Border Dispute | ಅಮಿತ್‌ ಶಾ ತಾಕೀತಿಗೆ ಕಿಮ್ಮತ್ತು ಕೊಡದ ಶಿಂಧೆ, ಡಿ.19ಕ್ಕೆ ಆಪ್ತನನ್ನು ಬೆಳಗಾವಿಗೆ ಕಳುಹಿಸಲು ತೀರ್ಮಾನ - Vistara News

ಕರ್ನಾಟಕ

Border Dispute | ಅಮಿತ್‌ ಶಾ ತಾಕೀತಿಗೆ ಕಿಮ್ಮತ್ತು ಕೊಡದ ಶಿಂಧೆ, ಡಿ.19ಕ್ಕೆ ಆಪ್ತನನ್ನು ಬೆಳಗಾವಿಗೆ ಕಳುಹಿಸಲು ತೀರ್ಮಾನ

ಗಡಿ ಬಿಕ್ಕಟ್ಟಿನ ಕುರಿತು (Border Dispute) ಸುಪ್ರೀಂ ಕೋರ್ಟ್‌ ತೀರ್ಪು ಬರುವತನಕ ಸುಮ್ಮನಿರಿ ಎಂದು ಅಮಿತ್‌ ಶಾ ಸೂಚಿಸಿದರೂ ತಮ್ಮ ಆಪ್ತನನ್ನು ಬೆಳಗಾವಿಗೆ ಕಳುಹಿಸಲು ಏಕನಾಥ್‌ ಶಿಂಧೆ ತೀರ್ಮಾನಿಸಿದ್ದಾರೆ.

VISTARANEWS.COM


on

Karnataka Maharashtra Border Dispute
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ/ಮುಂಬೈ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಬಿಕ್ಕಟ್ಟಿನ (Border Dispute) ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟಿಸುವವರೆಗೂ ಯಾವುದೇ ಚಟುವಟಿಕೆ ಕೂಡದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಮಾಡಿದ ತಾಕೀತಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಸೆಡ್ಡು ಹೊಡೆದಿದ್ದಾರೆ. ಶಾ ಸೂಚನೆಯನ್ನೂ ಉಲ್ಲಂಘಿಸಿ ಡಿಸೆಂಬರ್‌ 19ರಂದು ತಮ್ಮ ಆಪ್ತನನ್ನು ಬೆಳಗಾವಿಗೆ ಕಳುಹಿಸಿಕೊಡಲು ಶಿಂಧೆ ತೀರ್ಮಾನಿಸಿದ್ದಾರೆ.

ಮಹಾರಾಷ್ಟ್ರ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷರೂ ಆದ ಸಂಸದ ಧೈರ್ಯಶೀಲ್‌ ಮಾನೆ ಅವರು ಬೆಳಗಾವಿಗೆ ಆಗಮಿಸುತ್ತಿರುವ ಕುರಿತು ಪ್ರವಾಸದ ಪಟ್ಟಿಯನ್ನು ಬೆಳಗಾವಿ ಪೊಲೀಸರಿಗೆ ರವಾನಿಸಲಾಗಿದೆ. ಚಳಿಗಾಲದ ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್‌ನಿಂದ ಬೆಳಗಾವಿಯಲ್ಲಿ ಡಿ.19ರಂದು ಮಹಾಮೇಳಾವ್‌ ಆಯೋಜಿಸಲಾಗಿದೆ. ಟಿಳಕವಾಡಿಯ ವ್ಯಾಕ್ಸಿನ್‌ ಡಿಪೋ ಮೈದಾನದಲ್ಲಿ ಮಹಾಮೇಳಾವ್‌ ನಡೆಯಲಿದ್ದು, ಇದರಲ್ಲಿ ಧೈರ್ಯಶೀಲ್‌ ಭಾಗವಹಿಸಲಿದ್ದಾರೆ. ಡಿ.19ರ ಬೆಳಗ್ಗೆ 11.30ಕ್ಕೆ ಬೆಳಗಾವಿಗೆ ಆಗಮಿಸಲಿರುವ ಮಾನೆ, ಮಧ್ಯಾಹ್ನ 1.30ಕ್ಕೆ ಹಿಂದಿರುಗಲಿದ್ದಾರೆ ಎಂದು ಪ್ರವಾಸದ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ, ಇದು ಅಮಿತ್‌ ಶಾ ಅವರ ಸೂಚನೆಯ ಸ್ಪಷ್ಟ ಉಲ್ಲಂಘನೆ ಎಂದು ಹೇಳಲಾಗುತ್ತಿದೆ.

