e khata Penalty fixed for illegal conversion from B khata to E khataE khata: ಬಿ ಖಾತೆಯಿಂದ ಎ ಖಾತೆಗೆ ಬದಲು; ಅಕ್ರಮ ಕಂಡುಬಂದರೆ ಅಧಿಕಾರಿಗಳ ಸಹಿತ ಭೂ ಮಾಲೀಕರಿಗೆ ಶಿಕ್ಷೆ ಫಿಕ್ಸ್! - Vistara News

ಕರ್ನಾಟಕ

E khata: ಬಿ ಖಾತೆಯಿಂದ ಎ ಖಾತೆಗೆ ಬದಲು; ಅಕ್ರಮ ಕಂಡುಬಂದರೆ ಅಧಿಕಾರಿಗಳ ಸಹಿತ ಭೂ ಮಾಲೀಕರಿಗೆ ಶಿಕ್ಷೆ ಫಿಕ್ಸ್!

E khata: ಬಿ ಖಾತೆಯಲ್ಲಿದ್ದ ಪ್ರಾಪರ್ಟಿಯನ್ನು ಕೆಲ ಬಿಬಿಎಂಪಿ ಅಧಿಕಾರಿಗಳು ಹಣದಾಸೆಗೆ ಎ ಖಾತೆಗೆ ಬದಲಾಯಿಸಿದ್ದಾರೆ ಎಂಬ ದೂರುಗಳು ಬಂದಿವೆ. ಇಂತಹ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಪಾಲಿಕೆ ಆಯುಕ್ತರು (BBMP) ಸಜ್ಜಾಗಿದ್ದಾರೆ.

VISTARANEWS.COM


on

ಬಿಬಿಎಂಪಿ
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಬಿ ಖಾತಾ ಪ್ರಾಪರ್ಟಿಗಳು ಅನಧಿಕೃತವಾಗಿ ಎ ಖಾತೆ (E khata) ಪ್ರಾಪರ್ಟಿಗಳಾಗಿ ಬದಲಾಗಿದೆ. ಹೀಗೆ ಅಕ್ರಮವಾಗಿ ಖಾತಾಗಳನ್ನು ಬದಲಾವಣೆ ಮಾಡಿಕೊಂಡವರ ಹಾಗೂ ಮಾಡಿಸಿಕೊಟ್ಟ ಅಧಿಕಾರಿಗಳ ಮೇಲೆ ಬಿಬಿಎಂಪಿ (BBMP) ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.

ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರು ನಗರ ಕಾಂಕ್ರಿಟ್ ಸಿಟಿಯಾಗಿ ಬದಲಾಗಿ ಯಾವುದೋ ಕಾಲವಾಗಿದೆ. ಇಂತಹ ನಗರದಲ್ಲಿ ವಿದೇಶಿ ಕಂಪನಿಗಳು ಬಂದು ತಮ್ಮ ಬ್ರಾಂಚ್‌ಗಳನ್ನು ತೆರೆದಿವೆ. ಅಷ್ಟರ ಮಟ್ಟಿಗೆ ಬೆಂಗಳೂರು ಎಲ್ಲರ ಪ್ರೀತಿಯನ್ನು ಗಳಿಸಿದೆ. ಇಂತಹ ನಗರದಲ್ಲಿ ಚದರ ಅಡಿ ಖರೀದಿಸಬೇಕಾದರೂ ಕನಿಷ್ಠ ಹತ್ತಾರು ಸಾವಿರ ರೂ. ಆಗುತ್ತದೆ.

ರೆವಿನ್ಯೂ ಸೈಟ್, ಬಿ ಖಾತೆ ಸೈಟ್‌ಗಳನ್ನೇ ಖರೀದಿ ಮಾಡಬೇಕಾದರೂ ಲಕ್ಷಾಂತರ ರೂಪಾಯಿ ನೀಡಬೇಕು. ಇನ್ನು ಆ ಸೈಟ್‌ಗಳಿಗೆ ಎ ಖಾತೆ ಸಿಕ್ಕಿ ಬಿಟ್ಟರೆ ಸ್ವರ್ಗಕ್ಕೆ ಮೂರೇ ಗೇಣು. ಹೇಗಾದರೂ ಮಾಡಿ ಎ ಖಾತೆ ಪಡೆಯಬೇಕು ಎಂದು ಚಾಪೆ ಕೆಳಗೆ ತೂರಿದ್ದರೆ ಅಂಥವರಿಗೆ ಈಗ ಪಾಲಿಕೆ ಬಿಸಿ ಮುಟ್ಟಿಸಲಿದೆ.

ಬಿ ಖಾತೆಯಲ್ಲಿದ್ದ ಪ್ರಾಪರ್ಟಿಯನ್ನು ಕೆಲ ಪಾಲಿಕೆಯ ಅಧಿಕಾರಿಗಳು ಹಣದಾಸೆಗೆ ಎ ಖಾತೆಗೆ ಬದಲಾಯಿಸಿದ್ದಾರೆ. ಬಿ ಖಾತಾ ಪ್ರಾಪರ್ಟಿಗಳು ಅನಧಿಕೃತವಾಗಿ ಎ ಖಾತೆ ಪ್ರಾಪರ್ಟಿಗಳಾಗಿ ಕನ್ವರ್ಟ್ ಆಗಿದೆ. ಈ ಕುರಿತು ಹೆಚ್ಚಿನ ದೂರುಗಳು ಪಾಲಿಕೆಗೆ ಬರುತ್ತಿತ್ತು. ಹೀಗಾಗಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಲಾಗಿತ್ತು. ಆ ಸಮಿತಿ ನಗರದ ಅನೇಕ ಸ್ಥಳಗಳಲ್ಲಿ ಆಗಿರುವ ಅಕ್ರಮಗಳನ್ನು ಪತ್ತೆ ಹಚ್ಚಿ, ವರದಿ ಕೂಡ ನೀಡಿದೆ. ಸದ್ಯ ಈಗೇನಿದರೂ ಕ್ರಮ ಜರುಗಿಸುವುದಷ್ಟೇ ಬಾಕಿ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಜೂನ್ 15ರೊಳಗೆ ಡೆಡ್‌ಲೈನ್

ಬಿ ಖಾತೆಯಲ್ಲಿರುವ ಪ್ರಾಪರ್ಟಿಗಳು ನಿಗದಿತ ದಾಖಲೆಗಳನ್ನು ನೀಡಿ ಅಭಿವೃದ್ಧಿ ಶುಲ್ಕವನ್ನು ತೆತ್ತಬೇಕು. ಪಾಲಿಕೆ ತಿಳಿಸಿರುವ ದಾಖಲೆಗಳ ಪೈಕಿ ಒಂದು ದಾಖಲೆ ಮಿಸ್ ಆಗಿದ್ದರೂ ಖಾತೆ ಬದಲಾವಣೆ ಮಾಡುವಂತಿಲ್ಲ. ಆದರೆ, ಈ ನಿಯಮವನ್ನು ಗಾಳಿಗೆ ತೂರಲಾಗಿದೆ.

