Elephant Attack : ಕಾಫಿ ತೋಟದಲ್ಲಿ ಕಾರ್ಮಿಕನ ಬೆನ್ನಟ್ಟಿ ಕೊಂದ ಕಾಡಾನೆ; ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ - Vistara News

ಕರ್ನಾಟಕ

Elephant Attack : ಕಾಫಿ ತೋಟದಲ್ಲಿ ಕಾರ್ಮಿಕನ ಬೆನ್ನಟ್ಟಿ ಕೊಂದ ಕಾಡಾನೆ; ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

Elephant Attack : ವನ್ಯಜೀವಿ ಹಾಗೂ ಮಾನವ ಸಂಘರ್ಷ ಮುಂದುವರಿದಿದ್ದು, ಹಾಸನದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾಗಿದ್ದಾರೆ.

VISTARANEWS.COM


on

Labourer dead elephant attack in Hassan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಕಾಫಿ ತೋಟದಲ್ಲಿ ಕೆಲಸ ಮುಗಿಸಿ ವಾಪಸ್‌ ಬರುವಾಗ ಕಾಡಾನೆಯೊಂದು ದಾಳಿ (Elephant Attack) ಮಾಡಿದೆ. ಕಾರ್ಮಿಕನನ್ನು ಅಟ್ಟಾಡಿಸಿ ಕೊಂದಿದೆ. ಹಾಸನ‌ ಜಿಲ್ಲೆ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ವಸಂತ್ (45) ಮೃತ ದುರ್ದೈವಿ.

ಘಟನೆ ನಡೆದು ಗಂಟೆಗಳೆ ಕಳೆದರೂ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಬಾರದಕ್ಕೆ ಗ್ರಾಮಸ್ಥರು ಕಿಡಿಕಾರಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಸ್ಥಳೀಯರು ಪಟ್ಟು ಹಿಡಿದರು. ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಸರಣಿ ಸಾವು ಸಂಭವಿಸುತ್ತಿದೆ. ಕಾಡಾನೆ ಹಾವಳಿ ನಿಯಂತ್ರಣ ಮಾಡದ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶವನ್ನು ಹೊರಹಾಕಿದರು.

ಮೃತದೇಹವಿಟ್ಟು ಪ್ರತಿಭಟನೆ

ಕಾಡಾನೆ ದಾಳಿ ಮಾಡಿದ ಜಾಗದಲ್ಲೇ ಮೃತದೇಹವಿಟ್ಟು ಸ್ಥಳೀಯರು ಪ್ರತಿಭಟಿಸಿದರು. ಘಟನಾ ಸ್ಥಳದಲ್ಲಿ ಹೆಚ್ಚು ಜನರು ಸೇರುತ್ತಿದ್ದ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಬೇಲೂರು ಮತ್ತು ಕೆಎಸ್‌ಆರ್‌ಪಿ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಬೇಲೂರು ಶಾಸಕ ಎಚ್.ಕೆ. ಸುರೇಶ್ ಹಾಗೂ ಎಸ್‌ಪಿ ಮೊಹಮ್ಮದ್ ಸುಜೀತಾ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಈ ವೇಳೆ ಘಟನಾ ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬರಬೇಕು, ಅಲ್ಲಿಯವರೆಗೂ ಶವ ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಜತೆಗೆ ಬಿಕ್ಕೋಡು ಸಮೀಪದ ಕೈಮರ ಬಳಿ ರಸ್ತೆ ತಡೆದರು.

ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಶಾಸಕ ಸುರೇಶ್‌ ಕೂಡಲೇ ಸಚಿವ ಈಶ್ವರ್ ಖಂಡ್ರೆ ಅವರಿಗೆ ಫೋನ್‌ ಕರೆ ಮಾಡಿದರು. ಇದೊಂದು ದುರಾದೃಷ್ಟಕರ ಸಂಗತಿ. ಇಂತಹ ಘಟನೆ ನಡೆಯಬಾರದಿತ್ತು, ಆದರೆ ನಾವೆಲ್ಲಾ ಏನೇ ಪ್ರಯತ್ನ ಪಟ್ಟರೂ ಇಂತಹ ಘಟನೆ ನಡೆದು ಹೋಗಿದೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಬರಬೇಕು ಎಂದು ಮನವಿ ಮಾಡಿದ್ದಾರೆ, ಆದರೆ ತುರ್ತು ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ನಾನು ಈಗ ಬರಲು ಆಗಲ್ಲ ಎಂದು ಶಾಸಕರಿಗೆ ಈಶ್ವರ್‌ ಖಂಡ್ರೆ ಉತ್ತರಿಸಿದರು.

ಇದನ್ನೂ ಓದಿ: Husband Assault : ಡಿವೋರ್ಸ್‌ಗಾಗಿ ಪತ್ನಿಗೆ ಬ್ಲ್ಯಾಕ್‌ಮೇಲ್‌; ಖಾಸಗಿ ಫೋಟೊ, ವಿಡಿಯೊ ಅಪ್ಲೋಡ್‌!