ಕುತೂಹಲ ಮೂಡಿಸಿದ ಬೊಮ್ಮಾಯಿ ನಡೆ
ಕೆಲ ದಿನದ ಹಿಂದೆ ಏಕನಾಥ್‌ ಶಿಂಧೆ ಹಾಗೂ ಬಸವರಾಜ ಬೊಮ್ಮಾಯಿ ಅವರ ಜತೆ ಸಭೆ ನಡೆಸಿದ್ದ ಅಮಿತ್‌ ಶಾ, ಸುಪ್ರೀಂ ಕೋರ್ಟ್‌ ತೀರ್ಪು ಬರುವವರೆಗೂ ಯಾವುದೇ ಚಟುವಟಿಕೆ ಕೈಗೊಳ್ಳಬಾರದು ಎಂದು ಸೂಚಿಸಿದ್ದರು. ಸೂಚನೆಯನ್ನೂ ಉಲ್ಲಂಘಿಸಿ ಮಹಾರಾಷ್ಟ್ರ ಸರ್ಕಾರ ಸೆಡ್ಡು ಹೊಡೆದಿರುವ ಕಾರಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಂದಿನ ನಡೆಯು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ | Border Dispute | ಬೆಳಗಾವಿ ಅಧಿವೇಶನಕ್ಕಾಗಿ ಆಗಮಿಸಿದ್ದ ಸರ್ಕಾರಿ ವಾಹನಕ್ಕೆ ಮರಾಠಿ ಪುಂಡರಿಂದ ಕಲ್ಲು ತೂರಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ

RRB ALP Recruitment: ಆಗಸ್ಟ್ 3ರಂದು ನೈಋತ್ಯ ರೈಲ್ವೆಯ ಸಹಾಯಕ ಲೋಕೋ ಪೈಲಟ್‌ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್‌, ಹಿಂದಿ ಜತೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

VISTARANEWS.COM


on

RRB ALP Recruitment
Koo

ಬೆಂಗಳೂರು: ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿರುವ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ (RRB ALP Recruitment) ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ರೈಲ್ವೆ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂಸದ ತೇಜಸ್ವಿ ಸೂರ್ಯ ಧನ್ಯವಾದ ಸಲ್ಲಿಸಿದ್ದಾರೆ.

ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡಿದೆ. ಇದರಿಂದ ಕರ್ನಾಟಕದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗಲು ಅನುಕೂಲವಾಗಲಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿದ್ದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿರುವುದನ್ನು ರೈಲ್ವೆ ಇಲಾಖೆ ರಾಜ್ಯ ಸಚಿವರಾದ ವಿ.ಸೋಮಣ್ಣ ರವರ ಗಮನಕ್ಕೆ ತಂದಿದ್ದು, ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಿದ್ದ ಮನವಿಯನ್ನು ತಕ್ಷಣವೇ ಪುರಸ್ಕರಿಸಿ ಆದೇಶ ಹೊರಡಿಸಿರುವುದು ಅಭಿನಂದನಾರ್ಹ ಕ್ರಮ.

ಕರ್ನಾಟಕ & ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಎಂದೆಂದಿಗೂ ಕಟಿಬದ್ಧವಾಗಿದೆ. ಇದರಿಂದ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವ ನಮ್ಮ ಕನ್ನಡದವರೇ ಆದ ಸಚಿವ ವಿ ಸೋಮಣ್ಣ ರವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ನೈಋತ್ಯ ರೈಲ್ವೆಯು ಸಹಾಯಕ ಲೋಕೋಪೈಲಟ್‌ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆಯ (ಜಿಡಿಸಿಇ) ಸುತ್ತೋಲೆ ಹೊರಡಿಸಿತ್ತು. ಆಗಸ್ಟ್ 3ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ಆಯ್ಕೆ ನೀಡಲಾಗಿದೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ಕನ್ನಡಿಗ ಅಭ್ಯರ್ಥಿಗಳಲ್ಲಿ ಆತಂಕ ಶುರುವಾಗಿತ್ತು. ಅಲ್ಲದೆ, ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಆದರೆ, ಇದೀಗ ಕನ್ನಡದಲ್ಲೂ ಪರೀಕ್ಷೆ ಬರೆಯಲು ರೈಲ್ವೆ ಇಲಾಖೆ ಅವಕಾಶ ನೀಡಿದೆ.