ಇನ್ನು, ನಗರದ ಹೊರವಲಯಗಳಲ್ಲೇ ಈ ಪ್ರಕರಣಗಳು ಹೆಚ್ಚಾಗಿ ನಡೆದಿದ್ದು, ಬೆಂಗಳೂರು ದಕ್ಷಿಣದಲ್ಲಿ ಹೆಚ್ಚು ಪ್ರಕರಣಗಳು ಕಂಡು ಬಂದಿದೆ. ಸಮಿತಿ ನೀಡಿದ ವರದಿಯನ್ನು ಆಧರಿಸಿ ಎಆರ್‌ಒ ಹಂತದಲ್ಲೇ ಮೊದಲ ಹಂತದ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಲಾಗಿತ್ತು. ಆದರೆ ಚುನಾವಣೆ ಕಾರ್ಯದಿಂದ ಈ ಕೆಲಸಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತ್ತು. ಆದರೆ ಈಗ ಮತ್ತೊಮ್ಮೆ ಕೆಲಸ ಚುರುಕುಗೊಂಡಿದ್ದು, ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಹಾಗೂ ಖಾತೆ ಬದಲಾಯಿಸಿಕೊಂಡ ಜಾಗದ ಮಾಲೀಕರಿಗೆ ಶಾಕ್ ನೀಡಲು ಪಾಲಿಕೆ ಸಜ್ಜಾಗಿದೆ. ಜೂನ್ 15ರೊಳಗೆ ಅಧಿಕಾರಿಗಳು ತಪ್ಪು ಮಾಡಿದ್ದರೆ ಶರಣಾಗಿ, ಇಲ್ಲ ಶಿಕ್ಷೆ ಎದುರಿಸಲು ಸಿದ್ಧರಾಗಿ ಎಂದು ಡೆಡ್‌ಲೈನ್ ನೀಡಿದೆ.

ಇದನ್ನೂ ಓದಿ: Weather Report: ಬೆಂಗಳೂರಿನಲ್ಲಿ ಭರ್ಜರಿ ಮಳೆಗೆ ತಂಪಾದ ಇಳೆ; ಗಾಳಿ-ಗುಡುಗಿನ ಅಬ್ಬರ, ಅಸ್ತವ್ಯಸ್ತವಾಯ್ತು ಸಂಚಾರ

ಕೇವಲ ಎಆರ್‌ಒಗಳಿಗೆ ಮಾತ್ರವಲ್ಲದೇ ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರಿಗೆ ಈ ಕುರಿತ ಪರಿಶೀಲನೆ ಮಾಡಲು ಸೂಚಿಸಲಾಗಿದೆ. ಕಳೆದ ಕೆಲ ತಿಂಗಳುಗಳಲ್ಲಿ ಬಿ ಖಾತೆಯಿಂದ ಎ ಖಾತೆಗೆ ವರ್ಗಾವಣೆ ಆಗಿರುವುದನ್ನು ಪರಿಶೀಲಿಸಬೇಕು. ಜತೆಗೆ ಜೂನ್ 15ರೊಳಗೆ ಈ ಕುರಿತ ಮಾಹಿತಿ ಹಾಗೂ ವರದಿ ನೀಡಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ತಪ್ಪಾಗಿದ್ದರೆ ಅದನ್ನು ಕೂಡಲೇ ತಿಳಿಸತಕ್ಕದ್ದು. ಇಲ್ಲವಾದರೆ ಪರಿಶೀಲನೆಗಾಗಿ ಬಂದಾಗ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುತ್ತದೆ ಎಂದು ಸೂಚನಾ ಪತ್ರ ನೀಡಲಾಗಿದೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Modi in Karnataka: ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

VISTARANEWS.COM


on

Modi in Karnataka Govt turns tax city Bengaluru into tanker city and attacks girls too PM Narendra Modi
Koo

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಬೆಂಗಳೂರಿನ ಪರಿಸ್ಥಿತಿಯನ್ನು ಹಾಳು ಮಾಡಿದೆ. ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಕ್ರೋಶವನ್ನು ಹೊರಹಾಕಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡ ಮೋದಿ (Modi in Karnataka) ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ನಾವು ಅಧಿಕಾರಕ್ಕೆ ಬರುವಾಗ ಭಾರತವು ಆರ್ಥಿಕವಾಗಿ ಭಾರಿ ಹಿಂದಿತ್ತು. ಈಗ ಜಾಗತಿಕವಾಗಿ ಆರ್ಥಿಕ ಪ್ರಗತಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ. ಇದಕ್ಕೆ ಕಾರಣವಾಗಿದ್ದು, ನಿಮ್ಮ ಮತ. ಕಳೆದ 10 ವರ್ಷದಲ್ಲಿ ಭಾರತವು ಸಾಕಷ್ಟು ಸುಧಾರಣೆಯನ್ನು ಕಂಡಿದ್ದಲ್ಲದೆ, ಆರ್ಥಿಕ ಕ್ರಾಂತಿಯಾಗಿದೆ. ಈಗ ಭಾರತವು ಹಿಂಬಾಲಿಸುವ ದೇಶವಾಗಿ ಉಳಿದಿಲ್ಲ. 2014 ಹಾಗೂ 2019ರಲ್ಲಿ ಪೂರ್ಣ ಬಹುಮತಗಳೊಂದಿಗೆ ಭರ್ಜರಿ ಗೆಲುವನ್ನು ನಮಗೆ ಕೊಟ್ಟಿದ್ದೀರಿ. ಈ ಬಾರಿಯೂ ಅಂಥದ್ದೇ ಗೆಲುವನ್ನು ನೀವು ಕೊಡುತ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೀವೀಗ ಎನ್‌ಡಿಎ ಹಾಗೂ ಇಂಡಿಯಾ ಅಲೆಯನ್ಸ್‌ ಪ್ರಚಾರಗಳನ್ನು ನೋಡಿದ್ದೀರಿ. ಆದರೆ, ಇಂಡಿ ಅಲೆಯನ್ಸ್‌ನವರು ಸುಳ್ಳು ಆರೋಪವನ್ನು ಮಾಡುತ್ತಲೇ ಬರುತ್ತಿದ್ದಾರೆ. ಆದರೆ, ನಿಮ್ಮ ಮೋದಿ ಉದ್ದೇಶ ಏನು? ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನನ್ನ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ 1 GB ಡೇಟಾ

