Elephant Arjuna : ಅರ್ಜುನನ ಬದುಕೇ ಒಂದು ಹೋರಾಟ; ದುರಂತ ನಾಯಕನಿಗೆ ಕಣ್ಣೀರ ವಿದಾಯ - Vistara News

ಕರ್ನಾಟಕ

Elephant Arjuna : ಅರ್ಜುನನ ಬದುಕೇ ಒಂದು ಹೋರಾಟ; ದುರಂತ ನಾಯಕನಿಗೆ ಕಣ್ಣೀರ ವಿದಾಯ

Elephant Arjuna : ಕಾಡಾನೆ ದಾಳಿಗೆ ಸಿಲುಕಿ ಪ್ರಾಣ ಕಳೆದುಕೊಂಡ ‌ ಅರ್ಜುನ ಅಸಹಾಯಕನಲ್ಲ. ಅಪ್ರತಿಮ ಸಾಹಸಿ. ಆದರೆ, ಈಗ ದುರಂತ ನಾಯಕನಾಗಿದ್ದಾನೆ. ಅವನ ಬದುಕಿನ ಚಿತ್ರಣ ಇಲ್ಲಿದೆ.

VISTARANEWS.COM


on

Anjuna elephant the end
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅವನೊಬ್ಬ ಅಗ್ರೆಸ್ಸಿವ್‌ ಹೀರೋ, ಅದೇ ಹೊತ್ತಿಗೆ ಮಗುವಿನಷ್ಟೇ ಮುಗ್ಧ. ಎಂಟು ಬಾರಿ ಚಾಮುಂಡೇಶ್ವರಿ ದೇವಿಯನ್ನು ತನ್ನ ಭುಜದ ಮೇಲೆ ಹೊತ್ತು ಮೆರೆಸಿ ಜಗತ್ತಿಗೆ ದರ್ಶನ ಮಾಡಿಸಿದ ಸಾಹಸಿಗ. ಇಂಥ ಪ್ರಚಂಡ ತಾಕತ್ತಿನ ಅರ್ಜುನ (Elephant Arjuna) ಹಾಸನ ಜಿಲ್ಲೆಯ (Hasana News) ಸಕಲೇಶಪುರ ತಾಲೂಕಿನ ಯಸಳೂರು ಕಾಡಿನಲ್ಲಿ ಪುಂಡಾನೆಯೊಂದನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಜೀವ ತೆತ್ತಿದ್ದಾನೆ. 60 ವರ್ಷದ ದಾಟಿದ ಕಾರಣಕ್ಕೆ ಮೈಸೂರು ದಸರಾ (Mysore Dasara) ಅಂಬಾರಿ ಹೊರುವ ಗೌರವದಿಂದ ನಿವೃತ್ತಿ ಹೊಂದಿ ಕಾಡಿನಲ್ಲಿ ಗೌರವಯುತ ಜೀವನವನ್ನು ಸಾಗಿಸುತ್ತಿದ್ದ ಆತ ಕಾಡಾನೆ ಮತ್ತು ವ್ಯವಸ್ಥೆಯ ಹೊಡೆತಕ್ಕೆ ಸಿಲುಕಿ ಸಹಾಯಕನಾಗಿ ದುರಂತ ನಾಯಕನಂತೆ (Tragic Hero) ಉಸಿರುಚೆಲ್ಲಿದ್ದಾನೆ.

Arjuna death Final rites

ಯಾವ ಜಾಗದಲ್ಲಿ ಮೃತಪಟ್ಟನೋ ಅದೇ ಜಾಗದಲ್ಲಿ ಸಾವಿರಾರು ಜನರ ಕಣ್ಣೀರು ಮತ್ತು ನಿಡುಸುಯ್ಯುವಿಕೆಗಳ ನಡುವೆ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾನೆ ಅರ್ಜುನ. ಕಾವಾಡಿಗರು ಹಾಕಿದ ಕಣ್ಣೀರು, ಜನರು ಬಿಟ್ಟ ನಿಟ್ಟುಸಿರು, ಅರ್ಜುನ ಸತ್ತಿದ್ದಲ್ಲ, ಇದೊಂದು ಕೊಲೆ ಎಂಬ ಪ್ರತಿಭಟನೆಯ ಧ್ವನಿಗಳ ಆಕ್ರೋಶದ ನಡುವೆ ಏನೂ ಅರಿಯದ ಮುಗ್ಧ ಮಗುವಿನಂತೆ ಮಲಗಿದ್ದ ಅವನನ್ನು ಹೂವುಗಳಿಂದ ಅಲಂಕರಿಸಿ, ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವ ಮತ್ತು ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ಬೀಳ್ಕೊಡಲಾಯಿತು. ಜೆಸಿಬಿಯಲ್ಲಿ ಕೊರೆದ ದೊಡ್ಡ ಹೊಂಡದಲ್ಲಿ ಅರ್ಜುನನ ಅಗಾಧ ಗಾತ್ರದ ದೇಹ ಮುಚ್ಚಿಹೋಯಿತು. ಅವನಿಗೊಂದು ಸ್ಮಾರಕ ಕಟ್ಟಬೇಕು, ಅವನ ನೆನಪಿನಲ್ಲಿ ಪ್ರಶಸ್ತಿ ಸ್ಥಾಪಿಸಬೇಕು, ಅವನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಕೊಡಬೇಕು, ಎಂಬ ಸಾವಿರ ಆಗ್ರಹಗಳಿಗೆ ತನ್ನ ಅಗಲದ ಕಿವಿಯನ್ನು ಮುಚ್ಚಿಕೊಂಡ ಅರ್ಜುನ ಎಲ್ಲರನ್ನೂ ಬಿಟ್ಟು ಭೂಮಿ ಮಡಿಲನ್ನು ಸೇರಿಕೊಂಡಿದ್ದಾನೆ.

