮಕ್ಕಳು ಹೊರಗೆ ಆಟವಾಡುವುದು ಕೂಡ ಕಡಿಮೆಯಾಗಿದೆ. ಹಿಂದಿನ ಜನಾಂಗ ಹೆಚ್ಚು ಆಟ, ಓಡಾಟ ಮಾಡುತ್ತಿದ್ದರು. ಇದರಿಂದಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಲವಾಗಿದ್ದರು. ಈ ಬಗ್ಗೆ ಹೆಚ್ಚು ಜಾಗೃತಿ ಈಗ ಅಗತ್ಯವಿದೆ ಎಂದರು.

ನರ್ಸಿಂಗ್‌ ಸಂಸ್ಥೆಗಳ ಪರಿಶೀಲನೆ
ನಮ್ಮ ಸರ್ಕಾರದಿಂದ ಒಂದೇ ಒಂದು ನರ್ಸಿಂಗ್‌- ಜಿಎನ್‌ಎಮ್‌ ಸಂಸ್ಥೆಗೆ ಪರವಾನಗಿ ನೀಡಿಲ್ಲ. ಆದರೆ ಅವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆದರೆ ಬಳಿಕ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದ್ದಾರೆ. ಹಿಂದಿನ ಸರ್ಕಾರದಲ್ಲಿ ಯಾವುದೇ ಮೂಲಸೌಕರ್ಯವನ್ನು ಪರಿಶೀಲಿಸದೆ ಕೆಲ ಸಂಸ್ಥೆಗಳಿಗೆ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಸುಮಾರು 850 ನರ್ಸಿಂಗ್‌ ಕಾಲೇಜುಗಳಿವೆ. ಸರ್ಕಾರದಿಂದ ಒಂದು ಸಮಿತಿ ರಚಿಸಿ ಈ ಎಲ್ಲಾ ಸಂಸ್ಥೆಗಳಲ್ಲಿ ಪರಿಶೀಲನೆ ನಡೆಸಲು ಉದ್ದೇಶಿಸಲಾಗಿದೆ. ಆ ಸಮಿತಿಯಿಂದ ವರದಿ ಪಡೆದು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ | AB-ARK | ಡಿಸೆಂಬರ್ ವೇಳೆಗೆ ರಾಜ್ಯದ ಶೇ.50 ಅರ್ಹರಿಗೆ ಆಯುಷ್ಮಾನ್ ಕಾರ್ಡ್‌ ನೀಡುವ ಗುರಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

ಆಹಾರದ ಬದಲಾವಣೆಗಳಿಂದ ಕೊಲೆಸ್ಟ್ರಾಲ್‌ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಎಂಥಾ ಆಹಾರಗಳವು? ಈ (Health Tips Kannada) ಲೇಖನ ಓದಿ.

VISTARANEWS.COM


on

Health Tips Kannada
Koo

ಜೀವನಶೈಲಿಯ ದೋಷಗಳಿಂದಾಗಿ ಹಲವಾರು ರೋಗಗಳು ನಮಗೆ ಗಂಟಿಕ್ಕಿಕೊಳ್ಳುತ್ತಿವೆ. ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ನಮ್ಮ ಶರೀರ ಚೆನ್ನಾಗಿ ಕೆಲಸ ಮಾಡಲು ಸಣ್ಣ ಪ್ರಮಾಣದಲ್ಲಿ ಕೊಲೆಸ್ಟ್ರಾಲ್‌ ಅಗತ್ಯವಿದೆ. ಅದು ನಮಗೆ ನಿತ್ಯದ ಆಹಾರದಿಂದಲೇ ದೊರೆಯುತ್ತದೆ. ಆದರೆ ಅತಿಯಾದ ಕೊಬ್ಬಿನ ಆಹಾರದ ಸೇವನೆ, ಸಂಸ್ಕರಿತ ಸಕ್ಕರೆಯ ಮೇಲಿನ ನಮ್ಮ ಪ್ರೀತಿಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಗಂಟಿಕ್ಕಿಕೊಳ್ಳಬಹುದು. ಇದಕ್ಕಾಗಿ ವೈದ್ಯರು ಸೂಚಿಸುವ ಔಷಧಿ ಮತ್ತು ವ್ಯಾಯಾಮ ಕಡ್ಡಾಯವಾಗಿ ಬೇಕಾಗುತ್ತದೆ. ಇದಲ್ಲದೆ, ಇನ್ನೂ ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಬೆಳಗಿನ ಖಾಲಿ ಹೊಟ್ಟೆಯಲ್ಲಿ ನಾವು ದೇಹಕ್ಕೆ ನೀಡುವಂಥ ಆಹಾರಗಳು ಹಲವು ರೀತಿಯಲ್ಲಿ ಮಹತ್ವವನ್ನು ಪಡೆದಿವೆ. ಅದರಲ್ಲೂ ಬೆಳಗಿನ ಪೇಯಗಳು ಕೊಲೆಸ್ಟ್ರಾಲ್‌ ಕಡಿತ ಮಾಡುವುದಕ್ಕೆ ಸೂಕ್ತವಾದಂಥವು. ಎಂಥ ಪೇಯಗಳನ್ನು ಬೆಳಗಿನ ಹೊತ್ತು ದೇಹಕ್ಕೆ ನೀಡಿದರೆ (Health Tips Kannada) ಸೂಕ್ತ?

