ರಮೇಶ್‌ ಕುಮಾರ್‌ ಒಬ್ಬ ಶಕುನಿ ಎಂದ ಸ್ವಪಕ್ಷೀಯ ನಾಯಕ ಕೆ.ಎಚ್‌.ಮುನಿಯಪ್ಪ - Vistara News

ಕರ್ನಾಟಕ

ರಮೇಶ್‌ ಕುಮಾರ್‌ ಒಬ್ಬ ಶಕುನಿ ಎಂದ ಸ್ವಪಕ್ಷೀಯ ನಾಯಕ ಕೆ.ಎಚ್‌.ಮುನಿಯಪ್ಪ

ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ/ಕೆ.ಆರ್. ರಮೇಶ್ ಕುಮಾರ್ ನಡುವಿನ ಸಮರ ಮುಂದುವರಿದಿದ್ದು, ಶಕುನಿ ಎಂದು ದೂರಿರುವ ಮುನಿಯಪ್ಪ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

ಮುನಿಯಪ್ಪ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ಪಕ್ಷದೊಳಗೆ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವಪಕ್ಷೀಯ ನಾಯಕರ ವಿರುದ್ಧವೇ ಕಿಡಿನುಡಿಗಳು ತೂರಿಬರುತ್ತಿವೆ. ಈಗ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಸರದಿ. ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರನ್ನು “ಶಕುನಿ” ಎಂದು ಹರಿಹಾಯ್ದಿದ್ದಾರೆ.

ಪಕ್ಷದೊಳಗೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಮುನಿಸು ಮುಂದುವರಿದಿದ್ದು, ಪಕ್ಷ ತೊರೆಯುವ ಸುದ್ದಿ ಹರಿದಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಕೆ.ಎಚ್. ಮುನಿಯಪ್ಪ, ಕಳೆದ 28 ವರ್ಷಗಳಿಂದ ಸಂಸದನಾಗಿದ್ದು, 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನೆಂದು ಗುರುತಿಸಿಕೊಂಡಿದ್ದೇನೆ. ಅನೇಕರು ಪಕ್ಷ ಬಿಟ್ಟು ಮತ್ತೆ ಬಂದಿರುವ ಉದಾಹರಣೆಗಳಿವೆ. ಆದರೆ ನಾನು ಕಾಂಗ್ರೆಸ್‌ ಪಕ್ಷದಲ್ಲೇ ಗಟ್ಟಿಯಾಗಿ ನಿಂತಿದ್ದೇನೆ. ಯಾವುದೇ ಆತುರದ ನಿರ್ಧಾರವನ್ನು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಮೇಶ್‌ ಕುಮಾರ್‌ ಶಕುನಿ ಎಂದ ಮುನಿಯಪ್ಪ

ಕೆ.ಆರ್. ರಮೇಶ್‌ ಕುಮಾರ್ ಶಕುನಿ ಎಂಬುದನ್ನು ಮತ್ತೆ ಹೇಳುತ್ತೇನೆ. ಅವರು ಏಕಪಾತ್ರಾಭಿನಯ ಮಾಡುವುದರಲ್ಲಿ ಮೊದಲಿಗರು‌ ಎಂದು ಮುನಿಯಪ್ಪ ವಾಗ್ದಾಳಿ ನಡೆಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದಲ್ಲಿ ಹಿನ್ನೆಲೆಗೆ ಸರಿದಂತಿರುವ ಮುನಿಯಪ್ಪ, ಇದೀಗ ಹೈಕಮಾಂಡ್‌ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ಗೆ ಎಲ್ಲವನ್ನೂ ಸರಿಪಡಿಸುವಂತೆ ಒಂದು ತಿಂಗಳ ಗಡವು ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್‌ ಹಾಗೂ ಸುಧಾಕರ್‌ ಸೇರ್ಪಡೆಗೊಂಡಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಸೇರಿದಂತೆ ಇತರೆ ಶಾಸಕು ಭಾಗಿಯಾಗಿದ್ದರು. ಆದರೆ ಕಳೆದ 50 ವರ್ಷಗಳಿಂದ ಕಾಂಗ್ರೆಸ್‌ ಪಕ್ಷವನ್ನು ಜಿಲ್ಲೆಯಲ್ಲಿ ಕಟ್ಟಿ ಬೆಳಸಿದ ನನಗೆ ಒಂದು ಮಾತನ್ನು ಕೇಳದೇ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ. ಇವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದರ ಬಗ್ಗೆ ನನಗೆ ಸ್ಪಷ್ಟೀಕರಣ ನೀಡಬೇಕು ಎಂದು ಮುನಿಯಪ್ಪ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ | ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ಅಡ್ಜಸ್ಟ್‌ಮೆಂಟ್‌: ಮಾಜಿ ಸಚಿವ ಎಚ್‌.ಡಿ.ರೇವಣ್ಣ ಕಿಡಿ