ಈ ರೀತಿಯ ಅಸಹಾಯಕ ಸಾವು ಕಂಡ ಅರ್ಜುನ ಖಂಡಿತಕ್ಕೂ ಅಸಹಾಯಕನಲ್ಲ, ಅಮಾಯಕನೂ ಅಲ್ಲ. ಎಂಥ ಪರಿಸ್ಥಿತಿಯನ್ನೂ ಎದುರಿಸಬಲ್ಲ ತಾಕತ್ತಿನ ಬಲಾಢ್ಯ ಅವನು. ಅವನ ಬದುಕಿನ ಕಥೆಯನ್ನೊಮ್ಮೆ ಕೇಳಿಸಿಕೊಂಡರೆ ನಾವು ಕಳೆದುಕೊಂಡದ್ದು ಅದೆಂಥ ಶಕ್ತಿವಂತನನ್ನು, ಅದೆಂಥ ಅಮರ ವ್ಯಕ್ತಿತ್ವವನ್ನು ಎನ್ನುವುದು ನಮಗೆ ಅರಿವಾಗುತ್ತದೆ.

ಎಲ್ಲರಿಗೂ ಗೊತ್ತಿರುವ ಹಾಗೆ ಅರ್ಜುನ ದಸರಾದಲ್ಲಿ ಅಂಬಾರಿ ಹೊತ್ತಿದ್ದು ಎಂಟು ಬಾರಿ. ಕೊನೆಯದಾಗಿ ಭುವನೇಶ್ವರಿ ತಾಯಿಯನ್ನು ಹೊತ್ತು ಮೆರೆಸಿದ್ದು 2019ರಲ್ಲಿ. 2020ರ ಹೊತ್ತಿಗೆ ಅವನಿಗೆ ವಯಸ್ಸು 60 ಆಗಿತ್ತು. ಅರ್ಜುನನ ಜಾಗಕ್ಕೆ ಅಭಿಮನ್ಯುವಿನ ಪ್ರವೇಶವಾಗಿದೆ. ಹಾಗಂತ ಅರ್ಜುನನ ದಸರಾ ಸೇವೆ ಅಲ್ಲಿಗೆ ಸೀಮಿತವಾಗಿಲ್ಲ. ಅವನು ಸುಮಾರು 22 ವರ್ಷಗಳ ಕಾಲ ದಸರೆಯಲ್ಲಿ ಮಿಂಚಿದ್ದಾನೆ. ಅಂಬಾರಿ ಹೊರುವ ಕಾಯಕದಿಂದ ಬಿಟ್ಟರೂ ಕಳೆದ ಮೂರು ವರ್ಷಗಳಿಂದ ನಿಶಾನೆ ಆನೆಯಾಗಿ ಬೆಳಗಿದ್ದಾನೆ.

Elephant Arjuna at Jungle
ಕಾಡಿನ ವೀರ ಅರ್ಜುನ

ಅರ್ಜುನ ಅರಣ್ಯ ಇಲಾಖೆ ಕೈ ಸೇರಿದ್ದು 1968ರಲ್ಲಿ

ಕಾಡಾನೆಯಾಗಿದ್ದ ಅರ್ಜುನನ್ನು ಅರಣ್ಯ ಇಲಾಖೆ ಖೆಡ್ಡಾಕ್ಕೆ ಬೀಳಿಸಿ ಹಿಡಿದದ್ದು 1968ರಲ್ಲಿ. ಅಂದರೆ ಆಗ ಅರ್ಜುನನಿಗೆ ಸುಮಾರು ಒಂಬತ್ತು. ಗಟ್ಟಿ ಪೊಗದಸ್ತಾಗಿ, ಎತ್ತರದ ನಿಲುವಿನೊಂದಿಗೆ ಮಿಂಚುತ್ತಿದ್ದ ಆತ ಪುಂಡನಂತೆ ವಿಜೃಂಭಿಸಿದ್ದ.! ಆದರೆ, ಯಾವಾಗ ಅರಣ್ಯಾಧಿಕಾರಿಗಳ ಕೈಗೆ ಸಿಕ್ಕಿದನೋ ಅಲ್ಲಿಂದ ಎಲ್ಲರ ಪ್ರೀತಿಗೆ ಪಾತ್ರನಾದ.