Continue Reading

ಮೈಸೂರು

Mysore News: ದೇವರ ಅನುಗ್ರಹ ದೊರೆತರೆ ಜೀವನದ ಎಲ್ಲ ತಾಪಗಳೂ ನಿವಾರಣೆ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

Mysore News: ಸೋಸಲೆ ಗ್ರಾಮದಲ್ಲಿ ಶುಕ್ರವಾರ ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, 8ನೇ ಚಾತುರ್ಮಾಸ ವ್ರತ ಸ್ವೀಕರಿಸಿ, ಹಸಿ ದರ್ಬಾರ್ ನಡೆಸಿ ಅನುಗ್ರಹ ಸಂದೇಶ ನೀಡಿದರು. ಚಾತುರ್ಮಾಸ ಸಂಕಲ್ಪಕ್ಕೂ ಮುನ್ನ ಸ್ವಾಮೀಜಿ, ಸಂಸ್ಥಾನ ಪ್ರತಿಮಾ ಶ್ರೀ ಮೂಲ ಗೋಪಾಲಕೃಷ್ಣದೇವರ ಪೂಜೆ ನೆರವೇರಿಸಿ, ಪರಂಪರೆಯ ಹಿರಿಯ ಗುರುಗಳ ವೃಂದಾವನಗಳಿಗೆ ಹಸ್ತೋದಕ ಸಮರ್ಪಣೆ ಮಾಡಿದರು. ವಿದ್ವಾಂಸರಿಂದ ವೇದಘೋಷವಾದನಂತರ ವ್ರತ ಸಂಕಲ್ಪ ಮಾಡಿದಾಗ ಶ್ರೀ ರಾಮೇಶ್ವರಂನಿಂದ ಆಗಮಿಸಿದ್ದ ಪ್ರಧಾನ ಅರ್ಚಕರು ಶ್ರೀಗಳಿಗೆ ದೇವರ ಪ್ರಸಾದ, ಪುಷ್ಪಮಾಲೆ ಪ್ರದಾನ ಮಾಡಿದರು.

VISTARANEWS.COM


on

Sri Vidyashreesha Theertha Swamiji ashirvachan at Vyasaraja Matha of Sosale village
Koo

ಮೈಸೂರು: ದೇವರ ಅನುಗ್ರಹ ದೊರೆತರೆ ಜೀವನದ ಎಲ್ಲ ತಾಪಗಳೂ ನಿವಾರಣೆ ಆಗುತ್ತವೆ ಎಂದು ಸೋಸಲೆ ಶ್ರೀ ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ಸೋಸಲೆ ಗ್ರಾಮದ ವ್ಯಾಸರಾಜರ ಮಠದಲ್ಲಿ ಶುಕ್ರವಾರ ವಿಧ್ಯುಕ್ತವಾಗಿ 8ನೇ ಚಾತುರ್ಮಾಸ ವ್ರತ ದೀಕ್ಷೆ ಸ್ವೀಕರಿಸಿ ಅಮೃತೋಪದೇಶ ನೀಡಿದ ಶ್ರೀಗಳು, ಸಮೃದ್ಧವಾಗಿ ಮಳೆ ಸುರಿದರೆ ಇಳೆ ತಂಪಾಗುತ್ತದೆ. ಹಲವು ರೀತಿಯ ಸಸ್ಯಗಳು ಹೂವು, ಕಾಯಿ, ಹಣ್ಣು ಬಿಡುತ್ತವೆ. ಹಾಗೆಯೇ ಶ್ರೀಕೃಷ್ಣನ ಕೃಪೆ ನಮ್ಮ ಮೇಲೆ ಬಿದ್ದರೆ ಸಂಕಷ್ಟಗಳೆಲ್ಲವೂ ಕರಗಿ ಜೀವನ ಸಮೃದ್ಧಿಯಾಗುತ್ತದೆ. ಆದ ಕಾರಣ ನಾವು ಬೇಡುವುದಾದರೆ ದೇವರ ಅನುಗ್ರಹವನ್ನೇ ಬೇಡೋಣ ಎಂದು ಅವರು ಹೇಳಿದರು.

ಇದನ್ನೂ ಓದಿ: Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

ಸಜ್ಜನರು, ಸಾಧಕರು, ತಪಸ್ವಿಗಳು ಮತ್ತು ಜ್ಞಾನಿಗಳು ಯಾವಾಗಲೂ ಚಾತಕ ಪಕ್ಷಿಗಳಂತೆ ಭಗವಂತನ ಕರುಣಾ ದೃಷ್ಟಿಗಾಗಿ ಕಾಯುತ್ತಿರುತ್ತಾರೆ. ಶ್ರೀಕೃಷ್ಣನೆಂಬ ಮೇಘವು ಅನುಗ್ರಹವೆಂಬ ಮಳೆಯನ್ನು ಸುರಿಸಲಿ ಎಂದು ಪ್ರಾರ್ಥಿಸುತ್ತಾರೆ. ಕೃಪೆಯ ವೃಷ್ಟಿಯಾದರೆ ಲೌಕಿಕ ಜೀವನದ ಯಾವ ಸಮಸ್ಯೆಗಳೂ ನಮ್ಮನ್ನು ಕಾಡಲಾರವು. ಆದಕಾರಣ ದಕ್ಷಿಣಾಯಣ ಪುಣ್ಯಕಾಲದ ಚಾತುರ್ಮಾಸ ವ್ರತ ಸ್ವೀಕಾರದ ಈ ಸಂದರ್ಭದಲ್ಲಿ ನಾವೆಲ್ಲರೂ ಭಗವಂತನ ಮಹಾಕೃಪೆಗಾಗಿ ಶ್ರದ್ಧೆಯಿಂದ ಪ್ರಾರ್ಥನೆ ಸಮರ್ಪಿಸೋಣ ಎಂದು ಶ್ರೀ ವಿದ್ಯಾಶ್ರೀಶ ತೀರ್ಥರು ಹೇಳಿದರು.

