ಕರ್ನಾಟಕ
Karnataka Election 2023: ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಪ್ರತಿ ವರ್ಷ 13 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದ ಪ್ರಧಾನಿ ಮೋದಿ
Karnataka Election 2023: ಭಾನುವಾರ ಬೆಳಗ್ಗೆ ಬೆಂಗಳೂರಲ್ಲಿ ರೋಡ್ ಶೋ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು(PM Narendra Modi).
ಶಿವಮೊಗ್ಗ, ಕರ್ನಾಟಕ: ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದರೆ ಐದು ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದೆ. ಅಂದರೆ ವರ್ಷಕ್ಕೆ 2 ಲಕ್ಷ ಉದ್ಯೋಗ ಎಂದಾಯಿತು. ಕಾಂಗ್ರೆಸ್ನ ಈ ಗ್ಯಾರಂಟಿ ಎಷ್ಟು ಸುಳ್ಳು ಎಂದು ನಾನು ಹೇಳುತ್ತೇನೆ. ಕೇವಲ 3.5 ವರ್ಷ ಆಡಳಿತ ನಡೆಸಿದ ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸರ್ಕಾರವು ಪ್ರತಿ ವರ್ಷ 13 ಲಕ್ಷ ಔಪಚಾರಿಕ ಉದ್ಯೋಗಗಳನ್ನು ಸೃಷ್ಟಿ ಮಾಡಿದೆ. ಅದು ಕೊರೊನಾದಂಥ ಸಂಕಟ ಕಾಲದಲ್ಲೂ ಈ ಸಾಧನೆ ಮಾಡಿದೆ. ಈಗ ಗೊತ್ತಾಯಿತು ಅಲ್ವಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೇಗೆ ಕರ್ನಾಟಕವನ್ನು ಹಿಂದಕ್ಕೆ ತೆಗೆದುಕೊಂಡು ಹೋಗುತ್ತದೆ ಎನ್ನುವುದಕ್ಕೆ ಇದು ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಶಿವಮೊಗ್ಗದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸುಳ್ಳು ಭರವಸೆಗಳನ್ನು ನೀಡುತ್ತಿರುವ, ಕರ್ನಾಟಕದ ಅಭಿವೃದ್ಧಿಗೆ ಕಂಟಕವಾಗಿರುವ ಕಾಂಗ್ರೆಸ್ ಬಗ್ಗೆ ಬಹಳ ಎಚ್ಚರದಿಂದ ಇರಬೇಕು ಎಂದು ಹೇಳಿದರು.
ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಕಾಂಗ್ರೆಸ್ನಿಂದ ವಿನಾಶ ಮಾತ್ರ ಸಾಧ್ಯ
ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡಲಿರುವ ಹೊಸ ಮತದಾರರಿಗೆ ನನ್ನದೊಂದು ಪ್ರಶ್ನೆ ಇದೆ. ಯಾವಾಗಲೂ ಭ್ರಷ್ಟಾಚಾರ, ತುಷ್ಟೀಕರಣದ ನೀತಿ ಅನುಸರಿಸುವ ಕಾಂಗ್ರೆಸ್ನಿಂದ ಕರ್ನಾಟಕದ ಅಭಿವೃದ್ಧಿ ಸಾಧ್ಯವೇ? ಖಂಡಿತವಾಗಿಯೂ ಸಾಧ್ಯವಿಲ್ಲ. ಈ ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ನಿಮ್ಮ ತಂದೆ ತಾಯಿ, ಅಜ್ಜ ಅಜ್ಜಿ ಅನುಭವಿಸಿದ ಸಂಕಟವನ್ನು ನೀವು ಅನುಭವಿಸಲು ಈ ಮೋದಿ ಬಿಡುವುದಿಲ್ಲ. ನಿಮ್ಮ ಭವ್ಯ ಭವಿಷ್ಯಕ್ಕೆ ಅಡಿಪಾಯ ಹಾಕುವ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಪ್ರತಿ ಎರಡು ದಿನಕ್ಕೆ ಒಂದು ಕಾಲೇಜ್ ನಿರ್ಮಿಸಿದ್ದಾರೆ ಮೋದಿ
