ಎಲೆಕ್ಷನ್ ಹವಾ | ತೀರ್ಥಹಳ್ಳಿ | ಗೃಹಸಚಿವ ಆರಗ ಜ್ಞಾನೇಂದ್ರ ತವರೂರಿನಲ್ಲಿ ಕಾಂಗ್ರೆಸ್‌ನದ್ದು ಒಡೆದ ಮನೆ - Vistara News

ಕರ್ನಾಟಕ

ಎಲೆಕ್ಷನ್ ಹವಾ | ತೀರ್ಥಹಳ್ಳಿ | ಗೃಹಸಚಿವ ಆರಗ ಜ್ಞಾನೇಂದ್ರ ತವರೂರಿನಲ್ಲಿ ಕಾಂಗ್ರೆಸ್‌ನದ್ದು ಒಡೆದ ಮನೆ

ತೀರ್ಥಹಳ್ಳಿ ಹಾಲಿ ಶಾಸಕರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಗೆಲ್ಲುವ ಮೂಲಕ ಅತಿ ಹೆಚ್ಚು ಬಾರಿ ಗೆದ್ದಿರುವ ಶಾಸಕರಾಗಿದ್ದಾರೆ. ಈ ನಡುವೆ ಪ್ರತಿಪಕ್ಷದಲ್ಲಿ ಸ್ಪಷ್ಟ ಬಿರುಕು ಕಾಣಿಸಿಕೊಂಡಿದೆ.

VISTARANEWS.COM


on

Tirthahalli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿವೇಕ ಮಹಾಲೆ, ಶಿವಮೊಗ್ಗ
ತುಂಗಾ ನದಿ ತಟದಲ್ಲಿರುವ ಅಪ್ಪಟ ಮಲೆನಾಡ ಕ್ಷೇತ್ರ ತೀರ್ಥಹಳ್ಳಿ. ಈ ವಿಧಾನಸಭಾ ಕ್ಷೇತ್ರದ್ದು ವಿಭಿನ್ನ ದಾಖಲೆ. ಇಲ್ಲಿ ಗೆದ್ದು ಶಾಸಕರಾದವರು ಸಿಎಂ ಹುದ್ದೆಯಿಂದ ಸ್ಪೀಕರ್ ತನಕ ಎಲ್ಲ ಜವಾಬ್ದಾರಿ ನಿಭಾಯಿಸಿದ್ದಾರೆ. ಮುಖ್ಯಮಂತ್ರಿಯಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ, ವಿಧಾನಸಭೆಯ ಸ್ಪೀಕರ್ ಆಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಮೂರು ತಾಲೂಕುಗಳ ವ್ಯಾಪ್ತಿಯಲ್ಲಿ ಹಬ್ಬಿದ ತೀರ್ಥಹಳ್ಳಿಯು ರಾಜ್ಯದ ಅತಿದೊಡ್ಡ ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು. ಈ ಹಿಂದೆ ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವೆನಿಸಿತ್ತು. ಆದರೆ, 2008ರಲ್ಲಿ ನಡೆದ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಹೊಸನಗರ ಕ್ಷೇತ್ರ ಇತಿಹಾಸದ ಪುಟಕ್ಕೆ ಸೇರಿದೆ.

