ಕರ್ನಾಟಕ
ಒಂದು ಅವಕಾಶ ಕೊಟ್ಟರೆ 2 ವರ್ಷದ ನಂತರ ರಾಮನಗರ ಎತ್ತರಕ್ಕೆ ಹೋಗುತ್ತೆ; ಇಲ್ಲದಿದ್ರೆ ನನ್ನ ಹೆಸರು ಬದಲಿಸಿ: ಡಿಕೆಶಿ
Ramanagar News: ನಮ್ಮ ಅಧಿಕಾರ ಇರುವುದು ಜನರ ಸೇವೆ ಮಾಡಲು, ನನಗೆ ಒಂದು ಅವಕಾಶ ಮಾಡಿಕೊಡಿ. ನಾನು ಕೆಲಸ ಮಾಡಲಿಲ್ಲ ಎಂದರೆ ಕತ್ತಿನ ಪಟ್ಟಿ ಹಿಡಿದು ಕೇಳಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಮನಗರ: ತಾಲೂಕಿಗೆ ಇನ್ನೂ ಅಭ್ಯರ್ಥಿ ಯಾರು ಎಂಬುದನ್ನು ತೀರ್ಮಾನಿಸಿಲ್ಲ. ಯಾರೇ ಅಭ್ಯರ್ಥಿ ಆದರೂ ನಾನೇ ಅಭ್ಯರ್ಥಿ ಎಂದು ಭಾವಿಸಿ ಚುನಾವಣೆಯಲ್ಲಿ (Karnataka Election 2023) ಗೆಲ್ಲಿಸಬೇಕು. ಇನ್ನೆರಡು ವರ್ಷ ಆದ ಮೇಲೆ ರಾಮನಗರ ಎತ್ತರಕ್ಕೆ ಹೋಗುತ್ತದೆ. ಇಲ್ಲವೆಂದರೆ ನನ್ನ ಹೆಸರು ಡಿ.ಕೆ. ಶಿವಕುಮಾರ್ ಅಂತ ಕರೆಯಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಮನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ವಿಧಾನ ಸೌಧ ಕಟ್ಟಿದವರ ಜಿಲ್ಲೆ ರಾಮನಗರವಾಗಿದೆ. ಹೆಸರು ಮಾತ್ರ ರಾಮನಗರ ಅಷ್ಟೇ, ಇದಕ್ಕೆ ಬೆಂಗಳೂರು ದಕ್ಷಿಣ ಎಂದು ಕರೆಯಬೇಕಿತ್ತು. ನಮ್ಮ ಅಧಿಕಾರ ಇರುವುದು ನಿಮ್ಮ ಸೇವೆ ಮಾಡಲು, ನನಗೆ ಒಂದು ಅವಕಾಶ ಮಾಡಿಕೊಡಿ. ನಾನು ಕೆಲಸ ಮಾಡಲಿಲ್ಲ ಎಂದರೆ ಕತ್ತಿನ ಪಟ್ಟಿ ಹಿಡಿದು ಕೇಳಿ ಎಂದು ಹೇಳಿದರು.
ರಾಮನಗರದಲ್ಲಿ ಬದಲಾವಣೆ ತರಬೇಕು. ಈ ಹಿಂದೆ ಎಲ್ಲ ಚುನಾವಣೆಯಲ್ಲೂ ಸೋತಿದ್ದೇವೆ. ಗೌಡರನ್ನು ಪ್ರಧಾನ ಮಂತ್ರಿ, ಕುಮಾರಸ್ವಾಮಿಯನ್ನು ಸಿಎಂ ಮಾಡಿದ್ದೀರಿ. ಅವರು ಪ್ರತ್ಯೇಕ ಜಿಲ್ಲೆ ಮಾಡುವುದು ಬಿಟ್ಟು ಬೇರೆ ಏನೂ ಮಾಡಿಲ್ಲ. ಗೌಡರು, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿಗೆ ಅವಕಾಶ ಕೊಟ್ಟಿದ್ದೀರಿ, ಅದನ್ನು ನಾವು ಸ್ವೀಕರಿದ್ದೇವೆ. ಈಗ ಜಾತಿ, ಧರ್ಮ ಎಲ್ಲ ಹೋಗಿದೆ. ಈಗ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಕೇಳುತ್ತಾರೆ. ಅಶ್ವತ್ಥನಾರಾಯಣ ಜಿಲ್ಲೆಯನ್ನು ಕ್ಲೀನ್ ಮಾಡುತ್ತೇವೆ ಎಂದು ಬಂದಿದ್ದ. ಜಿಲ್ಲೆಯಲ್ಲಿ ಲಂಚ ಪಡೆಯುವುದು ನಿಂತಿದೆಯಾ ಎಂದು ಪ್ರಶ್ನಿಸಿದರು.
