New fungus: ತುಮಕೂರಿನ ಮಕ್ಕಳ ಕಾಲು, ಕೈಯಲ್ಲಿ ಮೂಡುತ್ತಿವೆ ಚುಕ್ಕೆಗಳು; ಹೊಸ ಫಂಗಸ್‌ಗೆ ಜನ ಕಂಗಾಲು! Vistara News
Connect with us

ಆರೋಗ್ಯ

New fungus: ತುಮಕೂರಿನ ಮಕ್ಕಳ ಕಾಲು, ಕೈಯಲ್ಲಿ ಮೂಡುತ್ತಿವೆ ಚುಕ್ಕೆಗಳು; ಹೊಸ ಫಂಗಸ್‌ಗೆ ಜನ ಕಂಗಾಲು!

Skin Disease: ತುಮಕೂರಿನಲ್ಲಿ ಶಾಲೆಗೆ ಹೋಗಿ ಬರುವ ಮಕ್ಕಳಲ್ಲಿ ಹೊಸ ಚರ್ಮ ರೋಗ ಕಾಣಿಸಿಕೊಳ್ಳುತ್ತಿದೆ. ಅಂಗೈ ಹಾಗೂ ಅಂಗಾಲಿನಲ್ಲಿ ಕಪ್ಪು ಚುಕ್ಕೆಗಳು ಮೂಡುತ್ತಿವೆ.

VISTARANEWS.COM


on

dots on the legs and hands of the children of Tumakuru new fungus threat
Koo

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹೊಸ ಫಂಗಸ್ (New fungus) ಕಾಣಿಸಿಕೊಂಡಿತೇ ಎಂಬ ಆತಂಕ ಎದುರಾಗಿದೆ. ಮಕ್ಕಳಲ್ಲಿ ದಿಢೀರನೆ ಕಪ್ಪು ಚುಕ್ಕೆಗಳು ಕಾಣಿಸಿಕೊಳ್ಳುತ್ತಿದ್ದು, ಪೋಷಕರಲ್ಲಿ ಆತಂಕವನ್ನು ಹುಟ್ಟುಹಾಕಿದೆ.

ತುಮಕೂರು ಜಿಲ್ಲೆ ತುರುವೇಕೆರೆ ಹಾಗೂ ಕೊರಟಗೆರೆಯಲ್ಲಿ ಗ್ರಾಮದಲ್ಲಿ ಮಕ್ಕಳ ಚರ್ಮದ ಮೇಲೆ ಫಂಗಸ್ ಕಾಣಿಸಿಕೊಂಡಿದೆ. ಕೊರಟಗೆರೆ ತಾಲೂಕಿನ ಯಲಚೇಗೆರೆ, ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Weather report: ಥಂಡಿ ಗಾಳಿಯೊಂದಿಗೆ ಈ ಐದು ಜಿಲ್ಲೆಗಳಲ್ಲಿ ಅಬ್ಬರಿಸಲಿರುವ ವರುಣ; ಇದರಲ್ಲಿ ನಿಮ್ಮ ಊರು ಇದೆಯಾ ನೋಡಿ

ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳಲ್ಲಿ ಕಪ್ಪು ಚುಕ್ಕೆಗಳು ಕಾಣಿಸಿಕೊಂಡರೆ, ಯಲಚೇನಹಳ್ಳಿ ಗ್ರಾಮದ 5 ಮಕ್ಕಳಲ್ಲಿ ಕಪ್ಪು ಮಚ್ಚೆಗಳು ಕಾಣಿಸಲ್ಪಟ್ಟಿದೆ. ಮಕ್ಕಳ ಅಂಗಾಲು- ಅಂಗೈಯಲ್ಲಿ ಈ ರೀತಿಯ ಕಪ್ಪು ಮಚ್ಚೆಗಳು ಬರತೊಡಗಿವೆ. ಕಳೆದ ಶನಿವಾರದಿಂದ ಈ ಮಚ್ಚೆ ಕಾಣಿಸಿಕೊಂಡಿದ್ದು, ಕಾರಣ ಮಾತ್ರ ತಿಳಿದು ಬರುತ್ತಿಲ್ಲ. ಶಾಲೆಯಿಂದ ಮನೆಗೆ ವಾಪಸ್ ಬಂದ ಬಳಿಕ ಮಕ್ಕಳಲ್ಲಿ ಈ ರೀತಿ ಆಗುತ್ತಿದೆ.

ಶಿಕ್ಷಕರೊಬ್ಬರಿಗೂ ಕಾಣಿಸಿಕೊಂಡಿತು ಮಚ್ಚೆ

ಶಾಲೆಯ ಶಿಕ್ಷಕರೊಬ್ಬರಲ್ಲಿಯೂ ಈ ಮಚ್ಚೆ ಕಾಣಿಸಿಕೊಂಡಿದ್ದು, ಆತಂಕ ಮತ್ತಷ್ಟು ಹೆಚ್ಚಲು ಕಾರಣವಾಗಿದೆ. ಈ ರೋಗದ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿಯೂ ಚರ್ಚೆಗಳಾಗುತ್ತಿದ್ದು, ಉಳಿದ ಜನತೆಯೂ ಆತಂಕಿತರಾಗಿದ್ದಾರೆ.

ವೈದ್ಯರ ತಂಡ ಭೇಟಿ

ಈ ವಿಷಯ ತಿಳಿದ ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಅವರು ವೈದ್ಯರ ತಂಡದೊಂದಿಗೆ ಶಾಲೆಗೆ ಭೇಟಿ ನೀಡಿದ್ದಾರೆ. ವೈದ್ಯರು ಸಹ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ಈ ರೋಗಕ್ಕೆ ಏನು ನಿಖರ ಕಾರಣ ಎಂಬುದು ಇನ್ನೂ ಗೊತ್ತಾಗಿಲ್ಲ.

ಇದನ್ನೂ ಓದಿ: Snake Rescue: ಹೆಲ್ಮೆಟ್‌, ಶೂ, ಮಂಚದ ಒಳಗೂ ಹಾವು; ಮೈಸೂರೀಗ ಹಾವಿನ ನಗರಿ!

ಆದರೆ, ಮಕ್ಕಳಲ್ಲಿ ಈ ರೋಗವು ವೇಗವಾಗಿ ಹರಡುತ್ತಿರುವುದು ಪೋಷಕರು ಹಾಗೂ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಜಿಲ್ಲೆಯಾದ್ಯಂತ ವ್ಯಾಪಸಲಿದೆ ಎಂಬ ಭಯ ಎಲ್ಲರನ್ನು ಆವರಿಸಿದೆ. ಹೀಗಾಗಿ ಈ ಫಂಗಸ್‌ ಏನೆಂಬುದನ್ನು ಶೀಘ್ರವೇ ಪತ್ತೆ ಹಚ್ಚಿ ಪರಿಹಾರವನ್ನು ಕಂಡುಕೊಳ್ಳಬೇಕಿದೆ ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Benefits Of Ajwain: ಅಜವಾನವೆಂಬ ಘಾಟುಮದ್ದಿನ ಬಗ್ಗೆ ನಿಮಗೆ ಗೊತ್ತಿದೆಯೆ?