Green tea

ಗ್ರೀನ್‌ ಟೀ

ಹಲವು ರೀತಿಯ ಉತ್ತಮ ಪಾಲಿಫೆನಾಲ್‌ಗಳನ್ನು ಹೊಂದಿರುವ ಗ್ರೀನ್‌ ಟೀ, ಉತ್ಕರ್ಷಣ ನಿರೋಧಕಗಳ ಖಜಾನೆಯಂತಿದೆ. ಅದರಲ್ಲೂ ಗ್ರೀನ್‌ ಟೀದಲ್ಲಿರುವ ಕೆಟಿಚಿನ್‌ ಅಂಶಗಳು ಕೊಲೆಸ್ಟ್ರಾಲ್‌ಗಳ ಜೊತೆ ಕೆಲಸ ಮಾಡುತ್ತವೆ. ಇದರಿಂದ ಆಹಾರದಲ್ಲಿನ ಕೊಲೆಸ್ಟ್ರಾಲ್‌ ಅಂಶವನ್ನು ದೇಹ ಹೀರಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯವಿದೆ. ಹಾಗಾಗಿ ನಿಯಮಿತವಾಗಿ ಗ್ರೀನ್‌ ಟೀ ಕುಡಿಯುವುದರಿಂದ ದೇಹದಲ್ಲಿ ಎಲ್‌ಡಿಎಲ್‌ ಮತ್ತು ಒಟ್ಟಾರೆ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.

Chia seeds and soy milk

ಚಿಯಾ ಬೀಜ ಮತ್ತು ಸೋಯ್‌ ಹಾಲು

ಈ ಮಿಶ್ರಣ ಕೊಲೆಸ್ಟ್ರಾಲ್‌ ನಿರ್ವಹಣೆಯಲ್ಲಿ ಸಾಕಷ್ಟು ದಕ್ಷತೆಯನ್ನು ಪ್ರದರ್ಶಿಸಿದೆ. ನಾರು, ಪ್ರೊಟೀನ್‌ ಮತ್ತು ಒಮೇಗಾ ೩ ಕೊಬ್ಬಿನಾಮ್ಲಗಳ ಜೊತೆಗೆ ಹಲವು ಸೂಕ್ಷ್ಮ ಸತ್ವಗಳು ಇದರಿಂದ ದೇಹ ಸೇರುತ್ತವೆ. ದೇಹದಲ್ಲಿ ಎಚ್‌ಡಿಎಲ್‌ ಅಥವಾ ಉತ್ತಮ ಕೊಬ್ಬನ್ನು ಹೆಚ್ಚಿಸುವ ಸಾಧ್ಯತೆ ಚಿಯಾ ಬೀಜಗಳಿಗಿದೆ. ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಕ್ಷಮತೆ ಸೋಯಾ ಹಾಲಿಗಿದೆ. ಹಾಗಾಗಿ ಈ ಮಿಶ್ರಣವನ್ನೂ ಬೆಳಗಿನ ಪೇಯವಾಗಿ ಉಪಯೋಗಿಸಬಹುದು.

Beetroot and carrot juice

ಬೀಟ್‌ರೂಟ್‌ ಮತ್ತು ಕ್ಯಾರೆಟ್‌ ರಸ

ಹೆಚ್ಚಿನ ನೈಟ್ರೇಟ್‌ ಅಂಶವಿರುವ ಬೀಟ್‌ರೂಟ್‌ ರಸ ಕೊಲೆಸ್ಟ್ರಾಲ್‌ ತಗ್ಗಿಸುವ ಸಾಧ್ಯತೆಯನ್ನು ಹೊಂದಿದೆ. ಇನ್ನು, ಬೀಟಾ ಕ್ಯಾರೋಟಿನ್‌ನಂಥ ಕೆರೋಟಿನಾಯ್ಡ್‌ಗಳನ್ನು ಹೊಂದಿರುವ ಕ್ಯಾರೆಟ್‌ ಸಹ ಕೊಲೆಸ್ಟ್ರಾಲ್‌ ಹೀರಿಕೊಳ್ಳುವುದನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಿದ್ದು, ಪೂರಕ ಪರಿಣಾಮವನ್ನು ದಾಖಲಿಸಿವೆ.

