Drugs Mafia | ಮಂಗಳೂರಿನಲ್ಲಿ ಮತ್ತಷ್ಟು ಡ್ರಗ್ಸ್‌ ವ್ಯವಹಾರ ಬಯಲಿಗೆ: ನಾಲ್ವರು ಅರೆಸ್ಟ್‌, ಕಾರು ವಶ - Vistara News

ಕರ್ನಾಟಕ

Drugs Mafia | ಮಂಗಳೂರಿನಲ್ಲಿ ಮತ್ತಷ್ಟು ಡ್ರಗ್ಸ್‌ ವ್ಯವಹಾರ ಬಯಲಿಗೆ: ನಾಲ್ವರು ಅರೆಸ್ಟ್‌, ಕಾರು ವಶ

ಮಂಗಳೂರಿನಲ್ಲಿ ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳನ್ನು ಒಳಗೊಂಡ ಡ್ರಗ್ಸ್‌ ಮಾಫಿಯಾವನ್ನು ಬಯಲಿಗೆಳೆದ ಪೊಲೀಸರು ಇನ್ನಷ್ಟು ಪ್ರಕರಣಗಳನ್ನು ಬಯಲಿಗೆ ಎಳೆದಿದ್ದಾರೆ.

VISTARANEWS.COM


on

Drugs arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಮಂಗಳೂರು ಮತ್ತು ಮಣಿಪಾಲವನ್ನು ಕೇಂದ್ರೀಕರಿಸಿ ನಡೆಯುತ್ತಿದ್ದ, ಡಾಕ್ಟರ್‌ ಮತ್ತು ವೈದ್ಯ ವಿದ್ಯಾರ್ಥಿಗಳೇ ಪ್ರಧಾನವಾಗಿರುವ ಗಾಂಜಾ ಜಾಲವನ್ನು ಹೆಡೆಮುರಿ ಕಟ್ಟಿದ ಮಂಗಳೂರು ಪೊಲೀಸರು ಈಗ ಡ್ರಗ್ಸ್‌ ಮಾಫಿಯಾದ ವಿರುದ್ಧ ಮುಗಿಬಿದ್ದಿದ್ದಾರೆ. ಹೀಗಾಗಿ ಮತ್ತೆರಡು ಪ್ರಕರಣಗಳು ಬಯಲಿಗೆ ಬಂದಿವೆ.

ಪ್ರಕರಣ ೧: ಸ್ವಿಫ್ಟ್‌ ಕಾರು ಸಹಿತ ವ್ಯಕ್ತಿಯ ಬಂಧನ
ಮಂಗಳೂರಿನ ಕುಂಟಿಕಾನ ಬಳಿ ಸ್ವಿಫ್ಟ್‌ ಡಿಸೈರ್‌ ಕಾರನ್ನು ತಡೆ ಹಿಡಿದ ಪೊಲೀಸರು ಅದರಲ್ಲಿ ೧೦ ಕೆಜಿ ಗಾಂಜಾ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹತ್ತಿ, ಆರೋಪಿಯನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎ‌ನ್‌.ಆರ್.ಪುರ ತಾಲೂಕಿನ ವಿಜಯ ಕುಮಾರ್ ಶೆಟ್ಟಿ(24) ಎಂಬಾತ ಬಂಧಿತ. ಆಂಧ್ರ ಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ವೇಳೆ ಈ ಬಂಧನ ನಡೆದಿದೆ. ಆತನಿಂದ ಸ್ವಿಫ್ಟ್ ಕಾರು, ಮೊಬೈಲ್ ಫೋನ್ ಮತ್ತು 5.65 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ಉರ್ವಾ ಠಾಣೆಗೆ ಹಸ್ತಾಂತರ ಮಾಡಲಾಗಿದೆ. ವಿಜಯ ಕುಮಾರ್‌ ಶೆಟ್ಟಿ ಈ ಹಿಂದೆಯೂ ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಗಾಂಜಾ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ.