ನಾವು ನಮ್ಮ ಕೆಲಸ ಹಾಗೂ ಟ್ರ್ಯಾಕ್‌ ರೆಕಾರ್ಡ್‌ ಇಟ್ಟುಕೊಂಡು ಮತ ಕೇಳುತ್ತಿದ್ದೇವೆ. ನಮ್ಮ ಸರ್ಕಾರ ರೇರಾ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ಇದರಿಂದ ಸಾಮಾನ್ಯರಿಗೆ ಆಗುತ್ತಿದ್ದ ಅನ್ಯಾಯವನ್ನು ತಡೆದಿದ್ದೇವೆ. 2014ಕ್ಕಿಂತ ಮೊದಲು ನಿಮಗೆ 2.5 ಲಕ್ಷ ರೂಪಾಯಿ ಇದ್ದರೂ ನೀವು ತೆರಿಗೆ ಕಟ್ಟಬೇಕಿತ್ತು. ಆದರೆ, ಇಂದು ನೀವು 7 ಲಕ್ಷದ ವರೆಗೆ ಆದಾಯ ಹೊಂದಿದರೂ ಒಂದು ರೂಪಾಯಿ ಟ್ಯಾಕ್ಸ್‌ ಕಟ್ಟುತ್ತಿಲ್ಲ. ಇನ್ನು ಜಿಎಸ್‌ಟಿ ಜಾರಿಯಿಂದ ಪರೋಕ್ಷ ತೆರಿಗೆ ಕಟ್ಟುವುದು ತಪ್ಪಿದೆ. ಇದೆಲ್ಲವೂ ಸಾಧ್ಯವಾಗಿದ್ದು ನಮ್ಮ ಸರ್ಕಾರದಿಂದ ಮಾತ್ರ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಎಲ್‌ಇಡಿ ಬಲ್ಬ್‌ ಅಂದು 400 ರೂಪಾಯಿ ಇತ್ತು. ಆದರೆ, ಇಂದು ನಾವದನ್ನು 40 ರೂಪಾಯಿವರೆಗೆ ಇಳಿಸಿದ್ದೇವೆ. ಇಂದು ಈ ಬಲ್ಬ್‌ಗಳು ಅದೆಷ್ಟೋ ಮಧ್ಯಮ ವರ್ಗದ ಮನೆಯಲ್ಲಿ ಉರಿಯುತ್ತಿದೆ. ಅವರಿಗೆ ಪ್ರಕಾಶಮಾನವಾದ ಬೆಳಕಿನ ಜತೆಗೆ ವಿದ್ಯುತ್‌ ಬಿಲ್‌ನಲ್ಲಿಯೂ ಉಳಿತಾಯ ಆಗುತ್ತಿದೆ. 20 ಸಾವಿರ ಕೋಟಿ ರೂಪಾಯಿ ಪ್ರತಿ ವರ್ಷ ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ ಡೇಟಾ

ಎನ್‌ಡಿಎ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಡಿಜಿಟಲ್‌ಗೆ ದಾಖಲೆ ರೂಪದಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಎಲೆಕ್ಟ್ರಿಕ್ ವೆಹಿಕಲ್ ಬರುವುದಕ್ಕೆ ನಾವು ಕಾರಣ. ಭಾರತದಲ್ಲಿ ಆಗಿರುವ ಡಿಜಿಟಲ್‌ ಕ್ರಾಂತಿಯಲ್ಲಿ ಬೆಂಗಳೂರಿಗರ ಕೊಡುಗೆ ಇದೆ. ಬೆಂಗಳೂರು ಡಿಜಿಟಲ್‌ ಹಬ್‌ ಆಗಿದೆ. ಈ ಮೊದಲು 1 GB ಡೇಟಾ 250 ರೂಪಾಯಿ ಆಸುಪಾಸಿನಲ್ಲಿತ್ತು. ಇಂದು ಅದೇ 1 GB ಡೇಟಾಗೆ 10 ರೂಪಾಯಿ ಆಸುಪಾಸು ಆಗಿದೆ. ನಾವು ನಿಮಗೆ ಕಡಿಮೆ ವೆಚ್ಚದಲ್ಲಿ ಡೇಟಾ ಕೊಡುತ್ತಿದೆ. ಮೊಬೈಲ್ ಬಿಲ್ ಈಗ 500 ರೂಪಾಯಿಗಿಂತ ಕಡಿಮೆ ಬರುತ್ತಿದೆ. ಇದರಿಂದ ಮಾಸಿಕವಾಗಿ ಐದಾರು ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ನಮ್ಮ ಸರ್ಕಾರವು ಡೇಟಾ ಸುರಕ್ಷತೆಗೆ ಬಲವಾದ ಕಾನೂನು ತಂದಿದೆ. ಎಂದು ನರೇಂದ್ರ ಮೋದಿ ಹೇಳಿದರು.

70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಭಾರತ್‌

ಮಧ್ಯಮ ಮತ್ತು ಬಡತನ ರೇಖೆ ಕೆಳಗೆ ಇರುವವರಿಗೆ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ನೀಡಿದ್ದೇವೆ. ಇದನ್ನು 70 ವರ್ಷ ಮೇಲ್ಪಟ್ಟವರಿಗೂ ವಿಸ್ತರಣೆ ಮಾಡಲು ಮುಂದಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಬುಲೆಟ್ ಟೈನ್ ತಂದು ಸಮಯ ಉಳಿಸಿದ್ದೇವೆ

ಈ ಮೊದಲು ಕಾಂಗ್ರೆಸ್ ಮಾಫಿಯಾ ಮಾಡೋದರಲ್ಲಿ ಲೀನವಾಗಿತ್ತು. ಭ್ರಷ್ಟಾಚಾರ ಮಾಡುವುದರಲ್ಲಿ ತಲ್ಲೀನವಾಗಿದೆ. ಆದರೆ, ನಾವು 70 ಕಿ.ಮೀ. ವರೆಗೆ ನಮ್ಮ ಮೇಟ್ರೋ ಯೋಜನೆಗೆ ಚಾಲನೆ ನೀಡಿದ್ದೇವೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ವಿದೇಶಗಳಲ್ಲೂ ಚರ್ಚೆ ಆಗುತ್ತಿದೆ. ಬುಲೆಟ್ ಟೈನ್ ಅನ್ನು ತಂದು ನಿಮ್ಮ ಸಮಯವನ್ನು ಉಳಿಸಿದ್ದೇವೆ. ಇದರಿಂದ ಬೆಂಗಳೂರಿಗೆ ಬಂದು ಕೆಲಸ ಮಾಡುವವರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸರ್ಕಾರದ ಸಾಧನೆಗಳ ಮಾಹಿತಿ ನೀಡಿದರು.

