Karnataka Drought : ರೈತರೇ, ಬರ ಪರಿಹಾರ ಬೇಕಿದ್ದರೆ ಹೀಗೆ ಮಾಡಿ; 2 ವಾರ ಮಾತ್ರ ಕಾಲಾವಕಾಶ! - Vistara News

ಕರ್ನಾಟಕ

Karnataka Drought : ರೈತರೇ, ಬರ ಪರಿಹಾರ ಬೇಕಿದ್ದರೆ ಹೀಗೆ ಮಾಡಿ; 2 ವಾರ ಮಾತ್ರ ಕಾಲಾವಕಾಶ!

Karnataka Drought : ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಿಂದ ಪರಿಹಾರ ನೀಡುವ ಕಾರ್ಯಕ್ಕೆ ಚಾಲನೆ ಸಿಗುತ್ತದೆ. ಆದರೆ, ರೈತರಿಗೆ ಬರ ಪರಿಹಾರ ಸಿಗಬೇಕು ಎಂದಿದ್ದರೆ ಮೊದಲು ಫ್ರೂಟ್ಸ್‌ ತಂತ್ರಾಂಶದಲ್ಲಿ ಅಗತ್ಯ ದಾಖಲೆಯನ್ನು ಸಲ್ಲಿಸಬೇಕು.

VISTARANEWS.COM


on

Fruits and Karnataka Drought
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದೆ. 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ ಹೊರಗುಳಿದಂತೆ ಆಗಿದೆ. ಈಗಾಗಲೇ ರಾಜ್ಯ ಸರ್ಕಾರ (Karnataka Government) ಸಹ 324 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈಗ ರೈತರು ಬರ ಪರಿಹಾರವನ್ನು ಪಡೆಯಬೇಕೆಂದರೆ ಅದಕ್ಕೆ 15 ದಿನಗಳ ಒಳಗೆ ರಾಜ್ಯದ ಫ್ರೂಟ್ಸ್‌ (FRUITS Karnataka) ಪೋರ್ಟಲ್‌ನಲ್ಲಿ ಕೆಲವು ಮಾಹಿತಿಯನ್ನು ಭರ್ತಿ ಮಾಡಬೇಕಿದೆ.

ಫ್ರೂಟ್ ಐಡಿಯಲ್ಲಿ (FRUITS ID) ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Revenue Minister Krishna ByreGowda) ಹೇಳಿದ್ದಾರೆ. ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ (Fruits Data) ಭರ್ತಿ ಮಾಡಿಸಬೇಕು. ಇದರಿಂದ ಅಕ್ರಮಗಳು ತಪ್ಪುವುದಲ್ಲದೆ, ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಒಂದು ತಿಂಗಳೊಳಗೆ ಇದನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Ration Card : ಹೀಗಿದ್ದರೆ 3.26 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು? ಸರ್ಕಾರದ ಗ್ಯಾರಂಟಿಗೂ ಕೊಕ್ಕೆ?

ಇದಕ್ಕೆ ಬೇಕು ಎಫ್‌ಐಡಿ ಸಂಖ್ಯೆ (FID Number)

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ (FID number) ಕಡ್ಡಾಯವಾಗಿದೆ. ಇದನ್ನು ಕೃಷಿ ಇಲಾಖೆಯಿಂದ ಮಾಡಿಸಿಕೊಳ್ಳಬೇಕು. ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಈ ನಂಬರ್ ಅತಿ ಅವಶ್ಯಕವಾಗಿದೆ.

ಬರ ಪರಿಹಾರಕ್ಕಾಗಿ FID ನಂಬರ್‌ ಬೇಕೇ ಬೇಕು

ಬರ ಪರಿಹಾರದ ಹಣವನ್ನು ರೈತರು ಪಡೆದುಕೊಳ್ಳಬೇಕು ಎಂದರೆ ಇದಕ್ಕೆ ಎಫ್‌ಐಡಿ ಸಂಖ್ಯೆಯನ್ನು ಹೊಂದಬೇಕಾಗಿರುತ್ತದೆ. ಇಲ್ಲದಿದ್ದರೆ ಸರ್ಕಾರ ನಿಮ್ಮ ಖಾತೆಗೆ ಹಣ ಮಾಡುವುದಿಲ್ಲ. ಇಲ್ಲಿ ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆಯನ್ನು ಮಾಡಲಾಗಿದೆ.

ಎಫ್‌ಐಡಿ ಮಾಡಿಸದವರು ಈಗ ಏನು ಮಾಡಬೇಕು?

ಇದುವರೆಗೂ ಎಫ್‌ಐಡಿ ಮಾಡಿಸದೇ ಇದ್ದರೆ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಇಲ್ಲವೇ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಎಫ್‌ಐಡಿ ಮಾಡಿಸಬೇಕು.

“ಪ್ರೂಟ್ಸ್” ನಂಬರ್ ಎಂದರೆ ಏನು? ಏಕೆ ಉಪಯೋಗ?

ಇದು ರೈತರಿಗಾಗಿ ಮಾಡಿರುವ ಪೋರ್ಟಲ್‌ ಆಗಿದೆ. ಕೃಷಿ ಜಮೀನಿನ ಮಾಹಿತಿಯನ್ನು ಇದರಲ್ಲಿ ನೀಡಲಾಗುತ್ತದೆ. ಈ ಪೋರ್ಟಲ್‌ ಮೂಲಕ ನೋಂದಾಯಿಸಿಕೊಂಡಾಗ ರೈತರಿಗೆ ಎಫ್ಐಡಿ ನಂಬರ್ ಲಭ್ಯವಾಗುತ್ತದೆ. ಇಲ್ಲಿ ಒಮ್ಮೆ ಎಫ್‌ಐಡಿ ನಂಬರ್‌ ಅನ್ನು ಪಡೆದರೆ ಆ ರೈತರ ಸಂಪೂರ್ಣ ಜಮೀನಿನ ಮಾಹಿತಿಯು ಇಲ್ಲಿ ಸಿಗುತ್ತದೆ. ಜಮೀನಿನ ವಿವರ, ಬೆಳೆದ ಬೆಳೆಗಳ ಸಹಿತ ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯಗಳನ್ನು ಪಡೆಯಲು ನೋಂದಾಯಿಸಿಕೊಳ್ಳಬಹುದು.

