Electric Shock: ದಾವಣಗೆರೆ ಬಳಿ ವಿದ್ಯುತ್ ತಗುಲಿ ದಂಪತಿ ದುರ್ಮರಣ - Vistara News

ಕರ್ನಾಟಕ

Electric Shock: ದಾವಣಗೆರೆ ಬಳಿ ವಿದ್ಯುತ್ ತಗುಲಿ ದಂಪತಿ ದುರ್ಮರಣ

Electric Shock: ದಾವಣಗೆರೆ ತಾಲೂಕಿನ ಕಾಟೀಹಳ್ಳಿಯಲ್ಲಿ ಗುರುವಾರ ಅವಘಡ ನಡೆದಿದೆ. ಜಮೀನಿಗೆ ಕೆಲಸಕ್ಕೆ ಹೋದಾಗ ವಿದ್ಯುತ್ ಗ್ರೌಂಡ್‌ ಆಗಿದ್ದರಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Electric Shock
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ವಿದ್ಯುತ್ ತಗುಲಿ ದಂಪತಿ ದುರ್ಮರಣ ಹೊಂದಿರುವ ಘಟನೆ (Electric Shock) ತಾಲೂಕಿನ ಕಾಟೀಹಳ್ಳಿಯಲ್ಲಿ ಗುರುವಾರ ನಡೆದಿದೆ. ಜಮೀನಿಗೆ ಕೆಲಸಕ್ಕೆ ಹೋದಾಗ ವಿದ್ಯುತ್ ಗ್ರೌಂಡ್‌ ಆಗಿದ್ದರಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾಟೀಹಳ್ಳಿ ಗ್ರಾಮದ ನಾಗರಾಜ್ (37), ಲತಾ (31) ಮೃತ ದುರ್ದೈವಿಗಳು. ಮಧ್ಯಾಹ್ನ 3ಗಂಟೆ ಸುಮಾರಿಗೆ ಘಟನೆ ನಡೆದಿದೆ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವಘಡದಿಂದ ಅವರು ಅನಾಥರಾಗಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಆನೇಕಲ್‌: ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ (Electric shock) ಯುವ ಎಂಜಿನಿಯರ್ ಮೃತಪಟ್ಟಿದ್ದಾರೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ನಿವಾಸಿ ಎಂಜಿನಿಯರ್ ಕೌಶಿಕ್ (27) ಮೃತ ದುರ್ದೈವಿ.

ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ಕೌಶಿಕ್‌ಗೆ ವಿದ್ಯುತ್ ತಗುಲಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ಅವರನ್ನು ನಾರಾಯಣ ಹೆಲ್ತ್ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇಲ್ಲದಿರುವುದೇ ಈ ದುರ್ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೂರು ತಿಂಗಳಿಂದ ವರ್ಕ್ ಪ್ರೆಷರ್ ಜಾಸ್ತಿ ಇತ್ತು. ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದರೆ ರಾತ್ರಿ 12ಕ್ಕೆ ವಾಪಸ್‌ ಆಗುತ್ತಿದ್ದರು. ವರ್ಕ್ ಲೋಡ್ ಜಾಸ್ತಿ ಇದ್ದು, ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದ ಮಗ ಈಗ ಹೆಣವಾಗಿದ್ದಾನೆ. ರಾತ್ರಿ 10 ಗಂಟೆಗೆ ಫೋನ್ ಮಾಡಿದಾಗ ತಡವಾಗುತ್ತೆ ಬರುತ್ತೇನೆ ಎಂದಿದ್ದ. 11:30 ರ ಸುಮಾರಿಗೆ ಸಂಬಂಧಿಕರು ಆಸ್ಪತ್ರೆ ಬಳಿ ಕರೆ ತಂದರು. ನನಗೆ ನನ್ನ ಮಗ ಬೇಕು, ವಾಪಸ್ ತಂದು ಕೊಡಿ ಎಂದು ತಾಯಿ ಸುಜಾತಾ ಮಗನ ನೆನೆದು ಕಣ್ಣೀರು ಹಾಕಿದರು.

