Door to door polling begins in Yellapur Voting by centenarian Karnataka Election 2023 updates Karnataka Election 2023: ಮನೆಯಲ್ಲೇ ಮತದಾನಕ್ಕೆ ಯಲ್ಲಾಪುರದಲ್ಲಿ ಚಾಲನೆ; ಶತಾಯುಷಿಯಿಂದ ಮತದಾನ - Vistara News

ಉತ್ತರ ಕನ್ನಡ

Karnataka Election 2023: ಮನೆಯಲ್ಲೇ ಮತದಾನಕ್ಕೆ ಯಲ್ಲಾಪುರದಲ್ಲಿ ಚಾಲನೆ; ಶತಾಯುಷಿಯಿಂದ ಮತದಾನ

Assembly Election: ಯಲ್ಲಾಪುರ ತಾಲೂಕಿನ ತಾಲೂಕಿನ ಹಿತ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶತಾಯಿಷಿಗಳಾದ ಸುಬ್ಬಿ ಗೋಪಾಲಕೃಷ್ಣ ಹೆಗಡೆ (104) ಹಾಗೂ ಅವರ ಸಹೋದರಿ ಗೌರಿ ಹೆಗಡೆ (94) ಮತದಾನ ಮಾಡಿದ್ದಾರೆ.

VISTARANEWS.COM


on

Door to door polling begins in Yellapur Voting by centenarian Karnataka Election 2023 updates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಲಾಗಿದ್ದು, ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಪ್ರಕ್ರಿಯೆ ಸೋಮವಾರದಿಂದ ಆರಂಭಗೊಂಡಿದೆ.

ತಾಲೂಕಿನ ಹಿತ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶತಾಯಿಷಿಗಳಾದ ಸುಬ್ಬಿ ಗೋಪಾಲಕೃಷ್ಣ ಹೆಗಡೆ (104) ಹಾಗೂ ಅವರ ಸಹೋದರಿ ಗೌರಿ ಹೆಗಡೆ (94) ಮತದಾನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಸೆಕ್ಟರ್ 11 ಅಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌.ಆರ್‌. ಹೆಗಡೆ ಹಾಗೂ ಇತರ ಅಧಿಕಾರಿಗಳ ನೇತೃತ್ವದಲ್ಲಿ ಈ ಪ್ರಕ್ರಿಯೆ ನೆರವೇರಿತು.

ಇದನ್ನೂ ಓದಿ: Karnataka Election 2023: ಏಳು ಸುತ್ತಿನ ಕೋಟೆಯಂತೆ ಬಿಜೆಪಿಯ ಏಳು ಸುರಕ್ಷತೆಯ ಯೋಜನೆಗಳು; ಪ್ರಧಾನಿ ಮೋದಿ ಬಣ್ಣನೆ

ಕ್ಷೇತ್ರದಲ್ಲಿ ಒಟ್ಟೂ 615 ಮನೆಯಿಂದ ಮತ ಚಲಾಯಿಸುವವರನ್ನು ಗುರುತಿಸಲಾಗಿದ್ದು, ವಿವಿಧ ಸೆಕ್ಟರ್‌ ಅಧಿಕಾರಿಗಳು ಅಂತವರ ಮನೆಗೆ ತೆರಳಿ, ಮತವನ್ನು ಸಂಗ್ರಹಿಸಲಿದ್ದಾರೆ.

ಶಿರಸಿ-ಸಿದ್ದಾಪುರದಲ್ಲಿ ಮನೆಯಿಂದಲೇ ಮತದಾನ ಆರಂಭ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಮವಾರ (ಮೇ 01) ಮತದಾನ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಈ ಕ್ಷೇತ್ರದಲ್ಲಿ ಮೇ 1 ರಿಂದ ಆರಂಭವಾದ ಅಂಚೆ ಮತದಾನ ಪ್ರಕ್ರಿಯೆ ಮೇ 4 ರವರೆಗೆ ನಡೆಯಲಿದೆ. ಕ್ಷೇತ್ರದಲ್ಲಿ ಇದೀಗ 80 ವರ್ಷ ಮೇಲ್ಪಟ್ಟ 315 ಮತದಾರರಿದ್ದರೆ, 88 ವಿಶೇಷ ಚೇತನ ಮತದಾರರಿದ್ದಾರೆ. ತಾಲೂಕಿನ 12 ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ ಮತದಾನ ತಂಡ ರಚನೆ ಮಾಡಲಾಗಿದೆ. ಅವರು ಮತದಾರರ ಮನೆಗೆ ತೆರಳಿ ಅಂಚೆ ಮತಪತ್ರದ ವಿವರಣೆ ನೀಡಿ ಮತದಾನ ಪ್ರಕ್ರಿಯೆ ಆರಂಭಿಸಿದ್ದಾರೆ‌.

