BY Vijayendra : ಹೆದರಬೇಡಿ ನಾನಿದ್ದೇನೆ; ಬಿಜೆಪಿ ಕಾರ್ಯಕರ್ತರ ಬೆನ್ನಿಗೆ ನಿಂತ ಬಿ.ವೈ. ವಿಜಯೇಂದ್ರ! - Vistara News

ಕರ್ನಾಟಕ

BY Vijayendra : ಹೆದರಬೇಡಿ ನಾನಿದ್ದೇನೆ; ಬಿಜೆಪಿ ಕಾರ್ಯಕರ್ತರ ಬೆನ್ನಿಗೆ ನಿಂತ ಬಿ.ವೈ. ವಿಜಯೇಂದ್ರ!

BY Vijayendra : ಸೋಷಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗಿರುವ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಯ ನೀಡಿದ್ದಾರೆ. ನಾನಿದ್ದೇನೆ ಹೆದರಬೇಡಿ ಎಂದು ಹೇಳಿದ್ದಾರೆ.

VISTARANEWS.COM


on

BY Vijayendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಕಾರ್ಯಕರ್ತರ (BJP Activist) ಬೆನ್ನಿಗೆ ನಿಂತಿದ್ದಾರೆ. ತಮ್ಮ ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ವಹಿಸುವುದಾಗಿ ಅವರು ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾ (Social Media) ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ವಿಜಯೇಂದ್ರ, ಸೋಷಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗಿರುವ ನಮ್ಮ ಕಾರ್ಯಕರ್ತರಿಗೆ ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ನಾವು ಅವರ ರಕ್ಷಣೆಗೆ ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ಸಮಸ್ಯೆ ಆದಲ್ಲಿ 24X7 ಕಂಟ್ರೋಲ್ ರೂಂ ತೆರೆಯಲು ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಮೂಲಕ ಪಕ್ಷದ ಕಾರ್ಯಕರ್ತರ ರಕ್ಷಣೆಗೆ ರಾಜ್ಯ ಬಿಜೆಪಿ (BJP Karnataka) ಸದಾ ಬದ್ಧವಾಗಿರುತ್ತದೆ ಎಂಬ ಸಂದೇಶವನ್ನು ನೀಡಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಸದಾ ಒಂದಲ್ಲ ಒಂದು ವಿವಾದಗಳಿಗೆ ತುತ್ತಾಗುತ್ತಲೇ ಬಂದಿದೆ. ಈ ನಡುವೆ ಕಾಂಗ್ರೆಸ್‌ ಸರ್ಕಾರದ ಹಾಗೂ ಮಂತ್ರಿ ಮಂಡಲದ ವಿರುದ್ಧ ಬಿಜೆಪಿ ಕಾರ್ಯಕರ್ತರ ಸಹಿತ ಹಲವರು ಪೋಸ್ಟರ್‌ಗಳನ್ನು, ವಿಡಿಯೊಗಳನ್ನು ಇಲ್ಲವೇ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಸೋಷಿಯಲ್‌ ಮೀಡಿಯಾಗಳಲ್ಲಿ ಈ ಕುರಿತು ಪೋಸ್ಟ್‌ಗಳನ್ನು ಮಾಡುತ್ತ ಬಂದಿದ್ದಾರೆ. ಇಂಥವರ ಮೇಲೆ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಬಿ.ವೈ. ವಿಜಯೇಂದ್ರ ಅವರಿಗೆ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರು ಟ್ವೀಟ್‌ ಮಾಡುವ ಮೂಲಕ ಕಾರ್ಯಕರ್ತರ ಬೆನ್ನಿಗೆ ನಿಲ್ಲುವುದಾಗಿ ಹೇಳಿದ್ದಾರೆ.

ವಿಜಯೇಂದ್ರ ಟ್ವೀಟ್‌ನಲ್ಲೇನಿದೆ?

“ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಧೋರಣೆ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ, ಎದೆಗುಂದ ಬೇಕಿಲ್ಲ.

ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೊಲೀಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ನೆರವಿಗೆ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು” ಎಂದು ಬಿ.ವೈ. ವಿಜಯೇಂದ್ರ ಸೋಷಿಯಲ್‌ ಮೀಡಿಯಾ ಪೋಸ್ಟ್‌ ಮೂಲಕ ಬಿಜೆಪಿ ಕಾರ್ಯಕರ್ತರ ಬೆನ್ನಿಗೆ ನಿಂತಿದ್ದಾರೆ.