ಚುನಾವಣೆ ಇತಿಹಾಸ
ತೀರ್ಥಹಳ್ಳಿ ಕ್ಷೇತ್ರದಿಂದ ಕಳೆದ 14 ಚುನಾವಣೆಗಳಲ್ಲಿ ಕಾಂಗ್ರೆಸ್‌ 5 ಬಾರಿ, ಬಿಜೆಪಿ 4 ಬಾರಿ, ಸಮಾಜವಾದಿ ಪಾರ್ಟಿ 3 ಬಾರಿ, ಜನತಾ ಪಕ್ಷ ಮತ್ತು ಜನತಾ ದಳ ತಲಾ ಒಮ್ಮೆ ಜಯಗಳಿಸಿದೆ. ಮೈಸೂರು ರಾಜ್ಯವಿದ್ದಾಗ ಮೊದಲ ವಿಧಾಸಭೆಗೆ ತೀರ್ಥಹಳ್ಳಿಯಿಂದ ಕಡಿದಾಳು ಮಂಜಪ್ಪ ಆಯ್ಕೆಯಾಗಿದ್ದರು. ಕರ್ನಾಟಕ ರಾಜ್ಯ ಉದಯವಾದ ನಂತರ 1957ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎ.ಆರ್. ಬದ್ರಿನಾರಾಯಣ ಗೆದ್ದಿದ್ದರು. ಹಾಲಿ ಶಾಸಕರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಗೆಲ್ಲುವ ಮೂಲಕ ಅತಿ ಹೆಚ್ಚು ಬಾರಿ ಗೆದ್ದಿರುವ ಶಾಸಕರಾಗಿದ್ದಾರೆ. 1994ರಲ್ಲಿ ಮೊದಲು ಗೆಲುವು ದಾಖಲಿಸಿದ್ದ ಆರಗ ಜ್ಞಾನೇಂದ್ರ ಸತತ ಮೂರು ಚುನಾವಣೆಯಲ್ಲಿ ಜಯಗಳಿಸಿದ್ದರು. ಆದರೆ, 2008 ಮತ್ತು 2013ರಲ್ಲಿ ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ ಗೆದ್ದಿದ್ದರು. ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಕಿಮ್ಮನೆ ರತ್ನಾಕರ ಅವರ ಹ್ಯಾಟ್ರಿಕ್ ಸಾಧನೆಯ ಕನಸಿಗೆ 2018ರ ಚುನಾವಣೆಯಲ್ಲಿ ಆರಗ ಜ್ಞಾನೇಂದ್ರ ತಣ್ಣೀರೆರೆಚಿದರು.

ಹಿರಿಯ ಶಾಸಕನಿಗೆ ಕೊನೆಗೂ ಮಂತ್ರಿ ಪಟ್ಟ
ಸುಮಾರು 40 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದ್ದ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಕೊನೆಗೂ ಸಚಿವರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಗೃಹಮಂತ್ರಿಯಾಗಿದ್ದಾರೆ. ಒಟ್ಟು 9 ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಜ್ಞಾನೇಂದ್ರ 4 ಬಾರಿ ಗೆಲುವು ಸಾಧಿಸಿದ್ದಾರೆ. 1983ರ ಚುನಾವಣೆಯಲ್ಲಿ ಬಿ. ಎಸ್. ಯಡಿಯೂರಪ್ಪ ಜತೆ ಚುನಾವಣೆಗೆ ಸ್ಪರ್ಧೆ ಮಾಡಿದ ಕೆಲವೇ ನಾಯಕರಲ್ಲಿ ಆರಗ ಜ್ಞಾನೇಂದ್ರ ಸಹ ಒಬ್ಬರು. ಆದರೆ ಜಿಲ್ಲೆಯವರೇ ಆದ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ಲಭಿಸುತ್ತಿದ್ದರಿಂದ ಜಿಲ್ಲೆಯ ಕೋಟಾದಡಿ ಆರಗ ಜ್ಞಾನೇಂದ್ರ ಅವರಿಗೆ ಸಚಿವಗಿರಿ ಕೈತಪ್ಪುತ್ತಿತ್ತು. ಪಕ್ಷನಿಷ್ಠೆ, ಜನಪರ ಹೋರಾಟ, ಸರಳ ಜೀವನ ಶೈಲಿ, ಜನರೊಂದಿಗೆ ಸದಾ ಬೆರೆಯುವ ಆರಗ ಜ್ಞಾನೇಂದ್ರಗೆ ಇಷ್ಟು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದಕ್ಕೆ ಈಗ ಸಚಿವ ಸ್ಥಾನ ಸಿಕ್ಕಿದೆ.

