ಕರ್ನಾಟಕ
ಅಶ್ವತ್ಥನಾರಾಯಣ ಅಸ್ವಸ್ಥರಾದಾಗ ಉರಿಗೌಡ, ನಂಜೇಗೌಡ ಸಿಕ್ಕಿರಬೇಕು: ಡಿ.ಕೆ. ಸುರೇಶ್ ವ್ಯಂಗ್ಯ
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹದ ಕುರಿತು ಪ್ರತಿಕ್ರಿಯೆ ನೀಡಿದ ಸುರೇಶ್, ಸುಪ್ರೀಂಕೋರ್ಟ್ ಕೂಡ ಟೋಲ್ ವಿರುದ್ದವಾಗಿದೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.
ಬೆಂಗಳೂರು: ಟಿಪ್ಪು ಸುಲ್ತಾನನನ್ನು ಕೊಂದದ್ದು ಎಂದು ಬಿಜೆಪಿ ಹೇಳುತ್ತಿರುವ ಉರಿಗೌಡ ಹಾಗೂ ನಂಜೇಗೌಡರು ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅಸ್ವಸ್ಥರಾದಾಗ ಸಿಕ್ಕಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಟಿಪ್ಪು ಸುಲ್ತಾನನನ್ನು ಇಬ್ಬರೂ ಕೊಂದರು ಎಂದು ಬಿಜೆಪಿ ಪ್ರತಿಪಾದಿಸುತ್ತಿದೆ. ಆದರೆ ಇವರು ಇದ್ದರು ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ, ರಾಜಕೀಯ ಕಾರಣಕ್ಕೆ ಇಬ್ಬರನ್ನೂ ಸೃಷ್ಟಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ಕುರಿತು ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಉಡಿಗೌಡ ಹಾಗೂ ನಂಜೇಗೌಡರ ಬಗ್ಗೆ ಅಶ್ವತ್ಥನಾರಾಯಣ ಅವರನ್ನೇ ಕೇಳಿ ಎಂದು ಸುರೇಶ್ ಹೇಳಿದ್ದಾರೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹದ ಕುರಿತು ಪ್ರತಿಕ್ರಿಯೆ ನೀಡಿದ ಸುರೇಶ್, ಸುಪ್ರೀಂಕೋರ್ಟ್ ಕೂಡ ಟೋಲ್ ವಿರುದ್ದವಾಗಿದೆ. ಅನೇಕ ಸಮಯದಲ್ಲಿ ಟೋಲ್ ವಿರುದ್ದ ಹೇಳಿಕೆ ನೀಡಿರುವ ನಿದರ್ಶನಗಳಿದೆ. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಿದ್ದೇವೆ. ಇನ್ನೂ ನಾಲ್ಕೈದು ದಿನಗಳಲ್ಲಿ ನಾಯಕರ ಜೊತೆ ಚರ್ಚೆ ಮಾಡಿ ರಸ್ತೆ ತಡೆಹಿಡಿದು ಪ್ರತಿಭಟನೆ ಮಾಡ್ತೀವಿ.
ರಸ್ತೆ ಕಾಮಗಾರಿ ಪೂರ್ತಿಯಾಗಿಲ್ಲದಿದ್ದರೂ ಟೋಲ್ ಕಲೆಕ್ಟ್ ಮಾಡ್ತಿದ್ದಾರೆ. ಒಂದು ಕಿಮಿ.ಗೆ 2 ರಿಂದ 3 ರೂ ಕಲೆಕ್ಟ್ ಮಾಡ್ತಿದ್ದಾರೆ. ಟೋಲ್ ಕಲೆಕ್ಟ್ ಮಾಡಬೇಕಾದ್ರೆ ರೋಡ್ ಕಂಪ್ಲಿಷನ್ ಸರ್ಟಿಫಿಕೇಟ್ ಕೊಡಬೇಕಾಗುತ್ತದೆ. ಆದ್ರೆ ರಸ್ತೆ ಕಂಪ್ಲಿಟ್ ಆಗದೆ ಸರ್ಕಾರ ದುಡ್ಡು ವಸೂಲಿ ಮಾಡ್ತಿದ್ದಾರೆ. ಎರಡೆ ಟೋಲ್ಗಳಿದೆ ಬಿಡದಿ, ರಾಮನಗರ, ಮದ್ದೂರು, ಮಂಡ್ಯಕ್ಕೂ ಹೋಗೊಕೆ ಎಲ್ಲರಿಗೂ ಒಂದೇ ದುಡ್ಡು ಅಂದ್ರೆ ಹೇಗೆ? ಕೆಎಸ್ಆರ್ಟಿಸಿ ಬಸ್ ದರ ಕೂಡ ಹೆಚ್ಚಳ ಮಾಡೋದಾಗಿ ಹೇಳಿದ್ದಾರೆ. ಹಣ್ಣು, ತರಕಾರಿ ಎಲ್ಲವನ್ನೂ ಬಸ್ನಲ್ಲಿ ಬಂದು ಮಾರಾಟ ಮಾಡುವವರಿದ್ದಾರೆ.ಹೀಗೆ ಹೆಚ್ಚಳ ಮಾಡೋದ್ರಿಂದ ಪೂರಕ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ ಜನರಿಗೆ ಹೊರೆ ಆಗುತ್ತದೆ. ಅನೇಕ ಬಾರಿ ನಾನು ನಿತಿನ್ ಗಡ್ಕರಿ ಅವರ ಜೊತೆ ಕೂಡ ಮಾತನಾಡ್ತೀನಿ. ಆದ್ರೆ ಟೋಲ್ ಕಲೆಕ್ಟ್ ಮಾತ್ರ ಅವೈಜ್ಞಾನಿಕವಾಗಿ ನಡೆಯುತ್ತಿದೆ. ರೋಡ್ ಟೋಲ್ನಿಂದ ಬಿಜೆಪಿ ಹಳೇಮೈಸೂರು ಭಾಗಕ್ಕೆ ಕೊಟ್ಟ ಯುಗಾದಿ ಗಿಫ್ಟ್ ಎಂದು ವ್ಯಂಗ್ಯ ಮಾಡಿದರು.
