Emerging Leader: ದೇಶಕ್ಕಾಗಿ 18 ಗಂಟೆ ದುಡಿಯುವ ಮೋದಿಯವರ ಕೈ ಬಲಪಡಿಸಲು ರಾಜಕಾರಣಕ್ಕೆ: ಚನ್ನಬಸವಣ್ಣ ಬಳತೆ ಮನದ ಮಾತು - Vistara News

ಕರ್ನಾಟಕ

Emerging Leader: ದೇಶಕ್ಕಾಗಿ 18 ಗಂಟೆ ದುಡಿಯುವ ಮೋದಿಯವರ ಕೈ ಬಲಪಡಿಸಲು ರಾಜಕಾರಣಕ್ಕೆ: ಚನ್ನಬಸವಣ್ಣ ಬಳತೆ ಮನದ ಮಾತು

Emerging Leader: ವಿಸ್ತಾರ ನ್ಯೂಸ್‌ನ ಎಮರ್ಜಿಂಗ್‌ ಲೀಡರ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಯುವ ನಾಯಕ ಭಾಲ್ಕಿಯ ಚನ್ನಬಸವಣ್ಣ ಬಳತೆ ಅವರು ತಮ್ಮ ಸಮಾಜ ಸೇವೆಯ ಕನಸುಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ. ವಿಸ್ತಾರ ನ್ಯೂಸ್‌ನ ಚಂದನ್‌ ಶರ್ಮಾ ಅವರೊಂದಿಗೆ ನಡೆಸಿದ ಮಾತುಕತೆಯ ಸಾರ ಇಲ್ಲಿದೆ.

VISTARANEWS.COM


on

Channabsava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಸರ್ಕಾರಿ ಉದ್ಯೋಗವನ್ನು ತ್ಯಜಿಸಿ, ಬಾಲ್ಯದಲ್ಲಿಯೇ ಕನಸು ಕಂಡ ಸಮಾಜ ಸೇವೆಯ ಉದ್ದೇಶ ಸಾಕಾರಗೊಳಿಸಲು ರಾಜಕಾರಣದತ್ತ ಮುಖ ಮಾಡಿದವರು ಯುವ ಸಾಧಕ, ಭಾಲ್ಕಿಯ ಚನ್ನಬಸವಣ್ಣ ಕೆ ಬಳತೆ. (Channabasavanna Balte). ಎಮರ್ಜಿಂಗ್‌ ಲೀಡರ್‌ (Emerging Leader) ಕಾರ್ಯಕ್ರಮದ ಅಡಿಯಲ್ಲಿ ಅವರೊಂದಿಗೆ ವಿಸ್ತಾರ ನ್ಯೂಸ್‌ನ ಚಂದನ್‌ ಶರ್ಮಾ ನಡೆಸಿರುವ ಮಾತುಕತೆಯ ಸಾರ ಇಲ್ಲಿದೆ.

ʼʼಜೀವನದಲ್ಲಿ ನಾವು ಅಂದುಕೊಂಡಂತೆ ಯಾವುದೂ ನಡೆಯುವುದಿಲ್ಲ. ಹೀಗಾಗಿ ಬಂದದ್ದನ್ನು ಸ್ವೀಕರಿಸಿ, ಇದ್ದುದರಲ್ಲೇ ಖುಷಿ ಪಡಬೇಕು. ಈ ರೀತಿ ಆಗಬೇಕು ಎನ್ನುವ ಗುರಿ ಇರಬೇಕು. ಇದಕ್ಕಾಗಿ ನಮ್ಮ ಕೈಲಾದ ಪ್ರಯತ್ನ ಮಾಡಿ ಸುಮ್ಮನಿರಬೇಕುʼʼ ಎಂದು ಹೇಳುವ ಮೂಲಕ ಚನ್ನಬಸವಣ್ಣ ಅವರು ಮಾತು ಆರಂಭಿಸಿದರು.