ಲೋಕಹಿತಕ್ಕಾಗಿ ಪ್ರಾರ್ಥನೆ ಮಾಡೋಣ

ಚಾತುರ್ಮಾಸ ಪರ್ಯಂತ ನಾವೆಲ್ಲರೂ ವ್ರತ, ನಿಯಮ ಮತ್ತು ಆಹಾರ ಪದ್ಧತಿ ಅನುಸರಿಸೋಣ. ಶಾರೀರಿಕವಾಗಿ, ಮಾನಸಿಕವಾಗಿ ಸದೃಢರಾಗಿ ಜ್ಞಾನ ಕಾರ್ಯಗಳನ್ನು ಹೆಚ್ಚಾಗಿ ನಡೆಸೋಣ. ಮಹಾಗುರು ಶ್ರೀ ವ್ಯಾಸರಾಜರು ಹೇಳಿದ ಮಾರ್ಗದಲ್ಲಿ ಸಾಗಿ, ಮುಖ್ಯಪ್ರಾಣನನ್ನು ಅನಂತವಾಗಿ ಅರ್ಚಿಸೋಣ. ನಮ್ಮ ಪರಂಪರೆಯ 8 ಯತಿಗಳು ವೃಂದಾನವಸ್ಥರಾಗಿರುವ ಈ ಕ್ಷೇತ್ರದಲ್ಲಿ ನಮ್ಮ ಶ್ರದ್ಧಾಪೂರ್ವಕ ಆಚರಣೆಗಳನ್ನು ಮಾಡುತ್ತಾ, ಲೋಕಹಿತಕ್ಕಾಗಿ ಪ್ರಾರ್ಥನೆ ಮಾಡೋಣ ಎಂದು ಶ್ರೀಗಳು ನುಡಿದರು.

ಮಹಾ ಸಂಸ್ಥಾನದ ದಿವಾನರಾದ ಬ್ರಹ್ಮಣ್ಯ ಆಚಾರ್ಯ, ಚಾತುರ್ಮಾಸ ಸಂಕಲ್ಪ ವಿಧಿಗಳನ್ನು ಪಠಿಸಿದರು. ಸೋಸಲೆ ಮಠದ ವ್ಯವಸ್ಥಾಪಕ ಶ್ರೀಧರ, ಸಿಇಒ ಬದರೀನಾಥ, ಬಲಸೇವೆ ಕೃಷ್ಣಾಚಾರ್ಯ, ಚಾತುರ್ಮಾಸ ಸಮಿತಿ ಮುಖ್ಯಸ್ಥ ರಾಯರ ಹುಂಡಿ ಆನಂದ ಆಚಾರ್ಯ, ಮಠಾಧಿಕಾರಿಗಳಾದ ಪವಮಾನಾಚಾರ್ಯ ಕಂಬಾಲೂರು ಮತ್ತು ವೆಂಕಟಣ್ಣ ಇತರರು ಹಾಜರಿದ್ದರು.

