ಒಂದು ಅವಕಾಶ ಕೊಟ್ಟರೆ 2 ವರ್ಷದ ನಂತರ ರಾಮನಗರ ಎತ್ತರಕ್ಕೆ ಹೋಗುತ್ತೆ; ಇಲ್ಲದಿದ್ರೆ ನನ್ನ ಹೆಸರು ಬದಲಿಸಿ: ಡಿಕೆಶಿ - Vistara News

ಕರ್ನಾಟಕ

ಒಂದು ಅವಕಾಶ ಕೊಟ್ಟರೆ 2 ವರ್ಷದ ನಂತರ ರಾಮನಗರ ಎತ್ತರಕ್ಕೆ ಹೋಗುತ್ತೆ; ಇಲ್ಲದಿದ್ರೆ ನನ್ನ ಹೆಸರು ಬದಲಿಸಿ: ಡಿಕೆಶಿ

Ramanagar News: ನಮ್ಮ ಅಧಿಕಾರ ಇರುವುದು ಜನರ ಸೇವೆ ಮಾಡಲು, ನನಗೆ ಒಂದು ಅವಕಾಶ ಮಾಡಿಕೊಡಿ. ನಾನು ಕೆಲಸ ಮಾಡಲಿಲ್ಲ ಎಂದರೆ ಕತ್ತಿನ ಪಟ್ಟಿ ಹಿಡಿದು ಕೇಳಿ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

tipu sultan DK Shivakumar alleges bjp for spreading false history
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ತಾಲೂಕಿಗೆ ಇನ್ನೂ ಅಭ್ಯರ್ಥಿ ಯಾರು ಎಂಬುದನ್ನು ತೀರ್ಮಾನಿಸಿಲ್ಲ. ಯಾರೇ ಅಭ್ಯರ್ಥಿ ಆದರೂ ನಾನೇ ಅಭ್ಯರ್ಥಿ ಎಂದು ಭಾವಿಸಿ ಚುನಾವಣೆಯಲ್ಲಿ (Karnataka Election 2023) ಗೆಲ್ಲಿಸಬೇಕು. ಇನ್ನೆರಡು ವರ್ಷ ಆದ ಮೇಲೆ‌ ರಾಮನಗರ ಎತ್ತರಕ್ಕೆ ಹೋಗುತ್ತದೆ. ಇಲ್ಲವೆಂದರೆ ನನ್ನ ಹೆಸರು ಡಿ.ಕೆ. ಶಿವಕುಮಾರ್ ಅಂತ ಕರೆಯಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಹೇಳಿದ್ದಾರೆ.

ರಾಮನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ವಿಧಾನ ಸೌಧ ಕಟ್ಟಿದವರ ಜಿಲ್ಲೆ ರಾಮನಗರವಾಗಿದೆ. ಹೆಸರು ಮಾತ್ರ ರಾಮನಗರ ಅಷ್ಟೇ, ಇದಕ್ಕೆ ಬೆಂಗಳೂರು‌ ದಕ್ಷಿಣ ಎಂದು ಕರೆಯಬೇಕಿತ್ತು. ನಮ್ಮ ಅಧಿಕಾರ ಇರುವುದು ನಿಮ್ಮ ಸೇವೆ ಮಾಡಲು, ನನಗೆ ಒಂದು ಅವಕಾಶ ಮಾಡಿಕೊಡಿ. ನಾನು ಕೆಲಸ ಮಾಡಲಿಲ್ಲ ಎಂದರೆ ಕತ್ತಿನ ಪಟ್ಟಿ ಹಿಡಿದು ಕೇಳಿ ಎಂದು ಹೇಳಿದರು.