ಇದನ್ನೂ ಓದಿ: ಮನ್‌ ಕೀ ಬಾತ್‌ನಲ್ಲಿ ಚಾಮರಾಜನಗರದ ವರ್ಷಾ ಎಂಬ ಮಹಿಳೆಯ ನೆನೆದ ಮೋದಿ; ಏನಿವರ ಸಾಧನೆ?

ಯಾರೂ ಹೆದರುವ ಅವಶ್ಯಕತೆ ಇಲ್ಲ ಎಂಬ ಸಂದೇಶ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದವರ ಟಾರ್ಗೆಟ್ ಮಾಡಲಾಗುತ್ತಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರದ ವಿರುದ್ಧ ಪೋಸ್ಟ್ ಮಾಡಿದವರ ಬಂಧನ ಮಾಡಲಾಗುತ್ತಿದೆ. ಆದರೆ, ಇದಕ್ಕೆ ಯಾರೂ ಹೆದರುವ ಅವಶ್ಯಕತೆ ಇಲ್ಲ ಎಂಬ ಸಂದೇಶವನ್ನು ಬಿ.ವೈ. ವಿಜಯೇಂದ್ರ ರವಾನೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರವು ಮತ್ತೊಂದು ಶಾಕ್‌ ನೀಡಲು ಸಜ್ಜಾದಂತಿದೆ. ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆಯೇರಿಕೆ ಮಾಡಿದ್ದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಮೂರನೇ ಬಾರಿ ಬೆಲೆಯೇರಿಕೆ ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಅಬಕಾರಿ ಇಲಾಖೆಯು ವರ್ಷದಲ್ಲಿ ಒಮ್ಮೆ ಬೆಲೆ ಪರಿಷ್ಕರಣೆ ಮಾಡುತ್ತದೆ. ಆದರೆ, ಸಂಪನ್ಮೂಲ ಕ್ರೋಡೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Alcohal
Koo

ಬೆಂಗಳೂರು: ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ತಂದು, ಹಲವು ಉಚಿತ ಕೊಡುಗೆಗಳನ್ನು ನೀಡುತ್ತಿರುವ ರಾಜ್ಯ ಸರ್ಕಾರವು (Karnataka Government), ವರ್ಷಕ್ಕೆ ಇವುಗಳಿಗೆಂದೇ ಸುಮಾರು 59 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿಯೇ ಸಂಪನ್ಮೂಲ ಕ್ರೋಡೀಕರಿಸಲು ರಾಜ್ಯ ಸರ್ಕಾರವು ಹಲವು ರೀತಿಯ ಬೆಲೆಯೇರಿಕೆಯ ಅಸ್ತ್ರ ಬಳಸುತ್ತಿದೆ. ಅದರಲ್ಲೂ, ಕಳೆದ ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರವು ಈಗ ವರ್ಷದೊಳಗೇ ಮೂರನೇ ಬಾರಿ ಬೆಲೆಯೇರಿಕೆ (Liquor Price Hike ) ಮಾಡುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಇದು ಮದ್ಯಪ್ರಿಯರಿಗೆ ಶಾಕಿಂಗ್‌ ಎನಿಸಿದೆ.

ಹೌದು, ಅಬಕಾರಿ ಇಲಾಖೆಯು ಮದ್ಯದ ಬೆಲೆಯೇರಿಕೆ ಮಾಡುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಹಾಗೊಂದು ವೇಳೆ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡಿದರೆ ಓಲ್ಡ್‌ ಮಾಂಕ್‌, ಎಂಸಿ ರಮ್‌, ಬಿಪಿ, ಒಟಿ ಹಾಗೂ 8 ಪಿಎಂ ಬ್ರ್ಯಾಂಡ್‌ನ ಮದ್ಯದ ಬಾಟಲಿಗಳ ಬೆಲೆಯೇರಿಕೆ ಆಗಲಿದೆ. ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರವು ಸಂಪನ್ಮೂಲ ಕ್ರೋಡೀಕರಣ ಮಾಡಲು ಮದ್ಯದ ಬೆಲೆಯೇರಿಕೆ ಪ್ರಮುಖ ಅಸ್ತ್ರವಾಗಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಬೆಲೆಯೇರಿಕೆ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

