Dog Love : ಕಣ್ಮರೆಯಾದ ಕುರುಡು ನಾಯಿ ಹುಡುಕಲು ಶತಪ್ರಯತ್ನ; ಕೊನೆಗೂ ಗೆದ್ದಿತು ತಾಯಿ ಪ್ರೀತಿ! - Vistara News

ಕರ್ನಾಟಕ

Dog Love : ಕಣ್ಮರೆಯಾದ ಕುರುಡು ನಾಯಿ ಹುಡುಕಲು ಶತಪ್ರಯತ್ನ; ಕೊನೆಗೂ ಗೆದ್ದಿತು ತಾಯಿ ಪ್ರೀತಿ!

Dog Love : ಮನೆ ಮಕ್ಕಳಂತೆ ಜೋಪಾನ ಮಾಡಿ ಬೆಳೆಸಿದ ಆ ಶ್ವಾನವೊಂದು (Dog Missing) ಕಾಣೆಯಾಗಿತ್ತು. ಮುದ್ದಾಗಿ ಸಾಕಿದ್ದ ಶ್ವಾನವನ್ನು ಕಳೆದುಕೊಂಡ ಕುಟುಂಬವು ಪರಿತಪಿಸುತ್ತಿತ್ತು. ಇದೀಗ ಬೆಂಗಳೂರು ನಗರ ಪೊಲೀಸರು (Bengaluru City Police) ಕುರುಡು ಶ್ವಾನವನ್ನು ಪತ್ತೆ ಹಚ್ಚಿ ಮಾನವೀಯತೆ (Police Humanity) ಮೆರೆದಿದ್ದಾರೆ.

VISTARANEWS.COM


on

Dog missing was found in Bengaluru
ನಾಪತ್ತೆಯಾಗಿದ್ದ ಶ್ವಾನ ರಾಲ್ಫ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಣ್ಣು ಕಾಣದ ಕುರುಡು ಶ್ವಾನವು ಅದೊಂದು ದಿನ ಮಾಲೀಕರ ಕಣ್ತಪ್ಪಿಸಿ ಮನೆಯಿಂದ ಹೊರ ಹೋಗಿತ್ತು. ಮನೆ ದಾರಿ ಕಾಣದೆ ಗಲ್ಲಿ ಗಲ್ಲಿಯಲ್ಲಿ ಸುತ್ತುತ್ತಾ ಇತ್ತು. ಇತ್ತ ಪ್ರೀತಿಯ (Dog Love) ಶ್ವಾನಕ್ಕಾಗಿ ಹುಡುಕಾಡಿದರೂ ಸಿಕ್ಕಿರಲಿಲ್ಲ. ಮುದ್ದು ಮಗನ ಕಾಣೆಯಾದ ಸುದ್ದಿ ಕೇಳಿ ಆ ಪೋಷಕರು ವಾರಗಳ ಕಾಲ ಕಣ್ಣೀರು ಹಾಕಿದ್ದರು. ಇವರ ಪ್ರೀತಿಗೆ ಸೋತ ಪೊಲೀಸರು (Bengaluru City Police) ತಮ್ಮ ನಿರಂತರ ಪ್ರಯತ್ನದಿಂದ ಮೂಕ ಜೀವಿಯನ್ನು ಮತ್ತೆ ಪೋಷಕರ ಮಡಿಲು ಸೇರಿಸಿದ್ದಾರೆ.