Ginger, lemon juice

ಶುಂಠಿ, ನಿಂಬೆ ರಸ

ಬೆಳಗಿನ ಹೊತ್ತು ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆ ರಸ ಮತ್ತು ಅರ್ಧ ಚಮಚ ಶುಂಠಿ ರಸ ಸೇರಿಸಿ ಕುಡಿಯುವುದು ಸಹ ಉತ್ತಮ ಪರಿಣಾಮಗಳನ್ನ ತೋರಿಸಬಲ್ಲದು. ಉತ್ಕರ್ಷಣ ನಿರೋಧಕಗಳನ್ನು ನಿಂಬೆ ರಸ ದೇಹಕ್ಕೆ ನೀಡಿದರೆ, ಟ್ರೈಗ್ಲಸರೈಡ್‌ ಮತ್ತು ಎಲ್‌ಡಿಎಲ್‌ ತಗ್ಗಿಸುವ ಗುಣವನ್ನು ಶುಂಠಿ ಹೊಂದಿದೆ. ಜೊತೆಗೆ, ಬೆಳಗಿನ ಹೊತ್ತು ಚೈತನ್ಯವನ್ನು ನೀಡಿ, ವ್ಯಾಯಾಮ ಮಾಡುವ ಉತ್ಸಾಹವನ್ನೂ ಹೆಚ್ಚಿಸುತ್ತದೆ ಈ ಪೇಯ.

Tomato juice

ಟೊಮೇಟೊ ರಸ

ಟೊಮೆಟೊದ ಕೆಂಪು ಬಣ್ಣಕ್ಕೆ ಕಾರಣವಾಗುವುದು ಅದರಲ್ಲಿರುವ ಲೈಕೊಪೇನ್‌ ಅಂಶ. ಇದು ಎಲ್‌ಡಿಎಲ್‌ ಕಡಿಮೆ ಮಾಡುವ ಗುಣವನ್ನು ಢಾಳಾಗಿ ತೋರಿಸಿದೆ. ಅಧ್ಯಯನಗಳ ಪ್ರಕಾರ, ಅತಿ ಹೆಚ್ಚು ಪ್ರಮಾಣದ ಲೈಕೊಪೇನ್‌ ಅಂಶವು (ದಿನಕ್ಕೆ 25 ಎಂಜಿಗಿಂತ ಹೆಚ್ಚು), ಕಡಿಮೆ ತೀವ್ರತೆಯ ಸ್ಟ್ಯಾಟಿನ್‌ಗಳು (ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಔಷಧಿಗಳು) ಬೀರುವ ಪರಿಣಾಮವನ್ನೇ ತೋರುತ್ತವೆ.

Turmeric and soy milk

ಅರಿಶಿನ ಮತ್ತು ಸೋಯ್‌ ಹಾಲು

ಸೋಯ್‌ ಹಾಲಿನಲ್ಲಿ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಇನ್ನು ಅರಿಶಿನದಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಎಲ್‌ಡಿಎಲ್‌ ಮತ್ತು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಗುಣವನ್ನು ತೋರಿಸಿದೆ. ಹಾಗಾಗಿ ಪ್ರಾಣಿಜನ್ಯ ಹಾಲಿಗೆ ಅರಿಶಿನ ಸೇರಿಸುವ ಬದಲು, ಸೋಯಾ ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು ಕೊಲೆಸ್ಟ್ರಾಲ್‌ ತಗ್ಗಿಸುವುದಕ್ಕೆ ಒಳ್ಳೆಯ ಉಪಾಯ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

Continue Reading

ಆರೋಗ್ಯ

Health Tips Kannada: ಕಣ್ಣಿನ ಕೆಳಗೆ ಕಪ್ಪಾಗಿದೆಯೇ? ಇಲ್ಲಿದೆ ಸರಳ ಮನೆಮದ್ದು

ಕಣ್ಣಿನ ಕೆಳಭಾಗದಲ್ಲಿ ಕಾಣುವ ಗಾಢಬಣ್ಣದ ವರ್ತುಲಗಳು ಇಡೀ ಮುಖಕ್ಕೆ ವಯಸ್ಸಾದ, ಸುಸ್ತಾದ ಮತ್ತು ನಿದ್ದೆಗೆಟ್ಟ ಕಳೆಯನ್ನು ನೀಡುವುದಂತೂ ಹೌದು. ಅದೇನು ಗಂಭೀರವಾದ ಆರೋಗ್ಯ ಸಮಸ್ಯೆಯ ಲಕ್ಷಣ ಅಲ್ಲದಿದ್ದರೂ, ಇದನ್ನು ಸರಿ ಮಾಡುವುದು ಹೇಗೆಂಬ ಪ್ರಶ್ನೆ ಮೂಡುವುದಂತೂ ಹೌದು. ಈ ಕುರಿತು (Health Tips Kannada) ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