ರಾಮನಗರದಲ್ಲಿ ಬದಲಾವಣೆ ತರಬೇಕು. ಈ ಹಿಂದೆ ಎಲ್ಲ ಚುನಾವಣೆಯಲ್ಲೂ ಸೋತಿದ್ದೇವೆ. ಗೌಡರನ್ನು ಪ್ರಧಾನ ಮಂತ್ರಿ, ಕುಮಾರಸ್ವಾಮಿಯನ್ನು ಸಿಎಂ ಮಾಡಿದ್ದೀರಿ. ಅವರು ಪ್ರತ್ಯೇಕ ಜಿಲ್ಲೆ ಮಾಡುವುದು ಬಿಟ್ಟು ಬೇರೆ ಏನೂ ಮಾಡಿಲ್ಲ. ಗೌಡರು, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿಗೆ ಅವಕಾಶ ಕೊಟ್ಟಿದ್ದೀರಿ, ಅದನ್ನು ನಾವು ಸ್ವೀಕರಿದ್ದೇವೆ. ಈಗ ಜಾತಿ, ಧರ್ಮ ಎಲ್ಲ ಹೋಗಿದೆ. ಈಗ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಕೇಳುತ್ತಾರೆ. ಅಶ್ವತ್ಥನಾರಾಯಣ ಜಿಲ್ಲೆಯನ್ನು ಕ್ಲೀನ್ ಮಾಡುತ್ತೇವೆ ಎಂದು ಬಂದಿದ್ದ. ಜಿಲ್ಲೆಯಲ್ಲಿ ಲಂಚ ಪಡೆಯುವುದು ನಿಂತಿದೆಯಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | JDS ticket : ಜೆಡಿಎಸ್‌ ಟಿಕೆಟ್‌ ಹಂಚಿಕೆ ಗೊಂದಲ, ಕುಮಾರಸ್ವಾಮಿ ಕಾರಿಗೆ ಕಾರ್ಯಕರ್ತರ ಮುತ್ತಿಗೆ

ನಾವು ಅಧಿಕಾರ ಇಲ್ಲವೆಂದರೂ ಏನು ಮಾಡಿದ್ದೇವೆ ಎಂಬುದು ಗೊತ್ತಾಗಬೇಕು. ಕನಕಪುರದಲ್ಲಿ 4 ಕೋಟಿ ರೂಪಾಯಿ ವೆಚ್ಚದಲ್ಲಿ ನರೇಗಾ ಯೋಜನೆ ಮಾಡಿದ್ದೇವೆ. ರಾಮನಗರದಲ್ಲಿ ಯಾಕೆ ಮಾಡಿಲ್ಲ? ಬಿಜೆಪಿ ಸೋಮಣ್ಣನ ಕೈ, ಕಾಲು ಹಿಡಿದು ಕನಕಪುರದಲ್ಲಿ ಬಡವರಿಗೆ ಸೈಟ್ ಕೊಡಿಸಿದ್ದೇನೆ. ಈ ರೀತಿ ಜೆಡಿಎಸ್ ಶಾಸಕರು ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ನಾವು ಕಾಂಗ್ರೆಸ್‌ ಗ್ಯಾರಂಟಿ ಕಾರ್ಯಕ್ರಮ ಮಾಡಿದ ಮೇಲೆ ಬಿಜೆಪಿಯವರು ನಮ್ಮ ಕಾರ್ಯಕ್ರಮದ ರೀತಿಯಲ್ಲಿ ಮಾಡುತ್ತಿದ್ದಾರೆ. ಇನ್ನು 3 ತಿಂಗಳಲ್ಲಿ ನಮ್ಮ ಸರ್ಕಾರ ಬರುತ್ತದೆ. ಆಗ ನಾನು ನಿಮಗೆ ಟ್ರಾನ್ಸ್‌ಫಾರ್ಮರ್‌ ಕೊಡುತ್ತೇನೆ. ಬೇರೆಯವರಿಗೆ ವಿದ್ಯುತ್ ಮಾರುವುದು ಬೇಡ. ನಮ್ಮ ಜನಕ್ಕೆ ಕೊಡಿ ಎಂಬುದು ನನ್ನ ವಾದ. ನಾನು ಗ್ಯಾರಂಟಿ ಕಾರ್ಯಕ್ರಮವನ್ನು ಕಾರ್ಯರೂಪಕ್ಕೆ ತರಲಿಲ್ಲವೆಂದರೆ ನಿಮ್ಮ ಬಳಿ ಮತ ಕೇಳಲೂ ಬರುವುದಿಲ್ಲ ಎಂದು ಹೇಳಿದರು.

ರಾಮನಗರದಿಂದ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೈಕಮಾಂಡ್‌ನಲ್ಲೂ ಚರ್ಚೆ ಆಗಿರುವುದು ನಿಜ. ಬಹಳ ದಿನದಿಂದ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಡಿ.ಕೆ.ಸುರೇಶ್ ಯಾವತ್ತೂ ಸ್ಟೇಜ್ ಹತ್ತಿರಲಿಲ್ಲ, ಮೈಕ್ ಹಿಡಿದಿರಲಿಲ್ಲ. ಈ ಹಿಂದೆ ಸೋನಿಯಾಗಾಂಧಿ ಅವರು ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರು. ಯಾವ ಸಂದರ್ಭದಲ್ಲಿ ಏನು ಆಗಬೇಕೋ ಅದು ಆಗುತ್ತದೆ ಎಂದು ಪರೋಕ್ಷವಾಗಿ ಡಿ.ಕೆ.ಸುರೇಶ್ ಸ್ಪರ್ಧೆ ಬಗ್ಗೆ ಸುಳಿವು ನೀಡಿದರು.

