ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ; ರಾಜ್ಯದ ವಿವಿಧೆಡೆ ಶನಿವಾರವೂ ಮುಂದುವರಿದ ಕಾಂಗ್ರೆಸ್‌ ಪ್ರತಿಭಟನೆ - Vistara News

ಕರ್ನಾಟಕ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ; ರಾಜ್ಯದ ವಿವಿಧೆಡೆ ಶನಿವಾರವೂ ಮುಂದುವರಿದ ಕಾಂಗ್ರೆಸ್‌ ಪ್ರತಿಭಟನೆ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಇನ್ನೂ ತಣ್ಣಗಾಗಿಲ್ಲ. ರಾಜ್ಯದ ವಿವಿಧ ಕಡೆ ಪ್ರತಿಭಟನೆ ನಡೆಸಿ, ಆಕ್ರೋಶವನ್ನು ಹೊರಹಾಕಿದ್ದಾರೆ.

VISTARANEWS.COM


on

ಹಾವೇರಿ ಜಿಲ್ಲೆಯ ಹಾನಗಲ್‌ನ ಕನಕ ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮಡಿಕೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿರೋಧಿಸಿ ಶನಿವಾರವೂ ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹಲವೆಡೆ ಸಂಚಾರ ತಡೆ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಮಾಜಿ ಸಿಎಂಗೆ ಭದ್ರತೆ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ, ಕೃತ್ಯ ಎಸಗಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯ ಮಾಡಿದರು.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ತಡೆ
ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿರೋಧಿಸಿ ರಾಮನಗರದ ಐಜೂರು ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಿ, ಬಿಜೆಪಿ ಹಾಗೂ ಆರ್‌ಎಸ್ಎಸ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಯಿತು, ಕಾಂಗ್ರೆಸ್ ಕಚೇರಿಯಿಂದ ಐಜೂರು ವೃತ್ತದವರೆಗೂ ನೂರಾರು ಕಾರ್ಯಕರ್ತರು ಸಂಚಾರ ತಡೆ ನಡೆಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದರಿಂದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟಿತು.

ಮಾಜಿ ಸಿಎಂಗೆ ರಕ್ಷಣೆ ಒದಗಿಸುವಲ್ಲಿ ಪೊಲೀಸರ ವೈಫಲ್ಯ
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದ ಪ್ರಕರಣ ಖಂಡಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಭದ್ರಮ್ಮಚೌಟ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ, ಮಾಜಿ ಸಿಎಂ ಸಿದ್ದರಾಮಯ್ಯಗೆ ರಕ್ಷಣೆ ಒದಗಿಸುವಲ್ಲಿ ಪೊಲೀಸರ ವೈಫಲ್ಯ ಎದ್ದುಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮೊಟ್ಟೆ ಎಸೆದ ಬಿಜೆಪಿ ಕೀಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಾಗೂ ಬಜರಂಗದಳ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಆಗ್ರಹಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ, ಮಾಜಿ ಶಾಸಕ ಶಫಿ ಅಹಮದ್, ಪಾಲಿಕೆ ಸದಸ್ಯ ನಯಾಜ್ ಅಹಮದ್ ಸೇರಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ಇದನ್ನೂ ಓದಿ | ಮೊಟ್ಟೆ ಎಸೆದ ಸಂಪತ್‌ ಕೈ ಕಾರ್ಯಕರ್ತ ಅಲ್ಲ, ಬಿಜೆಪಿ ಬೆಂಬಲಿಗ: ಗಣವೇಷ, ಚಿತ್ರ ದಾಖಲೆ ನೀಡಿದ ಕಾಂಗ್ರೆಸ್‌

ತುಮಕೂರಿನಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.

