Site icon Vistara News

Drown in lake : ಆಟವಾಡುತ್ತಾ ಕಾಲು ಜಾರಿ ಕೆರೆಗೆ ಬಿದ್ದ ಮಕ್ಕಳು; ರಕ್ಷಣೆ ಮಾಡಲು ಹೋದ ತಾಯಿ ನೀರುಪಾಲು

Drowned in river

ಶಿರಾ: ಈಜು ಬಾರದ ತನ್ನಿಬ್ಬರು ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರುಪಾಲಾಗಿದ್ದಾರೆ. ಶಿರಾ ತಾಲೂಕಿನ ರತ್ನಸಂದ್ರ ಗ್ರಾಮದ ಕೆರೆಯಲ್ಲಿ (Drown in lake) ಘಟನೆ ನಡೆದಿದೆ. ಮನು ಎಂಬುವವರು‌ ಮಕ್ಕಳಿಬ್ಬರನ್ನು ಕರೆದುಕೊಂಡು ಬಟ್ಟೆ ತೊಳೆಯಲೆಂದು ಕೆರೆ ಬಳಿ ಹೋಗಿದ್ದಾರೆ.

ಈ ವೇಳೆ ಮಕ್ಕಳಿಬ್ಬರು ಆಟವಾಡುವಾಗ ಕೆರೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಮಕ್ಕಳ ಕೂಗಾಟ ಕೇಳಿ ರಕ್ಷಿಸಲು ಹೋದ ಮನು ನೀರಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾರೆ. ಕುಟುಂಬವು ತೀವ್ರ ಆರ್ಥಿಕವಾಗಿ ಹಿಂದುಳಿದಿದ್ದು, ಪ್ರಾಣ ಉಳಿಸಿಕೊಂಡ ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಳ್ಳಂಬೆಳ್ಳ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಮಂಡ್ಯ: ಕೊಳದಲ್ಲಿ ಈಜಲು ಹೋದ ಬಾಲಕರಿಬ್ಬರು (Youth drowned) ನೀರುಪಾಲಾದ ಘಟನೆ ಮದ್ದೂರಮ್ಮ ದೇವಾಲಯದ ಹಿಂಭಾಗದಲ್ಲಿ ನಡೆದಿದೆ. ಅಜಲಮ್ ಪಾಷಾ (16), ಮಹಮ್ಮದ್ ಅಲಿ (13) ಮೃತ ಬಾಲಕರು.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ನಿವಾಸಿಗಳಾದ ಇವರಿಬ್ಬರು ದೇವಾಲಯದ ಹಿಂದಿದ್ದ ಕೊಳಕ್ಕೆ ಈಜಲು ಹೋಗಿದ್ದಾರೆ. ಈ ವೇಳೆ ದಡ ಸೇರಲು ಆಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬಾಲಕರಿಬ್ಬರನ್ನು ಮೇಲಕ್ಕೆತ್ತಿದ್ದಾರೆ.

ಆಸ್ಪತ್ರೆ ಮುಂಭಾಗ ಜಮಾಯಿಸಿದ ಬಾಲಕರ ಪೋಷಕರು

ಇತ್ತ ಬಾಲಕರು ಕೆರೆಯಲ್ಲಿ ಮುಳುಗಿರುವ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version