Dr CN Manjunath: ಶ್ರೀರಾಮ ತಂಗಿದ ನಾಡು ರಾಮನಗರದ ಹೆಸರು ಬದಲಾವಣೆ ಬೇಡ: ಸಿಎಂಗೆ ಪತ್ರ ಬರೆದ ಡಾ. ಸಿ ಎನ್‌ ಮಂಜುನಾಥ್‌ - Vistara News

ಕರ್ನಾಟಕ

Dr CN Manjunath: ಶ್ರೀರಾಮ ತಂಗಿದ ನಾಡು ರಾಮನಗರದ ಹೆಸರು ಬದಲಾವಣೆ ಬೇಡ: ಸಿಎಂಗೆ ಪತ್ರ ಬರೆದ ಡಾ. ಸಿ ಎನ್‌ ಮಂಜುನಾಥ್‌

Dr CN Manjunath: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡೋದು ಸಮಂಜಸವಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಶ್ರೀರಾಮ ರಾಮಗಿರಿಯಲ್ಲಿ ತಂಗಿರುವ ಇತಿಹಾಸವಿದೆ ಎಂದು ಡಾ. ಸಿಎನ್‌ ಮಂಜುನಾಥ್‌ (Dr CN Manjunath) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

VISTARANEWS.COM


on

DR CN Manjunath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಶ್ರೀರಾಮ ತಂಗಿದ ನಾಡಾಗಿರುವ ರಾಮನಗರ ಜಿಲ್ಲೆಯನ್ನು (Ramanagar District) ಬೆಂಗಳೂರು ದಕ್ಷಿಣ ಜಿಲ್ಲೆ (Bangalore South District) ಎಂದು ಮರುನಾಮಕರಣ ಮಾಡಬಾರದು ಎಂದು ಬೆಂಗಳೂರು ಗ್ರಾಮಾಂತರ (Bangalore Rural) ಕ್ಷೇತ್ರದ ಸಂಸದ ಡಾ. ಸಿ ಎನ್‌ ಮಂಜುನಾಥ್‌ (Dr CN Manjunath) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡೋದು ಸಮಂಜಸವಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಶ್ರೀರಾಮ ರಾಮಗಿರಿಯಲ್ಲಿ ತಂಗಿರುವ ಇತಿಹಾಸವಿದೆ. ಕ್ಲೋಸ್‌ಪೇಟೆಗೆ ರಾಮನಗರವೆಂದು ಮರುನಾಮಕರಣ ಮಾಡಲಾಗಿದೆ. ರಾಮನಗರವು ರೇಷ್ಮೆ ನಾಡೆಂದೇ ಪ್ರಸಿದ್ದಿಯಾಗಿದೆ. ಇಲ್ಲಿರೋ ರಾಮನಗರ, ಚನ್ನಪಟ್ಟಣ ಎಲ್ಲಾ ಜಾಗಗಳು ಆಯಾ ಹೆಸರಿನಿಂದಲೇ ಮಹತ್ವ ಪಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಬೆಂಗಳೂರು ದಕ್ಷಿಣ ತಾಲ್ಲೂಕು ಅಸ್ತಿತ್ವದಲ್ಲಿದ್ದು ಬೆಂಗಳೂರು ನಗರ ಜಿಲ್ಲೆಗೆ ಸೇರಿರುತ್ತದೆ. ಹೀಗಿರುವಾಗ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿದರೆ ಹೆಚ್ಚು ಗೊಂದಲ ಸೃಷ್ಟಿಯಾಗುತ್ತದೆ. ಅಲ್ಲದೆ ಮುಂಬರುವ ದಿನಗಳಲ್ಲಿ ಕೋಲಾರ ಜಿಲ್ಲೆಗೆ ಬೆಂಗಳೂರು ಪೂರ್ವ ಜಿಲ್ಲೆಯೆಂದು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆಯೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗಳು ಬಂದು ಇನ್ನಷ್ಟು ಗೊಂದಲ ಸೃಷ್ಟಿಸಲಿವೆ ಎಂದಿದ್ದಾರೆ.