ನೋಂದಣಿ ಹೇಗೆ? ಯಾವೆಲ್ಲ ದಾಖಲೆಗಳು ಬೇಕು?

ಸಮೀಪದ ಕೃಷಿ ಇಲಾಖೆ (ಹೋಬಳಿಯ ರೈತ ಸಂಪರ್ಕ ಕೇಂದ್ರ), ತೋಟಗಾರಿಕೆ ಇಲಾಖೆಗೆ ದಾಖಲೆಗಳೊಂದಿಗೆ ರೈತ ಭೇಟಿ ನೀಡಬೇಕು.

ಆರ್.ಟಿ.ಸಿ / ಪಹಣಿ / ಉತಾರ್, ಆಧಾರ್‌ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್‌ನ ಪಾಸ್ ಪುಸ್ತಕದ ಪ್ರತಿ, ಪಾಸ್‌ಪೋರ್ಟ್ ಅಳತೆಯ ಫೋಟೊ, ಮೊಬೈಲ್ ನಂಬರ್ ನೀಡಿದರೆ ನಿಮ್ಮ ಹೆಸರು ಪೋರ್ಟಲ್‌ನಲ್ಲಿ ಸೇರ್ಪಡೆಗೊಂಡು ಬಳಿಕ ಎಫ್.ಐ.ಡಿ. (FID) ನಂಬರ್ ದೊರೆಯುತ್ತದೆ.

ಮೊಬೈಲ್‌ನಲ್ಲಿಯೇ FID ಸಂಖ್ಯೆ ಪಡೆಯಿರಿ!

ಎಫ್‌ಐಡಿ ಸಂಖ್ಯೆಯನ್ನು ನೀವು ನಿಮ್ಮ ಮೊಬೈಲ್‌ ಮೂಲಕವೇ ಪಡೆಯಬಹುದಾಗಿದೆ. ಇದಕ್ಕೆ ನೀವು ಕೆಲವು ನಿಯಮಗಳನ್ನು ಅನುಸರಿಸಬೇಕು. ಇಲ್ಲಿ ಕೆಳಗಿನ ಹಂತಗಳನ್ನು ಅನುಸರಿಸಿ ಎಫ್‌ಐಡಿ ನಂಬರ್‌ ಅನ್ನು ನೀವೇ ಪಡೆಯಿರಿ.

  1. ಫ್ರೂಟ್ಸ್‌ ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ Citizen Login ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
  2. ಬಳಿಕ ವೆಬ್‌ಸೈಟ್‌ ಬಲಬದಿಯಲ್ಲಿ ಅನುಕೂಲಕ ಭಾಷೆಯಾಗಿ ಕನ್ನಡ ಮತ್ತು ಇಂಗ್ಲಿಷ್‌ ಅನ್ನು ನೀಡಲಾಗಿದ್ದು, ಯಾವುದಾದರೂ ಒಂದು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಇದಾದ ಮೇಲೆ Citizen Registration ಮೇಲೆ ಕ್ಲಿಕ್ ಮಾಡಬೇಕು.
  3. ಅಲ್ಲಿ ನಿಮ್ಮ ಆಧಾರ್ ಕಾರ್ಡ್‌ನಲ್ಲಿರುವಂತೆ ಹೆಸರನ್ನು ನಮೂದು ಮಾಡಲು ಸೂಚಿಸುತ್ತದೆ. ಜತೆಗೆ ಆಧಾರ್ ಸಂಖ್ಯೆಯನ್ನೂ ಟೈಪ್‌ ಮಾಡಿ ದೃಢೀಕರಣ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಸಬ್‌ಮಿಟ್‌ ಮಾಡುವುದು.
  4. ತರುವಾಯ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಇ-ಮೇಲ್ ವಿಳಾಸ ಇದ್ದಲ್ಲಿ ಅದನ್ನೂ ನಮೂದಿಸುವುದು. ಇಲ್ಲದೇ ಹೋದ ಪಕ್ಷದಲ್ಲಿ “NO” ಎಂಬ ಆಯ್ಕೆಯನ್ನು ಆಯ್ದುಕೊಳ್ಳಬೇಕು. ಬಳಿಕ “PROCEED” ಬಟನ್ ಅನ್ನು ಆಯ್ಕೆ ಮಾಡಬೇಕು.
  5. ಬಳಿಕ ನಮೂದಿಸಲ್ಪಟ್ಟ ಮೊಬೈಲ್ ಸಂಖ್ಯೆಗೆ “ಒಟಿಪಿ” ಬಂರುತ್ತದೆ. ಆ ಸಂಖ್ಯೆಯನ್ನು ನಮೂದಿಸಿ “Submit” ಮೇಲೆ ಕ್ಲಿಕ್‌ ಮಾಡಬೇಕು.
  6. ಈಗ ಪ್ರೂಟ್ಸ್ ಖಾತೆಗೆ ಪಾಸ್‌ವರ್ಡ್ ರಚಿಸಬೇಕಾಗುತ್ತದೆ. ಇದಾದ ಬಳಿಕ ಫ್ರೂಟ್ಸ್‌ ಲಾಗಿನ್‌ ಲಭ್ಯವಾಗುತ್ತದೆ.
  7. ಪುನಃ Citizen Login ಮೂಲಕ ನಿಮ್ಮ ಪ್ರೂಟ್ಸ್ ಖಾತೆಗೆ ಲಾಗಿನ್ ಆಗಿ ಅದನ್ನು ತೆರೆಯಬೇಕು.
  8. ಲಾಗಿನ್ ಆದ ಬಳಿಕ “REGISTRATION” (ನೋಂದಣಿ) ಆಯ್ಕೆಯಲ್ಲಿ Online Registration ಮೇಲೆ ಕ್ಲಿಕ್ ಮಾಡಬೇಕು.
  9. ಹೊಸತಾಗಿ ಅರ್ಜಿ ಸಲ್ಲಿಬೇಕಿದ್ದರಿಂದ ಅಲ್ಲಿ Registration New Farmer ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ನಿಮ್ಮ ಹೆಸರು, ಜನ್ಮ ದಿನಾಂಕ, ತಂದೆಯ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ, ವಿಳಾಸ, ಭೂಮಿಯ ಮಾಹಿತಿಯನ್ನು ಹಾಗೂ ಆಯ್ಕೆಯಲ್ಲಿ ನಿಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೆ ನಂಬರ್‌ಗಳನ್ನು ನಮೂದು ಮಾಡಬೇಕು. ಅಲ್ಲದೆ, ಬ್ಯಾಂಕ್ ಖಾತೆ ವಿವರ ನಮೂದಿಸಿದ ಬಳಿಕ ಪೋಟೊವನ್ನು ಅಪ್ಲೋಡ್ ಮಾಡಬೇಕು.
  10. ಎಲ್ಲ ವಿವರ ಭರ್ತಿ ಮಾಡಿದ ನಂತರ “save and Forward” ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು. ಈ ಎಲ್ಲ ಪ್ರಕ್ರಿಯೆಗಳ ನಂತರ ನಿಮಗೆ ಎಫ್.ಐ.ಡಿ. (FID) ನಂಬರ್ ದೊರೆಯುತ್ತದೆ.