ಈ ನಾಡಿನ ಯುವಕರಿಗೆ ಮೋದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರವು ಕಳೆದ 9 ವರ್ಷದಲ್ಲಿ ಸಾಕಷ್ಟು ಕೆಲಸಗಳನ್ನು ಯುವಕರ ಸಬಲೀಕರಣಕ್ಕೆ ಮಾಡಿದೆ. ದೇಶದಲ್ಲಿ ಪ್ರತಿ ಎರಡು ದಿನಕ್ಕೆ ಒಂದು ಕಾಲೇಜ್ ನಿರ್ಮಾಣ ಮಾಡಿದೆ. ಪ್ರತಿ ವಾರಕ್ಕೆ ಒಂದು ವಿಶ್ವವಿದ್ಯಾಲಯ ಆರಂಭಿಸಿದೆ. ದೇಶದಲ್ಲಿ 300ಕ್ಕೂ ಅಧಿಕ ವೈದ್ಯಕೀಯ ಕಾಲೇಜ್ ಆರಂಭಿಸಿದೆ. ಗ್ರೂಪ್ ಡಿ ಮತ್ತು ಸಿ ನೇಮಕಾತಿಯಲ್ಲಿದ್ದ ಸಂದರ್ಶನವನ್ನು ತೆಗೆದು ಹಾಕಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದೆ. ಮುದ್ರಾ ಮೂಲಕ 20 ಲಕ್ಷ ರೂ. ಸಾಲವನ್ನು ಯಾವುದೇ ಗ್ಯಾರಂಟಿ ಇಲ್ಲದೇ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಬೆಂಗಳೂರಲ್ಲಿ ಅಭೂತಪೂರ್ವ ಪ್ರತಿಕ್ರಿಯೆ
ಭಾನುವಾರ ಬೆಂಗಳೂರಲ್ಲಿ ಬೆಳಗ್ಗೆ ರೋಡ್ ಶೋ ಮಾಡಿದೆ. ಜನತನಾ ಜನಾರ್ದನ ದರ್ಶನಕ್ಕೆ ಹೋಗಿದ್ದೆ. ಅವರಿಂದ ಅದ್ಭುತವಾದ ಪ್ರತಿಕ್ರಿಯೆ ದೊರೆಯಿತು. ಇದರಿಂದ ಮೂಕ ವಿಸ್ಮಿತನಾಗಿದ್ದೇನೆ. ಕರ್ನಾಟಕ ನೀಡಿರುವ ಪ್ರೀತಿ, ವಿಶ್ವಾಸಕ್ಕೆ ನಾನೇನು ಹೇಳಲಿ. ರೈತ ಬಂಧು ಯಡಿಯೂರಪ್ಪ ಅವರ ನೆಲದಿಂದ ನಿಂತು ಹೇಳುತ್ತಿದ್ದೇನೆ. ನೀವು ಪ್ರೀತಿ, ವಿಶ್ವಾಸಕ್ಕೆ ಪ್ರತಿಯಾಗಿ ನಾನು ಕರ್ನಾಟಕವನ್ನು ಅಭಿವೃದ್ದಿ ಮಾಡುವ ಮೂಲಕ ಬಡ್ಡಿ ಸಮೇತ ವಾಪಸ್ ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಅಡಕೆ ಬೆಳೆಗಾರರ ನೆರವು ನೀಡಿದ್ದೇನೆ ಎಂದ ಮೋದಿ
ಬಿಜೆಪಿ ಸರ್ಕಾರವು ಅಡಕೆ ಬೆಳೆಗಾರರಿಗೆ ಎಲ್ಲ ರೀತಿಯ ನೆರವು ನೀಡುತ್ತಿದೆ. ಅಡಿಕೆ ಆಮದು ನಿಯಂತ್ರಿಸಿ ಇಲ್ಲಿನ ರೈತರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತಿದ್ದೇನೆ. 2014ರಲ್ಲಿ ಪ್ರತಿ ಕೆಜಿಗೆ ಅಡಕೆ ಕನಿಷ್ಠ ಆಮದು ಬೆಲೆ 100 ರೂ. ಇತ್ತು. ಅದನ್ನು ನಾನು 350 ಕೆ.ಜಿ.ಗೆ ಹೆಚ್ಚಿಸಿದ್ದೇನೆ. ಜಗತ್ತಿನಲ್ಲಿ ಯಾರು ಏನೆಂದರೂ ನನಗೆ ಲೆಕ್ಕಕ್ಕಿಲ್ಲ. ನನ್ನ ರೈತರಿಗೆ ಒಳ್ಳೆಯದಾಗಬೇಕು, ಅಡಕೆ ಬೆಳೆಗಾರರಿಗೆ ಒಳ್ಳೆಯದಾಗಬೇಕು. ಎಂಐಪಿ ಹೆಚ್ಚಿಸಿದ್ದರಿಂದ ಕರ್ನಾಟಕದ ರೈತರಿಗೆ, ಅಡಕೆ ಬೆಳೆಗಾರರಿಗೆ ಭಾರಿ ನೆರವು ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಬಿಜೆಪಿ ಸರ್ಕಾರವು ಒಂದೆಡೆ ಆಮದು ಮೇಲೆ ನಿಯಂತ್ರಣ ಹೇರುತ್ತಿದ್ದರೆ ಮತ್ತೊಂದೆಡೆ ಕೃಷಿ ರಫ್ತು ಹೆಚ್ಚಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಕೃಷಿ ರಫ್ತು ಬಹಳ ಕಡಿಮೆ ಇತ್ತು. ಮೋದಿ ಸರ್ಕಾರದ ಪ್ರಯತ್ನದ ಫಲವಾಗಿ ಈಗ ಭಾರತವು ಕೃಷ್ಟಿ ರಫ್ತು ಮಾಡುವ ಟಾಪ್ 10 ರಾಷ್ಟ್ರಗಳ ಸಾಲಿಗೆ ಸೇರಿಕೊಂಡಿದೆ. ಆ ಮೂಲಕ ಕೃಷ್ಟಿ ರಫ್ತು ಮಾಡುವ ರಾಷ್ಟ್ರವಾಗಿ ಹೊರ ಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಹೇಳಿದರು.