ಮೈಸೂರು ಜಿಲ್ಲೆಯ ಕಾಕನಕೋಟೆಯಲ್ಲಿ ಸೆರೆಸಿಕ್ಕ ಅವನು ನಾಗರಹೊಳೆಗೆ ಶಿಫ್ಟ್‌ ಆದ. ಆಗ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದ ಮರ ಸಾಗಣೆ ಕಾರ್ಯಾಚರಣೆಗೆ ಅವನೇ ಆನೆ ಬಲ. ಜತೆಗೆ ಆಗಾಗ ಆನೆಗಳನ್ನು ಖೆಡ್ಡಾಕ್ಕೆ ಬೀಳಿಸುವ ಕೆಲಸಕ್ಕೂ ಹೋಗುತ್ತಿದ್ದ. ಅವನಿಲ್ಲದೆ ಕಾರ್ಯಾಚರಣೆಗಳು ನಡೆದೇ ಇಲ್ಲ ಎನ್ನುವಷ್ಟರ ಮಟ್ಟಿಗೆ ಅವನ ಮೇಲೆ ಅಧಿಕಾರಿಗಳಿಗೆ ನಂಬಿಕೆ ಹುಟ್ಟಿಕೊಂಡಿತ್ತು.

Elephant Arjuna with howda

ಮೈಸೂರು ದಸರೆಗೆ ಬಂದಿದ್ದು 1990ರ ದಶಕದಲ್ಲಿ

ಕಾಡಿನಲ್ಲಿ ಎಲ್ಲ ಕೆಲಸಗಳನ್ನು ಮಾಡುತ್ತಿದ್ದ, ಎಲ್ಲರ ಪ್ರೀತಿ ಪಾತ್ರನಾಗಿದ್ದ ಅರ್ಜುನನಿಗೆ ಅಂಬಾರಿ ಹೊರುವ ತಾಕತ್ತೂ ಇದೆ ಎನ್ನುವುದು ಅಧಿಕಾರಿಗಳಿಗೆ ಗೊತ್ತಿತ್ತು. ಹೀಗಾಗಿ 1990ರ ದಶಕದಲ್ಲಿ ಆತನನ್ನು ದಸರೆಗೆ ಕರೆದುಕೊಂಡು ಬಂದು ನಿಶಾನೆ ಆನೆಯಾಗಿ ಅವಕಾಶ ನೀಡಿದರು. ಮುಂದೊಮ್ಮೆ ತಾಲೀಮು ಸಂದರ್ಭದಲ್ಲಿ ಆತನ ಮೇಲೆ ಅಂಬಾರಿಯನ್ನು ಕಟ್ಟಲಾಗಿತ್ತು. ಈ ವೇಳೆ ಆಕಾಶದಲ್ಲಿ ಪುಷ್ಪಾರ್ಚನೆಗೆ ಬಂದಿದ್ದ ಹೆಲಿಕಾಪ್ಟರ್‌ ನೋಡಿ ಸ್ವಲ್ಪ ಹೆದರಿದ್ದ.

Elephant Arjuna

ಅಣ್ಣಯ್ಯನನ್ನು ತುಳಿದು ಸಾಯಿಸಿದ ಅಪವಾದ

ಅರ್ಜುನ ಸೌಮ್ಯ ಸ್ವಭಾವದಲ್ಲಿದ್ದರೂ ಎಲ್ಲೋ ಒಂದು ಕಡೆ ಕಾಡಾನೆಯ ಕ್ರೌರ್ಯವೂ ಇತ್ತೆನಿಸುತ್ತದೆ. 1990ರ ಆಸುಪಾಸಿನಲ್ಲಿ ಆತನನ್ನು ದಸರೆಗೆ ಕರೆದುಕೊಂಡು ಬಂದಾಗ ಒಂದು ಅನಾಹುತ ಸಂಭವಿಸಿ ಹೋಯಿತು. ಅರ್ಜುನನು‌ ಬಹಾದ್ದೂರು ಎಂಬ ಆನೆಯ ಮಾವುತನಾಗಿದ್ದ ಅಣ್ಣಯ್ಯನನ್ನು ತುಳಿದು ಕೊಂದಿದ್ದ. ಇದು ದೊಡ್ಡ ಸುದ್ದಿಯಾಗಿತ್ತು.