ಇದನ್ನೂ ಓದಿ: Karnataka Election 2023: ಕಾಂಗ್ರೆಸ್‌ನ ವಾರಂಟಿಯೇ ಮುಗಿದಿರುವಾಗ ಗ್ಯಾರಂಟಿಗಳಿಗೆ ಇನ್ನೆಲ್ಲಿ ಬೆಲೆ! ಪ್ರಧಾನಿ ಮೋದಿ ಲೇವಡಿ

ಮತದಾನ ಪ್ರಕ್ರಿಯೆಯೆ ಮೊದಲ ದಿನದಂದು 80 ವರ್ಷ ಮೇಲ್ಪಟ್ಟ ಪ್ರಗತಿ ನಗರದ ಶಾಕುಂತಲಾ ಹೆಗಡೆ, ಯಮುನಾ ಹೆಗಡೆ, ಸಿದ್ದಾಪುರ ತಾಲೂಕಿನ ರಾಮಚಂದ್ರ ಸೇರಿದಂತೆ ಇಪ್ಪತ್ತಕ್ಕೂ ಅಧಿಕ ಮತದಾರರು ಅಂಚೆ ಪತ್ರದ ಮೂಲಕ ಮತದಾನ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Tulsi Gowda: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

Tulsi Gowda: ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಕಾರವಾರದ ಜಿಲ್ಲಾಸ್ಪತ್ರೆಯ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Tulsi Gowda
Koo

ಕಾರವಾರ: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಮನೆಯಲ್ಲಿ ವೃಕ್ಷಮಾತೆ ತುಳಸಿಗೌಡ (Tulsi Gowda) ಅವರು ಜಾರಿ ಬಿದ್ದಿದ್ದರಿಂದ ಕಾಲಿಗೆ ಪೆಟ್ಟಾಗಿತ್ತು.

ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಲು ಜಾರಿ ಬಿದ್ದ ಪರಿಣಾಮ ತುಳಸಜ್ಜಿ ಅಸ್ವಸ್ಥಗೊಂಡಿದ್ದಾರೆ.

ಇದನ್ನೂ ಓದಿ | Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಓಮ್ನಿಗೆ ಬ್ಯಾಲೆನೊ ಡಿಕ್ಕಿ, ಬಾಲಕಿ ಸಾವು, 7 ಮಂದಿಗೆ ಗಾಯ, ಸುಟ್ಟುಹೋದ ಓಮ್ನಿ

madavara road accident

ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಮಾರುತಿ ಒಮ್ನಿ (Maruti Omni) ವಾಹನಕ್ಕೆ ಬ್ಯಾಲೆನೋ ಕಾರು (Baleno) ಹಿಂದಿನಿಂದ ಬಂದು ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ತುಮಕೂರು ರಸ್ತೆ ಹೈವೇಯಲ್ಲಿ 10 ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದೆ. ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿದೆ. ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬ್ಯಾಲೆನೋ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬ್ಯಾಲೆನೋ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿದೆ. ಪಲ್ಟಿಯಾಗುತ್ತಿದ್ದಂತೆ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಎಂಟು ಜನರಲ್ಲಿ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಲೆನೋ ಕಾರಿನಲ್ಲಿದ್ದ ಮೂರು ಜನರಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಶಂಕಿಸಲಾಗಿದ್ದು, ಮೂವರೂ ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಕ್ರೇನ್ ಮೂಲಕ ಸುಟ್ಟ ಕಾರನ್ನು ತೆರವು ಮಾಡಲಾಯಿತು.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಾಳುಗಳು. ದಿವ್ಯಾ (14) ಮೃತ ಬಾಲಕಿ. ಎಲ್ಲರೂ ದಾಸನಪುರ ನಿವಾಸಿಗಳು. ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಓಮ್ನಿಯ ಪೆಟ್ರೋಲ್ ಟ್ಯಾಂಕ್‌ನಿಂದ ಪೆಟ್ರೋಲ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ | Rain News: ಪ್ರತ್ಯೇಕ ಮಳೆ ಅವಘಡ; ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣ

ಬ್ಯಾಲೆನೋ ಕಾರಿನಲ್ಲಿದ್ದ ಮೂರು ಜನ‌ರಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆದಿದೆ. ಮೂವರಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಶಂಕೆ ಇದೆ. ಘಟನೆ ನಡೆಯುತ್ತಿದ್ದಂತೆ ಇವರು ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಇವರನ್ನು ಪರಿಶೀಲನೆ ನಡೆಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲಾದಂಡಿ ಹೇಳಿಕೆ ನೀಡಿದ್ದಾರೆ.

Continue Reading

ಮಳೆ

Karnataka Weather : ಸಿಡಿಲಿಗೆ 7 ಕುರಿಗಳು ಸಾವು, ಕೊಡಗಿನಲ್ಲಿ ಭಾರಿ ಮಳೆಗೆ ಮಗುಚಿದ ಲಾರಿ; ನಾಳೆ ಎಲ್ಲೆಲ್ಲಿ ಆರ್ಭಟ

Rain News : ರಾಜ್ಯದ ಹಲವಡೆ ವ್ಯಾಪಕ ಮಳೆಯಾಗುತ್ತಿದ್ದು, ಏ.24ರ ವರೆಗೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಕೊಡಗಿನಲ್ಲಿ ವರುಣಾರ್ಭಟಕ್ಕೆ ಚಾಲಕನ ನಿಯಂತ್ರಣ ತಪ್ಪಿದ್ದು, ಲಾರಿಯೊಂದು ತಿರುವಿನಲ್ಲಿ ಮಗುಚಿ ಬಿತ್ತು.

VISTARANEWS.COM


on

By

Karnataka Weather Forecast
Koo

ಕೊಡಗು/ಬೆಂಗಳೂರು: ಸೋಮವಾರ (ಏ.22) ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಮಡಿಕೇರಿ, ನಾಪೋಕ್ಲು, ಮೂರ್ನಾಡು ಭಾಗದಲ್ಲಿ ಭರ್ಜರಿ (Karnataka Weather Forecast) ಮಳೆಯಾಗಿದೆ. ಒಂದು ಕಡೆಗೆ ಮಳೆಯಿಂದ ಕೊಡಗಿನ ಕೃಷಿಕರಲ್ಲಿ ಮಂದಹಾಸ ಮೂಡಿದರೆ ಮತ್ತೊಂದು ಕಡೆ ಮಳೆ ಅನಾಹುತವು ಆತಂಕ ಹೆಚ್ಚಿಸಿದೆ.

ಮಡಿಕೇರಿ‌‌ ಸಮೀಪದ ಜೋಡುಪಾಲ ಬಳಿ ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು‌ ಮಗುಚಿ ಬಿತ್ತು. ಬೆಂಗಳೂರಿನಿಂದ‌‌ ಮಂಗಳೂರಿಗೆ ಲಾರಿಯಲ್ಲಿ ಜ್ಯೂಸ್ ಸಾಗಿಸಲಾಗುತ್ತಿತ್ತು. ಮಳೆಯಿಂದ ಜೋಡುಪಾಲದ ತಿರುವಿನಲ್ಲಿ ಲಾರಿಯ ವೀಲ್ ಜಾರಿ, ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಡಿಲು ಬಡಿದು 7 ಕುರಿಗಳು ಸಾವು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಸಿಡಿಲು ಬಡಿದು 7 ಕುರಿಗಳು ಮೃತಪಟ್ಟಿವೆ. ಹೇಮಗುಡ್ಡ ಗ್ರಾಮದ ರಾಮಣ್ಣ ಬಂಡಿ ಎಂಬುವವರಿಗೆ ಸೇರಿದ 7 ಕುರಿಗಳು ಸಿಡಿಲಿಗೆ ಬಲಿಯಾಗಿವೆ. 8ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಬಿಸಿಲಿನ ತಾಪಮಾನವು ಮಳೆಯಿಂದಾಗಿ ತಣ್ಣಗಾಗಿತ್ತು. ಕೊಪ್ಪಳ‌ದಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ. ಮುಂಜಾನೆ ಮೋಡ ಕವಿದ ವಾತಾವರಣ ಇತ್ತು, ಮಧ್ಯಾಹ್ನದ ಹೊತ್ತಿಗೆ ಶುರುವಾದ ಸಣ್ಣ ಮಳೆಯು ನಂತರ ರಭಸವಾದ ಗಾಳಿಯೊಂದಿಗೆ ಗುಡುಗು ಸಿಡಿಲಿನ ಶಬ್ಧವು ಜನರನ್ನು ಬೆಚ್ಚಿ ಬೀಳಿಸಿತ್ತು.