ಮಾಜಿ ಸಂಸದ ಧ್ರುವನಾರಾಯಣ್ ಪುತ್ರ ದರ್ಶನ್‌ ಅವರಿಗೆ ಟಿಕೆಟ್‌ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಜಡ್ಜ್. ನಾನು ಧ್ರುವನಾರಾಯಣ್ ಪುತ್ರ ದರ್ಶನ ಪರ ವಕೀಲ. ಧ್ರುವನಾರಾಯಣ್ ಅಂತಿಮ ದರ್ಶನ ಮಾಡಲು ಸ್ವತಃ ಮಲ್ಲಿಕಾರ್ಜುನ ಖರ್ಗೆ ಬಂದಿದ್ದರು. ಅಭಿಮಾನಿಗಳ ಆಕ್ರಂದನ ನೋಡಿದ್ದು, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಇದನ್ನೂ ಓದಿ | BY Vijayendra: ಸಿ.ಟಿ. ರವಿ ಹೇಳಿದ್ದು ಸರಿ ಇದೆ; ವಿಜಯೇಂದ್ರನಿಗಾದರೂ ಚುನಾವಣಾ ಸಮಿತಿಯಿಂದಲೇ ಟಿಕೆಟ್‌ ತೀರ್ಮಾನ: ಬಿಎಸ್‌ವೈ

ಹೆದ್ದಾರಿ ಕಾಮಗಾರಿ ಪೂರ್ಣ ಮಾಡಿ ಟೋಲ್ ಸಂಗ್ರಹ ಆರಂಭಿಸಲಿ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಕೇಂದ್ರಗಳ ಆರಂಭದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌ ಅವರು, ಈ ಸರ್ಕಾರ ಜನಸಾಮಾನ್ಯರ ಪಿಕ್ ಪಾಕೆಟ್ ಮಾಡುತ್ತಿದೆ. ಕಾಮಗಾರಿ ಪೂರ್ಣ ಮಾಡಿ ಟೋಲ್ ಆರಂಭಿಸಲಿ ಎಂದು ಒತ್ತಾಯಿಸಿದರು.

ನಾನು ಕೂಡ ಟೋಲ್ ಕಟ್ಟಿ ಬಂದಿದ್ದೇನೆ. ನನ್ನ ಕಾರಿನಲ್ಲಿ ಫಾಸ್ಟ್ ಟ್ಯಾಗ್ ಇರಲಿಲ್ಲ. 500 ರೂ‌ಪಾಯಿ ಕೊಟ್ಟಿದ್ದಕ್ಕೆ 230 ರೂಪಾಯಿ ವಾಪಸ್‌ ಕೊಟ್ಟಿದ್ದಾರೆ. ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನ್ನನ್ನೂ ವಶಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಟೋಲ್ ಕಟ್ಟಿ ಬಂದಿದ್ದೇನೆ ಎಂದ ಅವರು, ಕೋವಿಡ್‌ ಸಮಯದಲ್ಲಿ ನನ್ನ ಮೇಲೆ ಸಾಕಷ್ಟು ಕೇಸ್ ಹಾಕಿದರು. ಈಗಲೂ ನಾನು ಕೋರ್ಟ್‌ಗೆ ಅಲೆಯುತ್ತಿದ್ದೇನೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ISIS Threat : ಭಾರತಕ್ಕೆ ಐಸಿಸ್​ ಉಗ್ರರ ಬೆದರಿಕೆ; ಬೆಂಗಳೂರು ಸ್ಫೋಟವೇ ಸಾಕ್ಷಿ

 ISIS Threat: ಇಸ್ಲಾಮಿಕ್ ಸ್ಟೇಟ್ ಪಾಕಿಸ್ತಾನ್ ಪ್ರಾವಿನ್ಸ್ ನ (ಐಎಸ್​ಪಿಪಿ) ಇತ್ತೀಚೆಗೆ ಭಾರತಕ್ಕೆ ಬೆದರಿಕೆ ಒಡ್ಡಿದ್ದು, ಅದು ಕೂಡ ಗಂಭೀರ ವಿಷಯ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾಲಿಬಾನ್ ದುರ್ಬಲಗೊಂಡ ನಂತರ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಮತ್ತು ಪಾಕಿಸ್ತಾನದ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಕೈಜೋಡಿಸಿವೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