ರಾಮನಗರ ಜಿಲ್ಲೆಯು ರೈತರ ಜಿಲ್ಲೆಯಾಗಿ ಉಳಿಯಬೇಕೇ ಹೊರತು ರಿಯಲ್ ಎಸ್ಟೇಟ್ ಬಿಲ್ಡರ್‌ಗಳ ತಾಣವಾಗಬಾರದು. ರೈತರ ಬಾಳು ಹಸನಾಗಬೇಕಾದರೆ ಭೂಮಿಯ ಬೆಲೆ ಅಧಿಕವಾಗುವುದಕ್ಕಿಂತ ರೈತರು ಬೆಳೆದ ಬೆಳೆಯ ಬೆಲೆಯು ಅಧಿಕವಾಗಬೇಕು. ದಯವಿಟ್ಟು ಸನ್ಮಾನ್ಯ ಮುಖ್ಯಮಂತ್ರಿಯವರು ಈ ಪ್ರಸ್ತಾವನೆಯನ್ನು ತಿರಸ್ಕರಿಸಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಮನವಿ ಮಾಡಿದ್ದಾರೆ.

ಬ್ರಾಂಡ್‌ ರಾಮನಗರ ಬೆಳೆಸಿ

ಇಂದು ಮಾಗಡಿಯಲ್ಲಿ ಮಾತನಾಡಿರುವ ಸಂಸದ ಮಂಜುನಾಥ್, ಹೆಸರು ಬದಲಾವಣೆಗೆ ತಮ್ಮ ಖಂಡತುಂಡವಾದ ವಿರೋಧವನ್ನು ವ್ಯಕ್ತಪಡಿಸಿದರು. ಯಾವುದೇ ಡಿಕ್ಷನರಿ ನೋಡಿದ್ರೂ ರಾಮನಗರಕ್ಕಿಂತ ಒಳ್ಳೆ ಪದ ಬೇರೊಂದು ಸಿಗೋದಿಲ್ಲ. ಆ ಹೆಸರಿಗೆ ಭಾವನಾತ್ಮಕ, ಧಾರ್ಮಿಕ, ಪೌರಾಣಿಕ ಸಂಬಂಧ ಇದೆ. ಕೇವಲ ಹೆಸರು ಬದಲಾವಣೆ ಮಾಡೋದ್ರಿಂದ ಅಭಿವೃದ್ಧಿ ಆಗಲ್ಲ. ಈ ರೀತಿ ಮಾಡೋದಾದ್ರೆ ಬ್ರಾಂಡ್ ರಾಮನಗರ ಅಂತ ಡೆವಲಪ್ ಮಾಡಿ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಬೃಹತ್ತಾಗಿ ಬೆಳೆದು ಅಲ್ಲೇ ಸಾಕಷ್ಟು ಮೂಲಭೂತ ಸಮಸ್ಯೆಗಳಿವೆ. ಭೂಮಿಗೆ ಬೆಲೆ ಜಾಸ್ತಿ ಆದರೆ ಪ್ರಯೋಜನ ಇಲ್ಲ. ಭೂಮಿಯಲ್ಲಿ ಬೆಳೆಯುವ ಬೆಳೆಗೆ ಬೆಲೆ ಜಾಸ್ತಿ ಆಗಬೇಕು. ಯಾವ ಉದ್ದೇಶಕ್ಕೆ ಈ ರೀತಿ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ. ಬದಲಾವಣೆ ಮಾಡಬಾರದು ಅಂತ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಇದು ರೇಷ್ಮೆ ನಾಡಾಗಿಯೇ ಉಳಿಯಬೇಕು. ರೈತರ ಜಿಲ್ಲೆಯಾಗಿಯೇ ಉಳಿಯಬೇಕು. ಬದಲಾವಣೆ ವೈಜ್ಞಾನಿಕವಾಗಿಯೂ ಸಮಂಜಸ ಅಲ್ಲ ಎಂದಿದ್ದಾರೆ ಮಂಜುನಾಥ್.