ಸಂಸ್ಥಾನ ಪೂಜೆ- ಹಸಿ ದರ್ಬಾರ್

ಚಾತುರ್ಮಾಸ ಸಂಕಲ್ಪಕ್ಕೂ ಮುನ್ನ ಸ್ವಾಮೀಜಿ, ಸಂಸ್ಥಾನ ಪ್ರತಿಮಾ ಶ್ರೀ ಮೂಲ ಗೋಪಾಲಕೃಷ್ಣದೇವರ ಪೂಜೆ ನೆರವೇರಿಸಿ, ಪರಂಪರೆಯ ಹಿರಿಯ ಗುರುಗಳ ವೃಂದಾವನಗಳಿಗೆ ಹಸ್ತೋದಕ ಸಮರ್ಪಣೆ ಮಾಡಿದರು. ವಿದ್ವಾಂಸರಿಂದ ವೇದಘೋಷವಾದನಂತರ ವ್ರತ ಸಂಕಲ್ಪ ಮಾಡಿದಾಗ ಶ್ರೀ ರಾಮೇಶ್ವರಂನಿಂದ ಆಗಮಿಸಿದ್ದ ಪ್ರಧಾನ ಅರ್ಚಕರು ಶ್ರೀಗಳಿಗೆ ದೇವರ ಪ್ರಸಾದ, ಪುಷ್ಪಮಾಲೆ ಪ್ರದಾನ ಮಾಡಿದರು. ನಂತರ ವಿಶೇಷ ವೇದಿಕೆಯಲ್ಲಿ ಶ್ರೀಗಳು ಸಾಂಪ್ರದಾಯಿಕ ವಸ್ತ್ರ, ಪೇಟಾ ಧರಿಸಿ ಹಸಿ ದರ್ಬಾರ್ ನಡೆಸಿ, ನೂರಾರು ಭಕ್ತರಿಗೆ ಮಂತ್ರಾಕ್ಷತೆ ಅನುಗ್ರಹ ಮಾಡಿದ್ದು ವಿಶೇಷವಾಗಿತ್ತು.

Continue Reading

ಮಳೆ

Koppala News: ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು; ನದಿಪಾತ್ರದ ಗ್ರಾಮಗಳಿಗೆ ತಂಗಡಗಿ ಭೇಟಿ

Koppala News: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣ ನೀರು ನದಿಗೆ ಹರಿಸುತ್ತಿರುವ ಪರಿಣಾಮ ಕಂಪ್ಲಿ ಸೇತುವೆ ಮುಳಗಡೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

VISTARANEWS.COM


on

Minister Shivaraj tangadagi visited and inspected Tungabhadra river side villages
Koo

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣ ನೀರು ನದಿಗೆ ಹರಿಸುತ್ತಿರುವ ಪರಿಣಾಮ ಕಂಪ್ಲಿ ಸೇತುವೆ ಮುಳಗಡೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶುಕ್ರವಾರ ಭೇಟಿ ನೀಡಿ ಪರಿಶೀಲನೆ (Koppala News) ನಡೆಸಿದರು.

ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಿಂದ ಪಂಪ್ ಮೂಲಕ ಕನಕಗಿರಿ ಕ್ಷೇತ್ರದ ನಾನಾ ಗ್ರಾಮಗಳ ಕೆರೆ ತುಂಬಿಸುವ ಯೋಜನೆಯಡಿ ಕೈಗೊಂಡ ಕಾಮಗಾರಿಗೆ ನದಿಪ್ರವಾಹದಿಂದ ಏನಾದರೂ ಧಕ್ಕೆಯಾಗಿದೆಯೇ ಎಂದು ಸಚಿವ ಖುದ್ದು ನೀರಿನಲ್ಲಿ ಇಳಿದು ವೀಕ್ಷಣೆ ಮಾಡಿದರು.

ಸ್ಥಳದಲ್ಲಿದ್ದ ಗಂಗಾವತಿ ತಹಸೀಲ್ದಾರ್ ಯು. ನಾಗರಾಜ್ ಹಾಗೂ ಕಂದಾಯ ಅಧಿಕಾರಿಗಳಿಂದ, ನದಿಯಲ್ಲಿನ ಪ್ರವಾಹದಿಂದ ಜನರ ವಸತಿ, ಜಾನುವಾರು ಪ್ರಾಣಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಿದೆಯೇ ಎಂಬ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

ನಿತ್ಯ ಕಂಪ್ಲಿ-ಗಂಗಾವತಿ ಮಧ್ಯೆ ಸಾವಿರಾರು ಜನ ಚಿಕಿತ್ಸೆ, ವ್ಯಾಪಾರ ವಹಿವಾಟು, ಮಕ್ಕಳು ಶಾಲಾ-ಕಾಲೇಜು ಸೇರಿದಂತೆ ನಾನಾ ಕಾರಣಕ್ಕೆ ಓಡಾಡುತ್ತಿದ್ದು, ಕಂಪ್ಲಿ ಸೇತುವೆ ಮುಳಗಡೆಯಿಂದಾಗಿ ಜನರಿಗೆ ಭಾರೀ ಸಮಸ್ಯೆಯಾಗಿದೆ ಎಂದು ಸ್ಥಳೀಯರು ತಿಳಿಸಿದರು.