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮವಹಿಸುವುದಾದರೆ ಅವರು ಪಕ್ಷ ಸೇರಲಿ. ಪಕ್ಷ ಸೇರುವುದು ಬೇಡ ಎಂದು ನಾನು ಹೇಳುವುದಿಲ್ಲ. ಆದರೆ, ನನ್ನನ್ನು ಬಿಟ್ಟು ಪಕ್ಷಕ್ಕೆ ಸೇರಿಸಿಕೊಂಡಿದ್ದು ಯಾಕೆ? ಕಾಂಪ್ರಮೈಸ್ ಮಾಡಿಸುತ್ತೇವೆ. ಆಮೇಲೆ ಅವರನ್ನು ಸೇರಿಸಿಕೊಳ್ಳುತ್ತೇವೆ ಎಂದಿದ್ದರು. ಆದರೆ, ನನ್ನ ಗಮನಕ್ಕೆ ತಾರದೆ ರಾಜಿ ಮಾಡುವ ಮೊದಲೇ ಸೇರಿಸಿಕೊಂಡಿದ್ದು ಯಾಕೆ ಎಂದು ಮುನಿಯಪ್ಪ ಪ್ರಶ್ನೆ ಮಾಡಿದ್ದಾರೆ.

ಯಾವ ಪಾರ್ಟಿಗೂ ಹೋಗುವುದಿಲ್ಲ

ನಾನು ಯಾವುದೇ ಪಾರ್ಟಿಗೂ ಹೋಗುವುದಿಲ್ಲ. ಈ ಬಗ್ಗೆ ಯಾರೂ ಕೂಡ ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು. ನಿಷ್ಠಾವಂತರನ್ನು ಕಾಂಗ್ರೆಸ್ ಕೈಬಿಡಲ್ಲ ಎಂದು ನಂಬಿದ್ದೇನೆ. ಸದ್ಯ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಅಲ್ಲದೆ, ಕ್ಷೇತ್ರದಲ್ಲಿ ನನಗೆ ಮತ ಹಾಕಿರುವ ಮತದಾರರಿಗೆ ಉತ್ತರ ಕೊಡಬೇಕಿದೆ. ನಾನು ಅವರ ಬಳಿಯೇ ತೆರಳಿ ಮುಂದೇನು ಮಾಡಬೇಕು ಎಂಬುದನ್ನು ಕೇಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | Assembly 2023 | ಬಾದಾಮಿಯಿಂದ ಕೋಲಾರಕ್ಕೆ ಸಿದ್ದರಾಮಯ್ಯ ಶಿಫ್ಟ್‌?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Self Harming: ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

Bengaluru News : ಕೆಲಸ ಸಿಗದೆ ಇರುವುದಕ್ಕೆ ಬೇಸರಗೊಂಡ ಯುವಕನೊಬ್ಬ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Self Harming Man commits suicide after falling from PG in Bengaluru
Koo

ಬೆಂಗಳೂರು: ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಬೆಂಗಳೂರಿನ ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ 28ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ವೈಟ್ ಫಿಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಆದರೆ ಅಲೆದಾಡಿ ಸುಸ್ತಾದ ಯುವಕನಿಗೆ ಎಲ್ಲೂ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ತಾನು ವಾಸವಿದ್ದ ಪಿಜಿ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral News: ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ: ಹೊಸ ಕಾರಿನ ಪೂಜೆ ವೇಳೆ ನಡೆಯಿತು ಅವಘಡ; ಇಲ್ಲಿದೆ ವಿಡಿಯೊ

Crime News: ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ?