ಬಾಗಲಕೋಟೆಯಲ್ಲಿ ಮಾನ ಸರಪಳಿ ನಿರ್ಮಿಸಿ ಆಕ್ರೋಶ
ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಮಾಜಿ‌ ಸಚಿವ ಎಚ್.ವೈ.ಮೇಟಿ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಹಾಗೆಯೇ ಜಿಲ್ಲೆಯ ಮುಧೋಳ, ಜಮಖಂಡಿ ಹಾಗೂ ತೇರದಾಳ ತಾಲೂಕು ಕೇಂದ್ರಗಳಲ್ಲೂ ಕಾರ್ಯಕರ್ತರು ಬಿಜೆಪಿ‌ ಸರ್ಕಾರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಲಿಂಗಸುಗೂರಿನಲ್ಲಿ 2 ಸಾವಿರ ಮೊಟ್ಟೆ ವಿತರಣೆ
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು 2 ಸಾವಿರ ಮೊಟ್ಟೆ ವಿತರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪಟ್ಟಣದ ವಾರ್ಡ್ 15ರಲ್ಲಿ ಮನೆ ಮನೆಗೆ ಮೊಟ್ಟೆ ವಿತರಿಸಿದ ಕಾರ್ಯಕರ್ತರು ಮೊಟ್ಟೆ ಪೌಷ್ಟಿಕ ಆಹಾರ, ವ್ಯರ್ಥ ಮಾಡಬೇಡಿ ಎಂದು ಘೋಷಣೆ ಕೂಗುವ ಮೂಲಕ ಜಾಥಾ ನಡೆಸಿದರು.

ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಿ
ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ್ ಹೆಬ್ಬಾಳ್ಕರ್, ಶಾಸಕ ಫಿರೋಜ್ ಸೇಠ್ ಪುತ್ರ ಫೈಜಾನ್ ಸೇಠ್ ಸೇರಿ ಹಲವರು ಕೈಯಲ್ಲಿ ಮೊಟ್ಟೆ ಹಿಡಿದು ಆಕ್ರೋಶ ಹೊರಹಾಕಿದರು. ‌

ಇದನ್ನೂ ಓದಿ | Non Veg | ದೇವಸ್ಥಾನ ಭೇಟಿ ಮುನ್ನ ನಾಟಿಕೋಳಿ ತಿಂದಿದ್ದರೇ ಸಿದ್ದರಾಮಯ್ಯ?; ಮತ್ತೆ ವಿವಾದ ಸೃಷ್ಟಿ!

ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ಅಪಮಾನ ಮಾಡಿರುವುದು ರಾಜ್ಯದ ಜನರ ಮೇಲೆ ಮೊಟ್ಟೆ ಎಸೆದಂತೆ. ಬಿಜೆಪಿಯವರು ಮೊದಲು ಮಳೆಯಿಂದ ಬಿದ್ದ ಮನೆಗಳಿಗೆ ಪರಿಹಾರ ಕೊಡಬೇಕು, ರಾಜ್ಯದಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರಿಗೆ ಸಮಾಜದ ಬಗ್ಗೆ ನಿಜವಾದ ಕಳಕಳಿ ಇದ್ದರೆ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಲಿ ಎಂದು ಹೇಳಿದರು.

ಸಿಂದಗಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಂದಗಿಯಲ್ಲಿ ರಸ್ತೆ ತಡೆದು ಪ್ರತಿಭಟನೆ
ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ರಸ್ತೆ ತಡೆದು ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಮಾತನಾಡಿ, ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಹೊಡೆದು ಅವಮಾನಗೊಳಿಸಿದ್ದು ಖಂಡನೀಯ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೋಮು ಗಲಭೆ ಎಬ್ಬಿಸಿದ್ದು ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕಾರ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ವಕ್ತಾರ ಎಸ್.ಎಮ್.ಪಾಟೀಲ ಗಣಿಹಾರ‌ ಮಾತನಾಡಿ, ವಿಪಕ್ಷ ನಾಯಕ ಎಂಬ ಹುದ್ದೆಗೆ ಮುಖ್ಯಮಂತ್ರಿಗಿರುವ ಗೌರವ ಇದೆ. ಆದರೆ ಅಹಿಂದ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ಅವಮಾನ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಕುಚೋದ್ಯದ ಕೆಲಸ ಮಾಡಲಾಗಿದೆ ಎಂದು ಹೇಳಿದರು. ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ, ಉಪಾಧ್ಯಕ್ಷ ಹಾಸೀಂ ಆಳಂದ, ಕಾಂಗ್ರೆಸ್ ಮುಖಂಡರಾದ ಸುರೇಶ ಪೂಜಾರಿ, ಚನ್ನು ವಾರದ, ರಮೇಶ ಬಂಟನೂರ, ಶರಣಮ್ಮ ರಾಠೋಡ, ನೂರ್ ಅಹ್ಮದ್‌ ಅತ್ತಾರ, ಬಸವರಾಜ ಶಿರಸಗಿ, ರಮೇಶ ನಡುವಿನಕೇರಿ, ಅನೀಲ ಉಡಚಾಣ, ಸಂತೋಷ ಹರನಾಳ ಮತ್ತಿತರರು ಇದ್ದರು.