ʼʼಯಾವುದೇ ಕೆಲಸ ಮೇಲಲ್ಲ, ಕೀಳಲ್ಲ. ಯಾವುದೇ ಕೆಲಸವನ್ನು ಜಬಾಬ್ದಾರಿಯಿಂದ ನಿರ್ವಹಿಸುವುದು ಮುಖ್ಯ. ಖುಷಿಯಿಂದ ಕೆಲಸ ಮಾಡಿದರೆ ಮುಖದಲ್ಲಿ ನಗು ತನ್ನಿಂದ ತಾನೇ ಹೊಮ್ಮತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

41 ವರ್ಷದ ಚನ್ನಬಸವಣ್ಣ ಅವರು ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಬಿ.ಇ ಮತ್ತು ಇಂಡಸ್ಟ್ರಿಯಲ್‌ ಸ್ಟ್ರಕ್ಚರ್‌ನಲ್ಲಿ ಎಂ.ಟೆಕ್‌ ಮಾಡಿದ್ದಾರೆ. ʼʼ2007ರಿಂದ 2017ರವರೆಗೆ ಸರ್ಕಾರಿ ಉದ್ಯೋಗ ನಿರ್ವಹಿಸಿದ್ದಾರೆ. ಬಹಳಷ್ಟು ಮಂದಿ ಸರ್ಕಾರಿ ಕೆಲಸ ಸುಲಭ ಮತ್ತು ಆರಾಮ ಎನ್ನುತ್ತಾರೆ. ಆದರೆ ಇದು ಎಲ್ಲರಿಗೂ ಅನ್ವಯವಾಗುವುದಿಲ್ಲ. ಯಾರು ಸರ್ಕಾರಿ ಕೆಲಸ ದೇವರ ಕೆಲಸ ಎಂದುಕೊಳ್ಳೊತ್ತಾರೋ ಅವರು ದಿನಕ್ಕೆ 16 ಗಂಟೆ ದುಡಿದರೂ ಕಡಿಮೆಯೇ. ನಾನು ಬೆಳಗ್ಗೆ 6-7 ಗಂಟೆಗೆ ಮನೆ ಬಿಟ್ಟರೆ ಮರಳುತ್ತಿದ್ದುದು ರಾತ್ರಿ 9-10 ಗಂಟೆಗೆ. ಹೀಗಾಗಿ ಮನೆಯವರೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಕೆಲಸದಿಂದ ಗುರುತಿಸಬೇಕು ಎನ್ನುವುದೇ ನನ್ನ ಗುರಿಯಾಗಿತ್ತುʼʼ ಎಂದು ಹೇಳಿದರು.