ಎಫ್.ಐ.ಡಿ ಸಂಖ್ಯೆಯಿಂದ ಏನೆಲ್ಲ ಲಾಭ?

ಈ ವೆಬ್‌ ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಂಡರೆ ವಿವಿಧ ಕೃಷಿಗೆ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ, ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನ ಮಾರಾಟ ಹಾಗೂ ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುತ್ತವೆ. ಇನ್ನು ಕಳೆದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ ರೈತ ಶಕ್ತಿ ಯೋಜನೆಯಡಿ ಪ್ರತಿಯೊಬ್ಬ ಕೃಷಿಕನಿಗೂ 1 ಎಕರೆಗೆ 250 ರೂ.ಯಂತೆ ಗರಿಷ್ಠ 5 ಎಕರೆಗೆ 1250 ರೂ. ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳುತ್ತದೆ. ಹೀಗಾಗಿ ಇದೂ ಸೇರಿದಂತೆ ಸರ್ಕಾರದ ಹಲವು ಯೋಜನೆಗಳ ಲಾಭವನ್ನು ಪಡೆಯಬೇಕು ಎಂದರೆ ಕೃಷಿಕ ಕಡ್ಡಾಯವಾಗಿ ಎಫ್‌ಐಡಿ ಸಂಖ್ಯೆಯನ್ನು ಹೊಂದಿರಬೇಕು.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹಾಕಿಲ್ವಾ? ನಿಮಗಿರೋದು ಆರೇ ದಿನ; ಇಲ್ದಿದ್ರೆ ದಂಡ!

ಎಫ್ಐಡಿ ಸಂಖ್ಯೆ ಇದ್ದರೆ ತಿಳಿಯುವುದು ಹೇಗೆ?

ಈಗಾಗಲೇ ಎಫ್‌ಐಡಿಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದರೆ, ಆ ನಂಬರ್‌ ನಿಮಗೆ ನೆನಪಿಲ್ಲದೇ ಇದ್ದರೆ ಅದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ವೆಬ್‌ಸೈಟ್‌ನ ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ ಅಲ್ಲಿ ಆಧಾರ್‌ ಸಂಖ್ಯೆಯನ್ನು ನಮೂದಿಸಿ “Search” ಬಟನ್ ಮೇಲೆ ಕ್ಲಿಕ್ ಮಾಡಿದರೆ ಎಫ್‌ಐಡಿ ಸಂಖ್ಯೆ ತಿಳಿಯುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident: ವಿಆರ್‌ಎಲ್ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, ಹಲವರಿಗೆ ಗಾಯ

Road Accident: ವಿಜಯಾನಂದ ರೋಡ್‌ಲೈನ್ಸ್‌ (VRL) ಸಂಸ್ಥೆಗೆ ಸೇರಿದ ಬಸ್‌ ಅಪಘಾತಕ್ಕೀಡಾಯಿತು. ಕಲಬುರಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಹತ್ತುಗೂಡೂರು ಬಳಿ ಪಲ್ಟಿಯಾಯಿತು. ಕಲಬುರಗಿ ಮೂಲದ ಇಬ್ಬರು ಪ್ರಯಾಣಿಕರು ಸಾವಿಗೀಡಾದರು.

VISTARANEWS.COM


on

vrl bus road accident
Koo

ಯಾದಗಿರಿ: ಖಾಸಗಿ ಬಸ್‌ ಪಲ್ಟಿಯಾಗಿ (bus accident) ಇಬ್ಬರು ಮೃತಪಟ್ಟು (death news) ಹತ್ತಾರು ಮಂದಿಗೆ ಗಾಯಗಳಾಗಿವೆ. ಈ ಅಪಘಾತ (Road Accident) ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡೂರು ಗ್ರಾಮದ ಬಳಿ ನಡೆದಿದೆ.