ವಿ.ಸೋಮಣ್ಣ ಬಿಜೆಪಿಯಲ್ಲೆ ಉಳಿಯುವುದಾಗಿ ಹೇಳಿದ ವಿಚಾರದಲ್ಲಿ ಪ್ರತಿಕ್ರಿಯಿಸಿ, ವಿ.ಸೋಮಣ್ಣ ನಮ್ಮ ಕುಟುಂಬಕ್ಕೆ ಹಿರಿಯ ಸೋದರರಿದ್ದಂತೆ. ಅವರ ಬಗ್ಗೆ ಹೆಚ್ಚು ಮಾತನಾಡೋಕೆ ಹೋಗಲ್ಲ ಎಂದರು.
ಧ್ರುವನಾರಾಯಣ್ ಕುಟುಂಬಕ್ಕೆ ಟಿಕೆಟ್ ಕುರಿತು ಮಾತನಾಡಿ, ಧ್ರುವನಾರಾಯಣ್ ಅವರ ಸಾವು ದುಃಖಕರ ಸಂಗತಿ. ಇಡೀ ಕಾಂಗ್ರೆಸ್ ಪಕ್ಷ ಪ್ರಾಮಾಣಿಕ ನಾಯಕನನ್ನು ಕಳೆದುಕೊಂಡಿದ್ದೇವೆ. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಹೇಳೊದ್ರಲ್ಲಿ ನಾನು ಮೊದಲನೆಯವನು ಎಂದರು.
ರಾಮನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಕುರಿತು ಮಾತನಾಡಿ, ಮಾಧ್ಯಮಗಳಲ್ಲಿ ಬಂದ ವರದಿ ನೋಡಿದ್ದೇನೆ. ಸಾರ್ವತ್ರಿಕ ಚುನಾವಣೆ ಬಗ್ಗೆ ಯಾವುದೇ ನಾಯಕರೂ ಚರ್ಚೆ ಮಾಡಿಲ್ಲ. ನಾನು ಸಂಸದನಾಗಿದ್ದು, ನನ್ನ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಾನೇ ಅಭ್ಯರ್ಥಿ, ಮತ ನೀಡಿ ಎಂದು ಮನವಿ ಮಾಡಿದ್ದೇನೆ.
ಲೋಕಸಭಾ ಸದಸ್ಯ ಆಗಿರೋದ್ರಿಂದ ಆ ಕೆಲಸ ಪೂರ್ಣ ಮಾಡಬೇಕಿದೆ. ರಾಮನಗರ, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಸ್ಪರ್ಧೆಗೆ ಮನವಿ ಮಾಡ್ತಿದ್ದಾರೆ. ರಾಮನಗರದಲ್ಲಿ ಇಕ್ಬಾಲ್ ಹುಸೇನ್ ಇದ್ದಾರೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ರಾಜ್ಯದಿಂದ ನಾನು ಒಬ್ಬನೇ ಸಂಸದ ಇದ್ದೇನೆ. ನಮಗೆ ಯಾರ ಮೇಲೂ ಸಾಪ್ಟ್ ಕಾರ್ನರ್ ಇಲ್ಲ. ಯಾರೇ ಅಭ್ಯರ್ಥಿ ಆದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಮನಗರದಲ್ಲಿ ಗೆಲ್ತಾರೆ.
ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಉಪ ಚುನಾವಣೆ ನನಗೆ ಇಷ್ಚ ಇಲ್ಲ. ಸ್ಪರ್ಧೆಗೆ ಒತ್ತಡ 10 ಕ್ಷೇತ್ರಗಳಿಂದ ಇದೆ. ಚನ್ನಪಟ್ಟಣ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೂಕ್ತ ಅಭ್ಯರ್ಥಿಗಳಿದ್ದಾರೆ ಎಂದರು.
ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಬಹುದು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಕ್ಷದ ಅಧ್ಯಕ್ಷರು ಎಲ್ಲರಿಗೂ ಮುಕ್ತವಾದ ಆಹ್ವಾನ ಕೊಟ್ಟಿದ್ದಾರೆ. ಯೋಗೇಶ್ವರ್ ಒಬ್ಬರೆ ಅಲ್ಲ ಯಾರು ಬೇಕಾದ್ರೂ ಬರಬಹುದು. ಪಕ್ಷದ ತತ್ವ ಸಿದ್ದಾಂತ ಒಪ್ಪಿ ಬರೋದಾದ್ರೆ ಬರಬಹುದು ಎಂಬ ಹೇಳಿಕೆಯನ್ನು ಅಧ್ಯಕ್ಷರು ಹೇಳಿದ್ದಾರೆ. ಯಾವುದೇ ಒಬ್ಬ ವ್ಯಕ್ತಿಯನ್ನು ಸೀಮಿತ ಮಾಡಿ ಮಾತನಾಡಲ್ಲ, ಯಾರಬೇಕಾದ್ರೂ ಬರಬಹುದು ಎಂದರು.
ಕರ್ನಾಟಕ
Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್, ಐಫೋನ್ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್
ಹೆದ್ದಾರಿಯಲ್ಲಿ ಸಾಗುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ(Highway robbery) ಬೈಕ್ ಮತ್ತು ಐಫೋನ್ ಕಿತ್ತುಕೊಂಡಿದ್ದ ಮೂವರು ಕ್ರಿಮಿನಲ್ಗಳು ಸೆರೆ ಸಿಕ್ಕಿದ್ದಾರೆ. ಉಳ್ಳಾಲ ಪೊಲಿಸರ ಕಾರ್ಯಾಚರಣೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಉಳ್ಳಾಲ(ಮಂಗಳೂರು): ಬೈಕ್ನಲ್ಲಿ ತೆರಳುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ, ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನು ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ (Highway robbery) ನಡೆಸಿ ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಬಳಿ ಈ ಘಟನೆ ನಡೆದಿತ್ತು.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ ಮತ್ತು ಯುವತಿ ಬೈಕಲ್ಲಿ ಜತೆಯಾಗಿ ತೆರಳುತ್ತಿದ್ದರು. ಈ ವೇಳೆ ಎರಡು ಸ್ಕೂಟರಲ್ಲಿ ಬಂದ ಮೂವರು ಖದೀಮರು ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಅವರನ್ನು ಅಡ್ಡಗಟ್ಟಿದರು.
ಯುವಕ ಮತ್ತು ಯುವತಿಯನ್ನು ಬೆದರಿಸಿದ ಸುಲಿಗೆಕೋರರು ಯುವತಿ ಕೈಯಲ್ಲಿದ್ದ ಬೆಲೆ ಬಾಳುವ ಐ-ಫೋನ್ ಕಿತ್ತುಕೊಂಡಿದ್ದರು. ಮೋಟಾರು ಬೈಕನ್ನೂ ಕೂಡಾ ಕಸಿದುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಬೈಕ್ ಸವಾರ ಅಬ್ದುಲ್ಲ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಹಮ್ಮದ್ ಉಬೈದುಲ್ಲಾ ಅಲಿಯಾಸ್ ಉಬ್ಬಿ (33), ಉಳ್ಳಾಲ ಮೇಲಂಗಡಿ ನಿವಾಸಿ ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 2 ಸ್ಕೂಟರ್ ಗಳು, ಸುಲಿಗೆ ನಡೆಸಿದ್ದ ಐಫೋನ್ ಮತ್ತು ಯಮಹಾ ಮೋಟಾರು ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಆರೋಪಿಗಳನ್ನು ನಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್ ಮಾರ್ಗದರ್ಶನದ ಮೇರೆಗೆ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಮತ್ತು ಉಪನಿರೀಕ್ಷಕರಾದ ಕೃಷ್ಣ ಕೆ.ಎಚ್ ,ಸಂತೋಷ್ ಮತ್ತು ಪಿಸಿಗಳಾದ ಪ್ರವೀಣ ಶೆಟ್ಟಿ, ಅಶೋಕ್, ವಾಸುದೇವ ಸಿಬ್ಬಂದಿಗಳ ತಂಡ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದೆ.
ಈ ಭಾಗದಲ್ಲಿ ಇತ್ತೀಚೆಗೆ ವಾಹನಗಳ ಕಳ್ಳತನ ಹೆಚ್ಚಾಗಿದ್ದು, ಅದಕ್ಕೆ ಹೆದ್ದಾರಿ ದರೋಡೆಯೂ ಸೇರಿಕೊಂಡಂತಾಗಿದೆ. ಪೊಲೀಸರು ಈ ದರೋಡೆ ಪ್ರಕರಣವನ್ನು ತ್ವರಿತವಾಗಿ ಪತ್ತೆ ಹಚ್ಚಿದ್ದನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಈ ಭಾಗದಲ್ಲಿ ಹೈವೇ ಪ್ಯಾಟ್ರೋಲಿಂಗ್ ಹೆಚ್ಚಿಸುವಂತೆ, ಬೈಕ್ ಕಳವು ಪ್ರಕರಣಗಳನ್ನು ಕೂಡಾ ಪತ್ತೆ ಹಚ್ಚುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : Bike theft : ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರಿಗಾಗಿ ಪೊಲೀಸರ ಹುಡುಕಾಟ!