Elephant Arjuna
ದಸರೆಗೆ ಮುನ್‌ ನಡೆಯುವ ತಾಲೀಮಿನ ದೃಶ್ಯ

ಈ ಕಾರಣಕ್ಕಾಗಿ ಅರ್ಜುನನ ಮೇಲೆ ಇದ್ದ ನಂಬಿಕೆ ಮಸುಕಾಯಿತು. ಶೀಘ್ರ ಕೋಪಗೊಳ್ಳುವುದನ್ನು ಪರಿಗಣಿಸಿ ಮುಂದೆ ಆತನನ್ನು ದಸರೆಗೆ ತರುವುದನ್ನೇ ನಿಲ್ಲಿಸಲಾಯಿತು. ಅಚ್ಚರಿ ಎಂದರೆ ಅವನಿಗೆ ಮರು ಜೀವದಾನ ನೀಡಿದ್ದು ಇನ್ನೊಬ್ಬ ಅಣ್ಣಯ್ಯ. ಅಂದು ಮಾವುತನಾಗಿದ್ದ ಅಣ್ಣಯ್ಯನನ್ನು ಕೊಂದ ಕಳಂಕವನ್ನು ತೊಳೆದುಕೊಳ್ಳಲು ಸಹಾಯ ಮಾಡಿದವರು ಅಂದು ನಾಗರಹೊಳೆಯಲ್ಲಿ ಡಿಸಿಎಫ್‌ ಆಗಿದ್ದ ಎ.ಎಂ. ಅಣ್ಣಯ್ಯ.

Elephant Arjuna
5900 ಕೆಜಿ ತೂಗುತ್ತಿದ್ದ ಅರ್ಜುನ

ಆಗ ದಸರೆ ಆನೆಗಳನ್ನು ಆಯ್ಕೆ ಮಾಡಲು ಬಳ್ಳೆಯ ಶಿಬಿರಕ್ಕೆ ಪಶುವೈದ್ಯಾಧಿಕಾರಿಗಳ ತಂಡ ಹೋಗಿತ್ತು. ಅದರ ಕ್ಯಾಪ್ಟನ್‌ ಆಗಿದ್ದವರು ಡಾ. ನಾಗರಾಜು. ಅಲ್ಲಿ ಅರ್ಜುನನ್ನು ನೋಡಿದ ಅವರಿಗೆ ಖುಷಿಯಾಯಿತು. ಆಗ ಡಿಸಿಎಫ್‌ ಎ.ಎಂ. ಅಣ್ಣಯ್ಯ ಅವರು ಅರ್ಜುನನ ಖಳ ಪುರಾಣವನ್ನು ಹೇಳಿದರಾದರೂ ಅನುಮತಿಯನ್ನು ನೀಡಿದರು. ಅಲ್ಲಿಗೆ ಸುಮಾರು 15 ವರ್ಷಗಳ ಅರ್ಜುನನ ಅಜ್ಞಾತವಾಸ ಮುಕ್ತಾಯವಾದಂತಾಯಿತು.

ಈ ಹದಿನೈದು ವರ್ಷಗಳ ಅವಧಿಯಲ್ಲಿ ಅರ್ಜುನನ್ನು ಪಳಗಿಸಿ ಒಬ್ಬ ನಿಯತ್ತಿನ ಪ್ರಾಣಿಯಾಗಿ ಬೆಳೆಸಿದ್ದು ದೊಡ್ಡ ಮಾಸ್ತಿ ಎಂಬ ಮಾವುತ. ಅವನು ಈಗ ತುಂಬಾ ಒಳ್ಳೆಯವನಾಗಿದ್ದಾನೆ. ಅವನಿಗೆ ದಸರೆಯಲ್ಲಿ ಅನುಮತಿ ಕೊಡಬಹುದು ಎಂಬ ಶಿಫಾರಸನ್ನು ನೋಡಿದ್ದ ದೊಡ್ಡ ಮಾಸ್ತಿ. ಅಲ್ಲಿಗೆ ತಣ್ಣನೆಯ ನಾಯಕ ಬಲರಾಮನ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಉತ್ತರವೊಂದು ಸಿಕ್ಕಿತ್ತು.