ಇದನ್ನೂ ಓದಿ: Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

ದಾವಣಗೆರೆಯಲ್ಲಿ ಅನುಮಾನನಾಸ್ಪಾದ ರೀತಿಯಲ್ಲಿ ಮಹಿಳೆ ಸಾವು

ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ಇದೆ. ಸುಮಲತಾ (30) ಮೃತ ದುರ್ದೈವಿ. ದಾವಣಗೆರೆ ನಗರದ ವಿವೇಕಾನಂದ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದೆ. ಪತಿ ಶಿವಮೂರ್ತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಸುಮಲತಾಳನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಮೃತ ಸಂಬಂಧಿಕರು ಆರೋಪಿಸಿದ್ದಾರೆ. ಇತ್ತ ಪತಿ ಶಿವಮೂರ್ತಿ ಅನಾರೋಗ್ಯದ ಕಾರಣ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದು, ಶಿವಮೂರ್ತಿ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದಾರೆ.

ಕಳೆದ ಹನ್ನೆರಡು ವರ್ಷಗಳ ಹಿಂದೆ ಸುಮಲತಾ ಹಾಗೂ ಶಿವಮೂರ್ತಿ ಮದುವೆ ಆಗಿದ್ದರು. ಶಿವಮೂರ್ತಿ ಮೊದಲ ಪತ್ನಿ ನಿಧನದ ನಂತರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಸುಮಲತಾಳ ಅನ್ನು ಮದುವೆ ಆಗಿದ್ದ. ಮೊದಲ ಪತ್ನಿಯ ಮೂವರು ಮಕ್ಕಳು, ಸುಮಲತಾ ಹಾಗೂ ಪತಿ ಶಿವಮೂರ್ತಿ ಒಂದೇ ಮನೆಯಲ್ಲಿ ವಾಸವಿದ್ದರು. ಮಕ್ಕಳು ದೊಡ್ಡವರಾದ ಬಳಿಕ ಶಿವಮೂರ್ತಿ ಪತ್ನಿ ಸುಮಲತಾಳಿಗೆ ಕಿರುಕುಳ‌ ನೀಡಲು ಶುರು ಮಾಡಿದ್ದ ಎನ್ನಲಾಗಿದೆ. ಸದ್ಯ ಆತ ಬರುವ ತನಕ ಶವ ತೆಗೆದುಕೊಂಡು ಹೋಗಲ್ಲ ಎಂದು ಸುಮಲತಾಳ ಸಂಬಂಧಿಕರು ಪಟ್ಟು ಹಿಡಿದಿದ್ದರು. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Independence Day 2024: ಬಲಿಷ್ಠ ಭಾರತೀಯ ಸೇನೆ ಎದುರು ಯಾವ ಶತ್ರುವೂ ನಿಲ್ಲಲಾರ: ಕರ್ನಲ್‌ ವೆಂಕಟೇಶ್‌ ನಾಯಕ್

Independence Day 2024: ಬೆಂಗಳೂರು ನಗರದಲ್ಲಿ ಸುದಯ ಫೌಂಡೇಶನ್‌ನಿಂದ ಹಮ್ಮಿಕೊಳ್ಳಲಾಗಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಲ್‌ ವೆಂಕಟೇಶ್‌ ನಾಯಕ್‌ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತೀಯ ಸೇನೆ ಸಾಕಷ್ಟು ಬಲಿಷ್ಠವಾಗಿದೆ ಹಾಗೆಯೇ ಅತ್ಯಾಧುನಿಕವಾಗಿದೆ. ಎಂತಹ ಶತ್ರುಗಳ ದಾಳಿಯನ್ನು ಕೂಡ ಹಿಮ್ಮೆಟ್ಟಿಸಬಲ್ಲುದು ಎಂದು ಅವರು ತಿಳಿಸಿದರು.