MLA HK suresh 
Labourer dead elephant attack in Hassan

ಬಳಿಕ ನಮ್ಮ‌ ಭಾಗದಲ್ಲಿ ಕಾಡಾನೆ ಸಮಸ್ಯೆ ತೀವ್ರವಾಗಿದೆ. ಬೆಳೆ ಹಾನಿ ಹೆಚ್ಚಾಗಿದೆ ಪರಿಹಾರ ಸಿಗುತ್ತಿಲ್ಲ ಇಲ್ಲ. ಮೃತ ಕುಟುಂಬಕ್ಕೆ ಈಗಲೇ ಪರಿಹಾರ ಸಿಗಬೇಕು, ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಸಿಗಬೇಕು ಎಂದು ಸಚಿವರಿಗೆ ಶಾಸಕ ಸುರೇಶ್‌ ಮಾಹಿತಿ ನೀಡಿದರು. ಈ ವೇಳೆ ಎಲ್ಲಾ ರೀತಿಯ ಪರಿಹಾರ ಕೊಡಿಸೋಣ ಎಂದ ಸಚಿವ ಈಶ್ವರ್‌, ಈ ಸಮಸ್ಯೆಗೆ ಶಾಶ್ವತ ಪರಿಹಾರದ ಬಗ್ಗೆ ನಾವು ಚರ್ಚೆ ಮಾಡೋಣ. ಈಗ ನೀವೇ ಮಾತಾಡಿ ಜನರಿಗೆ ಮನವರಿಕೆ‌ ಮಾಡಿ ಎಂದರು.

ಜಿಲ್ಲಾಧಿಕಾರಿ ವಾಹನಕ್ಕೆ ಅಡ್ಡಹಾಕಿದ ಪ್ರತಿಭಟನಾಕಾರರು

ಇತ್ತ ಬೇಲೂರು-ಅರೇಹಳ್ಳಿ ರಸ್ತೆ ತಡೆದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರ ವಾಹನಕ್ಕೆ ಅಡ್ಡ ಹಾಕಿದರು. ಹೀಗಾಗಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಎಸ್‌ಪಿ ಮಹಮದ್ ಸುಜೀತಾ, ಎಸಿ ಶೃತಿ, ತಹಸೀಲ್ದಾರ್ ಮಮತಾ ಘಟನಾ ಸ್ಥಳಕ್ಕೆ ಎರಡು ಕಿಲೋ ಮೀಟರ್ ನಡೆದು ಸಾಗಿದರು.

ಪ್ರತಿಭಟನಾಕಾರರ ಮನವೊಲಿಕೆಗೆ ಡಿಸಿ ಸತ್ಯಭಾಂ ಶತ ಪ್ರಯತ್ನ ಮಾಡಿದರೂ, ಬಗ್ಗದ ಹೋರಾಟಗಾರರು ಇವತ್ತೇ ಉಸ್ತುವಾರಿ ಹಾಗು ಅರಣ್ಯ ಸಚಿವರು ಸ್ಥಳಕ್ಕೆ ಬರಬೇಕೆಂದರು. ಸಚಿವರು ಬರದಿದ್ದರೆ ಮೃತದೇಹ ಮೇಲೆತ್ತಲು ಬಿಡಲ್ಲ ಎಂದರು. ಈ ವೇಳೆ ಡಿಸಿ ಸತ್ಯಭಾಮ ಉಸ್ತುವಾರಿ ಸಚಿವರು ನಾಳೆ ಬರುತ್ತಾರೆ ಎಂದರು. ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು, ಪ್ರತಿ ಬಾರಿ ಕಾಡಾನೆ ದಾಳಿಯಿಂದ ಸಾವು ಸಂಭವಿಸಿದಾಗ ಹೀಗೆ ಹೇಳುತ್ತೀರಿ. ಈ ಹಿಂದೆ ಇಬ್ಬರ ಸಾವಾದಾಗ ಸಚಿವರು ಬರುವುದಾಗಿ ಹೇಳಿದ್ದರೂ, ಆದರೆ ಈವರೆಗೂ ಅರಣ್ಯ ಸಚಿವರು ಸ್ಥಳಕ್ಕೆ ಬಂದಿಲ್ಲ ಎಂದು ಕಿಡಿಕಾರಿದರು.

ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿಯೇ ಪ್ರತಿಭಟನಾಕಾರರ ಸಮಸ್ಯೆಯನ್ನು ಶಾಸಕ ಎಚ್.ಕೆ.ಸುರೇಶ್ ಹಾಗೂ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆಲಿಸಿದರು. ಅರಣ್ಯ ಸಚಿವರು ಸ್ಥಳಕ್ಕೆ ಆಗಮಿಸಬೇಕು ಹಾಗೂ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಬಿಗಿಪಟ್ಟು ಹಿಡಿದರು. ಬೇಲೂರು-ಅರೇಹಳ್ಳಿ ರಸ್ತೆ ತಡೆದ ಕಾರಣಕ್ಕೆ ಇತರೆ ವಾಹನ ಸವಾರರು ಪರದಾಡಿದರು. ಸದ್ಯ ಪ್ರತಿಭಟನಾ ಸ್ಥಳದಲ್ಲೇ ಡಿಸಿ, ಎಸ್ಪಿ, ಎಸಿ, ತಹಸೀಲ್ದಾರ್ ಹಾಗೂ ಶಾಸಕರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

Prajwal Revanna Case: ವಿಡಿಯೋದ ಮೂಲ ಯಾವುದು, ಯಾವ ಐಪಿ ಅಡ್ರೆಸ್‌ನಿಂದ ಆಪ್‌ಲೋಡ್ ಆಗಿದೆ ಎಂಬುದರ ಪತ್ತೆಗೆ‌ ಎಸ್‌ಐಟಿ ಮುಂದಾಗಿದೆ. ವಿಡಿಯೋ ಮೊದಲು ತಲುಪಿದ್ದು ಯಾರಿಗೆ, ಎಲ್ಲಿಂದ, ವಿಡಿಯೋ ಮಾಡಿರುವ ಮದರ್ ಡಿವೈಸ್ ಮಾಹಿತಿ ಪತ್ತೆಗೆ ಎಸ್‌ಐಟಿ ಯತ್ನಿಸುತ್ತಿದೆ. ಶುಕ್ರವಾರ ಪ್ರಜ್ವಲ್‌ ಎಸ್ಐಟಿ ಮುಂದೆ ಹಾಜರಾಗದಿದ್ದಲ್ಲಿ ಮದರ್ ಡಿವೈಸ್ ಲೋಕೆಷನ್ ಪತ್ತೆಗೆ ಯತ್ನಿಸುವ ಸಂಭವ ಇದೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಅಶ್ಲೀಲ ವಿಡಿಯೋ ವೈರಲ್ (pen drive case video viral) ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ ಬೇಕಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal Revanna Case) ನಾಪತ್ತೆಯಾಗಿ ಒಂದು ತಿಂಗಳ ಬಳಿಕ ಹೊಸ ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದಾರೆ. ಆದರೆ ಅವರು ದೇಶದೊಳಗೇ ಇದ್ದುಕೊಂಡೇ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದರೇ ಎಂಬ ಸಂಶಯವೂ ವ್ಯಕ್ತವಾಗಿದೆ.

ನಿನ್ನೆ ಹೊಸ ವಿಡಿಯೋ ಮಾಡಿ ಹರಿಬಿಟ್ಟಿರುವ ಪ್ರಜ್ವಲ್‌, ಶುಕ್ರವಾರ, ಮೇ 31ರಂದು ಎಸ್‌ಐಟಿ (SIT) ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಸದ್ಯ ವಿಡಿಯೋವನ್ನು ಎಸ್‌ಐಟಿ ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದೆ. ವಿಡಿಯೋದ ಮೂಲ ಯಾವುದು, ಯಾವ ಐಪಿ ಅಡ್ರೆಸ್‌ನಿಂದ ಆಪ್‌ಲೋಡ್ ಆಗಿದೆ ಎಂಬುದರ ಪತ್ತೆಗೆ‌ ಎಸ್‌ಐಟಿ ಮುಂದಾಗಿದೆ. ವಿಡಿಯೋ ಮೊದಲು ತಲುಪಿದ್ದು ಯಾರಿಗೆ, ಎಲ್ಲಿಂದ, ವಿಡಿಯೋ ಮಾಡಿರುವ ಮದರ್ ಡಿವೈಸ್ ಮಾಹಿತಿ ಪತ್ತೆಗೆ ಎಸ್‌ಐಟಿ ಯತ್ನಿಸುತ್ತಿದೆ. ಶುಕ್ರವಾರ ಪ್ರಜ್ವಲ್‌ ಎಸ್ಐಟಿ ಮುಂದೆ ಹಾಜರಾಗದಿದ್ದಲ್ಲಿ ಮದರ್ ಡಿವೈಸ್ ಲೋಕೆಷನ್ ಪತ್ತೆಗೆ ಯತ್ನಿಸುವ ಸಂಭವ ಇದೆ. ಸದ್ಯ ಪ್ರಜ್ವಲ್ ರೇವಣ್ಣ ಬರುವವರೆಗೂ ಕಾಯಲು ಇಷ್ಟವಿಲ್ಲದ ಎಸ್ಐಟಿ, ಅದಕ್ಕೂ ಮುನ್ನವೇ ಪತ್ತೆ ಮಾಡಿ ಬಂಧಿಸುವ ಚಿಂತನೆ ನಡೆಸಿದೆ.

ಯಾಕೆ ಮೇ 31 ?