ಇದನ್ನೂ ಓದಿ | JDS ticket : ಜೆಡಿಎಸ್ ಟಿಕೆಟ್ ಹಂಚಿಕೆ ಗೊಂದಲ, ಕುಮಾರಸ್ವಾಮಿ ಕಾರಿಗೆ ಕಾರ್ಯಕರ್ತರ ಮುತ್ತಿಗೆ
ನಾವು ಅಧಿಕಾರ ಇಲ್ಲವೆಂದರೂ ಏನು ಮಾಡಿದ್ದೇವೆ ಎಂಬುದು ಗೊತ್ತಾಗಬೇಕು. ಕನಕಪುರದಲ್ಲಿ 4 ಕೋಟಿ ರೂಪಾಯಿ ವೆಚ್ಚದಲ್ಲಿ ನರೇಗಾ ಯೋಜನೆ ಮಾಡಿದ್ದೇವೆ. ರಾಮನಗರದಲ್ಲಿ ಯಾಕೆ ಮಾಡಿಲ್ಲ? ಬಿಜೆಪಿ ಸೋಮಣ್ಣನ ಕೈ, ಕಾಲು ಹಿಡಿದು ಕನಕಪುರದಲ್ಲಿ ಬಡವರಿಗೆ ಸೈಟ್ ಕೊಡಿಸಿದ್ದೇನೆ. ಈ ರೀತಿ ಜೆಡಿಎಸ್ ಶಾಸಕರು ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ನಾವು ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮ ಮಾಡಿದ ಮೇಲೆ ಬಿಜೆಪಿಯವರು ನಮ್ಮ ಕಾರ್ಯಕ್ರಮದ ರೀತಿಯಲ್ಲಿ ಮಾಡುತ್ತಿದ್ದಾರೆ. ಇನ್ನು 3 ತಿಂಗಳಲ್ಲಿ ನಮ್ಮ ಸರ್ಕಾರ ಬರುತ್ತದೆ. ಆಗ ನಾನು ನಿಮಗೆ ಟ್ರಾನ್ಸ್ಫಾರ್ಮರ್ ಕೊಡುತ್ತೇನೆ. ಬೇರೆಯವರಿಗೆ ವಿದ್ಯುತ್ ಮಾರುವುದು ಬೇಡ. ನಮ್ಮ ಜನಕ್ಕೆ ಕೊಡಿ ಎಂಬುದು ನನ್ನ ವಾದ. ನಾನು ಗ್ಯಾರಂಟಿ ಕಾರ್ಯಕ್ರಮವನ್ನು ಕಾರ್ಯರೂಪಕ್ಕೆ ತರಲಿಲ್ಲವೆಂದರೆ ನಿಮ್ಮ ಬಳಿ ಮತ ಕೇಳಲೂ ಬರುವುದಿಲ್ಲ ಎಂದು ಹೇಳಿದರು.
ರಾಮನಗರದಿಂದ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೈಕಮಾಂಡ್ನಲ್ಲೂ ಚರ್ಚೆ ಆಗಿರುವುದು ನಿಜ. ಬಹಳ ದಿನದಿಂದ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಡಿ.ಕೆ.ಸುರೇಶ್ ಯಾವತ್ತೂ ಸ್ಟೇಜ್ ಹತ್ತಿರಲಿಲ್ಲ, ಮೈಕ್ ಹಿಡಿದಿರಲಿಲ್ಲ. ಈ ಹಿಂದೆ ಸೋನಿಯಾಗಾಂಧಿ ಅವರು ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರು. ಯಾವ ಸಂದರ್ಭದಲ್ಲಿ ಏನು ಆಗಬೇಕೋ ಅದು ಆಗುತ್ತದೆ ಎಂದು ಪರೋಕ್ಷವಾಗಿ ಡಿ.ಕೆ.ಸುರೇಶ್ ಸ್ಪರ್ಧೆ ಬಗ್ಗೆ ಸುಳಿವು ನೀಡಿದರು.