ದೊಡ್ಡ ದೊಡ್ಡ ಪ್ರಾಜೆಕ್ಟ್‌ ಪಡೆಯುತ್ತಿರುವ ಎಚ್‌ಎಎಲ್‌

ಕಾಂಗ್ರೆಸ್ ಎಚ್‌ಎಎಲ್ ವಿಚಾರದಲ್ಲಿ ಏನೆಲ್ಲ ಆರೋಪ ಮಾಡಿತ್ತು? ಮೋದಿ ಹೆಸರು ಕೆಡಿಸಲು ಕಾಂಗ್ರೆಸ್ ಮುಂದಾಗಿತ್ತು. ಅದೇ ಎಚ್‌ಎ‌ಎಲ್ ಈಗ ಅನೇಕ ಸಾಧನೆ ಮಾಡಿದೆ. ರಾಜ್ಯದಲ್ಲಿ ದೊಡ್ಡ ಹೆಲಿಕಾಪ್ಟರ್ ನಿರ್ಮಾಣ ಕೈಗಾರಿಕೆಯನ್ನು ಎಚ್ಎಎಲ್ ಸ್ಥಾಪಿಸಿದೆ. ಎಚ್‌ಎಎಲ್‌ ಇಂದು ಹೆಚ್ಚು ಹೆಚ್ಚು ಪ್ರಾಜೆಕ್ಟ್‌ಗಳನ್ನು ಪಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಿ

ಮೆಟ್ರೋ, ಕೋಚ್‌, ರೈಲು ಬೋಗಿಗಳನ್ನು ರಫ್ತು ಮಾಡುತ್ತಿದ್ದೇವೆ. ಮೊದಲ ಹಂತದ ಮಿಸೈಲ್‌ ಅನ್ನು ಫಿಲಿಪ್ಪೀನ್ಸ್‌ಗೆ ಕಳಿಸಿದ್ದೇವೆ. ಅಮೆರಿಕದ ಬಳಿಕ ಬೋಯಿಂಗ್‌ ಕರ್ನಾಟಕದಲ್ಲಿ ನಿರ್ಮಾಣ ಆಗುತ್ತಿದೆ. ಕಾಂಗ್ರೆಸ್‌ ಡಿಜಿಟಲ್‌ ಇಂಡಿಯಾವನ್ನು ವಿರೋಧ ಮಾಡಿತ್ತು. ಕೊರೊನಾ ವ್ಯಾಕ್ಸಿನ್‌ ಬಗ್ಗೆ ವ್ಯಂಗ್ಯ ಮಾಡಿತ್ತು. ಇಂದು ನಿಮ್ಮ ನರೇಂದ್ರ ಮೋದಿ ದೇಶದಲ್ಲಿ 6 G ತರಲು ಪ್ರಯತ್ನ ಮಾಡುತ್ತಿದ್ದರೆ, ಕಾಂಗ್ರೆಸ್‌ ಮೋದಿಯನ್ನು ಇಳಿಸುತ್ತೇನೆ ಎಂದು ಹೊರಟಿದೆ. ಇದಕ್ಕೆ ನೀವು ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಇದನ್ನೂ ಓದಿ: Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

ನಾನು ನನ್ನ ಭಾಷಣವನ್ನು ಕನ್ನಡದಲ್ಲಿ ಅನುವಾದಿಸಿ ಟ್ವಿಟರ್‌ನಲ್ಲಿ ಅಪ್ಲೋಡ್‌ ಮಾಡುತ್ತಿದ್ದೇನೆ. ಇದಕ್ಕೆ ಕಾರಣವಾಗಿದ್ದು, AI ತಂತ್ರಜ್ಞಾನವಾಗಿದೆ ಎಂದು ಮೋದಿ ತಿಳಿಸಿದರು. ನನ್ನ ಒಂದು ವೈಯಕ್ತಿಕ ಕೆಲಸವನ್ನು ಮಾಡಿಕೊಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಎಲ್ಲರ ಮನೆಗೆ ಹೋಗಿ ಮೋದಿ ನಿಮಗೆ ಪ್ರಣಾಮವನ್ನು ಸಲ್ಲಿಸಲು ಹೇಳಿದ್ದಾರೆ ಎಂಬುದನ್ನು ಹೇಳಿ ಎಂದು ಕೇಳಿಕೊಂಡರು.

Continue Reading

ಕರ್ನಾಟಕ

DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

DK Shivakumar: ಆರ್‌.ಆರ್.ನಗರ ಅಪಾರ್ಟ್‌ಮೆಂಟ್‌ನಲ್ಲಿ ಮತಯಾಚನೆ ವೇಳೆ ಮತದಾರರಿಗೆ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಮಾಹಿತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಮತಯಾಚನೆ ವೇಳೆ ಬೆದರಿಕೆ ಆರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ನಗರದ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಆರ್‌.ಆರ್. ನಗರ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಹೋದರ ಡಿ.ಕೆ.ಸುರೇಶ್‌ ಪರ ಮತಯಾಚನೆ ವೇಳೆ ಮತದಾರರಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್‌ (DK Shivakumar) ವಿರುದ್ಧ ಪ್ರಕರಣ ದಾಖಲಾಗಿದೆ.

ಆರ್‌.ಆರ್.ನಗರ ಅಪಾರ್ಟ್‌ಮೆಂಟ್‌ನಲ್ಲಿ ಮತಯಾಚನೆ ವೇಳೆ ಮತದಾರರಿಗೆ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಮಾಹಿತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ. ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರುವ ಆರೋಪದಡಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಎಫ್.ಎಸ್.ಟಿ ಮುಖ್ಯಸ್ಥ ದಿನೇಶ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಡಿಕೆಶಿ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿಕೆ ಶಿವಕುಮಾರ್ ಮತದಾರರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಇತ್ತೀಚೆಗೆ ಟ್ವೀಟ್‌ ಮಾಡಿತ್ತು. ‘ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್‌ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೇಯದ್ದು ಕಾವೇರಿ ನೀರು ಸಂಪರ್ಕ ದೊರೆಯದೇ ಇರುವುದು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ? ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2-3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ’ ಎಂದು ಡಿಕೆಶಿ ಹೇಳಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Lok Sabha Election 2024: ನಾಚಿಗೆ ಇಲ್ಲದೆ 3 ಸೀಟಿಗಾಗಿ ಬಿಜೆಪಿ ಜತೆ ಹೋಗಿದ್ದಾರೆ: ದೇವೇಗೌಡರ ವಿರುದ್ಧ ಸಿಎಂ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