ಇದನ್ನೂ ಓದಿ | Egg episode| ಆಪರೇಷನ್‌ ಕಮಲ ಶಾಸಕರಿಗಷ್ಟೇ ಅಲ್ಲ, ಪುಂಡರಿಗೂ ಇದ್ಯಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

Rain News : ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದರೆ ಇತ್ತ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನಲ್ಲಿ ಹಲವೆಡೆ ಬುಧವಾರ (Karnataka Weather Forecast) ಅಬ್ಬರಿಸಲಿದೆ. ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಹಲವೆಡೆ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಧಾರವಾಡ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಬೆಂಗಳೂರಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಯೆಲ್ಲೋ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು

ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

Actor Darshan: ರೇಣುಕಾಸ್ವಾಮಿ ಕೊಲೆ ನಡೆದಿದ್ದ ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ನಲ್ಲಿ ಆರೋಪಿಗಳ ಸಮ್ಮುಖದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಸ್ಟಡಿಯಲ್ಲಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇನ್ನು ಬಂಧನದ ಬಳಿಕ ಆತಂಕಗೊಂಡಿರುವ ನಟ ದರ್ಶನ್‌, ಮಹಜರು ವೇಳೆ ಅಮಾಯಕನಂತೆ ನಿಂತಿದ್ದದ್ದು ಕಂಡುಬಂದಿತು.

ಬಿಗಿ ಭದ್ರತೆಯಲ್ಲಿ ದರ್ಶನ್‌, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.

ಇದನ್ನೂ ಓದಿ | Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

ಮಹಜರಿನ ಜತೆಯಲ್ಲಿ ಸಾಕ್ಷ್ಯಗಳನ್ನು ಕೂಡ ಎಫ್ಎಸ್ಎಲ್ ತಂಡ ಕಲೆಹಾಕಿದೆ. ವಾಹನಗಳ ಸೀಜಿಂಗ್ ಯಾರ್ಡ್‌ನ ಮೂಲೆ ಮೂಲೆಯಲ್ಲೂ ಪರಿಶೀಲನೆ ನಡೆಸಲಾಗಿದೆ. ಮೃತ ರೇಣುಕಸ್ವಾಮಿಯನ್ನು ಅಕ್ರಮವಾಗಿ ಬಂಧದಲ್ಲಿರಿಸಿಕೊಂಡ ಶೆಡ್‌ನಲ್ಲೂ ಆರೋಪಿಗಳನ್ನ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಲಾಗಿದೆ.

ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಭಾಗಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳ ಪೈಕಿ 13 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತೊಬ್ಬ ಮಹಿಳೆ ಕೂಡ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಿ ಅನು ಎಂಬ ಮಹಿಳೆ ಎಸ್ಕೇಪ್‌ ಆಗಿದ್ದಾಳೆ. ಜಗದೀಶ್ @ ಜಗ್ಗ, ಅನು, ರವಿ, ರಾಜು ಎಂಬುವವರು ಸದ್ಯ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ | Actor Darshan: ಆರೋಪಿ ದರ್ಶನ್​ಗೆ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಿದ್ದ ಪೊಲೀಸರು!