ಕರ್ನಾಟಕ
Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ
Vinay kulkarni: ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ನಂತರ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ನಿರ್ಬಂಧವಿತ್ತು. ಇದಕ್ಕೆ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಧಾರವಾಡ: ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧಕ್ಕೆ ವಿನಾಯಿತಿ ಕೋರಿ ವಿನಯ್ ಕುಲಕರ್ಣಿ (Vinay kulkarni) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿರುವುದರಿಂದ ತೀವ್ರ ಹಿನ್ನಡೆಯಾಗಿದೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿದ್ದರು. 9 ತಿಂಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ಬಿಡುಗಡೆಯಾದ ಬಳಿಕ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಹೀಗಾಗಿ ಧಾರವಾಡ ಜಿಲ್ಲೆ ಪ್ರವೇಶಕ್ಕಿರುವ ನಿರ್ಬಂಧ ತೆರವುಗೊಳಿಸಲು ಕೋರಿ 2 ತಿಂಗಳ ಹಿಂದೆ ಮಾಜಿ ಸಚಿವ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.
ಇದನ್ನೂ ಓದಿ | Karnataka Election 2023: ಕಾಂಗ್ರೆಸ್ ತೊರೆದ ಎಂ.ಎಂ. ಹಿರೇಮಠಗೆ ಶಾಕ್; ಎಸ್ಸಿ ಜಾತಿ ಪ್ರಮಾಣಪತ್ರ ರದ್ದು
ಇನ್ನು ಟ್ರಯಲ್ ಕೋರ್ಟ್ (ವಿಚಾರಣಾ ನ್ಯಾಯಾಲಯದಲ್ಲಿ) ನ್ಯಾಯಾಲಯದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಸೂಚನೆ ನೀಡಿದ್ದು, ಯಾವ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದೆಯೋ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದೆ.
2016 ಜೂನ್ 15 ರಂದು ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೀಶಗೌಡ ಅವರ ಕೊಲೆಯಾಗಿತ್ತು. ನಂತರ ಆರೋಪಿಗಳು ತಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಪೊಲೀಸರುಗೆ ಶರಣಾಗಿದ್ದರು. ಆದರೆ ಯೋಗೇಶಗೌಡ ಗೌಡರ ಕುಟುಂಬಸ್ಥರು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟುಹಿಡಿದಿದ್ದರು. ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಕರಣವನ್ನು ಸಿಬಿಐಗೆ ವಹಿಸಿತು. ತನಿಖೆಯಲ್ಲಿ ಯೋಗಶ್ಗೌಡ ಹತ್ಯೆ ಸಂಚಿನಲ್ಲಿ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಇದೆ ಎಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣದಲ್ಲಿ ಬಂಧನವಾಗಿ 9 ತಿಂಗಳು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆದಿದ್ದ ಮಾಜಿ ಸಚಿವ, ಷರತ್ತು ಬದ್ಧ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಇದೀಗ ನಿರ್ಬಂಧ ವಿನಾಯಿತಿಗೆ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಇದನ್ನೂ ಓದಿ | Karnataka Election: ಎಎಪಿಯಿಂದ 300 ಯೂನಿಟ್ ವಿದ್ಯುತ್ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್ ಜಾರಿ ಗ್ಯಾರಂಟಿ
ಶಿಗ್ಗಾಂವಿಯಿಂದ ವಿನಯ್ ಕುಲಕರ್ಣಿ ಸ್ಪರ್ಧೆ?
ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ವಿನಯ್ ಕುಲಕರ್ಣಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಹಾವೇರಿ ಜಿಲ್ಲೆಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರ ಶಿಗ್ಗಾಂವಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ನ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆಯಾಗಲಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಟಿಕೆಟ್ ಸಿಗುವುದೋ, ಇಲ್ಲವೋ ಎಂಬ ಬಗ್ಗೆ ಕುತೂಹಲ ಮೂಡಿದೆ.
ಕರ್ನಾಟಕ
Karnataka Election: ಎಎಪಿಯಿಂದ 300 ಯೂನಿಟ್ ವಿದ್ಯುತ್ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್ ಜಾರಿ ಗ್ಯಾರಂಟಿ
Aam Aadmi Party: ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, 3,000 ರೂಪಾಯಿ ನಿರುದ್ಯೋಗ ಭತ್ಯೆ, ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಸೇರಿ ಪ್ರಮುಖ 10 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ರಾಜ್ಯ ಆಮ್ ಆದ್ಮಿ ಪಕ್ಷ ಭರವಸೆ ನೀಡಿದೆ.