missing Dog was found in Bengaluru

ಶಿಕ್ಷಣ ತಜ್ಞೆ ರಮ್ಯಾ ಹಾಗೂ ಉದ್ಯಮಿ ಲೋಕೇಶ್ ಚೌದ್ರಿ ಅವರು ಹಸ್ಕಿ ಶ್ವಾನವೊಂದನ್ನು ಸಾಕಿದ್ದರು. ಮನೆಯ ಸದಸ್ಯನಂತಿದ್ದ ಪ್ರೀತಿಯ ಶ್ವಾನಕ್ಕೆ ಮಾಲೀಕರು ರಾಲ್ಫ್ ಎಂದು ಹೆಸರಿಟ್ಟಿದ್ದರು. ಹಸ್ಕಿ ಜಾತಿಯ ಈ ಶ್ವಾನ ರಮ್ಯ ಕುಟುಂಬದ ಮನೆ ಮಗನೇ ಆಗಿತ್ತು. ವಯೋಸಹಜ ಕಾಯಿಲೆಯಿಂದ ರಾಲ್ಫ್‌ಗೆ ಕಣ್ಣು ಕಾಣಿಸುತ್ತಿರಲಿಲ್ಲ. ಹೀಗಾಗಿ 14 ವರ್ಷದ ರಾಲ್ಫ್‌ನನ್ನು ಮಾಲೀಕರು ಮತ್ತಷ್ಟು ಜೋಪಾನವಾಗಿ ನೋಡಿಕೊಳ್ಳುತ್ತಿದ್ದರು.

ಹೀಗಿದ್ದಾಗ ಕಳೆದ ಮಂಗಳವಾರ ರಾಲ್ಫ್ ಇನ್ಫ್ಯಾಂಟ್ರಿ ರಸ್ತೆಯ ಮನೆಯಿಂದ ಕಾಣೆಯಾಗಿತ್ತು. ರಾಲ್ಫ್‌ಗಾಗಿ ಮಾಲೀಕರು ಹುಡುಕಾಡಿದ ಜಾಗವಿಲ್ಲ. ಸಿಕ್ಕ ಸಿಕ್ಕ ಮನೆ ಬಳಿ ಹೋಗಿ ಸಿಸಿ ಟಿವಿಯನ್ನು ತೋರಿಸುವಂತೆ ಅಂಗಲಾಚಿದ್ದರು. ಒಂದಷ್ಟು ಫೋಟೆಜ್‌ನಲ್ಲಿ ಶ್ವಾನವನ್ನು ತೆಗೆದುಕೊಂಡು ಹೋಗುತ್ತಿದ್ದನ್ನು ಕಂಡು ಬಂದಿತ್ತು.

missing Dog was found in Bengaluru

ಇದನ್ನೂ ಓದಿ: Elephant attack : ಚಿಕಿತ್ಸೆಗೆ ಹೋದಾಗ ಅಟ್ಟಾಡಿಸಿದ ಗಾಯಾಳು ಕಾಡಾನೆ; ಅರಣ್ಯ ಸಿಬ್ಬಂದಿ ಸಾವು!

75 ಸಿಸಿಟಿವಿ ಪರಿಶೀಲಿಸಿದ ಪೊಲೀಸರು

ಕಣ್ಣು ಕಾಣದ ಶ್ವಾನಕ್ಕೆ ಯಾರಾದರೂ ಏನಾದರೂ ಮಾಡಿಬಿಟ್ಟರೆ, ಹಸಿವಿನಿಂದ ಒದ್ದಾಡುತ್ತಿರಬಹುದಾ? ಅಥವಾ ಬೀದಿನಾಯಿಗಳು ದಾಳಿ ಮಾಡಿಬಿಟ್ಟರೆ ಎಂದೆಲ್ಲ ಯೋಚಿಸಿ ಕಣ್ಣೀರು ಹಾಕುತ್ತಿದ್ದರು. ಶ್ವಾನಕ್ಕಾಗಿ ಹುಡುಕಾಡಿ ಸುಸ್ತಾದ ರಮ್ಯ ಕುಟುಂಬಸ್ಥರು ಕಡೆಗೆ ಪೊಲೀಸರ ನೆರವು ಪಡೆಯಲು ಮುಂದಾದರು. ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಿಗೆ ದೂರು ಕೊಟ್ಟಿದ್ದರು.