ಇದು ಭಾರತೀಯ ಅಡುಗೆ ಮನೆಗಳ ಸಂಗಾತಿ ಮಾತ್ರವೇ ಅಲ್ಲ, ಪಶ್ಚಿಮ ಏಷ್ಯಾ ಸಂಸ್ಕೃತಿಗಳಲ್ಲೂ ಸೂಪಶಾಸ್ತ್ರದ ಸಂಗಾತಿ. ಹೊಟ್ಟೆ ಬಿರಿಯುವಂಥ ಊಟ ಮಾಡಿದಾಗ, ಅಜವಾನದ (Benefits Of Ajwain) ಚಹಾ ಅಥವಾ ಕಷಾಯ ಕುಡಿಯುವುದರಿಂದ ಜೀರ್ಣ ಸರಾಗವಾಗಿ ಹೊಟ್ಟೆ ಭಾರ ಕಡಿಮೆಯಾಗುತ್ತದೆ. ಔಷಧೀಯ ಗುಣಗಳಿಗಾಗಿ ಇದರ ಬಳಕೆ ಅಪಾರ.

VISTARANEWS.COM


on

Edited by

Benefits Of Ajwain
Koo

ಓಂಕಾಳು, ಅಜವಾನ (Benefits Of Ajwain) ಎಂದೆಲ್ಲಾ ಕರೆಸಿಕೊಳ್ಳುವ ಈ ಸಣ್ಣ ಬೀಜಗಳ ಬಳಕೆ ಹಲವು ಶತಮಾನಗಳಷ್ಟು ಹಳೆಯದ್ದು. ಒಗ್ಗರಣೆಗಳ ಘಮ ಹೆಚ್ಚಿಸುವ, ಚಕ್ಕುಲಿ, ಪಕೋಡಾದಂಥ ಕುರುಕಲು ತಿಂಡಿಗಳ ರುಚಿಗಟ್ಟಿಸುವ ಅಜವಾನ ಹಲವಾರು ರೀತಿಯಲ್ಲಿ ಬಳಕೆಯಲ್ಲಿದೆ. ಅದರಲ್ಲೂ ಔಷಧೀಯ ಗುಣಗಳಿಗಾಗಿ ಇದರ ಬಳಕೆ ಅಪಾರ. ಹಸಿವು ಹೆಚ್ಚಿಸುವ ಸರಳ ಕೆಲಸದಿಂದ ಹಿಡಿದು, ತೂಕ ಇಳಿಸುವ ಘನಂದಾರಿ ಕೆಲಸದವರೆಗೆ ಇದರ ಉಪಯೋಗ ಬಹಳಷ್ಟಿದೆ. ಇಲ್ಲಿದೆ ಈ ಪುಟ್ಟ ಬೀಜಗಳ ಮಾಹಿತಿ.

Ajwain Thymol or Carom Seeds

ಮೂಗರಳಿಸುವಂಥ ಘಮ ಇದ್ದರೂ, ರುಚಿಯಲ್ಲಿದು ಸ್ವಲ್ಪ ಕಟು, ಘಾಟು ಮತ್ತು ಖಾರ. ಇದೇ ಕಾರಣಕ್ಕಾಗಿ ಪರಾಟೆಗಳಿಂದ ತೊಡಗಿ ಉಪ್ಪಿನಕಾಯಿಗಳವರೆಗೆ ಹಲವು ರೀತಿಯ ಅಡುಗೆಗಳಲ್ಲಿ ಬಳಕೆಯಲ್ಲಿದೆ. ಇದು ಭಾರತೀಯ ಅಡುಗೆ ಮನೆಗಳ ಸಂಗಾತಿ ಮಾತ್ರವೇ ಅಲ್ಲ, ಪಶ್ಚಿಮ ಏಷ್ಯಾ ಸಂಸ್ಕೃತಿಗಳಲ್ಲೂ ಸೂಪಶಾಸ್ತ್ರದ ಸಂಗಾತಿ. ಕರಿಯುವಂಥ ಮತ್ತು ಖಾರದ ಅಡುಗೆಗಳಲ್ಲಿ ಇದರ ಘಮ ಪ್ರಿಯವೆನಿಸುತ್ತವೆ. ಹೊಟ್ಟೆ ಬಿರಿಯುವಂಥ ಊಟ ಮಾಡಿದಾಗ, ಅಜವಾನದ (ajwain) ಚಹಾ ಅಥವಾ ಕಷಾಯ ಕುಡಿಯುವುದರಿಂದ ಜೀರ್ಣ ಸರಾಗವಾಗಿ ಹೊಟ್ಟೆ ಭಾರ ಕಡಿಮೆಯಾಗುತ್ತದೆ.

Ajwain seeds

ಉತ್ಕರ್ಷಣ ನಿರೋಧಕ

ಪ್ರಬಲ ಉತ್ಕರ್ಷಣ ನಿರೋಧಕವಾಗಿ ಇದು ಬಳಕೆಯಲ್ಲಿದ್ದು ಉರಿಯೂತ ನಿವಾರಿಸುವಲ್ಲಿ- ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು. ಇದು ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಫಂಗಸ್‌, ಬ್ಯಾಕ್ಟೀರಿಯಗಳೊಂದಿಗೆ ಹೋರಾಡುತ್ತದೆ. ಹಾಗೆಂದೇ ಜ್ವರ ಬಂದಾಗ ಓಂಕಾಳಿನ (carom seeds) ಬಳಕೆ ಪರಂಪರಾಗತ ಔಷಧ ಪದ್ಧತಿಯಲ್ಲಿದೆ. ಮುಟ್ಟಿನ ಹೊಟ್ಟೆನೋವಿನ ಉಪಶಮನಕ್ಕೂ ಇದು ಪರಿಣಾಮಕಾರಿ ಮದ್ದು.

Human digestive system with

ಜೀರ್ಣಕಾರಿ

ಅಜವಾನಕ್ಕೆ ದೇಹವನ್ನು ಡಿಟಾಕ್ಸ್‌ ಮಾಡುವ ಸಾಮರ್ಥ್ಯವಿದೆ. ಹಸಿವನ್ನು ಹೆಚ್ಚಿಸುವುದೇ ಅಲ್ಲದೆ, ಪಚನಕ್ರಿಯೆಯನ್ನು ಚುರುಕು ಮಾಡಬಲ್ಲದು. ಹೊಟ್ಟೆಯುಬ್ಬರ, ವಾಯುಬಾಧೆ, ಆಸಿಡಿಟಿ, ಅಜೀರ್ಣದಿಂದ ಉಂಟಾಗುವ ಹೊಟ್ಟೆನೋವಿಗೆ ಇದು ಶೀಘ್ರ ಉಪಶಮನ ನೀಡುತ್ತದೆ. ತೀವ್ರ ಆಸಿಡಿಟಿಯಿಂದ ಕರುಳಿನಲ್ಲಿ ಹುಣ್ಣಾದರೆ, ಆ ನೋವು ತಡೆಯಲು ಇದು ಉಪಯುಕ್ತ. ಡಯರಿಯಾ, ಕಿಬ್ಬೊಟ್ಟೆ ನೋವಿನ ಶಮನಕ್ಕೆ ಓಂಕಾಳಿನ ಕಷಾಯ ಬಳಕೆಯಲ್ಲಿದೆ. ಪುಟ್ಟ ಮಕ್ಕಳಿಗೆ ಅಜೀರ್ಣದಿಂದ ಹೊಟ್ಟೆ ನೋವು ಬಂದರೆ, ಓಂಕಾಳನ್ನು ಸೇವಿಸಲು ನೀಡುವ ಕ್ರಮವಿಲ್ಲ. ಬದಲಿಗೆ, ಅಜವಾನದ ಎಣ್ಣೆಯನ್ನು ಹೊಕ್ಕುಳಿನ ಸುತ್ತಮುತ್ತ ಹಚ್ಚಲಾಗುತ್ತದೆ. ಇದರಿಂದ ಜೀರ್ಣಾಂಗಗಳು ಚುರುಕಾಗುತ್ತವೆ.