Health Tips Kannada
Koo

ಅಂದದ ಮೊಗಕ್ಕೆ ಕಣ್ಣೇ ಭೂಷಣ ಎಂದು ಹಾಡಿದವರಿದ್ದಾರೆ. ಅಂಥ ಸುಂದರ ಕಣ್ಣಿನ ಕೆಳಗೆ ಕಪ್ಪು ವರ್ತುಲಗಳು ಕಾಣಿಸಿಕೊಂಡರೆ… ಅದೇ ದೋಷ ಎನಿಸಿಬಿಡುತ್ತದೆ. ಜೊತೆಗೆ, ಆರೋಗ್ಯದ ಬಗ್ಗೆಯೂ ಪ್ರಶ್ನೆಗಳು ಏಳುತ್ತವೇ? ಸಾಕಷ್ಟು ನಿದ್ದೆ ಮಾಡಿ, ಚೆನ್ನಾಗಿ ನೀರು ಕುಡೀರಿ, ಸೊಪ್ಪು ತಿನ್ನಿ ಎಂದೆಲ್ಲಾ ಆರೋಗ್ಯ ಸಲಹೆಗಳು ಕೇಳಿ ಬಂದರೆ ಸಹಜವೇ. ಕಣ್ಣಿನ ಕೆಳಭಾಗದಲ್ಲಿ ಕಾಣುವ ಗಾಢಬಣ್ಣದ ವರ್ತುಲಗಳು ಇಡೀ ಮುಖಕ್ಕೆ ವಯಸ್ಸಾದ, ಸುಸ್ತಾದ ಮತ್ತು ನಿದ್ದೆಗೆಟ್ಟ ಕಳೆಯನ್ನು ನೀಡುವುದಂತೂ ಹೌದು. ಅದೇನು ಗಂಭೀರವಾದ ಆರೋಗ್ಯ ಸಮಸ್ಯೆಯ ಲಕ್ಷಣ ಅಲ್ಲದಿದ್ದರೂ, ಇದನ್ನು ಸರಿ ಮಾಡುವುದು ಹೇಗೆಂಬ (Health Tips Kannada) ಪ್ರಶ್ನೆ ಮೂಡುವುದಂತೂ ಹೌದು.

dark circles

ಇದು ಬರುವುದೇಕೆ?

ಕೆಲವರಿಗೆ ಆನುವಂಶಿಕವಾಗಿ ಈ ಲಕ್ಷಣಗಳು ಬರಬಹುದು. ಕುಟುಂಬದ ಹತ್ತಿರದ ರಕ್ತ ಸಂಬಂಧಿಗಳಲ್ಲಿ ಈ ತೊಂದರೆಯಿದ್ದರೆ, ಅದು ವರ್ಗಾವಣೆಗೊಂಡಿರಬಹುದು. ನಿದ್ದೆ ಸಾಕಾಗದಿದ್ದರೆ, ನಿದ್ರಿಸುವ ಸಮಯ ಅನಿಯಮಿತವಾಗಿದ್ದರೆ, ಕಪ್ಪು ವರ್ತುಲಗಳು ಬರುತ್ತವೆ. ಕಣ್ಣಿನ ಕೆಳಗಿನ ಭಾಗದ ಚರ್ಮ ಅತಿ ಸೂಕ್ಷ್ಮವಾದ್ದರಿಂದ ಈ ಭಾಗದಲ್ಲಿನ ರಕ್ತನಾಳಗಳ ಚಟುವಟಿಕೆ ಢಾಳಾಗಿ ಕಾಣುತ್ತದೆ. ಪಿಗ್ಮೆಂಟೇಶನ್‌ ಸಹ ಎದ್ದು ಕಾಣುವಂತಾಗುತ್ತದೆ. ವಯಸ್ಸು ಹೆಚ್ಚಿದಂತೆ. ಕೊಲಾಜಿನ್‌ ಕಡಿಮೆಯಾಗಿ ಚರ್ಮದ ಬಿಗಿ ನೈಸರ್ಗಿಜವಾಗಿಯೇ ಕಡಿಮೆಯಾಗುತ್ತದೆ. ಇದರಿಂದ ಕಣ್ಣಿನ ಕೆಳಗೆ ಚರ್ಮ ಜೋತಾಡಬಹುದು; ಮತ್ತೂ ಕಪ್ಪಾಗಿ ಕಾಣಬಹುದು. ಇದನ್ನು ಕಡಿಮೆ ಮಾಡಲು ಕೆಲವು ಮನೆಮದ್ದುಗಳು ನೆರವಾಗುತ್ತವೆ.

Cold compress

ತಣ್ಣನೆಯ ಕಂಪ್ರೆಸ್‌

ತಂಪಾದ ನೀರಲ್ಲಿ ಅದ್ದಿದ ಬಟ್ಟೆ, ಫ್ರಿಜ್‌ನಲ್ಲಿ ಕೆಲಕಾಲ ಇರಿಸಿದ ತೇವದ ಟೀ ಬ್ಯಾಗ್‌ ಮುಂತಾದವುಗಳನ್ನು ಕಣ್ಣಿನ ಮೇಲೆ 10-15 ನಿಮಿಷ ಇರಿಸಿಕೊಳ್ಳಿ. ಅದರಲ್ಲೂ ಗ್ರೀ ಟೀ ಅಥವಾ ಕ್ಯಾಮೊಮೈಲ್‌ ಟೀ ಹೆಚ್ಚು ಉಪಯುಕ್ತ. ಇದರಿಂದ ಈ ಭಾಗದಲ್ಲಿ ಉಬ್ಬಿದಂತೆ ಕಾಣುವ ರಕ್ತನಾಳಗಳು ಸಂಕೋಚಗೊಳ್ಳುತ್ತವೆ. ಇದರಿಂದ ಕಣ್ಣಿನ ಕೆಳಗಿನ ಭಾಗ ಉಬ್ಬಿದಂತಾಗಿ ಕಪ್ಪಾಗಿದ್ದರೆ ಕಡಿಮೆಯಾಗುತ್ತದೆ.