Dog missing was found in Bengaluru

ಶ್ವಾನ ಮಾಲೀಕರ ಪ್ರೀತಿಗೆ ಮರುಗಿದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಇನ್ಫ್ಯಾಂಟ್ರಿ ರಸ್ತೆ ಸೇರಿ ಸುಮಾರು 75 ಸಿಸಿಟಿವಿ ಚೆಕ್ ಮಾಡಿದ್ದರು. ಈ ವೇಳೆ ಆಟೊವೊಂದನ್ನು ಪತ್ತೆ ಮಾಡಿದ್ದರು. ಆಟೋ ನಂಬರ್ ಮೂಲಕ ಚಾಲಕನ ಪತ್ತೆ ಹಚ್ಚಿದ್ದರು. ರಸ್ತೆ ಬದಿಯಲ್ಲಿದ್ದ ಹಸ್ಕಿ ನೋಡಿ ಆಟೋ ಚಾಲಕ ಶ್ವಾನವನ್ನು ತೆಗೆದುಕೊಂಡು ಹೋಗಿದ್ದ. ಶ್ವಾನಕ್ಕೆ ವಯಸ್ಸಾಗಿದೆ, ಕಣ್ಣು ಕಾಣಲ್ಲ ಎಂದು ತಿಳಿದಾಗ ಬ್ರೀಡಿಂಗ್ ಮಾಡುವವರಿಗೆ ಮಾರಾಟ ಮಾಡಿದ್ದ.

missing Dog was found in Bengaluru

ಆಟೋ ಚಾಲಕ ಕಾವಲ್ ಭೈರಸಂದ್ರದ ನಿವಾಸಿಗೆ ಮಾರಾಟ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾನೆ. ರಾಲ್ಫ್ ಇದ್ದ ಮನೆ ಹುಡುಕುತ್ತಾ ಹೊರಟ ಪೊಲೀಸರು ಕಾವಲ್ ಬೈರಸಂದ್ರದ ಗಲ್ಲಿ ಗಲ್ಲಿಯಲ್ಲಿ ಹುಡುಕಾಡಿ ಶ್ವಾನ ಪತ್ತೆ ಹಚ್ಚಿ, ಪೋಷಕರ ಮಡಿಲು ಸೇರಿಸಿದ್ದಾರೆ. ಪೊಲೀಸರ ಈ ಕಾರ್ಯ ವೈಖರಿ ಹಾಗೂ ಮಾತೃ ಹೃದಯಕ್ಕೆ ಶ್ವಾನದ ಪೋಷಕರು ಧನ್ಯವಾದ ಅರ್ಪಿಸಿದ್ದಾರೆ. ಇತ್ತ ಮಾಲೀಕರ ಧ್ವನಿಯನ್ನು ಕೇಳಿದ್ದೆ ತಡ ಮನೆಯೊಳಗೆ ಇದ್ದ ರಾಲ್ಫ್‌ ಓಡೋಡಿ ಬಂದಿತ್ತು. ಶ್ವಾನ ಕಂಡೊಡನೆ ಭಾವುಕರಾಗಿ ರಮ್ಯ ರಾಲ್ಫ್‌ನನ್ನು ತಬ್ಬಿಕೊಂಡು ಮುದ್ದಾಡಿದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Gold Rate Today: ಚಿನ್ನದ ಬೆಲೆಗಳು ಇಂದು 22 ಕ್ಯಾರಟ್‌ಗೆ ₹20 ಹಾಗೂ 24 ಕ್ಯಾರಟ್‌ಗೆ ₹22 ಏರಿಕೆಯಾಗಿವೆ. ಇದು ಪ್ರತಿ 1 ಗ್ರಾಂಗೆ ಏರಿಕೆಯಾಗಿರುವ ದರ. ಒಟ್ಟಾರೆ ದರಗಳನ್ನು ಇಲ್ಲಿ ಪರಿಶೀಲಿಸಿ.