ಮೇ 31ರಂದು ಪ್ರಜ್ವಲ್‌ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್‌ಪೋರ್ಟ್‌ನ (Diplomatic passport) ಅವಧಿ ಅಂತ್ಯವಾಗಲಿದೆ. ಈ ಸಲ ಚುನಾಯಿತರಾದರೆ ಅವರು ಹೊಸದಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಹಳೆಯ ಪಾಸ್‌ಪೋರ್ಟ್‌ನಲ್ಲಿ ಓಡಾಡಲು ಸಾಧ್ಯವಿಲ್ಲ. ಇದೇ ಕಾರಣಕ್ಕಾಗಿ ಪ್ರಜ್ವಲ್‌ ಮೇ 31ನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ವಿರುದ್ಧದ ಎಸ್ಐಟಿ ತನಿಖೆ ಮಹತ್ವದ ಹಂತ ತಲುಪಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಲಾಗಿದೆ. ಪ್ರಜ್ವಲ್ ರೇವಣ್ಣ ಬಂದ ಬಳಿಕ ತನಿಖೆ ಮಾಡಬೇಕಿದೆ. ಅಶ್ಲೀಲ ವಿಡಿಯೋಗಳನ್ನು ಮಾಡಲಾದ ಡಿವೈಜ್ ಅನ್ನು ಪತ್ತೆಹಚ್ಚಬೇಕಿದೆ. ಅಶ್ಲೀಲ ವಿಡಿಯೋಗಳ ಕುರಿತು ಫಾರೆನ್ಸಿಕ್ ರಿಪೋರ್ಟ್‌ಗಾಗಿ ಎಸ್ಐಟಿ ಕಾಯುತ್ತಿದೆ. FSL ರಿಪೋರ್ಟ್ ಎಸ್ಐಟಿ ಕೈ ಸೇರಿದ ಕೂಡಲೇ ಚಾರ್ಜ್‌ಶೀಟ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಹೇಳಿಕೆ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ.

ಜೂನ್ ಮೊದಲ ವಾರದಲ್ಲಿ ಪ್ರಜ್ವಲ್ ಬಂದಿದ್ದೇ ಆದಲ್ಲಿ ತನಿಖೆ ನಡೆಸಿ ಸ್ಟೇಟ್ಮೆಂಟ್ ದಾಖಲಿಸಲಿದ್ದಾರೆ. ಒಂದು ವೇಳೆ ಪ್ರಜ್ವಲ್ ಜೂನ್‌ನಲ್ಲಿ ವಾಪಸ್ ಬರದೇ ಇದ್ದಲ್ಲಿ, ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ನ್ಯಾಯಾಲಯಕ್ಕೆ ಅಬ್‌ಸ್ಕಾಂಡ್‌ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ.

ಗೃಹ ಸಚಿವರು ಏನೆಂದರು?

ಪ್ರಜ್ವಲ್ ವಿಡಿಯೋ ರಿಲೀಸ್ ವಿಚಾರದಲ್ಲಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ (home minister G Parameshwara) ಹೇಳಿಕೆ ನೀಡಿದ್ದಾರೆ. “ಮೇ 31ರಂದು ಪ್ರಜ್ವಲ್‌ ಸಂಸದ ಸ್ಥಾನ ಅಂತ್ಯವಾಗಲಿದೆ. ಆಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಸೀಜ್ ಆಗುತ್ತದೆ. ಇದೆಲ್ಲವನ್ನು ತಿಳಿದುಕೊಂಡು ಬರಲು ಯೋಚನೆ ಮಾಡಿದ್ದಾರೆ ಅನ್ಸುತ್ತೆ” ಎಂದಿದ್ದಾರೆ.

“ದೇಶದೊಳಗೆ ಏನು ಪ್ರಯತ್ನ ‌ಮಾಡಬೇಕು ನಾವು ಮಾಡಿದ್ದೇವೆ. ಕೇಂದ್ರ ಸರ್ಕಾರಕ್ಕೆ ಬರೆದಿದ್ದೇವೆ, ಕೇಂದ್ರ ಗೃಹ ಇಲಾಖೆಗೆ ವಾರೆಂಟ್ ಬಗ್ಗೆ ತಿಳಿಸಿದ್ದೇವೆ. ಬ್ಲೂ ಕಾರ್ನರ್ ನೋಟೀಸ್ (blue corner notice) ಇಶ್ಯೂ ಆಗಿದೆ. ಪ್ರಜ್ವಲ್‌ ಬರದೇ ಹೋದರೆ ಇಂಟರ್‌ಪೋಲ್‌ನವರು (Interpol) ಲೊಕೇಶನ್‌ ತಿಳಿದುಕೊಂಡು ನಮಗೆ ಮಾಹಿತಿ ನೀಡುವುದು ಎಂದಿತ್ತು. ಇಂತಹ ಸಂದರ್ಭದಲ್ಲಿ ನಾನು ಬರ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸಲ ಸುಮ್ಮನಿರೋಲ್ಲ ಎಸ್‌ಐಟಿ