ಶರಣೆ ಅಕ್ಕ ಮಹಾದೇವಿಯನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರವು ಹೇಗೆ ಮಹಿಳಾ ಸಬಲೀಕರಣ ಮಾಡುತ್ತಿದೆ ಎಂಬುದನ್ನು ವಿವರಿಸಿದರು. ಶಾಲೆಗಳಿಗೆ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಿದ್ದೇವೆ. ಈಗ ಹೆಣ್ಣು ಮಕ್ಕಳೂ ಸೈನಿಕ ಸ್ಕೂಲ್ ಸೇರಬಹುದು. ಮೂರು ಪಡೆಗಳಲ್ಲಿ ಅವರಿಗೆ ಅವಕಾಶ ನೀಡಿದ್ದೇವೆ. ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ನಿರ್ಬಂಧಿಸಲಾಗಿತ್ತು. ನಮ್ಮ ಆಡಳಿತದಲ್ಲಿ ಮಹಿಳೆಯರಿಗೆ ಅಕ್ಕಮಹಾದೇವಿ ಪ್ರೇರಣೆ ಇದೆ, ಆಶೀರ್ವಾದ ದೊರೆತಿದೆ ಎಂದು ಪ್ರಧಾನಿ ಹೇಳಿದರು.
ಯಡಿಯೂರಪ್ಪ, ಈಶ್ವರಪ್ಪ ಭುಜ ತಟ್ಟಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ಜನರತ್ತ ಕೈ ಬೀಸಿ, ತಮ್ಮ ಅಕ್ಕಪಕ್ಕದಲ್ಲಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಕೈಗಳನ್ನು ಎತ್ತಿ ಹಿಡಿದು ಒಗ್ಗಟ್ಟು ಸೂಚಿಸಿದರು. ಬಳಿಕ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರನ್ನು ಗಟ್ಟಿಯಾಗಿ ಭುಜ ತಟ್ಟಿದರು. ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಫೋನ್ ಮಾಡಿ ಮಾತನಾಡಿದ್ದರು.
ಕರ್ನಾಟಕ
Yadgiri News: ಪರಿಸರ ಸಂರಕ್ಷಣೆಗೆ ಇರಲಿ ಎಲ್ಲರ ಕಾಳಜಿ: ಸಂಗಮೇಶ ಉಪಾಸೆ
Yadgiri News: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯ ಕನಕ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.
ಯಾದಗಿರಿ: ವಿಶ್ವ ಪರಿಸರ ದಿನಾಚರಣೆಯ (World Environment Day) ಅಂಗವಾಗಿ ಸೋಮವಾರ ಜಿಲ್ಲೆಯ ಕನಕ ವೃತ್ತದಲ್ಲಿರುವ ಮಹಾತ್ಮ ಗಾಂಧಿ (Mahatma Gandhi) ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.
ಶಾಂತಿ ಸದನ ಆಂಗ್ಲ ಮಾಧ್ಯಮ ಶಾಲೆ, ಪ್ರತೀಕ್ಷಾ ಸೇವಾ ಸಂಸ್ಥೆ, ನಗರಸಭೆ ಹಾಗೂ ಅರಣ್ಯ ಇಲಾಖೆ, ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಸಂಗಮೇಶ ಉಪಾಸೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ: ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಬಳಿಕ ಮಾತನಾಡಿದ ಅವರು, ಅರಣ್ಯ ನಾಶದಿಂದ ಈಗ ತಾಪಮಾನ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರೂ ಪರಿಸರದ ಕಾಳಜಿ ತೊರಬೇಕಿದೆ. ಪ್ರತಿಯೊಬ್ಬರೂ ಮನೆ ಮುಂದೆ ಸಸಿ ನೆಡಬೇಕಿದೆ, ಸಸಿಗಳನ್ನು ನೆಟ್ಟು ಮರ ಗಿಡಗಳನ್ನು ಬೆಳೆಸಿ ಅರಣ್ಯ ಸಂಪತ್ತು ಹೆಚ್ಚಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಶಾಂತಿ ಸದನ ಶಾಲೆಯ ಕಾರ್ಯದರ್ಶಿ ಬಸವಂತರೆಡ್ಡಿ, ಪ್ರತೀಕ್ಷಾ ಸೇವಾ ಸಂಸ್ಥೆಯ ಅಧ್ಯಕ್ಷ ಸಿದ್ದು ಪಾಟೀಲ, ಶಾಲೆ ಮಕ್ಕಳು ಹಾಗೂ ಪರಿಸರ ಪ್ರೇಮಿಗಳು ಸಸಿಗಳನ್ನು ನೆಟ್ಟರು.
