Site icon Vistara News

Praveen Sood: ಪ್ರವೀಣ್‌ ಸೂದ್‌ ನಾಲಾಯಕ್‌ ಡಿಜಿಪಿ, ಅಧಿಕಾರಕ್ಕೆ ಬಂದಾಗ ತೋರಿಸ್ತೇನೆ ಎಂದಿದ್ದ ಡಿ.ಕೆ. ಶಿವಕುಮಾರ್‌!

Praveen Sood vs DK Shivakumar

ಬೆಂಗಳೂರು: ರಾಜ್ಯದ ಡಿಜಿಪಿ ಪ್ರವೀಣ್‌ ಸೂದ್‌ (Praveen Sood) ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ನಾಲಾಯಕ್‌ ಡಿಜಿಪಿ. ನಾವು ಅಧಿಕಾರಕ್ಕೆ ಬಂದಾಗ ಅವರಿಗೆ ಬುದ್ಧಿ ಕಲಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ತಿಂಗಳ ಹಿಂದೆಯಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರವೀಣ್‌ ಸೂದ್‌ ನಾಲಾಯಕ್‌ ಆಗಿದ್ದಾರೆ. ತಮ್ಮ ಕರ್ತವ್ಯ ನಿರ್ವಹಿಸಲು ಅವರು ಅಯೋಗ್ಯ. ಅವರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಅವರು ಮೂರು ವರ್ಷ ಡಿಜಿಪಿಯಾಗಿ ಇಲ್ಲಿದ್ದಾರೆ. ಇನ್ನೂ ಎಷ್ಟು ವರ್ಷ ಇದೇ ಹುದ್ದೆಯಲ್ಲಿರಬೇಕು ಅಂದುಕೊಂಡಿದ್ದಾರೆ? ಕಾಂಗ್ರೆಸ್‌ ನಾಯಕರ ವಿರುದ್ಧ ಅವರು 25ಕ್ಕೂ ಹೆಚ್ಚು ಕೇಸ್‌ಗಳನ್ನು ದಾಖಲಿಸಿದ್ದಾರೆ. ಆದರೆ, ಬಿಜೆಪಿ ಮುಖಂಡರ ವಿರುದ್ಧ ಒಂದೇ ಒಂದು ಪ್ರಕರಣ ದಾಖಲಿಸಿಲ್ಲ. ಚುನಾವಣೆ ಆಯೋಗಕ್ಕೂ ನಾವು ಸೂದ್‌ ವಿರುದ್ಧ ದೂರು ನೀಡಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಆಪಾದಿಸಿದ್ದರು.

ಈ ಚುನಾವಣೆಯಲ್ಲಿ ಗೆದ್ದು ನಾವು ಅಧಿಕಾರ ಹಿಡಿಯುತ್ತೇವೆ. ಆಗ ಇವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈ ಪ್ರವೀಣ್‌ ಸೂದ್‌ ವಿರುದ್ಧ ಕೇಸ್‌ ದಾಖಲಿಸಿ ಜೈಲಿಗೆ ಕಳುಹಿಸಬೇಕಿದೆ ಎಂದು ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಈಗ ಪ್ರವೀಣ್‌ ಸೂದ್‌ಗೆ ಸಿಬಿಐ ಸಾರಥ್ಯ ನೀಡಿರುವುದು ಕುತೂಹಲಕರವಾಗಿದೆ. ಅಂದ ಹಾಗೆ, ಡಿ.ಕೆ. ಶಿವಕುಮಾರ್‌ ಅವರು ಕೆಲವು ಪ್ರಕರಣಗಳನ್ನು ಎದುರಿಸುತ್ತಿರುವುದೂ ಗಮನಾರ್ಹವಾಗಿದೆ.

ಇದನ್ನೂ ಓದಿ: Pay CM | ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾ ಸೆಲ್‌ ಮುಖ್ಯಸ್ಥ ಸೇರಿ ನಾಲ್ವರಿಗೆ ನೋಟಿಸ್‌; ಅ.25ಕ್ಕೆ ಹಾಜರಿ ಕಡ್ಡಾಯ

ಪ್ರವೀಣ್‌ ಸೂದ್‌ ಈಗ ಸಿಬಿಐ ನಿರ್ದೇಶಕ!