ಮಾಜಿ ಸಂಸದ ಧ್ರುವನಾರಾಯಣ್ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಜಡ್ಜ್. ನಾನು ಧ್ರುವನಾರಾಯಣ್ ಪುತ್ರ ದರ್ಶನ ಪರ ವಕೀಲ. ಧ್ರುವನಾರಾಯಣ್ ಅಂತಿಮ ದರ್ಶನ ಮಾಡಲು ಸ್ವತಃ ಮಲ್ಲಿಕಾರ್ಜುನ ಖರ್ಗೆ ಬಂದಿದ್ದರು. ಅಭಿಮಾನಿಗಳ ಆಕ್ರಂದನ ನೋಡಿದ್ದು, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಇದನ್ನೂ ಓದಿ | BY Vijayendra: ಸಿ.ಟಿ. ರವಿ ಹೇಳಿದ್ದು ಸರಿ ಇದೆ; ವಿಜಯೇಂದ್ರನಿಗಾದರೂ ಚುನಾವಣಾ ಸಮಿತಿಯಿಂದಲೇ ಟಿಕೆಟ್ ತೀರ್ಮಾನ: ಬಿಎಸ್ವೈ
ಹೆದ್ದಾರಿ ಕಾಮಗಾರಿ ಪೂರ್ಣ ಮಾಡಿ ಟೋಲ್ ಸಂಗ್ರಹ ಆರಂಭಿಸಲಿ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ಕೇಂದ್ರಗಳ ಆರಂಭದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, ಈ ಸರ್ಕಾರ ಜನಸಾಮಾನ್ಯರ ಪಿಕ್ ಪಾಕೆಟ್ ಮಾಡುತ್ತಿದೆ. ಕಾಮಗಾರಿ ಪೂರ್ಣ ಮಾಡಿ ಟೋಲ್ ಆರಂಭಿಸಲಿ ಎಂದು ಒತ್ತಾಯಿಸಿದರು.
ನಾನು ಕೂಡ ಟೋಲ್ ಕಟ್ಟಿ ಬಂದಿದ್ದೇನೆ. ನನ್ನ ಕಾರಿನಲ್ಲಿ ಫಾಸ್ಟ್ ಟ್ಯಾಗ್ ಇರಲಿಲ್ಲ. 500 ರೂಪಾಯಿ ಕೊಟ್ಟಿದ್ದಕ್ಕೆ 230 ರೂಪಾಯಿ ವಾಪಸ್ ಕೊಟ್ಟಿದ್ದಾರೆ. ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನ್ನನ್ನೂ ವಶಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಟೋಲ್ ಕಟ್ಟಿ ಬಂದಿದ್ದೇನೆ ಎಂದ ಅವರು, ಕೋವಿಡ್ ಸಮಯದಲ್ಲಿ ನನ್ನ ಮೇಲೆ ಸಾಕಷ್ಟು ಕೇಸ್ ಹಾಕಿದರು. ಈಗಲೂ ನಾನು ಕೋರ್ಟ್ಗೆ ಅಲೆಯುತ್ತಿದ್ದೇನೆ ಎಂದರು.
ಕರ್ನಾಟಕ
Awards : ಬಸವಶ್ರೀ, ಜಕಣಾಚಾರಿ ಸೇರಿ ಸಂಸ್ಕೃತಿ ಇಲಾಖೆಯ 14 ಪ್ರಶಸ್ತಿಗಳು ಪ್ರಕಟ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2020-21 ಮತ್ತು 2021-22 ಸಾಲಿನ ಬಸವಶ್ರೀ, ಜಕಣಾಚಾರಿ, ವರ್ಣಶಿಲ್ಪಿ ವೆಂಕಟಪ್ಪ ಸೇರಿದಂತೆ 14 ಪ್ರಶಸ್ತಿಗಳನ್ನು ಘೋಷಿಸಿದೆ. ( Awards) ವಿವರ ಇಲ್ಲಿದೆ.
ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆಯು 2020-21 ಮತ್ತು 2021-22 ಸಾಲಿನ ಬಸವಶ್ರೀ, ಜಕಣಾಚಾರಿ, ವರ್ಣಶಿಲ್ಪಿ ವೆಂಕಟಪ್ಪ ಸೇರಿದಂತೆ 14 ಪ್ರಶಸ್ತಿಗಳನ್ನು ಘೋಷಿಸಿದೆ.( Awards) ವಿವರ ಇಂತಿದೆ.
ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಮಹಾರಾಷ್ಟ್ರದ ಅಲೆಮಾರಿ ಸಮುದಾಯಗಳ ಹೋರಾಟಗಾರರು, ರಾಷ್ಟ್ರೀಯ ಅಲೆಮಾರಿ ಆಯೋಗದ ಮಾಜಿ ಅಧ್ಯಕ್ಷ ಭಿಕು ರಾಮ್ಜಿ ಇದಾತೆ ರತ್ನಗಿರಿ ಹಾಗೂ ಧಾರವಾಡದ ಡಾ. ವೀರಣ್ಣ ರಾಜೂರು ಆಯ್ಕೆಯಾಗಿದ್ದಾರೆ.
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಧಾರವಾಡದ ಗಾಯತ್ರಿ ದೇಸಾಯಿ, ಕಲಬುರಗಿಯ ವಿಜಯ್ ಹಾಗರ ಗುಂಡಿಗಿ ಆಯ್ಕೆಯಾಗಿದ್ದಾರೆ.
ಜಕಣಾಚಾರಿ ಪ್ರಶಸ್ತಿಗೆ ವಿಜಯನಗರದ ಹಂಪಿ ವಿವಿಯ ಹುಸೇನಿ, ಮೈಸೂರಿನ ಶಿಲ್ಪಿ ಶ್ಯಾಮಸುಂದರ ಭಟ್ ಆಯ್ಕೆಯಾಗಿದ್ದಾರೆ.
ಚೌಡಯ್ಯ ಪ್ರಶಸ್ತಿಗೆ ಎಂ.ವಾಸುದೇವ ಮೋಹಿತ (ಮೃದಂಗ), ಹರಿಪ್ರಸಾದ್ ಚೌರಾಸಿಯಾ (ಕೊಳಲು, ದಿಲ್ಲಿ) ಆಯ್ಕೆಯಾಗಿದ್ದಾರೆ.
ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಪಾವಗಡದ ಶ್ರೀ ಜಪಾನಂದ ಸ್ವಾಮಿ, ಸಾಮಾಜಿಕ ಹೋರಾಟಗಾರ ಸದಾನಂದ ಮಾಸ್ಟರ್ (ಕೇರಳ) ಆಯ್ಕೆಯಾಗಿದ್ದಾರೆ.
ಕುಮಾರವ್ಯಾಸ ಪ್ರಶಸ್ತಿಗೆ ಶಿವಮೊಗ್ಗದ ರಾಜಾರಾಂ ಮೂರ್ತಿ (ಗಮಕ), ಮೈಸೂರಿನ ಡಾ.ಎಂ.ಕೆ ರಾಮಶೇಷನ್ ಆಯ್ಕೆಯಾಗಿದ್ದಾರೆ.
ಶಾಂತಲಾ ನಾಟ್ಯರಾಣಿ ಪ್ರಶಸ್ತಿಗೆ ಬೆಂಗಳೂರಿನ ಎಂ.ಆರ್ ಕೃಷ್ಣಮೂರ್ತಿ, ಬೆಂಗಳೂರಿನ ಬಿ.ಎಸ್ ಸುನಂದಾ ದೇವಿ (ಕೂಚುಪುಡಿ) ಆಯ್ಕೆಯಾಗಿದ್ದಾರೆ.