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

Continue Reading

ಕರ್ನಾಟಕ

Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

Actor Darshan: ನಟ ದರ್ಶನ್‌ ಅವರು ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಹಾಗೂ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Actor Darshan
Koo

ಚಿಕ್ಕಮಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅವರು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದು, ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ವನ್ಯಜೀವಿ ಧಾಮಗಳಿಗೆ ದರ್ಶನ್ ಭೇಟಿ ನೀಡಿದ ಫೋಟೋಗಳು‌ ಸದ್ಯ ವೈರಲ್ ಆಗಿವೆ.

ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಖಾಸಗಿ ಕಾರುಗಳ ಬಳಕೆ ನಿಷಿದ್ಧ. ಆದರೂ ದರ್ಶನ್‌ ಅವರಿಗೆ ಖಾಸಗಿ ವಾಹನ ಬಳಸಲು ಅನುಮತಿ ನೀಡಲಾಗಿದೆ ಎಂದು ಚಿಕ್ಕಮಗಳೂರಿನ ಅರಣ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಸಾಮಾನ್ಯ ಜನರಿಗೆ ಮಾತ್ರ ಕಠಿಣ ನಿಯಮಗಳು, ಸೆಲೆಬ್ರಿಟಿಗಳಿಗಾದರೆ ನಿಯಮ ಅನ್ವಯಿಸಲ್ಲವೇ ಎಂದು ಜನರು ಪ್ರಶ್ನಿಸಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಎಫ್‌ಐಆರ್‌

ಮೈಸೂರಿನ ಟಿ. ನರಸೀಪುರದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ನಟ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ. ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಐದು ನೋಟಿಸ್‌ ನೀಡಿದ್ದು, ಇದುವರೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

ಚಿತ್ರದುರ್ಗ: ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಅವನಿಗೆ ಇಂತಹ ಶಿಕ್ಷೆಯಾ? ಏನು ಮಾಡದ ತಪ್ಪಿಗೆ ನನ್ನ ಮಗ ಬಲಿ ಆದ. ಅವನ ಪಾಡಿಗೆ ಅವನು ಇದ್ದ, ಏನೂ ಮಾಡಿಲ್ಲ. ಯಾವುದೇ ಗಲಾಟೆ ಗೋಜಿಗೆ ಹೋಗಿರಲಿಲ್ಲ. ನಟ ದರ್ಶನ್‌ಗೆ ಶಿಕ್ಷೆ ಆಗಲೇಬೇಕು, ಅವನು ಹೀರೋ ಅಲ್ಲ ಖಳನಾಯಕ. ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಕಿಡಿಕಾರಿದ್ದಾರೆ.

ನಗರದಲ್ಲಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿರುವ ಅವರು, ಏನು ಮಾಡದ ತಪ್ಪಿಗೆ ನನ್ನ ಮಗ ಬಲಿಯಾಗಿದ್ದಾನೆ, ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ನನ್ನ ಮಗ ಹಾಗೂ ಪವಿತ್ರ ಗೌಡ ನಡುವೆ ಚಾಟಿಂಗ್ ನಡೆದಿತ್ತು

ಇದನ್ನೂ ಓದಿ Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ನನ್ನ ಮಗ ಹಾಗೂ ಪವಿತ್ರಾ ಗೌಡ ನಡುವೆ ಚಾಟಿಂಗ್ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ನಿರಂತರ ಚಾಟಿಂಗ್ ಮಾಡುತ್ತಿದ್ದರು ಎಂದು ಮಾಹಿತಿ ಕೊಟ್ಟಿದ್ದಾರೆ ಎಂದು ರೇಣುಕಾ ಸ್ವಾಮಿ ತಾಯಿ ಹೇಳಿದ್ದಾರೆ. ಹಾಗಾದರೆ ಮೊದಲಿನಿಂದಲೂ ಪವಿತ್ರಾ ಹಾಗೂ ರೇಣುಕಾ ಮಧ್ಯೆ ಪರಿಚಯ ಇತ್ತೇ? ಕುಟುಂಬಕ್ಕೆ ಹೇಳದೆ ರೇಣುಕಾ ಸ್ವಾಮಿ ವಿಷಯ ಮುಚ್ಚಿಟ್ಟಿದ್ದರಾ? ಹಾಗಾದರೆ ಇಬ್ಬರ ಮಧ್ಯೆ ಏನು ಚಾಟಿಂಗ್‌ ನಡೆದಿತ್ತು ಎಂಬುವುದು ಕುತೂಹಲ ಮೂಡಿಸಿದ್ದು, ರೇಣುಕಾಸ್ವಾಮಿ ತಾಯಿ ಹೇಳಿಕೆ ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Continue Reading

