Site icon Vistara News

Madhu Bangarappa: ಸಚಿವ ಮಧು ಬಂಗಾರಪ್ಪ ಕಾರಿಗೆ ಲಾರಿ ಡಿಕ್ಕಿ, ಅಪಾಯದಿಂದ ಪಾರು

madhu bangarappa car

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ (Education minister Madhu Bangarappa) ಅವರು ಇದ್ದ ಕಾರಿಗೆ ಲಾರಿ ಡಿಕ್ಕಿಯಾಗಿದೆ. ನಿನ್ನೆ ತಡರಾತ್ರಿ ಅಪಘಾತ (Road Accident) ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.

ತುಮಕೂರಿನ (tumkur news) ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಸಚಿವ ಮಧು ಬಂಗಾರಪ್ಪ ಅವರ ಕಾರಿಗೆ ಲಾರಿಯ ಮುಂಭಾಗ ತೀವ್ರವಾಗಿ ಉಜ್ಜಿಕೊಂಡಿದೆ.

ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಅಪಘಾತದ ಬಳಿಕ ಬೇರೆ ಕಾರಿನಲ್ಲಿ ಸಚಿವ ಮಧು ಬಂಗಾರಪ್ಪ ಬೆಂಗಳೂರಿಗೆ ತೆರಳಿದ್ದಾರೆ.

ಟ್ರಾಕ್ಟರ್‌ ಪಲ್ಟಿಯಾಗಿ ಚಾಲಕ ಸಾವು

ಬೆಂಗಳೂರು: ಬೋರ್‌ವೆಲ್ ಕಾಮಗಾರಿ ನಡೆಸುತ್ತಿದ್ದಾಗ ಟ್ರಾಕ್ಟರ್ ಪಲ್ಟಿಯಾಗಿ ಅದರ ಚಾಲಕ ಸಾವಿಗೀಡಾಗಿದ್ದಾರೆ. ಹನುಮಂತನಗರ ಬಳಿಯ ಶ್ರೀನಗರ ಪೈಪ್ ಲೈನ್ ಬಳಿ ದುರ್ಘಟನೆ ನಡೆದಿದೆ.

ಟ್ರಾಕ್ಟರ್‌ ರಿವರ್ಸ್ ತೆಗೆಯುವಾಗ ಹೀಗಾಗಿದೆ. ಹಿಂಬದಿ ಚಲಿಸುವಾಗ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿ ಅದರ ಮಾಲಿಕ ಮತ್ತು ಚಾಲಕನಾದ ಫರ್ಗಾಸ್‌ ಎಂಬ ಆಂಧ್ರಪ್ರದೇಶ ಮೂಲದ ವ್ಯಕ್ತಿ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತ‌ ದೇಹವನ್ನು ಹೊರತೆಗೆದಿದ್ದಾರೆ.

ಆಟೋಗೆ ದುಷ್ಕರ್ಮಿಗಳಿಂದ ಬೆಂಕಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಆಟೋಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಹುಬ್ಬಳ್ಳಿಯ ನೇಕಾರ ನಗರದ ಮಹಾಲಕ್ಷ್ಮೀ ಕಾಲೋನಿಯಲ್ಲಿ ಘಟನೆ ನಡೆದಿದೆ. ವೀರಣಗೌಡ ಪಾಟೀಲ್ ಎಂಬವರಿಗೆ ಸೇರಿದ ಆಟೋಗೆ ಮಧ್ಯರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೆಂಕಿ ನಂದಿಸಲು ಸ್ಥಳೀಯರು ಪ್ರಯತ್ನಿಸಿದರೂ ಸುಟ್ಟು ಕರಕಲಾಗಿದೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident: ಬೈಕ್‌ ಸವಾರರಿಬ್ಬರ ಜೀವ ತೆಗೆದ ಅಪಘಾತ

Exit mobile version