weight loss

ತೂಕ ಇಳಿಕೆ

ಜೀರ್ಣಾಂಗಗಳ ತೊಂದರೆಯನ್ನು ಕಡಿಮೆ ಮಾಡಿ, ದೇಹದ ಚಯಾಪಚಯವನ್ನೂ ಹೆಚ್ಚಿಸುವ ಈ ಮಸಾಲೆ ಬೀಜಗಳು, ತೂಕ ಇಳಿಕೆಗೂ ಬಳಕೆಯಾಗುತ್ತವೆ. ಇದರಲ್ಲಿರುವ ಥೈಮೋಲ್‌ (thymol) ಎಂಬ ಅಂಶವು ಚಯಾಪಚಯ ಚುರುಕಾಗಿಸಿ, ಕೊಬ್ಬನ್ನೂ ವಿಘಟಿಸುತ್ತದೆ. ಇದಕ್ಕಾಗಿ ಖಾಲಿ ಹೊಟ್ಟೆಯಲ್ಲಿ ಅಜವಾನದ ನೀರು ಕುಡಿಯುವ ಪದ್ಧತಿ ಚಾಲ್ತಿಯಲ್ಲಿದೆ. ದೇಹದಲ್ಲಿ ಶೇಖರವಾಗಿರುವ ಕೊಬ್ಬು ಕರಗಿಸಿ ಕೊಲೆಸ್ಟ್ರಾಲ್‌ ಮತ್ತು ರಕ್ತದೊತ್ತಡ ಕಡಿಮೆ ಮಾಡಲು ಸಹ ಇದು ನೆರವು ನೀಡುತ್ತದೆ.

Portrait of the young pregnant woman

ಬಾಣಂತಿಯರಿಗೆ ಮದ್ದು

ಪರಂಪರೆಯ ಔಷಧಿಗಳಲ್ಲಿ, ಹೆರಿಗೆಯ ನಂತರ ಹೊಟ್ಟೆಯ ಭಾಗಕ್ಕೆ ಬಲ ತುಂಬುವ ಉದ್ದೇಶದಿಂದ ಬೆಲ್ಲ ಮತ್ತು ತುಪ್ಪದ ಜೊತೆಗೆ ಅಜವಾನದ ಪುಡಿಯನ್ನು ಸೇರಿಸಿ ನೀಡಲಾಗುತ್ತದೆ. ಅನಗತ್ಯ ಕೊಬ್ಬು ನಿವಾರಣೆಗೂ ಇದು ನೆರವಾಗುತ್ತದೆ. ಗರ್ಭಾಶಯದ ಸಂಕುಚನ-ವಿಕಸನವನ್ನು ಸರಾಗಗೊಳಿಸಿ ಮುಟ್ಟಿನ ಹೊಟ್ಟೆ ನೋವು ಸಹ ಕಡಿಮೆ ಮಾಡುತ್ತದೆ

ಯಾರಿಗೆ ಬೇಡ?

ಗರ್ಭಿಣಿಯರಿಗೆ ಅಜವಾನದ ಬಳಕೆ ಮಾಡುವ ಕ್ರಮವಿಲ್ಲ. ಗರ್ಭಾಶಯನ ಸಂಚಲನಕ್ಕೆ ಇದು ಮೂಲವಾಗಬಹುದೆಂಬ ಕಾರಣ ಇದರ ಹಿಂದಿದೆ. ಪುಟ್ಟ ಮಕ್ಕಳಿಗೂ ಈ ಕಟು ರುಚಿಯ ಬೀಜಗಳನ್ನು ನೀಡುವುದಿಲ್ಲ. ಅಗತ್ಯವಿದ್ದರೆ ಅದರ ಎಣ್ಣೆಯನ್ನು ಲೇಪಕ್ಕೆ ಬಳಸುತ್ತಾರೆ. ರಕ್ತದೊತ್ತಡದ ಔಷಧಿ ಮೇಲಿರುವವರು ನಿಯಮಿತವಾಗಿ ಅಜವಾನ ಸೇವಿಸುವುದು ಸಲ್ಲದು. ಅಲರ್ಜಿಗಳಿದ್ದವರು ಈ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ.

ಇದನ್ನೂ ಓದಿ: Improve Oral Health: ಹಣ್ಣುಗಳ ಸೇವನೆಯಿಂದ ಬಾಯಿಯ ಆರೋಗ್ಯ ಸುಧಾರಿಸುತ್ತದೆಯೆ?

Continue Reading

Relationship

Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

ಮಕ್ಕಳು ಉದ್ದ ಬೆಳೆಯುವಂತೆ ಮಾಡುವುದೇನೂ ಬ್ರಹ್ಮವಿದ್ಯೆ ಅಂದುಕೊಳ್ಳಬೇಡಿ. ಮಕ್ಕಳ ದೇಹಕ್ಕೆ ಈ ಕೆಳಗಿನ ಆಹಾರಗಳನ್ನು ನಿಯಮಿತವಾಗಿ ಕೊಡುತ್ತಿದ್ದೇವಾ ಎಂದು ಒಮ್ಮೆ ಯೋಚಿಸಿದರೆ (Parenting tips) ಸಾಕು, ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲೇ ಸಿದ್ಧ!

VISTARANEWS.COM


on

Edited by

healthy children food
Koo

ಮಕ್ಕಳು ಬೆಳೆಯುವ ವಯಸ್ಸಿನಲ್ಲಿ ಚೆನ್ನಾಗಿ ತಿನ್ನಬೇಕು ಎಂಬ ಹಿರಿಯರ ಮಾತನ್ನು ನೀವು ಕೇಳಿರಬಹುದು. ಹೆಚ್ಚಾಗಿ, ಮನೆಯಲ್ಲಿರುವ ಹಿರಿಯರು, ಮಕ್ಕಳಿಗೆ ಆರೋಗ್ಯಪೂರ್ಣವಾದ ಆಹಾರವನ್ನು (Healthy food) ನೀಡುವುದನ್ನು ಪ್ರೋತ್ಸಾಹಿಸುತ್ತಲೇ ಇರುತ್ತಾರೆ. ಕೆಲವು ಪರಂಪರಾಗತ ತಿಂಡಿಗಳು, ಹಳೆಯ ತಿನಿಸುಗಳು, ಧಾನ್ಯ ಬೇಳೆಕಾಳುಗಳು ಹಾಗೂ ತರಕಾರಿಗಳಿಂದ ಸಮೃದ್ಧವಾದ ಆಹಾರ ಇತ್ಯಾದಿಗಳು ಮಕ್ಕಳ ನಿತ್ಯಾಹಾರವಾಗಿರಲಿ (children food) ಎಂದು ಮನೆಯಲ್ಲಿರುವ ಹಿರಿಯರು ಹೆಚ್ಚು ದೇಸೀ ತಿನಿಸುಗಳು, ಪೋಷಕಾಂಶಯುಕ್ತ ಬೆಳಗಿನ ಉಪಹಾರಗಳು ಇತ್ಯಾದಿಗಳತ್ತ ಗಮನ ನೀಡುತ್ತಾರೆ. ಆದರೆ ಇತ್ತೀಚೆಗಿನ ಧಾವಂತದ ಬದುಕಿನಲ್ಲಿ ಮಕ್ಕಳ ಕಣ್ಣಿಗೆ ಮಾರುಕಟ್ಟೆಯಲ್ಲೂ ಥರಹೇವಾರಿ, ಬಣ್ಣಬಣ್ಣದ ಆಕರ್ಷಕ, ರುಚಿಕಟ್ಟಾದ ಆಹಾರಗಳು ಸಿಗುವುದರಿಂದ ಮಕ್ಕಳೂ ಕೂಡಾ ಅವುಗಳ ದಾಸರಾಗುತ್ತಿದ್ದಾರೆ. ಇದರಿಂದ ಮಕ್ಕಳು ಎಳವೆಯಲ್ಲಿಯೇ ಹಲವಾರು ಆರೋಗ್ಯ ಸಮಸ್ಯೆಗಳನ್ನೂ (Health problems) ಎದುರಿಸುತ್ತಿದ್ದಾರೆ. ಬೊಜ್ಜು (Cholesterol) ಹೆಚ್ಚಾಗುತ್ತಿದೆ. ಮಧುಮೇಹ (Diabetes) ಸಾಮಾನ್ಯವಾಗುತ್ತಿದೆ. ನಮ್ಮ ಮಕ್ಕಳು ಉದ್ದ ಬೆಳೆಯದೆ ಅಡ್ಡ ಬೆಳೆಯುತ್ತಿದ್ದಾರಲ್ಲಾ ಎಂಬ ಕೊರಗೂ ಕೂಡಾ ಪೋಷಕರದು. ಹಾಗಾದರೆ ಮಕ್ಕಳು ಉದ್ದ ಬೆಳೆಯುವಂತೆ ಮಾಡುವುದೇನೂ ಬ್ರಹ್ಮವಿದ್ಯೆ ಅಂದುಕೊಳ್ಳಬೇಡಿ. ಮಕ್ಕಳ ದೇಹಕ್ಕೆ ಈ ಕೆಳಗಿನ ಆಹಾರಗಳನ್ನು ನಿಯಮಿತವಾಗಿ ಕೊಡುತ್ತಿದ್ದೇವಾ ಎಂದು ಒಮ್ಮೆ ಯೋಚಿಸಿದರೆ (Parenting tips) ಸಾಕು, ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲೇ ಸಿದ್ಧ!