ISIS Terroirst- ISIS Threat
Koo

ಬೆಂಗಳೂರು: ಭಾರತಕ್ಕೆ ಐಸಿಸಿ ಸೇರಿದಂತೆ ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳಿಂದ ಬೆದರಿಕೆ (ISIS Threat) ಇವೆ ಎಂಬುದಾಗಿ ಗುಪ್ತಚರ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರ ಕೆಫೆ ಸ್ಫೋಟದಂಥ (Rameshwar cafe Blast) ಘಟನೆಗಳು ತೀವ್ರಗಾಮಿ ಗುಂಪುಗಳ ಕಾರ್ಯಾಚರಣೆಗೆ ಸಾಕ್ಷಿ ಒದಗಿಸುತ್ತಿದೆ. ಖಂಡಿತವಾಗಿಯೂ ಜಾಗತಿಕ ಭಯೋತ್ಪಾದಕ ಗುಂಪಿನಿಂದ ಬೆದರಿಕೆ ಎಂದು ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿವೆ.

ಇಸ್ಲಾಮಿಕ್ ಸ್ಟೇಟ್ ಪಾಕಿಸ್ತಾನ್ ಪ್ರಾವಿನ್ಸ್ ನ (ಐಎಸ್​ಪಿಪಿ) ಇತ್ತೀಚೆಗೆ ಭಾರತಕ್ಕೆ ಬೆದರಿಕೆ ಒಡ್ಡಿದ್ದು, ಅದು ಕೂಡ ಗಂಭೀರ ವಿಷಯ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾಲಿಬಾನ್ ದುರ್ಬಲಗೊಂಡ ನಂತರ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಮತ್ತು ಪಾಕಿಸ್ತಾನದ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಕೈಜೋಡಿಸಿವೆ ಎಂದು ಮೂಲಗಳು ತಿಳಿಸಿವೆ.

ಐಎಸ್​​ಪಿಪಿಯೊಂದಿಗೆ ಸಂಯೋಜಿತವಾಗಿರುವ ನಶೀರ್ ಮೀಡಿಯಾ ಬಿಡುಗಡೆ ಮಾಡಿದ ಪೋಸ್ಟರ್​ನಲ್ಲಿ ಅಬ್ ಕಿಸ್ಕಿ ಬಾರಿ ಹೈ (ಯಾರು ಮುಂದಿನವರು) ಎಂದು ಬರೆಯಲಾಗಿದೆ. ಇದು ಭಾರತ, ಅಮೆರಿಕ , ಚೀನಾ ಮತ್ತು ಡೆನ್ಮಾರ್ಕ್​ಗೆ ಬೆದರಿಕೆ ಎಂದು ಹೇಳಲಾಗಿದೆ. ಅದೇ ರೀತಿ ಇತ್ತೀಚೆಗೆ ರಷ್ಯಾದ ಮಾಸ್ಕೋ ಮತ್ತು ಅಫಘಾನಿಸ್ತಾನದ ಕಂದಹಾರ್ ದಾಳಿಯೂ ಉಗ್ರರ ಜಾಗತಿಕ ಚಲನವಲನಕ್ಕೆ ಸಾಕ್ಷಿಯಾಗಿದೆ.

ಅಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಉನ್ನತ ನಾಯಕತ್ವ ಮತ್ತು ಅದರ ಸರ್ವೋಚ್ಚ ನಾಯಕ ಮುಲ್ಲಾ ಹಿಬತುಲ್ಲಾ ಅಖುಂದ್ಜಾದಾ ಅವರನ್ನು ಗುರಿಯಾಗಿಸಿಕೊಂಡು ಮಾರ್ಚ್ 21 ರಂದು ಐಸಿಸ್ ದಾಳಿ ನಡೆಸಿತ್ತು. ಮರುದಿನ, ಬಂದೂಕುಧಾರಿಗಳು ರಷ್ಯಾದ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್​ನಲ್ಲಿ ಆಯೋಜನೆಗೊಂಡಿದ್ದ ಸಂಗೀತ ಕಚೇರಿಗಳಿಗೆ ಹೋಗುವವರನ್ನು ಕಗ್ಗೊಲೆ ಮಾಡಿದ್ದರು. ಕನಿಷ್ಠ 130 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Mukhtar Ansari : ನಿಜಕ್ಕೂ ಗ್ಯಾಂಗ್ ಸ್ಟರ್ ಅನ್ಸಾರಿ ಸತ್ತಿದ್ದು ಹೇಗೆ? ಬಂತು ಪೋಸ್ಟ್ ಮಾರ್ಟಮ್ ರಿಪೋರ್ಟ್!