ಪ್ರಕರಣ ೨: ಮತ್ತೊಂದು ಚರಸ್‌ ಮತ್ತು ಗಾಂಜಾ ಕೇಸ್‌ ಪತ್ತೆ
ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಪೂರೈಸುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ಸುಕೇತ್ ಕಾವಾ(33), ತಮಿಳುನಾಡಿನ ಅರವಿಂದ(24), ಉಡುಪಿಯ ಸುನೀಲ್(32) ಬಂಧಿತರು.

ಇವರು ಉತ್ತರ ಪ್ರದೇಶದ ಕುಲ್ಲು ಜಿಲ್ಲೆಯ ಪಾರ್ವತಿ ವ್ಯಾಲಿಯಿಂದ ಗಾಂಜಾ ಮತ್ತು ಚರಸನ್ನು ತಂದು ಮಂಗಳೂರಿನ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು.

ಪಾರ್ವತಿ ವ್ಯಾಲಿಯ ಪ್ರದೇಶದ ಹಳ್ಳಿಗಾಡಿನ ಜನರು ನೈಸರ್ಗಿಕವಾಗಿ ಬೆಳೆಯುತ್ತಿದ್ದ ನಿಷೇಧಿತ ಗಾಂಜಾ ಇದಾಗಿದೆ ಎನ್ನಲಾಗಿದೆ. ಗಾಂಜಾವನ್ನೇ ಬಳಸಿಕೊಂಡು ಚರಸ್‌ ಕೂಡಾ ತಯಾರಿಸಲಾಗುತ್ತಿದೆ. ತಾವು ಟ್ರೆಕ್ಕಿಂಗ್‌ ಬಂದ ಪ್ರವಾಸಿಗರು ಎಂದು ನಂಬಿಸುತ್ತಿದ್ದ ಈ ತಂಡ ಅಲ್ಲಿನ ಕೃಷಿಕರಿಂದ ಕಡಿಮೆ ಹಣಕ್ಕೆ ಗಾಂಜಾವನ್ನು ಖರೀದಿ ಮಾಡುತ್ತಿತ್ತು. ಬಳಿಕ ರೈಲಿನಲ್ಲಿ ತೆಗೆದುಕೊಂಡು ಬಂದು ಮಂಗಳೂರಿನ ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿತ್ತು. ಬಂಧಿತರಿಂದ 500 ಗ್ರಾಂ ಚರಸ್ ಮತ್ತು ಒಂದು ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ | Drugs Mafia | ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Tumkur News: ಚಿಂಪುಗಾನಹಳ್ಳಿಯಲ್ಲಿ 10 ಗುಡಿಸಲು ಭಸ್ಮ; ಸ್ಥಳಕ್ಕೆ ಪರಮೇಶ್ವರ್‌ ಭೇಟಿ

Tumkur News: ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದಲ್ಲಿ 10 ಗುಡಿಸಲುಗಳು ಬೆಂಕಿಗಾಹುತಿಯಾದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ, ವೈಯಕ್ತಿಕವಾಗಿ ಪರಿಹಾರ ವಿತರಿಸಿದರು.

VISTARANEWS.COM


on

Tumkur News 10 huts burnt down in Chimpuganahalli Minister Dr G Parameshwar visited the place
Koo

ಕೊರಟಗೆರೆ: ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದಲ್ಲಿ 10 ಗುಡಿಸಲುಗಳು ಬೆಂಕಿಗಾಹುತಿಯಾದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ, ವೈಯಕ್ತಿಕವಾಗಿ ಪರಿಹಾರ (Tumkur News) ವಿತರಿಸಿದರು.

ತಾಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ಏ.26 ರಂದು ಆಕಸ್ಮಿಕ ಬೆಂಕಿ ತಗುಲಿ 10 ಗುಡಿಸಲುಗಳು ಸಂಪೂರ್ಣ ಸುಟ್ಟು ಹೋಗಿದ್ದವು. ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹಾಗೂ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಸ್ಥಳಕ್ಕೆ ಭೇಟಿ ನೀಡಿದರು.