ಕ್ರೀಡೆ

Mayank Agarwal: ಕುಕ್ಕೆಯಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌

Mayank Agarwal: ಅಗರ್ವಾಲ್‌ ಅವರು ಕುಟುಂಬ ಸಮೇತರಾಗಿ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

VISTARANEWS.COM


on

mayank agarwal
Koo

ಮಂಗಳೂರು: ಟೀಮ್​ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಮಯಾಂಕ್‌ ಅಗರ್ವಾಲ್‌(Mayank Agarwal) ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke Shri Subrahmanya) ದೇವಸ್ಥಾನದಲ್ಲಿ ಇಂದು(ಬುಧವಾರ) ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಸೋಮವಾರದಂದು ಅಗರ್ವಾಲ್‌ ಅವರು ಪತ್ನಿ ಆಶಿತಾ ಸೂದ್‌(Aashita Sood) ಮತ್ತು ಕುಟುಂಬದೊಂದಿಗೆ ಇಲ್ಲಿಗೆ ಆಗಮಿಸಿ ಖಾಸಗಿ ಹೊಟೇಲ್‌ನಲ್ಲಿ ತಂಗಿದ್ದರು. ಈ ವೇಳೆ ಅವರನ್ನು ಹೊಟೇಲ್‌ನಲ್ಲಿ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಲಾಗಿತ್ತು.

ಮಂಗಳವಾರ ಬೆಳಗ್ಗೆ ಕುಟುಂಬ ಸಮೇತರಾಗಿ ದೇವಳದಲ್ಲಿ ಸರ್ಪಸಂಸ್ಕಾರ ಸೇವೆ ಆರಂಭಿಸಿದ್ದರು. ಅಲ್ಲದೇ, ಸೇವೆಯ ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿದ್ದರು. ಬುಧವಾರ ಗೋಪೂಜೆ, ಬ್ರಹ್ಮಚಾರಿ ಆರಾಧನೆ ಮತ್ತು ನಾಗಪ್ರತಿಷ್ಠೆ ನೆರವೇರಿಸಿ ಸರ್ಪಸಂಸ್ಕಾರ ಸೇವೆಯನ್ನು ಸಮಾಪ್ತಿಗೊಳಿಸಲಿ ದೇವರ ದರ್ಶನ ಪಡೆದು ದೇವಾಲಯದಲ್ಲಿ ಭೋಜನ ಸ್ವೀಕರಿಸಿದ್ದಾರೆ.

ಇದಕ್ಕೂ ಮುನ್ನ ಅಗರ್ವಾಲ್‌ ಅವರು ಕುಟುಂಬ ಸಮೇತರಾಗಿ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಜೂನ್​ 9 ರಂದು ಅಗರ್ವಾಲ್​ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿತ್ತು.

ಅಗರ್ವಾಲ್ ದೇಶಿಯ ಕ್ರಿಕೆಟ್​ನಲ್ಲಿ ಉತ್ತಮ ಸಾಧನೆ ತೋರಿದರೂ ಅವರಿಗೆ ಭಾರತ ತಂಡದಲ್ಲಿ ಸರಿಯಾದ ಅವಕಾಶ ಸಿಗಲೇ ಇಲ್ಲ. ಈಗಾಗಲೇ ಹಲವು ಬಾರಿ ಭಾರತ ಟೆಸ್ಟ್​ ತಂಡದ ಪರ ಮಯಾಂಕ್​ ಆಡಿದ್ದರೂ ಅವರ ಸ್ಥಾನ ಮಾತ್ರ ಗಟ್ಟಿಯಾಗಿರಲಿಲ್ಲ. ಆರಂಭಿಕ ಆಟಗಾರರು ಗಾಯಗೊಂಡರೆ ಮಾತ್ರ ಅವರಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಅವರು ಸಿಕ್ಕ ಅನೇಕ ಅವಕಾಶದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಕೊಡುಗೆ ನೀಡಿದ್ದಾರೆ. ಅವರು ಇದುವರೆಗೆ 21 ಟೆಸ್ಟ್​ ಪಂದ್ಯಗಳನ್ನು ಆಡಿದ್ದು 4 ಶತಕ, 2 ದ್ವಿಶತಕ ಮತ್ತು 6 ಅರ್ಧಶತಕ ಬಾರಿಸಿದ್ದಾರೆ. 243 ರನ್​ ಅವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಇದನ್ನೂ ಓದಿ Mayank Agarwal: ನೀರಿನ ಬಾಟಲ್ ಫೋಟೊ ಹಂಚಿಕೊಂಡು ರಿಸ್ಕ್​​ ತೆಗೆದುಕೊಳ್ಳಲಾರೆ ಎಂದ ​​ ಅಗರ್ವಾಲ್