“ನಾವು ಈ ಬೆದರಿಕೆಯನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಸಿಎನ್ಎನ್-ನ್ಯೂಸ್ 18 ಗೆ ತಿಳಿಸಿದ್ದಾರೆ. “ನಿರ್ದಿಷ್ಟ ಸಮುದಾಯದ ಭಾರತೀಯ ಯುವಕರನ್ನು ನಿಯಮಿತವಾಗಿ ಪ್ರಚೋದಿಸಲು ಐಸಿಸ್ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ. ರಾಜ್ಯ ಪೊಲೀಸರ ಸಹಾಯದಿಂದ ನಿಯಮಿತವಾಗಿ ಭಾರತದ ಮೇಲೆ ದಾಳಿ ಮಾಡುವ ಅವರ ಸಾಮರ್ಥ್ಯವನ್ನು ನಾವು ನಾಶಪಡಿಸುತ್ತಿದ್ದೇವೆ. ನಾವು ಹೆಚ್ಚಿನ ಎಚ್ಚರಿಕೆ ವಹಿಸಿದ್ದೇವೆ ಮತ್ತು ಈ ಚಟುವಟಿಕೆಗಳಲ್ಲಿ ತೊಡಗಿರುವ ಪ್ರತಿಯೊಬ್ಬರೂ ಕಣ್ಗಾವಲಿನಲ್ಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ನಾನಾ ವೇದಿಕೆಗಳ ಮೂಲಕ ಅಪಪ್ರಚಾರ

ದಾಳಿಗಳನ್ನು ನಡೆಸಲು ಪಾಕಿಸ್ತಾನದ ಐಎಸ್ಐ ಸಾಮಾಜಿಕ ಮಾಧ್ಯಮ ಮತ್ತು ಇತರ ವಿಒಐಪಿ ಪ್ಲಾಟ್​ಫಾರ್ಮ್​ಗಳಲ್ಲಿ ಭಾರತೀಯ ಯುವಕರಿಗೆ ನಿಯಮಿತವಾಗಿ ಸಹಾಯ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಕೆಫೆ ಸ್ಫೋಟದ ಶಂಕಿತ ಮುಸ್ಸಾವಿರ್ ಶಜೀಬ್ ಹುಸೇನ್ ನಂತಹ ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವ ಜನರನ್ನು ಅನಾಹುತಕಾರಿ ಚಟುವಟಿಕೆಗಳನ್ನು ಮಾಡಲು ಅವರು ಬೆಳೆಸುತ್ತಿದ್ದಾರೆ ಎಂದು ಅವರು ಹೇಳಿದರು.

ನಗರದ ವೈಟ್​ಫೀಲ್ಡ್​ ಪ್ರದೇಶದ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಪ್ರಕರಣದ ತನಿಖೆ ನಡೆಸುತ್ತಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬರುವುದರೊಂದಿಗೆ ಐಸಿಸ್ ಬಲ ಪಡೆದುಕೊಂಡಿದೆ. ತಾಲಿಬಾನ್ ಮತ್ತು ಪಾಕಿಸ್ತಾನ ಸೇನೆಯು ಗಡಿಯಲ್ಲಿ ನಿಯಮಿತವಾಗಿ ಹೋರಾಡುತ್ತಿದೆ. ಪಾಕಿಸ್ತಾನದ ಐಎಸ್ಐ ಇಲ್ಲಿ ಐಸಿಸ್ ಬೆಂಬಲ ಪಡೆಯುತ್ತಿದೆ.

Continue Reading

ಕೊಪ್ಪಳ

Koppala News: ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಹುಂಡಿಯ ಹಣ ಸೋರಿಕೆ ವಿಡಿಯೊ ವೈರಲ್

Koppala News: ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಈ ಬಾರಿ ಕುಸಿತ ಕಂಡ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹಣ ಸೋರಿಕೆಯ ವಿಡಿಯೋವೊಂದು ವೈರಲ್‌ ಆಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

VISTARANEWS.COM


on

Anjanadri Hill Shree Anjaneya Swamy Temple Hundi money leak video viral
Koo

ಗಂಗಾವತಿ: ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ (Anjanadri Hill) ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಈ ಬಾರಿ ಕುಸಿತ ಕಂಡ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಹಣ ಸೋರಿಕೆಯ ವಿಡಿಯೋವೊಂದು ವೈರಲ್‌ ಆಗಿದೆ. ಇದು ಹಲವು ಅನುಮಾನಗಳಿಗೆ (Koppala News) ಎಡೆಮಾಡಿಕೊಟ್ಟಿದೆ.