ಸಂತ ಶಿಶುನಾಳ ಷರೀಫರ ಪ್ರಶಸ್ತಿಗೆ ದಕ್ಷಿಣಕನ್ನಡದ ಪುತ್ತೂರು ನರಸಿಂಹ ನಾಯಕ್, ಹಾಗೂ ಚಂದ್ರಶೇಖರ ಜೋಯಿಷಾ (ವಯಲಿನ್) ಆಯ್ಕೆಯಾಗಿದ್ದಾರೆ.
ನಿಜಗುಣ ಪುರಂದರ ಪ್ರಶಸ್ತಿಗೆ ಎಂ.ಎಸ್ ಶೀಲಾ ಆಯ್ಕೆಯಾಗಿದ್ದಾರೆ. ಪ್ರೊ.ಕೆ.ಜಿ ಜುಂದಣಗಾರ ಪ್ರಶಸ್ತಿಗೆ ಡಾ. ರಮಾನಂದ ಬನಾರಿ (ಕಾಸರಗೋಡು), ಎಂ.ಎನ್ ವೆಂಕಟೇಶ ಕುಪ್ಪಂ ಆಯ್ಕೆಯಾಗಿದ್ದಾರೆ.
ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಮೈಸೂರಿನ ಕೌಸಲ್ಯಾ ಧರಣೀಂದ್ರ, ಧಾರವಾಡದ ಮಾಲತಿ ಪಟ್ಟಣಶೆಟ್ಟಿ ಆಯ್ಕೆಯಾಗಿದ್ದಾರೆ.
ಬಿ.ವಿ ಕಾರಂತ ಪ್ರಶಸ್ತಿಗೆ ಬೆಂಗಳೂರಿನ ಡಾ.ಬಿ.ವಿ ರಾಜಾರಾಂ, ವಿಜಯನಗರದ ಅಬ್ದುಲ್ಲ ಪಿಂಜಾರ ಆಯ್ಕೆಯಾಗಿದ್ದಾರೆ.
ಗುಬ್ಬಿ ವೀರಣ ಪ್ರಶಸ್ತಿಗೆ ಚಿತ್ರದುರ್ಗದ ಕುಮಾರಸ್ವಾಮಿ, ಕೊಪ್ಪಳದ ಬಾಬಣ್ಣ ಕಲ್ಮನಿ ಆಯ್ಕೆಯಾಗಿದ್ದಾರೆ.
ಉತ್ತರ ಕನ್ನಡ
Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ
Uttara Kannada News: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ಐವರು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಉತ್ತರ ಕನ್ನಡ: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಮಾ.22ರಿಂದ 25ರವರೆಗೆ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ (Uttara Kannada News) ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ ಮೂವರು ಪ್ರಥಮ ಸ್ಥಾನ ಹಾಗೂ ಇಬ್ಬರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಾಕ್ಪ್ರತಿಯೋಗಿತಾ ಸ್ಪರ್ಧೆಯ ಸಾಹಿತ್ಯ ಭಾಷಣದಲ್ಲಿ ನಾಗರಾಜ ಭಟ್ಟ ಪ್ರಥಮ, ಜ್ಯೋತಿಷ್ಯ ಶಲಾಕಾ ಸ್ಪರ್ಧೆಯಲ್ಲಿ ಗಣೇಶ ಪ್ರಸಾದ ಭಟ್ಟ ಪ್ರಥಮ, ಜ್ಯೋತಿಷ್ಯ ಭಾಷಣ ಸ್ಪರ್ಧೆಯಲ್ಲಿ ವಿನಾಯಕ ಭಟ್ಟ ದ್ವಿತೀಯ, ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಸುಮಂತ್ ಜೋಶಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹಾಗೆಯೇ ಇದೇ ಶಾಲೆಯಲ್ಲಿ ಅಧ್ಯಯನ ಮಾಡಿದ ಪಿಎಚ್ಡಿ ವಿದ್ಯಾರ್ಥಿ ಕುಮಾರ ಹೆಗಡೆ ಅಕ್ಷರಶ್ಲೋಕಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 14 ಚಿನ್ನದ ಪದಕ ಪಡೆದು ಕರ್ನಾಟಕ ರಾಜ್ಯವು ಸತತ 41ನೇ ಬಾರಿ ವಿಜಯ ವೈಜಯಂತೀ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಇದನ್ನೂ ಓದಿ | ತಾತಯ್ಯ ತತ್ವಾಮೃತಂ : ಶಿಷ್ಯನು ಸಿಗುವುದು ಗುರುವಿನ ಪರಮಭಾಗ್ಯ!