1. ಡೈರಿ ಉತ್ಪನ್ನಗಳು: ಹಾಲು, ಮೊಸರು, ಚೀಸ್‌ ಮತ್ತಿತರ ಡೈರಿ ಉತ್ಪನ್ನಗಳಲ್ಲಿ ಕ್ಯಾಲ್ಶಿಯಂ ಹೇರಳವಾಗಿರುವುದರಿಂದ ಮಕ್ಕಳಿಗೆ ಅತ್ಯಂತ ಅಗತ್ಯ. ಬೆಳೆಯುವ ವಯಸ್ಸಿನಲ್ಲಿ ಮಕ್ಕಳಿಗೆ ಕ್ಯಾಲ್ಶಿಯಂನ ಅಗತ್ಯ ಅತ್ಯಂತ ಹೆಚ್ಚಿರುವುದರಿಂದ ಅವರ ಎಲುಬು ಗಟ್ಟಿಯಾಗಿ, ಶಕ್ತಿಶಾಲಿಯಾಗಿ ಬೆಳವಣಿಗೆ ಹೊಂದಲು ಪೋಷಕಾಂಶಗಳು ಬೇಕೇಬೇಕು. ಹುಟ್ಟಿದ ಮಕ್ಕಳಿಂದ ಹಿಡಿದು ಹದಿಹರೆಯ ಮುಗಿಯುವವರೆಗೂ ಮೂಳೆಗಳ ಬೆಳವಣಿಗೆ ಬಹಳ ಪ್ರಮುಖವಾಗಿ ಆಗುವುದರಿಂದ ಇಂತಹ ಸಂದರ್ಭ ಕ್ಯಾಲ್ಶಿಯಂ ಮಕ್ಕಳಿಗೆ ಸಿಗುವುದು ಅತ್ಯಂತ ಅಗತ್ಯ ಕೂಡಾ.

2. ಮೊಟ್ಟೆ: ಮೊಟ್ಟೆಯಲ್ಲಿ ಅತ್ಯಂತ ಸಮೃದ್ಧವಾಗಿ ಪ್ರೊಟೀನ್‌, ಅಮೈನೋ ಆಸಿಡ್‌ ಇರುವುದರಿಂದ ಇವು ಮಕ್ಕಳ ಪ್ರತಿಯೊಂದು ಅಂಗಾಂಶದ ಬೆಳವಣಿಗೆಯಲ್ಲೂ ಮಹತ್ವದ ಪಾತ್ರ ವಹಿಸುತ್ತವೆ. ಅಂಗಾಂಶದ ಬೆಳವಣಿಗೆ, ರಿಪೇರಿ ಇತ್ಯಾದಿಗಳ ಕೆಲಸವೂ ಪ್ರೊಟೀನ್‌ನಿಂದಲೇ ಆಗುತ್ತದೆ. ಮಕ್ಕಳಿಗೆ ಪ್ರೊಟೀನ್‌ ಮೊಟ್ಟೆಯಿಂದ ಅತ್ಯಂತ ಹೆಚ್ಚು ಸಿಗುತ್ತದೆ. ಮೊಟ್ಟೆ ತಿನ್ನದ ಮಂದಿ ಮೊಟ್ಟೆಗೆ ಪರ್ಯಾಯ ಮೂಲಗಳನ್ನು ಹುಡುಕಿಕೊಳ್ಳಬೇಕು.

3. ಮಾಂಸ: ಚಿಕನ್‌, ಟರ್ಕಿ ಮತ್ತಿತರ ಮಾಂಸಗಳಿಂದಲೂ ಪ್ರೊಟೀನ್‌, ಝಿಂಕ್‌ ಮತ್ತಿತರ ಪೋಷಕಾಂಶಗಳು ಲಭ್ಯವಾಗುವುದರಿಂದ ಇದು ಎಲುಬಿನ ಬೆಳವಣಿಗೆಯಲ್ಲಿಯೂ ಸಹಾಯ ಮಾಡುತ್ತವೆ.

4. ಮೀನು: ಸಾಲ್ಮನ್‌, ಮಕೆರೆಲ್‌ ಮತ್ತಿತರ ಮೀನುಗಳಲ್ಲಿ ಒಮೆಗಾ ೩ ಫ್ಯಾಟಿ ಆಸಿಡ್‌ಗಳು ಹೇರಳವಾಗಿರುವುದರಿಂದ ಬೆಳವಣಿಗೆಗೆ ಪೂರಕವಾಗಿದೆ.

5. ದ್ವಿದಳ ಧಾನ್ಯಗಳು ಹಾಗೂ ಬೇಳೆಕಾಳುಗಳು: ದ್ವಿದಳ ಧಾನ್ಯಗಳಲ್ಲಿಯೂ, ಬೇಳೆ ಕಾಳುಗಳಲ್ಲಿಯೂ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿರುವ ಪ್ರೊಟೀನ್‌, ಕಬ್ಬಿಣಾಂಶ, ಝಿಂಕ್‌ ಕೂಡಾ ಇದೆ. ಇವು ಸಂಪೂರ್ಣ ಆರೋಗ್ಯಕ್ಕೆ ಅತ್ಯಂತ ಅವಶ್ಯಕ ಕೂಡಾ.

6. ಹಸಿರು ಸೊಪ್ಪು ತರಕಾರಿಗಳು: ಬಸಳೆ, ಪಾಲಕ್‌ ಸೇರಿದಂತೆ ಹಸಿರು ಸೊಪ್ಪು ತರಕಾರಿಗಳಲ್ಲಿ ಸಾಕಷ್ಟು ವಿಟಮಿನ್‌, ಖನಿಜಾಂಶ ಹಾಗೂ ಆಂಟಿ ಆಕ್ಸಿಡೆಂಟ್‌ಗಳೂ ಇರುವುದರಿಂದ ಮಕ್ಕಳ ಒಟ್ಟು ಆರೋಗ್ಯಕ್ಕೆ ಇದು ಪೂರಕವಾಗಿದೆ.