ಸರ್ಕಾರಿ ಕೆಲಸದಿಂದ ಸಮಾಜ ಸೇವೆಯತ್ತ…

ʼʼಸಮಾಜ ಸೇವೆ ಮಾಡಬೇಕು ಎನ್ನುವುದು ಬಾಲ್ಯದಲ್ಲೇ ನನ್ನೊಳಗೆ ಮೊಳೆತ ಕನಸಾಗಿತ್ತು. ನಮ್ಮ ಮನೆ ಹಳ್ಳಿಯಲ್ಲಿತ್ತು. ಸಹಜವಾಗಿ ಅಲ್ಲಿ ಜಾತಿ ವ್ಯವಸ್ಥೆಯ ಪದ್ಧತಿ ಆಚರಣೆಯಲ್ಲಿತ್ತು. ಆದರೆ ನಮ್ಮ ಮನೆಯಲ್ಲಿನ ಪರಿಸ್ಥಿತಿ ಭಿನ್ನವಾಗಿತ್ತು. ಮನೆಯವರು ಎಲ್ಲರಿಗೂ ಸ್ವಾತಂತ್ರ್ಯ ನೀಡಿದ್ದರು. ಅಪ್ಪ-ಅಮ್ಮ ನಮ್ಮ ಓರಗೆಯ ಮಕ್ಕಳನ್ನು ನಮ್ಮಂತೆಯೇ ಪರಿಗಣಿಸಿದ್ದರು. ಹೀಗಾಗಿ ಚಿಕ್ಕಂದಿನಿಂದಲೇ ಇತರರಿಗೆ ಸಹಾಯ ಮಾಡಬೇಕು ಎನ್ನುವ ಮನೋಭಾವ ಮೂಡಿತ್ತು.
ಇದಕ್ಕೊಂದು ಉದಾಹರಣೆ ಕೊಡುತ್ತೇನೆ. ನಾನಾಗ 10ನೇ ತರಗತಿಯಲ್ಲಿದ್ದೆ. ನನ್ನ ಸ್ನೇಹಿತ ಮನೋಹರ ಅಂತಿದ್ದ. ಆತನ ಬಳಿ 10ನೇ ತರಗತಿಯ ಪರೀಕ್ಷೆಯ ಫೀಸ್‌ ಕಟ್ಟಲು ದುಡ್ಡಿರಲಿಲ್ಲ. ಇದನ್ನು ನಾನು ತಂದೆಗೆ ತಿಳಿಸಿ ಫೀಸ್‌ಗೆ ಹಣ ಕೊಡುವಂತೆ ಮನವಿ ಮಾಡಿದ್ದೆ. ಆಗ ತಂದೆ, ಶಿಕ್ಷಣದ ಉದ್ದೇಶಕ್ಕಾದರೆ ಮನೋಹರ್‌ನಂತಹ 10 ಮಂದಿಗೆ ನೆರವು ನೀಡುತ್ತೇನೆ ಎಂದು ಸಹಾಯ ಮಾಡಿದ್ದರು. ಇನ್ನೊಂದು ಪ್ರಸಂಗವನ್ನೂ ಹೇಳಬೇಕು. ಅದು ನಾನು 3ನೇ ತರಗತಿಯಲ್ಲಿದ್ದಾಗ ನಡೆದ ಘಟನೆ. ಆಗ ಪಾರ್ಲೆಜಿ ಬಿಸ್ಕಟ್‌ ಬೆಲೆ 2 ರೂಪಾಯಿ. ತಂದೆ 20 ರೂ. ನೋಟು ನೀಡಿ 2 ಬಿಸ್ಕೆಟ್‌ ಪ್ಯಾಕ್‌ ತರುವಂತೆ ಹೇಳಿದ್ದರು. ಅಂಗಡಿಯವನು ನಾನು 50 ರೂ. ನೋಟು ನೀಡಿದ್ದೆಂದು ತಪ್ಪಾಗಿ ಅರ್ಥೈಸಿ 46 ರೂ. ಚಿಲ್ಲರೆ ನೀಡಿದ್ದ. ನಾನು ಖುಷಿಯಲ್ಲಿ ಮನೆಗೆ ಬಂದೆ. ತಂದೆಗೆ ವಿಷಯ ತಿಳಿಸಿದೆ. ಆಗ ಅವರು, ಇದು ತಪ್ಪು. ಇಂತಹ ಹಣವನ್ನು ನಾವು ತಗೋಬಾರದು. ವಾಪಸ್‌ ಕೊಟ್ಟು ಬಾ ಎಂದು ಅಂಗಡಿಗೆ ಕಳುಹಿಸಿದರು. ಇದು ನನ್ನ ಮನಸ್ಸಿನ ಮೇಲೆ ಆಳವಾದ ಪರಿಣಾಮ ಬೀರಿತ್ತುʼʼ.

