Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು - Vistara News

ಕರ್ನಾಟಕ

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Drown In River: ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾನೆ.

VISTARANEWS.COM


on

Drown in River
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕುರಿಗಾಹಿ ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿ ನಡೆದಿದೆ.

ಕೊಟ್ಟೂರು ತಾಲೂಕು ಹರಾಳು ಗ್ರಾಮದ ಅಂಜಿನಪ್ಪ (26) ಮೃತಪಟ್ಟ ಕುರಿಗಾಹಿ. ತುಂಗಭದ್ರಾ ನದಿ ದಂಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಈಜಲು ನದಿಗೆ ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಸಿಸಿಬಿ ಅಧಿಕಾರಿಗಳ ಕಂಡು ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ ಒಂಟೆ ರೋಹಿತ್‌ ಎಸ್ಕೇಪ್‌

Rowdy sheeter camel Rohit escapes from DCPs office after ccb officials spotted him

ಬೆಂಗಳೂರು: ಉತ್ತರ ವಿಭಾಗ ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ವೊಬ್ಬ (Rowdy Sheeter) ಪೊಲೀಸ್‌ರಿಂದ ತಪ್ಪಿಸಿಕೊಂಡಿದ್ದಾನೆ. ರೋಹಿತ್‌ ಅಲಿಯಾಸ್‌ ಒಂಟೆ ರೋಹಿತ್‌ ಎಸ್ಕೇಪ್ ಆದವನು. 110 ಸೆಕ್ಷನ್ ಬಾಂಡ್ ಹಾಕಲು ಸುಬ್ರಹ್ಮಣ್ಯ ನಗರ ಠಾಣೆ ರೌಡಿಶೀಟರ್ ಆಗಿರುವ ಒಂಟೆ ರೋಹಿತ್‌ನನ್ನು ಕರೆಸಿಕೊಂಡಿದ್ದರು. ಒಂದು ವಾರದ ಹಿಂದೆ ಠಾಣೆಗೆ ಕರೆಸಿಕೊಂಡಿದ್ದ ಪೊಲೀಸರು ಇಂದು ಠಾಣೆಯಿಂದ ಡಿಸಿಪಿ ಮುಂದೆ ಕರೆದೊಯ್ದಿದ್ದರು.

ಇತ್ತ ಒಂಟೆ ರೋಹಿತ್‌ಗಾಗಿ ಹುಡುಕಾಟ ನಡೆಸುತ್ತಿದ್ದ ಸಿಸಿಬಿ ಪೊಲೀಸರು, ಮುಂಚೆಯೇ ಡಿಸಿಪಿ ಕಚೇರಿ ಬಳಿ ಕಾಯುತ್ತಿದ್ದರು. ಸಿಸಿಬಿ ಪೊಲೀಸರನ್ನು ನೋಡಿದ ಕೂಡಲೇ ಒಂಟೆ ರೋಹಿತ್‌ ಸುಬ್ರಹ್ಮಣ್ಯ ನಗರ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೇಪ್‌ ಆಗಿದ್ದಾನೆ.

ಈ ಒಂಟೆ ರೋಹಿತ್‌, ಸೈಲೆಂಟ್ ಸುನಿಲ್ ಅಸೋಸಿಯೇಟ್ ಆಗಿದ್ದ. ಕೊಲೆ, ಕೊಲೆ ಯತ್ನ ಸೇರಿ ಹಲವು ಕೇಸಿನಲ್ಲಿ ಫಿಟ್ ಆಗಿದ್ದ. ಸದ್ಯ‌ ಪೊಲೀಸರ ಕೈಯಿಂದ ಎಸ್ಕೇಪ್ ಆಗಿರುವ ಒಂಟೆ ರೋಹಿತ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

ಏನಿದು 110 ಸೆಕ್ಷನ್‌

ಬೆಂಗಳೂರಿನಲ್ಲಿ ಕ್ರೈಂ ರೇಟ್‌ ಹೆಚ್ಚಾಗುತ್ತಲೇ ಇದೆ. ಅಪರಾಧ ಕೃತ್ಯಗಳನ್ನು ತಡೆಯಲು ಆಗದಷ್ಟು ಪೊಲೀಸರು ಕೈ ಚೆಲ್ಲಿ ಕುಳಿತಂತೆ ಇದೆ. ಸದ್ಯ ರೌಡಿಗಳ ಪಾಲಿಗೆ ದುಸ್ವಪ್ನವಾಗಿರುವ ಸೆಕ್ಷನ್‌ 110 ಪ್ರಕಾರ ಪೊಲೀಸರು ರೌಡಿಗಳಿಂದ ತಾವು ಯಾವುದೇ ಅಪರಾಧಿ ಚಟುವಟಿಕೆಗಳಲ್ಲಿ ಭಾಗವಹಿಸೋದಿಲ್ಲ ಎಂದು ಬಾಂಡ್ ಬರೆಸಿಕೊಳ್ಳುತ್ತಾರೆ.

ಈ ಮೊದಲು ಕೂಡ ಬಾಂಡ್ ಬರೆಸಿಕೊಂಡು ಸುಮ್ಮನೆ ಇರುತ್ತಿದ್ದರು. ಅದರ ಕಾರ್ಯ ರೂಪ‌ ಮಾತ್ರ ಆಗುತ್ತಿರಲಿಲ್ಲ. ಪೊಲೀಸರು ಕೂಡಾ ಇಷ್ಟು ದಿನ ಸುಮ್ಮನೆ ಇದ್ದರು. ಆದರೆ ನಗರದಲ್ಲಿ ಕ್ರೈಂ ರೇಟ್ ಹೆಚ್ಚಾಗುತ್ತಿರುವುದರಿಂದ ಈ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಬಾಂಡಿನಲ್ಲಿ ರೌಡಿಗಳಿಂದ 3-5ಲಕ್ಷದವರೆಗೆ ಕುಟುಂಬ ಸಮೇತವಾಗಿ ಬಾಂಡ್ ಬರೆಸಿಕೊಳ್ಳಲಾಗುತ್ತದೆ. ರೌಡಿಶೀಟರ್‌ ಬಾಂಡ್​ಗೆ ಸಹಿ ಹಾಕಿದ ಮೇಲೆ ಕೊಲೆ, ಕಳ್ಳತನ, ದರೋಡೆಯಂತಹ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಬಾಂಡ್ ಮೀರಿ ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಅಂಥ ಆರೋಪಿಗಳನ್ನು ನ್ಯಾಯಾಧೀಶರ ‌ಮುಂದೆ ಹಾಜರು ಪಡಿಸುವ ಅಗತ್ಯ ಇಲ್ಲ. ಬದಲಿಗೆ ಯಾವುದೇ ರೀತಿಯ ಕೇಸ್ ದಾಖಲಿಸದಯೇ ಡಿಸಿಪಿ ಅಧಿಕಾರಿ ಉಪಯೋಗಿಸಿ ನೇರವಾಗಿ 3ರಿಂದ 10 ತಿಂಗಳವರೆಗೆ ಜೈಲಿಗೆ ಅಟ್ಟಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest13 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest14 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest14 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest16 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest17 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest18 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest19 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest20 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest2 days ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