ಇದನ್ನೂ ಓದಿ: Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

ಮುಂದಿನ 48 ಗಂಟೆಯಲ್ಲಿ ಗಾಳಿ ಜತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏ.23ರಂದು ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕೆಲವೊಮ್ಮೆ 30-40 ಕಿ.ಮೀ ವ್ಯಾಪ್ತಿಯಲ್ಲಿ ರಭಸವಾದ ಗಾಳಿಯು ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಕೆಲವೆಡೆ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.

ಏ.24ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬಿಸಿ ಗಾಳಿ ಮುನ್ನೆಚ್ಚರಿಕೆ

ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂಜಾನೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆಗೆ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karwar News: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು; ಪ್ರವಾಸಕ್ಕೆ ಬಂದಾಗ ದುರಂತ

Karwar News: ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿಯ ಕಾಳಿ ನದಿಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿದ್ದಾರೆ.

VISTARANEWS.COM


on

Karwar News
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Karwar News) ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿಯ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ನದಿಯಲ್ಲಿ ಈಜಲು ಇಳಿದಿದ್ದ ವೇಳೆ ದುರಂತ ನಡೆಸಿದ್ದು, ಮೃತ ದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.

ಹುಬ್ಬಳ್ಳಿಯ ನಜೀರ್ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್(6), ರೇಷಾ ಉನ್ನಿಸಾ (38), ಇಫ್ರಾ‌ ಅಹ್ಮದ್ (15), ಅಬೀದ್ ಅಹ್ಮದ್(12) ಮೃತ ದುರ್ದೈವಿಗಳು. ಮೃತರು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾಗಿದ್ದು, ಪ್ರವಾಸಕ್ಕೆಂದು ಅಕ್ವಾಡಕ್ಕೆ ಬಂದಿದ್ದ ವೇಳೆ ನದಿಯಲ್ಲಿ ಈಜಲು ಹೋಗಿದ್ದಾಗ ಮುಳುಗಿದ್ದಾರೆ.

ಇದನ್ನೂ ಓದಿ | Murder Case : ಕುಡಿದಾಗ ಯಾವಾಗಲೂ ಬೈಯುತ್ತಾನೆಂದು ಗೆಳೆಯನನ್ನೇ ಕೊಂದುಬಿಟ್ಟರು

ಒಟ್ಟು ಎಂಟು ಮಂದಿ ನದಿಯಲ್ಲಿ ಈಜಲು ಹೋಗಿದ್ದರು. ಆದರೆ, ಈ ಪೈಕಿ ಆರು ಮಂದಿ ಮುಳುಗಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಆರು ಮಂದಿಯ ಮೃತ ದೇಹಗಳನ್ನು ಪೊಲೀಸರು ಹೊರತೆಗೆದು, ದಾಂಡೇಲಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮದುವೆಗೆ ಬಂದವಳು ಮಸಣಕ್ಕೆ

ಕೊಡಗು: ಕಾರು ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಮಹಿಳೆ ಮೃತಪಟ್ಟ ಘಟನೆ ಕೊಡಗಿನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಕಾಸರಗೋಡುವಿನ ರಾಬಿಯ ಮೃತ ದುರ್ದೈವಿ. ಸಂಬಂಧಿಕರ ವಿವಾಹಕ್ಕೆಂದು ಆಗಮಿಸಿದ್ದ ರಾಬಿಯಾ, ರಸ್ತೆ ಬದಿ ನಿಂತಿದ್ದರು. ಆದರೆ ವೇಗವಾಗಿ ಬಂದ ಮಾರುತಿ ಕಾರು ಮೂವರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮೂವರು ಗಾಯಾಳುಗಳಿಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಿಪ್ಪರ್‌ ಲಾರಿ ಹರಿದು 4 ವರ್ಷದ ಮಗು ಛಿದ್ರ ಛಿದ್ರ; ತಾಯಿ ಕಣ್ಣೇದುರಿಗೆ ನಡೆಯಿತು ದುರಂತ