ಇದನ್ನೂ ಓದಿ: Monsoon Forecast 2023 : ಹವಾಮಾನ ಇಲಾಖೆ VS ಸ್ಕೈಮೆಟ್; ಹೇಗಿರಲಿದೆ ಈ ಬಾರಿಯ ಮುಂಗಾರು ಮಳೆ?
ಕಾರ್ಯಕ್ರಮದಲ್ಲಿ ಮುಖಂಡರಾದ ಬಂದಪ್ಪ ಅರಳಿ, ಬನಶಂಕರ ಸಾಹುಕಾರ, ಸಿಎಂ ಶಿವಶರಣಪ್ಪ, ಶರಣು ಇಡ್ಲುರು, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಸುರೇಶ ಶೆಟ್ಟಿ, ಆರೋಗ್ಯ ನಿರೀಕ್ಷಕರಾದ ಶರಣಮ್ಮ, ಸಿದ್ದಾರ್ಥ, ಮಹ್ಮದ್ ಸಲೀಂ, ವಿಶ್ವರಾಧ್ಯ ಗುತ್ತೇದಾರ, ಜ್ಞಾನೇಶ್ವರಿ ನಾಟೇಕಾರ್, ಮಲ್ಲಿಕಾರ್ಜುನ ಹಾಗೂ ಇತರರು ಪಾಲ್ಗೊಂಡಿದ್ದರು.
ಕರ್ನಾಟಕ
Lok Sabha Election 2024 : ಲೋಕಸಭೆಯಲ್ಲಿ ಕಾಂಗ್ರೆಸ್ ಮಣಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಪ್ರಸ್ತಾಪ!
BJP JDS alliance: ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಅನ್ನು ಮಣಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಒಂದನ್ನು ಸಿದ್ಧ ಮಾಡಿಕೊಂಡಿದೆ ಎನ್ನಲಾಗಿದ್ದು, ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು “ಕೈ”ಗೆ ಪೆಟ್ಟುಕೊಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ (Congress-JDS) ಮೈತ್ರಿ ಮಾಡಿಕೊಂಡು ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಿದ್ದವು. ಆದರೆ, ಕೊನೆಯಲ್ಲಿ ಈ ಎರಡೂ ಪಕ್ಷಗಳು ತಲಾ 1 ಸ್ಥಾನವನ್ನು ಗೆದ್ದುಕೊಂಡರೆ ಉಳಿದ 25 + 1 ಸ್ಥಾನವನ್ನು ಬಿಜೆಪಿ ಮತ್ತು ಬೆಂಬಲಿತ ಅಭ್ಯರ್ಥಿಗೆ ಜಯ ಒಲಿದಿತ್ತು. ಆದರೆ, ಈ ಬಾರಿ ಈ ಚಿತ್ರಣವೇ ಉಲ್ಟಾ ಆಗುವ ಲಕ್ಷಣಗಳು ಕಾಣುತ್ತಿದ್ದು, 2024ರ ಲೋಕಸಭಾ ಚುನಾವಣೆಗೆ (Lok Sabha Election 2024) ಕಾಂಗ್ರೆಸ್ ಅನ್ನು ಮಣಿಸಲು ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಲೆಕ್ಕಾಚಾರಗಳೂ ಈ ಪಕ್ಷಗಳಲ್ಲಿ ನಡೆಯುತ್ತಿವೆ ಎಂಬ ಗುಸು ಗುಸು ಪ್ರಾರಂಭವಾಗಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. 135 ಸ್ಥಾನಗಳನ್ನು ಗೆದ್ದು ಬೀಗಿದೆ. ಅಲ್ಲದೆ, ಈಗಾಗಲೇ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಈಗಾಗಲೇ ಆದೇಶವನ್ನೂ ಹೊರಡಿಸಿದೆ. ಜತೆಗೆ ಮುಂದಿನ ಲೋಕಸಭೆ ಚುನಾವಣೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮುಂದಡಿ ಇಡುತ್ತಿದೆ. ಪ್ರತಿಯೊಂದು ಹೆಜ್ಜೆಯನ್ನೂ ಈ ನಿಟ್ಟಿನಲ್ಲಿ ಇಡಲಾಗುತ್ತಿದೆ. ಹೀಗಾಗಿ ಮುಂದಿನ ವರ್ಷ ಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನವನ್ನು ಗೆಲ್ಲುವ ಟಾರ್ಗೆಟ್ ಅನ್ನು ಕೈ ಪಕ್ಷ ಇಟ್ಟುಕೊಂಡಿದೆ.