‌ʼಜಿಲ್ಲೆ ಮರು ನಾಮಕರಣಕ್ಕೆ ಹಾಸನದವರದು ಮಾತ್ರ ವಿರೋಧʼ ಎಂಬ ಶಾಸಕ ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ʼನಾವು 40 ವರ್ಷದಿಂದ ಬೆಂಗಳೂರಲ್ಲೆ ಇದ್ದೇವೆ. ಈ ಹೇಳಿಕೆ ಕೊಟ್ಟವರೇ ಬೆಂಗಳೂರಿನಲ್ಲಿ ಇರಲಿಲ್ಲ. ಹಿಂದೆ ರಾಮನಗರ ಬೆಂಗಳೂರು ಗ್ರಾಮಾಂತರ ಜಿಲ್ಲೆಯೆ ಆಗಿತ್ತು. ಒಂದು ಸರಿಯಾದ ಮೆಡಿಕಲ್ ಕಾಲೇಜು ಮಾಡಲು ಆಗಿಲ್ಲ. ವೈದ್ಯರ ನೇಮಕ ಮಾಡಲು ಆಗಿಲ್ಲ. ಮೊದಲು ಅದನ್ನು ಮಾಡಿʼ ಎಂದು ಬಾಲಕೃಷ್ಣಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: DK Shivakumar: ರಾಮನಗರ ಜಿಲ್ಲೆ ಹೆಸರು ಬದಲಾವಣೆ; ಡಿಕೆಶಿ- ಎಚ್‌ಡಿಕೆ ನಡುವೆ ಮತ್ತೊಂದು ಮಹಾಸಮರಕ್ಕೆ ಮುನ್ನುಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

Kannada In Madrasa: ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ. ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ.

VISTARANEWS.COM


on

Kannada In Madrasa
Koo

ಬೆಂಗಳೂರು: ಕರ್ನಾಟಕದ ಮದರಸಾಗಳಲ್ಲಿ ಉರ್ದುವಿನಲ್ಲೇ ಬೋಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕನ್ನಡ ಕಲಿಕೆಗೂ (Kannada In Madrasa) ರಾಜ್ಯ ಸರ್ಕಾರವು (Karnataka Government) ಪ್ರಾಮುಖ್ಯತೆ ನೀಡಲು ಮುಂದಾಗಿದೆ. ಇನ್ನುಮುಂದೆ ರಾಜ್ಯದ ಮದರಸಾಗಳಲ್ಲಿ (Madrasas In Karnataka) ಕಡ್ಡಾಯವಾಗಿ ಕನ್ನಡದಲ್ಲೇ ಬೋಧನೆ ಮಾಡಬೇಕು ಎಂಬ ದಿಸೆಯಲ್ಲಿ ಆದೇಶ ಹೊರಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಈ ಕುರಿತಂತೆ ಕನ್ನಡ ಕಡ್ಡಾಯಗೊಳಿಸಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಸಾವಿರಾರು ಮದರಸಾಗಳಿದ್ದು, ಮುಸ್ಲಿಂ ವಿದ್ಯಾರ್ಥಿಗಳಿಗೆ ಬೋಧಕರು ಕನ್ನಡದಲ್ಲಿ ಪಾಠ ಮಾಡಲು, ಕನ್ನಡ ಕಲಿಸಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಕನ್ನಡದಲ್ಲೇ ಪಾಠ ಮಾಡಬೇಕು. ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ. ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ.

ಮದರಸಾಗಳಲ್ಲಿ ರಾಮನ ಕುರಿತು ಅಧ್ಯಯನ

ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಆ ಮೂಲಕ ಇನ್ನು ಮುಸ್ಲಿಂ ವಿದ್ಯಾರ್ಥಿಗಳು ಕೂಡ ರಾಮನ ಕುರಿತು ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದು ಧಾರ್ಮಿಕ ಸೌಹಾರ್ದತೆಯ ಸಂಕೇತವೂ ಆಗಿದೆ ಎನ್ನಲಾಗುತ್ತಿದೆ.

ಹೌದು, ಈ ಕುರಿತು ಉತ್ತರಾಖಂಡ ವಕ್ಫ್‌ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ ಶಾಮ್ಸ್‌ ಅವರೇ ಕೆಲ ತಿಂಗಳ ಹಿಂದೆ ಮಾಹಿತಿ ನೀಡಿದ್ದರು. “ಮದರಸಾ ಆಧುನೀಕರಣ ಯೋಜನೆಯ ಭಾಗವಾಗಿ ಇನ್ನು ಮುಂದೆ ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತ ಪಠ್ಯಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಮುಸ್ಲಿಂ ವಿದ್ಯಾರ್ಥಿಗಳು ಪ್ರವಾದಿ ಮೊಹಮ್ಮದರ ಜತೆಗೆ ಶ್ರೀರಾಮನ ಕುರಿತು ಕೂಡ ಅಧ್ಯಯನ ಮಾಡಲಿದ್ದಾರೆ” ಎಂದು ತಿಳಿಸಿದ್ದರು.