ವಿಜಯಾನಂದ ರೋಡ್‌ಲೈನ್ಸ್‌ (VRL) ಸಂಸ್ಥೆಗೆ ಸೇರಿದ ಬಸ್‌ ಅಪಘಾತಕ್ಕೀಡಾಯಿತು. ಕಲಬುರಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಹತ್ತುಗೂಡೂರು ಬಳಿ ಪಲ್ಟಿಯಾಯಿತು. ಕಲಬುರಗಿ ಮೂಲದ ಇಬ್ಬರು ಪ್ರಯಾಣಿಕರು ಸಾವಿಗೀಡಾದರು. ಬಸ್‌ನಲ್ಲಿ 37 ಜನ ಪ್ರಯಾಣ ಮಾಡುತ್ತಿದ್ದರು. ಬಸ್‌ನಲ್ಲಿ ಸಿಲುಕಿಕೊಂಡ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಚಾಲಕ ಸೇರಿ 6 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಶಹಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

ಹೊಸದಿಲ್ಲಿ: ಭಾನುವಾರ ರಾತ್ರಿ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಪಿಪ್ಲೋಡಿಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ (Tractor Accident) ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 13 ಪ್ರಯಾಣಿಕರು (Road Accident) ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಮೃತರು, ರಾಜಸ್ಥಾನದ ಮೋತಿಪುರ ಗ್ರಾಮದಿಂದ ರಾಜ್‌ಗಢ್‌ನ ಕುಲಂಪುರಕ್ಕೆ ಪ್ರಯಾಣಿಸುತ್ತಿದ್ದ (wedding procession) ಮದುವೆ ದಿಬ್ಬಣದಲ್ಲಿದ್ದರು.

ರಾಜ್‌ಗಢ್ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆ ಮತ್ತು ಎದೆಗೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ತಿಳಿಸಿದ್ದಾರೆ. “ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ” ಎಂದು ಅವರು ತಿಳಿಸಿದರು.

ಮದುವೆ ದಿಬ್ಬಣದ ಟ್ರಾಕ್ಟರ್‌ನಲ್ಲಿ 40ರಿಂದ 50 ಜನರು ಹತ್ತಿದ್ದು, ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. “40ರಿಂದ 50 ಜನರೊಂದಿಗೆ ಮದುವೆ ಮೆರವಣಿಗೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಮೋತಿಪುರದಿಂದ ರಾಜ್‌ಗಢದ ಕುಮಾಲ್‌ಪುರಕ್ಕೆ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಬರುತ್ತಿತ್ತು. ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ” ಎಂದು ದೀಕ್ಷಿತ್ ತಿಳಿಸಿದ್ದಾರೆ.

ಚಾಲಕ ಪಾನಮತ್ತನಾಗಿದ್ದ ಮತ್ತು ಟ್ರಾಲಿ ಓವರ್‌ಲೋಡ್ ಆಗಿತ್ತು ಎಂದು ಗಾಯಗೊಂಡ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ನಂತರ, ಜನರು ಅದರ ಅಡಿಯಲ್ಲಿ ಸಿಲುಕಿಕೊಂಡರು. ತಡರಾತ್ರಿಯವರೆಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಹೊರತೆಗೆಯಲಾಯಿತು.

ರಾಷ್ಟ್ರಪತಿ ಮುರ್ಮು, ಸಿಎಂ ಸಂತಾಪ

ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಮೃತರ ಕುಟುಂಬಗಳಿಗೆ ತಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ. “ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಹಾಗೂ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ (MP CM Mohan Yadav) ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್‌ಗಢ್ ಜಿಲ್ಲೆಯ ಪಿಪ್ಲೋಡಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ರಾಜಸ್ಥಾನದ ಝಲಾವರ್ ಜಿಲ್ಲೆಯ 13 ಜನರ ಅಕಾಲಿಕ ಮರಣದ ಸುದ್ದಿ ಅತ್ಯಂತ ದುಃಖಕರವಾಗಿದೆ. ಸ್ಥಳದಲ್ಲಿ ಜನಪ್ರತಿನಿಧಿ ನಾರಾಯಣ ಸಿಂಗ್ ಪನ್ವಾರ್‌, ರಾಜಗಢ ಜಿಲ್ಲಾಧಿಕಾರಿ ಮತ್ತು ಎಸ್ಪಿ ಉಪಸ್ಥಿತರಿದ್ದರು. ನಾವು ರಾಜಸ್ಥಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ರಾಜ್‌ಗಡ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳ ಚಿಕಿತ್ಸೆ ನಡೆಯುತ್ತಿದೆ. ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್‌ಗೆ ಕಳಿಸಲಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಯಾದವ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Continue Reading

ಪ್ರಮುಖ ಸುದ್ದಿ

Bangalore Rain News: ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

Bangalore Rain News: ನಗರದಲ್ಲಿ ನೂರಾರು ಕಡೆ ಬೃಹತ್ ಗಾತ್ರದ ಮರಗಳು, ಸಣ್ಣ ಮರಗಳು ಹಾಗೂ ಕೊಂಬೆಗಳು ಧರಾಶಾಯಿಯಾದವು. ಹಲವು ತಗ್ಗು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡವು. ಬೆಳ್ಳಂದೂರಿನಲ್ಲಿ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗೆ ರಾಜಕಾಲುವೆ ನೀರು ನುಗ್ಗಿದೆ.

VISTARANEWS.COM


on

bangalore rain news
Koo

ಬೆಂಗಳೂರು: ಮುಂಗಾರು (monsoon) ಸಾಕಷ್ಟು ಅಬ್ಬರದಿಂದಲೇ ರಾಜಧಾನಿಯನ್ನು (Bangalore rain news) ಪ್ರವೇಶಿಸಿದೆ. ನಿನ್ನೆ ಸಂಜೆಯಿಂದ ಸುರಿದ ಭಾರಿ ಮಳೆಗೆ ನಗರದ (Bengaluru rain news) ಹಲವು ಕಡೆ ಮರಗಳು (trees fall) ಮುರಿದುಬಿದ್ದಿವೆ. ತಗ್ಗು ಪ್ರದೇಶಗಳಿಗೆ ನೀರು (water clogging) ನುಗ್ಗಿದೆ. ಬೆಳ್ಳಂದೂರಿನ ಒಂದು ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ನಿವಾಸಿಗಳು ಮನೆಗಳಲ್ಲೇ ಲಾಕ್‌ ಆಗಿದ್ದಾರೆ.