VISTARANEWS.COM


on

gold rate today beauty
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತದಾನದ ದಿನವೂ ಚಿನ್ನದ ಬೆಲೆಗಳು ಏರಿಕೆಯಾಗಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,930 ಮತ್ತು ₹7,29,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84, ಎಂಟು ಗ್ರಾಂ ₹672 ಮತ್ತು 10 ಗ್ರಾಂ ₹840ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,850 72,930
ಬೆಂಗಳೂರು66,850 72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಕರ್ನಾಟಕ

Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Drought Relief: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಕೊನೆಗೂ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಹಾಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Drought Relief
Koo

ಕಲಬುರಗಿ: ಕರ್ನಾಟಕ ಸರ್ಕಾರವು ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋದ ಬಳಿಕ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Drought Relief) ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, “ಕೇಂದ್ರ ಸರ್ಕಾರವು ನಾವು ಕೇಳಿದ್ದಕ್ಕಿಂತ ತುಂಬ ಕಡಿಮೆ ಹಣ ಬಿಡುಗಡೆ ಮಾಡಿದೆ. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

“ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಮೊತ್ತದ ಬೆಳೆ ನಷ್ಟವಾಗಿದೆ. 48 ಸಾವಿರ ಹೆಕ್ಟೇರ್‌ ಬೆಳೆ ನಾಶ ಆಗಿದೆ. 223 ತಾಲೂಕುಗಳು ಬರಪೀಡಿತ ಎಂಬುದಾಗಿ ಘೋಷಣೆ ಮಾಡಿದ್ದೇವೆ. ಹಾಗಾಗಿ, ನಾವು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ರೂ. ಪರಿಹಾರ ಕೇಳಿದ್ದೆವು. ಆದರೆ, ಈಗ ಕೇಂದ್ರ ಸರ್ಕಾರವು ನಾವು ಕೇಳಿದ ನಾಲ್ಕನೇ ಒಂದು ಭಾಗದಷ್ಟು ಮಾತ್ರ ಪರಿಹಾರ ನೀಡಿದೆ. ಇದು ತುಂಬ ಕಡಿಮೆ ಆಯಿತು. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂಬುದಾಗಿ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಅವರು, “ಕರ್ನಾಟಕದಲ್ಲಿ ನಿನ್ನೆ (ಏಪ್ರಿಲ್‌ 26) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತದಾನವಾಗಿದೆ ಎಂಬುದಾಗಿ ವರದಿ ತಿಳಿಸಿದೆ. ಕರ್ನಾಟಕ ಸರ್ಕಾರ ಘೋಷಿಸಿದ ಐದು ಗ್ಯಾರಂಟಿಗಳು ಜನ ನಮ್ಮ ಮೇಲೆ ಹೆಚ್ಚು ವಿಶ್ವಾಸ ಇರಿಸಲು ಕಾರಣವಾಗಿದೆ. ಹಾಗಾಗಿ, ಎಲ್ಲ ಕ್ಷೇತ್ರಗಳಲ್ಲೂ ನಮಗೆ ಮುನ್ನಡೆ ಸಿಗುವುದು ನಿಶ್ಚಿತ” ಎಂದು ಹೇಳಿದರು. ನರೇಂದ್ರ ಮೋದಿ ಅಬ್ಬರದ ಭಾಷಣ, ಕಾಂಗ್ರೆಸ್‌ ವಿರುದ್ಧ ಟೀಕೆಗಳ ಕುರಿತು ಮಾತನಾಡಿದ ಅವರು, “ಪ್ರಧಾನಿಯವರಿಗೆ ಸುಳ್ಳು ಹೇಳುವುದು ರೂಢಿಯಾಗಿದೆ. ಆ ಸುಳ್ಳುಗಳನ್ನು ಜನ ಇನ್ನು ನಂಬುವುದಿಲ್ಲ” ಎಂದು ಕುಟುಕಿದರು.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೋದಿಗೆ ಧನ್ಯವಾದ ಎಂದ ಕರ್ನಾಟಕ ಬಿಜೆಪಿ

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಿಜೆಪಿ, “ಬರ ಪರಿಹಾರ ಮಾಡಿದ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು” ಎಂದಿದೆ.

ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬರ ಉಂಟಾದರೂ, ರೈತರಿಗೆ ಬಿಡಿಗಾಸು ಮಧ್ಯಂತರ ಪರಿಹಾರ ನೀಡದೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸಂಪೂರ್ಣ ಓಲೈಕೆ ರಾಜಕಾರಣದಲ್ಲಿ ನಿರತವಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ನರೇಂದ್ರ ಮೋದಿಯವರು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆ” ಎಂದಿದೆ.

ಇದನ್ನೂ ಓದಿ: Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Continue Reading

ಕೋಲಾರ

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Road Accident : ಕೋಲಾರ ಸ್ಟ್ರಾಂಗ್‌ ರೂಮಿಗೆ ಇವಿಎಂ ಸಾಗಿಸುತ್ತಾಗ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸದ್ಯ ಕ್ಯಾಂಟರ್‌ನ ಟೈರ್‌ ಬದಲಾವಣೆ ಮಾಡಲು ರಸ್ತೆಯಲ್ಲೇ ರಿಪೇರಿ ಕೆಲಸ ನಡೆಸುತ್ತಿದ್ದು, ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

VISTARANEWS.COM


on

By

road Accident in kolar evm
Koo

ಕೋಲಾರ : ಕೋಲಾರದ ವಡಗೂರ್ ಗೇಟ್ ಬಳಿ ಇವಿಎಂ‌ (EVM) ಸಾಗಿಸುತ್ತಿದ್ದಾಗ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ (Road Accident) ಘಟನೆ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ.

ಇದರಿಂದಾಗಿ ಅಡ್ಡಾದಿಡ್ಡಿಯಾಗಿ ಹೋದ ಕ್ಯಾಂಟರ್‌ ರಸ್ತೆ ಬದಿ ನಿಂತಿದೆ. ಅದೃಷವಶಾತ್‌ ಕ್ಯಾಂಟರ್‌ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇವಿಎಂ ಹೊತ್ತ ವಾಹನ ಕಳೆದೊಂದು ಗಂಟೆಯಿಂದ ರಸ್ತೆಯಲ್ಲೇ ನಿಂತಿದೆ.

ಸದ್ಯ ಸಿಬ್ಬಂದಿಯಿಂದ ವಾಹನದ ಟೈರ್ ಬದಲಾಯಿಸುವ ಕಾರ್ಯ ಮುಂದುವರಿದಿದ್ದು, ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇವಿಎಂ ಇರುವ ಕ್ಯಾಂಟರ್‌ ಅನ್ನು ಸೀಲ್ ಮಾಡಿರುವುದರಿಂದ‌ ವಾಹನದ ರಿಪೇರಿಯಾದ‌ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗುತ್ತದೆ. ಸ್ಥಳದಲ್ಲೇ‌ ತಹಸೀಲ್ದಾರ್ ಹಾಗೂ ಪೊಲೀಸ್ ‌ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

ಬೆಂಗಳೂರು: ಆಂಬ್ಯುಲೆನ್ಸ್‌ ಚಾಲಕನ (Ambulance driver) ಎಡವಟ್ಟಿನಿಂದ ಸರಣಿ ಅಪಘಾತ (Road Accident) ಸಂಭವಿಸಿದೆ. ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ಆಂಬ್ಯುಲೆನ್ಸ್‌ ಚಾಲಕ ಸುಮಂತ್‌ ಎಂಬಾತ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.