Case of bringing gun to CM Siddaramaiah Four policemen suspended

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ವ್ಯಕ್ತಿಯೊಬ್ಬ ಪಿಸ್ತೂಲ್‌ (Gun) ಸೊಂಟಕ್ಕೆ ಸಿಕ್ಕಿಸಿಕೊಂಡು ಹೋಗಿ, ಸಿಎಂ ಸೇರಿದಂತೆ ಮುಖಂಡರಿಗೆ ಹಾರ ಹಾಕಿದ ಪ್ರಕರಣದಲ್ಲಿ ಭದ್ರತಾ ವೈಫಲ್ಯ ಕಂಡುಬಂದಿದ್ದರಿಂದ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಮುಖ್ಯಮಂತ್ರಿ ಬಳಿ ಹಾರ ಹಾಕಲು ಬಂದ ವ್ಯಕ್ತಿಯು ಗನ್ ಶೋ ಮಾಡಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಭದ್ರತಾ ವೈಫಲ್ಯ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಇನ್ಸ್‌ಪೆಕ್ಟರ್‌ ಅವರನ್ನು ಬಿಟ್ಟು ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪಿಎಸೈ ಮೆಹಬೂಬ್ ಹುಡ್ಡದಲ್ಲಿ, ಪೊಲೀಸ್ ಕಾನ್ಸ್‌ಟೇಬಲ್ ಮಂಜು ನಾಯಕ್, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಹಾಗೂ ಒಬ್ಬರು ಎಎಸ್‌ಐ ಅಮಾನತುಗೊಂಡಿದ್ದಾರೆ.

ಏನಿದು ಕೇಸ್‌?

ಏಪ್ರಿಲ್‌ 8ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ರೋಡ್‌ ಶೋ ನಡೆಸುತ್ತಿದ್ದರು. ಈ ವೇಳೆ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸಿಎಂ ಬಳಿ ಬಂದು ಬೃಹತ್‌ ಹಾವನ್ನು ಹಾಕಿದ್ದಾಗ. ಆ ವೇಳೆ ರಿಯಾಜ್‌ ತನ್ನ ಸೊಂಟದಲ್ಲಿ ಇಟ್ಟುಕೊಂಡಿದ್ದ ರಿವಾಲ್ವರ್‌ ಸಾರ್ವಜನಿಕವಾಗಿ ಪ್ರದರ್ಶನಗೊಂಡಿತು. ಇದು ಮಾಧ್ಯಮಗಳಲ್ಲೂ ಬಿತ್ತರವಾಯಿತು. ಈ ಸಂಬಂಧ ಈಗ ತನಿಖೆ ನಡೆದಿದೆ. 5 ವರ್ಷದ ಹಿಂದೆ ರಿಯಾಜ್ ಮೇಲೆ ಕೊಲೆ ಯತ್ನ ಆಗಿತ್ತು. ಹೀಗಾಗಿ ಆತ ಲೈಸೆನ್ಸ್‌ ಪಡೆದುಕೊಂಡಿದ್ದರು.

ರಿಯಾಜ್‌ ಗನ್‌ ಮುಟ್ಟುಗೋಲು

ಎಲೆಕ್ಷನ್ ಸಮಯದಲ್ಲಿ ಗನ್ ಸರೆಂಡರ್‌ ಮಾಡಿರದ ರಿಯಾಜ್‌, ತಮಗೆ ಜೀವಭಯವಿದೆ ಎಂದು ಅರ್ಜಿ ನೀಡಿ ಅನುಮತಿಯನ್ನು ಪಡೆದುಕೊಂಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗುವಾಗ ಗನ್ ತೆಗೆದುಕೊಂಡು ಹೋಗಬಾರದಿತ್ತು. Z ಸೆಕ್ಯುರಿಟಿ ಭದ್ರತೆ ಸಿಎಂಗೆ ಇದೆ. ಹೀಗಾಗಿ ಸಿಎಂ ಬಳಿ ಬರುವವರನ್ನು ತಪಾಸಣೆ ನಡೆಸಿ ಹತ್ತಿರ ಬಿಡಬೇಕಿತ್ತು. ಗನ್ ಅನ್ನು ರಿಯಾಜ್‌ ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದಾರೆ. ಹೀಗಾಗಿ ರಿಯಾಜ್ ಗನ್ ಮುಟ್ಟುಗೋಲು ಹಾಕಿಕೊಳ್ಳುವಂತೆ ದಕ್ಷಿಣ ವಿಭಾಗ ಡಿಸಿಪಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ: Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

2019ರಲ್ಲಿ ರಿಯಾಜ್‌ ಮೇಲೆ ಹಲ್ಲೆ ನಡೆದಿತ್ತು

2019ರಲ್ಲಿ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಹೀಗಾಗಿ ಜೀವ ಬೆದರಿಕೆ ಇದೆ ಎಂಬ ಕಾರಣ ನೀಡಿ, ಗನ್ ಇಟ್ಟುಕೊಳ್ಳಲು ಲೈಸೆನ್ಸ್‌ಗೆ ಅರ್ಜಿ ಹಾಕಿದ್ದ.‌ ದಕ್ಷಿಣ ವಿಭಾಗ ಡಿಸಿಪಿ ಅರ್ಜಿ ಪರಿಶೀಲಿಸಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡಿದ್ದರು. ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದ ಸೈಯದ್ ರಿಯಾಜ್‌ ಮೇಲೆ ಅಟ್ಯಾಕ್ ನಡೆದಿತ್ತು. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ರಿಯಾಜ್‌ ಗನ್‌ ಪಡೆದುಕೊಂಡಿದ್ದ.