ವೇದಭಾಷ್ಯ ಭಾಷಣದಲ್ಲಿ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ
ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರೀ ಸಂಸ್ಕೃತ ಮಹಾಪಾಠಶಾಲೆಯ ಕೃಷ್ಣ ಯಜುರ್ವೇದ ವಿದ್ಯಾರ್ಥಿಯಾದ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ಪಾಠಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರು ವಿ.ಪ್ರಸಾದ ಜೋಶಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸ್ವರ್ಣವಲ್ಲೀ ಶ್ರೀಗಳು, ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ
Modi in Karnataka: ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ನಿಷೇಧಿತ ಪ್ರದೇಶಕ್ಕೆ ನುಗ್ಗಿದ ಇಬ್ಬರು ವಶಕ್ಕೆ
Modi in Karnataka: ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದ ಯುವಕ ಹಾಗೂ ನಿಷೇಧಿತ ಪ್ರದೇಶದಲ್ಲಿ ನುಗ್ಗಿದ ಎನ್ಸಿಸಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರ ರೋಡ್ ಶೋ ವೇಳೆ ಭದ್ರತಾ ವೈಫಲ್ಯ ಉಂಟಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದುಪೊಲೀಸರು ವಿಚಾರಣೆ ನಡೆಸಿದ್ದಾರೆ. ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದ ಯುವಕ ಹಾಗೂ ನಿಷೇಧಿತ ಪ್ರದೇಶದಲ್ಲಿ ನುಗ್ಗಿದ ಎನ್ಸಿಸಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಪ್ಪಳ ಮೂಲದ ಯುವಕ ಬಸವರಾಜ್ (29) ಹಾಗೂ ಎನ್ಸಿಸಿ ಅಧಿಕಾರಿ ರಾಜ್ ಗೌರವ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿಯ ಬೃಹತ್ ಸಮಾವೇಶದ ಸಂದರ್ಭದಲ್ಲೂ ಪ್ರಧಾನಿ ಮೋದಿ ಅವರು ಬೃಹತ್ ಪೆಂಡಾಲ್ನ ಸುತ್ತ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದರೆ ಯುವಕ ಬಸವರಾಜ್ ಬ್ಯಾರಿಕೇಡ್ ಹಾರಿ ಮೋದಿ ಅವರಿದ್ದ ವಾಹನದತ್ತ ದೌಡಾಯಿಸಿದ್ದ. ಕೂಡಲೇ ಎಚ್ಚೆತ್ತ ಗಾಂಧಿನಗರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | Modi in Karnataka: ದಾವಣಗೆರೆ ಮಹಾ ಸಂಗಮದ ಆವರಣದಲ್ಲೇ ಮೋದಿ ರೋಡ್ ಶೋ ನಡೆಸಿದ್ದೇಕೆ?
ಇನ್ನು ರೋಡ್ ಶೋಗೂ ಮೊದಲು ಸಂಗಮದಲ್ಲಿ ಪ್ರಧಾನ ಮಂತ್ರಿ ಆಗಮನದ ವೇಳೆ ಡಿ ಜೋನ್ನಲ್ಲಿ ಪ್ರವೇಶ ಮಾಡಿದ್ದ ಎನ್ಸಿಸಿ ಅಧಿಕಾರಿ ರಾಜ್ ಗೌರವ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಈಗ ಎನ್ಸಿಸಿ ಅಧಿಕಾರಿಯಾಗಿರುವ ರಾಜ್ ಗೌರವ್ ಮೋದಿ ಅವರ ಜತೆ ಪೋಟೊ ತೆಗೆಸಿಕೊಳ್ಳಲು ಎನ್ಸಿಸಿ ನುಗ್ಗಿದ್ದಾರೆ ಎನ್ನಲಾಗಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದಾರೆ.