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ 4 ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ (ಎಎಪಿ) ಕೂಡ ವಿವಿಧ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಯುವಜನತೆಗೆ ತಿಂಗಳಿಗೆ 3,000 ರೂಪಾಯಿ ನಿರುದ್ಯೋಗ ಭತ್ಯೆ, ಗುಣಮಟ್ಟದ ಆರೋಗ್ಯ ಸೇವೆಗಾಗಿ ಕ್ಲಿನಿಕ್ಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಹಳೆ ಪಿಂಚಣಿ ಯೋಜನೆ ಜಾರಿ ಮುಂತಾದ ಒಟ್ಟು 10 ವಲಯಗಳಿಗೆ ಸಂಬಂಧಿಸಿದ ಪ್ರಮುಖ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ತಿಳಿಸಿದೆ.
ಆಮ್ ಆದ್ಮಿ ಪಾರ್ಟಿಯಿಂದ 10 ಗ್ಯಾರಂಟಿಗಳ ಪಟ್ಟಿ ಬಿಡುಗಡೆ
ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್ ಅವರು ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ ಗ್ಯಾರಂಟಿಗಳ ಪಟ್ಟಿಯನ್ನು ಬುಧವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ಆಮ್ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರಂಟಿ ಕಾರ್ಡ್ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟು ಈಡೇರಿಸುತ್ತೇವೆ. ಪ್ರಣಾಳಿಕೆಯಲ್ಲಿದ್ದ ಎಲ್ಲ ಗ್ಯಾರಂಟಿಗಳನ್ನು ದೆಹಲಿಯಲ್ಲಿ ಈಡೇರಿಸಿದ್ದೇವೆ. ಪಂಜಾಬ್ನಲ್ಲಿ ಕೂಡ ಒಂದೊಂದಾಗಿ ಜಾರಿಗೆ ಬರುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ | Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
ಕರ್ನಾಟಕದಲ್ಲಿ ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಯುವಜನತೆಗೆ ತಿಂಗಳಿಗೆ 3,000 ರೂಪಾಯಿ ನಿರುದ್ಯೋಗ ಭತ್ಯೆ, ಗುಣಮಟ್ಟದ ಆರೋಗ್ಯ ಸೇವೆಗಾಗಿ ಕ್ಲಿನಿಕ್ಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಹಳೆ ಪಿಂಚಣಿ ಯೋಜನೆ ಜಾರಿ ಮುಂತಾದ ಒಟ್ಟು 10 ವಲಯಗಳಿಗೆ ಸಂಬಂಧಿಸಿದ ಪ್ರಮುಖ ಗ್ಯಾರಂಟಿಗಳನ್ನು ಇಂದು ಘೋಷಿಸಲಾಗುತ್ತಿದೆ. ಜತೆಗೆ, ಬೆಂಗಳೂರು ಹಾಗೂ ರಾಜ್ಯದ ಪ್ರಾದೇಶಿಕ ಅಭಿವೃದ್ಧಿಗಾಗಿ ಪ್ರತ್ಯೇಕವಾದ ಗ್ಯಾರಂಟಿಗಳನ್ನು ಘೋಷಿಸುತ್ತಿದ್ದೇವೆ” ಎಂದು ಹೇಳಿದರು.
“ಆಮ್ ಆದ್ಮಿ ಪಾರ್ಟಿಯು ದೆಹಲಿಯಲ್ಲಿ 3ನೇ ಬಾರಿ ಹಾಗೂ ಪಂಜಾಬ್ನಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದೆ. ಗೋವಾ ಚುನಾವಣೆಯಲ್ಲಿ ಶೇ. 6ಕ್ಕಿಂತಲೂ ಹೆಚ್ಚು ಮತ ಪಡೆದಿದ್ದೇವೆ. ಗುಜರಾತ್ನಲ್ಲಿ ಶೇ. 14ರಷ್ಟು ಮತ ಪಡೆದಿದ್ದು, ಐವರು ಶಾಸಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಆಮ್ ಆದ್ಮಿ ಪಾರ್ಟಿಯು ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಕಾನೂನಿನ ಪ್ರಕಾರ ಅರ್ಹವಾಗಿದ್ದರೂ ಚುನಾವಣಾ ಆಯೋಗವು ಇನ್ನೂ ಇದನ್ನು ಅಧಿಕೃತವಾಗಿ ಘೋಷಿಸಿಲ್ಲ. ಸ್ಥಾನಮಾನ ಕೋರಿ ನಾವು ಸಲ್ಲಿಸಿದ್ದ ಅರ್ಜಿಯನ್ನು ಹಲವು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿದೆ” ಎಂದು ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, “ಕಳೆದ ಒಂದು ತಿಂಗಳಿನಿಂದ ಪ್ರಣಾಳಿಕೆ ರಚಿಸುವ ಪ್ರಕ್ರಿಯೆಯನ್ನು ನಡೆಸುತ್ತಿದ್ದೇವೆ. ರಾಜ್ಯದ ಮೂಲೆಮೂಲೆಗಳಿಂದ ಈಗಾಗಲೇ ಸಾವಿರಾರು ಸಲಹೆಗಳು ಬಂದಿವೆ. ಬೇರೆಬೇರೆ ವರ್ಗಗಳ ಜನಸಾಮಾನ್ಯರು, ಯುವಜನತೆ, ಮಹಿಳೆಯರು, ತಜ್ಞರು ಸಲಹೆಗಳನ್ನು ನೀಡುತ್ತಿದ್ದಾರೆ. ಜನರಿಂದ ಜನರಿಗಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದ್ದು, ಯಾವ್ಯಾವುದನ್ನು ನಮ್ಮಿಂದ ಮಾಡಲು ಸಾಧ್ಯವೋ ಅವುಗಳನ್ನು ಸೇರಿಸುತ್ತಿದ್ದೇವೆ ಎಂದು ತಿಳಿಸಿದರು.