ಅಂಜನಾದ್ರಿ ದೇಗುಲದ ಮಾಸಿಕ ಕಾಣಿಕೆ ಹುಂಡಿ ಹಣವು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಈ ಕುರಿತು ಚರ್ಚೆಗೆ ಕಾರಣವಾಗಿತ್ತು. ಇದೀಗ ಹಣ ಸೋರಿಕೆಯ ಬಗ್ಗೆ ವೀಡಿಯೊ ಒಂದು ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಅರ್ಚಕರಂತೆ ಕಾಣುತಿದ್ದು, ಮೊದಲಿಗೆ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಕಾಣಿಕೆಯ ತಟ್ಟೆಯಲ್ಲಿ ಭಕ್ತರು ಹಾಕಿದ್ದ ದೊಡ್ಡ ಪ್ರಮಾಣದ ನೋಟುಗಳನ್ನು ಕಂತೆಕಂತೆಯಾಗಿ ಚೀಲಕ್ಕೆ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ.

ಇದನ್ನೂ ಓದಿ: Bengaluru News: ಸಿಎಸ್‌ಆರ್‌ ಮಹತ್ವದ ಸಾಧನೆಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ಗೆ ಪ್ರಶಂಸೆ

ಮಾಸಿಕ ಸರಾಸರಿ 20ರಿಂದ 22 ಲಕ್ಷ ರೂಪಾಯಿ ಆದಾಯ ಹೊಂದಿರುವ ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿ ಹಣವು ಇದೇ ಮೊದಲ ಬಾರಿಗೆ 36 ದಿನಕ್ಕೆ ಹುಂಡಿಯಲ್ಲಿ ಕೇವಲ 9.89 ಲಕ್ಷ ರೂಪಾಯಿ ಮೊತ್ತದ ಹಣ ಮಾತ್ರ ಸಂಗ್ರಹವಾಗಿತ್ತು. ಇದು ಹಲವು ಅನುಮಾನಕ್ಕೆ ಕಾರಣವಾಗಿತ್ತು.

ದೇಗುಲದ ಅಭಿವೃದ್ಧಿಗೆ ಎಂದು ಭಕ್ತರು ಸಲ್ಲಿಸಿರುವ ಹಣ ತೆಗೆದುಕೊಂಡು ಹೋಗಲು ಅಧಿಕಾರಿಗಳು ಹೇಗೆ ಅವಕಾಶ ನೀಡಿದ್ದಾರೆ ಎಂಬ ಚರ್ಚೆ ಈಗ ಸಾರ್ವಜನಿಕರು ಮತ್ತು ಭಕ್ತರ ವಲಯದಲ್ಲಿ ವ್ಯಕ್ತವಾಗಿದೆ. ಇದಕ್ಕೆ ದೇಗುಲದ ಆಡಳಿತ ಮಂಡಳಿ ಸ್ಪಷ್ಟನೆ ನೀಡಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ನೀಲಕಂಠ ನಾಗಶೆಟ್ಟಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

ಎಸಿ ಪ್ರತಿಕ್ರಿಯೆ ಏನು?:

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗತ್ತಿ, ಆದಾಯದಲ್ಲಿ ಭಾರಿ ಪ್ರಮಾಣ ಇಳಿಕೆಯಾಗಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಏನು ಕಾರಣ ಎಂದು ಪತ್ತೆಹಚ್ಚುವ ಕೆಲಸ ಮಾಡಲಾಗುತ್ತಿದೆ. ಅಲ್ಲದೇ ಖಾಸಗಿ ವ್ಯಕ್ತಿಯೊಬ್ಬರು ಕೇವಲ ಪೂಜೆ ಎಂದು ನ್ಯಾಯಾಲಯದಿಂದ ಅವಕಾಶ ಪಡೆದು, ಇದೀಗ ದೇಗುಲಕ್ಕೆ ಬರುವ ಭಕ್ತರಿಗೆ ದಾರಿ ತಪ್ಪಿಸಿ ದೇಣಿಗೆ ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Kalaburagi News: ಕಲಬುರಗಿ ಉಚ್ಚಾಯಿ ರಥೋತ್ಸವದಲ್ಲಿ ದುರಂತ; ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

Kalaburagi News: ಕಲಬುರಗಿಯಲ್ಲಿ ಶುಕ್ರವಾರ ನಡೆದ ಶ್ರೀ ಶರಣ ಬಸವೇಶ್ವರ ರಥೋತ್ಸವದಲ್ಲಿ ದುರ್ಘಟನೆ ಸಂಭವಿಸಿದೆ. ರಥದ ಚಕ್ರಕ್ಕೆ ಹೋಂಗಾರ್ಡ್ ಸಿಬ್ಬಂದಿ ದುರ್ಮರಣ ಹೊಂದಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

