Site icon Vistara News

Madhu Swamy: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ಒನ್‌ವೇಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ!

Ex Karnataka Minister JC Madhu Swamy Car Met An Accident In ChikmagalurEx Karnataka Minister JC Madhu Swamy Car Met An Accident In Chikmagalur

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್‌ ಬಳಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ (Madhu Swamy) ಅವರ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru Honnavar Highway) ಒನ್‌ವೇನಲ್ಲಿ ಬರುತ್ತಿದ್ದ ಗೂಡ್ಸ್‌ ವಾಹನ ತಪ್ಪಿಸಲು ಹೋಗಿ ಮಾಜಿ ಸಚಿವರ ಕಾರು ಮತ್ತೊಂದು ಕಾರಿಗೆ (Car Accident) ಡಿಕ್ಕಿಯಾಗಿದೆ. ಅದೃಷ್ಟವಶಾತ್‌, ಮಾಧುಸ್ವಾಮಿ ಹಾಗೂ ಅವರ ಕಾರು ಚಾಲಕ ಪರಾರಿಯಾಗಿದ್ದಾರೆ.

ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ ಪ್ರಚಾರ ಮಾಡಲು ಬೀರೂರಿಗೆ ತೆರಳುತ್ತಿದ್ದರು. ಬೀರೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲು ಅವರು ಕಾರಿನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಅವರ ಕಾರು ಲಘು ಅಪಘಾತಕ್ಕೀಡಾಗಿದೆ. ಇನ್ನು, ಬೀರೂರು ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಬೃಹತ್‌ ಸಮಾವೇಶದಲ್ಲಿ ಬಳಿಕ ಮಾಧುಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಲ ತಿಂಗಳ ಹಿಂದಷ್ಟೇ ಕಲಬುರಗಿ ಜಿಲ್ಲೆಯ ಸಣ್ಣೂರ್ ಕ್ರಾಸ್ ಬಳಿ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್ ಅವರ ಕಾರು ಅಪಘಾತಕ್ಕೀಡಾಗಿತ್ತು. ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಶಾಸಕ ಬಸವರಾಜ್ ಮತ್ತಿಮೂಡ್‌ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಗಾಯಗೊಂಡ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕಲಬುರಗಿಯ ಸಣ್ಣೂರ್ ಕ್ರಾಸ್ ಬಳಿ ಬರುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಪಕ್ಕದಲ್ಲಿ ಕಾರು ಪಲ್ಟಿಯಾಗಿ ಬಿದ್ದಿತ್ತು. ಹೀಗೆ ಪಲ್ಟಿಯಾಗಿದ್ದರಿಂದ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಅಲ್ಲದೆ, ಚಾಲಕನಿಗೂ ಗಾಯಗಳಾಗಿದ್ದವು. ಆ ಭಾಗವಾಗಿ ಬರುತ್ತಿದ್ದ ಇತರೆ ವಾಹನಗಳ ಸವಾರರು ರಕ್ಷಣೆಗೆ ಧಾವಿಸಿದ್ದರು. ಬಳಿಕ ಚಾಲಕ ಹಾಗೂ ಶಾಸಕರನ್ನು ಕಾರಿನಿಂದ ಹೊರಕ್ಕೆ ತಂದು ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ: Singer Mangli: ಕಾರು ಅಪಘಾತದಲ್ಲಿ ‘ಕಣ್ಣೇ ಅದಿರಿಂದಿ’ ಖ್ಯಾತಿಯ ಗಾಯಕಿಗೆ ಗಾಯ

Exit mobile version