“ನಿನ್ನೆ ಸುರಿದ ಭಾರಿ ಮಳೆಗೆ ನಗರದಲ್ಲಿ ಸುಮಾರು 260ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಬಹುತೇಕ ಜಯನಗರ. ಬಸವನಗುಡಿ ಸುತ್ತಮುತ್ತಲಿನಲ್ಲಿ 100ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಸದ್ಯ ಮರಗಳನ್ನು ತೆರವು ಮಾಡೋದಕ್ಕೆ ಬಿಬಿಎಂಪಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಚರಣೆ ಮಾಡುತ್ತಿದ್ದಾರೆ. ಮೊದಲು ಸಂಚಾರಕ್ಕೆ ಅನುಕೂಲ ಕಲ್ಪಿಸಲು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳ ತೆರವು ಮಾಡುತ್ತಿದ್ದೇವೆ. ಸಂಜೆ ವೇಳೆಗೆ ನಗರದ ಬಹುತೇಕ ಕಡೆ ಮರಗಳನ್ನು ತೆರವು ಮಾಡುತ್ತೇವೆ” ಎಂದು ಬಿಬಿಎಂಪಿ ಅರಣ್ಯ ವಿಭಾಗದ ಮುಖ್ಯಸ್ಥರು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

Bangalore rain news

ಬೃಹತ್ ಗಾತ್ರದ ಮರಗಳು, ಸಣ್ಣ ಮರಗಳು ಹಾಗೂ ಕೊಂಬೆಗಳು ಧರಾಶಾಯಿಯಾದವು. ಬಸವೇಶ್ವರನಗರದಲ್ಲೂ ಮರಗಳು ಧರೆಗುರುಳಿವೆ. 3ನೇ ಮುಖ್ಯರಸ್ತೆಯಲ್ಲಿ ಕಾರ್ ಮೇಲೆ ಮರ ಬಿದ್ದು ಕಾರ್ ಜಖಂ ಆಗಿದೆ. ಜಯನಗರದ ಕೃಷ್ಣರಾವ್ ಪಾರ್ಕ್ ಬಳಿ ಬೃಹತ್ ಗಾತ್ರದ ಮರ ಟ್ರಾನ್ಸ್‌ಫಾರ್ಮರ್‌ ಮೇಲೆ ಬಿದ್ದು ರಾತ್ರಿ ಇಡೀ ವಿದ್ಯುತ್ ಕಟ್‌ ಆಗಿದೆ. ಜಯನಗರ ಸುತ್ತಮುತ್ತ ಸುಮಾರು ‌50ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಗಿರಿನಗರದಲ್ಲಿ ಮರ ಬಿದ್ದು ಕಾರು ಹಾಗೂ ದ್ವಿಚಕ್ರ ವಾಹನ ಸಂಪೂರ್ಣ ನಜ್ಜು ಗುಜ್ಜು ಆಗಿದೆ.

ಹಲವು ತಗ್ಗು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡವು. ಕೊತ್ತನೂರು ಭಾಗದಲ್ಲಿ ರಸ್ತೆ ಹಾಗೂ ಮನೆಗಳು ಪೂರ್ತಿ ಸಂಪೂರ್ಣ ಜಲಾವೃತವಾಗಿದೆ. ಮನೆಯೊಳಗೆ ನೀರು ತುಂಬಿ ಮನೆ ಮಾಲೀಕರು ಇಡೀ ರಾತ್ರಿ ಜಾಗರಣೆ ಮಾಡಿದರು. ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ತುಂಬಿದೆ. ನಗರದ 8 ವಲಯಗಳಲ್ಲಿ ಮನೆಗಳಿಗೆ ನೀರು ತುಂಬಿ ಅಕ್ಕಿ, ಬೇಳೆ ಸೇರಿದಂತೆ ಇತರೆ ವಸ್ತುಗಳು ಹಾಳಾಗಿವೆ. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಂತೆ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.

Bangalore rain news

ರಸ್ತೆಯಲ್ಲಿ ನೀರು ನಿಂತಿದ್ದು ಒಂದು ತರಹದ ಸಮಸ್ಯೆಯಾದರೆ, ವಿದ್ಯುತ್ ಕಂಬಗಳದ್ದು ಮತ್ತೊಂದು ಸಮಸ್ಯೆ. ಕಂಬಗಳು ಮುರಿದು ಬಿದ್ದಿವೆ. ಉಮಾ ಥಿಯೇಟರ್ ಬಳಿ 4 ವಿದ್ಯುತ್ ಕಂಬಗಳು ಗಾಳಿಯಿಂದ ಅರ್ಧಂಬರ್ಧ ಬಿದ್ದಿವೆ. 4 ವಿದ್ಯುತ್ ಕಂಬಗಳ ವಯರ್ ರಸ್ತೆಯಲ್ಲಿ ಬಿದ್ದರೆ ವಾಹನ ಸವಾರರ ಜೀವಕ್ಕೆ ಹಾನಿ ಸಾಧ್ಯತೆ ಇದೆ. ಲಾಲ್‌ಬಾಗ್‌ನಲ್ಲಿ ಮರ ಬಿದ್ದು ಕಾಂಪೌಂಡ್ ಕುಸಿತವಾಗಿದೆ.