VISTARANEWS.COM


on

Kalaburagi News
Koo

ಕಲಬುರಗಿ: ನಗರದಲ್ಲಿ (Kalaburagi News) ಶ್ರೀ ಶರಣ ಬಸವೇಶ್ವರ ಜಾತ್ರಾ ಮಹೋತ್ಸವದ (Sri Sharana Basaveshwara Jatre) ಭಾಗವಾಗಿ ಶುಕ್ರವಾರ ನಡೆದ ಉಚ್ಚಾಯಿ ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ ದುರ್ಮರಣ ಹೊಂದಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಬೀದರ್ ಜಿಲ್ಲೆ ಇಟಗಾ ಗ್ರಾಮದ ರಾಮು ಸಿದ್ದಪ್ಪ (28) ಮೃತ ದುದೈವಿ. ಅಶೋಕರೆಡ್ಡಿ ಗಾಯಾಳು. ತೇರು ಎಳೆಯುವ ವೇಳೆ ಉಂಟಾದ ಗದ್ದಲ, ಭಕ್ತರನ್ನು ನಿಯಂತ್ರಿಸುವ ವೇಳೆ ಸಿಬ್ಬಂದಿ ಚಕ್ರಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ. ಗಾಯಾಳು ಸಿಬ್ಬಂದಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಂಟಾದ ಗದ್ದಲದ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್‌.ಜೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Dead Body Found : ವಾಟರ್‌ ಟ್ಯಾಂಕ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

ಆನೇಕಲ್: ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಮಿರ್ಜಾ ರಸ್ತೆಯಲ್ಲಿ ಘಟನೆ (Road Accident) ನಡೆದಿದೆ.

ರಾಕೇಶ್ (28) ಮೃತ ದುರ್ದೈವಿ. ಮತ್ತೋರ್ವ ಅರಣ್ಯ ಇಲಾಖೆ ಸಿಬ್ಬಂದಿ ವಿನಯ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಇವರಿಬ್ಬರು ಆನೇಕಲ್ ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ರಾಕೇಶ್ ತಲೆಯ ಮೇಲೆಯೇ ಲಾರಿಯ ಚಕ್ರ ಹರಿದಿದೆ. ಪರಿಣಾಮ ನಜ್ಜುಗುಜ್ಜಾದ ರಾಕೇಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಇದನ್ನೂ ಓದಿ | Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

ಅಪಘಾತದಲ್ಲಿ ವಿನಯ್‌ಗೂ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ವಿದ್ಯುತ್ ಶಾಕ್‌ನಿಂದ ದಿನಗೂಲಿ ಕಾರ್ಮಿಕ ಸಾವು

ತುಮಕೂರು: ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರಿನ ಕ್ಯಾದಗೊಂಡನಹಳ್ಳಿಯಲ್ಲಿ ಅವಘಡ ನಡೆದಿದೆ. ನರೇಂದ್ರ ಕುಮಾರ್ (25) ಮೃತ ದುರ್ದೈವಿ. ನರೇಂದ್ರ ಕುಮಾರ್‌ ತುಮಕೂರಿನ ಮಧುಗಿರಿ ತಾಲೂಕಿನ ದೊಡ್ಡಯಲ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ.

ವಿದ್ಯುತ್ ತಂತಿಗೆ ಅಡ್ಡಿಯಾಗಿದ್ದ ಮರವನ್ನು ಕಡಿಯುವಾಗ ವಿದ್ಯುತ್ ಸ್ಪರ್ಶ ಆಗಿದೆ. ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ. ಇತ್ತ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಮಧುಗಿರಿ ಸರ್ಕಾರಿ ಆಸ್ಪತ್ರೆ ಎದುರು ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ದಾವಣಗೆರೆ

Davanagere News: ನೀತಿ ಸಂಹಿತೆ ಉಲ್ಲಂಘನೆ; 84 ಸಾವಿರ ರೂ. ನಗದು ಜಪ್ತಿ

Davanagere News: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧಿಕೃತವಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ 84 ಸಾವಿರ ನಗದು ಹಣವನ್ನು ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಚೆಕ್‌ಪೋಸ್ಟ್‌ ಬಳಿ ಜಪ್ತಿ ಮಾಡಲಾಗಿದೆ.