ಕಿಮ್ಮನೆ ವರ್ಸಸ್ ಆರ್‌ಎಂಎಂ
ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಗೃಹಸಚಿವ ಆರಗ ಜ್ಞಾನೇಂದ್ರ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ ಮತ್ತು ಜೆಡಿಎಸ್‌ನಿಂದ ವಲಸೆ ಬಂದಿರುವ ಆರ್.ಎಂ. ಮಂಜುನಾಥಗೌಡ ಅವರ ನಡುವೆ ಟಿಕೆಟ್ಗಾಗಿ ಪೈಪೋಟಿ ನಡೆದಿದೆ. ಇವರಿಬ್ಬರೂ ಹಾವು-ಮುಂಗುಸಿಯಂತೆ ಕ್ಷೇತ್ರದಲ್ಲಿ ವರ್ತಿಸುತ್ತಿರುವುದು ಕಾಂಗ್ರೆಸ್ಸಿಗೆ ತಲೆನೋವಾಗಿ ಪರಿಣಮಿಸಿದೆ.

2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಆರ್.ಎಂ. ಮಂಜುನಾಥಗೌಡ ನಂತರ 2018ರ ಚುನಾವಣೆಗೆ ಟಿಕೆಟ್ ಆಕಾಂಕ್ಷಿತರಾಗಿ ಅಂದು ಇಂಧನ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮೂಲಕ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಆದರೆ, ಅಂತಿಮ ಸಮಯದಲ್ಲಿ ಹಾಲಿ ಶಾಸಕರಾಗಿದ್ದ ಕಿಮ್ಮನೆ ರತ್ನಾಕರ ಅವರಿಗೇ ಟಿಕೆಟ್ ಖಾತ್ರಿಯಾದಾಗ ಜೆಡಿಎಸ್‌ನಿಂದ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು. ಇದೀಗ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಅವರ ಮೂಲಕ ಮತ್ತೊಮ್ಮೆ ಟಿಕೆಟ್ ಆಕಾಂಕ್ಷಿತರಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಕಿಮ್ಮನೆ ರತ್ನಾಕರ ಅವರು ಸಿದ್ದರಾಮಯ್ಯ ಪಾಳೆಯದಲ್ಲಿ ಗುರುತಿಸಿಕೊಂಡಿದ್ದಾರೆ. ಮಂಜುನಾಥಗೌಡ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ವೇದಿಕೆ ಸಿಕ್ಕಾಗಲೆಲ್ಲ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೊರ ಹಾಕುತ್ತಿದ್ದಾರೆ. ಬಹಿರಂಗ ಪತ್ರ ಕೂಡ ಬರೆದಿದ್ದಾರೆ. ಇವರಿಬ್ಬರ ಮುನಿಸು ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಗೆ ಇರಿಸುಮುರಿಸು ಉಂಟುಮಾಡಿದೆ. ಟಿಕೆಟ್ ಘೋಷಣೆಯ ನಂತರವೂ ಹೀಗೆಯೇ ಮುಂದುವರಿದರೆ ಲಾಭ ಬಿಜೆಪಿಗೆ ದಕ್ಕಿದರೂ ಆಶ್ಚರ್ಯವಿಲ್ಲ.