ಶಾದಾಬ್‌ ಶಾಮ್ಸ್‌ ಅವರು ಬಿಜೆಪಿ ಮುಖಂಡರೂ ಆಗಿದ್ದು, ಅವರು ಮದರಸಾಗಳಲ್ಲಿ ಬೋಧನೆ ಮಾಡುವ ಮೌಲ್ವಿಗಳನ್ನೂ ಒಪ್ಪಿಸಿದ್ದಾರೆ. ಧರ್ಮ, ಜಾತಿಯ ಸಂಕೋಲೆಗಳು ಇಲ್ಲದೆಯೇ ರಾಮನನ್ನು ಆರಾಧಿಸಬಹುದು. ಆತನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂಬ ಮನೋಭಾವದಿಂದ ಶಾದಾಬ್‌ ಶಾಮ್ಸ್‌ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಉತ್ತರಾಖಂಡದ ವಕ್ಫ್‌ ಬೋರ್ಡ್‌ ವ್ಯಾಪ್ತಿಗೆ ಸುಮಾರು 117 ಮದರಸಾಗಳು ಬರುತ್ತವೆ. ಡೆಹ್ರಾಡೂನ್, ಹರಿದ್ವಾರ, ಉಧಾಮ್‌ ಸಿಂಗ್‌ ನಗರ ಹಾಗೂ ನೈನಿತಾಲ್‌ ಜಿಲ್ಲೆ ಸೇರಿ ಹಲವೆಡೆ ವಕ್ಫ್‌ ಬೋರ್ಡ್‌ ವ್ಯಾಪ್ತಿಯ ಮದರಸಾಗಳಲ್ಲಿ ರಾಮನ ಕುರಿತ ಅಧ್ಯಾಯಗಳನ್ನು ಸೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Madrasa: ಉತ್ತರ ಪ್ರದೇಶದಲ್ಲಿ ಮದರಸಾ ಶಿಕ್ಷಣ ರದ್ದುಪಡಿಸುವ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Continue Reading

ಕ್ರೈಂ

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Horrible Murder Case: ನೀಚರು ಮೊದಲಿಗೆ ಶೆಡ್ ಹೊರಗಿನಿಂದ ಲಾಕ್ ಮಾಡಿ, ಶೆಡ್ ಪಕ್ಕದಲ್ಲಿದ್ದ ಸಿಂಟ್ಯಾಕ್ಸ್‌ಗೆ ಸುಮಾರು 100 ಲೀಟರ್ ಪೆಟ್ರೋಲ್ ಸುರಿದಿದ್ದಾರೆ. 2 ಎಚ್‌ಪಿ ಮೆಷಿನ್‌ನಿಂದ ಶೆಡ್ ಸುತ್ತ ಪೆಟ್ರೋಲ್ ಹೊಡೆದು ಬೆಂಕಿ ಹಚ್ಚಿರುವ ಶಂಕೆ ಇದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಶೆಡ್ ಸುಟ್ಟು ಕರಕಲಾಗಿದೆ.

VISTARANEWS.COM


on

murder case set fire bagalakote
Koo

ಬಾಗಲಕೋಟೆ: ಪಾತಕಿಗಳು ಶೆಡ್‌ನ ಬಾಗಿಲು ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಕೊಟ್ಟ (set fire) ಪರಿಣಾಮ ಒಂದೇ ಕುಟುಂಬದ ಇಬ್ಬರು ಸಜೀವವಾಗಿ (Burn to death) ಸುಟ್ಟುಹೋಗಿದ್ದಾರೆ. ಇನ್ನೂ ಇಬ್ಬರು ಸುಟ್ಟ ಗಾಯಗಳೊಂದಿಗೆ ಸಾವು ಬದುಕಿನ ನಡುವೆ ಸೆಣಸಾಡುತ್ತಿದ್ದಾರೆ. ಈ ಭಯಾನಕ ಹತ್ಯಾಕಾಂಡ ಪ್ರಕರಣ (Horrible Murder Case) ಬಾಗಲಕೋಟೆ (Bagalakote news) ಜಿಲ್ಲೆ ಮುಧೋಳ (Mudhol news) ತಾಲ್ಲೂಕಿನ ಬೆಳಗಲಿಯಲ್ಲಿ ನಡೆದಿದೆ.