road Accident in Bengaluru

ಬೆಂಗಳೂರು: ಮಕ್ಕಳನ್ನು ಎಷ್ಟು ಜಾಗ್ರತೆಯಿಂದ ನೋಡಿಕೊಂಡರು ಕಡಿಮೆಯೇ.. ಪೋಷಕರು ಸದಾ ಮಕ್ಕಳ ಮೇಲೊಂದು ಕಣ್ಣೀಡಲೆಬೇಕು, ಇಲ್ಲದಿದ್ದರೆ ದುರಂತಗಳೇ ನಡೆದು ಹೋಗುತ್ತವೆ. ಸದ್ಯ ಇದಕ್ಕೆ ಪೂರಕ ಎಂಬಂತೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ (Road Accident) ನಾಲ್ಕು ವರ್ಷದ ಮಗುವೊಂದು ದಾರುಣವಾಗಿ ಮೃತಪಟ್ಟಿದೆ.

ಟಿಪ್ಪರ್‌ ಲಾರಿ ಹರಿದು 4 ವರ್ಷದ ಮಗುವೊಂದು ಮೃತಪಟ್ಟಿದೆ. ಲಾರಿ ಚಕ್ರಕ್ಕೆ ಸಿಲುಕಿದ ಮಗುವಿನ ತಲೆ ಹಾಗೂ ದೇಹ ಛಿದ್ರ ಛಿದ್ರವಾಗಿತ್ತು. ಬೆಂಗಳೂರಿನ ರಾಮೋಹಳ್ಳಿ ಬಸ್ ನಿಲ್ದಾಣದಲ್ಲಿ ಬಳಿ ಶನಿವಾರ ಸಂಜೆ 5.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಆಯುಷ್ಯ್ (4) ಮೃತ ದುರ್ದೈವಿ.

ಅಮರ್ ಹಾಗೂ ಪೂಜಾ ದಂಪತಿಗೆ ಅವಳಿ ಮಕ್ಕಳಿದ್ದು, ಉತ್ತರ ಭಾರತದಿಂದ ಬೆಂಗಳೂರಿನ ರಾಮೋಹಳ್ಳಿಯಲ್ಲಿ ಪೇಟಿಂಗ್ ಕೆಲಸ ಮಾಡಲು ಬಂದಿದ್ದರು. ನಿನ್ನೆ ಶನಿವಾರ ಸಂಜೆ ಪೂಜಾ ತನ್ನಿಬ್ಬರು ಮಕ್ಕಳ ಜತೆಗೆ ಮೊಬೈಲ್ ಅಂಗಡಿಗೆ ಬಂದಿದ್ದರು. ಒಬ್ಬ ಮಗು ತಾಯಿ ಜತೆಗೆ ಅಂಗಡಿಯೊಳಗೆ ಇದ್ದ.

ಈ ವೇಳೆ ಮತ್ತೊಬ್ಬ ಮಗ ಆಯ್ಯುಷ್‌ ತಾಯಿ ಕೈ ಬಿಡಿಸಿಕೊಂಡಿದ್ದ. ಬಳಿಕ ಆಟವಾಡುತ್ತಾ ಏಕಾಏಕಿ ರಸ್ತೆಗೆ ಓಡಿದ್ದ. ಇದೇ ವೇಳೆ ಆ ರಸ್ತೆಯಲ್ಲಿ ಬಸ್‌ ಅನ್ನು ಓವರ್ ಟೆಕ್ ಮಾಡಲು, ವೇಗವಾಗಿ ಬಂದ ಟಿಪ್ಪರ್ ಲಾರಿಯು ಆಯ್ಯುಷ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಆಯ್ಯುಷ್‌ನ ಮೇಲೆ ಚಕ್ರ ಹರಿದಿದ್ದು, ಮಾಂಸದ ಮುದ್ದೆಯಾಗಿತ್ತು. ಈ ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಲಾರಿ ಗ್ಲಾಸ್‌ ಪುಡಿ ಪುಡಿ ಮಾಡಿದ ಸ್ಥಳೀಯರು