Constables

2023ರ ಜೂನ್‌ ತಿಂಗಳಲ್ಲಿ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ 10 ರೂ.ನಿಂದ 20 ರೂ.ವರೆಗೆ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿತ್ತು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಬಡ್ ವೈಸರ್ ಬಿಯರ್ ದರ 198 ರೂ.ನಿಂದ 220 ರೂ.ಗೆ ಏರಿಕೆ ಮಾಡಲಾಗಿತ್ತು. ಕಿಂಗ್‌ಫಿಶರ್ ಬಿಯರ್ ದರವನ್ನು 160 ರೂ.ನಿಂದ 170 ರೂ.ಗೆ ಏರಿಕೆ ಮಾಡಲಾಗಿತ್ತು. ಯುಬಿ ಪ್ರೀಮಿಯಂ ದರವನ್ನು 125 ರೂ.ನಿಂದ 130-135 ರೂ.ಗೆ ಏರಿಕೆಸಲಾಗಿತ್ತು.

ಇದಾದ ಕೆಲವೇ ತಿಂಗಳಲ್ಲಿ ಮತ್ತೆ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಬಿಯರ್‌ ಮೇಲಿನ ದರವನ್ನು ಹೆಚ್ಚಳ ಮಾಡಲು ಅಬಕಾರಿ ಇಲಾಖೆ 2024ರ ಜನವರಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಅದರಂತೆ, ಒಂದು ಬಿಯರ್‌ ಮೇಲೆ 8ರಿಂದ 10 ರೂಪಾಯಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ, ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಬೆಲೆಯೇರಿಕೆ ಕುರಿತು ಘೋಷಣೆ ಮಾಡಿದ್ದರು. ಈಗ ಮೂರನೇ ಬಾರಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 500 ಕೋಟಿ ರೂ. ಸೇರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Continue Reading

ಕರ್ನಾಟಕ

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Koppala News: ಗಂಗಾವತಿ ತಾಲೂಕಿನ ಹಣವಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷೆಯೊಬ್ಬರ ತಲೆದಂಡವಾಗಿದ್ದು, ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ, ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸಿ ಹಾಗೂ ಮುಂದಿನ 6 ವರ್ಷಕಾಲ ಯಾವುದೇ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

disqualification for hanawala Gram Panchayat Vice President and Cancellation of membership ordered
Koo

ಗಂಗಾವತಿ: ಹಣವಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷೆಯೊಬ್ಬರ ತಲೆದಂಡವಾಗಿದ್ದು, ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ ಸದಸ್ಯತ್ವ ರದ್ದು ಮಾಡಿ, ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ (Koppala News) ಹೊರಡಿಸಿದ್ದಾರೆ.

ಗಂಗಾವತಿ ತಾಲೂಕಿನ ಹಣವಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಂದಿನಿ ವೆಂಕಟೇಶ ಭೋವಿ ಅವರನ್ನು ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ, ಸದಸ್ಯತ್ವ ರದ್ದು ಮಾಡಿ, ಮುಂದಿನ ಆರು ವರ್ಷಕಾಲ ಯಾವುದೇ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: Bengaluru News: ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಶರಣಪ್ರಕಾಶ್‌ ಪಾಟೀಲ್‌

ಸರ್ಕಾರದ ಮತ್ತು ಇಲಾಖೆಯ ನಿಯಮಗಳನ್ನು ಮೀರಿ ಹಣಕಾಸು ಅವ್ಯವಹಾರಕ್ಕೆ ಸಾಥ್ ನೀಡಿರುವ ಈ ಪ್ರಕರಣದ ಪ್ರಮುಖ ರೂವಾರಿ ಎನ್ನಲಾಗುತ್ತಿರುವ ನಿರ್ಗಮಿತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯು. ಮಲ್ಲಿಕಾರ್ಜುನ ವಿರುದ್ಧ ಶಿಸ್ತುಕ್ರಮ ಕೈಗೊಂಡಿರುವ ಇಲಾಖೆ, ದುರುಪಯೋಗವಾಗಿರುವ ಹಣದ ಅರ್ಧ ಮೊತ್ತ ವಸೂಲಿ ಮಾಡುವಂತೆ ಸೂಚಿಸಲಾಗಿದೆ.