ಎದುರೇಟು ಕೊಡಲು ಮಾಸ್ಟರ್ ಪ್ಲ್ಯಾನ್?
ಕಾಂಗ್ರೆಸ್ನ ಈ ಟಾರ್ಗೆಟ್ಗೆ ಎದುರೇಟು ಕೊಡಲು ಬಿಜೆಪಿ, ಜೆಡಿಎಸ್ ಪಕ್ಷಗಳ ನಡುವೆ ಮಾತುಕತೆ ನಡೆದಿದೆ. ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಎರಡಂಕಿ ದಾಟದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಅನ್ನೇ ಹೆಣೆಯಲಾಗಿದೆ. 2019ರಲ್ಲಿ ಒಂದು ಸ್ಥಾನವನ್ನು ಮಾತ್ರ ಗೆದ್ದಿರುವ ಕಾಂಗ್ರೆಸ್, ಈ ಬಾರಿ ಶತಾಯಗತಾಯ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಅಲ್ಲದೆ, ತನ್ನ ಟಾರ್ಗೆಟ್ ಕ್ಷೇತ್ರಗಳಲ್ಲಿ ಆ ನಿಟ್ಟಿನಲ್ಲಿ ಕೆಲವು ಸೂಚನೆಗಳನ್ನೂ ನೀಡಿದೆ ಎನ್ನಲಾಗಿದೆ. ಇದನ್ನು ತಡೆಯಲು ಈಗ ಬಿಜೆಪಿ ಪ್ಲ್ಯಾನ್ ಮಾಡಿದೆ.
ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ಏನಿದೆ ಲೆಕ್ಕಾಚಾರದ ಸೂತ್ರ?
ಹಳೇ ಮೈಸೂರು ಭಾಗದಲ್ಲಿ ಮಾತ್ರ ಜೆಡಿಎಸ್ಗೆ ಶಕ್ತಿ ಇದೆ. ಹೀಗಾಗಿ ಇಲ್ಲಿ ಕ್ಷೇತ್ರ ಹಂಚಿಕೆಯ ಸೂತ್ರವನ್ನು ಅನುಸರಿಸಲಾಗುತ್ತಿದೆ. ಅಂದರೆ, ಮಂಡ್ಯ, ಹಾಸನ, ತುಮಕೂರು ಮೂರು ಕ್ಷೇತ್ರ ಬಿಟ್ಟು ಕೊಟ್ಟರೆ ಮೈತ್ರಿಗೆ ಸಿದ್ಧ ಎಂದು ಜೆಡಿಎಸ್ ಹೇಳಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ, ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಅನ್ನು ಹೊಂದಿದೆ. ಹೀಗಾಗಿ ಹೈಕಮಾಂಡ್ ಮಟ್ಟದಲ್ಲಿ ಇದಕ್ಕೆ ಸಮ್ಮತಿ ಸಿಕ್ಕರೆ ಕಾಂಗ್ರೆಸ್ಗೆ ಮೈತ್ರಿ ಪಕ್ಷಗಳನ್ನು ಎದುರಿಸುವ ಸವಾಲು ತಲೆದೋರಲಿದೆ.
ಕರ್ನಾಟಕ
Raichur News: ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣಕ್ಕೆ ವಿಶೇಷ ಜಾಗೃತಿ
Raichur News: ರಾಯಚೂರು ಜಿಲ್ಲೆಯ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡುವುದರ ಜತೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣ ಹಾಕುವ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು.
ರಾಯಚೂರು: ಜಿಲ್ಲೆಯ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ (World Environment Day) ಅಂಗವಾಗಿ ಸಸಿ ನೆಡುವ ಮೂಲಕ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಗ್ರೀನ್ ರಾಯಚೂರು, ಶಿಲ್ಪಾ ಫೌಂಡೇಶನ್, ಪರ್ಯಾವರಣ ಸಂರಕ್ಷಣ ಗತಿವಿಧಿ ಸಂಸ್ಥೆ, ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರು ಹಾಕುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣ ಹಾಕುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಇದನ್ನೂ ಓದಿ: NIRF Ranking 2023 : ಬೆಂಗಳೂರು ಐಐಎಸ್ಸಿ ಸೆಕೆಂಡ್; ಲಾ ಮತ್ತು ರಿಸರ್ಚ್ನಲ್ಲಿ ಬೆಂಗಳೂರು ಫಸ್ಟ್
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಎಂ. ನತೇಶ್ ಮಾತನಾಡಿ, ವಿದ್ಯಾರ್ಥಿಗಳು, ಅಧ್ಯಾಪಕರು ಸೇರಿದಂತೆ ಎಲ್ಲರೂ ಸೇರಿ ಪರಿಸರವನ್ನು ಉಳಿಸಬೇಕಿದೆ. ಕಳೆದ ಬಾರಿ ಗ್ರೀನ್ ರಾಯಚೂರು ಸಂಸ್ಥೆಗೆ ಪರಿಸರ ರಾಜ್ಯ ಪ್ರಶಸ್ತಿ ಬಂದಿತ್ತು. ಈ ಬಾರಿ ಸಿಂಧನೂರಿನ ವನಸಿರಿ ಸಂಸ್ಥೆಗೆ ಪರಿಸರ ರಾಜ್ಯ ಪ್ರಶಸ್ತಿ ಲಭಿಸಿದೆ. ರಾಯಚೂರು ಜಿಲ್ಲೆಗೆ ಸತತವಾಗಿ ಎರಡೂ ಬಾರಿ ಪರಿಸರ ರಾಜ್ಯ ಪ್ರಶಸ್ತಿ ಒಲಿದು ಬಂದಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆ ಪರಿಸರ ಉಳಿವಿಗೆ ಮಾದರಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದರು.