ಈ ವೇಳೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿ, ಈ ಹಿಂದೆ ಎರಡು ಬಾರಿ ಇದೇ ಸ್ಥಳದಲ್ಲಿ ಬೆಂಕಿ ಬಿದ್ದಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಿರಾತ್ರಿತರಿಗೆ ಮನೆ ಕಟ್ಟಿಕೊಳ್ಳಲು ನಿವೇಶನಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು, ಗುಡಿಸಲು ಸುಟ್ಟ ಕುಟುಂಬದ ಬಹುತೇಕರು ಪರಿಶಿಷ್ಟ ಜಾತಿ ಮತ್ತು ಹಾವಾಡಿಗ ಕುಟುಂಬಗಳಾಗಿವೆ ಎಂದರು.

ಇದನ್ನೂ ಓದಿ: Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

ಆಧಿಕಾರಿಗಳು ಈ ಗ್ರಾಮಕ್ಕೆ ಹೊಂದಿಕೊಂಡಿರುವ 9 ಎಕರೆ ಸರ್ಕಾರಿ ಜಮೀನನ್ನು ಗುರುತಿಸಿದ್ದಾರೆ, ಚುನಾವಣೆಯ ನೀತಿ ಸಂಹಿತೆ ಮುಗಿದ ತಕ್ಷಣ ಈ ಭಾಗದಲ್ಲಿ ಗುಡಿಸಲಿನಲ್ಲಿರುವ ಕುಟುಂಬಗಳಿಗೆ ಮೊದಲು ನಿವೇಶನಗಳನ್ನು ನೀಡಿ ಆಶ್ರಯ ಯೋಜನೆಗಳಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.

ಕ್ಷೇತ್ರಕ್ಕೆ ಸಾವಿರಾರು ಮನೆಗಳನ್ನು ತಂದರೂ ನಮ್ಮಲ್ಲಿ ಅವಿಭಕ್ತ ಕುಟುಂಬಗಳು ಕಡಿಮೆಯಾಗಿ ಎಲ್ಲರೂ ಚಿಕ್ಕ ಚಿಕ್ಕ ಕುಟುಂಬಗಳಾಗಿ ಹೊರಬರುತ್ತಿದ್ದಾರೆ ಅದಕ್ಕಾಗಿ ನಾವುಗಳು ಕ್ಷೇತ್ರದ್ಯಾಂತ ನಿವೇಶನಗಳನ್ನು ಗುರುತಿಸಿ ಮನೆ ಕಟ್ಟಿಕೊಡುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ, ಆದರೆ ಹಲವು ಕಡೆ ಖಾಲಿ ಇರುವ ಸರ್ಕಾರಿ ಜಮೀನುಗಳಲ್ಲಿ ಗುಡಿಸಿಲು ಹಾಕಿಕೊಂಡರೆ ನಿವೇಶನ ನೀಡುತ್ತಾರೆ ಎನ್ನುವ ಮನೋಭಾವ ಹಲವರಲ್ಲಿ ಬಂದಿದ್ದು ಇದಕ್ಕೆ ಸ್ಥಳೀಯರು ಹಾಗೂ ಜನಪ್ರತಿನಿಧಿಗಳು ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಆಧಿಕಾರಿಗಳು ಹಾಗೂ ಗ್ರಾಪಂ ಸದಸ್ಯರು ಸ್ಥಳ ಪರಿಶೀಲನೆ ಮಾಡಿ ಅರ್ಹತೆ ಉಳ್ಳವರಿಗೆ ಮಾತ್ರ ನೀವೇಶನ ನೀಡಲಾಗುವುದು, ಸದ್ಯಕ್ಕೆ ಗುಡಿಸಲು ಸುಟ್ಟ ಕುಟುಂಬಗಳಿಗೆ ಬದುಕಲು ತಾತ್ಕಾಲಿಕ ಸಹಾಯ ಮಾಡಲಾಗಿದೆ ಎಂದರು.

ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಈ ರೀತಿ ಅವಘಡಗಳು ತುಂಬಾ ದುಃಖ ತರುತ್ತವೆ. ಗುಡಿಸಲು ಸುಟ್ಟುಕೊಂಡ ಕುಟುಂಬಗಳಿಗೆ ಶ್ರೀ ಮಠದಿಂದ ಅಡಿಗೆ ಪಾತ್ರೆಗಳು, ಬಟ್ಟೆಗಳು, ದಿನಸಿ ಸಾಮಗ್ರಿಗಳನ್ನು ನೀಡಲಾಗಿದೆ, ಈಗಾಗಲೆ ಗೃಹ ಸಚಿವರು ನೊಂದ ಕುಟುಂಬಗಳಿಗೆ ಶೀಘ್ರವಾಗಿ ಮನೆ ಕಟ್ಟಿಕೊಡುವ ಭರವಸೆ ನೀಡಿದ್ದು, ನೊಂದವರ ಪರವಾಗಿ ಶ್ರೀ ಮಠವು ಸದಾ ಇರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥ ನಾರಾಯಣ, ಅರಕೆರೆ ಶಂಕರ್, ಮುಖಂಡರುಗಳಾದ ಮಹಾಲಿಂಗಪ್ಪ, ಗ್ರಾ.ಪಂ. ಅಧ್ಯಕ್ಷ ನಾಗರಾಜು, ಜಯರಾಂ. ದೇವರಾಜು, ರಘು, ದರ್ಶನ್, ಕೆಂಪರಾಜು, ಶಿವಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Continue Reading

Lok Sabha Election 2024

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

VISTARANEWS.COM


on

PM Narendra Modi met four special people in Sirsi visit
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕವು 2ನೇ ಹಂತದ ಮತದಾನಕ್ಕೆ ಸಜ್ಜಾಗುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

ಇವರಲ್ಲಿ ಒಬ್ಬರು ವೃತ್ತಿಯಲ್ಲಿ ಮರ ಕಡಿಯುವವರಾದರೂ ಅಯೋಧ್ಯೆಯ ಕರಸೇವಕರಾಗಿದ್ದಾರೆ. ಇನ್ನೊಬ್ಬರು ನಿವೃತ್ತ ಪೌರ ಕಾರ್ಮಿಕ ಮಹಿಳೆಯಾಗಿದ್ದಾರೆ. ಮತ್ತೊಬ್ಬರು ಕಾಡು ಹಣ್ಣುಗಳನ್ನು ಮಾರಿ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಮಗದೊಬ್ಬರು ಕ್ಷೌರಿಕರಾಗಿದ್ದು, ಬಿಜೆಪಿಯ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪಕ್ಕಾ ಅಭಿಮಾನಿಯಾಗಿದ್ದಾರೆ.

PM Narendra Modi met four special people in Sirsi visit

ಹಾಗಾದರೆ ಯಾರಿವರು?

ಲಕ್ಷ್ಮಣ್ ನಾಯ್ಕ ದೊಂಬೆ, ಸಿದ್ದಾಪುರ: ಲಕ್ಷ್ಮಣ್‌ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದವರಾಗಿದ್ದಾರೆ. ಇವರು ಅಯೋಧ್ಯೆಯ ಕರಸೇವಕರೂ ಆಗಿದ್ದವರು. ಲಕ್ಷ್ಮಣ ಅವರು ಅಯೋಧ್ಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಲ್ಲದೆ, ಬ್ರಹ್ಮಚಾರಿಯಾಗಿಯೇ ಉಳಿದಿದ್ದಾರೆ. ಲಕ್ಷ್ಮಣ ಅವರು ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರವನ್ನು ನಿರ್ಮಿಸುವವರೆಗೂ ಕ್ಷೌರ ಮಾಡಿಸುವುದಿಲ್ಲ ಎನ್ನುವ ವ್ರತವನ್ನು ಕೈಗೊಂಡಿದ್ದರು.

PM Narendra Modi met four special people in Sirsi visit

ರಾಧಾ ಹರಿಜನ: ಇವರು ಶಿರಸಿಯ ನಿವೃತ್ತ ಪೌರ ಕಾರ್ಮಿಕರಾಗಿದ್ದಾರೆ. ಸ್ವಚ್ಛತಾ ಕಾರ್ಯಕರ್ತೆಯಾಗಿ ದಣಿವರಿಯದೆ ಕೆಲಸ ಮಾಡಿದವರು ಇವರಾಗಿದ್ದಾರೆ. ತನ್ನ ಪ್ರಾಮಾಣಿಕ ಕೆಲಸಕ್ಕೆ ಹೆಸರುವಾಸಿಯಾಗಿರುವ ಇವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