ಸರಣಿ ಅಪಘಾತಕ್ಕೆ ಟೆಕ್ಷನ್‌ ಆದ ಚಾಲಕ ಬ್ರೇಕ್ ತುಳಿಯುವ ಬದಲು ಎಕ್ಸಿಲೇಟರ್ ತುಳಿದು ಮತ್ತೆ ಅವಾಂತರ ಸೃಷ್ಟಿಸಿದ್ದಾನೆ. ಈ ವೇಳೆ ಕಾರುಗಳಿಗೆ ಗುದ್ದಿದ ಪರಿಣಾಮ ಸಂಪೂರ್ಣ ಜಖಂಗೊಂಡಿವೆ. ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬ್ಯುಲೆನ್ಸ್ ಚಾಲಕ ಸುಮಂತ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ಕಲಬುರಗಿ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದಾರೆ. ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದರು.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ಕಾರವಾರ: ಅಪಘಾತದಲ್ಲಿ (Road Accident) ಗಾಯಗೊಂಡು ರಸ್ತೆ ಬದಿ ನರಳುತ್ತ ಬಿದ್ದಿದ್ದ ಯುವಕನನ್ನು ತಮ್ಮದೇ ಕಾರಿನಲ್ಲಿ ಉತ್ತರ ಕನ್ನಡ ಲೋಕಸಭೆ ಚುನಾವಣಾ ಅಭ್ಯರ್ಥಿ (Uttara Kannada lok sabha election candidate) ಅಂಜಲಿ ನಿಂಬಾಳ್ಕರ್‌ (Anjali Nimbalkar) ಆಸ್ಪತ್ರೆಗೆ ಸಾಗಿಸಿ ಮಾನವೀಯತೆ (Humanity) ಮೆರೆದಿದ್ದಾರೆ.

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

ಹಳಿಯಾಳದಿಂದ ಶಿರಸಿಗೆ ಹೋಗುವಾಗ ಯುವಕನನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್, ಕಾರು ನಿಲ್ಲಿಸಿ ಗಾಯಗೊಂಡವನನ್ನು ಪರಿಶೀಲಿಸಿದರು. ಸ್ವತಃ ವೈದ್ಯೆಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಸೂಕ್ತ ಪ್ರಥಮ ಉಪಚಾರ ನೀಡಿ ತಕ್ಷಣ ಯುವಕನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದರು. ಆಸ್ಪತ್ರೆಯಲ್ಲೂ ಚಿಕಿತ್ಸೆ ವೇಳೆ ಸಿಬ್ಬಂದಿಯೊಂದಿಗಿದ್ದು ನೆರವು ನೀಡಿದರು. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಬಿಜೆಪಿಯ ಭದ್ರಕೋಟೆಯನ್ನು ಒಡೆಯುವೆ: ಅಂಜಲಿ

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Road Accident : ವೇಗವಾಗಿ ಬಂದ ಆಂಬ್ಯುಲೆನ್ಸ್‌ವೊಂದು ನಿಂತಿದ್ದ ಕಾರಿಗೆ ಗುದ್ದಿದೆ. ಈ ವೇಳೆ ಚಾಲಕ ಗಾಬರಿಯಲ್ಲಿ ಬ್ರೇಕ್‌ ತುಳಿಯುವ ಬದಲು ಮತ್ತೆ ಎಕ್ಸಿಲೇಟರ್ ತುಳಿದು ಸರಣಿ ಅಪಘಾತಕ್ಕೆ ಮಾಡಿದ್ದಾನೆ. ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Road Accident in Bengaluru
Koo

ಬೆಂಗಳೂರು: ಆಂಬ್ಯುಲೆನ್ಸ್‌ ಚಾಲಕನ (Ambulance driver) ಎಡವಟ್ಟಿನಿಂದ ಸರಣಿ ಅಪಘಾತ (Road Accident) ಸಂಭವಿಸಿದೆ. ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ಆಂಬ್ಯುಲೆನ್ಸ್‌ ಚಾಲಕ ಸುಮಂತ್‌ ಎಂಬಾತ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.