ರಾಜ್ಯಾದ್ಯಂತ ನಡೆದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆಯ ಸಮಾರೋಪ ಸಮಾರಂಭ ದಾವಣಗೆರೆಯಲ್ಲಿ ಆಯೋಜನೆಯಾಗಿತ್ತು. ಅಲ್ಲಿ ಸುಮಾರು 2 ಲಕ್ಷ ಜನರಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಗಿತ್ತು. ಅವರ ಮಧ್ಯೆ ಪ್ರಧಾನಿಯವರು ವಾಹನದ ಮೂಲಕ ರೋಡ್ ಶೋ ನಡೆಸಿದರು. ಈ ವೇಳೆ ಭದ್ರತಾ ಲೋಪ ಕಂಡುಬಂದಿದೆ.
ಕರ್ನಾಟಕ
Amit Shah Visit: ಭಾನುವಾರ ಅಮಿತ್ ಶಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
Amit Shah Visit: ಬೀದರ್, ರಾಯಚೂರು ಹಾಗೂ ಬೆಂಗಳೂರಿನಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ.
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 26ರಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೀದರ್, ರಾಯಚೂರು ಹಾಗೂ ಬೆಂಗಳೂರಿನಲ್ಲಿ ಆಯೋಜಿಸಿರುವ ಪ್ರತಿಮೆ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಅವರು (Amit Shah Visit) ಭಾಗವಹಿಸಲಿದ್ದಾರೆ.
ಮೊದಲಿಗೆ ಬೀದರ್ ಜಿಲ್ಲೆ ಗೋರ್ಟಾ ಗ್ರಾಮದಲ್ಲಿ ಹುತಾತ್ಮರ ಸ್ಮಾರಕ ಹಾಗೂ ಸರ್ದಾರ್ ವಲ್ಲಭಭಾಯಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಬಳಿಕ ರಾಯಚೂರು ಜಿಲ್ಲೆಯಲ್ಲಿ 4,238 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬಸವೇಶ್ವರ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಡಿ ಜಿಲ್ಲೆ ಬೀದರ್ಗೆ ಎರಡನೆ ಬಾರಿಗೆ ಆಗಮಿಸಿದ್ದಾರೆ. ಶನಿವಾರ (ಮಾ.25) ಸಂಜೆ ಬೀದರ್ ಏರ್ ಬೇಸ್ಗೆ ಅವರು ಆಗಮಿಸಿದ್ದಾರೆ. ರಾತ್ರಿ ಏರ್ಪೋರ್ಸ್ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿರುವ ಬಿಜೆಪಿಯ ಚಾಣಕ್ಯ, ಭಾನುವಾರ ಬೆಳಗ್ಗೆ 10-10ಕ್ಕೆ ಹೆಲಿಕಾಪ್ಟರ್ ಮೂಲಕ ಬಸವಕಲ್ಯಾಣ ತಾಲೂಕಿನ ಗೋರ್ಟಾ ಗ್ರಾಮಕ್ಕೆ ತೆರಳಲಿದ್ದಾರೆ. ಬೆಳಗ್ಗೆ 10-30 ರಿಂದ ಮಧ್ಯಾಹ್ನ 12-30 ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ | Modi in Karnataka: ಸರ್. ಎಂ. ವಿಶ್ವೇಶ್ವರಯ್ಯ ಅವರ ಕುರಿತು ಹೊಸ ಮ್ಯೂಸಿಯಂ ನಿರ್ಮಾಣ: ಪ್ರಧಾನಿ ನರೇಂದ್ರ ಮೋದಿ ಭರವಸೆ
ಗೋರ್ಟಾ ಗ್ರಾಮದ ಲಕ್ಷ್ಮಿ ದೇವಸ್ಥಾನದ ಎದುರು ನಿಜಾಮರ ಆಡಳಿತದಲ್ಲಿ ನಡೆದ ಹತ್ಯಾಕಾಂಡದ ಸ್ಥಳದಲ್ಲಿ 103 ಅಡಿ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, 35 ಅಡಿ ಎತ್ತರದ ಹುತಾತ್ಮದ ಸ್ಮಾರಕ, 1100 ಕೆ.ಜಿ. ತೂಕದ 11 ಅಡಿ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡುತ್ತಾರೆ. ಬಳಿಕ ಕಾರ್ಯಕ್ರಮದ ವೇದಿಕೆಯಲ್ಲಿ ಗೋರ್ಟಾ ಗ್ರಾಮದಲ್ಲಿ ನಡೆದ ಹತ್ಯಾಕಾಂಡ, ನಿಜಾಮರ ಆಡಳಿತ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ರಾಜ್ಯ ನಾಯಕರು ಉಪಸ್ಥಿತರಿರಲಿದ್ದಾರೆ.