ಪ್ರಜ್ವಲ್ ರೇವಣ್ಣ ವಿಡಿಯೋ ಬಿಟ್ಟ ಬೆನ್ನಲ್ಲೇ ಎಸ್ಐಟಿ ಅಲರ್ಟ್ ಆಗಿದೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಕಳೆದ ಬಾರಿ ಕೂಡ ಪ್ರಜ್ವಲ್ ರೇವಣ್ಣ ಇದೇ ರೀತಿ ಕಾಲಾವಕಾಶ ಕೋರಿದ್ದರು. ಹೇಳಿದಂತೆ ವಿಚಾರಣೆಗೆ ಹಾಜರಾಗದೆ ದೂರ ಉಳಿದಿದ್ದರು. ಈ ಬಾರಿಯೂ ಹಾಗೆಯೇ ಮಾಡುವ ಸಾಧ್ಯತೆ ಕೂಡ ಇದೆ. ಹೀಗಾಗಿ ಈಗಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್‌ಗೆ ಎಸ್‌ಐಟಿ ಮುಂದಾಗಿದೆ.

ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಇಂಟರ್‌ಪೋಲ್‌ಗೂ ಎಸ್‌ಐಟಿ ಮಾಹಿತಿ ಕೋರಲಿದೆ. ಈಗಾಗಲೇ ಪ್ರಜ್ವಲ್‌ ವಿರುದ್ಧ ಲುಕ್‌ಔಟ್‌ ನೋಟೀಸ್‌ (lookout notice) ಹಾಗೂ ಬ್ಲೂ ಕಾರ್ನರ್‌ ನೋಟೀಸ್‌ ಜಾರಿ ಮಾಡಲಾಗಿದೆ. ಆತನ ವಿರುದ್ಧ ಆರೆಸ್ಟ್ ವಾರಂಟ್ ಕೂಡ ಇದೆ. ಹೀಗಾಗಿ ಎಸ್‌ಐಟಿ ಒಂದು ತಿಂಗಳಿಂದ ಏರ್‌ಪೋರ್ಟ್‌ನಲ್ಲೇ ಠಿಕಾಣಿ ಹೂಡಿದೆ. ಏರ್‌ಪೋರ್ಟ್‌ನಿಂದ ಹೊರಕ್ಕೆ ಕಾಲಿಡುವ ಮೊದಲೇ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣನನ್ನು ವಶಕ್ಕೆ ಪಡೆದು ಎಸ್‌ಐಟಿಗೆ ಒಪ್ಪಿಸಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Continue Reading

ಕ್ರೈಂ

Suspicious Death : ಕೊಪ್ಪಳದಲ್ಲಿ ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

Suspicious Death: ಕೊಪ್ಪಳದ ಮನೆಯೊಂದರಲ್ಲಿ ತಾಯಿ, ಮಗಳು, ಮೊಮ್ಮಗನ ಮೃತದೇಹಗಳು ಪತ್ತೆಯಾಗಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Suspicious Death
ರಾಜೇಶ್ವರಿ (45), ವಸಂತಾ (22) ಹಾಗೂ ಸಾಯಿ (4) ಮೃತರು
Koo

ಕೊಪ್ಪಳ: ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ಮೂವರು ಅನುಮಾನಾಸ್ಪದವಾಗಿ (Suspicious Death) ಮೃತಪಟ್ಟಿದ್ದಾರೆ. ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು‌ ಪತ್ತೆಯಾಗಿವೆ. ರಾಜೇಶ್ವರಿ (45), ವಸಂತಾ (22) ಹಾಗೂ ಸಾಯಿ (4) ಮೃತ ದುರ್ದೈವಿಗಳು.

ಹಂತಕರು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸೋಮವಾರ ರಾತ್ರಿ ತಾಯಿ ರಾಜೇಶ್ವರಿಗೆ ಮತ್ತೊಬ್ಬ ಮಗಳು ಫೋನ್ ಮಾಡಿದ್ದಾಳೆ. ಆದರೆ ಯಾರು ಫೋನ್‌ ರಿಸೀವ್ ಮಾಡಿರಲಿಲ್ಲ, ಮನೆಯ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮುಂಜಾನೆ ಬಂದು ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬೆಡ್ ರೂಮ್‌ನಲ್ಲಿ ಮಲಗಿದ್ದಲ್ಲಿ ಅಜ್ಜಿ ಮತ್ತು ಮೊಮ್ಮಗನ ಶವಗಳು ಪತ್ತೆಯಾದರೆ, ಮಗಳು ವಸಂತಾಳ ಶವ ಅಡುಗೆ ಮನೆಯಲ್ಲಿತ್ತು.