ಪಾದಯಾತ್ರೆ ಪಾಲಿಟಿಕ್ಸ್
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕಿಮ್ಮನೆ ರತ್ನಾಕರ ಮತ್ತು ಆರ್.ಎಂ. ಮಂಜುನಾಥ ಗೌಡ ಇಬ್ಬರೂ ಪಾದಯಾತ್ರೆ ಪಾಲಿಟಿಕ್ಸ್ ಆರಂಭಿಸಿದ್ದಾರೆ. ಇಬ್ಬರೂ ಈಗಿನಿಂದಲೇ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪಾದಯಾತ್ರೆ ಹಾಗೂ ಹೋರಾಟಗಳನ್ನು ನಡೆಸುವ ಮೂಲಕ ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರು ತಾಲೂಕಿನ ನೆಟ್‌ವರ್ಕ್‌ ಸಮಸ್ಯೆ, ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ, ಗೃಹ ಸಚಿವರ ವೈಫಲ್ಯ ಸೇರಿದಂತೆ ಹಲವು ವಿಷಯಗಳನ್ನಿಟ್ಟುಕೊಂಡು ತೀರ್ಥಹಳ್ಳಿಯಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ನಡೆಸಿದ್ದಾರೆ. ಪಠ್ಯಪುಸ್ತಕ ವಿವಾದ ಹಿನ್ನೆಲೆ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೂ ಪಾದಯಾತ್ರೆ ನಡೆಸಿದ್ದರು. ಈ ಹಿಂದೆ ಶರಾವತಿ ಮುಳುಗಡೆ ರೈತರ ಸಮಸ್ಯೆ ಪರಿಹರಿಸುವಂತೆ ಪಾದಯಾತ್ರೆ ನಡೆಸಿದ್ದ ಆರ್.ಎಂ.ಮಂಜುನಾಥ ಗೌಡ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಹೆಸರಿನಲ್ಲಿ ಪಾದಯಾತ್ರೆ ಆಯೋಜಿಸಿದ್ದರು. ಈ ಪಾದಯಾತ್ರೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದ ಕಿಮ್ಮನೆ ರತ್ನಾಕರ ಕೂಡ ಇದೀಗ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹೆಸರಿನಲ್ಲಿ ಪ್ರತ್ಯೇಕ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್‌ಗೆ ಮಂಜುನಾಥ್ ಗೌಡರವರು ಸೇರ್ಪಡೆಯಾದಾಗಿನಿಂದ ತೀರ್ಥಹಳ್ಳಿಯಲ್ಲಿ ಎರಡು ಗುಂಪು‌ ಸೃಷ್ಟಿಯಾಗಿದೆ. ಆದರೆ, ಈ ಕುರಿತು ತುಟಿಪಿಟಕ್ ಎನ್ನದ ಜಿಲ್ಲಾ‌ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷರ ಮೇಲೆ‌ ವಿವಾದದ ಭಾರಹಾಕಿ ಸುಮ್ಮನಾಗಿದ್ದಾರೆ.‌

2023ಕ್ಕೆ ಸಂಭಾವ್ಯ ಪ್ರತಿಸ್ಪರ್ಧಿಗಳು
1. ಆರಗ ಜ್ಞಾನೇಂದ್ರ (ಬಿಜೆಪಿ)
2. ಕಿಮ್ಮನೆ ರತ್ನಾಕರ, ಆರ್.ಎಂ.ಮಂಜುನಾಥ ಗೌಡ (ಕಾಂಗ್ರೆಸ್)
3. ಯಡ್ಯೂರ್ ರಾಜಾರಾಮ

ತೀರ್ಥಹಳ್ಳಿ
ತೀರ್ಥಹಳ್ಳಿ

ಇದನ್ನೂ ಓದಿ | ಎಲೆಕ್ಷನ್‌ ಹವಾ | ಶಿವಮೊಗ್ಗ ಗ್ರಾಮಾಂತರ | ಹೆಚ್ಚುತ್ತಲೇ ಇದೆ BJP ಗೆಲುವಿನ ಅಂತರ, ಅವಕಾಶಕ್ಕಾಗಿ ಕಾಂಗ್ರೆಸ್‌-ಜೆಡಿಎಸ್‌ ಕಾತರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಕರ್ನಾಟಕ

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರು
ವಯೋಸಹಜ ಕಾಯಿಲೆಯಿಂದ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ನಿಧನರಾಗಿದ್ದಾರೆ.

VISTARANEWS.COM


on

M P Rudramba
Koo

ವಿಜಯನಗರ: ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಧರ್ಮ ಪತ್ನಿ ಎಂ.ಪಿ.ರುದ್ರಾಂಬಾ (M P Rudramba) (83) ಅವರು ವಯೋಸಹಜ ಕಾಯಿಲೆಯಿಂದ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾದರು. ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಪುತ್ರಿಯರಲ್ಲಿ ಲತಾ ಮಲ್ಲಿಕಾರ್ಜುನ ಅವರು ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿಯಾಗಿದ್ದಾರೆ. ಸುಮಾ ಹಾಗೂ ವೀಣಾ ಇನ್ನಿಬ್ಬರು ಪುತ್ರಿಯರು. ಅವರ ಪುತ್ರ, ಹರಪನಹಳ್ಳ ಕ್ಷೇತ್ರದ ಶಾಸಕರಾಗಿದ್ದ ಎಂ.ಪಿ.ರವೀಂದ್ರ ಕೆಲ ವರ್ಷದ ಹಿಂದೆಯೇ ತೀರಿಕೊಂಡಿದ್ದರು. ಎಂ.ಪಿ. ಪ್ರಕಾಶ್‌ ಅವರೂ ದಶಕಗಳ ಹಿಂದೆಯೇ ವಿಧಿವಶರಾಗಿದ್ದರು.