ನೋಡನೋಡುತ್ತಿದ್ದ ತಾಯಿ ಕಣ್ಮುಂದೆಯೇ ಮಗ ಆಯ್ಯುಷ್‌ ಲಾರಿ ಚಕ್ರಕ್ಕೆ ಸಿಲುಕಿ ಛಿದ್ರ ಛಿದ್ರವಾಗಿದ್ದ. ಇನ್ನು ಘಟನೆಯಿಂದ ಸಿಟ್ಟಾದ ಸ್ಥಳೀಯರು ಟಿಪ್ಪರ್ ಲಾರಿಗೆ ಕಲ್ಲು ತೂರಿ, ಲಾರಿ ಗ್ಲಾಸ್‌ ಪುಡಿ ಪುಡಿ ಮಾಡಿದರು. ಲಾರಿ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಸದ್ಯ ಮೃತ ಕುಟುಂಬಸ್ಥರಿಂದ ಕುಂಬಳಗೋಡು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಲಾರಿಯನ್ನು ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ಮಳೆ

Karnataka Weather : ಸಿಡಿಲಿಗೆ ಎತ್ತು ಸಾವು, ಬಿರುಗಾಳಿಗೆ ನೆಲಕಚ್ಚಿದ ಬೆಳೆಗಳು; ಏ.24ರವರೆಗೆ ಮಳೆ ಅಬ್ಬರ

Rain News : ಸಿಡಿಲಿಗೆ ಜನ-ಜಾನುವಾರಗಳು ಪ್ರಾಣ ಕಳೆದುಕೊಳ್ಳುತ್ತಿದ್ದು, ಬಿರುಗಾಳಿ ಸಹಿತ ಸುರಿದ ಮಳೆಗೆ ಅಪಾರ ಪ್ರಮಾಣದ ಬೆಳೆಗಳು ನೆಲಕಚ್ಚಿವೆ. ರಾಜ್ಯಾದ್ಯಂತ ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain Effected
Koo

ಬೆಂಗಳೂರು: ರಾಜ್ಯದಲ್ಲಿ ಮಳೆ (Rain News) ಅನಾಹುತ (Karnataka Weather Forecast) ಮುಂದುವರಿದಿದ್ದು, ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಬೇಲೂರ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ರೈತ ಅಣ್ಣೆಪ್ಪ ಕಾಶಪ್ಪ ಯೆರಂಡಗೆ ಅವರಿಗೆ ಸೇರಿದ ಎತ್ತು ಸಿಡಿಲಿಗೆ ಬಲಿಯಾಗಿದೆ. ಸುದ್ದಿ ತಿಳಿದ ಹುಲಸೂರ ಠಾಣೆ ಪಿಎಸ್ಐ ನಾಗೇಂದ್ರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹಾದ್ರಿಪುರ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಬೆಳೆಗಳು ನೆಲಕಚ್ಚಿದವು. ಬಾಳೆ, ಹೀರೆಗಿಡ, ಅಡಿಕೆ ಬೆಳೆಗಳು ನೆಲಕ್ಕೆ ಉರುಳಿವೆ. ಶನಿವಾರ ಸಂಜೆ ಏಕಾಏಕಿ ಸುರಿದ ಮಳೆಗೆ ಗೊನೆ ಬಿಟ್ಟಿದ್ದ ಬಾಳೆ ಗಿಡಗಳು ಮುರಿದು ಹೋಗಿವೆ.

8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಇನ್ನೊಂದು ತಿಂಗಳಲ್ಲಿ ಕಟಾವು ಮಾಡಬೇಕಿತ್ತು. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತರ ಅಳಲು ತೋಡಿಕೊಂಡಿದ್ದಾರೆ. ಗ್ರಾಮದ ಸುಧಾಕರ್, ನಂಜೇಗೌಡ, ಮಂಜುನಾಥ, ಜಯರಾಮಯ್ಯ, ದೇವರಾಜಪ್ಪ, ಎಂಬ ರೈತರಿಗೆ ಸೇರಿದ ಬಾಳೆ ಗಿಡಗಳು ಸಂಪೂರ್ಣ ಹಾಳಾಗಿವೆ. ಚನ್ನರಾಯಪ್ಪ ಎಂಬ ರೈತನಿಗೆ ಸೇರಿದ ಒಂದು ಎಕರೆ ಹೀರೆಗಿಡ ನಾಶವಾಗಿದೆ.

