Site icon Vistara News

Aam Aadmi Party | ಅಡಿಕೆ ಆಮದು ನಿಲ್ಲಿಸುವಂತೆ ಆಗ್ರಹಿಸಿ ಕೈಗೊಂಡ ಉಪವಾಸ ಸತ್ಯಾಗ್ರಹ ಅಂತ್ಯ

Aam Aadmi Party hunger strike

ಶಿವಮೊಗ್ಗ: ಅಡಿಕೆ ಆಮದು ನಿಲ್ಲಿಸುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಸೋಮವಾರದಿಂದ (ಡಿ.೧೯) ಆರಂಭಿಸಿದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ (End of hunger strike) ಅಂತ್ಯಗೊಂಡಿದೆ.

ಪಕ್ಷದ ಟಿಕೆಟ್ ಆಕಾಂಕ್ಷಿ ಟಿ.ನೇತ್ರಾವತಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ನಡೆಸಿದ್ದು, ಅವರಿಗೆ ಪೊಲೀಸರು ಎಳನೀರು ಕೊಟ್ಟು ಉಪವಾಸ ಬಿಡುವಂತೆ ಮನವಿ ಮಾಡಿದರು. ಪೊಲೀಸರ ಮನವಿಗೆ ಜಗ್ಗದ ಹಿನ್ನೆಲೆಯಲ್ಲಿ ನೇತ್ರಾವತಿ ಟಿ. ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರು. ಇತರ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು ಜೀಪ್‌ನಲ್ಲಿ ಜಯನಗರ ಠಾಣೆಗೆ ಕರೆದೊಯ್ದರು. ಈ ಮೂಲಕ ಪ್ರತಿಭಟನೆ ಅಂತ್ಯಗೊಂಡಿದೆ.

ಇದನ್ನೂ ಓದಿ | Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Exit mobile version