Suspicious Death

ಅಂದಹಾಗೇ ವಸಂತಾಳಿಗೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದ ವ್ಯಕ್ತಿ ಜತೆ ವಿವಾಹವಾಗಿತ್ತು. ಆದರೆ ಎರಡು ವರ್ಷದ ಹಿಂದೆ ಪತಿಯಿಂದ ದೂರವಾಗಿದ್ದ ವಸಂತಾ, ನಂತರ ಹೊಸ‌‌ಲಿಂಗಾಪುರ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದಳು. ಹೊಸ‌‌ ಲಿಂಗಾಪುರ ಬಳಿ ಬೊಂಬೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಅನ್ಯ ಧರ್ಮದ ವ್ಯಕ್ತಿ ಜತೆ ವಸಂತಾ ಸಂಬಂಧ ಹೊಂದಿದ್ದಳು ಎಂಬ ಆರೋಪವೂ ಇದೆ.

ಸದ್ಯ ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇತ್ತ ಅಡುಗೆ ಮನೆಯಲ್ಲಿ ಪಾತ್ರೆಗಳೆಲ್ಲವೂ ಚೆಲ್ಲಾಪಿಲ್ಲಿಯಾಗಿದ್ದು, ವಸಂತಾಳ ಮೂಗಿನ ರಕ್ತ ಬಂದಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪೊಲೀಸರಿಂದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

ಜಮೀನಿಗಾಗಿ ಕಿತ್ತಾಟ; ತಮ್ಮನ ಎದೆಗೆ ಚೂರಿ ಹಾಕಿ ಕೊಂದ ಅಣ್ಣ

ವಿಜಯನಗರ: ಆಸ್ತಿ ವಿವಾದ ಹಿನ್ನೆಲೆ ಚೂರಿಯಿಂದ ಇರಿದು ಸಹೋದರನ ಕೊಲೆ (Murder case) ಮಾಡಲಾಗಿದೆ. ವಿಜಯನಗರದ ಹೂವಿನಹಡಗಲಿ ತಾಲೂಕು ನಂದಿಗಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ರಮೇಶ ಹನುಮಂತಪ್ಪ ಕಿನ್ನೂರಿ (28) ಕೊಲೆಯದವರು.

ಅಣ್ಣ ಮಲ್ಲಪ್ಪನ ಜಮೀನನನ್ನು ಸಹೋದರರಿಬ್ಬರು ಹತ್ತು ವರ್ಷದ ಕರಾರಿಗೆ ಲಾವಣಿ ಹಾಕಿಕೊಂಡಿದ್ದರು. ಕರಾರು ಅವಧಿ ಮೂರು ವರ್ಷ ಇರುವಾಗಲೇ ಹೊಲ ಬಿಟ್ಟು ಕೊಡು ಎಂದು ಹಿರಿಯ ಸಹೋದರ ಮಲ್ಲಪ್ಪ ತನ್ನ ತಮ್ಮಂದಿರ ಜತೆ ಜಗಳ ಮಾಡಿದ್ದರು.

ಸಹೋದರರ ಜಗಳ ವಿಕೋಪಕ್ಕೆ ಹೋಗಿ ಅಣ್ಣ ಮಲ್ಲಪ್ಪ, ರಮೇಶನ ಎದೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಿಂದ ರಮೇಶ್ ಇದ್ದ ಜಾಗದಲ್ಲೇ ಕುಸಿದುಬಿದ್ದಾನೆ. ರಮೇಶನ ಜತೆಯಲ್ಲೆ ಇದ್ದ ಚಮನ ಸಾಬ್ ಎಂಬಾತ ಕೂಗಿ ಜನರನ್ನು ಸೇರಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ರಮೇಶ್‌ನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆ ಸಮೀಪಿಸುತ್ತಿದ್ದ ರಮೇಶ ಉಸಿರು ಚೆಲ್ಲಿದ್ದಾನೆ.

ಕೊಲೆ ಮಾಡಿದ ಮಲ್ಲಪ್ಪನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆಯ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ತಿರುವಿನಲ್ಲಿದ್ದ ಜವರಾಯ; ಸ್ಪೀಡಾಗಿ ಬಂದು ಫೆನ್ಸಿಂಗ್ ಕಂಬಕ್ಕೆ ಡಿಕ್ಕಿ, ಬೈಕ್‌ ಸವಾರ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ವರದಿ ಆಗಿವೆ. ಆನೇಕಲ್‌ನಲ್ಲಿ ಬೈಕ್‌ ಸವಾರನೊಬ್ಬ ಅತಿವೇಗ ಚಾಲನೆಗೆ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬೆಂಗಳೂರಲ್ಲಿ ಇಬ್ಬರು ಪಾದಚಾರಿಗಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident in Anekal
Koo

ಆನೇಕಲ್: ನಿಯಂತ್ರಣ ತಪ್ಪಿ ಫೆನ್ಸಿಂಗ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ (Road Accident ) ಮೃತಪಟ್ಟಿದ್ದಾರೆ. ಆನೇಕಲ್‌ನ ಕಗ್ಗಲೀಪುರ ರಸ್ತೆಯ ಬ್ಯಾಲಮರನದೊಡ್ಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಶಾನಭೋಗನಹಳ್ಳಿ ನಿವಾಸಿ ರಾಮಚಂದ್ರ (22) ಮೃತ ದುರ್ದೈವಿ.