VISTARANEWS.COM


on

Independence Day 2024
Koo

ಬೆಂಗಳೂರು: ಭಾರತೀಯ ಸೇನೆ ಸಾಕಷ್ಟು ಬಲಿಷ್ಠವಾಗಿದೆ (Independence Day 2024) ಹಾಗೆಯೇ ಅತ್ಯಾಧುನಿಕವಾಗಿದೆ. ಎಂತಹ ಶತ್ರುಗಳ ದಾಳಿಯನ್ನು ಕೂಡ ಹಿಮ್ಮೆಟ್ಟಿಸಬಲ್ಲುದು ಎಂದು ಕರ್ನಲ್‌ ವೆಂಕಟೇಶ್‌ ನಾಯಕ್‌ ಹೇಳಿದರು.

ನಗರದಲ್ಲಿ ಸುದಯ ಫೌಂಡೇಶನ್‌ ಆಯೋಜಿಸಿದ್ದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತ ಸ್ವತಂತ್ರ್ಯವಾದ ನಂತರ ಅನೇಕ ಸಂಘರ್ಷಗಳನ್ನು ದಾಟಿ ಬಂದಿದ್ದರ ಕುರಿತು ಇತಿಹಾಸ ಮೆಲುಕು ಹಾಕಿದರು. ಪಾಕಿಸ್ತಾನದೊಂದಿಗೆ ಮೊದಲ ಯುದ್ಧದಿಂದ ಪ್ರಾರಂಭಿಸಿ ಇತ್ತೀಚಿಗಿನ ಗ್ಯಾಲ್ವಾನ್‌ ಕಣಿವೆಯಲ್ಲಿನ ಘರ್ಷಣೆವರೆಗಿನ ಸಂಗತಿಗಳನ್ನು ವಿವರವಾಗಿ ಹಂಚಿಕೊಂಡರು.

33 ವರ್ಷಗಳ ತಮ್ಮ ಸೇವೆಯ ಅನುಭವಗಳನ್ನು ವಿವರಿಸುವುದರ ಜತೆಗೆ ಅಂದಿಗೂ ಇಂದಿಗೂ ಭಾರತೀಯ ಸೇನೆ ಅದೆಷ್ಟು ಬಲಿಷ್ಠ ಮತ್ತು ಆಧುನಿಕವಾಗಿದೆ ಎಂಬುದನ್ನು ಅವರು ತಿಳಿಸಿದರು.

ಇದನ್ನೂ ಓದಿ: Independence Day 2024: ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ: ಹೆಬ್ಬಾಳಕರ್

ಈ ವೇಳೆ ಮೀಡಿಯಾ ಕನೆಕ್ಟ್‌ ಹಾಗೂ ಸುದಯ ಫೌಂಡೇಷನ್‌ ಸಂಸ್ಥಾಪಕಿ ದಿವ್ಯಾ ರಂಗೇನಹಳ್ಳಿ ಮಾತನಾಡಿ, ಇಂದಿನ ಪೀಳಿಗೆಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿಕೊಡುವುದು ಅಗತ್ಯವಾಗಿದೆ. ಅದೆಷ್ಟೋ ಬಲಿದಾನಗಳ ನಂತರ ಇಂದು ನಾವು ಸ್ವತಂತ್ರರಾಗಿದ್ದೇವೆ. ಅವರೆಲ್ಲರನ್ನು ನಾವು ಸ್ಮರಿಸುವುದರ ಜತೆಗೆ ಸ್ವಾತಂತ್ರ್ಯದ ಮಹತ್ವವನ್ನು ಸಾರೋಣ ಎಂದು ಹೇಳಿದರು.

ಇದನ್ನೂ ಓದಿ: Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Continue Reading

ಬೆಂಗಳೂರು

Independence Day 2024: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ತಿರಂಗಾ ರ‍್ಯಾಲಿ

Independence Day 2024: ಬೆಂಗಳೂರಿನ ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಎನ್‌ಸಿಸಿ ಯೂನಿಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದಲ್ಲಿ ತಿರಂಗಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಎನ್‌ಸಿಸಿ ಯೂನಿಟ್‌ನ ಸೀನಿಯರ್ ಕೆಡೆಟ್‌ಗಳು ಹಾಗೂ ಏರ್‌ಫೋರ್ಸ್ ಸಿಬ್ಬಂದಿಯಿಂದ ಯುನಿಟ್‌ನ ಕಛೇರಿ ಯುವಿಸಿಇ ಕ್ಯಾಂಪಸ್, ಕೆ.ಆರ್. ಸರ್ಕಲ್‌ನಿಂದ ವಿಧಾನಸೌಧದವರೆಗೂ ತಿರಂಗಾ ರ‍್ಯಾಲಿ ಜರುಗಿತು.