Elephant Arjuna

ಹಲವು ವರ್ಷದ ತಾಲೀಮಿನ ಬಳಿಕ ಅರ್ಜುನ ಅಧಿಕೃತವಾಗಿ ಮೊದಲ ಬಾರಿ ಅಂಬಾರಿ ಹೊತ್ತಿದ್ದು 2012ರಲ್ಲಿ. ಈ ಕೆಲಸವನ್ನು ಆತ ಎಂಟು ವರ್ಷಗಳ ಕಾಲ ಅತ್ಯಂತ ಶಿಸ್ತಿನಿಂದ ನಿಭಾಯಿಸಿದ್ದ. 2019ಕ್ಕೆ ಅವನಿಗೆ 60 ವರ್ಷ ತುಂಬಿದ್ದರಿಂದ ಸೇವೆಯಿಂದ ಬಿಡುಗಡೆ ಮಾಡಲಾಯಿತು. ನಿಜವೆಂದರೆ ಈಗಲೂ ಅರ್ಜುನನಿಗೆ ಅಂಬಾರಿ ಹೊರುವ ಕಸುವು ಇದ್ದೇ ಇತ್ತು. ನಿವೃತ್ತಿಯ ಬಳಿಕವೂ ಅರ್ಜುನ ನಿಶಾನೆ ಆನೆಯಾಗಿ ಸೇವೆ ಮಾಡುತ್ತಿದ್ದ. ಆದರೆ, ಈಗ ಅವನೇ ಇಲ್ಲ.. ಎಲ್ಲವೂ ನೆನಪಾಗಿ ಉಳಿದಿದೆ.

ಇದನ್ನೂ ಓದಿ: Elephant Arjuna : ಅಧಿಕಾರಿಗಳ ಗುಂಡಿನಿಂದಲೇ ಅರ್ಜುನನ ಮರಣ?; ಇಲ್ಲಿದೆ ವಿಡಿಯೊ ಸಾಕ್ಷಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

VISTARANEWS.COM


on

PM Narendra Modi met four special people in Sirsi visit
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕವು 2ನೇ ಹಂತದ ಮತದಾನಕ್ಕೆ ಸಜ್ಜಾಗುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

ಇವರಲ್ಲಿ ಒಬ್ಬರು ವೃತ್ತಿಯಲ್ಲಿ ಮರ ಕಡಿಯುವವರಾದರೂ ಅಯೋಧ್ಯೆಯ ಕರಸೇವಕರಾಗಿದ್ದಾರೆ. ಇನ್ನೊಬ್ಬರು ನಿವೃತ್ತ ಪೌರ ಕಾರ್ಮಿಕ ಮಹಿಳೆಯಾಗಿದ್ದಾರೆ. ಮತ್ತೊಬ್ಬರು ಕಾಡು ಹಣ್ಣುಗಳನ್ನು ಮಾರಿ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಮಗದೊಬ್ಬರು ಕ್ಷೌರಿಕರಾಗಿದ್ದು, ಬಿಜೆಪಿಯ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪಕ್ಕಾ ಅಭಿಮಾನಿಯಾಗಿದ್ದಾರೆ.

PM Narendra Modi met four special people in Sirsi visit

ಹಾಗಾದರೆ ಯಾರಿವರು?

ಲಕ್ಷ್ಮಣ್ ನಾಯ್ಕ ದೊಂಬೆ, ಸಿದ್ದಾಪುರ: ಲಕ್ಷ್ಮಣ್‌ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದವರಾಗಿದ್ದಾರೆ. ಇವರು ಅಯೋಧ್ಯೆಯ ಕರಸೇವಕರೂ ಆಗಿದ್ದವರು. ಲಕ್ಷ್ಮಣ ಅವರು ಅಯೋಧ್ಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಲ್ಲದೆ, ಬ್ರಹ್ಮಚಾರಿಯಾಗಿಯೇ ಉಳಿದಿದ್ದಾರೆ. ಲಕ್ಷ್ಮಣ ಅವರು ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರವನ್ನು ನಿರ್ಮಿಸುವವರೆಗೂ ಕ್ಷೌರ ಮಾಡಿಸುವುದಿಲ್ಲ ಎನ್ನುವ ವ್ರತವನ್ನು ಕೈಗೊಂಡಿದ್ದರು.

PM Narendra Modi met four special people in Sirsi visit

ರಾಧಾ ಹರಿಜನ: ಇವರು ಶಿರಸಿಯ ನಿವೃತ್ತ ಪೌರ ಕಾರ್ಮಿಕರಾಗಿದ್ದಾರೆ. ಸ್ವಚ್ಛತಾ ಕಾರ್ಯಕರ್ತೆಯಾಗಿ ದಣಿವರಿಯದೆ ಕೆಲಸ ಮಾಡಿದವರು ಇವರಾಗಿದ್ದಾರೆ. ತನ್ನ ಪ್ರಾಮಾಣಿಕ ಕೆಲಸಕ್ಕೆ ಹೆಸರುವಾಸಿಯಾಗಿರುವ ಇವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

PM Narendra Modi met four special people in Sirsi visit

ಮೋಹಿನಿ ಗೌಡ: ಇವರು ಹಾಲಕ್ಕಿ ಪಂಗಡಕ್ಕೆ ಸೇರಿದವರಾಗಿದ್ದಾರೆ. ಇವರು ಜೀವನಕ್ಕಾಗಿ ಅಂಕೋಲಾ ಬಸ್ ನಿಲ್ದಾಣದಲ್ಲಿ ಕಾಡು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಸ್ವಚ್ಛ ಭಾರತ್ ಸ್ವಯಂಸೇವಕಿಯಾಗಿ ತೊಡಗಿಸಿಕೊಂಡಿದ್ದಾರೆ. ಅವರು ಬಿಡುವಿದ್ದಾಗಲೆಲ್ಲಾ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸುತ್ತಾರೆ.