ನಿನ್ನೆ ಸುರಿದ ಮಳೆಗೆ ಬೆಳ್ಳಂದೂರಿನ ಗ್ರೀನ್ ಎಲಿಗೆನ್ಸ್ ಅಪಾರ್ಟ್ಮೆಂಟ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ನಾಲ್ಕು ಕಾರು, ಬೈಕ್‌ಗಳು ಮುಳುಗಿವೆ. ರಾಜಕಾಲುವೆ ನೀರು ಅಪಾರ್ಟ್ಮೆಂಟ್‌ನೊಳಗೆ ನುಗ್ಗಿದೆ. ಕಳೆದ ಮೂರು ದಿನದಿಂದ ಅಪಾರ್ಟ್ಮೆಂಟ್‌ಗೆ ವಿದ್ಯುತ್‌ ಸಂಪರ್ಕ ಕಟ್‌ ಆಗಿದೆ. ನಿವಾಸಿಗಳು ಅಪಾರ್ಟ್ಮೆಂಟ್‌ನಲ್ಲೇ ಲಾಕ್ ಆಗಿದ್ದಾರೆ. ಅಪಾರ್ಟ್ಮೆಂಟ್ ಬೇಸ್‌ಮೆಂಟ್‌ನಿಂದಲೇ ಓಡಾಡಲು ದಾರಿ ಆಗಿರುವ ಕಾರಣ, ಕತ್ತಿನವರೆಗೆ ನಿಂತಿರುವ ನೀರಿನಲ್ಲಿ ಓಡಾಡಲಾಗದೆ 40 ಫ್ಲಾಟ್ ಮಾಲೀಕರು ಅಲ್ಲೇ ಬಾಕಿ ಆಗಿದ್ದಾರೆ. ಪಕ್ಕದ ಕಾಂಪೌಂಡ್‌ಗೆ ಏಣಿ ಹಾಕಿ ಓಡಾಟ ಮಾಡುತ್ತಿದ್ದಾರೆ.

ಇದನ್ನೂ ಓದಿ: Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Continue Reading

ಚಿಕ್ಕೋಡಿ

Chikkodi Lok Sabha Constituency: ಜೊಲ್ಲೆ vs ಜಾರಕಿಹೊಳಿ; ಯಾರಿಗೆ ಗೆಲುವಿನ ಹೋಳಿ?

Chikkodi Lok Sabha Constituency: ಎಂಬಿಎ ಪದವೀಧರೆ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದರೂ ಅಪ್ಪ ಸತೀಶ್‌ ಜಾರಕಿಹೊಳಿ ಅವರ ರಾಜಕೀಯ ಅನುಭವವು ಜತೆಗಿರಲಿದೆ. ಮತ್ತೊಂದೆಡೆ, ಅಣ್ಣಾಸಾಹೇಬ್‌ ಜೊಲ್ಲೆ ಅವರು ಭಿನ್ನಮತವನ್ನು ತಡೆದಿದ್ದು, ಮೋದಿ ಅವರ ಅಲೆ, ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇ ಅವರಿಗೆ ಸಕಾರಾತ್ಮಕವಾಗಲಿವೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದಾರೆ.

VISTARANEWS.COM


on

Chikkodi Lok Sabha Constituency
Koo

ಚಿಕ್ಕೋಡಿ: ಕಳೆದ ಎರಡು ದಶಕಗಳಿಂದ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ (Chikkodi Lok Sabha Constituency) ಬಿಜೆಪಿಯೇ ಪ್ರಾಬಲ್ಯ ಸಾಧಿಸಿದೆ. ಆದರೆ, ಈ ಬಾರಿ ಬಿಜೆಪಿಯ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಅವರನ್ನು ಎದುರಿಸುವ ಸವಾಲು ಎದುರಾಗಿದೆ. ಚುನಾವಣೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರಬಲ ಸ್ಪರ್ಧೆಯೊಡ್ಡಿರುವ ಕಾರಣ ಲೋಕಸಭೆ ಚುನಾವಣೆ ಫಲಿತಾಂಶವು ಕುತೂಹಲ ಕೆರಳಿಸಿದೆ.

ಹಾಲಿ ಸಂಸದರೂ ಆಗಿರುವ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಟಿಕೆಟ್‌ ತಪ್ಪಿಸಿ, ತಾವು ಟಿಕೆಟ್‌ ಗಿಟ್ಟಿಸಿಕೊಳ್ಳಲು ರಮೇಶ್‌ ಕತ್ತಿ ಅವರು ತಂತ್ರ ಹೆಣೆದರೂ ಅದು ಸಫಲವಾಗಿಲ್ಲ. ಬಳಿಕ ರಮೇಶ್‌ ಕತ್ತಿ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದರೂ, ಅದು ಸಫಲವಾಗಲಿಲ್ಲ. ಅಷ್ಟರಮಟ್ಟಿಗೆ, ಅಣ್ಣಾಸಾಹೇಬ್‌ ಜೊಲ್ಲೆ ಅವರು ಭಿನ್ನಮತವನ್ನು ತಡೆದಿದ್ದು, ಮೋದಿ ಅವರ ಅಲೆ, ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇ ಅವರಿಗೆ ಸಕಾರಾತ್ಮಕವಾಗಲಿವೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದಾರೆ. ಅಣ್ಣಾ ಸಾಹೇಬ್‌ ಜೊಲ್ಲೆ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರು ಶಾಸಕಿ ಆಗಿರುವ ಕಾರಣ ಅವರ ಪ್ರಾಬಲ್ಯ ಜಾಸ್ತಿ ಇದೆ.

ಎಂಬಿಎ ಪದವೀಧರೆ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದರೂ ಅಪ್ಪ ಸತೀಶ್‌ ಜಾರಕಿಹೊಳಿ ಅವರ ರಾಜಕೀಯ ಅನುಭವವು ಜತೆಗಿರಲಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಅಪ್ಪನ ಗೆಲುವಾಗಿ ಓಡಾಟ ನಡೆಸಿದ್ದಾರೆ. ಇನ್ನು, ಚಿಕ್ಕೋಡಿಯಲ್ಲಿ ಲಿಂಗಾಯತ ಸಮುದಾದಯವರ ಮತಗಳೇ ನಿರ್ಣಾಯಕವಾಗವೆ. ಸುಮಾರು 4.10 ಲಕ್ಷ ಲಿಂಗಾಯತ ಮತಗಳಿದ್ದು, ಪರಿಶಿಷ್ಟ ಜಾತಿ 1.65 ಲಕ್ಷ, ಪರಿಶಿಷ್ಟ ಪಂಗಡ 9೦, ಮುಸ್ಲಿಮರ 1.80 ಲಕ್ಷ ಮತಗಳು ಕೂಡ ನಿರ್ಣಾಯಕವಾಗಿವೆ.