Continue Reading

ಮಳೆ

Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

Rain News : ಶನಿವಾರ ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಜನರು ನಲುಗಿ (Karnataka Weather Forecast) ಹೋಗಿದ್ದಾರೆ. ಕಲಬುರಗಿಯಲ್ಲಿ ಸಿಡಿಲಿಗೆ ಬಾಲಕನೊರ್ವ ಬಲಿಯಾಗಿದ್ದಾನೆ. ಬೀದರ್‌ ಭಾರಿ ಮಳೆಗೆ ನೆಹರು ಸ್ಟೇಡಿಯಂ ಕೆರೆಯಂತಾಗಿತ್ತು. ಯಾದಗಿರಿಯಲ್ಲಿ ಪಿಡಬ್ಲ್ಯೂಡಿ ಕಚೇರಿಗೆ ನೀರು ನುಗ್ಗಿತ್ತು.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ (Rain News) ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವರುಣನ ಆರ್ಭಟಕ್ಕೆ (Karnataka Weather Forecast) ಜನರು ತತ್ತರಿಸಿ ಹೋಗಿದ್ದಾರೆ. ನರೋಣಾ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದಾನೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನರೋಣ ಗ್ರಾಮ ಘಟನೆ ನಡೆದಿದೆ. ಜಮೀನಿನಿಂದ ಎತ್ತಿನ ಬಂಡಿಯಲ್ಲಿ ಮನೆಗೆ ವಾಪಾಸು ಬರುವಾಗ ಸಿಡಿಲು ಬಡಿದಿದೆ. ಸಿಡಿಲಿನ ಹೊಡೆತಕ್ಕೆ ಮಹೇಶ್ (10) ಎಂಬಾತ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದರ್‌ನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ನೆಹರು ಕ್ರೀಡಾಂಗಣವು ಕೆರೆಯಂತಾಗಿತ್ತು. ಕ್ರೀಡಾಂಗಣದ ಒಳಗೆ ಶೇ.70ರಷ್ಟು ಜಾಗ ಜಲಾವೃತವಾಗಿದೆ. ಒಳಚರಂಡಿ ವ್ಯವಸ್ಥೆ ಹಾಳಾದ ಹಿನ್ನೆಲೆಯಲ್ಲಿ ಸ್ಟೇಡಿಯಂವೊಳಗೆ 3-4 ಅಡಿ ನೀರು ಸಂಗ್ರಹವಾಗಿದೆ. ಮುಂಜಾನೆ ಹೊತ್ತು ಹಲವರು ನೆಹರು ಕ್ರೀಡಾಂಗಣಕ್ಕೆ ಬಂದು ವಾಕಿಂಗ್‌ ಮಾಡುತ್ತಿದ್ದರು. ಇದೀಗ ಆವರಣವೆಲ್ಲವೂ ನೀರುಮಯವಾದ ಕಾರಣಕ್ಕೆ ಕೂಡಲೇ ಒಳಚರಂಡಿ ವ್ಯವಸ್ಥೆ ಸರಿಪಡಿಸಿ ಎಂದು ಸಾರ್ವಜನಿಕರ ಆಕ್ರೋಶ ಹೊರಹಾಕಿದರು.

ಹಾವೇರಿ ಜಿಲ್ಲೆಯಲ್ಲೂ ಗುಡುಗು ಸಹಿತ ಮಳೆಯ ಅಬ್ಬರವಿತ್ತು. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊವಿನಶಿಗ್ಲಿ ಗ್ರಾಮದಲ್ಲಿ ತೆಂಗಿನ ಗಿಡಕ್ಕೆ ಸಿಡಿಲು ಬಡಿದು ತೆಂಗಿನಮರ ಹೊತ್ತಿ ಉರಿದಿತ್ತು. ಗುಡುಗಿನ ಹೊಡೆತಕ್ಕೆ ಹೊವಿನಶಿಗ್ಲಿ ಗ್ರಾಮದಲ್ಲಿ ಮನೆಯಲ್ಲಿರುವ ಹೋಂ ಥೆಟರ್ ಪುಡಿ ಪುಡಿಯಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ‌ ಸಂಭವಿಸಿಲ್ಲ.

ಇದನ್ನೂ ಓದಿ: Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

ಇನ್ನು ಯಾದಗಿರಿ ನಗರದಲ್ಲಿ ಶನಿವಾರ ಸುರಿದ ಅರ್ಧ ಗಂಟೆ ಮಳೆಗೆ ಪಿಡಬ್ಲ್ಯೂಡಿ ಕಚೇರಿ ಆವರಣದೊಳಗೆ ನೀರು ನುಗ್ಗಿತ್ತು. ಇದರಿಂದಾಗಿ ಕಚೇರಿಯೊಳಗೆ ಓಡಾಡಲು ಪರದಾಡಬೇಕಾಯಿತು. ಬಿಸಿಲ ನಗರಿ ಕಲಬುರಗಿಯಲ್ಲಿ ಬಿರುಗಾಳಿ ‌ಸಹಿತ ಭಾರಿ ಮಳೆಯಾಗಿದೆ. ಬಿಸಿಲ‌ ಬೇಗೆಗೆ ಬೆಂದಿದ್ದ ಜನತೆಗೆ ಮಳೆರಾಯ ತಂಪೇರಿದಿದ್ದ. ಭಾರಿ ಬಿರುಗಾಳಿಗೆ ಮರ ಧರೆಗುರುಳಿದ್ದವು.

ಬೆಂಗಳೂರು ಗ್ರಾಮಾಂತರಕ್ಕೆ ಕಾಲಿಟ್ಟ ಮಳೆರಾಯ

ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲ್ಲೂಕಿನಾದ್ಯಂತ ಮಳೆಯಾಗಿದೆ. ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನಕ್ಕೆ ಮಳೆಯು ನಿಟ್ಟುಸಿರುವ ಬಿಡುವಂತೆ ಮಾಡಿತ್ತು. ಆನೇಕಲ್, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಭಾಗದಲ್ಲಿ ಮಳೆಯಾಗಿತ್ತು. ವರ್ಷದ ಮೊದಲ ಮಳೆ ಕಂಡು ಜನರು ಫುಲ್ ಖುಷ್ ಆದರು.

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೀದರ್, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ಸಮಯದಲ್ಲಿ ಪ್ರತ್ಯೇಕ ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Modi in Karnataka: ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿರುವ ಬೃಹತ್ ಪ್ರಚಾರ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇಲ್ಲಿ ಲೈವ್‌ ವಿಡಿಯೊವನ್ನು ವೀಕ್ಷಿಸಬಹುದು.

VISTARANEWS.COM


on

Modi in Karnataka PM Modi to address rally in Bengaluru Here live video
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕಕ್ಕೆ (Modi in Karnataka) ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶವನ್ನು ಪೂರ್ಣಗೊಳಿಸಿ, ಬೆಂಗಳೂರಿನತ್ತ ಮುಖ ಮಾಡಿದ್ದಾರೆ.

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌?

