Site icon Vistara News

ವಿಸ್ತಾರ ನ್ಯೂಸ್‌ ಕಚೇರಿಗೆ ಭೇಟಿ ನೀಡಿದ ಕಾಂಗ್ರೆಸ್‌ ಹಿರಿಯ ನಾಯಕ ದಿನೇಶ್‌ ಗುಂಡೂರಾವ್‌

ದಿನೇಶ್ ಗುಂಡೂರಾವ್‌

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ವಿಸ್ತಾರ ನ್ಯೂಸ್‌ ಕಚೇರಿಗೆ ಮಂಗಳವಾರ ಭೇಟಿ ನೀಡಿ, ವಿಸ್ತಾರ ತಂಡಕ್ಕೆ ಶುಭ ಕೋರಿದರು.

ವಿಸ್ತಾರ ಮೀಡಿಯಾ ಸಂಸ್ಥೆಯ ಯೋಜನೆಗಳು ಅದ್ಭುತವಾಗಿವೆ. ಅತ್ಯಾಧುನಿಕ ತಂತ್ರಜ್ಞಾನದ ಸ್ಟುಡಿಯೊ ಇತ್ಯಾದಿ ವ್ಯವಸ್ಥೆಗಳೊಂದಿಗೆ ವಿಸ್ತಾರ ಕಚೇರಿ ಅತ್ಯಂತ ಅಚ್ಚುಕಟ್ಟಾಗಿದೆ ಎಂದು ದಿನೇಶ್‌ ಗುಂಡೂರಾವ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಸ್ತಾರ ನ್ಯೂಸ್‌ ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ, ವಿಸ್ತಾರ ಮೀಡಿಯಾ ಪ್ರೈ. ಲಿ.ನ ಚೇರ್ಮನ್‌, ಎಂಡಿ ಎಚ್‌ ವಿ ಧರ್ಮೇಶ್‌ ಅವರು ದಿನೇಶ್‌ ಗುಂಡೂರಾವ್‌ ಅವರಿಗೆ ಸಂಸ್ಥೆಯ ಮುಂದಿನ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ವಿಸ್ತಾರ ನ್ಯೂಸ್‌ ಕಾರ್ಯ ನಿರ್ವಾಹಕ ಸಂಪಾದಕ ಶರತ್‌ ಎಂ ಎಸ್‌, ಇನ್‌ ಫುಟ್‌-ಔಟ್‌ ಫುಟ್‌ ಮುಖ್ಯಸ್ಥ ಮಂಜುನಾಥ್‌ ಪಿ, ಪಾಲಿಟಿಕಲ್‌ ನ್ಯೂಸ್‌ ವಿಭಾಗದ ಮುಖ್ಯಸ್ಥ ಮಾರುತಿ ಪಾವಗಡ ಜತೆಗಿದ್ದರು.

ದಿನೇಶ್ ಗುಂಡೂರಾವ್ ಜತೆ ವಿಸ್ತಾರ ನ್ಯೂಸ್ ತಂಡ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಸ್ತಾರ ನ್ಯೂಸ್‌ ಚಾನೆಲ್‌ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿದೆ. ಅಂದು ಬೆಳಗ್ಗೆಯಿಂದ ರಾತ್ರಿಯವರೆಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

Exit mobile version