ಮತದಾರರ ಸಂಖ್ಯೆ

ಪುರುಷರು8.71 ಲಕ್ಷ
ಮಹಿಳೆಯರು8.58 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು75
ಒಟ್ಟು17.30 ಲಕ್ಷ

2019, 2014ರ ಫಲಿತಾಂಶ ಏನಾಗಿತ್ತು?

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಅಣ್ಣಾ ಸಾಹೇಬ್‌ ಜೊಲ್ಲೆ ಅವರು ಪ್ರಕಾಶ್‌ ಹುಕ್ಕೇರಿ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆದರೆ, 2014ರಲ್ಲಿ ನರೇಂದ್ರ ಮೋದಿ ಅವರ ಅಲೆಯ ಮಧ್ಯೆಯೂ ಕಾಂಗ್ರೆಸ್‌ನ ಪ್ರಕಾಶ್‌ ಹುಕ್ಕೇರಿ ಅವರು ಬಿಜೆಪಿಯ ರಮೇಶ್‌ ಕತ್ತಿ ವಿರುದ್ಧ ಗೆಲುವು ಸಾಧಿಸಿದ್ದರು. ಇನ್ನು 2009ರಲ್ಲಿ ರಮೇಶ್‌ ಕತ್ತಿ, 2004ರಲ್ಲಿ ರಮೇಶ್‌ ಜಿಗಜಿಣಗಿ ಅವರು ಚಿಕ್ಕೋಡಿ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: Lok Sabha Election: ಕಲಬುರಗಿ ಲೋಕಸಭೆ ಕ್ಷೇತ್ರ: ಖರ್ಗೆ ಅಳಿಯ Vs ಜಾಧವ್;‌ ಯಾರಿಗೆ ಗೆಲುವಿನ ಸಿಹಿ?

Continue Reading

ಬೆಳಗಾವಿ

Belagavi Lok Sabha Constituency: ಶೆಟ್ಟರ್‌ ವರ್ಸಸ್‌ ಹೆಬ್ಬಾಳ್ಕರ್‌; ಯಾರಿಗೆ ಬೆಳಗಾವಿ ಕುಂದಾ?

Belagavi Lok Sabha Constituency: ಯುವ ನಾಯಕತ್ವ, ಸುರೇಶ್‌ ಅಂಗಡಿ ಕುಟುಂಬದ ಪ್ರಾಬಲ್ಯ ಇಲ್ಲದಿರುವುದು, ಗ್ಯಾರಂಟಿ ಯೋಜನೆಗಳು ಸೇರಿ ಹಲವು ಅಂಶಗಳು ಮೃಣಾಲ್‌ ಹೆಬ್ಬಾಳ್ಕರ್‌ ಅವರಿಗೆ ಸಕಾರಾತ್ಮಕವಾಗಿವೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸುರೇಶ್‌ ಅಂಗಡಿಯವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ನಂತರ ಮಂಗಲಾ ಅಂಗಡಿಯವರು ಕೂಡ ಗೆದ್ದಿದ್ದು, ಆ ಮೂಲಕ ಬಿಜೆಪಿ ಬೇರುಗಳನ್ನು ಗಟ್ಟಿಗೊಳಿಸಿದ್ದು ಮೃಣಾಲ್‌ಗೆ ಕುತ್ತಾಗುವ ಸಾಧ್ಯತೆ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

Belagavi Lok Sabha Constituency
Koo

ಬೆಳಗಾವಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬೆಳಗಾವಿ ಲೋಕಸಭೆ ಚುನಾವಣೆ ಕ್ಷೇತ್ರದ (Belagavi Lok Sabha Constituency) ಚುನಾವಣೆಯು ಈ ಬಾರಿ ಭಾರಿ ಕುತೂಹಲ ಕೆರಳಿಸಿದೆ. ಬಿಜೆಪಿ ಭದ್ರಕೋಟೆಯೇ ಆಗಿರುವ ಬೆಳಗಾವಿಯಲ್ಲಿ ಈ ಬಾರಿ ಬಿಜೆಪಿಯಿಂದ ಜಗದೀಶ್‌ ಶೆಟ್ಟರ್‌ (Jagadish Shettar) ಕಣಕ್ಕಿಳಿದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ (Mrinal Hebbalkar) ಸ್ಪರ್ಧಿಸಿದ್ದಾರೆ. ಹಾಗಾಗಿ, ಬೆಳಗಾವಿ ಲೋಕಸಭೆ ಕ್ಷೇತ್ರವು ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿದೆ.

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ತೆರಳಿ, ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ವಾಪಸಾದ ಜಗದೀಶ್‌ ಶೆಟ್ಟರ್‌ ಅವರು ಸ್ಥಳೀಯ ನಾಯಕರ ವಿಶ್ವಾಸ ಗಳಿಸುವುದು, ಕಾರ್ಯಕರ್ತರಿಗೆ ಬಲ ತುಂಬುದು, ಮೋದಿ ಅವರ ಅಲೆಯನ್ನು ಸದುಪಯೋಗ ಮಾಡಿಕೊಳ್ಳುವುದು ಸೇರಿ ಹಲವು ತಂತ್ರಗಳನ್ನು ಹೂಡಿದ್ದರು. ಇನ್ನು ಮಂಗಲಾ ಸುರೇಶ್‌ ಅಂಗಡಿಯವರು ಜಗದೀಶ್‌ ಶೆಟ್ಟರ್‌ ಅವರಿಗೆ ಸಂಬಂಧಿಯಾದ ಕಾರಣ ಅಷ್ಟೇನೂ ಹೊರಗಿನವರು ಎಂಬ ಭಾವನೆ ಇಲ್ಲ. ಇನ್ನು, ಜಗದೀಶ್‌ ಶೆಟ್ಟರ್‌ ಅವರು ಎರಡು ಬಾರಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಹಾಗಾಗಿ, ಬೆಳಗಾವಿಯಲ್ಲಿ ಜಗದೀಶ್‌ ಶೆಟ್ಟರ್‌ ಪರ ಒಲವಿದೆ ಎಂದೇ ಹೇಳಲಾಗುತ್ತಿದೆ.