ಸೋಮವಾರ ರಾತ್ರಿ ಬೈಕ್‌ನಲ್ಲಿ ಬರುವಾಗ ತಿರುವಿನಲ್ಲಿ ಅತಿ ವೇಗವಾಗಿ ಬಂದಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಬರುತ್ತಿದ್ದಾಗ ಬೈಕ್‌ನ ನಿಯಂತ್ರಣ ತಪ್ಪಿ ಫೆನ್ಸಿಂಗ್ ಕಂಬಕ್ಕೆ ಡಿಕ್ಕಿಯಾಗಿದೆ. ಫೆನ್ಸಿಂಗ್ ಕಂಬ ಮತ್ತು ಮುಳ್ಳಿನ ತಂತಿ ಬೇಲಿ ತಗುಲಿ ರಾಮಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕುಡಿದ ಮತ್ತಿನಲ್ಲಿ ಬೈಕ್‌ ಚಲಾಯಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಇದನ್ನೂ ಓದಿ: Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

ಕಾರು ಡಿಕ್ಕಿ ಪಾದಚಾರಿ ಮಹಿಳೆ ಸಾವು

ಬೆಂಗಳೂರಿನ ಮಾರತ್ ಹಳ್ಳಿ ಸಮೀಪದ ಬೋರ್ ವೆಲ್ ಜಂಕ್ಷನ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡ ಪಾದಚಾರಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಎಚ್ಎಎಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕಾರು ಚಾಲಕನ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಕೆಎಸ್ಆರ್‌ಟಿಸಿ ಬಸ್ ಹರಿದು ಪಾದಚಾರಿ ಸಾವು

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಟರ್ಮಿನಲ್ 3 ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹರಿದು ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಮೃತ ವ್ಯಕ್ತಿಯು 25 ವರ್ಷದ ಆಸುಪಾಸಿನಲ್ಲಿದ್ದು, ಹೆಸರು ಪತ್ತೆಯಾಗಿಲ್ಲ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Murder Case : ತುಮಕೂರಿನಲ್ಲಿ ಭೀಕರ ಹತ್ಯೆಯೊಂದು (Tumkur Murder) ನಡೆದಿದೆ. ಪತಿಯೊಬ್ಬ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನು ಕತ್ತರಿಸಿ ಬಿಸಾಡಿದ್ದಾನೆ. ಈತನ ಕ್ರೌರ್ಯತೆಗೆ ಜನರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

tumkur murder
ಕೊಲೆ ಸುದ್ದಿ ಕೇಳಿ ಮನೆ ಮುಂದೆ ಜಮಾಯಿಸಿದ ಜನರು
Koo

ತುಮಕೂರು : ಪತಿಯಿಂದಲೇ ಪತ್ನಿಯ ಭೀಕರ (Murder Case) ಕೊಲೆಯಾಗಿದೆ. ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನು ಪಾಪಿ ಪತಿ ಕತ್ತರಿಸಿದ್ದಾನೆ. ಪುಷ್ಪ (32) ಹತ್ಯೆಯಾದ ದುರ್ದೈವಿ. ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ (Tumkur Murder) ಈ ದುರ್ಘಟನೆ ನಡೆದಿದೆ.

ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾದ ಶಿವರಾಮ್ ಕೊಲೆಗಾರನಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪಾಳನ್ನು ಶಿವರಾಮ್‌ ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ.

ಮರದ ಸಾಮಿಲ್ ಒಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಮ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ಪುಷ್ಪಾ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ನಿನ್ನೆ ಸೋಮವಾರ ರಾತ್ರಿಯೂ (ಮೇ 27) ಗಲಾಟೆಯಾಗಿದ್ದು, ಅದು ವಿಕೋಪಕ್ಕೆ ತಿರುಗಿದೆ. ಬಳಿಕ ಕೋಪದ ಕೈಗೆ ಬುದ್ಧಿ ಕೊಟ್ಟ ಶಿವರಾಮ್‌ ಅಡುಗೆ ಮನೆಯಲ್ಲಿದ್ದ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ. ಶಿವರಾಮ್‌ ತನ್ನ ಮಗುವಿನ ಎದುರಿಗೆ ಕ್ರೌರ್ಯತೆಯನ್ನು ತೋರಿದ್ದಾನೆ.