ʼʼಇನ್ನು ಆಗೆಲ್ಲ ಯಾವುದೇ ವಸ್ತು ಕೊಂಡುಕೊಳ್ಳಬೇಕಿದ್ದರೆ‍ ತಂದೆ ನೇರವಾಗಿ ನನ್ನ ಕೈಗೆ ಹಣ ಕೊಡುತ್ತಿರಲಿಲ್ಲ. ಬೇರೆಯವರಿಗೆ ಹಣ ಕೊಟ್ಟು ತರಿಸಿಕೊಡುತ್ತಿದ್ದರು. ಹೀಗೆ ಚಿಕ್ಕಂದಿನಿಂದಲೇ ತಂದೆ ಶಿಸ್ತು ಬೆಳೆಸಿದ್ದರು. ಕೃಷಿಕರಾಗಿದ್ದ ಅವರಿಗೆ ಎಪಿಎಂಸಿಯಲ್ಲಿ ಅಂಗಡಿಯೂ ಇತ್ತು. ಕಾಶೆಪ್ಪ ಬಳತೆ ಅವರ ಹೆಸರು. ಕೊಟ್ಟ ಮಾತನ್ನು ಯಾವ ಕಾರಣಕ್ಕೂ ಅವರು ತಪ್ಪಿಸುವುದಿಲ್ಲ ಎಂದೇ ಜನರು ಮಾತನಾಡಿಕೊಳ್ಳುತ್ತಿದ್ದರು. ಅಷ್ಟು ಶಿಸ್ತುಬದ್ಧ ಜೀವನ ಅವರದ್ದಾಗಿತ್ತು. ಈಗಲೂ ಅದನ್ನು ಹಲವು ಮಂದಿ ನೆನಪಿಸಿಕೊಳ್ಳುತ್ತಾರೆ. ಜತೆಗೆ ನಾನು ತಂದೆಯ ಹಾದಿಯಲ್ಲೇ ನಡೆಯುತ್ತಿದ್ದೇನೆ. ನೀನೂ ಕೊಟ್ಟ ಮಾತನ್ನು ಎಂದಿಗೂ ತಪ್ಪುವುದಿಲ್ಲ ಎಂದು ಸ್ನೇಹಿತರು ಹೇಳುತ್ತಾರೆʼʼ ಎಂದು ಚನ್ನಬಸವಣ್ಣ ಹೆಮ್ಮೆಯಿಂದ ಹೇಳಿದರು. ʼʼತಂದೆ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು. ಆತ ಎಷ್ಟೇ ಕೆಳ ಹಂತದಲ್ಲಿರಲಿ ಆತನ ಜತೆಗೆ ಕುಳಿತು ಊಟ ಮಾಡುತ್ತಿದ್ದರುʼʼ ಎಂದರು.

ಸಾಧನೆಗಳ ವಿವರ

ʼʼಸಮಾಜ ಸೇವೆಯನ್ನು ಇನ್ನೊಬ್ಬರ ಕಣ್ಣಿನಲ್ಲಿ ಹೀರೋ ಆಗಬೇಕೆಂಬ ಉದ್ದೇಶದಿಂದ ಮಾಡಬಾರದು. ನಮ್ಮ ಮನಸ್ಸಿನ ಸಮಾಧಾನಕ್ಕಾಗಿ ಮಾಡಬೇಕು. ಇವತ್ತಿನ ಸಮಾಜ ಕೇವಲ ಆರ್ಥಿಕ ಭದ್ರತೆಯತ್ತಲೇ ಗಮನ ಕೇಂದ್ರೀಕರಿಸುತ್ತಿದೆ. ಧರ್ಮ, ಪ್ರೀತಿ, ನಂಬಿಕೆ ಯಾರಿಗೂ ಬೇಕಾಗಿಲ್ಲ. ಹೀಗಾಗಿ ಜನರ ಮನಸ್ಥಿತಿಯನ್ನ ಬದಲಾಯಿಸಲು ನಿಯಮಿತವಾಗಿ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಗುರುಗಳಾದ ಸಿದ್ದೇಶ್ವರ ಅಪ್ಪುಗೋಳ ಅವರ ಬಳಿ ಚರ್ಚೆ ನಡೆಸಿದ್ದೆ. ಅದಕ್ಕೆ ಅವರು, ʼನೀವು ಯಾವುದೇ ಕಾರ್ಯಕ್ರಮ ಮಾಡಿ. ಆದರೆ ಸಮಾಜ ಪರಿವರ್ತನೆಯಾಗುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡು ಮಾಡಬೇಡಿ. ನಿಮ್ಮ ಮನಸ್ಸಿಗೆ ಆನಂದ ಸಿಗುವಂತಿದ್ದರೆ ಮಾಡಿʼ ಎಂದರು. ಇದು ಸತ್ಯ ಎನಿಸಿತು ನನಗೆ. ಹೀಗಾಗಿ ಸಮಾಜ ಸೇವೆಯ ಚಿಂತನೆ ಮನಸ್ಸಿನ ಒಳಗಿನಿಂದ ಬರಬೇಕುʼʼ ಎಂದು ಹೇಳಿದರು.