7. ಬೀಜಗಳು: ಬಾದಾಮಿ, ವಾಲ್‌ನಟ್‌, ಪಿಸ್ತಾ, ಕುಂಬಳಕಾಯಿ ಬೀಜ, ಸೌತೇಕಾಯಿ ಬೀಜ, ಚಿಯಾ ಬೀಜ, ಅಗಸೆ ಬೀಜ ಸೇರಿದಂತೆ ಎಲ್ಲ ಬಗೆಯ ಬೀಜಗಳಲ್ಲೂ ಮೆಗ್ನೀಶಿಯಂ ಸೇರಿದಂತೆ ಎಲ್ಲ ಬಗೆಯ ಪೋಷಕಾಂಶಗಳೂ ಇರುವುದರಿಂದ ಬೆಳವಣಿಗೆಗೆ ಇವು ಸಹಾಯ ಮಾಡುತ್ತವೆ.

8. ಹಣ್ಣುಗಳು: ಕಿತ್ತಳೆ, ಸ್ಟ್ರಾಬೆರ್ರಿ, ಕಿವಿ ಮತ್ತಿತರ ಹಣ್ಣುಗಳಲ್ಲಿ ವಿಟಮಿನ್‌ ಸಿ ಹೇರಳವಾಗಿದ್ದು, ಮಕ್ಕಳಲ್ಲಿ ರೋಗನಿರೋಧಕತೆ ಹೆಚ್ಚಿಸಿ, ಆರೋಗ್ಯವಂತರನ್ನಾಗಿ ಮಾಡುವ ಮೂಲಕ ಬೆಳವಣಿಗೆಯನ್ನು ಪ್ರೇರೇಪಿಸುತ್ತದೆ.

ಇದನ್ನೂ ಓದಿ: Parenting Tips: ನಿಮ್ಮ ಮಕ್ಕಳು ಶಾಲೆಯಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಬೇಕೇ? ಇಲ್ಲಿವೆ ನವಸೂತ್ರಗಳು!

Continue Reading

ಆರೋಗ್ಯ

World Lung Day: ಶ್ವಾಸಕೋಶದ ಸಮಸ್ಯೆ ಉಂಟಾಗದಿರಲು ಹೀಗೆ ಮಾಡಿ

ದೇಹದ ಉಳಿದೆಲ್ಲ ಅಂಗಗಳಿಗೆ ಅನ್ವಯಿಸುವ ಬಹಳಷ್ಟು ನಿಯಮಗಳು ನಮ್ಮ ಪುಪ್ಪುಸಗಳಿಗೂ ಅನ್ವಯಿಸುತ್ತವೆ. ಸಮತೋಲಿತವಾದ ಆಹಾರ ಶ್ವಾಸಕೋಶಗಳ (World Lung Day) ದೀರ್ಘ ಬಾಳಿಕೆಗೆ ನಾಂದಿ ಹಾಡಬಲ್ಲದು. ಒತ್ತಡ ನಿವಾರಣೆಯ ಪ್ರಮುಖ ತಂತ್ರವಾದ ಪ್ರಾಣಾಯಾಮವು ಶ್ವಾಸಕೋಶಗಳಿಗೆ ಶಕ್ತಿ ತುಂಬಬಲ್ಲದು. ನಿಯಮಿತ ವ್ಯಾಯಾಮ ಬಹಳಷ್ಟು ಮಾಡಬಲ್ಲದು.

VISTARANEWS.COM


on

Edited by

World Lung Day
Koo

ಇವು ಜಟಿಲ ಪ್ರಶ್ನೆಗಳು- ಉಸಿರಾಡುವ ಗಾಳಿ ಇಷ್ಟೊಂದು ಕಲುಷಿತವಾಗಿರುವಾಗ ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಸೋಂಕುಗಳು ನೇರವಾಗಿ ಶ್ವಾಸಕೋಶಕ್ಕೇ ದಾಳಿ ಇಡುವಾಗ, ಅದನ್ನು ಜೋಪಾನ ಮಾಡುವುದು ಸಾಧ್ಯವೇ? ಪುಪ್ಪುಸಗಳ ಅನಾರೋಗ್ಯ ಎಂಬುದು ಅತ್ಯಂತ ಸಾಮಾನ್ಯ ವಿಷಯ ಎನಿಸಿರುವ ದಿನಗಳಲ್ಲಿ, ಅವುಗಳ ದೀರ್ಘ ಬಾಳಿಕೆಗೆ ಏನು ಮಾಡಬೇಕು? ಸೆಪ್ಟೆಂಬರ್‌ 25ನೇ ದಿನ ವಿಶ್ವ ಶ್ವಾಸಕೋಶ ದಿನವನ್ನಾಗಿ (World Lung Day) ಆಚರಿಸುತ್ತಿರುವುದು, ಈ ಪ್ರಶ್ನೆಗಳ ಹಿನ್ನೆಲೆಯಲ್ಲಿ ಮಹತ್ವವನ್ನು ಹೆಚ್ಚಿಸಿಕೊಂಡಿದೆ.

World lung day or lung healthy concept

ಗಾಳಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯುವಲ್ಲಿ ಸಮುದಾಯದ ಇಚ್ಛಾಶಕ್ತಿ ಬೇಕು. ಏಕಾಂಗಿಯಾಗಿ ಹೋರಾಡಿ ಯಶಸ್ಸು ಪಡೆದವರಿಲ್ಲವೆಂದಲ್ಲ; ಆದರೆ ಅದು ಎಲ್ಲರಿಗೂ ಸಾಧ್ಯವೇ ಎಂಬುದೂ ಯೋಚಿಸುವ ವಿಚಾರ. ಈ ವಿಷಯದ ಹೊರತಾಗಿ, ಇನ್ನೇನನ್ನಾದರೂ ವೈಯಕ್ತಿವಾಗಿ ನಾವು ಮಾಡಬಹುದೇ? ಖಂಡಿತ, ದೇಹದ ಉಳಿದೆಲ್ಲಾ ಅಂಗಗಳಿಗೆ ಅನ್ವಯಿಸುವ ಬಹಳಷ್ಟು ನಿಯಮಗಳು ನಮ್ಮ ಪುಪ್ಪುಸಗಳಿಗೂ ಅನ್ವಯಿಸುತ್ತವೆ. ಸಮತೋಲಿತವಾದ ಆಹಾರ ಶ್ವಾಸಕೋಶಗಳ (World Lung Day) ದೀರ್ಘ ಬಾಳಿಕೆಗೆ ನಾಂದಿ ಹಾಡಬಲ್ಲದು. ಒತ್ತಡ ನಿವಾರಣೆಯ ಪ್ರಮುಖ ತಂತ್ರವಾದ ಪ್ರಾಣಾಯಾಮವು ಶ್ವಾಸಕೋಶಗಳಿಗೆ ಶಕ್ತಿ ತುಂಬಬಲ್ಲದು. ನಿಯಮಿತ ವ್ಯಾಯಾಮ ಬಹಳಷ್ಟು ಮಾಡಬಲ್ಲದು. ಇವುಗಳನ್ನೇ ವಿವರವಾಗಿ ನೋಡುವುದಾದರೆ-