ಸಾಂಸ್ಕೃತಿಕ ಹಾಗೂ ಚಿಂತನ ಶೀಲ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಂ.ಪಿ. ಪ್ರಕಾಶ್‌ ಅವರನ್ನು ಮದುವೆಯಾಗಿದ್ದ ರುದ್ರಾಂಬಾ ಅವರು ಕೂಡ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇತ್ತೀಚಿಗೆ ಆರೋಗ್ಯದ ಕಾರಣದಿಂದ ಸಾರ್ವಜನಿಕ ಜೀವನದ ಒಡನಾಟ ಕಡಿಮೆಯಾಗಿತ್ತು.

ಇದನ್ನೂ ಓದಿ | Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

ಹೂವಿನ ಹಡಗಲಿಯಲ್ಲಿ ಮಂಗಳವಾರ ಸಂಜೆ 4.30 ಕ್ಕೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ. ದಿ.‌ ಎಂ.ಪಿ. ಪ್ರಕಾಶ್‌ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ರುದ್ರಾಂಬಾ ಅವರು ತಮ್ಮ ಪತಿಯ ಆದರ್ಶಗಳನ್ನು ಪಾಲಿಸುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ನೊಂದ ಜನರ ಬದುಕಿಗೆ ಬೆಳಕಾಗಿದ್ದವರು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

Murder Case: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಕೊಲೆ ನಡೆದಿದೆ. ವಿಚ್ಛೇದನ ಪಡೆದು ದೂರವಾಗುತ್ತಾಳೆ ಎಂದು ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿರುವ ಘಟನೆ (Murder Case) ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ನಡೆದಿದೆ. ಹೆಂಡ್ತಿ ತನ್ನನ್ನು ಬಿಟ್ಟು ಬೇರೆಯಾಗುತ್ತಾಳೆ ಎಂದು ಬೇಸರದಿಂದ ಪತಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಶಿಯಾಪತ್ ಉನ್ನಿಸ ಕೊಲೆಯಾದ ಮಹಿಳೆ. ನೂರುಲ್ಲಾ ಪತ್ನಿಯ ಕೊಲೆ ಮಾಡಿದ ಗಂಡ. ಆರೋಪಿ ನೂರುಲ್ಲಾನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗಂಡ-ಹೆಂಡತಿ ವಿಚ್ಛೇದನ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಕಳೆದ ಐದು ದಿನಗಳಿಂದ ಹೆಂಡತಿಯಿಂದ ಗಂಡ ದೂರವಿದ್ದ. ಸೋಮವಾರ ಹೆಂಡತಿ ಉನ್ನೀಸಾ ಮನೆ ಖಾಲಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಗಂಡ ಬಂದು ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆ

ರಾಯಚೂರು: ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸುನೀತಾ (26) ಎಂಬ ಯುವತಿಯ ಶವ ಬೆಡ್ ರೂಮ್‌ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದೆ.