ಕಾಕತಾಳೀಯ ಎಂಬಂತೆ, ರಾಜ್ಯದಲ್ಲಿ ಕಾಂಗ್ರೆಸ್‌ ಪ್ರಚಂಡ ಬಹುಮತದಿಂದ ಅಧಿಕಾರ ಹಿಡಿಯಲು ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಂಥ ಅತ್ಯಂತ ಪ್ರತಿಷ್ಠಿತ ಹುದ್ದೆಗೇರಿದ್ದಾರೆ! ದೇಶದ ಉನ್ನತ ಹುದ್ದೆಯಲ್ಲೊಂದಾಗಿರುವ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ (CBI Director) ಸ್ಥಾನಕ್ಕೆ ರಾಜ್ಯ ಡಿಜಿಪಿ ಪ್ರವೀಣ್‌ ಸೂದ್‌ (Praveen Sood) ನೇಮಕಗೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಪ್ರವೀಣ್‌ ಸೂದ್‌ ಎರಡು ವರ್ಷಗಳ ಕಾಲ ಅಧಿಕಾರದಲ್ಲಿರಲಿದ್ದಾರೆ.

ಮೇ 25ಕ್ಕೆ ಹಾಲಿ ಸಿಬಿಐ ನಿರ್ದೇಶಕ ಸುಬೋದ್‌ ಕುಮಾರ್‌ ಜೈಸ್ವಾಲ್ ಅವಧಿ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಸಿಬಿಐ ನಿರ್ದೇಶಕರ ಹುದ್ದೆಗೆ ನೇಮಕ ಪ್ರಕ್ರಿಯೆ ನಡೆದಿದೆ. ಸದ್ಯ ಮೂವರು ಐಪಿಎಸ್ ಅಧಿಕಾರಿಗಳು ಹೆಸರು ಸಂಭಾವ್ಯ ಪಟ್ಟಿಯಲ್ಲಿತ್ತು. ಆದರೆ, ಅಂತಿಮವಾಗಿ ಪ್ರವೀಣ್‌ ಸೂದ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ‌, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ ರಂಜನ್ ಚೌಧರಿ ಒಳಗೊಂಡ ಉನ್ನತ ಮಟ್ಟದ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕರ್ನಾಟಕ, ದೆಹಲಿ ಸೇರಿದಂತೆ ಮೂರು ರಾಜ್ಯಗಳ ಅಧಿಕಾರಿಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಕೊನೆಗೆ ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಹೆಸರು ಅಂತಿಮವಾಗಿದೆ. ಅವರು ಎರಡು ವರ್ಷಗಳ ಕಾಲ ಅಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಅಧಿಕೃತ ಆದೇಶ ಹೊರಬಿದ್ದಿದೆ.‌

ಇದನ್ನೂ ಓದಿ: IPL 2023 : ಧೋನಿಯ ತಂತ್ರಗಾರಿಕೆಯನ್ನು ಸಿಕ್ಕಾಪಟ್ಟೆ ಹೊಗಳಿದ ಮಹಿಳಾ ಕ್ರಿಕೆಟರ್​

ಮೂಲತಃ ಹಿಮಾಚಲ ಪ್ರದೇಶದವರಾಗಿರುವ ಅವರು, 1985ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಅಲ್ಲದೆ, ಕೇಂದ್ರದಲ್ಲಿಯೂ ಅವರು ಈ ಹಿಂದೆ ಕಾರ್ಯನಿರ್ವಹಣೆ ಮಾಡಿದ ಅನುಭವದ ಆಧಾರದ ಮೇಲೆಯೂ ಸಿಬಿಐ ನಿರ್ದೇಶಕರನ್ನಾಗಿ ಅವರನ್ನು ಆಯ್ಕೆ ಮಾಡಲು ಪರಿಗಣಿಸಲಾಗಿದೆ.

ಯಾರು ಈ ಪ್ರವೀಣ್‌ ಸೂದ್?‌

ಪ್ರವೀಣ್ ಸೂದ್ ಅವರು ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯವರಾಗಿದ್ದಾರೆ. ಇವರು ಬಿ.ಟೆಕ್ ಪದವೀಧರರಾಗಿದ್ದು, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. 1985ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಮೈಸೂರಿನಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. 1989ರಲ್ಲಿ ಮೈಸೂರು ಸಹಾಯಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಎಸ್ಪಿ) ಆಗಿ ಪ್ರವೀಣ್‌ ಸೂದ್‌ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಬಳಿಕ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿಭಾಯಿಸಿದ್ದಾರೆ.