ಸರಣಿ ಅಪಘಾತಕ್ಕೆ ಟೆಕ್ಷನ್‌ ಆದ ಚಾಲಕ ಬ್ರೇಕ್ ತುಳಿಯುವ ಬದಲು ಎಕ್ಸಿಲೇಟರ್ ತುಳಿದು ಮತ್ತೆ ಅವಾಂತರ ಸೃಷ್ಟಿಸಿದ್ದಾನೆ. ಈ ವೇಳೆ ಕಾರುಗಳಿಗೆ ಗುದ್ದಿದ ಪರಿಣಾಮ ಸಂಪೂರ್ಣ ಜಖಂಗೊಂಡಿವೆ. ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬ್ಯುಲೆನ್ಸ್ ಚಾಲಕ ಸುಮಂತ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ಕಲಬುರಗಿ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದಾರೆ. ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದರು.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ಕಾರವಾರ: ಅಪಘಾತದಲ್ಲಿ (Road Accident) ಗಾಯಗೊಂಡು ರಸ್ತೆ ಬದಿ ನರಳುತ್ತ ಬಿದ್ದಿದ್ದ ಯುವಕನನ್ನು ತಮ್ಮದೇ ಕಾರಿನಲ್ಲಿ ಉತ್ತರ ಕನ್ನಡ ಲೋಕಸಭೆ ಚುನಾವಣಾ ಅಭ್ಯರ್ಥಿ (Uttara Kannada lok sabha election candidate) ಅಂಜಲಿ ನಿಂಬಾಳ್ಕರ್‌ (Anjali Nimbalkar) ಆಸ್ಪತ್ರೆಗೆ ಸಾಗಿಸಿ ಮಾನವೀಯತೆ (Humanity) ಮೆರೆದಿದ್ದಾರೆ.

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

ಹಳಿಯಾಳದಿಂದ ಶಿರಸಿಗೆ ಹೋಗುವಾಗ ಯುವಕನನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್, ಕಾರು ನಿಲ್ಲಿಸಿ ಗಾಯಗೊಂಡವನನ್ನು ಪರಿಶೀಲಿಸಿದರು. ಸ್ವತಃ ವೈದ್ಯೆಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಸೂಕ್ತ ಪ್ರಥಮ ಉಪಚಾರ ನೀಡಿ ತಕ್ಷಣ ಯುವಕನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದರು. ಆಸ್ಪತ್ರೆಯಲ್ಲೂ ಚಿಕಿತ್ಸೆ ವೇಳೆ ಸಿಬ್ಬಂದಿಯೊಂದಿಗಿದ್ದು ನೆರವು ನೀಡಿದರು. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಬಿಜೆಪಿಯ ಭದ್ರಕೋಟೆಯನ್ನು ಒಡೆಯುವೆ: ಅಂಜಲಿ

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
gold rate today beauty
ಚಿನ್ನದ ದರ2 mins ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Drought Relief
ಕರ್ನಾಟಕ3 mins ago

Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Rakshit Shetty Richard Anthony Pre Production
ಸ್ಯಾಂಡಲ್ ವುಡ್8 mins ago

Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

Krishna Mukherjee accuses Shubh Shagun producer
ಕಿರುತೆರೆ9 mins ago

Krishna Mukherjee: ಮೇಕಪ್‌ ರೂಮ್‌ನಲ್ಲಿ ಕೂಡಿ ಹಾಕಿದ್ರು, ಬಟ್ಟೆ ಬದಲಿಸಲೂ ಬಿಡಲಿಲ್ಲ; ʻನಾಗಿಣ್-3′ ಖ್ಯಾತ ನಟಿಯ ಅಳಲು!

ದೇಶ28 mins ago

Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

road Accident in kolar evm
ಕೋಲಾರ38 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Vampire Facial
ಆರೋಗ್ಯ50 mins ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ53 mins ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Road Accident in Bengaluru
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ1 hour ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ38 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ8 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