Hot Vegetable Meal

ಬಿಸಿಯಾದ, ತಾಜಾ ಆಹಾರ ಸೇವಿಸಿ

ಅಡುಗೆ ಮಾಡುವುದಕ್ಕೆ ಸಮಯವೇ ಇಲ್ಲ ಎಂಬ ನೆವ ಇಟ್ಟುಕೊಂಡು ಸಿಕ್ಕಿದಲ್ಲಿ, ಸಿಕ್ಕಿದ್ದನ್ನು ತಿಂದುಕೊಂಡು ಕಾಲ ಹಾಕುವುದು ಖಂಡಿತಕ್ಕೂ ಆರೋಗ್ಯದ ಮೇಲೆ ಬರೆ ಹಾಕುತ್ತದೆ. ಅದರಲ್ಲೂ ತಂಗಳು ತಿನ್ನುವುದು, ಫ್ರಿಜ್‌ನಲ್ಲಿರುವ ಅತಿಯಾದ ತಣ್ಣನೆಯ ಆಹಾರ, ಹಲ್ಲು ಜುಂಮ್ಮೆನ್ನುವಂಥ ಜ್ಯೂಸ್‌, ಸೋಡಾಗಳು ಶ್ವಾಸಕೋಶಗಳ ಉರಿಯೂತವನ್ನು ಹೆಚ್ಚಿಸುತ್ತವೆ. ಹಾಗಾಗಿ ಇಡೀ ಧಾನ್ಯಗಳನ್ನು ಮತ್ತು ಬಿಸಿಯಾದ ಆಹಾರಗಳನ್ನು ತಾಜಾ ಇರುವಾಗಲೇ ಸೇವಿಸುವುದು ಒಳ್ಳೆಯದು

Herbs, condiments and spices

ಸಾಂಬಾರ್ ಪದಾರ್ಥಗಳು

ಭಾರತೀಯ ಅಡುಗೆ ಮನೆಗಳಲ್ಲಿ ಬಳಕೆಯಾಗುವ ಬಹಳಷ್ಟು ಸಾಂಬಾರ್ ಪದಾರ್ಥಗಳು ರುಚಿಗೆ ಮಾತ್ರವೇ ಅಲ್ಲ, ಪಚನ ಕಾರ್ಯಕ್ಕೂ ಸೈ. ಅರಿಶಿನ, ಜೀರಿಗೆ, ಧನಿಯಾ, ಕಾಳು ಮೆಣಸು, ಶುಂಠಿ, ಚಕ್ಕೆ ಮುಂತಾದವು ಜೀರ್ಣಕ್ರಿಯೆಯನ್ನು ಚುರುಕು ಮಾಡುತ್ತವೆ. ಸರಿಯಾಗಿ ಜೀರ್ಣವಾಗದ ಆಹಾರಗಳು ಕಫಕ್ಕೂ ಕಾರಣವಾಗಬಹುದು. ಕೆಲವೊಮ್ಮೆ ಅಲರ್ಜಿಯಂಥ ಪ್ರತಿಕ್ರಿಯೆಗಳನ್ನೂ ದೇಹ ತೋರಿಸಬಹುದು. ಹಾಗಾಗಿ ಸಾಂಬಾರ ಪದಾರ್ಥಗಳನ್ನು ನಿಯಮಿತ ಮತ್ತು ಮಿತವಾಗಿ ಬಳಸಿ

Herbal tea with honey

ಹರ್ಬಲ್‌ ಚಹಾಗಳು ಅಥವಾ ಕಷಾಯಗಳು

ತುಳಸಿ, ಅತಿಮಧುರ, ಶುಂಠಿ, ನಿಂಬೆಹುಲ್ಲು, ಪುದೀನಾ ಮುಂತಾದ ಮೂಲಿಕೆಗಳ ಚಹಾ ಇಲ್ಲವೇ ಕಷಾಯಗಳು ಶ್ವಾಸಕೋಶಗಳ ಆರೋಗ್ಯಕ್ಕೆ ಹಿತಕಾರಿ. ಇವು ರೋಗ ನಿರೋಧಕ ಶಕ್ತಿಯನ್ನು ಚುರುಕು ಮಾಡುವುದೇ ಅಲ್ಲದೆ, ಗಂಟಲಿಗೆ ಆರಾಮ ನೀಡಿ, ಕಫ ಕರಗಿಸಲೂ ನೆರವು ನೀಡುತ್ತವೆ

Healthy fat source

ಆರೋಗ್ಯಕರ ಕೊಬ್ಬು

ಕೊಬ್ಬೆಲ್ಲ ಕೆಟ್ಟದ್ದು ಎಂದು ಭಾವಿಸಿದವರಿಗೆ ಇಲ್ಲೊಂದು ಕಿವಿ ಮಾತು- ಸಂಸ್ಕರಿತ ಕೊಬ್ಬುಗಳನ್ನು, ಕರಿದ ಆಹಾರಗಳನ್ನು ದೂರ ಇರಿಸಿದಷ್ಟೂ ಕ್ಷೇಮ. ಆದರೆ ಆರೋಗ್ಯಕರ ಕೊಬ್ಬುಗಳು ದೇಹಕ್ಕೆ ದೊರೆಯಲೇಬೇಕು. ತುಪ್ಪ, ಕೊಬ್ಬರಿ ಎಣ್ಣೆ, ಆಲಿವ್‌ ಎಣ್ಣೆ, ಅಗಸೆ ಎಣ್ಣೆ ಮುಂತಾದವು ಶರೀರಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತವೆ. ಇದು ಶ್ವಾಸಕೋಶಗಳ ಸಾಮರ್ಥ್ಯ ಹೆಚ್ಚಳಕ್ಕೂ ಬೇಕಾದವು.

Hand with dipper picking honey from a jar of honey

ಜೇನುತುಪ್ಪ

ಯಾವುದೇ ಸಂಸ್ಕರಣೆಗೆ ಒಳಗಾಗದ ನೈಸರ್ಗಿಕ ಜೇನುತುಪ್ಪ ಶ್ವಾಸಕೋಶ ಆರೋಗ್ಯಕ್ಕೆ ಬಹಳ ಒಳ್ಳೆಯದು. ಗಂಟಲಲ್ಲಿ ಕಿರಿಕಿರಿ, ನೆಗಡಿ, ಕೆಮ್ಮಿನಂಥ ಲಕ್ಷಣಗಳಿದ್ದರೆ, ಜೇನುತುಪ್ಪದೊಂದಿಗೆ ತುಳಸಿ ರಸ ಅಥವಾ ಶುಂಠಿ ರಸ ಮುಂತಾದ ಸರಳ ಮನೆಮದ್ದುಗಳು ಉಪಶಮನ ನೀಡುತ್ತವೆ.

Winter table appointments with macaroons and sweets

ಸಂಸ್ಕರಿತ/ರಿಫೈನ್ಡ್‌ ಆಹಾರಗಳು ಬೇಡ

ಬಿಳಿ ಅಕ್ಕಿ, ರಿಫೈನ್ಡ್‌ ಎಣ್ಣೆ, ಬಿಳಿ ಬ್ರೆಡ್‌, ಬಿಳಿ ಪಾಸ್ತಾ, ಮೈದಾದಿಂದ ತಯಾರಾದ ಆಹಾರಗಳು- ಇಂಥವೆಲ್ಲವೂ ಸಂಸ್ಕರಿತ ಆಹಾರಗಳ ಪಟ್ಟಿಯಲ್ಲಿ ಬರುತ್ತವೆ. ಆಹಾರ ಸಂಸ್ಕಾರಗೊಂಡಷ್ಟೂ ದೇಹದಲ್ಲಿ ಉರಿಯೂತಕ್ಕೆ ಕಾರಣವಾಗುತ್ತವೆ. ಅದರಲ್ಲೂ ಶ್ವಾಸಕೋಶಗಳ ಉರಿಯೂತವೆಂದರೆ ಕೆಮ್ಮು, ಉಬ್ಬಸ, ಅಸ್ತಮಾದಂಥ ಲಕ್ಷಣಗಳು ಕಾಡತೊಡಗುತ್ತವೆ. ಹಾಗಾಗಿ ಉರಿಯೂತಕ್ಕೆ ಕಾರಣವಾಗುವ ಆಹಾರಗಳನ್ನು ದೂರ ಮಾಡಿ.