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ ತಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಆರೋಪಿಸಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ (Crime News).

ʼʼಅಶ್ವಿನಿ ಆತ್ಮಹತ್ಯೆ ಮಾಡುವ ಮುನ್ನ ಮಕ್ಕಳಿಗೆ ವಿಷ ನೀಡಿದ್ದಾರೆʼʼ ಎಂದು ಪೊಲೀಸರು ತಿಳಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಶ್ವಿನಿ ಕೋನಾರ್ಕ್‌ ನಗರದ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಘಟನೆ ಸ್ಥಳಕ್ಕೆ ತಲುಪಿದ ಪೊಲೀಸರಿಗೆ ಬಳಿಕ ಆಕೆಯ ಮಕ್ಕಳ ಶವವೂ ಕಂಡು ಬಂದಿತ್ತು. ಈ ವೇಳೆ ಆಕೆಯ ಪತಿ ಊರಿನಲ್ಲಿ ಇರಲಿಲ್ಲ. ಹೀಗಾಗಿ ಆಕೆಯೇ ಮಕ್ಕಳಿಗೆ ವಿಷ ಉಣಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಊಹಿಸಿದ್ದಾರೆ.

ಡೆತ್‌ನೋಟ್‌ ಪತ್ತೆ

ಪರಿಶೀಲನೆ ವೇಳೆ ಪೊಲೀಸರಿಗೆ ಅಶ್ವಿನಿ ಬರೆದಿದ್ದಾಳೆ ಎನ್ನಲಾದ ಡೆತ್‌ನೋಟ್‌ ಪತ್ತೆಯಾಗಿದೆ. ಇದರಲ್ಲಿ ಆಕೆ ಪತಿ ಸ್ವಪ್ನಿಲ್‌ ಕಿರುಕುಳ ನೀಡುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾಳೆ.‌ ಜತೆಗೆ ಸಾಯುವ ಮುನ್ನ ವಿಡಿಯೊವನ್ನು ರೆಕಾರ್ಡ್‌ ಮಾಡಿದ್ದಾಳೆ. ಸ್ವಪ್ನಿಲ್‌ ನಿರಂತರ ಹಿಂಸೆ ನೀಡುತ್ತಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಆಕೆ ತನ್ನ ಸಂಬಂಧಿಕರಿಗೆ ಕಳುಹಿಸಿದ ವಿಡಿಯೊದಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಕೃತ್ಯ ನಡೆಯುವ ವೇಳೆ ಸ್ವಪ್ನಿಲ್‌ ಕೆಲಸದ ನಿಮಿತ್ತ ಪುಣೆಗೆ ತೆರಳಿದ್ದರು. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆ

ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಹಿನ್ನೆಲೆಯಲ್ಲಿ ಕೊರಗಿನಿಂದ 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್‌ 27ರಂದು ಹರಿಯಾಣದಲ್ಲಿ ನಡೆದಿತ್ತು. ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಘಟನೆಯ ಬಗ್ಗೆ ಮನೆಯವರು ತಿಳಿಸಿದ್ದರು. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ಹೇಳಿದ್ದರು. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಳು. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

Pejawar Swamiji: ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳನ್ನು ಆಯಾ ಪ್ರದೇಶದ ಹಿಂದೂಗಳ ಆಡಳಿತಕ್ಕೆ ನೀಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ದೇಶದ ಬಹುತೇಕ ಅನ್ಯಧರ್ಮಿಯರ ಪ್ರಾರ್ಥನಾ ಮಂದಿರಗಳನ್ನು ಆಯಾ ಸಮುದಾಯಕ್ಕೆ ಬಿಟ್ಟುಕೊಡಲಾಗಿದೆ. ಆದರೆ ಹಿಂದೂ ದೇವಾಲಯಗಳ ಆಡಳಿತ ಮಾತ್ರ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಸರ್ಕಾರ ನಿಯಂತ್ರಿಸುತ್ತಿದೆ. ಇದು ಸರಿಯಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.