PM Narendra Modi met four special people in Sirsi visit

ಮೋಹಿನಿ ಗೌಡ: ಇವರು ಹಾಲಕ್ಕಿ ಪಂಗಡಕ್ಕೆ ಸೇರಿದವರಾಗಿದ್ದಾರೆ. ಇವರು ಜೀವನಕ್ಕಾಗಿ ಅಂಕೋಲಾ ಬಸ್ ನಿಲ್ದಾಣದಲ್ಲಿ ಕಾಡು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಸ್ವಚ್ಛ ಭಾರತ್ ಸ್ವಯಂಸೇವಕಿಯಾಗಿ ತೊಡಗಿಸಿಕೊಂಡಿದ್ದಾರೆ. ಅವರು ಬಿಡುವಿದ್ದಾಗಲೆಲ್ಲಾ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸುತ್ತಾರೆ.

PM Narendra Modi met four special people in Sirsi visit

ನಾಗೇಶ್‌ ಮಹಾಲೆ: ಇವರು ಒಬ್ಬ ಕ್ಷೌರಿಕರಾಗಿದ್ದಾರೆ. ನಾಗೇಶ್‌ ಅಂಕೋಲಾದಲ್ಲಿ 4 ಆಸನ ಸಾಮರ್ಥ್ಯವುಳ್ಳ ಸಲೂನ್‌ವೊಂದನ್ನು ಹೊಂದಿದ್ದಾರೆ. ಇವರು ಬಿಜೆಪಿಯ ಕಟ್ಟಾ ಬೆಂಬಲಿಗ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಅಭಿಮಾನಿ. ಅವರ ಕೈಯಲ್ಲಿ ಮೋದಿ ಜಿ ಟ್ಯಾಟೂ ಇದೆ. ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ಅವರು ಇಡೀ ದಿನ ಉಚಿತವಾಗಿ ಕ್ಷೌರ ಮಾಡುತ್ತಾರೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಮೋದಿ ಭೇಟಿಯಾಗಿದ್ದು ಎಲ್ಲಿ?

ವಿಶೇಷ ವಿಮಾನದ ಮೂಲಕ ಶಿರಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಈ ನಾಲ್ವರು ವಿಶೇಷ ಸಾಧಕರನ್ನು ಪ್ರಧಾನಿ ನರೇಂದ್ರ ಅವರಿಗೆ ಪರಿಚಯ ಮಾಡಿಕೊಡಲಾಯಿತು. ಇದೇ ವೇಳೆ ಮೋದಿ ಸಹ ಅವರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

Continue Reading

ಕರ್ನಾಟಕ

Murugha Seer: ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Murugha Seer: ಪೋಕ್ಸೋ ಕೇಸ್ ವಿಚಾರಣೆ ಮುಗಿದು ತೀರ್ಪು ಬರುವವರೆಗೂ ಮುರುಘಾ ಶ್ರೀಗಳನ್ನು ನ್ಯಾಯಾಂಗ ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಹೀಗಾಗಿ ಶ್ರೀಗಳಿಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Murugha Seer
Koo

ಚಿತ್ರದುರ್ಗ: ಸುಪ್ರೀಂ ಕೋರ್ಟ್‌ ಆದೇಶದಂತೆ ಮುರುಘಾ ಶರಣರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಶ್ರೀಗಳಿಗೆ (Murugha Seer) ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಏ.23ರಂದು ರದ್ದು ಮಾಡಿ, ಶರಣಾಗತಿಯಾಗುವಂತೆ ಸೂಚಿಸಿತ್ತು. ಹೀಗಾಗಿ ಶ್ರೀಗಳು ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮಂಗಳವಾರ ಶರಣಾಗಿದ್ದಾರೆ. ಅವರಿಗೆ ಮೇ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶ ಎಸ್.ಎನ್.ಕಲ್ಕಣಿ ಆದೇಶ ನೀಡಿದ್ದಾರೆ.