ಆಮ್ ಆದ್ಮಿ ಪಾರ್ಟಿಯ ಗ್ಯಾರಂಟಿಗಳಿಂದಾಗಿ ರಾಜ್ಯದ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಕನಿಷ್ಠ 8 ರಿಂದ 10 ಸಾವಿರ ರೂಪಾಯಿ ಉಳಿತಾಯವಾಗಲಿದೆ. ನಾವು ಇವುಗಳನ್ನು ಗ್ಯಾರಂಟಿ ಕಾರ್ಡ್ ರೂಪದಲ್ಲಿ ನೀಡುತ್ತಿದ್ದು, ಅಧಿಕಾರಕ್ಕೆ ಬಂದು ನಾವು ಇವುಗಳನ್ನು ಜಾರಿಗೆ ತರದಿದ್ದರೆ ನ್ಯಾಯಾಲಯದ ಮೊರೆ ಹೋಗಲು ಜನರಿಗೆ ಅವಕಾಶವಿರುತ್ತದೆ. ರಾಜ್ಯದ ಪ್ರತಿಯೊಂದು ವರ್ಗದ ಜನರ ಸಮಸ್ಯೆಗಳಿಗೆ ಪ್ರಣಾಳಿಕೆಯಲ್ಲಿ ಪರಿಹಾರ ಇರಲಿದೆ” ಎಂದು ಹೇಳಿದರು.
ಇದನ್ನೂ ಓದಿ | Karnataka Elections 2023: ಚುನಾವಣೆ ಪೂರ್ವ ಸಮೀಕ್ಷೆ: ಎಬಿಪಿ ಪ್ರಕಾರ ಕಾಂಗ್ರೆಸ್, ಜೀ ನ್ಯೂಸ್ ಪ್ರಕಾರ ಬಿಜೆಪಿ ಮುನ್ನಡೆ
ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಅಶ್ವಿನ್ ಮಹೇಶ್, ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಮತ್ತಿತರರು ಭಾಗವಹಿಸಿದ್ದರು.
ಕರ್ನಾಟಕ
ವಿಸ್ತಾರ TOP 10 NEWS: ಮೇ 10ಕ್ಕೆ ಚುನಾವಣೆ ಮುಹೂರ್ತದಿಂದ, ಟೆಕ್ಕಿ ಪ್ರತಿಭಾ ಅತ್ಯಾಚಾರಿಗೆ 30 ವರ್ಷ ಜೈಲುವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
ಕರ್ನಾಟಕದಲ್ಲಿ 16ನೇ ವಿಧಾನಸಭೆಯನ್ನು ಆಯ್ಕೆ ಮಾಡುವ ಸಲುವಾಗಿ ಮೇ 10 ರ ಬುಧವಾರದಂದು ಒಂದೇ ಹಂತದಲ್ಲಿ ಚುನಾವಣೆ (Karnataka Election) ನಡೆಯಲಿದೆ. ಈ ಕುರಿತು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Karnataka Elections 2023: ರಾಜ್ಯದಲ್ಲಿ ಯಾವ ಪಕ್ಷಕ್ಕೆ ಅಧಿಕಾರ? ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳುವುದೇನು?