VISTARANEWS.COM


on

Administration of Hindu temples should be handed over to Hindus says Pejawara Shri
Koo

ಗಂಗಾವತಿ: ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳನ್ನು ಆಯಾ ಪ್ರದೇಶದ ಹಿಂದೂಗಳ ಆಡಳಿತಕ್ಕೆ ನೀಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Pejawar Swamiji) ಹೇಳಿದರು.

ನಗರದಲ್ಲಿ ಈ ಕುರಿತು ಮಾತನಾಡಿ, ದೇಶದ ಬಹುತೇಕ ಅನ್ಯ ಧರ್ಮಿಯರ ಪ್ರಾರ್ಥನಾ ಮಂದಿರಗಳನ್ನು ಆಯಾ ಸಮುದಾಯಕ್ಕೆ ಬಿಟ್ಟುಕೊಡಲಾಗಿದೆ. ಆದರೆ ಹಿಂದೂ ದೇವಾಲಯಗಳ ಆಡಳಿತ ಮಾತ್ರ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಸರ್ಕಾರ ನಿಯಂತ್ರಿಸುತ್ತಿದೆ. ಇದು ಸರಿಯಲ್ಲ. ಆಯಾ ಧರ್ಮದ ವ್ಯಾಪ್ತಿಗೆ ಆಯಾ ದೇಗುಲಗಳ ಆಡಳಿತ ನೀಡುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ಇದೆ. ಆದರೆ ಸರ್ಕಾರಗಳು ಎಲ್ಲಿಯೂ ಈ ಆದೇಶವನ್ನು ಜಾರಿಗೆ ತರುತ್ತಿಲ್ಲ. ಈ ಕಾರ್ಯ ತಕ್ಷಣದಿಂದ ಆಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

ಐಎಎಸ್‌ನಂತ ಪರೀಕ್ಷೆಯಲ್ಲಿ ದಲಿತರು ಹಿಂದುಳಿಯಲು ಅಥವಾ ಆಯಕಟ್ಟಿನ ಹುದ್ದೆಗೆ ಆಯ್ಕೆ ಹೊಂದದಿರಲು ಮುಖ್ಯ ಕಾರಣ ಮೇಲ್ವರ್ಗದವರು ಎಂಬ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀಗಳು, ಇದೊಂದು ಆಧಾರ ರಹಿತ ಆರೋಪ. ಪರೀಕ್ಷೆಗಳು ಎಲ್ಲರಿಗೂ ಒಂದೇ ಇರುತ್ತದೆ. ಎಲ್ಲರಿಗೂ ನೂರು ಅಂಕ ಇರುತ್ತದೆ. ಅಭ್ಯರ್ಥಿಗಳು ಗ್ರಹಿಸುವ ಸಾಮರ್ಥ್ಯದ ಮೇಲೆ ಅಂಕಗಳು ಸಿಗುತ್ತವೆಯೇ ವಿನಃ, ಮೇಲ್ವರ್ಗ ಮತ್ತು ಕೆಳವರ್ಗ ಎಂಬ ತಾರತಮ್ಯ ನೀತಿಯಿಂದಲ್ಲ ಎಂದರು.

ದೇಶದಲ್ಲಿ ಹಿಂದೂಗಳ ಸಂಖ್ಯೆ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಶ್ರೀಗಳು, ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾದರೆ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದಷ್ಟು ತ್ವರಿತವಾಗಿ ಮಸೂದೆ ಮಂಡನೆಯಾಗಿ ಕಾಯ್ದೆ ಜಾರಿಯಾಗಬೇಕು ಎಂದರು.

ಐದಾರು ಶತಮಾನಗಳ ರಾಮಮಂದಿರ ನಿರ್ಮಾಣ ಕನಸು ಇಂದು ನನಸಾಗಿದೆ. ಇಲ್ಲಿಗೆ ನಮ್ಮ ಕಾರ್ಯ ಮುಗೀತು ಎಂದು ಸುಮ್ಮನೆ ಕೂರುವ ಹಾಗಿಲ್ಲ. ಆ ಮಂದಿರವನ್ನು ಸೂರ್ಯ-ಚಂದ್ರರು ಇರೋವರೆಗೂ ಉಳಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ.