ಪೋಕ್ಸೋ ಕೇಸ್ ವಿಚಾರಣೆ ಮುಗಿದು ತೀರ್ಪು ಬರುವವರೆಗೂ ಮುರುಘಾ ಶ್ರೀಗಳನ್ನು ನ್ಯಾಯಾಂಗ ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿ, ಒಂದು ವಾರದೊಳಗೆ ಶರಣಾಗತಿ ಆಗುವಂತೆ ಶ್ರೀಗಳಿಗೆ ಸೂಚಿಸಿತ್ತು. ಹೀಗಾಗಿ ಶ್ರೀಗಳು ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದು, ವೈದ್ಯಕೀಯ ಪರೀಕ್ಷೆ ಬಳಿಕ ಅವರನ್ನು ಪೊಲೀಸರು ಜೈಲಿಗೆ ಕರೆದೊಯ್ಯಲಿದ್ದಾರೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್‌ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಿದ್ದರಿಂದ ಇದೀಗ ಶ್ರೀಗಳು ಮತ್ತೆ ಜೈಲು ಸೇರುವಂತಾಗಿದೆ.

ಇದನ್ನೂ ಓದಿ | Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

ನಾಲ್ಕು ತಿಂಗಳಲ್ಲಿ ವಿಚಾರಣೆ ಮುಗಿಸಲು ಚಿತ್ರದುರ್ಗದ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಈಗಾಗಲೇ ಸೂಚನೆ ನೀಡಿದ್ದು, ಸಾಕ್ಷ್ಯಗಳ ವಿಚಾರಣೆ ಮುಗಿಯುವ ತನಕ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರಬೇಕು ಎಂದು ತಿಳಿಸಿತ್ತು.

ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case Where is Prajwal in Germany SIT is on lookout

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading

ಕ್ರೈಂ

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case: ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

VISTARANEWS.COM


on

Hassan Pen Drive Case Where is Prajwal in Germany SIT is on lookout
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading
Advertisement
Lok Sabha Election-2024
Lok Sabha Election 20243 mins ago

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Arvind Kejriwal
ದೇಶ5 mins ago

ಸಿಎಂ ಸ್ಥಾನ ಔಪಚಾರಿಕ ಅಲ್ಲ, 24 ಗಂಟೆ ಸಿಗಬೇಕು; ರಾಜೀನಾಮೆ ನೀಡದ ಕೇಜ್ರಿವಾಲ್‌ಗೆ ಕೋರ್ಟ್‌ ಚಾಟಿ

LSG vs MI
ಕ್ರೀಡೆ6 mins ago

LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

Tumkur News 10 huts burnt down in Chimpuganahalli Minister Dr G Parameshwar visited the place
ತುಮಕೂರು8 mins ago

Tumkur News: ಚಿಂಪುಗಾನಹಳ್ಳಿಯಲ್ಲಿ 10 ಗುಡಿಸಲು ಭಸ್ಮ; ಸ್ಥಳಕ್ಕೆ ಪರಮೇಶ್ವರ್‌ ಭೇಟಿ

PM Narendra Modi met four special people in Sirsi visit
Lok Sabha Election 20249 mins ago

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Tears Of Joy
ಆರೋಗ್ಯ20 mins ago

Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

Murugha Seer
ಕರ್ನಾಟಕ31 mins ago

Murugha Seer: ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Season Hairstyle
ಫ್ಯಾಷನ್38 mins ago

Season Hairstyle: ವೆಸ್ಟರ್ನ್‌ ಲುಕ್‌ಗೆ ಎಂಟ್ರಿ ಕೊಟ್ಟ ಟ್ರೆಡಿಷನಲ್‌ ಲುಕ್‌ನ ಎರಡು ಜಡೆಯ 3 ರೂಪ ಹೇಗಿದೆ ನೋಡಿ!

Amit Shah
ದೇಶ41 mins ago

Amit Shah: ನಿಯಂತ್ರಣ ಕಳೆದುಕೊಂಡ ಅಮಿತ್‌ ಶಾ ಇದ್ದ ಹೆಲಿಕಾಪ್ಟರ್;‌ ಸ್ವಲ್ಪದರಲ್ಲೇ ಪಾರಾದ ವಿಡಿಯೊ ಇಲ್ಲಿದೆ

IPL 2024
ಕ್ರೀಡೆ1 hour ago

IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20246 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20247 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