ಅಲ್ಲದೇ ನದಿಯಲ್ಲಿ ಪ್ರವಾಹ ಉಂಟಾದ ಕಾರಣಕ್ಕೆ ನದಿ ಪಾತ್ರದ ಗ್ರಾಮಗಳ ಹೊಲ-ಗದ್ದೆ, ತೋಟಗಳಿಗೆ ಹಾನಿಯಾಗಿದೆ. ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ಅಧಿಕಾರಿಗಳು ಇದುವರೆಗೂ ಸಮೀಕ್ಷೆ ನಡೆಸಿಲ್ಲ ಎಂದು ಸ್ಥಳೀಯ ರೈತರು ಈ ಸಂದರ್ಭದಲ್ಲಿ ಸಚಿವರ ಬಳಿ ಅಳಲು ತೋಡಿಕೊಂಡರು.

ಈ ಬಗ್ಗೆ ಮಾತನಾಡಿದ ಸಚಿವ, ಶನಿವಾರ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ತಾಲೂಕಿನ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಕೃಷಿ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಿದ್ದೇನೆ. ಸಭೆಯಲ್ಲಿ ಮಳೆ ಕೊರತೆಯಿಂದ ಮಳೆಯಾಶ್ರಿತ ಪ್ರದೇಶದಲ್ಲಾದ ಹಾನಿಯ ಬಗ್ಗೆ ಚರ್ಚಿಸಲಾಗುವುದು. ಅಲ್ಲದೇ ನದಿಗೆ ಹೆಚ್ಚುವರಿ ನೀರು ಹರಿಸಿದ್ದರಿಂದ ಆಗಿರುವ ಹಾನಿಯ ಬಗ್ಗೆಯೂ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ತುಂಗಭದ್ರಾ ಜಲಾಶಯದಿಂದ ನದಿಗೆ ನಿತ್ಯ ಎರಡು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಸಿದರೆ ನದಿಪಾತ್ರದ ಗ್ರಾಮಗಳಿಗೆ ಮತ್ತು ಹೊಲ-ಗದ್ದೆಗಳಿಗೆ ಹಾನಿಯಾಗಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇದನ್ನೂ ಓದಿ: Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

ಸೇತುವೆ ಬಗ್ಗೆ ಸಿಎಂ ಗಮನಕ್ಕೆ

ನದಿಗೆ ನೀರು ಬಿಟ್ಟಾಗಲೊಮ್ಮೆ ಕಂಪ್ಲಿ ಸೇತುವೆ ಮುಳಗಡೆಯಾಗಿ ಸಂಚಾರಕ್ಕೆ ತೊಂದರೆಯಾಗಿ ಎರಡು ಜಿಲ್ಲೆಯ ಜನ ಪರದಾಡುತ್ತಿರುವ ಬಗ್ಗೆ ಈಗಾಗಲೆ ಸಿಎಂ ಗಮನಕ್ಕೆ ತರಲಾಗಿದೆ. ಸೇತುವೆಯ ಎತ್ತರವನ್ನು ಇನ್ನಷ್ಟು ಹೆಚ್ಚಿಸಬೇಕಿದೆ. ಇಲ್ಲಿನ ಸಮಗ್ರ ಮಾಹಿತಿಯನ್ನು ವರದಿ ರೂಪದಲ್ಲಿ ಸಿಎಂ ಗಮನಕ್ಕೆ ತರಲಾಗುವುದು ಎಂದು ಸಚಿವ ಹೇಳಿದರು.

Continue Reading

ಕರ್ನಾಟಕ

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ; ದರ್ಶನ್‌ ಗ್ಯಾಂಗ್ ವಿರುದ್ಧ ದೂರು

ರೇಣುಕಾಸ್ವಾಮಿ ಕೊಲೆ‌ ಪ್ರಕರಣದಲ್ಲಿ ದಿನೇ ದಿನೇ ಹೊಸ ಹೊಸ ವಿಷ್ಯಗಳು ಹೊರಬರುತ್ತಿವೆ. ಇದರ ನಡುವೆ ಜೈಲಿನಲ್ಲಿದ್ದುಕೊಂಡೇ ದರ್ಶನ್ ಅಂಡ್ ಗ್ಯಾಂಗ್ ಬೆದರಿಕೆ ಹಾಕಿರೋದು ಬೆಳಕಿಗೆ ಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಸಾಕ್ಷಿದಾರ ದೂರು ದಾಖಲಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿ ಮಾಡಲು ಪೊಲೀಸರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಈ ಮಧ್ಯೆ ಚಾರ್ಜ್ ಶೀಟ್ ಸಲ್ಲಿಕೆಗೆ ಪ್ರಮುಖ ಸಾಕ್ಷಿದಾರ ಪೊಲೀಸರಿಗೆ ಸಿಕ್ಕಂತಾಗಿದೆ. ಆದರೆ, ಜೈಲಿನಿಂದಲೇ ಕೆಲ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಕೆಲಸವೂ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ದರ್ಶನ್‌ ಗ್ಯಾಂಗ್‌ (Actor Darshan) ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೈಲಿನಲ್ಲಿದ್ದುಕೊಂಡೇ ದರ್ಶನ್ ಅಂಡ್ ಗ್ಯಾಂಗ್ ಬೆದರಿಕೆ ಹಾಕಿರೋದು ಬೆಳಕಿಗೆ ಬಂದಿದೆ. ಕೊಲೆ‌ ಪ್ರಕರಣದ‌ ಪ್ರಮುಖ ಸಾಕ್ಷಿಯಾಗಿರೋ ವ್ಯಕ್ತಿಗೆ ಸಾಕ್ಷಿ ನುಡಿಯದಂತೆ ಡಿ ಗ್ಯಾಂಗ್ ಬೆದರಿಕೆ ಹಾಕಿದೆ ಎನ್ನಲಾಗಿದೆ. ಸದ್ಯ ಬೆದರಿಕೆ ಸಂಬಂಧ ಸಾಕ್ಷಿದಾರ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕರೆಂಟ್ ಶಾಕ್ ಕೊಡಲು ಆನ್‌ಲೈನ್‌ನಲ್ಲಿ ಮೆಗ್ಗರ್‌ ಡಿವೈಸ್‌ ಖರೀದಿ

