Site icon Vistara News

Elephant attack | ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

elephanth

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೆ (Elephant attack ) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆನಂದ್ ದೇವಾಡಿಗ (52) ಮೃತ ದುರ್ದೈವಿ.

ಆನಂದ್‌ ದೇವಾಡಿಗ ನಡೆದು ಹೋಗುತ್ತಿದ್ದಾಗ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಆನೆಯು ಆನಂದ್‌ ಅವರ ಮೃತದೇಹವನ್ನು ಸುಮಾರು ಅರ್ಧ ಕಿ.ಮೀ. ದೂರ ಎಳೆದೊಯ್ದಿದ್ದು, ಪೊದೆಯೊಂದರ ಹಿಂದೆ ಬಿಸಾಡಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು‌ ಮತ್ತು ಸಿಬ್ಬಂದಿ ದೌಡಾಯಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ | ಜಮೀನಿಗೆ ಹೋಗುತ್ತಿದ್ದ ರೈತನ ಮೇಲೆ ಎರಗಿದ ಕಾಡಾನೆ, ಹೊಲದಲ್ಲೇ ಹೆಣವಾದ ದುರ್ದೈವಿ

Exit mobile version