Site icon Vistara News

Snake Bite: ವಿಷಪೂರಿತ ಹಾವು ಕಡಿದು ಯುವ ರೈತ ಸಾವು

Farmer death in indi

#image_title

ವಿಜಯಪುರ: ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ವಿಷಪೂರಿತ ಹಾವು ಕಡಿದು ಯುವ ರೈತ ಮೃತ ಪಟ್ಟಿರುವ ಘಟನೆ (Snake Bite) ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆಯ ತೆಗ್ಗಿಹಳ್ಳಿ ತೋಟದ ಬಳಿ ನಡೆದಿದೆ. ಮಾಳಪ್ಪ ರಾಮಣ್ಣ ಹೂಗಾರ (25) ಮೃತರು.

ಕೃಷಿ ಜಮೀನಿನಲ್ಲಿ ನೀರು ಹಾಯಿಸುವ ವೇಳೆ ಹಾವು ಕಚ್ಚಿದೆ. ಹೀಗಾಗಿ ಮಾಳಪ್ಪನನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ನಂತರ ಹಾವನ್ನು ಗ್ರಾಮಸ್ಥರು ಕೊಂದು ಹಾಕಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Fraud Case: ಡೇಟಿಂಗ್‌ ಆ್ಯಪ್‌ನಲ್ಲಿ ಅನಿರುದ್ಧ್‌ ಆಗಿ ಬದಲಾದ ಮುದಾಸಿರ್;‌ ಎಲ್ಲವನ್ನೂ ಮುಗಿಸಿ ಕಾಸೂ ಪಡೆದ!

ಇಳಕಲ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬಸ್ ನಿಲ್ದಾಣದ ಮಿಲ್ಕ್ ಪಾರ್ಲರ್ ಹಿಂಭಾಗದಲ್ಲಿ ಸುಮಾರು 30 ವರ್ಷದ ಆಸುಪಾಸಿನ ವ್ಯಕ್ತಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ಜೇಬಲ್ಲಿ ಬಾಗಲಕೋಟೆ-ಇಳಕಲ್ ಬಸ್ ಟಿಕೆಟ್ ಪತ್ತೆಯಾಗಿದೆ. ಸ್ಥಳಕ್ಕೆ ಇಳಕಲ್ ಶಹರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಮಾಹಿತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Exit mobile version