VISTARANEWS.COM


on

Independence Day 2024
Koo

ಬೆಂಗಳೂರು: ಬೆಂಗಳೂರಿನ ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಎನ್‌ಸಿಸಿ ಯೂನಿಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ (Independence Day 2024) ಅಂಗವಾಗಿ ನಗರದಲ್ಲಿ ತಿರಂಗಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಎನ್‌ಸಿಸಿ ಯೂನಿಟ್‌ನ ಸೀನಿಯರ್ ಕೆಡೆಟ್‌ಗಳು ಹಾಗೂ ಏರ್‌ಫೋರ್ಸ್ ಸಿಬ್ಬಂದಿಯಿಂದ ಯುನಿಟ್‌ನ ಕಛೇರಿ ಯುವಿಸಿಇ ಕ್ಯಾಂಪಸ್, ಕೆ.ಆರ್. ಸರ್ಕಲ್‌ನಿಂದ ವಿಧಾನಸೌಧದವರೆಗೂ ಜರುಗಿತು.

ಇದನ್ನೂ ಓದಿ: Independence Day 2024: ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ: ಹೆಬ್ಬಾಳಕರ್

ಭಾರತವು ಸ್ವಾತಂತ್ರ್ಯ ಪಡೆದು 77 ವಸಂತಗಳನ್ನು ಪೂರೈಸಿದ ಈ ಸಂದರ್ಭದಲ್ಲಿ ಯುನಿಟ್‌ನ ವತಿಯಿಂದ ಪ್ರಧಾನಮಂತ್ರಿಯವರ ಒಂದು ಕೆಡೆಟ್ ಒಂದು ಗಿಡ ಎಂಬ ಧ್ಯೇಯ ವಾಕ್ಯದೊಂದಿಗೆ ಸಮಾಜದಲ್ಲಿ ಪರಿಸರ ಕಾಳಜಿಯನ್ನು ಹೆಚ್ಚಿಸುವ ಪ್ರಯುಕ್ತ ವಿವಿಧ ಶಾಲೆಗಳ ಎನ್‌ಸಿಸಿ ಕೆಡೆಟ್‌ಗಳು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಪರಿಸರ ಜಾಗೃತಿ ಮೂಡಿಸಲಾಯಿತು. ಯುನಿಟ್‌ನ ಹಲವು ಶಾಲೆಗಳು ಭಾಗವಹಿಸಿ ಸಾವಿರಾರು ಗಿಡಗಳನ್ನು ನೆಟ್ಟು, ಸಮಾಜದಲ್ಲಿ ಪರಿಸರ ಅರಿವನ್ನು ಮೂಡಿಸಲಾಯಿತು.

ಇದನ್ನೂ ಓದಿ: Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಎನ್‌ಸಿಸಿ ಯೂನಿಟ್‌ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Bengaluru Roads: ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸಚಿವ ಮನವಿ; ದರಿದ್ರ ನಾಲಾಯಕ್‌ ಸರ್ಕಾರ ಎಂದ ಅಶೋಕ್!

Bengaluru Roads: ಬೆಂಗಳೂರಿನ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡ್‌ನ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Bengaluru Roads
Koo

ಬೆಂಗಳೂರು: ಸಚಿವರು ಸೂಚಿಸಿದರೆ ಯಾವುದೇ ಕೆಲಸ, ನಿಗದಿತ ಅವಧಿಯೊಳಗೆ ತ್ವರಿತವಾಗಿ ಮುಗಿಯುತ್ತದೆ. ಆದರೆ, ರಾಜಧಾನಿ ರಸ್ತೆಗಳ (Bengaluru Roads) ದುಸ್ಥಿತಿ ನೋಡಿ ದುರಸ್ತಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರೇ ಮನವಿ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಇದು ಸರ್ಕಾರದ ಅಸಹಾಯಕತೆಯೋ? ಅಥವಾ ಸಚಿವರ ಅಸಹಾಯಕತೆಯೋ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಹೌದು, ನಗರದ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡ್‌ನ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೊವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್‌ಸಿಎಲ್‌ ಎಂಡಿ ಯಾರಾದರೂ ಆಗಲಿ, ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಿ, ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ.

ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದ ಮೂಲಕ ಅಧಿಕಾರಿಗಳಿಗೆ ಸಚಿವರು ಮನವಿ ಮಾಡಿರುವುದರಿಂದ ಇದು ಸರ್ಕಾರದ ಅಸಹಾಯಕತೆಯೋ? ಅಥವಾ ಸಚಿವರ ಅಸಹಾಯಕತೆಯೋ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಅತ್ತ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಷಣ ಮಾಡುತ್ತಾರೆ. ಇತ್ತ ನೇರವಾಗಿ ಡಿ.ಕೆ.ಶಿವಕುಮಾರ್‌ಗೆ ಹೇಳಲಾಗದೆ, ಬಿಡಲಾಗದೇ ಸಚಿವರು ಒದ್ದಾಡುತ್ತಿದ್ದಾರೆ. ಮತ್ತೊಂದೆಡೆ ಸಾರ್ವಜನಿಕರ ಸಮಸ್ಯೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಕಣ್ಣೆತ್ತಿ ನೋಡುತ್ತಿಲ್ಲ ಎಂದು ಸಾರ್ವಜನಿಕರು ಅರೋಪಿಸಿದ್ದಾರೆ.

ಕಂದಾಯ ಸಚಿವ ಕೃಷ್ಣ ಭೈರೇಗೌಡ ರಸ್ತೆ ಸರಿಪಡಿಸಿಲು ಅಧಿಕಾರಿಗಳಿಗೆ ಮನವಿ ಮಾಡಿರುವುದರ ಬಗ್ಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಪ್ರತಿಕ್ರಿಯಿಸಿದ್ದು, ಸಚಿವರೇ ಅಧಿಕಾರಿಗಳನ್ನು ಬೇಡಿಕೊಳ್ಳುತ್ತಿರುವುದನ್ನು ನೋಡಿದರೆ, ಇದು ಎಂತಹ ದರಿದ್ರ ನಾಲಾಯಕ್ ಸರ್ಕಾರ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕಂದಾಯ ಸಚಿವರು ಮತ್ತು ಬ್ಯಾಟರಾಯನಪುರ ಶಾಸಕರಾದ ಕೃಷ್ಣ ಭೈರೇಗೌಡರು ಅತ್ಯಂತ ಅಸಹಾಯಕರಾಗಿ ಬಿಬಿಎಂಪಿ ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೊಳ್ಳುವುತ್ತಿರುವುದನ್ನು ನೋಡಿದರೆ, ಈ ಕಾಂಗ್ರೆಸ್‌ ಸರ್ಕಾರ, ಎಂತಹ ದರಿದ್ರ ನಾಲಾಯಕ್ ಸರ್ಕಾರ ಎಂಬುದು ಸ್ಪಷ್ಟವಾಗುತ್ತದೆ.