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆಯಲ್ಲಿ‌ ಪ್ರಮುಖವಾಗಿ ಬಳಸಿರೋ‌ ಸಾಧನ ಮೆಗ್ಗರ್ ಬಗ್ಗೆ ಮಹತ್ವದ ಮಾಹಿತಿ ತಿಳಿಸದುಬಂದಿದೆ. ಕರೆಂಟ್ ಶಾಕ್ ನೀಡಲೆಂದೇ ಮೆಗ್ಗರ್ ಅನ್ನು ಖರೀದಿ‌ ಮಾಡಿರೋದು ತನಿಖೆ ವೇಳೆ ಬೆಳಕಿಗೆ. ಪ್ರಕರಣದ ಆರೋಪಿ ಧನರಾಜ್‌ ಅಮೆಜಾನ್‌ನಲ್ಲಿ ಮೆಗ್ಗರ್ ಡಿವೈಸ್ ಬುಕ್ ಮಾಡಿದ್ದು, ಅದರ ಬೆಲೆ 699 ರೂಪಾಯಿಗಳಾಗಿದೆ. ಇನ್ನು ಬುಕ್ ಮಾಡಿದ ಮೆಗ್ಗರ್ ಅನ್ನು ಸ್ವೀಕರಿಸುವ ವೇಳೆ ಸ್ಕ್ಯಾನರ್ ಮೂಲಕ ಹಣ ಪೇ ಮಾಡಲು ಧನರಾಜ್ ಯತ್ನಿಸಿದ್ದ. ಆದರೆ ಅಮೆಜಾನ್ ಪೇ ಕೋಡ್‌ ಸ್ಕ್ಯಾನ್ ಮಾಡಿದ ವೇಳೆ ಹಣ ಸೆಂಡ್ ಆಗದ ಕಾರಣ ಆನ್ ಲೈನ್ ಮೂಲಕ ಹಣವನ್ನು ಕಳುಹಿಸಿದ್ದ ಧನರಾಜ್. ಆ ಹಣವನ್ನು ಡೆಲಿವರಿ ಬಾಯ್ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದು ಕಂಪನಿಗೆ ನೀಡಿದ್ದ. ಸದ್ಯ ಆ ಮಾಹಿತಿ ಕಲೆ ಹಾಕಿರೋ ಪೊಲೀಸರು ಮೆಗ್ಗರ್ ಡಿವೈಸ್ ಧನರಾಜ್‌ಗೆ ತಂದುಕೊಟ್ಟ ಡೆಲಿವರಿ ಬಾಯ್‌ನ ವಿಚಾರಣೆ ಮಾಡಿ ಆತನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಅಲ್ಲದೇ ರೇಣುಕಾಸ್ವಾಮಿ ಸೋಷಿಯಲ್ ಮೀಡಿಯಾ ಡೇಟಾ ರಿಟ್ರೀವ್ ಆಗಿದೆ. ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ, ವಾಟ್ಸ್‌ ಆ್ಯಪ್ ಡೇಟಾವನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಪಶ್ಚಿಮ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ ರಿಟ್ರೀವ್ ಆಗಿದ್ದು, ಪೆನ್ ಡ್ರೈವ್‌ನಲ್ಲಿ ಡೇಟಾ ಸಂಗ್ರಹಿಸಿ ಪಂಚನಾಮೆ ಮಾಡಲಾಗಿದೆ. ಈ ಮಧ್ಯೆ ಮೃತ ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶಗಳ ಪರಿಶೀಲನೆ ಮಾಡಲಾಗಿದ್ದು, ಇದು ಕೂಡ ಪ್ರಮುಖ ಸಾಕ್ಷ್ಯವಾಗಿದ್ದು, ರೇಣುಕಾಸ್ವಾಮಿ ಮಾಡಿದ್ದ ಚಾಟಿಂಗ್‌ನಿಂದಲೇ ಕೊಲೆಗೆ ಪ್ರಮುಖ ಕಾರಣ ಎಂಬುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಆ. 20ರವರೆಗೆ ಜೈಲೂಟವೇ ಫಿಕ್ಸ್‌; ವಿಚಾರಣೆ ಮುಂದೂಡಿದ ಹೈಕೋರ್ಟ್

ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್‌ ಮತ್ತು ಗ್ಯಾಂಗ್‌ಗೆ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದ ಬೆನ್ನಲ್ಲೇ ಗುರುವಾರ ನ್ಯಾಯಾಂಗ ಬಂಧನವನ್ನು ಕೋರ್ಟ್‌ ವಿಸ್ತರಿಸಿತ್ತು.

ಆಗಸ್ಟ್​ 1ರಂದು ಕೇಸ್​ನ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದ ನ್ಯಾಯಾಧೀಶರು ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದ್ದರು. ಪವಿತ್ರಾ ಗೌಡ, ದರ್ಶನ್​ ಸೇರಿದಂತೆ ಪರಪ್ಪನ ಆಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ ನಾಲ್ವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

Continue Reading
Advertisement
African Culture
ವಿದೇಶ5 mins ago

Breast Ironing: ಆಫ್ರಿಕಾದಲ್ಲಿದೆ ಬಿಸಿ ವಸ್ತುಗಳಿಂದ ಯುವತಿಯರ ಸ್ತನ ಚಪ್ಪಟೆಗೊಳಿಸುವ ಕ್ರೂರ ಪದ್ಧತಿ!

high-speed road corridor
ಪ್ರಮುಖ ಸುದ್ದಿ7 mins ago

High Speed Road Corridor : 8 ಹೊಸ ಹೈಸ್ಪೀಡ್​ ರೋಡ್​ ಕಾರಿರಾಡ್​ಗೆ ಒಪ್ಪಿಗೆ ಕೊಟ್ಟ ಕೇಂದ್ರ ಸರ್ಕಾರ

RRB ALP Recruitment
ಕರ್ನಾಟಕ10 mins ago

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ

Sri Vidyashreesha Theertha Swamiji ashirvachan at Vyasaraja Matha of Sosale village
ಮೈಸೂರು18 mins ago

Mysore News: ದೇವರ ಅನುಗ್ರಹ ದೊರೆತರೆ ಜೀವನದ ಎಲ್ಲ ತಾಪಗಳೂ ನಿವಾರಣೆ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

Minister Shivaraj tangadagi visited and inspected Tungabhadra river side villages
ಮಳೆ21 mins ago

Koppala News: ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು; ನದಿಪಾತ್ರದ ಗ್ರಾಮಗಳಿಗೆ ತಂಗಡಗಿ ಭೇಟಿ

Space mission
ಪ್ರಮುಖ ಸುದ್ದಿ34 mins ago

Space mission : ಇಂಡೊ- ಯುಎಸ್​ ಬಾಹ್ಯಾಕಾಶ ಯಾನಕ್ಕೆ ಭಾರತದ ಶುಭಾಂಶು ಶುಕ್ಲಾ ‘ಪ್ರಧಾನ ಗಗನಯಾತ್ರಿ’

Actor Darshan
ಕರ್ನಾಟಕ45 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ; ದರ್ಶನ್‌ ಗ್ಯಾಂಗ್ ವಿರುದ್ಧ ದೂರು

Fashion workshop
ಫ್ಯಾಷನ್51 mins ago

Fashion Workshop: ಬೆಂಗಳೂರಲ್ಲಿ ಜಪಾನಿನ ಖ್ಯಾತ ಡಿಸೈನರ್‌ ಶಿಂಗೊ ಸಾಟೊ ಫ್ಯಾಷನ್‌ ಕ್ಲಾಸ್‌!

Paris Olympics 2024
ಕ್ರೀಡೆ1 hour ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ 8ನೇ ದಿನವಾದ ಶನಿವಾರ ಭಾರತದ ಸ್ಪರ್ಧೆಗಳ ವಿವರ ಇಲ್ಲಿದೆ

Kasturirangan Report
ಕರ್ನಾಟಕ1 hour ago

Kasturirangan Report: ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಎಂದ ಸಿಎಂ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