ಮೃತ ಯುವತಿ ದೇಹದ‌ ಮೇಲೆ ಚಾಕುವಿನಿಂದ ಹಲ್ಲೆ ಗುರುತು ಪತ್ತೆಯಾಗಿದ್ದು, ಒಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಕೊಂಡಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಮನೆಯವರ ಮದುವೆ‌ ಪ್ರಸ್ತಾಪಕ್ಕೆ‌ ಯುವತಿ ಮನನೊಂದಿದ್ದಳು. ಜತೆಗೆ ತಾಯಿ‌, ಅಣ್ಣನ ಜತೆ ಮನಸ್ತಾಪ ಇತ್ತು. ಇದೇ ಕಾರಣಕ್ಕೆ ಎಷ್ಟೋ ಬಾರಿ ಯುವತಿ ಮನೆ ಬಿಟ್ಟು ಹೋಗಿದ್ದಳಂತೆ. ಮದುವೆ ಪ್ರಸ್ತಾಪದಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ ಸುನೀತಾ, ಏ.26ರಂದು ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಮತ್ತು ಅಣ್ಣ ಹೇಳಿದ್ದಾರೆ.

ಆದರೆ, ತಂಗಿಯ ಮರಣದ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಅಕ್ಕ ದೂರು ದಾಖಲು ಮಾಡಿದ್ದಾಳೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Continue Reading

ಕೊಪ್ಪಳ

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

Lok Sabha Election 2024: ಹಿಂದಿನ ಬಿಜೆಪಿ ಸರ್ಕಾರದ 40 % ಕಮಿಷನ್ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah inaugurated by prajadhwani lok sabha election campaign meeting at kushtagi
Koo

ಕೊಪ್ಪಳ: ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೆ ಪ್ರಧಾನಿ ಯಾರಾಗ್ತಾರೇ? ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ ಎಂದು ಸಿಎಂ ಸಿದ್ದರಾಮಯ್ಯ (Lok Sabha Election 2024) ಹೇಳಿದ್ದಾರೆ.

ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೇ ಪ್ರಧಾನಿ ಯಾರಾಗ್ತಾರೇ, ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ. ಹೀಗಾಗಿ ಸೋಲಿನ ಹತಾಶೆಯಿಂದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು.

ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಮೋದಿ ಕಳೆದ ಹತ್ತು ವರ್ಷದಲ್ಲಿ ಪ್ರಮಾಣಿಕ ಆಡಳಿತ ನಡೆಸಲಿಲ್ಲ. ರೈತರಿಗೆ ಜನಪರ ಕಾರ್ಯಕ್ರಮ ಜಾರಿ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಶ್ವಾಸನೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸಿದ್ದೇವೆ. ಈವರೆಗೂ ಶಕ್ತಿ ಯೋಜನೆಯಡಿ 200 ಕೋಟಿ ಜನ ಸೌಲಭ್ಯ ಪಡೆದಿದ್ದಾರೆ. ಬಡವರೆಲ್ಲಾ ಕಾಂಗ್ರೆಸ್ ಪರ ಆಗ್ತಾರೆ ಅಂತ ಮೋದಿಯವರು ಅಕ್ಕಿ ನೀಡದೇ ರಾಜ್ಯದ ಜನತೆಗೆ ದ್ರೋಹ ಮಾಡಿದ್ರು. ಹೀಗಾಗಿ ಅಕ್ಕಿ ಬದಲಾಗಿ ಐದು ಕೆಜಿ ಅಕ್ಕಿಯ ಹಣ ಫಲಾನುಭವಿ ಅಕೌಂಟ್‌ಗೆ ಹಾಕುತ್ತಿದ್ದೇವೆ ಎಂದರು.

ದೇಶದಲ್ಲಿ ಹಿಂದುಳಿದ, ದಲಿತ, ಎಸ್‌ಟಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ಆದರೆ, ಮೋದಿಯವರು ಮೀಸಲಾತಿ ವಿರುದ್ಧ ಇದ್ದಾರೆ. ಜಾತಿ ಜಾತಿಗಳ ವಿರುದ್ಧ ಎತ್ತಿಕಟ್ಟುವ ಮೋದಿ ಸ್ಕೆಚ್ ವಿಫಲಗೊಳಿಸಿ. ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸುವ ಬಿಜೆಪಿಗರಿಗೆ ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದರು.