ಬಳಿಕ ಮಧ್ಯಾಹ್ನ 1.45ಕ್ಕೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರಿಗೆ ತೆರಳಿ 4,283 ಸಾವಿರ ಕೋಟಿ ರೂಪಾಯಿ ವೆಚ್ಚದ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಸೇರಿ 200 ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 3 ಲಕ್ಷ ಜನ ಸೇರು ನಿರೀಕ್ಷೆ ಇದೆ.
ಇದನ್ನೂ ಓದಿ | Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ
ನಂತರ ಸಂಜೆ 6.30ಕ್ಕೆ ಗಂಟೆಗೆ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿ ʼಬೆಂಗಳೂರು ಹಬ್ಬʼದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ವಿಧಾನ ಸೌಧದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ರಾತ್ರಿ 8.30ಕ್ಕೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಅದಾದ ನಂತರ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿ, ಮಾ.27 ರಂದು ಬೆಳಗ್ಗೆ ನವ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
-
ಸುವಚನ1 hour ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಅಂಕಣ22 hours ago
Ramzan Fasting : ರಂಜಾನ್ ವ್ರತಾಚರಣೆಗಿದೆ ವೈಜ್ಞಾನಿಕ ದೃಷ್ಟಿಕೋನ; ಆರೋಗ್ಯ ವರ್ಧನೆಗೆ ಇದು ಎಷ್ಟು ಸಹಕಾರಿ?
-
ಅಂಕಣ23 hours ago
ರಾಜ ಮಾರ್ಗ ಅಂಕಣ : ಎಸೆಸೆಲ್ಸಿ ವಿದ್ಯಾರ್ಥಿಗಳು ಇನ್ನು ಆರೇ ದಿನ ಓದಿದರೂ ಪಾಸ್ ಆಗಬಹುದು! ಹಾಗಿದ್ರೆ ಏನು ಮಾಡಬೇಕು?
-
ಕರ್ನಾಟಕ22 hours ago
Modi In Karnataka: ಕೆಆರ್ ಪುರ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ; ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?
-
ಅಂಕಣ24 hours ago
ವಿಸ್ತಾರ ಅಂಕಣ: ಭಾರತಕ್ಕೆ ಈಗ ಬೇಕಿರುವುದು ʼಈಸ್ ಆಫ್ ಡೂಯಿಂಗ್ ಪಾಲಿಟಿಕ್ಸ್ʼ ಸೂಚ್ಯಂಕ
-
ಕರ್ನಾಟಕ21 hours ago
Congress Ticket list : ಸಿದ್ದರಾಮಯ್ಯ ವರುಣ ಕೇಳಿದ್ರು ಕೊಟ್ವಿ, ಕೋಲಾರ ಕೇಳಿದ್ದರೆ ಅದನ್ನೇ ಕೊಡುತ್ತಿದ್ದೆವು; ಡಿ.ಕೆ. ಶಿವಕುಮಾರ್
-
ಕರ್ನಾಟಕ16 hours ago
Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ
-
ಕರ್ನಾಟಕ20 hours ago
Modi In Karnataka: ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಪ್ರವಾಸದ ಇಂಚಿಂಚು ಮಾಹಿತಿ ಇಲ್ಲಿದೆ