Site icon Vistara News

ಕೌಟುಂಬಿಕ ಕಲಹ: ಅತ್ತಿಗೆಯನ್ನೇ ಕತ್ತಿಯಿಂದ ಕಡಿದು ಕೊಂದ ಮೈದುನ, ಮಲಪ್ರಭಾ ನದಿಗೆ ಹಾರಿದ ಮಹಿಳೆ

ಧಾರವಾಡ/ಬಾಗಲಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರ ಕೊಲೆ ನಡೆದಿದೆ. ಜತೆಗೆ ಒಬ್ಬ ಮಹಿಳೆ ನದಿಗೆ ಹಾರಿದ್ದಾರೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನೇ ಕುಡುಗೋಲಿನಿಂದ ಕುತ್ತಿಗೆ ಹೊಡೆದು ಕೊಲೆ ಮಾಡಿದ್ದಾನೆ. ಅನಸೂಯಾ ಮೆಣಸಿನಕಾಯಿ (38) ಕೊಲೆಯಾಗಿರುವ ಮಹಿಳೆ. ಮನೆಯಲ್ಲಿ ದಿನ ನಿತ್ಯವೂ ಗಲಾಟೆ ಮಾಡುತ್ತಿದ್ದ ಮೈದುನನ್ನು ಈಕೆ ಪ್ರಶ್ನೆ ಮಾಡಿದ್ದೇ ಕೊಲೆಗೆ ಕಾರಣ ಎಂದು ಹೇಳಲಾಗಿದೆ. ಕೊಲೆಗಾರ ಮೈದುನನ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಕುಂದಗೋಳ ಪೊಲೀಸರು ಬಲೆ ಬೀಸಿದ್ದಾರೆ.

ನದಿಗೆ ಹಾರಿದ ಮಹಿಳೆ
ಮನೆಯಲ್ಲಿ ನಿತ್ಯ ನಡೆಯುತ್ತಿರುವ ಕೌಟುಂಬಿಕ ಕಲಹದಿಂದ ಬೇಸತ್ತಿರುವ ಮಹಿಳೆಯೊಬ್ಬರು ಮಲಪ್ರಭಾ ನದಿಗೆ ಹಾರಿ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಾಮಥಾಳ ಗ್ರಾಮದ ಬಳಿ ಮಲಪ್ರಭಾ ನದಿಗೆ ಅನ್ನಪೂರ್ಣ ನಾಗರಾಳ(೫೨) ಹಾರಿದ್ದಾರೆ. ಈಕೆ ಗುಳೇದಗುಡ್ಡ ಪಟ್ಟಣದ ಕಂಟಿಪೇಟೆ ನಿವಾಸಿ. ಅವರು ಮನೆಯಲ್ಲಿ ನಿತ್ಯವೂ ನಡೆಯುತ್ತಿದ್ದ ಜಗಳದಿಂದ ಬೇಸತ್ತು ಪ್ರಾಣ ಕಳೆದುಕೊಳ್ಳಲು ಮುಂದಾಗಿದ್ದಾರೆ. ಈ ನಡುವೆ ಮಹಿಳೆ ಓಡಿ ಹೋಗಿ ನದಿಗೆ ಹಾರುವುದನ್ನು ಗಮನಿಸಿದ ಸ್ಥಳೀಯ ಯುವಕರು ಕೂಡಲೇ ಆಕೆಯನ್ನು ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ | Crime News | ಪುಟ್ಟ ಮಕ್ಕಳನ್ನು ಮಲಗಿಸಿ ಪತ್ನಿಯನ್ನು ಕತ್ತು ಕೊಯ್ದು ಕೊಲೆ ಮಾಡಿದ ಪತಿ: ಕೊನೆಗೆ ತಾನೇ ಕೈ ಕೊಯ್ದುಕೊಂಡ

Exit mobile version