ಪುಷ್ಫಾಳ ಕೂಗಾಟ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಂಡು ತುಂಡಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೈದ ಪತಿ ಶಿವರಾಮ್‌ನನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿತಕ್ಕೆ ಖರ್ಚು; ಕೇಳಿದ್ದಕ್ಕೆ ಹೆಂಡತಿಯ ಕೊಂದು ನೇಣು ಹಾಕಿಕೊಂಡ

ಬೆಳಗಾವಿ: ಇದ್ದ ಒಂದು ಎಮ್ಮೆಯನ್ನೂ ಮಾರಿ ಅದರಿಂದ ಬಂದ ಕಾಸನ್ನು ಕುಡಿತಕ್ಕೆ ಖರ್ಚು ಮಾಡಿದ ಭಂಡ ಗಂಡನನ್ನು ಆಕ್ಷೇಪಿಸಿದ್ದಕ್ಕೆ ಹೆಂಡತಿಯನ್ನು ಕೊಂದು (Murder Case) ತಾನೂ ನೇಣಿಗೆ (Self harming) ಶರಣಾಗಿದ್ದಾನೆ. ಈ ಘಟನೆ ಬೆಳಗಾವಿ (Belagavi news) ಜಿಲ್ಲೆ ಮೂಡಲಗಿ ತಾಲೂಕಿನ ಪುಲಗಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಅಣ್ಣಪ್ಪ ನಂದಿ, ಯಲ್ಲವ್ವ ನಂದಿ (41) ದುರಂತ ಅಂತ್ಯ ಕಂಡ ಗಂಡ ಹೆಂಡತಿ. ತನ್ನಲ್ಲಿದ್ದ ಎಮ್ಮೆಯನ್ನು‌ ಮಾರಿ ಬಂದ ಹಣದಿಂದ ಅಣ್ಣಪ್ಪ ಕಂಠಪೂರ್ತಿ ಕುಡಿದು ಬಂದಿದ್ದ. ನಿನ್ನೆ ಸೋಮವಾರ ಸಂಜೆ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಪತ್ನಿ ಯಲ್ಲವ್ವ ನಂದಿ, ಗಂಡನ ಈ ನಡತೆಯನ್ನು ಆಕ್ಷೇಪಿಸಿದ್ದಳು.

ಇದರಿಂದ ಜಗಳ ಹುಟ್ಟಿಕೊಂಡಿದೆ. ಹೆಂಡತಿಯ ಮೇಲೆ‌ ಮೊದಲೇ ಸಂಶಯ ಪಡುತ್ತಿದ್ದ ಪಾಪಿ ಅಣ್ಣಪ್ಪ, ಹೆಂಡತಿ ಪ್ರಶ್ನೆ ಮಾಡುತ್ತಿದ್ದಂತೆ ಆಕೆಯನ್ನು ಕೊಂದು ಹಾಕಿದ್ದಾನೆ, ನಂತರ ಮನೆಗೆ ಬಂದು ಮನೆಯ ಹೊರ ಭಾಗದ ತಗಡಿನ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಲಗೋಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
T20 World Cup 2024
ಕ್ರೀಡೆ46 seconds ago

T20 World Cup 2024: ಮಿನಿ ವಿಶ್ವಕಪ್​ ಸಮರದದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!

Cyclone Remal
ದೇಶ2 mins ago

Cyclone Remal: ರೆಮಲ್‌ ಚಂಡಮಾರುತದ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ; 16 ಮಂದಿಯನ್ನು ಬಲಿ ಪಡೆದ ಭೀಕರ ಮಳೆ

Prajwal revanna Case
ಪ್ರಮುಖ ಸುದ್ದಿ7 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

Suspicious Death
ಕ್ರೈಂ13 mins ago

Suspicious Death : ಕೊಪ್ಪಳದಲ್ಲಿ ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

Viral Video
ವೈರಲ್ ನ್ಯೂಸ್13 mins ago

Viral Video: BMW ಕಾರು ಬಾನೆಟ್‌ ಮೇಲೆ ವ್ಯಕ್ತಿ…ಬ್ಯುಸಿ ರಸ್ತೆಯಲ್ಲಿ ಬಾಲಕನ ಪುಂಡಾಟ; ವಿಡಿಯೋ ವೈರಲ್‌

Munnar Tour
ದೇಶ25 mins ago

Munnar Tour: ಪ್ರಕೃತಿಯ ನಡುವೆ ಅವಿತಿರುವ ಸೌಂದರ್ಯದ ಗಣಿ ಮುನ್ನಾರ್! ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕು

Road Accident in Anekal
ಕ್ರೈಂ47 mins ago

Road Accident : ತಿರುವಿನಲ್ಲಿದ್ದ ಜವರಾಯ; ಸ್ಪೀಡಾಗಿ ಬಂದು ಫೆನ್ಸಿಂಗ್ ಕಂಬಕ್ಕೆ ಡಿಕ್ಕಿ, ಬೈಕ್‌ ಸವಾರ ಸಾವು

T20 World Cup 2024
ಕ್ರೀಡೆ48 mins ago

T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು

Human trafficking
ದೇಶ57 mins ago

Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

Stone Quarry Collapses
ದೇಶ1 hour ago

Stone Quarry Collapses: ಕಲ್ಲಿನ ಗಣಿ ಕುಸಿದು 10 ಮಂದಿ ಜೀವಂತ ಸಮಾಧಿ; ರಕ್ಷಣಾ ಕಾರ್ಯಾಚರಣೆಗೆ ಭೀಕರ ಮಳೆ ಅಡ್ಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ18 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