ಹಣವಾಳ ಗ್ರಾಮ ಪಂಚಾಯಿತಿಯ ಹಾಲಿ ಅಧ್ಯಕ್ಷೆ ಯಂಕಮ್ಮ ಈರಣ್ಣ ಕುರಿ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ವಿಚಾರಣೆ ಕೈಗೊಂಡ ಇಲಾಖೆಯ ಅಧಿಕಾರಿಗಳಿಗೆ ಹಣಕಾಸು ಅಕ್ರಮ ನಡೆದಿರುವುದು ಗೋಚರಿಸಿದ ಹಿನ್ನೆಲೆಯಲ್ಲಿ ಪಿಡಿಒ ಯು. ಮಲ್ಲಿಕಾರ್ಜುನ ಮತ್ತು ಉಪಾಧ್ಯಕ್ಷೆ ನಂದಿನಿ ವೆಂಕಟೇಶ ಭೋವಿ ಅವರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆ ಇದೀಗ ಕ್ರಮವಾಗಿದೆ.

ಹಣವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ 2021-22 ಹಾಗೂ 2022-23ನೇ ಸಾಲಿನಲ್ಲಿ ಖಾಸಗಿ ಸಂಸ್ಥೆಗಳ ಹೆಸರು ಸೂಚಿಸಿ ಆಗಿನ ಅಧ್ಯಕ್ಷೆಯಾಗಿದ್ದ ನಂದಿನಿ, ತಮ್ಮ ಸಂಬಂಧಿಕರ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಸರ್ಕಾರದ ಅನುದಾನ ಹೊರತು ಪಡಿಸಿ ಕರವಸೂಲಿಯಲ್ಲಿ ಈ ಕಾಮಗಾರಿಗಳಿಗೆ ಹಣ ಸಂದಾಯ ಮಾಡಲು ಅವಕಾಶವಿಲ್ಲದ್ದರ ಮಧ್ಯೆಯೂ ನಿಯಮಬಾಹಿರವಾಗಿ ಪಿಡಿಒ ಮಲ್ಲಿಕಾರ್ಜುನ ಅವರ ಜತೆ ಶಾಮೀಲಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಯಂಕಮ್ಮ ದೂರು ದಾಖಲಿಸಿದ್ದರು.

ಇದನ್ನೂ ಓದಿ: Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

ಅಧಿಕಾರಿಗಳು ಸಲ್ಲಿಸಿದ ಹಣಕಾಸು ಅಕ್ರಮದ ವರದಿ ಶಿಫಾರಸ್ಸಿನ ಮೇರೆಗೆ ಹಣವಾಳ ಗ್ರಾಮ ಪಂಚಾಯಿತಿಯ ಆಗಿನ ಅಧ್ಯಕ್ಷೆ, ಹಾಲಿ ಉಪಾಧ್ಯಕ್ಷೆ ನಂದಿನಿ ಅವರನ್ನು ಹುದ್ದೆಯಿಂದ ಅನರ್ಹತೆ ಮಾಡಿ ಹಾಗೂ ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸಿ ಹಾಗೂ ಮುಂದಿನ ಆರು ವರ್ಷ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ, ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Rain News: ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಅದೇ ರೀತಿ ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿರುವುದರಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯ ಕಿನ್ನಾಳ ರಸ್ತೆ ಜಲಾವೃತವಾಗಿರುವುದು.
Koo

ವಿಜಯನಗರ/ಕೊಪ್ಪಳ: ರಾಜ್ಯದ ವಿಜಯನಗರ, ಕೊಪ್ಪಳ ಜಿಲ್ಲೆಯ ಹಲವೆಡೆ ಬುಧವಾರ ಮಳೆ (Rain News) ಆರ್ಭಟಿಸಿದ್ದು, ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ರಸ್ತೆಗಳು ಕೆರೆಗಳಂತೆ ಬದಲಾಗಿದ್ದವು. ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆ ಸೇರಿ ಸುತ್ತಮುತ್ತಲಿನ ಹಂಪಿ, ಕಮಲಾಪುರ, ಚಿತ್ತವಾಡಗಿ, ಶಾನಭಾಗ ಸರ್ಕಲ್ ಸೇರಿ ಹಲವು ಕಡೆ ನಿರಂತರ ಮಳೆ ಸುರಿದಿದ್ದರಿಂದ ಬೈಕ್ ಸವಾರರು ಹೈರಾಣಾದರು. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಕೂಡ್ಲಿಗಿ ತಾಲೂಕಿನಲ್ಲಿ ಹಳ್ಳದಂತಾದ ರಸ್ತೆಗಳು

ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಕೂಡ್ಲಿಗಿ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ಹಳ್ಳದಂತೆ ಮಳೆ ನೀರು ಹರಿಯಿತು. ಇದರಿಂದ ದೊಡ್ಡ ಪ್ರಮಾಣದಲ್ಲಿ ಗ್ರಾಮದೊಳಕ್ಕೆ ನೀರು ನುಗಿದ್ದರಿಂದ ಜನ ಪರದಾಡುವಂತಾಗಿದೆ. ಇನ್ನು ಹೊಸಪೇಟೆಯ ರಾಣಿಪೇಟೆಯಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಹೊಸಪೇಟೆಯಲ್ಲಿ ಭಾರಿ ಮಳೆ: ಮಳೆಯಿಂದಾಗಿ ಹೊಸಪೇಟೆಯ ಕೆಲವು ರಸ್ತೆಗಳು ಕೆರೆಯಂತಾಗಿದ್ದವು. ಕಾಲೇಜು ರಸ್ತೆ, ನೂರು ಹಾಸಿಗೆ ಆಸ್ಪತ್ರೆ ರಸ್ತೆ ಸೇರಿದಂತೆ ಕೆಲವು ಕಡೆ ಹಳ್ಳದಂತೆ ಮಳೆ ನೀರು ಹರಿಯಿತು. ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬೈಕ್‌ಗಳು ಅರ್ಧಕ್ಕರ್ಧ ಮುಳುಗಿದವು. ಮಳೆ ನೀರು ರಸ್ತೆ ಮೇಲೆಯೇ ನಿಂತಿದ್ದರಿಂದ ವಾಹನ ಸವಾರರು ಹೈರಾಣಾದರು.

ಕೊಪ್ಪಳ ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಭರ್ಜರಿ ಮಳೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೊಪ್ಪಳ ನಗರದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಗೆ ರಸ್ತೆಗಳು ಹಳ್ಳಗಳಾಗಿ ಪರಿವರ್ತನೆಯಾಗಿವೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗುತ್ತಿರುವುದರಿಂದ ಜನರಿಗೆ ತೊಂದರೆಯಾಗಿದೆ.

ಇದನ್ನೂ ಓದಿ | Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಜಿಲ್ಲೆಯ ಕಿನ್ನಾಳದಲ್ಲಿ ರಾಜಕಾಲುವೆ ತುಂಬಿ ಹರಿದಿದ್ದರಿಂದ ರಸ್ತೆ ತುಂಬೆಲ್ಲಾ ನೀರು ಆವರಿಸಿತ್ತು. ಇದರಿಂದ ಮಂಗಳೂರು, ಕಿನ್ನಾಳ ಗ್ರಾಮಗಳಿಗೆ ತೆರಳಲು ಜನರ ಪರದಾಡಿದರು. ಪ್ರಗತಿ ನಗರ, ಕಲ್ಯಾಣ ನಗರಗಳಿಗೆ ತೆರಳಲೂ ಸಹ ಜನರ ಪರದಾಡುವಂತಾಯಿತು.

Continue Reading

ಧಾರ್ಮಿಕ

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Ballari News: ಬಳ್ಳಾರಿ ಜಿಲ್ಲೆಯ‌ ಸುಕ್ಷೇತ್ರ ಚೇಳ್ಳಗುರ್ಕಿ ಶ್ರೀ ಎರ್ರಿತಾತನವರ ಮಹಾರಥೋತ್ಸವವು ಸಾವಿರಾರು ಭಕ್ತ ಸಮೂಹ ಮಧ್ಯೆ ಭಕ್ತಿ ಭಾವದಿಂದ ಬುಧವಾರ ಸಂಜೆ ನೆರವೇರಿತು. ರಥಕ್ಕೆ ಭಕ್ತರು ಹೂವು-ಹಣ್ಣು ಸಮರ್ಪಿಸುವ ಮೂಲಕ ಭಕ್ತಿ ಭಾವ ಮೆರೆದರು. ಮಳೆಯ ಮಧ್ಯೆ ರಥೋತ್ಸವವು ಸಂಭ್ರಮದಿಂದ ನಡೆಯಿತು.