Nutrient Rich Cucumber Benefits

ಸೌತೇಕಾಯಿ

ತಂಪಾದ ಸೌತೇಕಾಯಿಯ ಗಾಲಿಯಂಥ ತುಂಡನ್ನು ಕಣ್ಣುಗಳ ಮೇಲಿರಿಸಿ 20 ನಿಮಿಷ ಬಿಡಿ. ಇದನ್ನು ದಿನವೂ ಮಾಡಬಹುದು. ಇದರಿಂದ ಕಣ್ಣಿನ ಕೆಳಗೆ ಉಬ್ಬಿದ್ದರೆ ಕಡಿಮೆಯಾಗಿ, ಗಾಢಬಣ್ಣವೂ ತಿಳಿಯಾಗುತ್ತದೆ. ಜೊತೆಗೆ ಕಣ್ಣನ್ನು ತಂಪಾಗಿಸಿ, ದೃಷ್ಟಿಗೂ ಅನುಕೂಲ ಒದಗಿಸುತ್ತದೆ.

Nutrient-Rich Potato Benefits

ಆಲೂಗಡ್ಡೆ

ಸೌತೇಕಾಯಿಯಂತೆ, ಆಲೂಗಡ್ಡೆಗೂ ನೈಸರ್ಗಿಕವಾದ ಬ್ಲೀಚಿಂಗ್‌ ಗುಣವಿದೆ. ಹಾಗಾಗಿ ಕಪ್ಪಾದ ಚರ್ಮವನ್ನು ನಿಧಾನಕ್ಕೆ ತಿಳಿಯಾಗಿಸುತ್ತದೆ. ಫ್ರಿಜ್‌ನಲ್ಲಿಟ್ಟ ಆಲೂಗಡ್ಡೆಯನ್ನು ತುರಿದು ರಸ ತೆಗೆಯಿರಿ, ಈ ತಂಪಾದ ರಸದಲ್ಲಿ ಸ್ವಚ್ಛ ಹತ್ತಿಯ ಬಟ್ಟೆಯನ್ನು ಅದ್ದಿ ಕಣ್ಣುಗಳ ಕೆಳಗಿರಿಸಿಕೊಳ್ಳಿ. 15 ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.

Tomato juice

ಟೊಮಾಟೊ ರಸ

ಇದೂ ಸಹ ಗಾಢ ಬಣ್ಣವನ್ನು ತಿಳಿಯಾಗಿಸಬಲ್ಲ ಗುಣವನ್ನು ಹೊಂದಿದೆ. ಟೊಮಾಟೊ ರಸ ತೆಗೆದು, ಕೆಲವು ಹನಿ ನಿಂಬೆರಸ ಸೇರಿಸಿ. ಇದರಲ್ಲಿ ಸ್ವಚ್ಛ ವಸ್ತ್ರವನ್ನು ಅದ್ದಿ, ಕಣ್ಣುಗಳ ಕೆಳಗಿರಿಸಿಕೊಳ್ಳಿ. ೧೦ ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ತೊಳೆಯಿರಿ.

Almond Oil

ಬಾದಾಮಿ ಎಣ್ಣೆ

ವಿಟಮಿನ್‌ ಇ ಹೇರಳವಾಗಿದೆ ಬಾದಾಮಿ ತೈಲದಲ್ಲಿ. ರಾತ್ರಿ ಮಲಗುವ ಮುನ್ನ, ಇದರ ಕೆಲವು ಹನಿಗಳನ್ನು ಕಣ್ಣ ಕೆಳಭಾಗದಲ್ಲಿ ಲಘುವಾಗಿ ಹಚ್ಚಿ ಮಸಾಜ್‌ ಮಾಡಿ. ರಾತ್ರಿಡೀ ಇದನ್ನು ಹಾಗೆಯೇ ಬಿಡಿ. ಹಚ್ಚಿದ ಎಣ್ಣೆ ಅತಿಯಾದರೆ ಕಣ್ಣುರಿ ಬಂದೀತು. ಹಾಗಾಗಿ ಸ್ವಲ್ಪವೇ ಹಚ್ಚಿ.