ಸಚಿವ ಕೃಷ್ಣಬೈರೇಗೌಡ ಅವರೇ, ಆದೇಶ ಮಾಡಿ ಕೆಲಸ ಮಾಡಿಸಬೇಕಾದ ಸ್ಥಾನದಲ್ಲಿರುವ ತಾವು, ಬಿಬಿಎಂಪಿ ಅಧಿಕಾರಿಗಳಿಗೆ ಇಷ್ಟೊಂದು ಅಸಹಾಯಕರಾಗಿ ಅಂಗಲಾಚುತ್ತಿದ್ದೀರಲ್ಲ, ಬೆಂಗಳೂರು ಅಭಿವೃದ್ಧಿ ಸಚಿವರು ತಮ್ಮ ಕೆಲಸ ಮಾಡುತ್ತಿಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಡುತ್ತಿದ್ದೀರೋ? ಅಥವಾ ಇದು ಡಿಸಿಎಂ ಅವರ ವಿರುದ್ಧ ಬಹಿರಂಗ ಬಂಡಾಯದ ಮುನ್ಸೂಚನೆಯೋ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ತಮ್ಮ ಸಂಪುಟದಲ್ಲಿ ಸಚಿವರ ಮಧ್ಯೆ ಪರಸ್ಪರ ಒಂದು ಸ್ವಲ್ಪವೂ ತಾಳಮೇಳವಿಲ್ಲವೇ? ಒಬ್ಬ ಸಚಿವರು ಮತ್ತೊಬ್ಬ ಸಚಿವರ ಕರೆ ಸ್ವೀಕರಿಸುವುದಿಲ್ಲವೇ? ನಿಮ್ಮ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | Bomb Threat: ಅಸ್ಸಾಂನ 19 ಕಡೆಗಳಲ್ಲಿ ಬಾಂಬ್‌ ಇರಿಸಿ, ಬಳಿಕ ನಿಷ್ಕ್ರೀಯಗೊಳಿಸುವಂತೆ ಮನವಿ ಮಾಡಿದ ಉಲ್ಫಾ ಉಗ್ರರು

ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sangolli Rayanna Jayanthi

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತ್ಯುತ್ಸವ (Sangolli Rayanna Jayanthi) ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಪ್ರಯುಕ್ತ ಇಂದು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣನವರ ಬದುಕು ನಮಗೆಲ್ಲರಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಮಳೆ

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Karnataka Rain: ಗಂಗಾವತಿಯಲ್ಲಿ ಬುಧವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದರೆ, ಮಳೆ ನೀರಿನಿಂದ ಅಪಾರ ಪ್ರಮಾಣದ ಭತ್ತದ ಗದ್ದೆಗಳಿಗೆ ಹಾನಿಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Karnataka Rain
Koo

ಗಂಗಾವತಿ: ಬುಧವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದರೆ, ಮಳೆ (Karnataka Rain) ನೀರಿನಿಂದ ಅಪಾರ ಪ್ರಮಾಣದ ಭತ್ತದ ಗದ್ದೆಗಳಿಗೆ ಹಾನಿಯಾಗಿದೆ.

ತಾಲೂಕಿನ ಗ್ರಾಮೀಣ ಭಾಗದಲ್ಲಿ ಈಗಷ್ಟೆ ಭತ್ತ ನಾಟಿ ಮಾಡಲಾಗಿದ್ದ ಸಾವಿರಾರು ಎಕರೆ ಪ್ರದೇಶದಲ್ಲಿ ಹೊಲ-ಗದ್ದೆಗಳಲ್ಲಿ ಅಪಾರ ಪ್ರಮಾಣ ಮಳೆ ನೀರು ನಿಂತು ಹಾನಿಯಾಗಿದೆ. ಸಸಿಮಡಿಗಳು ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ.

ಆನೆಗೊಂದಿ, ಮಲ್ಲಾಪುರ, ಸಣಾಪುರ, ರಾಂಪುರ, ಸಂಗಾಪುರ, ಕಣಿವೆ ಆಂಜನೇಯ ದೇಗುಲ, ಗಂಗಾವತಿ, ಅಯೋಧ್ಯೆ, ಢಣಾಪುರ, ಚಿಕ್ಕಜಂತಕಲ್, ಬಸವಪಟ್ಟಣ, ವಡ್ಡರಹಟ್ಟಿ, ಮರಳಿ, ಕಲ್ಗುಡಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭತ್ತದ ಗದ್ದೆಗಳು ನಾಶವಾಗಿವೆ.