VISTARANEWS.COM


on

Chellagurki Shri Yerrithathanavara Maharathotsava in Ballari
Koo

ಬಳ್ಳಾರಿ: ಜಿಲ್ಲೆಯ‌ ಸುಕ್ಷೇತ್ರ ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವವು ಸಾವಿರಾರು ಭಕ್ತ ಸಮೂಹದ ಮಧ್ಯೆ ಭಕ್ತಿ ಭಾವದಿಂದ ಬುಧವಾರ ಸಂಜೆ ನೆರವೇರಿತು. ರಥಕ್ಕೆ ಭಕ್ತರು ಹೂವು-ಹಣ್ಣು ಸಮರ್ಪಿಸುವ ಮೂಲಕ ಭಕ್ತಿ ಭಾವ ಮೆರೆದರು. ಮಳೆಯ ಮಧ್ಯೆ ರಥೋತ್ಸವವು ಸಂಭ್ರಮದಿಂದ (Ballari News) ಜರುಗಿತು.

ಮಹಾರಥೋತ್ಸವದ ನಂತರ ಹರಕೆ ಹೊತ್ತ ಭಕ್ತರು ಕರ್ಪೂರ ಆರತಿಯೊಂದಿಗೆ ಪ್ರದಕ್ಷಿಣೆ ಮಾಡಿ, ತಮ್ಮ ಹರಕೆ‌ ತೀರಿಸಿದರು. ಮಹಾರಥೋತ್ಸವದ ಅಂಗವಾಗಿ ಶ್ರೀ ಎರ‍್ರಿತಾತನವರ ಮೂರ್ತಿಗೆ ವಿಶೇಷ ಅಲಂಕಾರ ಮತ್ತು ವಿವಿಧ ಅಭಿಷೇಕ, ವಿಶೇಷ ಪೂಜೆ ನೆರವೇರಿಸಲಾಯಿತು.

ಬುಧವಾರ ಬೆಳಿಗ್ಗೆ ಮಹಾರಥೋತ್ಸವದ ಅಂಗವಾಗಿ ಸತತ ಏಳು ದಿನಗಳಿಂದ ಹಗಲಿರುಳು ನಡೆದ ಸಪ್ತಭಜನೆ ಮುಕ್ತಾಯ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಶ್ರೀ ಎರ‍್ರಿತಾತನವರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಉರವಕೊಂಡದ ಗವಿಮಠ ಸಂಸ್ಥಾನದ ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿದರು.

ನಂತರ ಶ್ರೀ ಎರ‍್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್‌ನ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿ, ರಕ್ತದಾನದ ಮಹತ್ವ ಕುರಿತು ತಿಳಿಸಿಕೊಟ್ಟರು.

ಇದನ್ನೂ ಓದಿ: Munnar Tour: ಮುನ್ನಾರ್‌ನ ಈ 5 ರಮಣೀಯ ಸ್ಥಳಗಳನ್ನು ನೋಡಲೇಬೇಕು!

ಜೂ.13ರಂದು ಗುರುವಾರ ಸಂಜೆ 7 ಗಂಟೆಗೆ ಹೂವಿನ ರಥೋತ್ಸವ, ನಂತರ ಬಾಣೋತ್ಸವ ನಡೆಯಲಿದೆ.

Continue Reading
Advertisement
Tips For Rainy Season
ಆರೋಗ್ಯ22 mins ago

Tips For Rainy Season: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

Alcohal
ಪ್ರಮುಖ ಸುದ್ದಿ1 hour ago

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

Dina Bhavishya
ಪ್ರಮುಖ ಸುದ್ದಿ1 hour ago

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Hassan Ali
ದೇಶ7 hours ago

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

IND vs USA
ಪ್ರಮುಖ ಸುದ್ದಿ7 hours ago

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

disqualification for hanawala Gram Panchayat Vice President and Cancellation of membership ordered
ಕರ್ನಾಟಕ7 hours ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ7 hours ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Virat Kohli
ಕ್ರೀಡೆ8 hours ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Mumbai
ಪ್ರಮುಖ ಸುದ್ದಿ8 hours ago

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

ICC T20 Rankings
ಕ್ರೀಡೆ9 hours ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