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಧಾನಿ; ಕಿಸಾನ್‌ ಸಮ್ಮಾನ್‌ ಪ್ರಸ್ತಾಪ

ಕಾಂಗ್ರೆಸ್‌ ರೈತರಿಗೆ ಯಾವ ರೀತಿಯ ಮೋಸ ಮಾಡುತ್ತದೆ ಎನ್ನುವುದಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರವೇ ಸಾಕ್ಷಿ. ನಾವು ರೈತರ ಬಗ್ಗೆ ಕಳಕಳಿಯಿಂದ ಯೋಜನೆಯಿಂದ ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇದಕ್ಕೆ ಈ ಹಿಂದಿನ ಸರ್ಕಾರವು ಕೇಂದ್ರ ಸರ್ಕಾರ ಕೊಡುತ್ತಿದ್ದ 6 ಸಾವಿರ ರೂಪಾಯಿ ಜತೆಗೆ 4 ಸಾವಿರ ರೂಪಾಯಿಯನ್ನು ಕೊಡುತ್ತಲಿತ್ತು. ಆದರೆ, ಈ ಸರ್ಕಾರ ಅದನ್ನು ನಿಲ್ಲಿಸಿದೆ. ಹೀಗಾಗಿ ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಏಪ್ರಿಲ್‌ 20) ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಪರವಾಗಿ ಮತಯಾಚಿಸಿದರು.

ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ

ಈ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 150 ಅಮೃತ ಸರೋವರ ಯೋಜನೆ ಮಾಡಲಾಗಿದೆ. 2.70 ಲಕ್ಷ ಕುಟುಂಬಕ್ಕೆ ಕುಡಿಯುವ ನೀರನ್ನು ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಆದರೆ, ಕಾಂಗ್ರೆಸ್‌ ಸರ್ಕಾರವು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಇಂಥ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೀರಿ ಎಂಬುದಾಗಿ ಭಾವಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡಲಾಗಿತ್ತು. 1,300 ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಶಿಡ್ಲಘಟ್ಟದಲ್ಲಿ ರೇಷ್ಮೆ ಉದ್ಯಮಕ್ಕೆ ಸಹಾಯ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ

ಸಂತ ಕೈವಾರ ತಾತಯ್ಯ, ಸರ್.ಎಂ ವಿಶ್ವೇಶ್ವರಯ್ಯ, ಈ ಮಣ್ಣಿನಲ್ಲಿ ಜನರ ದರ್ಶನ ನನ್ನ ಸೌಭಾಗ್ಯ ಎಂದು ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಉತ್ಸಾಹ ಹೆಚ್ಚಾಗಿದೆ. ಆ ಉತ್ಸಾಹ ನನಗೆ ಕಾಣುತ್ತಿದೆ. ಯುವಕರಿಗೆ ಪ್ರೇರಣೆ ಸಿಗಲಿದೆ. ನನಗೆ ಭಾಷೆ ಅರ್ಥ ಆಗಲ್ಲ. ಆದರೆ, ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನನ್ನ ಹೃದಯದಿಂದ ಅಭಾರಿಯಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ದೇವೇಗೌಡರು ಇಂಡಿ ಮೈತ್ರಿ ಬಗ್ಗೆ ಹೇಳಿದ್ದಾರೆ. ಇಂಡಿ ಮೈತ್ರಿಯಲ್ಲಿ ನಾಯಕರಿಲ್ಲ, ಭವಿಷ್ಯದ ಬಗ್ಗೆ ಚಿಂತನೆಯೇ ಅವರಲ್ಲಿ ಇಲ್ಲ. ಅವರ ಇತಿಹಾಸ ಕೇವಲ ಹಗರಣ ಮಾತ್ರ ಎಂದು ಗುಡುಗಿದರು.

ದೇಶದ ಬಗ್ಗೆ 24×7 ಕೆಲಸ

ದೇಶದ ಜನತೆಗೆ ನನ್ನ ಕೆಲಸದ ಬಗ್ಗೆ ತಿಳಿಸಿದ್ದೇನೆ. ನಾನು ನಿಮ್ಮ ನಡುವೆ ನಮ್ಮ ರಿಪೋರ್ಟ್‌ ಕಾರ್ಡ್ ಹಿಡಿದು ಆಶೀರ್ವಾದ ಪಡೆಯಲು ಬಂದಿದ್ದೇನೆ. ನಾನು ಎಲ್ಲರನ್ನೂ ಪರಿವಾರ ಅಂತ ತಿಳಿದಿದ್ದೇನೆ. ನಿಮ್ಮ ಕನಸು, ಮೋದಿಯ ಸಂಕಲ್ಪವಾಗಿದೆ. ಪ್ರತಿ ಕ್ಷಣದಲ್ಲೂ ನಿಮ್ಮ ಹಾಗೂ ದೇಶದ ಬಗ್ಗೆ 24×7 ಕೆಲಸ ಮಾಡಲು ಬಂದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಮುಂದಿನ ಐದು ವರ್ಷವೂ ಉಚಿತ ರೇಷನ್

ದೇಶದ ಜನ ಎಂದೂ ಉಚಿತ ರೇಷನ್ ಸಿಗುತ್ತದೆ ಅಂತ ಅನ್ನಿಸಿರಲಿಲ್ಲ. ನಿಮ್ಮ ಮೋದಿ ಅದನ್ನು ಈಡೇರಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಎಂಟು ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ರೇಷನ್ ಕೊಡುತ್ತಿದ್ದೇವೆ. ಇದೇ ರೀತಿ ಮುಂದಿನ ಐದು ವರ್ಷವೂ ಉಚಿತ ಅಕ್ಕಿ ನಿಮಗೆ ಸಿಗಲಿದೆ. ಕರ್ನಾಟಕದ ಲಕ್ಷಾಂತರ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಆಯುಷ್ಮಾನ್ ಯೋಜನೆ ಮೂಲಕ ಐದು ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ‌

25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ

ಮೋದಿ ಸರ್ಕಾರದ ಯೋಜನೆ ಮೂಲಕ ಕೋಟ್ಯಂತರ ಮಂದಿ ಲಾಭ ಪಡೆದಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಕುಟುಂಬದವರಿಗೆ ಭರಪೂರ ಯೋಜನೆ ನೀಡಲಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೊದಲು ಕೊಳಗೇರಿಯಲ್ಲಿ ವಾಸ ಮಾಡುವಂತಾಗಿತ್ತು. ವಿದ್ಯುತ್, ನೀರು ಕೂಡ ಸಿಗುತ್ತಿರಲಿಲ್ಲ. ಜನರೂ ಹಿಂದಿನ ಸರ್ಕಾರದ ಮೇಲೆ ಭರವಸೆ ಕೂಡ ಬಿಟ್ಟುಬಿಟ್ಟಿದ್ದರು. ಆದರೆ, ನಿಮ್ಮ ಭರವಸೆಯನ್ನು ಮೋದಿ ಗ್ಯಾರಂಟಿ ನಿಜ ಮಾಡಿದೆ. 25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇನ್ನೈದು ವರ್ಷದಲ್ಲಿ ಸೂರಿಲ್ಲದವರಿಗೆ ಮನೆ