ಬೆಳಗಲಿ ಪಟ್ಟಣದ ತೋಟದ ಮನೆಯಲ್ಲಿ ಈ ಘೋರ ಕೃತ್ಯ ಎಸಗಲಾಗಿದೆ. ಕುಟುಂಬ ಸಮೇತ ಸುಟ್ಟು ಹಾಕುವ ಉದ್ದೇಶದಿಂದಲೇ ದುಷ್ಟರು ತಡರಾತ್ರಿ ತಗಡಿನ ಶೆಡ್‌ನ ಬಾಗಿಲು ಹೊರಗಿನಿಂದ ಲಾಕ್‌ ಮಾಡಿ, ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ್ದಾರೆ. ದುರಂತದಲ್ಲಿ ಜೈಬಾನ್ ಪೆಂಡಾರಿ (60), ಶಭಾನಾ ಪೆಂಡಾರಿ (22) ಸಾವಿಗೀಡಾಗಿದ್ದಾರೆ. ದಸ್ತಗೀರ್ ಸಾಬ್ ಪೆಂಡಾರಿ (60), ಶುಭನ್ ಪೆಂಡಾರಿ (26) ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಮುಧೋಳ ತಾಲ್ಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡರಾತ್ರಿ 2:30ರ ಸುಮಾರಿಗೆ ಈ ಬರ್ಬರ ಕೃತ್ಯ ಎಸಗಲಾಗಿದೆ. ನೀಚರು ಮೊದಲಿಗೆ ಶೆಡ್ ಹೊರಗಿನಿಂದ ಲಾಕ್ ಮಾಡಿ, ಶೆಡ್ ಪಕ್ಕದಲ್ಲಿದ್ದ ಸಿಂಟ್ಯಾಕ್ಸ್‌ಗೆ ಸುಮಾರು 100 ಲೀಟರ್ ಪೆಟ್ರೋಲ್ ಸುರಿದಿದ್ದಾರೆ. 2 ಎಚ್‌ಪಿ ಮೆಷಿನ್‌ನಿಂದ ಶೆಡ್ ಸುತ್ತ ಪೆಟ್ರೋಲ್ ಹೊಡೆದು ಬೆಂಕಿ ಹಚ್ಚಿರುವ ಶಂಕೆ ಇದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಶೆಡ್ ಸುಟ್ಟು ಕರಕಲಾಗಿದೆ.

ಮೃತರು ಹಾಗೂ ಗಾಯಾಳುಗಳು ಒಂದೇ ಕುಟುಂಬದವರು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪರಿಚಿತರೇ ಕೃತ್ಯ ಎಸಗಿರುವ ಶಂಕೆ ಇದೆ. ಕುಟುಂಬದ ಬಗೆಗೆ ವೈಯಕ್ತಿಕ ದ್ವೇಷ ಹೊಂದಿದ್ದವರು, ಕುಟುಂಬವನ್ನು ಸ್ಥಳದಿಂದ ಒಕ್ಕಲೆಬ್ಬಿಸಲು ಬಯಸಿದವರು, ಕೌಟುಂಬಿಕ ದ್ವೇಷ ಹಾಗೂ ಜಮೀನು ವ್ಯಾಜ್ಯ ಹೊಂದಿದವರನ್ನು ಪ್ರಶ್ನಿಸಲಾಗುತ್ತಿದೆ.

ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಬೆಂಗಳೂರಿನ ಬೀದಿಯಲ್ಲಿ ಹಾಡಹಗಲೇ ನಡೆದ ರಾಜಾರೋಷ ಹಲ್ಲೆಯೊಂದರ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿ ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಇದು ಮೆಟ್ರೋ ನಗರದ ಮಾನ ತೆಗೆಯುತ್ತಿದೆ. ವಿದ್ಯಾರಣ್ಯಪುರದಲ್ಲಿ ಘಟನೆ ನಡೆದಿದೆ.

