Site icon Vistara News

Drown in river | ಶೃಂಗೇರಿಯ ತುಂಗಾ ನದಿಯಲ್ಲಿ ಮುಳುಗಿ ಬೆಂಗಳೂರು ವಿದ್ಯಾರ್ಥಿ ನೀರುಪಾಲು

shrigeri Drown in river Bengaluru student death

ಚಿಕ್ಕಮಗಳೂರು: ಬೆಂಗಳೂರಿನಿಂದ ಕಾಫಿನಾಡಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ಶೃಂಗೇರಿಯ ತುಂಗಾ ನದಿಯಲ್ಲಿ (Drown in river) ಈಜುವಾಗ ಮುಳುಗಿ ಮೃತಪಟ್ಟಿದ್ದಾನೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇಗುಲದ ಪಕ್ಕದಲ್ಲೇ ಈ ಅವಘಡ ಸಂಭವಿಸಿದೆ. ಜಿಗಣಿ ಕೃಷ್ಣ ಕಾಲೇಜಿನ ವಿದ್ಯಾರ್ಥಿ ಚಂದನ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಚಂದನ್ ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಿಂದ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಚಂದನ್‌ ನದಿಯಲ್ಲಿ ಈಜಲು ಹೋಗಿದ್ದಾನೆ ಎನ್ನಲಾಗಿದೆ. ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ. ಬಳಿಕ ಸ್ಥಳೀಯರು ಸೇರಿ ಬಾಲಕನ ಶವವನ್ನು ನದಿಯಿಂದ ಮೇಲಕ್ಕೆ ಎತ್ತಿದ್ದಾರೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident Case | ತಮಿಳುನಾಡಿನಲ್ಲಿ ರಸ್ತೆ ಅಪಘಾತ; ಕರ್ನಾಟಕದ ಇಬ್ಬರು ಸಾವು, ಮತ್ತೊಬ್ಬರು ಗಂಭೀರ

Exit mobile version