Woman Sleeping In

ನೀರು-ನಿದ್ದೆ ಬೇಕು

ದಿನಕ್ಕೆ ಎಂಟು ತಾಸುಗಳ ನಿದ್ದೆಯು ದೇಹದಲ್ಲಿ ಅಗತ್ಯ ದುರಸ್ತಿ ಕಾರ್ಯಗಳನ್ನು ಮಾಡಿಸಲು ನೆರವಾಗುತ್ತದೆ. ದಿನಕ್ಕೆಂಟು ಗ್ಲಾಸ್ ನೀರು ಕುಡಿಯುವುದು ದೇಹದ ಒಟ್ಟಾರೆ ಸ್ವಾಸ್ಥ್ಯಕ್ಕೆ ಅಗತ್ಯ.

ಇದನ್ನೂ ಓದಿ: Health Tips: ಶೀತ, ನೆಗಡಿಯಾದಾಗ ಈ ಎಲ್ಲ ಹಣ್ಣುಗಳಿಂದ ದೂರವಿರುವುದು ಒಳ್ಳೆಯದು!

Continue Reading

ಆರೋಗ್ಯ

Tips For Eyes: ಕಣ್ಣು ಅದುರುವುದಕ್ಕೆ ಶಕುನ ಕಾರಣವಲ್ಲ! ಮತ್ತೇನು ಕಾರಣ?

ಕಣ್ಣು ಅದುರುವುದು (Tips For Eyes) ಸಾಮಾನ್ಯ. ಆದರೆ ಇದು ಶಕುನದ ಸೂಚಕ ಎಂದು ಹೇಳುವವರೇ ಹೆಚ್ಚು. ಆದರೆ ಇದಕ್ಕೆ ಅಸಲಿ ಕಾರಣ ಏನು? ಪರಿಹಾರ ಏನು? ಈ ಲೇಖನ ಓದಿ.

VISTARANEWS.COM


on

Edited by

Eye
Koo

ಕಣ್ಣು ಅದುರುತ್ತಿದೆಯೇ? (Tips For Eyes) ಎಡಗಣ್ಣೋ- ಬಲಗಣ್ಣೋ? ಇದೆಂಥಾ ಶಕುನವೆಂದು ಪಂಚಾಂಗ ನೋಡುವುದೋ ಅಥವಾ ಯಾರಲ್ಲೋ ಶಾಸ್ತ್ರ ಕೇಳುವವರಿಗೇನೂ ಬರವಿಲ್ಲ. ಮುಂದಾಗಲಿರುವ ಯಾವುದನ್ನೋ, ಅದುರುವ ಮೂಲಕ ಸೂಚಿಸುವುದಕ್ಕೆ ಕಣ್ಣುಗಳಿಗೆ ಸಾಧ್ಯವಿಲ್ಲದಿದ್ದರೂ, ದೇಹದ ಕುರಿತಾಗಿ ಬೇರೇನನ್ನೋ ಅವು ಸೂಚಿಸುವುದು ಹೌದು. ಅಂದರೆ, ಕಣ್ಣುಗಳ ಮೇಲೆ ಒತ್ತಡ, ಆಯಾಸ ಹೆಚ್ಚಿದಾಗ, ನೇತ್ರಗಳಲ್ಲಿ ಶುಷ್ಕತೆಯಿದ್ದರೆ, ಅತಿಯಾದ ಕೆಫೇನ್‌ ಅಥವಾ ಆಲ್ಕೊಹಾಲ್‌ ಸೇವನೆ, ನಿರ್ಜಲೀಕರಣ- ಇಂಥ ಸಂದರ್ಭಗಳಲ್ಲಿ ಕಣ್ಣುಗಳು ಅದುರುವುದಿದೆ. ಇದಲ್ಲದೆಯೂ ಬೇರೆ ಕಾರಣಗಳು ಇರಬಹುದು. ವಿಟಮಿನ್‌ ಬಿ12 ಕೊರತೆ, ಸ್ಕ್ರೀನ್‌ಗಳನ್ನು ಅತಿಯಾಗಿ ನೋಡಿದಾಗ ಉಂಟಾಗುವ ಆಯಾಸ, ಒತ್ತಡ, ಧೂಮಪಾನ, ಖಿನ್ನತೆಯಂಥ ಕಾರಣಗಳಿಗೂ ಕಣ್ಣು ಅದುರಬಹುದು.

ಏನು ಮಾಡಬೇಕು?

ಕಣ್ಣುಗಳು ನಮ್ಮ ಮಾತಿಗೆ ಬೆಲೆ ಕೊಡದಂತೆ ತಮ್ಮಷ್ಟಕ್ಕೆ ತಾವೇ ಅದುರುತ್ತಿದ್ದರೆ, ಕಿರಿಕಿರಿಯ ಸಂಗತಿಯದು. ಒಂದೊಮ್ಮೆ ಕಣ್ಣು ಒಣಗಿದಂತಾಗಿ ಅದುರುತ್ತಿದ್ದರೆ, ನೇತ್ರಗಳನ್ನು ಬಿಗಿಯಾಗಿ ಮುಚ್ಚಿಕೊಳ್ಳಿ. ಮತ್ತೆ ದೊಡ್ಡದಾಗಿ ಕಣ್ಣಗಲಿಸಿ. ಇದೊಂದು ರೀತಿಯಲ್ಲಿ ಅತಿಯಾಗಿ ಮಿಟುಕಿಸಿದಂತೆ. ಹೀಗೆ ಮಾಡುವುದರಿಂದ ಕಣ್ಣುಗಳಲ್ಲಿ ನೀರು ತುಂಬಿಕೊಳ್ಳುತ್ತವೆ. ಒಣಗಿದ ಅನುಭವ ಕಡಿಮೆಯಾಗುತ್ತದೆ. ಮಾತ್ರವಲ್ಲ, ಕಣ್ಣು ಮತ್ತು ಮುಖದ ಮಾಂಸಖಂಡಗಳಿಗೆ ಸಣ್ಣ ವ್ಯಾಯಾಮವಾದಂತಾಗಿ ಈ ಭಾಗಗಳಲ್ಲಿ ರಕ್ತ ಸಂಚಾರ ವೃದ್ಧಿಯಾಗುತ್ತದೆ.

ಮಸಾಜ್

ಬೆರಳಿನಿಂದ ಕಣ್ಣುಗಳ ಕೆಳ ರೆಪ್ಪೆಯ ಅಡಿಗೆ ಸಣ್ಣದಾಗಿ ಮಸಾಜ್‌ ಮಾಡಬಹುದು. ಈ ಸಂದರ್ಭದಲ್ಲಿ ಕಣ್ಣುಗಳನ್ನು ಸತತವಾಗಿ ಮಿಟುಕಿಸಲೂ ಬಹುದು. ಆದರೆ ಈ ಕೆಲಸ ಮಾಡುವಾಗ ಕೈಗಳನ್ನು ಮೊದಲು ಶುಚಿ ಮಾಡಿಕೊಳ್ಳಬೇಕಾಗುತ್ತದೆ. ಹಾಗಿಲ್ಲದಿದ್ದರೆ ಸೋಂಕಾಗುವ ಸಾಧ್ಯತೆ ಇಲ್ಲದಿಲ್ಲ. ಹೀಗೆ ಮಸಾಜ್‌ ಮಾಡುವುದರಿಂದ ಕಣ್ಣುಗಳಿಗೆ ರಕ್ತ ಸಂಚಾರ ವೃದ್ಧಿಸುವುದೇ ಅಲ್ಲದೆ, ಈ ಭಾಗದ ಮಾಂಸಖಂಡಗಳು ಬಲಗೊಳ್ಳುತ್ತವೆ.