15 ಜನ ಪುಂಡರು ಒಬ್ಬ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲೂ ಯುವಕನ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ನರಸೀಪುರ ಬಳಿ ನಡೆದ ಘಟನೆಯಿದು. ಹಲ್ಲೆಗೊಳಗಾದವನು ಹಾಗೂ ಹಲ್ಲೆ ಮಾಡಿದವರ ಕುರಿತ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಹಲ್ಲೆಯಿಂದ‌ ಯುವಕನ‌ ಮುಖ ಮತ್ತು ಮೂಗಿನ‌ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಈಶಾನ್ಯ ಡಿಸಿಪಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಲಾಗಿದೆ. ʼಬಿಎನ್‌ಎಸ್ 109 ಅಂದರೆ ಕೊಲೆ‌ ಯತ್ನ?ʼ ಎಂದು ಉಲ್ಲೇಖಿಸಿ ಪೋಸ್ಟ್‌ ಮಾಡಲಾಗಿದೆ.

ಇದನ್ನೂ ಓದಿ: Crime News: ಶಾಕಿಂಗ್‌; 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕರು

Continue Reading

ಕ್ರೀಡೆ

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Karnataka Assembly: ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

VISTARANEWS.COM


on

Karnataka Assembly
Koo

ಬೆಂಗಳೂರು: ಟಿ20 ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌, ಕನ್ನಡಿಗ ರಾಹುಲ್‌ ದ್ರಾವಿಡ್‌(Rahul Dravid) ಅವರಿಗೆ ಅಭಿನಂದಿಸುವ ನಿರ್ಣಯವನ್ನು ವಿಧಾನಸಭೆ ತೆಗೆದುಕೊಳ್ಳಬೇಕೆಂದು ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್(S. Suresh Kumar) ಆಗ್ರಹಿಸಿದ್ದಾರೆ. ಇದಕ್ಕೆ ಸ್ಪೀಕರ್‌ ಯು.ಟಿ. ಖಾದರ್‌(U. T. Khader) ಸಹಮತ ವ್ಯಕ್ತಪಡಿಸಿ ಈ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಭಾರತ ತಂಡ 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಗೆಲ್ಲುವಂತಾಗಲು ಕೋಚ್​ ರಾಹುಲ್‌ ದ್ರಾವಿಡ್‌ ಅವರ ತರಬೇತಿ ಹಾಗೂ ಮಾರ್ಗದರ್ಶನವೂ ಮಹತ್ವದ ಪಾತ್ರ ವಹಿಸಿದೆ. ಹೀಗಾಗಿ ಈ ಸದನ ಒಕ್ಕೊರಲಿನಿಂದ ಅವರನ್ನು ಅಭಿನಂದಿಸುವ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸುರೇಶ್‌ ಕುಮಾರ್‌ ಹೇಳಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸ್ಪೀಕರ್‌ ಯು.ಟಿ. ಖಾದರ್‌, “ಈ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ದ್ರಾವಿಡ್‌ ಅವರನ್ನು ಅಭಿನಂದಿಸುವ ನಿರ್ಣಯವನ್ನು ತಕ್ಷಣ ಮಂಡಿಸುವುದಕ್ಕೆ ಸೂಚನೆ ನೀಡಲಾಗುವುದು’ ಎಂದರು.

ಕಳೆದ ವಾರ ಬೆಂಗಳೂರಿನ(Bengaluru) ಕ್ರಿಕೆಟ್​ ಅಕಾಡೆಮಿಯ ವಿದ್ಯಾರ್ಥಿಗಳು ಗಾರ್ಡ್‌ ಆಫ್‌ ಹಾನರ್‌ (ಗೌರವ ವಂದನೆ) ಮೂಲಕ(guard of honour) ದ್ರಾವಿಡ್​ಗೆ ಅಭಿನಂದಿಸಿದ್ದರು.

ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು. ದ್ರಾವಿಡ್​ ಕೂಡ ಸಂತಸದಿಂದಲೇ ಎಲ್ಲರ ಕೈ ಕುಲುಕಿ ಧನ್ಯವಾದ ತಿಳಿಸಿದ್ದರು.

