Site icon Vistara News

Self Harming: ಡಿಕೆಶಿ ಸ್ವಕ್ಷೇತ್ರದ ತಾಲೂಕು ಕಚೇರಿಯಲ್ಲಿ ಚುನಾವಣೆ ಶಾಖಾಧಿಕಾರಿ ಆತ್ಮಹತ್ಯೆ

self harming in kanakapura

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸ್ವಕ್ಷೇತ್ರ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣೆ ಶಾಖಾಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ (Self Harming) ಶುಕ್ರವಾರ ನಡೆದಿದೆ. ತಹಸೀಲ್ದಾರ್‌ ಸ್ಮಿತಾ ರಾಮು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕನಕಪುರ ಚುನಾವಣೆ ಶಾಖಾಧಿಕಾರಿ ಸುರೇಶ್ (50) ಆತ್ಮಹತ್ಯೆ‌ ಮಾಡಿಕೊಂಡವರು. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ್ದರಿಂದ ಕನಕಪುರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಮೇಲಧಿಕಾರಿ ಕಿಕುಳದಿಂದಲೇ ಸಾವಿಗೀಡಾಗಿರುವ ಆರೋಪ ಕೇಳಿಬಂದಿದೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಾಗಿದೆ.

ಚುನಾವಣೆ ಶಾಖಾಧಿಕಾರಿ ಸುರೇಶ್

ಮೇಲಧಿಕಾರಿ ಕಿರುಕುಳದಿಂದ ಆತ್ಮಹತ್ಯೆ?

ಡೆತ್ ನೋಟ್ ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಸಾವಿಗೆ ಕನಕಪುರ ಚುನಾವಣಾ ಶಿರಸ್ತೇದಾರ್ ಪೂರ್ಣಿಮಾ ಕಾರಣ ಎಂದು ಆರೋಪಿಸಿರುವುದರಿಂದ ಪೂರ್ಣಿಮಾ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡೆತ್ ನೋಟ್ ಹಾಗೂ ಮೃತ ಕುಟುಬಸ್ಥರು ನೀಡಿದ ದೂರಿನ ಮೇರೆಗೆ ಪೂರ್ಣಿಮಾ ಅವರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ | BMTC Accident: ಕಿಲ್ಲರ್ ಬಿಎಂಟಿಸಿಗೆ ವಿದ್ಯಾರ್ಥಿನಿ ಬಲಿ; ಹರಿಶ್ಚಂದ್ರ ಘಾಟ್‌ ಬಳಿ ಅಪಘಾತ

ಟ್ರ್ಯಾಕ್ಟರ್‌ಗೆ ಹಿಂದಿನಿಂದ ಗುದ್ದಿ ಪಲ್ಟಿ ಹೊಡೆದ ರಾಜಹಂಸ; 10ಕ್ಕೂ ಹೆಚ್ಚು ಮಂದಿಗೆ ಗಾಯ

Rajahamsa bus Road accident in Chitradurga

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೀರೆಹಳ್ಳಿ ಬಳಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ರಾಜಹಂಸ ಬಸ್ ಡಿಕ್ಕಿ (Road Accident) ಹೊಡೆದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೀರೆಹಳ್ಳಿ ಬಳಿ ವೇಗವಾಗಿ ಹೋಗುತ್ತಿದ್ದ ಬಸ್‌ ನಿಯಂತ್ರಣ ತಪ್ಪಿದೆ. ಹೀಗಾಗಿ ಮುಂಬದಿ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬೆಂಗಳೂರಿನಿಂದ ಗುಲ್ಬರ್ಗಕ್ಕೆ ಮದುವೆ ಟ್ರಿಪ್ ಹೋಗಿದ್ದ ಬಸ್ ಇದಾಗಿತ್ತು. ಮದುವೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬಸ್ಸಿನಲ್ಲಿದ್ದ ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಆರೋಪಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನ ಚಳ್ಳಕೆರೆ ಮತ್ತು ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪಿಎಸ್ಐ ಗಾದಿಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎತ್ತಿನ ಗಾಡಿಗೆ ಗುದ್ದಿದ ತರಕಾರಿ ವಾಹನ; ಮಹಿಳೆ ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ

ಬೆಳಗಾವಿ: ಜಿಲ್ಲೆಯ ರಾಮದುರ್ಗ ‌ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ‌ತರಕಾರಿ ‌ವಾಹನ ಹಾಗೂ ಎತ್ತಿನ ಗಾಡಿ ‌ಮಧ್ಯೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಎತ್ತಿನ ಬಂಡಿಗೆ ತರಕಾರಿ ವಾಹನವು ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿಯಲ್ಲಿ ಹೊಲಕ್ಕೆ ಹೊರಟಿದ್ದ ರೈತ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಮದುರ್ಗ ‌ತಾಲೂಕಿನ ಕಾಮನಕೊಪ್ಪ ಗ್ರಾಮದ ಯಮನವ್ವ ಮಡ್ಡಿ (42) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಸುರೇಶ್‌ ಮಡ್ಡಿ, ಅಡಿವೆಪ್ಪ ಜೀರಗಾಳ, ಮಂಜುಳಾ ಜೀರಗಾಳ, ಶಿವಕ್ಕ ಜೀರಗಾಳ ಎಂಬುವವರಿಗೆ ಗಾಯಗಳಾಗಿವೆ.

ಇದನ್ನೂ ಓದಿ | Missing Case: ಮೂವರು ಮಕ್ಕಳೊಂದಿಗೆ ಬೆಂಗಳೂರಿಗೆ ಹೊರಟ ಮಹಿಳೆ ನಾಪತ್ತೆ

ಬಸವನಬಾಗೇವಾಡಿಯಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ತರಕಾರಿ ವಾಹನವು ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಎತ್ತಿನ ಬಂಡಿಗೆ ಬಂದು ಗುದ್ದಿದೆ ಎನ್ನಲಾಗಿದೆ. ಸ್ಥಳಕ್ಕೆ ‌ಕಡಕೋಳ ಠಾಣೆ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಳ್ಳಲಾಗಿದೆ.

Exit mobile version