ಚನ್ನಬಸವಣ್ಣ ಸುಮಾರು ಹನ್ನೆರಡು ಸಾವಿರ ವಿದ್ಯಾರ್ಥಿಗಳಿರುವ ಭಾಲ್ಕಿಯ ಹಿರೇಮಠ ಸಂಸ್ಥಾನ ವಿದ್ಯಾಪೀಠದ ಟ್ರಸ್ಟಿ, ಬಸವ ಕಲ್ಯಾಣದ ಗುರುದೇವ ಆಶ್ರಮದ ಟ್ರಸ್ಟಿ, ವಿಜಯಪುರರ ಜ್ಞಾನಯೋಗ ಆಶ್ರಮದ ಆಜೀವ ಸದಸ್ಯ, ಭಾಲ್ಕಿಯ ಜನಸೇವಾ ಟ್ರಸ್ಟ್‌ನ ಅಧ್ಯಕ್ಷ, ಬಸವ ಕಲ್ಯಾಣ ಅನುಭವ ಮಂಟಪ ಕ್ಷೇತ್ರ ಅಭಿವೃದ್ಧಿ ಸಮಿತಿಯ ಸದಸ್ಯ, ಕಾಖಂಡಕಿಯ ಸತ್ಕಾಯಕ ಫೌಂಡೇಷನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗೆ ವಿವಿಧ ಕಡೆಗಳಲ್ಲಿ ಸಕ್ರಿಯರಾಗಿರುವ ಅವರು ಆರೋಗ್ಯ, ಯೋಗ ಶಿಬಿರ ಆಯೋಜಿಸುತ್ತಿದ್ದಾರೆ.