ಗ್ರೀನ್ ರಾಯಚೂರು ಸಂಸ್ಥೆಯ ಗೌರವಾಧ್ಯಕ್ಷ ಕೊಂಡ ಶ್ರೀ ಕೃಷ್ಣಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆಯ ಮುಂದೆ ಒಂದು ಗಿಡ ನೆಟ್ಟರೆ ಸಾಕು ಪರಿಸರ ಉಳಿಯುತ್ತದೆ ಎಂದ ಅವರು, ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಪ್ಲೇಟ್ ಬದಲು ಸ್ಟಿಲ್ ಪ್ಲೇಟ್ ಜನರಿಗೆ ವಿತರಿಸಿ, ಪ್ಲಾಸ್ಟಿಕ್ ಬ್ಯಾನ್ ಬಗ್ಗೆ ಅರಿವು ಮೂಡಿಸುತ್ತಿರುವುದು ಗಮನಕ್ಕೆ ಬಂದಿತು. ನಮ್ಮಲ್ಲೂ ಏಕೆ ಇದನ್ನು ಅಳವಡಿಕೆ ಮಾಡಬಾರದೆಂದು ವಿಚಾರ ಮಾಡಿ, ಒಂದು ಕಾರ್ಯಕ್ರಮಕ್ಕೆ ಏನೆಲ್ಲ ವಸ್ತುಗಳು ಬೇಕು ಎಂದು ಅಧ್ಯಯನ ಮಾಡಿ, ಈಗ ಅನುಷ್ಠಾನಕ್ಕೆ ತರುವ ಪ್ರಯತ್ನವಾಗಿದೆ ಎಂದರು.
ಇದನ್ನೂ ಓದಿ: Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
ಗ್ಲಾಸ್, ಪ್ಲೇಟ್, ಸ್ಪೂನ್ ಉಚಿತವಾಗಿ ವಿತರಣೆ ಮಾಡಲು ಶುರು ಮಾಡಿದ್ದೇವೆ. ಯಾರೇ ಆಗಲಿ ನಮ್ಮನ್ನು ಸಂಪರ್ಕ ಮಾಡಿದರೆ, ಉಚಿತವಾಗಿ ಸ್ಟೀಲ್ ಪ್ಲೇಟ್ಗಳನ್ನು ಕೊಟ್ಟು ನಾವೇ ಅದನ್ನು ಮರಳಿ ತರುತ್ತವೆ. ಇದು ಬಡ ಕುಟುಂಬದ ಜನರಿಗೂ ಅನುಕೂಲವಾಗುತ್ತವೆ. ಇನ್ನು ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪ್ಲೇಟ್ ಬ್ಯಾನ್ ಮಾಡಬೇಕು, ಅದರಲ್ಲಿ ಪ್ಲಾಸ್ಟಿಕ್ ಪೇಪರ್ ಇರುತ್ತದೆ ಇದು ಜನರ ಜೀವಕ್ಕೆ ಹಾನಿಯುಂಟು ಮಾಡುತ್ತದೆ ಎಂದು ತಿಳಿಸಿದರು.
ರಿಮ್ಸ್ ನಿರ್ದೇಶಕ ಡಾ.ಬಸವರಾಜ್ ಪೀರಾಪುರ ಮಾತನಾಡಿ, ಪ್ರತಿ ವಿದ್ಯಾರ್ಥಿಗೆ ಒಂದು ಸಸಿ ನೆಡುವ ಮತ್ತು ನಿರ್ವಹಣೆ ಮಾಡುವ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ರಿಮ್ಸ್ ಆವರಣದಲ್ಲಿ ಸಾಕಷ್ಟು ಗಿಡ ಮರಗಳನ್ನು ನೆಡಲಾಗಿದೆ. ಹೊರಾಂಗಣಕ್ಕೂ ನಮ್ಮ ಕ್ಯಾಂಪಸ್ಗೂ ಹೋಲಿಕೆ ಮಾಡಿದರೆ, ನಮ್ಮಲ್ಲಿ ಬಿಸಿಲಿನ ತಾಪಮಾನ ಒಂದು ಡಿಗ್ರಿ ಕಡಿಮೆ ಇರುತ್ತದೆ ಎಂದರು.