ಇದನ್ನೂ ಓದಿ: Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

ಮಂದಿರದ ಮೇಲೆ ಯಾವುದೇ ದಾಳಿಯಾಗದಂತೆ, ಧಕ್ಕೆಯಾಗದಂತೆ ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಭಾರತೀಯ ಅದರಲ್ಲೂ ಮುಖ್ಯವಾಗಿ ಪ್ರತಿಯೊಬ್ಬ ಹಿಂದೂ ಈ ಕೆಲಸ ಮಾಡಬೇಕು. ಹಿಂದೂಗಳು ಹಿಂದೂಗಳಾಗಿ ಉಳಿದರೆ ಮಾತ್ರ ಈ ಕೆಲಸ ಸಾಧ್ಯ ಎಂದು ತಿಳಿಸಿದರು.

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLC Result 2024: ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

VISTARANEWS.COM


on

SSLC Result 2024 SSLC 2nd and 3rd exam aspirants to have special classes
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading

ಶಿಕ್ಷಣ

SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

SSLC Examination 2 : ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಚಿಂತೆ ಮಾಡಬೇಡಿ. ಯಾಕೆಂದರೆ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ದಿನಾಂಕ ನಿಗಧಿಯಾಗಿದ್ದು, ವೇಳಾಪಟ್ಟಿ (SSLC 2 Exam Time Table) ಪ್ರಕಟಿಸಿದೆ.

VISTARANEWS.COM


on

By

SSLc Exam 2 time table
Koo

ಬೆಂಗಳೂರು: 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ (SSLC Examination 2) ದಿನಾಂಕ ನಿಗಧಿಯಾಗಿದ್ದು, ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷಾ (SSLC 2 Exam Time Table) ಸಮಯವಾಗಿದೆ. ಇನ್ನೂ ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಹೀಗಿದೆ

7-6-2024- ಪ್ರಥಮ ಭಾಷೆ
8-6-2024- ತೃತೀಯ ಭಾಷೆ
10-6-2024- ಗಣಿತ, ಸಮಾಜ ಶಾಸ್ತ್ರ
11-6-2024- ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌
12-6-2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
13-6-2024- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)
14-6-2024 – ಸಮಾಜ ವಿಜ್ಞಾನ

ಸೂಚನೆಗಳು ಹೀಗಿವೆ..

ಜೂನ್‌ 15ರಂದು ಜೆಟಿಎಸ್‌ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು. ಸಬ್ಜೆಕ್ಟ್‌ ಕೋಡ್‌ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.

ವಿವಿಧ ಪ್ರಕಾರದ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಬರಹಗಾರರ ಸೌಲಭ್ಯ ಅಥವಾ ಹೆಚ್ಚುವರಿ ಸಮುಯದ ಅಥವಾ ಎರಡನ್ನೂ ಪಡೆಯುವ ಅವಕಾಶವಿದೆ. ಈ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿಯಾಗಿ 30 ನಿಮಿಷಗಳನ್ನು ನೀಡಲಾಗುವುದು.

ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1:15ರವರೆಗೆ ಅವಧಿ ನಿಗದಿಪಡಿಸಿದೆ. ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ. ಎನ್.ಎಸ್.ಕ್ಯೂ.ಎಫ್ ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ

ಬೆಂಗಳೂರು: ಮೇ 9ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟವಿ, ಕಡಿಮೆ ಅಂಕ ಬಂತಲ್ಲ ಎಂದು ಬೇಜಾರಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳಿಗೆ (SSLC Result 2024) ಗುಡ್‌ನ್ಯೂಸ್‌ ನೀಡಿದೆ.

ಅಂದಹಾಗೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಎಸ್‌ಎಸ್‌ಎಲ್‌ಸಿ 1, 2, 3ರ ಹೊಸ ಪರೀಕ್ಷಾ ಮಾದರಿಯನ್ನು ಪರಿಚಯಿಸಿದೆ. ಇದರ ಕ್ರಮವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಅನುತೀರ್ಣರಾಗಿದ್ದರೆ ಅಥವಾ ಕಡಿಮೆ ಅಂಕ ಪಡೆದು ಜಸ್ಟ್‌ ಪಾಸ್‌ ಆಗಿದ್ದರೆ ಅಂತಹ ವಿದ್ಯಾರ್ಥಿಗಳು ಪರೀಕ್ಷೆ 2ರಲ್ಲಿ ಅಂಕವನ್ನು ಸರಿದೂಗಿಸಿಕೊಳ್ಳಬಹುದಾಗಿದೆ. ಕೇವಲ ಫೇಲ್‌ ಆದವರು, ಕಡಿಮೆ ಅಂಕ ಬಂದವರು ಮಾತ್ರವಲ್ಲ ಹೆಚ್ಚು ಅಂಕ ಗಳಿಸಲು ಯಾವುದೇ ವಿದ್ಯಾರ್ಥಿಯಾದರು ಪರೀಕ್ಷೆ 2 ಹಾಗೂ 3ರಲ್ಲಿ ಹಾಜರಾಗಬಹುದು. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದಲೇ ಮುಂದಿನ 1 ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸಲಾಗುತ್ತದೆ. ಇದರಿಂದಾಗಿ ಪರೀಕ್ಷೆ 2-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಹಾಯವಾಗುತ್ತದೆ.

ಎಸ್‌ಎಸ್‌ಎಲ್‌ಸಿಯ ಮೊದಲನೇ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಫೇಲ್‌ ಆಗಿದ್ದರೆ, ಆ ವಿದ್ಯಾರ್ಥಿಯ ಫಲಿತಾಂಶವನ್ನು NC ಎಂದು ತೋರಿಸಲಾಗುತ್ತದೆ. NC ಅಂದರೆ Not Completed ಎಂದು ಪ್ರಕಟಿಸಲಾಗುತ್ತದೆ. ಈ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ 2-3ರಲ್ಲಿ ಬರೆದ ಪರೀಕ್ಷೆಗಳ ಪೈಕಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಅಂತಿಮ ಫಲತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಮೂಲಕ ಕಡಿಮೆ ಬಂದ ಫಲಿತಾಂಶವನ್ನು ಉತ್ತಮಗೊಳಿಸಿ ವಿದ್ಯಾರ್ಥಿಗಳಿಗೆ ಎರಡೆರಡು ಬಾರಿ ಅವಕಾಶ ಕೊಟ್ಟು ಅವರ ಏಳಿಗೆಗೆ ಇದು ಸಹಕಾರಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannada Serials TRP Puttakkana makkalu TOP one
ಕಿರುತೆರೆ8 mins ago

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Self Harming Man commits suicide after falling from PG in Bengaluru
ಬೆಂಗಳೂರು10 mins ago

Self Harming: ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

Atrocity on women
ದೇಶ12 mins ago

Atrocity on women: ಟಿಎಂಸಿ ಮುಖಂಡರ ವಿರುದ್ಧ ಅತ್ಯಾಚಾರ ಕೇಸ್‌; ಯೂ ಟರ್ನ್‌ ಹೊಡೆದ ದೂರುದಾರೆ

Money Guide
ಮನಿ-ಗೈಡ್16 mins ago

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Virender Sehwag
ಕ್ರಿಕೆಟ್23 mins ago

Virender Sehwag: ಏಕದಿನ ವಿಶ್ವಕಪ್​ ಸೋಲಿಗೆ ಕೊಹ್ಲಿ, ರಾಹುಲ್​ ನೇರ ಕಾರಣ ಎಂದ ಮಾಜಿ ಆಟಗಾರ

Administration of Hindu temples should be handed over to Hindus says Pejawara Shri
ಕರ್ನಾಟಕ48 mins ago

Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

Navneet Rana
Lok Sabha Election 20241 hour ago

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

SSLC Result 2024 SSLC 2nd and 3rd exam aspirants to have special classes
ಕರ್ನಾಟಕ2 hours ago

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLc Exam 2 time table
ಶಿಕ್ಷಣ2 hours ago

SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

Mahender Pratap Singh
ದೇಶ2 hours ago

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ3 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ3 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ3 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು4 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ4 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