ಇತ್ತೀಗೆಚೆ ಅಗರ್ವಾಲ್​ ಅವರು ರಣಜಿ ಕ್ರಿಕೆಟ್ ಪಂದ್ಯವನ್ನಾಡಲು ಅಗರ್ತಲಾದಿಂದ ಸೂರತ್‌ಗೆ ವಿಮಾನದಲ್ಲಿ ತೆರಳುವಾಗ ನೀರು ಎಂದು ಭಾವಿಸಿ ರಾಸಾಯನಿಕ ದ್ರಾವಣವೊಂದನ್ನು ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ತಮ್ಮ ಸೀಟಿನ ಮುಂಭಾಗದಲ್ಲಿದ್ದ ಬಾಟಲಿಯೊಂದನ್ನು ತೆಗೆದು, ಅದರಲ್ಲಿದ್ದ ಪಾನೀಯವನ್ನು ನೀರು ಎಂದು ಭಾವಿಸಿ ಕುಡಿದಿದ್ದರು. ಅದು ಶೌಚಾಲಯವನ್ನು ಸ್ವತ್ಛಗೊಳಿಸುವ ದ್ರಾವಣವಾಗಿತ್ತು. ವಿಮಾನ ಟೇಕ್‌ ಆಫ್ ಆಗದ ಕಾರಣ ಅಗರ್ವಾಲ್‌ ಅವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಿತ್ತು. ಆರಂಭದಲ್ಲಿ ಅಗರ್ವಾಲ್​ಗೆ ವಿಶಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿತ್ತು. ಬಳಿಕ ಸತ್ಯಾಂಶ ಬೆಳಕಿಗೆ ಬಂದಿತ್ತು.

Continue Reading
Advertisement
karnataka weather Forecast
ಮಳೆ31 mins ago

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

TK Chathunni
ಕ್ರೀಡೆ34 mins ago

TK Chathunni: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ, ಕೋಚ್​ ಟಿ.ಕೆ. ಚತುನ್ನಿ ನಿಧನ

Ready Saree Fashion Tips
ಫ್ಯಾಷನ್51 mins ago

Ready Saree Fashion Tips: ರೆಡಿ ಸೀರೆ ಪ್ರಿಯರು ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Virat Kohli
ಕ್ರೀಡೆ1 hour ago

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Chandrababu Naidu
ದೇಶ1 hour ago

Chandrababu Naidu: ವಯಸ್ಸಲ್ಲಿ ಕಿರಿಯರಾದ ಮೋದಿ ಪಾದ ಮುಟ್ಟಲು ಮುಂದಾದ ಚಂದ್ರಬಾಬು ನಾಯ್ಡು; Video ಇದೆ

Benefits Of Eating Guava
ಆರೋಗ್ಯ2 hours ago

Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

Actor Darshan
ಪ್ರಮುಖ ಸುದ್ದಿ2 hours ago

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

FIFA World Cup
ಕ್ರೀಡೆ2 hours ago

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

Terror attack
ದೇಶ2 hours ago

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Actor Darshan wife Vijayalakshmi will get divorce
ಸ್ಯಾಂಡಲ್ ವುಡ್2 hours ago

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