PM Narendra Modi met four special people in Sirsi visit

ನಾಗೇಶ್‌ ಮಹಾಲೆ: ಇವರು ಒಬ್ಬ ಕ್ಷೌರಿಕರಾಗಿದ್ದಾರೆ. ನಾಗೇಶ್‌ ಅಂಕೋಲಾದಲ್ಲಿ 4 ಆಸನ ಸಾಮರ್ಥ್ಯವುಳ್ಳ ಸಲೂನ್‌ವೊಂದನ್ನು ಹೊಂದಿದ್ದಾರೆ. ಇವರು ಬಿಜೆಪಿಯ ಕಟ್ಟಾ ಬೆಂಬಲಿಗ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಅಭಿಮಾನಿ. ಅವರ ಕೈಯಲ್ಲಿ ಮೋದಿ ಜಿ ಟ್ಯಾಟೂ ಇದೆ. ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ಅವರು ಇಡೀ ದಿನ ಉಚಿತವಾಗಿ ಕ್ಷೌರ ಮಾಡುತ್ತಾರೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಮೋದಿ ಭೇಟಿಯಾಗಿದ್ದು ಎಲ್ಲಿ?

ವಿಶೇಷ ವಿಮಾನದ ಮೂಲಕ ಶಿರಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಈ ನಾಲ್ವರು ವಿಶೇಷ ಸಾಧಕರನ್ನು ಪ್ರಧಾನಿ ನರೇಂದ್ರ ಅವರಿಗೆ ಪರಿಚಯ ಮಾಡಿಕೊಡಲಾಯಿತು. ಇದೇ ವೇಳೆ ಮೋದಿ ಸಹ ಅವರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

Continue Reading

ಕರ್ನಾಟಕ

Murugha Seer: ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Murugha Seer: ಪೋಕ್ಸೋ ಕೇಸ್ ವಿಚಾರಣೆ ಮುಗಿದು ತೀರ್ಪು ಬರುವವರೆಗೂ ಮುರುಘಾ ಶ್ರೀಗಳನ್ನು ನ್ಯಾಯಾಂಗ ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಹೀಗಾಗಿ ಶ್ರೀಗಳಿಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Murugha Seer
Koo

ಚಿತ್ರದುರ್ಗ: ಸುಪ್ರೀಂ ಕೋರ್ಟ್‌ ಆದೇಶದಂತೆ ಮುರುಘಾ ಶರಣರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಶ್ರೀಗಳಿಗೆ (Murugha Seer) ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಏ.23ರಂದು ರದ್ದು ಮಾಡಿ, ಶರಣಾಗತಿಯಾಗುವಂತೆ ಸೂಚಿಸಿತ್ತು. ಹೀಗಾಗಿ ಶ್ರೀಗಳು ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮಂಗಳವಾರ ಶರಣಾಗಿದ್ದಾರೆ. ಅವರಿಗೆ ಮೇ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶ ಎಸ್.ಎನ್.ಕಲ್ಕಣಿ ಆದೇಶ ನೀಡಿದ್ದಾರೆ.

ಪೋಕ್ಸೋ ಕೇಸ್ ವಿಚಾರಣೆ ಮುಗಿದು ತೀರ್ಪು ಬರುವವರೆಗೂ ಮುರುಘಾ ಶ್ರೀಗಳನ್ನು ನ್ಯಾಯಾಂಗ ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿ, ಒಂದು ವಾರದೊಳಗೆ ಶರಣಾಗತಿ ಆಗುವಂತೆ ಶ್ರೀಗಳಿಗೆ ಸೂಚಿಸಿತ್ತು. ಹೀಗಾಗಿ ಶ್ರೀಗಳು ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದು, ವೈದ್ಯಕೀಯ ಪರೀಕ್ಷೆ ಬಳಿಕ ಅವರನ್ನು ಪೊಲೀಸರು ಜೈಲಿಗೆ ಕರೆದೊಯ್ಯಲಿದ್ದಾರೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್‌ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಿದ್ದರಿಂದ ಇದೀಗ ಶ್ರೀಗಳು ಮತ್ತೆ ಜೈಲು ಸೇರುವಂತಾಗಿದೆ.