ಮುಂಬರುವ ಲೋಕಸಭೆ ಚುನಾವಣೆ, ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ, ರಾಹುಲ್ ಗಾಂಧಿ ಅನರ್ಹತೆ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಎಂಬುದು ಸೇರಿ ಹಲವು ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Elections 2023) ದಿನಾಂಕ ನಿಗದಿಯಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, 13ಕ್ಕೆ ಫಲಿತಾಂಶ ಪ್ರಕಟವಾಗಿದೆ. ಇದರ ಬೆನ್ನಲ್ಲೇ, ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಎಬಿಪಿ-ಸಿವೋಟರ್ ಹಾಗೂ ಜೀ ನ್ಯೂಸ್-ಮ್ಯಾಟ್ರಿಜ್ ಚುನಾವಣೆಪೂರ್ವ ಸಮೀಕ್ಷೆ ನಡೆಸಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Karnataka Elections 2023 : ಕಾಂಗ್ರೆಸ್ ಏನೇ ಆರೋಪ ಮಾಡಿದರೂ ಜನರು ನಮ್ಮ ಪರ: ಬೊಮ್ಮಾಯಿ ವಿಶ್ವಾಸ
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು (Karnataka Elections 2023) ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ಕಾಂಗ್ರೆಸ್ ಏನೇ ಆರೋಪ ಮಾಡಿದರೂ ಜನತಾ ಜನಾರ್ದನ ನಮ್ಮ ಪರವಾಗಿದ್ದಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚುನಾವಣೆ ಘೋಷಣೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ತಳಮಟ್ಟದಿಂದಲೇ ಗಟ್ಟಿಯಾಗಿದೆ ಎಂದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Karnataka Election: ಚುನಾವಣೆ ಘೋಷಣೆ ಬೆನ್ನಿಗೇ ಗರ್ಜಿಸಿದ ಕಾಂಗ್ರೆಸ್: ʼಮತ್ತೆ ಗರ್ಜಿಸಲಿದೆ ಕರ್ನಾಟಕʼ ಅಭಿಯಾನ ಆರಂಭ
ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದಲೇ ಕಾಂಗ್ರೆಸ್ ಪಕ್ಷ “ಮತ್ತೆ ಗರ್ಜಿಸಲಿದೆ ಕರ್ನಾಟಕ” ಎಂಬ ಹೊಸ ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಚಾಲನೆ ನೀಡಿ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ವಿಧಾನಸಭೆ ಚುನಾವಣೆಯ ಎಲ್ಲ ಸುದ್ದಿಗಳನ್ನೂ ಓದಲು ಇಲ್ಲಿ ಕ್ಲಿಕ್ ಮಾಡಿ.
5. SC ST Reservation: ಮಾರ್ಚ್ 30ಕ್ಕೆ ನಡೆಯಲ್ಲ ಬಂಜಾರ ಸಮುದಾಯದ ಪ್ರತಿಭಟನೆ; ನೀತಿ ಸಂಹಿತೆ ಜಾರಿ ಹಿನ್ನೆಲೆ ಮುಷ್ಕರ ವಾಪಸ್
ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಗುರುವಾರ (ಮಾ. 30) ನಡೆಯಬೇಕಿದ್ದ ಬಂಜಾರ ಸಮುದಾಯದವರ ಬೃಹತ್ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ತೀರ್ಮಾನವನ್ನು ಹಿಂತೆಗೆದುಕೊಳ್ಳಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Amritpal Singh: ವಿಡಿಯೊ ಬಿಟ್ಟ ಅಮೃತ್ಪಾಲ್, ಬಂಧನದ ಯತ್ನ ಸಿಖ್ಖರ ಮೇಲಿನ ದಾಳಿ ಎಂದ ಖಲಿಸ್ತಾನಿ ನಾಯಕ
ಖಲಿಸ್ತಾನಿಗಳ ನಾಯಕ, ಪಂಜಾಬ್ನಲ್ಲಿ ಗಲಭೆಗೆ ಕಾರಣವಾಗಿರುವ ಅಮೃತ್ಪಾಲ್ ಸಿಂಗ್ (Amritpal Singh) ಮಾರ್ಚ್ 18ರಿಂದ ನಾಪತ್ತೆಯಾಗಿದ್ದಾನೆ. ಈತನ ಬಂಧನಕ್ಕೆ ರಾಜ್ಯದ ಪೊಲೀಸರು ಸತತ ಕಾರ್ಯಾಚರಣೆ ನಡೆಸಿದರೂ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ, ಅಮೃತ್ಪಾಲ್ ಸಿಂಗ್ ವಿಡಿಯೊ ಬಿಡುಗಡೆ ಮಾಡಿದ್ದು, “ನನ್ನ ಬಂಧನಕ್ಕೆ ನಡೆಸುತ್ತಿರುವ ಕಾರ್ಯಾಚರಣೆಯು ಇಡೀ ಸಿಖ್ ಸಮುದಾಯದ ಮೇಲೆ ನಡೆಸುತ್ತಿರುವ ದಾಳಿ” ಎಂದಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Karnataka Rain: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ; ಚಾಮರಾಜನಗರ, ಬೆಂಗಳೂರಲ್ಲಿ ತಂಪೆರೆದ ವರುಣ
ಕಳೆದ ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ, ರಾಮನಗರ, ಕೋಲಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