VISTARANEWS.COM


on

Violation of Code of Conduct 84 thousand rupees cash seized at honnali
Koo

ಹೊನ್ನಾಳಿ: ಲೋಕಸಭೆ ಸಾರ್ವತ್ರಿಕ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧಿಕೃತವಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ 84 ಸಾವಿರ ರೂ. ನಗದು ಹಣವನ್ನು ತಾಲೂಕಿನ ಗೊಲ್ಲರಹಳ್ಳಿ ಚೆಕ್‌ಪೋಸ್ಟ್‌ ಬಳಿ ಜಪ್ತಿ ಮಾಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ಅಭಿಷೇಕ್ (Davanagere News) ತಿಳಿಸಿದ್ದಾರೆ.

ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಚೆಕ್‌ಪೋಸ್ಟ್‌ ಬಳಿ ಚುನಾವಣಾ ಅಧಿಕಾರಿ ತಂಡ ತಪಾಸಣೆ ನಡೆಸುವ ವೇಳೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ 84 ಸಾವಿರ ನಗದು ಹಣವನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ನೀಡಿದ್ದಲ್ಲಿ ಸಂಬಂಧಪಟ್ಟವರಿಗೆ ಹಣ ಮರುಪಾವತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ash Gourd Juice Benefits: ಬೂದುಕುಂಬಳಕಾಯಿ ಜ್ಯೂಸ್‌ ಕುಡಿಯುವುದರಿಂದ ಆಗುವ 10 ಪ್ರಯೋಜನಗಳಿವು

ಈ ಸಂದರ್ಭದಲ್ಲಿ ತಹಸೀಲ್ದಾರ್ ಪುರಂದರ ಹಾಗೂ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
ISIS Terroirst- ISIS Threat
ಪ್ರಮುಖ ಸುದ್ದಿ1 min ago

ISIS Threat : ಭಾರತಕ್ಕೆ ಐಸಿಸ್​ ಉಗ್ರರ ಬೆದರಿಕೆ; ಬೆಂಗಳೂರು ಸ್ಫೋಟವೇ ಸಾಕ್ಷಿ

Anjanadri Hill Shree Anjaneya Swamy Temple Hundi money leak video viral
ಕೊಪ್ಪಳ31 mins ago

Koppala News: ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಹುಂಡಿಯ ಹಣ ಸೋರಿಕೆ ವಿಡಿಯೊ ವೈರಲ್

Kalaburagi News
ಕರ್ನಾಟಕ33 mins ago

Kalaburagi News: ಕಲಬುರಗಿ ಉಚ್ಚಾಯಿ ರಥೋತ್ಸವದಲ್ಲಿ ದುರಂತ; ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

Violation of Code of Conduct 84 thousand rupees cash seized at honnali
ದಾವಣಗೆರೆ35 mins ago

Davanagere News: ನೀತಿ ಸಂಹಿತೆ ಉಲ್ಲಂಘನೆ; 84 ಸಾವಿರ ರೂ. ನಗದು ಜಪ್ತಿ

Lok Sabha Election 2024 and BY Vijayendra meets Sumalatha Ambareesh for discussion on support to NDA candidate in Mandya Lok Sabha Constituency
Lok Sabha Election 202436 mins ago

Lok Sabha Election 2024: ಸುಮಲತಾ ಭೇಟಿ ಮಾಡಿದ ವಿಜಯೇಂದ್ರ; ನಾಳೆಯೇ ಫೈನಲ್‌ ಅಂದ್ರು ರೆಬೆಲ್‌ ಲೇಡಿ!

Bomb threat
ಕರ್ನಾಟಕ1 hour ago

Bomb Threat: ಆನೇಕಲ್‌ನ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!

Mukthar Ansari
ಪ್ರಮುಖ ಸುದ್ದಿ2 hours ago

Mukhtar Ansari : ನಿಜಕ್ಕೂ ಗ್ಯಾಂಗ್ ಸ್ಟರ್ ಅನ್ಸಾರಿ ಸತ್ತಿದ್ದು ಹೇಗೆ? ಬಂತು ಪೋಸ್ಟ್ ಮಾರ್ಟಮ್ ರಿಪೋರ್ಟ್!

Parliament Flashback
ಕರ್ನಾಟಕ2 hours ago

Parliament Flashback: ದೇಶದಲ್ಲಿ ಇಂದಿರಾ ಗಾಂಧಿ ವಿರೋಧಿ ಅಲೆ ಇದ್ದಾಗಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ಜಯಭೇರಿ!

Satyendar Jain
ಪ್ರಮುಖ ಸುದ್ದಿ2 hours ago

Satyendar Jain : ಆಪ್​ಗೆ ಇನ್ನಷ್ಟು ಸಂಕಷ್ಟ; ಸತ್ಯೇಂದರ್​ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ

Karnataka Weather
ಮಳೆ2 hours ago

Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