ಶಿಲ್ಪಾ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥ ವಿಷ್ಣುಕಾಂತ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರೀನ್ ರಾಯಚೂರು ಸಂಸ್ಥೆಯ ಅಧ್ಯಕ್ಷೆ ಸರಸ್ವತಿ ಪರಿಸರ ರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಇದನ್ನೂ ಓದಿ: Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್
ಈ ಸಂದರ್ಭದಲ್ಲಿ ರಾಜೇಂದ್ರ, ವೆಂಕಟೇಶ್, ಸಂದ್ಯಾ ನಾಯ್ಕ್, ಗಿರೀಶ್, ಡಾ. ಅಮರವರ್ಮ ಹಾಗೂ ಇತರರು ಪಾಲ್ಗೊಂಡಿದ್ದರು.
ಕರ್ನಾಟಕ
World Environment Day : ಕೆರೆ ಉಳಿಸಿ ಮರ ಬೆಳೆಸಿ ಎಂದ ಸಾಲುಮರದ ತಿಮ್ಮಕ್ಕ; ವಿಸ್ತಾರ ಅಭಿಯಾನಕ್ಕೆ ಭಾರಿ ಸ್ಪಂದನೆ
World Environment Day: ಎಲ್ಲೆಡೆ ಪರಿಸರ ದಿನವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದೆ. ಗಿಡ ನೆಡುವ ಕಾರ್ಯಕ್ರಮದ ಜತೆಗೆ ಶಾಲಾ-ಕಾಲೇಜುಗಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ಕೂಡ ಸಾಥ್ ನೀಡಿದ್ದಾರೆ.
ಮೈಸೂರು: ಹಸಿರೇ ಉಸಿರಾಗಿದ್ದು, ಕಾಡು ಬೆಳೆದರಷ್ಟೇ ನಾಡು ಉಳಿಯಲು ಸಾಧ್ಯವಾಗಿದೆ. ಹೀಗಾಗಿ ಕೆರೆ ಉಳಿಸಿ, ಮರ ಬೆಳೆಸಿ. ಗಿಡ ನೆಟ್ಟರೆ ಮರವಾಗುತ್ತದೆ, ನನ್ನಂಥ ಇಳಿ ವಯಸ್ಸಿನವರಿಗೆ ನೆರಳಾಗುತ್ತದೆ ಎಂದು ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ತಿಳಿಸಿದರು. ವಿಶ್ವ ಪರಿಸರ ದಿನಾಚರಣೆ (World Environment Day) ಹಿನ್ನೆಲೆ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಶಾಸಕ ಜಿ.ಡಿ.ಹರೀಶ್ಗೌಡ, ಶಿಕ್ಷಕರು, ಮುಖಂಡರು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನನಗೆ ನನ್ನ ಪತಿಗೆ ಏನೂ ಇರಲಿಲ್ಲ. ಆಗ ಮರ ನೆಟ್ಟು ಬೆಳೆಸಿದೆವು. ಈಗ ಎಲ್ಲ ಸೌಲಭ್ಯ, ಸೌಕರ್ಯಗಳೂ ಇವೆ. ಆದಷ್ಟು ಕೆರೆ, ಕಲ್ಯಾಣಿ ಕಟ್ಟಿಸಿ, ಇದರಿಂದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರು ಸಿಗುತ್ತದೆ ಎಂದು ಸಲಹೆ ನೀಡಿದರು.