ಇದನ್ನೂ ಓದಿ: Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

ಬುಧವಾರ ರಾತ್ರಿಯಿಂದ ಆರಂಭವಾದ ಮಳೆ ಬೆಳಗಿನ ಜಾವದವರೆಗೂ ನಿರಂತರ ಸುರಿದಿದೆ. ಹೀಗಾಗಿ ಗಂಗಾವತಿ ನಗರದ ಸುತ್ತಲೂ ಇರುವ ಬೆಟ್ಟದ ಪ್ರದೇಶದಿಂದ ಅಪಾರ ಪ್ರಮಾಣ ಮಳೆ ನೀರು ಜನವಸತಿ ಪ್ರದೇಶಕ್ಕೆ ಹರಿದು ಹಾನಿ ಸಂಭವಿಸಿದೆ.

ನಗರದ ಕಿಲ್ಲಾ ಏರಿಯಾ, ಹಿರೇಜಂತಕಲ್, ಮಹೆಬೂಬನಗರ, ಅಂಗಡಿಸಂಗಣ್ಣ ಕ್ಯಾಂಪ್, ರಾಮಲಿಂಗೇಶ್ವರ ಕ್ಯಾಂಪ್, ನೀಲಕಂಠೇಶ್ವರ ಕ್ಯಾಂಪ್, ಎಚ್ಆರ್‌ಎಸ್‌ ಕಾಲೋನಿ, ಗೌಸೀಯಾ ಕಾಲೋನಿ ಸೇರಿದಂತೆ ಕೊಳಚೆ ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ದವಸ-ಧಾನ್ಯ ಹಾನಿಯಾಗಿವೆ ಎಂದು ತಿಳಿದುಬಂದಿದೆ.

ಇದರ ಜತೆ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ನಂಬರ್ 19 ಕಿತ್ತು ಹೋಗಿರುವ ಕಾರಣಕ್ಕೆ ಜಲಾಶಯದ ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಎಸ್ಕೇಪ್ ಛಾನಲ್ ಮೂಲಕ ಹರಿಸಿದ್ದರ ಪರಿಣಾಮ ಅಪಾರ ಪ್ರಮಾಣದ ನೀರು ಗಂಗಾವತಿ ನಗರ ಪ್ರದೇಶಕ್ಕೆ ನುಗ್ಗಿದೆ. ಪರಿಣಾಮ ನಗರದ ದುರುಗಮ್ಮನ ಹಳ್ಳ ತುಂಬಿ ಹರಿಯುತ್ತಿದ್ದು, ಸಮೀಪದ ರಸ್ತೆಗಳು ಕೂಡ ಜಲಾವೃತವಾಗಿವೆ. ಇನ್ನು ಕಣಿವೆ ಆಂಜನೇಯ ದೇವಸ್ಥಾನದ ಸುತ್ತಲಿನ ಹೊಲಗಳಲ್ಲಿ ಅಪಾರ ಪ್ರಮಾಣ ಮಳೆ ನೀರು ರಭಸವಾಗಿ ಹರಿದ ಪರಿಣಾಮ ಭೂಮಿಯ ಸಾರ ಉಳ್ಳ ಮೇಲ್ಮೈ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಕೇವಲ ಮರಳು, ಕಲ್ಲು ಬಂಡೆಯ ಅವಶೇಷಗಳು ಉಳಿದುಕೊಂಡಿದೆ.

72 ಎಂ.ಎಂ. ಮಳೆ

ಬುಧವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯ ಪ್ರಮಾಣ ದಾಖಲೆ ನಿರ್ಮಿಸಿದೆ. ಗಂಗಾವತಿ ಮಳೆ ಮಾಪನ ಕೇಂದ್ರದಲ್ಲಿ ದಾಖಲಾದ ಮಾಹಿತಿ ಪ್ರಕಾರ ಗಂಗಾವತಿಯಲ್ಲಿ ಒಂದೇ ದಿನ ರಾತ್ರಿ ಒಟ್ಟು 72.5 ಮಿ.ಮೀ. ಪ್ರಮಾಣದಷ್ಟು ಮಳೆಯಾಗಿದೆ.