ರಾಜಕಾರಣದತ್ತ…

ಇನ್ನಷ್ಟು ಸಮಾಜ ಸೇವೆ ಮಾಡುವ ಉದ್ದೇಶದಿಂದ ರಾಜಕಾರಣದತ್ತ ಹೆಜ್ಜೆ ಹಾಕಲು ಚನ್ನಬಸವಣ್ಣ ಮನಸ್ಸು ಮಾಡಿದ್ದಾರೆ. ಈ ಬಗ್ಗೆ ಅವರು ಹೇಳುವುದು ಹೀಗೆ: ʼʼಪ್ರಧಾನಮಂತ್ರಿ ನರೇಂದ್ರ ಮೋದಿ ಈ ವಯಸ್ಸಿನಲ್ಲಿಯೂ ಸುಮಾರು 18 ಗಂಟೆ ಕೆಲಸ ಮಾಡುತ್ತಾರೆ. ಮುಖ್ಯವಾಗಿ ಈ ವಿಚಾರದಿಂದ ನಾನು ಪ್ರಭಾವಿತನಾಗಿದ್ದೇನೆ. ನಮ್ಮ ದೇಶವನ್ನು ಹಂತಹಂತವಾಗಿ ಅಭಿವೃದ್ಧಿಪಡಿಸುವತ್ತ ಅವರು ಗಮನ ಹರಿಸಿದ್ದಾರೆ. ಪ್ರತಿಯೊಬ್ಬ ಭಾರತೀಯನಿಗೆ ಯೋಜನೆ ತಲುಪಲು ಶ್ರಮಿಸುತ್ತಿದ್ದಾರೆ. ಪ್ರತಿಯೊಬ್ಬ ನಾಯಕನೂ ತಮ್ಮ ತಮ್ಮ ಜಿಲ್ಲೆಯನ್ನು ಅಭಿವೃದ್ಧಿಪಡಿಬೇಕು ಎನ್ನುವ ಯೋಜನೆ ಹಾಕಿಕೊಳ್ಳಬೇಕು. ಆಗ ದೇಶವೇ ಉದ್ಧಾರವಾಗುತ್ತದೆ. ನಮ್ಮ ಕಾಯಕಯೋಗಿ ಬಸವಣ್ಣನ ಬಗ್ಗೆ ಸೀಮಿತ ಜನಕ್ಕೆ ಮಾತ್ರ ತಿಳಿದಿದೆ. ನನ್ನ ದೃಷ್ಟಿಕೋನದಲ್ಲಿ ಬಸವ ಕಲ್ಯಾಣದಂತಹ ಸಂಸ್ಕೃತಿಯನ್ನು ಎಲ್ಲೆಡೆಗೆ ತಲುಪಿಸುವ ಕೆಲಸ ಆಗಬೇಕು. ಜಗತ್ತಿನ ಮೊದಲ ಪಾರ್ಲಿಮೆಂಟ್‌ ಎಂದು ಕರೆಸಿಕೊಳ್ಳುವ ಇದು ಎಲ್ಲರಿಗೂ ತಿಳಿಯಬೇಕು. ಇಂತಹ ಸಾಕಷ್ಟು ಕಾರ್ಯ ನಡೆಸಬೇಕು. ಉದಾಹರಣೆಗೆ ನಮ್ಮ ಬೀದರ್‌ನಲ್ಲಿರುವ ಬಿದರಿ ಕಲೆಯನ್ನು ಎಲ್ಲೆಡೆ ಪಸರಿಸಬೇಕುʼʼ.

ಮೋದಿಯವರ ಕೈ ಬಲಪಡಿಸಬೇಕು…

ʼʼಒಂದು ದಿನವೂ ರಜೆ ಪಡೆಯದೆ ದೇಶಕ್ಕಾಗಿ ದುಡಿಯುವ ಮೋದಿ ಅವರ ಕೈ ಬಲಪಡಿಸಲು ನಾನೇನು ಮಾಡಬೇಕು ಎನ್ನುವುದರ ಬಗ್ಗೆ ಚಿಂತಿಸುತ್ತಿದ್ದೇನೆ. ನನ್ನನ್ನು ಜನರೇ ರಾಜಕಾರಣಿಯಾಗಿಸುತ್ತಿದ್ದಾರೆ. ಜನರ ಸಮಸ್ಯೆಯನ್ನು ಹೊರ ಜಗತ್ತಿಗೆ ತಿಳಿಸಲು ರಾಜಕಾರಣಕ್ಕೆ ಬರಬೇಕು ಎನ್ನುತ್ತಿದ್ದಾರೆ. ಕ್ಯಾಶ್‌ಲೆಸ್‌ ಮತ್ತು ಕಾಸ್ಟ್‌ಲೆಸ್‌ ರಾಜಕಾರಣ ನನ್ನ ಉದ್ದೇಶ. ಶಿಕ್ಷಣದಿಂದಲೇ ಇದು ಸಾಧ್ಯ ಎನ್ನುವುದು ನನ್ನ ಅಭಿಮತ. ದುಡ್ಡು ಇರುವವರು ಮೆರೆಯುತ್ತಾರೆ ಎನ್ನುವ ಮನಸ್ಥಿತಿ ಬದಲಾಗಬೇಕು. ರಾಜಕಾರಣ ಕಟ್ಟೊಗಿದೆ ಎಂದು ದೂರುವ ಬದಲು ನಮ್ಮಂತಹ ಯುವ ಜನತೆ ಇದನ್ನು ಸರಿಪಡಿಸಲು ಮುಂದಾಗಬೇಕುʼʼ ಎನ್ನುವುದು ಚನ್ನಬಸವಣ್ಣ ಅವರ ದೃಢ ನಿಲುವು.

