Site icon Vistara News

Election 2023 | ಎಚ್‌.ಡಿ. ಕುಮಾರಸ್ವಾಮಿ ಮುಂದಿನ ಸಿಎಂ ಆಗಲಿ; ಎಚ್‌ಡಿಕೆ ಫೋಟೊ ಇಟ್ಟು ಲಕ್ಷ್ಮೀ ಪೂಜೆ ಮಾಡಿದ ಅಭಿಮಾನಿ!

koppala hd kumaraswamy pooje

ಕೊಪ್ಪಳ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Election 2023) ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕು. ಪ್ರಾದೇಶಿಕ ಪಕ್ಷಕ್ಕೆ ಬೆಂಬಲ ಸಿಗಬೇಕು. ರೈತರ ಬಗ್ಗೆ ಕಾಳಜಿ ಇರುವ ಏಕೈಕ ವ್ಯಕ್ತಿ ಅಂದರೆ ಅವರೇ ಎಂದು ಎಚ್‌ಡಿಕೆ ಅಭಿಮಾನಿಯೊಬ್ಬರು ದೀಪಾವಳಿ ಹಬ್ಬದ ನಿಮಿತ್ತ ಮಾಡಲಾದ ಲಕ್ಷ್ಮಿಪೂಜೆ ವೇಳೆ ಎಚ್.ಡಿ. ಕುಮಾರಸ್ವಾಮಿ ಫೋಟೊ ಇಟ್ಟು ಪೂಜೆ ಸಲ್ಲಿಸಿದ್ದಾರೆ.

ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ನಿವಾಸಿ ನಿಂಗಪ್ಪ ವಿ. ಜಿಗೇರಿ ಎಂಬುವರೇ ಎಚ್‌.ಡಿ. ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಯಲ್ಲಿ ಆರಿಸಿಬಂದು ಮುಖ್ಯಮಂತ್ರಿ ಆಗಬೇಕೆಂದು ಲಕ್ಷ್ಮೀದೇವಿಯ ಬಳಿ ಕೋರಿದವರಾಗಿದ್ದಾರೆ.

೨೦೨೩ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರಸಕ್ತ ಬಾರಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಅವಕಾಶ ಮಾಡಿಕೊಡಬೇಕು. ಅವರನ್ನು ಜನ ಬೆಂಬಲಿಸಬೇಕು. ರೈತರ ಬಗ್ಗೆ ಕಾಳಜಿ ಇರುವ ಏಕೈಕ ವ್ಯಕ್ತಿ ಇವರಾಗಿದ್ದಾರೆ. ಎಲ್ಲ ಪಕ್ಷದವರಿಗೆ ಒಂದು ಬಾರಿ ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಜೆಡಿಎಸ್‌ಗೆ ಅವಕಾಶ ಮಾಡಿಕೊಡಬೇಕು ಎಂದು ದೇವರ ಬಳಿ ಮೊರೆ ಇಟ್ಟಿರುವ ನಿಂಗಪ್ಪ, ಮತದಾರರಲ್ಲೂ ಮನವಿ ಮಾಡಿದ್ದಾರೆ.

ಇದನ್ನೂ ಓದಿ | ಜಿ.ಟಿ. ದೇವೇಗೌಡ ಮನೆ ಬಾಗಿಲಿಗೆ ಎಚ್‌.ಡಿ. ದೇವೇಗೌಡ; ಕಾಲಿಗೆ ಬಿದ್ದು ಕಣ್ಣೀರಿಟ್ಟ ಜಿಟಿಡಿ, ಮುಗಿದ ಮುನಿಸು

Exit mobile version