Site icon Vistara News

Accident | ಹಾಸನದಲ್ಲಿ ಭೀಕರ ಅಪಘಾತ, ಐವರು ಮಕ್ಕಳು ಸೇರಿ 9 ಮಂದಿ ದುರ್ಮರಣ

ಅಪಘಾತ

ಹಾಸನ: ಧರ್ಮಸ್ಥಳದಿಂದ ಟೆಂಪೊ ಟ್ರಾವೆಲರ್‌ನಲ್ಲಿ (TT) ವಾಪಸಾಗುವಾಗ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಾಂಧಿ ನಗರ ಗ್ರಾಮದ ಬಳಿ ಭೀಕರ ಅಪಘಾತ (Accident) ಸಂಭವಿಸಿದ್ದು, ಟೆಂಪೊ ಟ್ರಾವೆಲರ್‌ನಲ್ಲಿದ್ದ ಐವರು ಮಕ್ಕಳು ಸೇರಿ ಒಂಬತ್ತು ಜನ ಮೃತಪಟ್ಟಿದ್ದಾರೆ.

ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತಪಟ್ಟಿದ್ದಾರೆ.

ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳದಿಂದ ವಾಪಸ್ ಊರಿಗೆ ತೆರಳುತ್ತಿದ್ದರು. ಈ ವೇಳೆ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಟಿಟಿ ವಾಹನ ಸಿಲುಕಿ ದುರಂತ ಸಂಭವಿಸಿದ್ದು, ಟಿಟಿ ವಾಹನದಲ್ಲಿದ್ದ 9 ಮಂದಿ ಕೊನೆಯುಸಿರೆಳೆದಿದ್ದಾರೆ.

ಲಾರಿ ಹಾಗೂ ಬಸ್‌ ಮಧ್ಯೆ ಸಿಲುಕಿದ ಟೆಂಪೊ ಟ್ರಾವೆಲರ್.

ಉಳಿದವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ತೀವ್ರತೆಗೆ ಟಿಟಿ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ | ಬೈಕ್-ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Exit mobile version