ಇತ್ತೀಚಿನ ವರ್ಷದಲ್ಲಿ ಒಂದೇ ದಿನ ಇಷ್ಟು ಮಳೆಯಾಗಿದ್ದು ಐತಿಹಾಸಿಕ ದಾಖಲೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮರಳಿ ಮಳೆ ಮಾಪನ ಕೇಂದ್ರದಲ್ಲಿ 26.3 ಮಿ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬುಧವಾರ ರಾತ್ರಿ ಸುರಿದ ಅಪಾರ ಪ್ರಮಾಣ ಮಳೆಗೆ ಮನೆ, ಮತ್ತು ಹೊಲ-ಗದ್ದೆಗಳಿಗೆ ಹಾನಿಯಾಗಿರುವ ಪ್ರಾಥಮಿಕ ಮಾಹಿತಿ ಇದೆ. ಹಾನಿಯ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುವುದು ಎಂದು ತಹಸೀಲ್ದಾರ್ ಯು. ನಾಗರಾಜ್ ತಿಳಿಸಿದ್ದಾರೆ.

Continue Reading
Advertisement
VVS Laxman
ಪ್ರಮುಖ ಸುದ್ದಿ15 mins ago

VVS Laxman : ಹಣ ತಂದುಕೊಡುವ ಐಪಿಎಲ್​ ಬಿಟ್ಟು ಬೇರೆ ಹಳೇ ಹುದ್ದೆಯನ್ನೇ ಅಪ್ಪಿಕೊಂಡ ವಿವಿಎಸ್​ ಲಕ್ಷ್ಮಣ್​

Independence Day 2024
ಬೆಂಗಳೂರು1 hour ago

Independence Day 2024: ಬಲಿಷ್ಠ ಭಾರತೀಯ ಸೇನೆ ಎದುರು ಯಾವ ಶತ್ರುವೂ ನಿಲ್ಲಲಾರ: ಕರ್ನಲ್‌ ವೆಂಕಟೇಶ್‌ ನಾಯಕ್

Independence Day 2024
ಬೆಂಗಳೂರು1 hour ago

Independence Day 2024: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ತಿರಂಗಾ ರ‍್ಯಾಲಿ

Rahul Gandhi
ಪ್ರಮುಖ ಸುದ್ದಿ2 hours ago

Rahul Gandhi : ಕೆಂಪುಕೋಟೆಯಲ್ಲಿ ರಾಹುಲ್ ಗಾಂಧಿಗೆ ಲಾಸ್ಟ್​ ಬೆಂಚ್​; ಬಿಜೆಪಿ- ಕಾಂಗ್ರೆಸ್​ ಜಟಾಪಟಿ

Pro Kabaddi League
ಕ್ರೀಡೆ2 hours ago

Pro Kabaddi League : ತೆಲುಗು ಟೈಟನ್ಸ್ ತಂಡ ಸೇರಿಕೊಂಡ ಪವನ್ ಸೆಹ್ರಾವತ್​​; ಶಾಡ್ಲೋಯಿಗೆ 2.07 ಕೋಟಿ ರೂ.

Electric Shock
ಕರ್ನಾಟಕ3 hours ago

Electric Shock: ದಾವಣಗೆರೆ ಬಳಿ ವಿದ್ಯುತ್ ತಗುಲಿ ದಂಪತಿ ದುರ್ಮರಣ

Vinesh Phogat
ಪ್ರಮುಖ ಸುದ್ದಿ3 hours ago

Vinesh Phogat : ಕ್ರೀಡಾ ಕೋರ್ಟ್ ಅನರ್ಹತೆ ಬಳಿಕ ಚಿತ್ರ ಹಾಕಿ ಮೊದಲ ಪ್ರತಿಕ್ರಿಯೆ ನೀಡಿದ ವಿನೇಶ್ ಫೋಗಾಟ್​

Bengaluru Roads
ಕರ್ನಾಟಕ4 hours ago

Bengaluru Roads: ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸಚಿವ ಮನವಿ; ದರಿದ್ರ ನಾಲಾಯಕ್‌ ಸರ್ಕಾರ ಎಂದ ಅಶೋಕ್!

Wildlife
ಪರಿಸರ4 hours ago

Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

Karnataka Rain
ಮಳೆ4 hours ago

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