ರೋಸ್‌ ವಾಟರ್‌

ಗುಲಾಬಿ ಜಲ

ಹತ್ತಿಯ ಪ್ಯಾಡ್‌ಗಳಲ್ಲಿ ತಂಪಾದ ಗುಲಾಬಿ ಜಲದಲ್ಲಿ ಅದ್ದಿ, ಮುಚ್ಚಿದ ಕಣ್ಣುಗಳ ಮೇಲೆ ಇರಿಸಿಕೊಳ್ಳಿ. ಸೌತೇಕಾಯಿಯಂಥದ್ದೇ ಪರಿಣಾಮಗಳನ್ನು ಗುಲಾಬಿ ಜಲವೂ ನೀಡಬಲ್ಲದು. ೧೫ ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.

Aloe Vera Home Remedies For Stretch Marks

ಲೋಳೆಸರ

ಇದರ ತಂಪಾದ ತಾಜಾ ಜೆಲ್‌ ತೆಗೆಯಿರಿ. ಅದನ್ನು ಕಣ್ಣಿನ ಕೆಳಭಾಗದಲ್ಲಿ ಇರಿಸಿಕೊಂಡು 20 ನಿಮಿಷ ಬಿಡಿ. ನಂತರ ತಂಪಾದ ನೀರಿನಿಂದ ತೊಳೆಯಿರಿ. ಇದು ಚರ್ಮವನ್ನು ಬಿಗಿಯಾಗಿಸಿ, ತೇವವನ್ನು ಹಿಡಿದಿಡುತ್ತದೆ. ಜೊತೆಗೆ ಕಣ್ಣಿನ ಕೆಳಭಾಗದ ಕಪ್ಪು ಚರ್ಮವನ್ನು ತಿಳಿಯಾಗಿಸುತ್ತದೆ. ಇವೆಲ್ಲವುಗಳ ಜೊತೆಗೆ, ದೇಹಕ್ಕೆ ಚೆನ್ನಾಗಿ ನೀರು ಬೇಕು. ಋತುಮಾನದ ಸೊಪ್ಪು-ತರಕಾರಿ-ಹಣ್ಣುಗಳು ಬೇಕು. ಕಣ್ತುಂಬಾ ನಿದ್ದೆಯಂತೂ ಕಡ್ಡಾಯ.

ಇದನ್ನೂ ಓದಿ: Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Continue Reading

ದೇಶ

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Covaxin: ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಿಲ್ಲ ಎಂಬುದಾಗಿ ಭಾರತ್‌ ಬಯೋಟೆಕ್‌ ಪ್ರಕಟಣೆ ಹೊರಡಿಸಿದೆ. ಕೋವಿಶೀಲ್ಡ್‌ ಅಡ್ಡಪರಿಣಾಮಗಳ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಭಾರತ್‌ ಬಯೋಟೆಕ್‌ ಕಂಪನಿಯು ಸ್ಪಷ್ಟನೆ ನೀಡಿದೆ.

VISTARANEWS.COM


on

Covaxin
Koo

ನವದೆಹಲಿ: ಬ್ರಿಟನ್‌ನಲ್ಲಿ (UK) ಅಸ್ಟ್ರಾಜೆನಿಕಾ ಕಂಪನಿಯ ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆಯೇ ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಕುರಿತು ಅಧ್ಯಯನ ನಡೆಯಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಕೊವ್ಯಾಕ್ಸಿನ್‌ (Covaxin) ಅತ್ಯಂತ ಸುರಕ್ಷಿತವಾಗಿ ತಯಾರಿಸಲಾದ ಲಸಿಕೆಯಾಗಿದೆ ಎಂಬುದಾಗಿ ಭಾರತದ ಲಸಿಕಾ ತಯಾರಿಕಾ ಕಂಪನಿಯಾದ ಭಾರತ್‌ ಬಯೋಟೆಕ್‌ (Bharat Biotech) ಪ್ರಕಟಣೆ ತಿಳಿಸಿದೆ.

“ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿಯು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ.

“ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು, ರಕ್ತ ಹೆಪ್ಪುಗಟ್ಟುವುದು, ಥ್ರಂಬೊಸಿಟೋಪೇನಿಯಾ, ಪೆರಿಕಾರ್ಡಿಟಿಸ್‌ ಹಾಗೂ ಮೈಯೋಕಾರ್ಡಿಟಿಸ್‌ ಸೇರಿ ಯಾವುದೇ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ. ಹಾಗಾಗಿ, ಕೊವ್ಯಾಕ್ಸಿನ್‌ ಲಸಿಕೆಯು ಅತ್ಯಂತ ಸುರಕ್ಷಿತವಾಗಿದೆ” ಎಂದು ಮಾಹಿತಿ ನೀಡಿದೆ.

ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಕೋಟ್ಯಂತರ ಮಂದಿ ಪಡೆದಿದ್ದಾರೆ. ಈಗ ಅಮೆರಿಕದಲ್ಲಿ ಅಡ್ಡಪರಿಣಾಮದ ಕುರಿತು ಕಂಪನಿಯೇ ಒಪ್ಪಿಕೊಂಡಿರುವುದರಿಂದ ಭಾರತದಲ್ಲೂ ಈ ಕುರಿತು ಅಧ್ಯಯನ ನಡೆಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ಆರೋಗ್ಯ

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Health Tips: ತೆಂಗಿನಂತೆ ಬಾಳೆಯೂ ಕಲ್ಪವೃಕ್ಷ ಎನಿಸಿಕೊಂಡಿದೆ. ಇದರ ಪ್ರತಿಯೊಂದು ಭಾಗವೂ ಉಪಯೋಗಕ್ಕೆ ಬರುತ್ತದೆ. ಅದರಲ್ಲಿಯೂ ಬಾಳೆದಿಂಡಿನಲ್ಲಿ ಅಪೂರ್ವ ಔಷಧೀಯ ಗುಣಗಳಿವೆ. ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸುವ ಅದ್ಭುತ ಶಕ್ತಿ ಬಾಳೆ ದಿಂಡಿಗಿದೆ. ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆ, ಮೂತ್ರಪಿಂಡದ ಸಮಸ್ಯೆಗೆ ಇದು ರಾಮಬಾಣ. ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿರ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ.

VISTARANEWS.COM


on

Health Tips
Koo

ಕುಮಾರ ಪೆರ್ನಾಜೆ, ಪುತ್ತೂರು
ಬೆಂಗಳೂರು: ಕಲ್ಪವೃಕ್ಷ ಎಂದಾಕ್ಷಣ ತೆಂಗಿನ ಚಿತ್ರ ನಮ್ಮ ಕಣ್ಣ ಮುಂದೆ ಬರುತ್ತದೆ. ಅದರ ಜತೆಗೆ ಬಾಳೆಯೂ ಕಲ್ಪವೃಕ್ಷವೇ. ತೆಂಗಿನಂತೆ ಇದರ ಎಲ್ಲ ಭಾಗಗಳು ಉಪಯುಕ್ತ. ಬಾಳೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು, ಇತ್ತೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಿಡ್ನಿಯ ಕಲ್ಲಿನ ಸಮಸ್ಯೆಯನ್ನು ಗುಣಪಡಿಸುವ ಶಕ್ತಿ ಇದಕ್ಕಿದೆ. ಈ ಬಗೆಗಿನ ವಿವರ ಇಲ್ಲಿದೆ (Health Tips).

ಬಾಳೆ ದಿಂಡಿನ ಪ್ರಾಮುಖ್ಯತೆ ಇದೀಗ ಪ್ರತಿಯೊಬ್ಬರ ಅರಿವಿಗೂ ಬಂದಿದೆ. ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಒಂದು ಅಡಿ ಉದ್ದದ ದಿಂಡಿಗೂ ಬಹಳ ಬೇಡಿಕೆ ಸೃಷ್ಟಿಯಾಗಿದೆ. ಇದರಲ್ಲಿ ಚಟ್ನಿ, ಸಾಸಿವೆ, ಸಾಂಬಾರ್, ಪಲ್ಯ, ಪಕೋಡ, ದೋಸೆ, ಇಡ್ಲಿ, ಸಲಾಡ್, ಮೊಸರು ಗೊಜ್ಜು ಹೀಗೆ ನಾನಾ ಭಕ್ಷ್ಯ ತಯಾರಿಸಬಹುದು. ಮಾತ್ರವಲ್ಲ ಬಾಳೆ ನಾರಿನಿಂದ ವಿವಿಧ ಪರಿಸರಸ್ನೇಹಿ ಉತ್ಪನ್ನಗಳನ್ನು ತಯಾರಿಸಬಹುದು. ಚೀಲಗಳು, ಬುಟ್ಟಿಗಳು, ಸಸಿ ಕುಂಡಗಳು, ಯೋಗಾಸನ ಚಾಪೆಗಳು, ಹಗ್ಗ, ಬಟ್ಟೆ ತಯಾರಿ ಹೀಗೆ…ಏನೆಲ್ಲ ಮಾಡಬಹುದು ಎಂಬ ಸಂಶೋಧನೆ ಮಾಡುವ ತನಕ ಬಾಳೆ ಇಷ್ಟೊಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ ಎನ್ನುವುದು ಯಾರಿಗೂ ತಿಳಿದಿರಲಿಲ್ಲ.