ಗುರುಗಳೇ ಸ್ಫೂರ್ತಿ…

ʼʼನಮ್ಮ ಗುರುಗಳಾದ ಚೆನ್ನಬಸವ ಪಟ್ಟದೇವರು ಬದುಕಿದ್ದು 109 ವರ್ಷ. 107 ವರ್ಷದವರೆಗೂ ಅವರು ಸಮಾಜಕ್ಕಾಗಿ ಕೆಲಸ ಮಾಡುತ್ತಿದ್ದರು. ನಿಜಾಮನ ಕಾಲದಲ್ಲಿ ಅವರು ಹೊರಗೆ ಉರ್ದು ಬೋರ್ಡ್‌ ಹಾಕಿ ಒಳಗೆ ಕನ್ನಡ ಕಲಿಸುತ್ತಿದ್ದರು. ಅವರ ಕ್ರಾಂತಿಯ ಕಾಯಕವೇ ನನಗೆ ಸ್ಫೂರ್ತಿ. ಹಿಂದೆ ನಾನು ಸರ್ಕಾರಿ ಉದ್ಯೋಗ ತೊರೆಯುವಾಗ ಕೆಲವರು ಆಡಿಕೊಂಡು ನಕ್ಕಿದ್ದರು. ಈಗ ಅಂತಹವರೇ ಬೆನ್ನು ತಟ್ಟುತ್ತಿದ್ದಾರೆ. ಸಮಾಜ ಸಾಕಷ್ಟು ಟೀಕೆ ಮಾಡುತ್ತದೆ. ಅದನ್ನು ಮೀರಿ ಮುಂದೆ ಸಾಗಬೇಕು. ಜೀವನವನ್ನು ದುಡ್ಡಿನಲ್ಲಿ ಅಳೆಯಬಾರದು. ಇದ್ದುದರಲ್ಲೇ ಸಮಾಧಾನ ಹೊಂದಬೇಕುʼʼ ಎಂದು ಚನ್ನಬಸವಣ್ಣ ಬಳತೆ ಮನದಾಳದ ಮಾತನ್ನು ಹಂಚಿಕೊಂಡರು.

ಇದನ್ನೂ ಓದಿ: 20 ಯುವ ನಾಯಕರಿಗೆ ವಿಸ್ತಾರ ಎಮರ್ಜಿಂಗ್ ಲೀಡರ್ ಅವಾರ್ಡ್; ಡಿಕೆ ಶಿವಕುಮಾರ್‌, ಬಿವೈ ವಿಜಯೇಂದ್ರರಿಂದ ನಾಯಕತ್ವ ಪಾಠ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

VISTARANEWS.COM


on

ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಆನೆಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಲು ಕರೆದೊಯ್ಯಲಾಗಿತು. ಈ ವೇಳೆ ಮಾರ್ತಾಂಡ ಆನೆಗೆ ಕಂಜನ್ ಆನೆ ತಿವಿದ ಪರಿಣಾಮ, ನಿಯಂತ್ರಣ ತಪ್ಪಿದ ಆನೆ ಪ್ರವಾಸಿ ಮಹಿಳೆಯ ಮೇಲೆ ಬಿದ್ದಿದೆ ಎನ್ನಲಾಗಿದೆ.

ಆನೆ ಕೆಳಗೆ ಸಿಲುಕಿದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಶಿಬಿರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading
Advertisement
Latest11 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest12 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest15 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest16 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