ಕಾಂಗ್ರೆಸ್‌ನ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ಇಡೀ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅಂಬಾನಿ, ಅದಾನಿಯಂತಹ ಬಂಡವಾಳಶಾಹಿ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ಒಪ್ಪದ ಮೋದಿ ಯಾರ ಪರ ಎನ್ನುವುದನ್ನು ದೇಶದ ಜನರಿಗೆ ಮನವರಿಕೆಯಾಗಿದೆ‌ ಎಂದು ಆರೋಪಿಸಿದರು‌‌.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಪ್ರಧಾನಿ ಮೋದಿ ಹತ್ತು ವರ್ಷದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ? ಎಷ್ಟು ಅಭಿವೃದ್ಧಿ ಮಾಡಿದರು? ರೈತರ ಬದುಕಿನಲ್ಲಿ ಬದಲಾವಣೆ ಆಯ್ತಾ? ಅಚ್ಛೇದಿನ ಬಂತಾ? ನಿಮ್ಮ ಖಾತೆಗೆ 15 ಲಕ್ಷ ಬಂತಾ? ಬಿಜೆಪಿ ನುಡಿದಂತೆ ನಡೆದಿದ್ದಾರಾ? ಎಂದು ಆಲೋಚಿಸಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಗ್ಯಾರಂಟಿ ಅನುಷ್ಠಾನಗೊಳಿಸಿ, ರಾಜ್ಯದ ಬಡವರ ಹಿತ ಕಾಪಾಡಿದ್ದೇವೆ ಎಂದರು.

ಇಲ್ಲಿನ ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿದ್ದರಿಂದ ನವಲಿಯಲ್ಲಿ ಅಣೆಕಟ್ಟು ಕಟ್ಟಲು ನಾವು ಮುಂದಾಗಿದ್ದೇವೆ. ಇದಕ್ಕಾಗಿ ನಮ್ಮ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದ್ದು, ಚುನಾವಣೆ ನಂತರ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಜತೆ ಚರ್ಚೆ ಮಾಡಿ, ರೈತರ ಬದುಕು ರಕ್ಷಿಸುತ್ತೇವೆ ಎಂದರು.

ಇದನ್ನೂ ಓದಿ: Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

ಬಡವರಿಗಾಗಿ ಕಾರ್ಯಕ್ರಮ ರೂಪಿಸಿದ್ದರೆ ಅದು ಕಾಂಗ್ರೆಸ್ ಪಕ್ಷ. ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಮೋದಿ ಗ್ಯಾರಂಟಿಯಿಂದ ನಿಮ್ಮ ಹೊಟ್ಟೆ ತುಂಬುತ್ತಿದೆಯೇ? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ನಮ್ಮ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಿದೆವು ಎಂದು ತಿಳಿಸಿದರು.

ಸಚಿವರಾದ ಶಿವರಾಜ ತಂಗಡಗಿ, ಭೈರತಿ ಸುರೇಶ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಮತ್ತು ಕಾಡಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಮಾತನಾಡಿದರು.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಈ ಸಂದರ್ಭದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸವನಗೌಡ ತುರವಿಹಾಳ, ಮಾಜಿ ವಿಪ ಸಭಾಪತಿ ವಿ.ಆರ್.ಸುದರ್ಶನ, ವೆಂಕಟರಾಮಯ್ಯ, ವಿಪ ಸದಸ್ಯ ಶರಣೇಗೌಡ ಪಾಟೀಲ್ ಬಯ್ಯಾಪುರ, ಎಎಪಿ ಜಿಲ್ಲಾಧ್ಯಕ್ಷ ಕನಕಪ್ಪ, ರಾಜ್ಯ ಕಾರ್ಯದರ್ಶಿ ಸಿದ್ದನಗೌಡ, ಮಹಿಳಾ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ, ಮುಖಂಡರಾದ ಬಸವರಾಜಸ್ವಾಮಿ ಮಳೇಮಠ, ಅಮರೇಶ ಕರಡಿ, ಕೃಷ್ಣ ಎಂ. ಇಟ್ಟಂಗಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading
Advertisement
Sadhguru Jaggi Vasudev
ಬೆಂಗಳೂರು17 mins ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ22 mins ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ40 mins ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ48 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ57 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ1 hour ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ1 hour ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ1 hour ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ2 hours ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ2 hours ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202411 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202412 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