ಕಿಡ್ನಿ ಕಲ್ಲು ಕರಗಿಸುವ ಬಾಳೆ ದಿಂಡು

ಮೊದಲೇ ಹೇಳಿದಂತೆ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸುವ ಅದ್ಭುತ ಶಕ್ತಿ ಬಾಳೆ ದಿಂಡಿಗಿದೆ. ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆ, ಮೂತ್ರಪಿಂಡದ ಸಮಸ್ಯೆಗೆ ಇದು ರಾಮಬಾಣ. ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿರ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ. ಕಿಡ್ನಿ ಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡಿನ ನೀರನ್ನು ಕುಡಿಯುವುದು ಅತ್ಯುತ್ತಮ ಮಾರ್ಗ ಎನಿಸಿಕೊಂಡಿದೆ. ಈ ನೀರನ್ನು ಹೇಗೆ ಸಂಗ್ರಹಿಸಬಹುದು ಎನ್ನುವುದರ ವಿವರ ಇಲ್ಲಿದೆ. ಬಾಳೆಗಿಡ ಕಡಿದು ಮಧ್ಯದ ದಿಂಡನ್ನು ತೆಗೆದು ಕಾಂಡದಲ್ಲಿ ಗುಳಿಯ ಆಕಾರವನ್ನು ತೋಡಿ. ಬಳಿಕ ಕಸ, ಧೂಳು ಹಾರದಂತೆ ಅದಕ್ಕೆ ಪ್ಲಾಸ್ಟಿಕ್ ಅಥವಾ ಬಾಳೆ ಎಲೆ ಮುಚ್ಚಿ. ಮರುದಿನ ನೋಡಿದಾಗ ಗುಳಿಯಲ್ಲಿ ನೀರು ತುಂಬಿರುತ್ತದೆ.

ಈ ನೀರನ್ನು ಶುಭ್ರ ಪಾತ್ರೆಯಲ್ಲಿ ತೆಗೆದುಕೊಂಡು ನಿಯಮಿತವಾಗಿ ಸೇವಿಸಿ. ಇದರಿಂದ ಕಿಡ್ನಿ ಕಲ್ಲಿ ಕರಗುತ್ತದೆ ಎನ್ನುತ್ತಾರೆ ತಜ್ಞರು. ಅಲ್ಲದೆ ಬಾಳೆ ದಿಂಡನ್ನು ಅರೆದು ಅದನ್ನು ಸೋಸಿಯೂ ಕುಡಿಯಬಹುದು. ಹೀಗೆ ಬಾಳೆದಿಂಡಿನ ರಸವನ್ನು ವರ್ಷಕ್ಕೆ ಎರಡು ಬಾರಿಯಾದರೂ ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳನ್ನು ಹೊರ ಹಾಕಬಹುದು.

ಇದನ್ನೂ ಓದಿ: Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

ಜ್ಯೂಸ್‌ ತಯಾರಿಸಿ

ಬಾಳೆ ದಿಂಡಿನ ರಸವನ್ನು ನೇರವಾಗಿ ಸೇವಿಸಲು ಸಾಧ್ಯವಾಗದಿದ್ದರೆ ಜ್ಯೂಸ್‌ ತಯಾರಿಸಿಯೂ ಕುಡಿಯಬಹುದು. ಬಾಳೆದಿಂಡಿನ ನೀರಿಗೆ ಜೀರಿಗೆ, ಶುಂಠಿ, ನಿಂಬೆರಸ, ಗಾಂಧಾರಿ ಮೆಣಸು, ಚಿಟಿಕೆ ಉಪ್ಪು, ಬೇಕಿದ್ದರೆ ಕಲ್ಲು ಸಕ್ಕರೆ ಸೇರಿಸಿ ಕುಡಿಯಬಹುದು. ಇದನ್ನು ಸಮಸ್ಯೆ ಇದ್ದವರೇ ಕುಡಿಯಬೇಕೆಂದಿಲ್ಲ. ಯಾರೂ ಬೇಕಾದರೂ ಸೇವಿಸಬಹುದು. ಇತ್ತೀಚೆಗಂತೂ ಬಿಸಿಲಿನ ತಾಪ ವಿಪರೀತವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಸಾಧ್ಯವಾದಷ್ಟು ಮನೆಯಲ್ಲಿಯೇ ತಯಾರಿಸಿದ ಆಹಾರದ ಜತೆಗೆ ಇಂತಹ ಪ್ರಾಕೃತಿಕ ಔಷಧಗಳ ಪ್ರಯೋಜನ ಪಡೆಯಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

Continue Reading
Advertisement
Viral News
ವೈರಲ್ ನ್ಯೂಸ್11 mins ago

Viral News: 17 ವರ್ಷದ ಯುವತಿ ಎರಡು ಬಾರಿ ಗರ್ಭಿಣಿ; ಪೋಷಕರು ಸೇರಿ 16 ಜನರ ವಿರುದ್ಧ ಕೇಸ್‌

Gratuity
ದೇಶ20 mins ago

Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Prajwal Revanna Case I was raped at gunpoint JDS women leader files complaint against Prajwal
ಹಾಸನ22 mins ago

Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

icc men's test team rankings
ಕ್ರೀಡೆ36 mins ago

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

Bengaluru Rains
ಮಳೆ40 mins ago

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Press Freedom Day
Latest46 mins ago

Press Freedom Day: ಇಂದು ಪತ್ರಿಕಾ ಸ್ವಾತಂತ್ರ್ಯ ದಿನ; ಏನಿದರ ಮಹತ್ವ?

Job Alert
ಉದ್ಯೋಗ55 mins ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Prajwal Revanna Case Another case against Revanna transferred to SIT Notice to Bhavani
ಕ್ರೈಂ2 hours ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Narendra Modi
Lok Sabha Election 20242 hours ago

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Helicopter Crash
ದೇಶ2 hours ago

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ21 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