ಈ ನಡುವೆ ಮಾರಿಷಸ್ ದೇಶಕ್ಕೆ ಪೊಲೀಸ್ ಸಲಹೆಗಾರರಾಗಿಯೂ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಪುನಃ ಅವರು ತಮ್ಮ ಆರಂಭಿಕ ಕ್ಷೇತ್ರವಾದ ಮೈಸೂರಿನಲ್ಲಿ 2004-2007ರವರೆಗೆ ಸೇವೆ ಸಲ್ಲಿಸಿದ್ದಾರೆ. ಆಗ ಅವರು ಮೈಸೂರು ಪೊಲೀಸ್ ಆಯುಕ್ತರಾಗಿದ್ದರು.

2008ರಲ್ಲಿ ಬೆಂಗಳೂರು ನಗರದ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ನೇಮಕಗೊಂಡಿದ್ದ ಪ್ರವೀಣ್‌ ಸೂದ್‌, 2013-14ರಲ್ಲಿ ಕರ್ನಾಟಕ ಹೌಸಿಂಗ್ ಕಾರ್ಪೊರೇಷನ್ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಣೆ ಮಾಡಿದ್ದರು. 2017ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ.
ಇವರ ಕರ್ತವ್ಯ ನಿಷ್ಠೆಗೆ 1996ರಲ್ಲಿ ಮುಖ್ಯಮಂತ್ರಿಗಳ ಪದಕ ಸಿಕ್ಕಿದೆ. ಅಲ್ಲದೆ, 2011ರಲ್ಲಿ ರಾಷ್ಟ್ರಪತಿಗಳ ಪದಕವನ್ನೂ ಇವರು ಪಡೆದಿದ್ದಾರೆ.

ಮೇ 25ರ ನಂತರ ಅಧಿಕಾರ ಸ್ವೀಕಾರ?

ಮೇ 25ಕ್ಕೆ ಹಾಲಿ ಸಿಬಿಐ ನಿರ್ದೇಶಕ ಸುಬೋದ್‌ ಕುಮಾರ್‌ ಜೈಸ್ವಾಲ್ ಅವಧಿ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಸಿಬಿಐ ನಿರ್ದೇಶಕರನ್ನಾಗಿ ಪ್ರವೀಣ್‌ ಸೂದ್‌ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ‌, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ಅಧೀರ್‌ ರಂಜನ್ ಚೌಧರಿ ಒಳಗೊಂಡ ಉನ್ನತ ಮಟ್ಟದ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸದ್ಯ 2 ವರ್ಷದವರೆಗೆ ಅಧಿಕಾರದ ಅವಧಿ ಇದ್ದು, ಐದು ವರ್ಷಗಳವರೆಗೂ ಸೇವಾವಧಿ ವಿಸ್ತರಣೆ ಮಾಡುವ ಅವಕಾಶ ಇದೆ.

ಇದನ್ನೂ ಓದಿ: Karnataka Election Results: ವಿಧಾನಸೌಧದಲ್ಲಿ ನಾರಿ ಶಕ್ತಿ; ಚುನಾವಣೆಯಲ್ಲಿ ಗೆದ್ದ ಮಹಿಳೆಯರು ಎಷ್ಟು?

ಕರ್ನಾಟಕ, ದೆಹಲಿ ಸೇರಿದಂತೆ ಮೂರು ರಾಜ್ಯಗಳ ಅಧಿಕಾರಿಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಕೊನೆಗೆ ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಹೆಸರು ಅಂತಿಮವಾಗಿದೆ. ಸುಧೀರ್ ಸಕ್ಸೇನಾ (ಡಿಜಿಪಿ ಮಧ್ಯಪ್ರದೇಶ) ಮತ್ತು ತಾಜ್ ಹಸನ್ (ಅಗ್ನಿಶಾಮಕ ಸೇವೆಗಳು, ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಮುಖ್ಯಸ್ಥರು, ನವದೆಹಲಿ) ಅವರ ಹೆಸರುಗಳು ಪಟ್ಟಿಯಲ್ಲಿದ್ದವು.

Exit mobile version