ಇದನ್ನೂ ಓದಿ | Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

ನಾಲ್ಕು ತಿಂಗಳಲ್ಲಿ ವಿಚಾರಣೆ ಮುಗಿಸಲು ಚಿತ್ರದುರ್ಗದ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಈಗಾಗಲೇ ಸೂಚನೆ ನೀಡಿದ್ದು, ಸಾಕ್ಷ್ಯಗಳ ವಿಚಾರಣೆ ಮುಗಿಯುವ ತನಕ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರಬೇಕು ಎಂದು ತಿಳಿಸಿತ್ತು.

ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case Where is Prajwal in Germany SIT is on lookout

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading

ಕ್ರೈಂ

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case: ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

VISTARANEWS.COM


on

Hassan Pen Drive Case Where is Prajwal in Germany SIT is on lookout
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Hassan Pen Drive Case: ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬಗ್ಗೆ ನೆನ್ನೆ ರಾತ್ರಿಯೇ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Hassan Pen Drive Case
Koo

ಶಿವಮೊಗ್ಗ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದ್ದರಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಉಚ್ಚಾಟನೆ ಬಗ್ಗೆ ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನೆನ್ನೆ ರಾತ್ರಿಯೇ ಈ ಬಗ್ಗೆ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ. ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ರೆ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ದೇವೇಗೌಡರು, ನನ್ನನ್ನು ಯಾಕೆ ತರುತ್ತೀರಿ? ಬಿಜೆಪಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಈಗಾಗಲೇ ನಾವು ಬೇರೆ ಆಗಿದ್ದೇವೆ. ನಮ್ಮ ವ್ಯವಹಾರ, ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತದೆ. ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನು ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ನಡೆದಿದ್ದರೆ ಈ ನೆಲ್ಲದಲ್ಲಿ ಶಿಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ನನ್ನ ನಿಲುವು ಮುಂದುವರಿದಿದೆ ಎಂದು ಹೇಳಿದರು.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಕಾನೂನು ಉಲ್ಲಂಘನೆ ಆಗಿದ್ದರೆ ಕ್ರಮ ಆಗಲಿ, ಚುನಾವಣೆ ಸಮಯದಲ್ಲಿ ಪೆನ್ ಡ್ರೈ ಹಂಚಿರುವುದು ಕೂಡ ತನಿಖೆ ಯಾಗಬೇಕು. ಯಾರಿಂದ ಹೊರಬಂದಿದೆ, ಯಾರು ಲಕ್ಷಾಂತರ ಪೆನ್ ಡ್ರೈ ಹಂಚಿದವರು ಯಾರು ಅಂತ ತಿಳಿಯಬೇಕು. ಪೆನ್ ಡ್ರೈ ಹಂಚಿದ್ದು ದೊಡ್ಡ ಅಪರಾಧ ಎಂದು ಕಿಡಿಕಾರಿದ್ದಾರೆ.

ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Hassan Pen drive case

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ್ದಾರೆ (Hassan Pen Drive Case) ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಅವರ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ. ಇದರಿಂದ ತಂದೆ-ಮಗನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹೇಳಿರುವುದು ಕಂಡುಬಂದಿದೆ.

ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ದೂರುದಾರೆಯ ಅತ್ತೆ ಗೌರಮ್ಮ ಸುದ್ದಿಗೋಷ್ಠಿ ನಡೆಸಿದ್ದು, ದೂರುದಾರೆಗೆ ಭವಾನಿ ರೇವಣ್ಣನವರೇ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ರೇವಣ್ಣನವರ ಕುಟುಂಬ ನಮ್ಮ ಮೇಲೆ ಯಾವುದೇ ದೌರ್ಜನ್ಯ ಮಾಡಿಲ್ಲ. ದೂರುದಾರೆಯನ್ನು ಕರೆದುಕೊಂಡು ಹೋಗಿ ಇರಿಸಿಕೊಳ್ಳಿ ಎಂದು ನಾವೇ ಭವಾನಿ ಅಮ್ಮನವರಿಗೆ ಹೇಳಿದ್ದೆವು. ಅವರು ಯಾವ ದೌರ್ಜನ್ಯವೂ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರೇವಣ್ಣ ಅವರ ಮನೆಯಲ್ಲಿ ಮಹಿಳೆಯನ್ನು ನಾಲ್ಕು ವರ್ಷ ಕೆಲಸಕ್ಕೆ ಇರಿಸಿಕೊಂಡಿದ್ದರು ಮತ್ತೆ ನಾನು ಅಲ್ಲಿ ಇರೋದಿಲ್ಲ ಅಂತ ಆಕೆ ಹೇಳಿದ್ದಳು. ಐದು ವರ್ಷದಿಂದ ಸಮಸ್ಯೆ ಇಲ್ಲದೇ, ಈಗ ಯಾಕೆ ದೂರು ಕೊಟ್ಟಳು. ಅವರು ಯಾವುದೇ ದೌರ್ಜನ್ಯವೂ ಮಾಡಿಲ್ಲ. ಯಾರದೋ ಒತ್ತಡದಿಂದ ಮಹಿಳೆ ದೂರು ಕೊಟ್ಟಿದ್ದಾಳೆ. ಭವಾನಿ ರೇವಣ್ಣ ನಮಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ದೂರುದಾರೆ ಸಾಲ ಮಾಡಿಕೊಂಡಿದ್ದಾಗ, ಭವಾನಿ ರೇವಣ್ಣನವರೇ ಅವರಿಗೆ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ರೇವಣ್ಣನವರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಈ‌ ರೀತಿ ಮಾಡಿದ್ದಾರೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿರುವುದರಲ್ಲಿ ಸತ್ಯವಿಲ್ಲ. ರೇವಣ್ಣನವರ ಮನೆಯಲ್ಲಿ ಯಾರೂ ಕೂಡ ಹಿಂಸೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಯಾವುದೋ ಒತ್ತಡಕ್ಕೆ ಸಿಲುಕಿ ದೂರುದಾರೆ ಈ ರೀತಿ ಮಾತನಾಡುತ್ತಿದ್ದಾಳೆ. ಸರಿಯಾದ ಹೆಂಗಸಾಗಿದ್ದರೆ ಐದು ವರ್ಷದ ಹಿಂದೆಯೇ ಪ್ರಶ್ನೆ ಮಾಡಬೇಕಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ವಿಚಾರ ಪ್ರಸ್ತಾಪ ಮಾಡಿಲ್ಲ. ಈಗ ಯಾವುದೋ ದುರುದ್ದೇಶ ಮತ್ತು ಒತ್ತಡದಿಂದ ಈ ರೀತಿ‌ ಮಾಡಿದ್ದಾರೆ. ಅವರ ದೂರಿನಲ್ಲಿ ಯಾವುದೇ ಸತ್ಯವಿಲ್ಲ, ಸರಿಯಾದ ರೀತಿ ತನಿಖೆ ಆಗಬೇಕು. ಪ್ರಕರಣದಿಂದ ನಮ್ಮ ಹಾಗೂ ರೇವಣ್ಣನವರ ಸಂಬಂಧ ಹಾಳಾಗುವ ಹಾಗೆ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Continue Reading
Advertisement
PM Narendra Modi met four special people in Sirsi visit
Lok Sabha Election 202447 seconds ago

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Tears Of Joy
ಆರೋಗ್ಯ12 mins ago

Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

Murugha Seer
ಕರ್ನಾಟಕ23 mins ago

Murugha Seer: ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Season Hairstyle
ಫ್ಯಾಷನ್30 mins ago

Season Hairstyle: ವೆಸ್ಟರ್ನ್‌ ಲುಕ್‌ಗೆ ಎಂಟ್ರಿ ಕೊಟ್ಟ ಟ್ರೆಡಿಷನಲ್‌ ಲುಕ್‌ನ ಎರಡು ಜಡೆಯ 3 ರೂಪ ಹೇಗಿದೆ ನೋಡಿ!

Amit Shah
ದೇಶ33 mins ago

Amit Shah: ನಿಯಂತ್ರಣ ಕಳೆದುಕೊಂಡ ಅಮಿತ್‌ ಶಾ ಇದ್ದ ಹೆಲಿಕಾಪ್ಟರ್;‌ ಸ್ವಲ್ಪದರಲ್ಲೇ ಪಾರಾದ ವಿಡಿಯೊ ಇಲ್ಲಿದೆ

IPL 2024
ಕ್ರೀಡೆ1 hour ago

IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

Hassan Pen Drive Case Where is Prajwal in Germany SIT is on lookout
ಕ್ರೈಂ1 hour ago

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Star Saree Fashion
ಫ್ಯಾಷನ್1 hour ago

Star Saree Fashion: ಪಾಸ್ಟೆಲ್‌ ಅರ್ಗಾನ್ಜಾ ಸೀರೆಯಲ್ಲಿ ಮಿಂಚಬೇಕೆ? ನಟಿ ಮೋಕ್ಷಿತಾ ಪೈ ನೀಡಿದ್ದಾರೆ 5 ಸಿಂಪಲ್‌ ಐಡಿಯಾ

Vinay Gowda Got three Film Offer
ಸ್ಯಾಂಡಲ್ ವುಡ್2 hours ago

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20246 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20247 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