ಇದನ್ನೂ ಓದಿ: Eye health foods | ಕಣ್ಣು ಆರೋಗ್ಯವಾಗಿ ಇರಬೇಕಿದ್ದರೆ ಇವನ್ನೆಲ್ಲ ತಿನ್ನುತ್ತಿರಿ!

Tips For Eyes

ವ್ಯಾಯಾಮ

ದೃಷ್ಟಿಯ ಚಲನೆಯನ್ನು ಮೇಲೆ-ಕೆಳಗೆ-ಎಡಕ್ಕೆ-ಬಲಕ್ಕೆ-ವೃತ್ತಾಕಾರದಲ್ಲಿ ಹಾಗೂ ಮುಚ್ಚಿ-ಬಿಟ್ಟು ಮಾಡಿ ಕಣ್ಣುಗಳಿಗೆ ವ್ಯಾಯಾಮ ಮಾಡಿಸಬಹುದು. ಇದರಿಂದ ಸತತವಾಗಿ ಸ್ಕ್ರೀನ್‌ ನೋಡಿದರಿಂದ ಉಂಟಾದ ಒತ್ತಡ, ಆಯಾಸ ಕಡಿಮೆಯಾಗುತ್ತದೆ.

ಆಲ್ಕೊಹಾಲ್‌ ಸೇವನೆ ನಿಲ್ಲಿಸಿ

ಕೆಫೇನ್‌ ಮತ್ತು ಆಲ್ಕೊಹಾಲ್‌ ಸೇವನೆ ಹೆಚ್ಚಿದರೂ ಈ ಕಿರಿಕಿರಿ ಎದುರಾದೀತು. ಇದೇ ಕಾರಣ ಹೌದಾದರೆ, ಪರಿಹಾರ ನಿಮ್ಮ ಕೈಯಲ್ಲೇ ಇದೆ. ದೇಹಕ್ಕೆ ನೀರು ಕಡಿಮೆಯಾದರೂ ಕಣ್ಣದುರುವುದುಂಟು. ಹಾಗಾಗಿ ಸಾಕಷ್ಟು ನೀರು ಕುಡಿಯಿರಿ.

Tips For Eyes

ಶುದ್ಧ ನೀರಿನಿಂದ ತೊಳೆಯಿರಿ

ಬೆಚ್ಚಗಿನ ಮತ್ತು ತಂಪಾದ ಶುದ್ಧ ನೀರಿನಿಂದ ಕಣ್ಣು ತೊಳೆಯಬಹುದು. ಅಂದರೆ, ಮುಚ್ಚಿದ ಕಣ್ಣುಗಳ ಮೇಲೆ ಒಮ್ಮೆ ಬೆಚ್ಚಗಿನ ನೀರು, ಇನ್ನೊಮ್ಮೆ ತಣ್ಣೀರು ಹಾಕಿ ತೊಳೆಯುವುದು. ತಣ್ಣೀರಿನಿಂದ ಕಣ್ಣಿನ ರಕ್ತನಾಳಗಳು ಸಂಕುಚಿತಗೊಂಡರೆ, ಬೆಚ್ಚಗಿನ ನೀರಿನಿಂದ ಅವು ವಿಕಸನಗೊಳ್ಳುತ್ತವೆ. ಕಣ್ಣುಗಳು ತುಂಬಾ ಅದುರುತ್ತಿದ್ದರೆ, ಇದನ್ನು ದಿನಕ್ಕೆ ನಾಕಾರು ಬಾರಿ ಮಾಡಬಹುದು. ಕಣ್ಣಿನ ರಕ್ತ ಪರಿಚಲನೆ ಉತ್ತಮಗೊಂಡು, ಅದುರುವುದು ಕಡಿಮೆಯಾಗುತ್ತದೆ.

ಈ ಎಲ್ಲಾ ಪ್ರಯತ್ನಗಳ ನಂತರವೂ ಸಮಸ್ಯೆ ಪರಿಹಾರವಾಗಲಿಲ್ಲ ಎಂದರೆ, ದೃಷ್ಟಿಯಲ್ಲಿ ದೋಷ ಕಂಡುಬಂದರೆ, ಕಣ್ಣುಗಳಲ್ಲಿ ಈವರೆಗಿಲ್ಲದ ಯಾವುದಾದರೂ ಸಮಸ್ಯೆ ಪ್ರಾರಂಭವಾದರೆ, ಅದುರುವಾಗ ಕಣ್ಣುಗಳು ಸಂಪೂರ್ಣ ಮುಚ್ಚಿಕೊಳ್ಳುತ್ತಿದ್ದರೆ ವೈದ್ಯರನ್ನು ಕಾಣಬಹುದು.

Continue Reading
Advertisement
CM siddaramaiah at Chamarajanagar
ಕರ್ನಾಟಕ11 mins ago

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

Google
EXPLAINER12 mins ago

ವಿಸ್ತಾರ Explainer: Google Birthday: ಗೂಗಲ್‌ನ 25 ವರ್ಷದ ಇತಿಹಾಸ ಹೇಗಿತ್ತು? ಒಂದು ನೋಟ ಇಲ್ಲಿದೆ

HD DeveGowda HD Kumaraswamy and PM Narendra Modi on BJP JDS alliance
ಕರ್ನಾಟಕ20 mins ago

BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

Nayanthara Vignesh Shivan twin
South Cinema26 mins ago

Actress Nayanthara: ನಯನತಾರಾ -ವಿಘ್ನೇಶ್ ಶಿವನ್ ಅವಳಿ ಮಕ್ಕಳ ಮೊದಲ ಬರ್ತ್‌ಡೇ; ಕ್ಯೂಟ್‌ ಫೋಟೊಸ್ ಔಟ್‌!

Murder case in Kolara
ಕರ್ನಾಟಕ27 mins ago

Murder Case : ಕುಡಿದ ಮತ್ತಿನಲ್ಲಿ ಮೂತ್ರ ಸಿಡಿಸಿದ; ಪ್ರಶ್ನೆ ಮಾಡಿದ ವ್ಯಾಪಾರಿಯ ಮನೆಗೆ ನುಗ್ಗಿ ಕೊಂದ ಕಿರಾತಕ!

Team India
ಕ್ರಿಕೆಟ್47 mins ago

World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್​ ಗೆಲ್ತಾರೆ; ಪಾಕ್​ ತಂಡ ಮಾಜಿ ಆಟಗಾರನ ಭವಿಷ್ಯ

ದೇಶ48 mins ago

Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್‌ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!

Nithya Menen
South Cinema52 mins ago

Nithya Menen: ʻಮೈನಾʼ ನಟಿ ನಿತ್ಯಾ ಮೆನನ್‌ಗೆ ತಮಿಳು ಹೀರೊನಿಂದ ಕಿರುಕುಳ; ಸ್ಪಷನೆ ಕೊಟ್ಟ ನಟಿ!

Narendra Modi
ದೇಶ56 mins ago

Lok Sabha Election 2024: 2.5 ಲಕ್ಷ ಗ್ರಾಮಗಳಲ್ಲಿ ಬಿಜೆಪಿ ‘ರಥ’ಯಾತ್ರೆ; ‘ಲೋಕ’ ಸಮರಕ್ಕೆ ರಣತಂತ್ರ

HD Devegowda Press meet for BJP JDS alliance
ಕರ್ನಾಟಕ1 hour ago

BJP JDS alliance : ಜೆಡಿಎಸ್‌ಗೆ ಕಾಂಗ್ರೆಸ್‌ ಮಾಡಿದ ಮೋಸದ ಬಗ್ಗೆ 100 ಕಾರಣ ಹೇಳುವೆ: ಗುಡುಗಿದ ದೇವೇಗೌಡ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ8 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