Jagadish Shettar

ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮಗನನ್ನು ಕಣಕ್ಕಿಳಿಸಿ, ಮಗನಿಗಿಂತ ಹೆಚ್ಚಾಗಿ ಅವರೇ ಪ್ರಚಾರ ಕೈಗೊಂಡಿದ್ದಾರೆ. ಯುವ ನಾಯಕತ್ವ, ಸುರೇಶ್‌ ಅಂಗಡಿ ಕುಟುಂಬದ ಪ್ರಾಬಲ್ಯ ಇಲ್ಲದಿರುವುದು, ಗ್ಯಾರಂಟಿ ಯೋಜನೆಗಳು ಸೇರಿ ಹಲವು ಅಂಶಗಳು ಮೃಣಾಲ್‌ ಹೆಬ್ಬಾಳ್ಕರ್‌ ಅವರಿಗೆ ಸಕಾರಾತ್ಮಕವಾಗಿವೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸುರೇಶ್‌ ಅಂಗಡಿಯವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ನಂತರ ಮಂಗಲಾ ಅಂಗಡಿಯವರು ಕೂಡ ಗೆದ್ದಿದ್ದು, ಆ ಮೂಲಕ ಬಿಜೆಪಿ ಬೇರುಗಳನ್ನು ಗಟ್ಟಿಗೊಳಿಸಿದ್ದು ಮೃಣಾಲ್‌ಗೆ ಕುತ್ತಾಗುವ ಸಾಧ್ಯತೆ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹಿಂದಿನ ಚುನಾವಣೆ ಫಲಿತಾಂಶ ಏನಾಗಿತ್ತು?

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸುರೇಶ್‌ ಅಂಗಡಿ ಅವರು ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಸಾರ್ವತ್ರಿಕ ಚುನಾವಣೆಯಲ್ಲಿಯೂ ಸುರೇಶ್ ಅಂಗಡಿ ಅವರು ಕಾಂಗ್ರೆಸ್‌ನ ವಿರೂಪಾಕ್ಷಿ ಸಾಧುಣ್ಣವರ್‌ ವಿರುದ್ಧ ಗೆಲುವು ಸಾಧಿಸುವ ಜತೆಗೆ ಕೇಂದ್ರದಲ್ಲಿ ಸಚಿವರೂ ಆಗಿದ್ದರು. ಆದರೆ, ಸುರೇಶ್‌ ಅಂಗಡಿಯವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ 2021ರಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಿತು. ಆಗ, ಸುರೇಶ್‌ ಅಂಗಡಿ ಅವರ ಪತ್ನಿ ಮಂಗಲಾ ಸುರೇಶ್‌ ಅಂಗಡಿ ಅವರು ಸತೀಶ್‌ ಜಾರಕಿಹೊಳಿ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Continue Reading
Advertisement
vrl bus road accident
ಕ್ರೈಂ4 mins ago

Road Accident: ವಿಆರ್‌ಎಲ್ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, ಹಲವರಿಗೆ ಗಾಯ

Raveena Tandon Was Not Drunk False Complaint Filed
ಬಾಲಿವುಡ್8 mins ago

Raveena Tandon: ರವೀನಾ ಟಂಡನ್ ವಿರುದ್ಧ ಸುಳ್ಳು ದೂರು ನೀಡಿದ್ರಾ? ಪೊಲೀಸರು ಹೇಳೋದೇನು?

ICMR Guidelines
ಆರೋಗ್ಯ19 mins ago

ICMR Guidelines: ಕಬ್ಬಿನ ಹಾಲು ಕುಡಿದರೆ ಆರೋಗ್ಯಕ್ಕೆ ಹಾನಿಯೆ? ICMR ಅಭಿಪ್ರಾಯ ಹೀಗಿದೆ

bangalore rain news
ಪ್ರಮುಖ ಸುದ್ದಿ37 mins ago

Bangalore Rain News: ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

Chikkodi Lok Sabha Constituency
ಚಿಕ್ಕೋಡಿ46 mins ago

Chikkodi Lok Sabha Constituency: ಜೊಲ್ಲೆ vs ಜಾರಕಿಹೊಳಿ; ಯಾರಿಗೆ ಗೆಲುವಿನ ಹೋಳಿ?

Toll Fee Hike
ದೇಶ52 mins ago

Toll Fee Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ

road accident tractor
ಪ್ರಮುಖ ಸುದ್ದಿ1 hour ago

Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

Belagavi Lok Sabha Constituency
ಬೆಳಗಾವಿ2 hours ago

Belagavi Lok Sabha Constituency: ಶೆಟ್ಟರ್‌ ವರ್ಸಸ್‌ ಹೆಬ್ಬಾಳ್ಕರ್‌; ಯಾರಿಗೆ ಬೆಳಗಾವಿ ಕುಂದಾ?

Sweating And Body Odor
ಆರೋಗ್ಯ2 hours ago

Sweating And Body Odor: ಅತಿಯಾಗಿ ಬೆವರುತ್ತಿದ್ದೀರಾ? ಈ ಆಹಾರಗಳು ನಿಮ್ಮ ಬೆವರ ದುರ್ಗಂಧಕ್ಕೆ ಮುಖ್ಯ ಕಾರಣ!

karnataka Weather Forecast
ಮಳೆ2 hours ago

Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