ಮೆಡಿಕಲ್ ವಿದ್ಯಾರ್ಥಿಗಳ ಪರಿಸರ ಕಾಳಜಿ
ರಾಯಚೂರಿನಲ್ಲಿ ವಿಸ್ತಾರ ನ್ಯೂಸ್ ಪರಿಸರ ಕಾಳಜಿಗೆ ರಿಮ್ಸ್ ಆಸ್ಪತ್ರೆಯ ಮೆಡಿಕಲ್ ವಿದ್ಯಾರ್ಥಿಗಳು ಸಾಥ್ ನೀಡಿದರು. ಕ್ಯಾಂಪೆಸ್ನಲ್ಲಿ ಸಸಿ ನೆಟ್ಟು, ಮೂರು ಜನ ವಿದ್ಯಾರ್ಥಿಗಳಿಗೆ ಒಂದು ಸಸಿ ನಿರ್ವಹಣೆಯ ಜವಾಬ್ದಾರಿ ನೀಡಲಾಯಿತು. ಪರಿಸರ ದಿನದಂದು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಗ್ರೀನ್ ರಾಯಚೂರು, ಶಿಲ್ಪಾ ಫೌಂಡೇಶನ್, ರಿಮ್ಸ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಯುಕ್ತಾಶಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಎಲೆಗಳಿಂದ ತಯಾರಾದ ಸೆಲ್ಫಿ ಬಾಕ್ಸ್
ಹಾವೇರಿಯಲ್ಲಿಯು ವಿಸ್ತಾರ ನ್ಯೂಸ್ ಹಾಗೂ ಎಂ ಆರ್ ಎಂ ಶಾಲೆ, ಎಂಆರ್ ಎಂ ಪಿಯು ಕಾಲೇಜು ಸಹಯೋಗದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ನಗರದ ಶಿವಾಜಿನಗರ ನಾಲ್ಕನೇ ಕ್ರಾಸ್ನಲ್ಲಿರುವ ಶಾಲೆಯ ಆವರಣದಲ್ಲಿ ಪುಟಾಣಿ ಮಕ್ಕಳು ಸಸಿ ನೆಟ್ಟರು. ಬಳಿಕ ಜಾಥಾ ನಡೆಸಿ ಜನರಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಿದರು. ವಿಶೇಷ ಎಂದರೆ ಶಾಲಾ ಆವರಣದಲ್ಲಿ ಹಸಿರು ಎಲೆಯಿಂದ ತಯಾರಿಸಿದ್ದ ಸೆಲ್ಫಿ ಬಾಕ್ಸ್ನಲ್ಲಿ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು. ಹಸಿರು ಎಲೆಗಳನ್ನು ಕಟ್ಟಿಕೊಳ್ಳುವ ಮೂಲಕ ಮಕ್ಕಳು ವಿಶಿಷ್ಟವಾಗಿ ಪರಿಸರ ಜಾಗೃತಿ ಮೂಡಿಸಿದ್ದು ಎಲ್ಲರ ಗಮನ ಸೆಳೆಯಿತು.
ಇತ್ತ ರಾಣೆಬೆನ್ನೂರಿನಲ್ಲಿ ನಗರದ ರೋಟರಿ ಪ್ರೌಢಶಾಲೆಯಲ್ಲಿ ಸಸಿ ನೆಡಲಾಯಿತು. ರೋಟರಿ ಕ್ಲಬ್, ರೋಟರಿ ಆಂಗ್ಲ ಮಾಧ್ಯಮ ಶಾಲೆ , ರೋಟರಿ ವಿಜ್ಞಾನ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಥ್ ನೀಡಿದರು. ಶಿಗ್ಗಾವಿಯ ರಂಭಾಪುರಿ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಸಂಭ್ರಮದಿಂದ ಪರಿಸರ ದಿನವನ್ನು ಆಚರಿಸಿದರು.
ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ಗಿಡ ನೆಟ್ಟರು ಸಚಿವ ಕೆ. ಎಚ್ ಮುನಿಯಪ್ಪ
ದೇವನಹಳ್ಳಿ ಪಟ್ಟಣದ ಚಿಕ್ಕಕೆರೆ ಬಳಿ ಪರಿಸರ ದಿನದ ಅಂಗವಾಗಿ ಗಿಡ ನೆಡಲಾಯಿತು. ಬಯೋಮಾ ಎನ್ವಿರಾಲ್ಮೆಂಟ್ ಟ್ರಸ್ಟ್ ಸಹಯೋಗದಿಂದ ನಿರ್ಮಾಣ ಮಾಡಿದ ವಾಟರ್ ಪಿಲ್ಟರ್ ನಿರ್ಮಾಣಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ ನೀಡಿದರು. ಸಿಎಸ್ಆರ್ ನಿಧಿಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ವಾಟರ್ ಪ್ಲಾಂಟ್ ಉದ್ಘಾಟನೆ ಮಾಡಿ, ಗಿಡ ನೆಟ್ಟು ನೀರೆರೆದರು. ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಒಂದೊಂದು ಗಿಡ ನೆಡುವಂತೆ ಮನವಿ ಮಾಡಿದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ21 hours ago
Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
-
ಕರ್ನಾಟಕ22 hours ago
Ullal News: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಯು.ಟಿ. ಖಾದರ್
-
ಕರ್ನಾಟಕ13 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ21 hours ago
Shivamogga News: ಶಿಕಾರಿಪುರದಲ್ಲಿ ರಾಷ್ಟ್ರಕೂಟರ ಕಾಲದ ಪ್ರಾಚ್ಯಾವಶೇಷಗಳು ಪತ್ತೆ
-
ಕರ್ನಾಟಕ11 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ23 hours ago
Sulochana Latkar: ಬೆಳಗಾವಿಯಲ್ಲಿ ಹುಟ್ಟಿ ಬಾಲಿವುಡ್ನಲ್ಲಿ ಮಿಂಚಿದ್ದ ನಟಿ ಸುಲೋಚನಾ ಲಾಟ್ಕರ್ ಇನ್ನಿಲ್ಲ
-
ದೇಶ13 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