ದ್ರಾವಿಡ್​ಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗವಾಸ್ಕರ್


ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

ಇದನ್ನೂ ಓದಿ Rahul Dravid : ತಮಗೆ ನೀಡಿದ 2.5 ಕೋಟಿ ರೂಪಾಯಿ ನಿರಾಕರಿಸಿ ಸಮಾನತೆ ತತ್ವ ಸಾರಿದ ರಾಹುಲ್ ದ್ರಾವಿಡ್​

ದ್ರಾವಿಡ್​ ಆಟಗಾರರಾಗಿ ಮತ್ತು ತಂಡದ ನಾಯಕರಾಗಿ ವಿದೇಶಗಳಲ್ಲಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್​ನಲ್ಲಿ ಗೆಲ್ಲುವುದು ಅಸಾಧ್ಯ ಎಂಬ ಕಾಲದಲ್ಲಿ ಅವರು ಭಾರತಕ್ಕೆ ಸರಣಿ ಗೆಲುವನ್ನು ತಂದಿದ್ದಾರೆ. ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿರುವ ಕೇವಲ ಮೂರು ಭಾರತೀಯ ನಾಯಕರ ಪೈಕಿ ಅವರು ಕೂಡ ಒಬ್ಬರಾಗಿದ್ದಾರೆ. ಈ ಹಿಂದೆ, ಅವರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಹೊರತಂದಿದ್ದಾರೆ. ಬಳಿಕ ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಕೋಚ್ ಆಗಿ ಉತ್ತಮ ನಿರ್ವಹಣೆ ನೀಡಿದ್ದಾರೆ ಎಂದು ಗವಾಸ್ಕರ್​ ಬರೆದುಕೊಂಡಿದ್ದಾರೆ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ವಿಶ್ವಕಪ್​ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತಿದ್ದಾರೆ. ಸದ್ಯ ಕೋಚ್​ ಹುದ್ದೆಯಿಂದ ಕೆಳಗಿಳಿದಿರುವ ದ್ರಾವಿಡ್​ ತಮ್ಮ ಇಬ್ಬರು ಮಕ್ಕಳ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

Continue Reading

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

Valmiki Corporation Scam: ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಜೊತೆ ಸತತ ಸಂಪರ್ಕದಲ್ಲಿದ್ದ ಈ ಆರೋಪಿ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲು ಸಹಕಾರ ನೀಡಿದ್ದ. ಇದೇ ರೀತಿ ಈ ಹಿಂದೆಯೂ ಈ ಆರೋಪಿಗಳು ಕೃತ್ಯ ಎಸಗಿದ್ದರು.

VISTARANEWS.COM


on

valmiki corporation scam culprits
ಬಂಧಿತ ಆರೋಪಿಗಳು
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ (Valmiki Corporation Scam) ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ (SIT) ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಜೊತೆ ಸತತ ಸಂಪರ್ಕದಲ್ಲಿದ್ದ ಈ ಆರೋಪಿ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲು ಸಹಕಾರ ನೀಡಿದ್ದ. ಇದೇ ರೀತಿ ಈ ಹಿಂದೆಯೂ ಈ ಆರೋಪಿಗಳು ಕೃತ್ಯ ಎಸಗಿದ್ದರು. ಛತ್ತೀಸ್‌ಗಢದಲ್ಲಿ ಸತ್ಯನಾರಾಯಣ ವರ್ಮಾ ಹಾಗೂ ಶ್ರೀನಿವಾಸ ರಾವ್ ಸೇರಿ ಇಂಥದೇ ಕೃತ್ಯ ಎಸಗಿದ್ದಾರೆ. ಅದೇ ರೀತಿ ನಿಗಮದ ಅಕೌಂಟ್‌ನಿಂದ ಹಣ ಅಕ್ರಮ ವರ್ಗಾವಣೆ ಮಾಡಿದ್ದರು.

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶ್ರೀನಿವಾಸ ರಾವ್ ಎಸ್ಕೇಪ್ ಆಗಿದ್ದ. ಇದೀಗ ಎಸ್‌ಐಟಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ. ಸದ್ಯ ಆರೋಪಿಯನ್ನು ಒಂಬತ್ತು ದಿನ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಈಗಾಗಲೇ ಮಹತ್ವದ ಬೆಳವಣಿಗೆಗಳು ನಡೆದಿವೆ. ಮೂವರನ್ನು ಬಂಧಿಸಲಾಗಿದೆ. ಇವರಲ್ಲಿ ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಲೆಕ್ಕ ಪರಿಶೋಧಕ ಪರಶುರಾಮ್‌ ಸೇರಿದ್ದಾರೆ. ಪ್ರಕರಣದಲ್ಲಿ ಇಡಿ ಸಹ ತನಿಖೆಗೆ ಇಳಿದಿದೆ. ಒಂದು ವಾರದ ಹಿಂದೆ ಮಾಜಿ ಸಚಿವ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಬಿ. ನಾಗೇಂದ್ರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು, ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದೆ. ಹಗರಣದಲ್ಲಿ ಪಾಲ್ಗೊಂಡಿರುವ ಯೂನಿಯನ್‌ ಬ್ಯಾಂಕ್‌ ಸಿಬ್ಬಂದಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೂ ಆರು ಮಂದಿ ನಾಪತ್ತೆಯಾಗಿದ್ದಾರೆ.

ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಮನೆ ಹಾಗೂ ಕಚೇರಿಗಳ ಮೇಲೂ ಇಡಿ ದಾಳಿ ನಡೆಸಿತ್ತು. ಬೀಸುವ ದೊಣ್ಣೆಯಿಂದ ಪಾರಾಗಲು ಮೂರು ದಿನ ಕಣ್ಮರೆಯಾಗಿದ್ದ ದದ್ದಲ್‌, ಇದೀಗ ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಬಂಧನ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ. ಅಧಿವೇಶನ ಮುಗಿಯುವವರೆಗೂ ಅವರಿಗೆ ಬಂಧನದ ಆತಂಕವಿಲ್ಲ.

ವಾಲ್ಮೀಕಿ ನಿಗಮ ಅಕ್ರಮದಲ್ಲಿ ನನ್ನ ಪಾತ್ರ ಇಲ್ಲ; ಸಿಎಂ ಮುಂದೆ ಶಾಸಕ ದದ್ದಲ್ ಕಣ್ಣೀರು

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣ (Valmiki Corp scam) ಸಂಬಂಧ ಎಸ್‌ಐಟಿ ವಿಚಾರಣೆಗೆ ಹಾಜರಾದ ಬಳಿಕ ಮೂರು ದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ಶಾಸಕ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಸೋಮವಾರ ವಿಧಾನ ಮಂಡಲ ಅಧಿವೇಶನಕ್ಕೆ ಹಾಜರಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಶಾಸಕ ದದ್ದಲ್‌(Basanagouda Daddal), ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ, ಈ ಘಟನೆಯಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.

ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ದದ್ದಲ್, ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ದದ್ದಲ್ ನಾಪತ್ತೆ ಅಂತ ಬಿಜೆಪಿ‌ಯವರು ಸುಮ್ಮನೇ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ. ಯಾವ ಇಡಿಯವರೂ ನನ್ನ ಬೆನ್ನತ್ತಿಲ್ಲ. ಬಿಜೆಪಿ ನಾಯಕರು ಬೇಕು ಅಂತಲೇ ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ನಾಪತ್ತೆಯಾಗಿಲ್ಲ. ಈ ಘಟನೆಯಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ಸಿಎಂ ಮುಂದೆ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

Continue Reading
Advertisement
Kannada In Madrasa
ಕರ್ನಾಟಕ10 mins ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ20 mins ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ30 mins ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ31 mins ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Anant Radhika Wedding
ವಾಣಿಜ್ಯ33 mins ago

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

valmiki corporation scam culprits
ಪ್ರಮುಖ ಸುದ್ದಿ57 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

Anant Ambani Wedding
ದೇಶ1 hour ago

Anant Ambani Wedding: ಮಗನ ಮದುವೆಯಲ್ಲಿ ರಿಲಯನ್ಸ್ ಉದ್ಯೋಗಿಗಳಿಗೂ ಭರ್ಜರಿ ಔತಣ ನೀಡಿದ ಮುಖೇಶ್ ಅಂಬಾನಿ

Former MPs
ದೇಶ1 hour ago

Formers MPs: ಚುನಾವಣೆಯಲ್ಲಿ ಸೋತರೂ ಸರ್ಕಾರಿ ಬಂಗಲೆ ಬಿಡದ 200 ಮಾಜಿ ಸಂಸದರು; ನೋಟಿಸ್‌ ಜಾರಿ

Hardik Pandya
ಕ್ರೀಡೆ1 hour ago

Hardik Pandya: ರೋಡ್​ ಶೋದಲ್ಲಿ ಚಕ್ ದೇ! ಇಂಡಿಯಾ ಹಾಡಿದ ಹಾರ್ದಿಕ್​ ಪಾಂಡ್ಯ; ವಿಡಿಯೊ ವೈರಲ್​

Monkey Attack
Latest2 hours ago

Monkey Attack: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ23 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