ಹಾಸನದಲ್ಲೂ ಶನಿವಾರ ರಾತ್ರಿ ಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ನಾಶವಾಗಿದ್ದವು. ರವೀಶ್ ಎಂಬುವವರಿಗೆ ಸೇರಿದ ಎರಡುವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು, ಬಿರುಗಾಳಿ ಸಹಿತ ಸುರಿದ ಮಳೆಗೆ 350ಕ್ಕೂ ಹೆಚ್ಚು ಗಿಡಗಳು ನೆಲಕಚ್ಚಿವೆ. ಸುಮಾರು ಮೂರರಿಂದ ನಾಲ್ಕು‌ ಲಕ್ಷ ರೂ ಹಾನಿಯಾಗಿದೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳನ್ನು ಕಳೆದುಕೊಂಡು ರೈತ ರವೀಶ್ ಕಂಗಾಲಾಗಿದ್ದರು. ಸ್ಥಳಕ್ಕೆ ತಹಸೀಲ್ದಾರ್ ಮಮತಾ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Kids Summer Travel Fashion: ಬೇಸಿಗೆಯಲ್ಲಿ ಹೀಗಿರಲಿ ಚಿಣ್ಣರ ಟ್ರಾವೆಲ್‌ ಫ್ಯಾಷನ್‌

ರಾಜ್ಯದಲ್ಲಿ ಶನಿವಾರದಂದು ಕರಾವಳಿ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಖಜೂರಿ 9 ಸೆಂ.ಮೀ, ಗದಗ 7 ಸೆಂ.ಮೀ ಮಳೆಯಾಗಿದೆ. ಕುಕನೂರು5, ಶಿಗ್ಗಾಂವ 5, ಸವಣೂರು 4, ಕಲಬುರಗಿ, ಶಿರಹಟ್ಟಿ, ಕುಂದಗೋಳದಲ್ಲಿ 3 ಸೆಂ.ಮೀ ಮಳೆಯಾಗಿದೆ. ಅಫಜಲಪುರ ಎಚ್‌ಎಂಎಸ್, ಆಳಂದ, ಕಲಘಟಗಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಗೋಕರ್ಣ, ಕಿರವತ್ತಿ, ಕಾರವಾರ ವೀಕ್ಷಣಾಲಯ, ಹುಬ್ಬಳ್ಳಿ, ಯಲಬುರ್ಗಾ, ಮುಂಡರಗಿ 1 ಸೆಂ.ಮೀ ಮಳೆಯಾಗಿದೆ. ಅತೀ ಗರಿಷ್ಠ ಉಷ್ಣಾಂಶ 37.4 ಡಿ.ಸೆ ಕಲಬುರಗಿಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಯಲ್ಲಿ ಮಳೆ ಮುನ್ಸೂಚನೆ

ಏ.22ರಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣಒಳನಾಡಿನ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 22 ರಿಂದ 25ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಏಪ್ರಿಲ್‌ 22ರಂದು ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಮುಂದಿನ 5 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಕ್ರಮೇಣ 2-3 ಡಿ.ಸೆ ಏರಿಕೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi and Siddaramaiah
ರಾಜಕೀಯ3 mins ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ4 mins ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ4 mins ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Murder Case in raichur
ರಾಯಚೂರು9 mins ago

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Lok Sabha Election-2024
Latest14 mins ago

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Lok Sabha Election 2024 KP Nanjundi resigns from Legislative Council
Lok Sabha Election 202434 mins ago

Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

gold rate today kajal
ಚಿನ್ನದ ದರ40 mins ago

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Bengaluru Karaga 2024
ಬೆಂಗಳೂರು47 mins ago

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

balakot airstrike RKS bhadauria
ಪ್ರಮುಖ ಸುದ್ದಿ56 mins ago

Balakot Airstrike: ನಮ್ಮ ಯೋಧರ ಕೂದಲೂ ಕೊಂಕದಂತೆ ಪಾಕ್‌ ವಾಯುಪಡೆ ಭೇದಿಸಿ ದಾಳಿ ನಡೆಸಲಾಗಿತ್ತು: ಮಾಜಿ ಐಎಎಫ್‌ ಮುಖ್ಯಸ್ಥ

Viral Video
ಕ್ರೀಡೆ59 mins ago

Viral Video: ಐಪಿಎಲ್​​ ಪಂದ್ಯದ ವೇಳೆ ಪಾಕಿಸ್ತಾನ ಟಿ20 ವೀಕ್ಷಿಸಿದ ಅಭಿಮಾನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು19 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ21 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು23 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