ಬ್ಯಾಂಕ್ ಖಾತೆಗೆ ಲಿಂಕ್ ಹೊಂದಿರುವ ಯುಪಿಐ ಬಳಕೆಗೆ (UPI transactions) ಸಂಬಂಧಿಸಿ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದು ಉಚಿತ ಎಂದು ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಬುಧವಾರ ಸ್ಪಷ್ಟೀಕರಣ ನೀಡಿದೆ. ಇದರದೊಂದಿಗೆ ಯುಪಿಐ ಮೂಲಕ ಹಣ ಪಾವತಿಗೆ ಶುಲ್ಕ ( Interchange fee ) ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Rape and murder : ಬೆಂಗಳೂರಿನ ಐಟಿ ಉದ್ಯೋಗಿ ಪ್ರತಿಭಾ ಅತ್ಯಾಚಾರ, ಕೊಲೆ ಪ್ರಕರಣ; ಕ್ಯಾಬ್ ಡ್ರೈವರ್ಗೆ 30 ವರ್ಷ ಜೈಲು
ಇಡೀ ರಾಜ್ಯವೇ ನಡುಗುವಂತೆ ಮಾಡಿದ, ಐಟಿ ಉದ್ಯೋಗಿಗಳ ವಲಯದಲ್ಲಿ ತಲ್ಲಣವನ್ನು ಸೃಷ್ಟಿಸಿದ್ದ 2005ರ ಐಟಿಯ ಉದ್ಯೋಗಿಯ ಅತ್ಯಾಚಾರ ಮತ್ತು ಕೊಲೆ (Rape and murder) ಪ್ರಕರಣದಲ್ಲಿ ಆರೋಪಿಗೆ 30 ವರ್ಷಗಳ ಜೈಲುವಾಸದ ಶಿಕ್ಷೆಯನ್ನು ನೀಡಲಾಗಿದೆ. ಆರೋಪಿ ಶಿವಕುಮಾರ್ ಎಂಬಾತನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದ ಕೋರ್ಟ್ 30 ವರ್ಷಗಳ ಕಾಲ ಜೈಲಿನಿಂದ ಹೊರಗೆ ಬಿಡಬಾರದು ಎಂಬ ಷರತ್ತು ವಿಧಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. IPL 2023: ಐಪಿಎಲ್ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ(IPL 2023) ಆರಂಭಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಈ ಬಾರಿ ಯಾವ ತಂಡ ಕಪ್ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಅದರಲ್ಲೂ ಆರ್ಸಿಬಿ ಅಭಿಮಾನಿಗಳು ಈ ಬಾರಿ ಪಕ್ಕಾ ಕಪ್ ನಮ್ದೇ ಎಂದು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಆರ್ಸಿಬಿ(RCB) ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಪ್ರಮುಖ ಸುದ್ದಿಗಳಿವು
- SC ST Scholarship: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶೀಘ್ರವೇ ಬಂಪರ್, ಏರಿಕೆ ಆಗಲಿದೆ ವಿದ್ಯಾರ್ಥಿ ವೇತನ
- Google: ಗೂಗಲ್ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
- Ballary young Mayor : ಬಳ್ಳಾರಿ ಪಾಲಿಕೆಗೆ 21 ವರ್ಷದ ಯುವತಿ ಮೇಯರ್, ರಾಜ್ಯದಲ್ಲೇ ಅತಿಕಿರಿಯ ವಯಸ್ಸಿನ ಮಹಾಪೌರರು!
- Priyanka Chopra: ಫೇರ್ನೆಸ್ ಆ್ಯಡ್ಗಳಲ್ಲಿ ನಟಿಸುವುದು ಹಾನಿಕರ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದೇಕೆ?
- Kabzaa Movie: ಕಬ್ಜ ಒಟಿಟಿ ರಿಲೀಸ್ ಯಾವಾಗ? ಕಬ್ಜ 2ಗೆ ತಯಾರಿ ನಡೆದಿದ್ಯಾ?
-
ಕರ್ನಾಟಕ12 hours ago
Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
-
ಕರ್ನಾಟಕ13 hours ago
Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್
-
ಕರ್ನಾಟಕ16 hours ago
Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
-
ಕ್ರಿಕೆಟ್24 hours ago
Priyanka Chopra : ಬಾಲಿವುಡ್ನ ಪೊಲಿಟಿಕ್ಸ್ಗೆ ಹೆದರಿ ಹಾಲಿವುಡ್ಗೆ ಓಡಿದ್ದೆ ಎಂದ ನಟಿ ಪ್ರಿಯಾಂಕ ಚೋಪ್ರಾ
-
ಕರ್ನಾಟಕ11 hours ago
Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
-
ಪ್ರಮುಖ ಸುದ್ದಿ7 hours ago
UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
-
ಗ್ಯಾಜೆಟ್ಸ್8 hours ago
Google: ಗೂಗಲ್ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
-
ಕರ್ನಾಟಕ10 hours ago
Karnataka Elections 2023 : ವಲಸಿಗ ಸಚಿವರ ಮೇಲೆ ಬೊಮ್ಮಾಯಿ ನಿಗಾ; ಹೆಬ್ಬಾರ್, ಮುನಿರತ್ನ ಕರೆಸಿಕೊಂಡು ಚರ್ಚೆ