ಹಿಂದಿನ ಹತ್ತು ವರ್ಷಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ 14 ಕೋಲಾರ 24 ಸಾವಿರ ಮನೆ ನಿರ್ಮಾಣ ಮಾಡಿ ನೀಡಲಾಗಿದೆ. ಮೋದಿ ಸರ್ಕಾರ ಹೊಸ ಮನೆಗಳ ನಿರ್ಮಾಣ ಮಾಡುವ ಭರವಸೆ ನೀಡಿದೆ. ಯಾರಿಗೆ ಈವರೆಗೆ ಮನೆ ಸಿಕ್ಕಿಲ್ಲವೋ ಅವರಿಗೆ ಮುಂದಿನ ಐದು ವರ್ಷಗಳಲ್ಲಿ ಖಂಡಿತವಾಗಿಯೂ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡಿದ್ದು ಎನ್‌ಡಿಎ

2014ರಲ್ಲಿ ಎನ್‌ಡಿಎ ಸರ್ಕಾರ ಬಂದ ಬಳಿಕ ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡುವ ಮೂಲಕ ಮೊದಲ ಪ್ರಜೆಯನ್ನು ಆಯ್ಕೆ ಮಾಡಿತು. ಹಿಂದುಳಿದ ಸಮುದಾಯದ ಮಹಿಳೆಯನ್ನು ರಾಷ್ಟ್ರಪತಿ ಮಾಡಲಾಗಿದೆ ಎಂದು ಎನ್‌ಡಿಎ ಸರ್ಕಾರ ಕೈಗೊಂಡ ಕ್ರಮಗಳು, ನಿರ್ಧಾರಗಳ ಬಗ್ಗೆ ಪ್ರಧಾನಿ ಮೋದಿ ವಿವರಿಸಿದರು.

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮೂಲಕ ಎಲ್ಲರನ್ನೂ ಜತೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದೆ. ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ‌ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ದಾಖಲಾತಿ ಹೆಚ್ಚಾಗಿದೆ. ಗ್ಯಾರಂಟಿ ಇಲ್ಲದೆ, ಮುದ್ರಾ ಲೋನ್ ಮೂಲಕ ಸಾಲ ನೀಡಲಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ ನೀಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ಮಾಡಿದ್ದೇವೆ

ಇಂದು ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ಬಂದಿದ್ದಾರೆ. ನಿಮ್ಮ ಕಷ್ಟವನ್ನು ಮೋದಿ ನೋಡಿದ್ದಾರೆ. ದೇಶದ ಅನೇಕರು ಮೋದಿಯನ್ನು ಅಧಿಕಾರದಿಂದ ಕೆಳಗೆ ಇಳಿಸಲು ಪ್ರಯತ್ನ ಮಾಡಿದ್ದಾರೆ. ಆದರೆ, ತಾಯಂದಿರ ಆಶೀರ್ವಾದ ಇದೆ. ನಿಮ್ಮೆಲ್ಲರ ಆಶೀರ್ವಾದಿಂದ ನಾನು ಎದುರಿಸುತ್ತೇನೆ. ಪ್ರತಿ ತಾಯಂದಿರ ಸೇವೆ ಮಾಡುವುದು ಮೋದಿ ಗ್ಯಾರಂಟಿಯಾಗಿದೆ. ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ತಯಾರು ಮಾಡಲಾಗಿದೆ. ಮೂರು ಕೋಟಿ ಮಹಿಳೆಯರ ವಾರ್ಷಿಕ ಆದಾಯ ಲಕ್ಷ‌ ರೂಪಾಯಿ ಮೀರಲಿದೆ. ಎನ್‌ಡಿಎ ಸರ್ಕಾರದಿಂದ ಡ್ರೋನ್ ಪೈಲೆಟ್ ಟ್ರೈನಿಂಗ್ ಕೊಡಲಾಗುತ್ತಿದೆ. ಯುವತಿಯರು ಡ್ರೋನ್ ಮೂಲಕ ಸಾಧನೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಈ ನೆಲದಲ್ಲಿ ಮಾವು, ಪಶುಪಾಲನೆ ನಡೆಯುತ್ತಿದೆ. ಎನ್‌ಡಿಎ ಸರ್ಕಾರ ಹಳ್ಳಿಗಳ ಅಭಿವೃದ್ಧಿಗೆ ಶ್ರಮ ವಹಿಸುತ್ತಿದೆ. ನಮ್ಮ ಜತೆ ದೇವೇಗೌಡರಂತಹ ಹಿರಿಯ ರಾಜಕಾರಣಿ ಇದ್ದಾರೆ. ಅಂಥವರ ಮಾರ್ಗದರ್ಶನ ನಮಗಿದೆ. ಪಶು ಪಾಲನೆ ಮಾಡುವವರಿಗೂ ಕಿಸಾನ್ ಕಾರ್ಡ್ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೋಲಾರ ಸಂಸದ ಮುನಿಸ್ವಾಮಿ, ಯಲಹಂಕ ಶಾಸಕರಾದ ವಿಶ್ವನಾಥ್, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ವೈ. ಸಂಪಂಗಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Continue Reading
Advertisement
Modi in Karnataka Govt turns tax city Bengaluru into tanker city and attacks girls too PM Narendra Modi
ಕರ್ನಾಟಕ5 mins ago

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Kalki 2898 AD
ಸಿನಿಮಾ7 mins ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ16 mins ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Ashutosh Sharma
ಕ್ರೀಡೆ16 mins ago

Ashutosh Sharma: ಖಿನ್ನತೆಗೆ ಒಳಗಾಗಿದ್ದ ಬಿಗ್​ ಹಿಟ್ಟರ್​ ಅಶುತೋಷ್‌ ಶರ್ಮ; ಕ್ರಿಕೆಟ್​ ಜರ್ನಿಯೇ ರೋಚಕ

DK Shivakumar
ಕರ್ನಾಟಕ17 mins ago

DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

Karnataka Weather Forecast
ಮಳೆ33 mins ago

Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

Trust Of The Nation 2024
ಪ್ರಮುಖ ಸುದ್ದಿ50 mins ago

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Modi in Karnataka PM Modi to address rally in Bengaluru Here live video
Lok Sabha Election 20241 hour ago

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Narendra Modi
ದೇಶ1 hour ago

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Horseshoe Septum Ring Fashion
ಫ್ಯಾಷನ್1 hour ago

Horseshoe Septum Ring Fashion: ಅಲ್ಟ್ರಾ ಮಾಡರ್ನ್‌ ಸ್ಟೈಲಿಂಗ್‌ ಪ್ರಿಯರ ಮನಗೆದ್ದ ಹಾರ್ಸ್‌ ಶೂ ಸೆಪ್ಟಮ್‌ ರಿಂಗ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ2 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20242 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20244 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ6 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ7 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